Tuesday, November 24, 2020

ಬಿಜೆಪಿ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ಪುನರ್ ರಚನೆ

ಅಧ್ಯಕ್ಷರಾಗಿ ಎಂ. ವಿಜಯರಾಜ್, ಬಿ.ಎಸ್ ಕಲ್ಪನ ಸುದರ್ಶನ್, ಪಿ. ಗಣೇಶ್‌ರಾವ್ ನೇಮಕ

ಯುವ ಮೋರ್ಚಾ ಅಧ್ಯಕ್ಷ ಎಂ. ವಿಜಯರಾಜ್
ಭದ್ರಾವತಿ, ನ. ೨೪: ಭಾರತೀಯ ಜನತಾ ಪಕ್ಷದ ತಾಲೂಕು ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ಪುನರ್ ರಚನೆ ಅಧ್ಯಕ್ಷ ಎಂ. ಪ್ರಭಾಕರ್ ಅಧ್ಯಕ್ಷತೆಯಲ್ಲಿ ನಡೆದಿದ್ದು, ಯುವ ಮೋರ್ಚಾ ಅಧ್ಯಕ್ಷರಾಗಿ ಎಂ. ವಿಜಯರಾಜ್, ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಬಿ.ಎಸ್ ಕಲ್ಪನ ಸುದರ್ಶನ್ ಮತ್ತು ಎಸ್.ಸಿ ಮೋರ್ಚಾ ಅಧ್ಯಕ್ಷರಾಗಿ ಪಿ. ಗಣೇಶ್ ರಾವ್ ನೇಮಕಗೊಂಡಿದ್ದಾರೆ.
       ಯುವ ಮೋರ್ಚಾ: ಅಧ್ಯಕ್ಷರಾಗಿ ಎಂ. ವಿಜಯರಾಜ್, ಉಪಾಧ್ಯಕ್ಷರಾಗಿ ಎಸ್. ಕಿರಣ್ ಕುಮಾರ್, ಜೆ. ಕೃಷ್ಣ, ಸಚಿನ್ ರೇವಣ್‌ಕರ್ ಮತ್ತು ಹೇಮಂತ್ ಕುಮಾರ್, ಪ್ರಧಾನ ಕಾರ್ಯದರ್ಶಿಗಳಾಗಿ ನಕುಲ್ ಮತ್ತು ಜಿ. ಯೋಗೇಶ್‌ಕುಮಾರ್, ಕಾರ್ಯದರ್ಶಿಗಳಾಗಿ ದೇವರಾಜ್, ಗೋಪಿನಾಥ್, ಧನ್ಯಕುಮಾರ್ ಮತ್ತು ಜಾನು, ಖಜಾಂಚಿಯಾಗಿ ವಿಜಯ್, ಸದಸ್ಯರುಗಳಾಗಿ ಲಕ್ಷ್ಮಣ್, ಪ್ರಕಾಶ್(ಮಾವಿನಕೆರೆ), ಆದರ್ಶ್, ಅನಂತು, ವಿಘ್ನೇಶ್, ಪ್ರದೀಪ್, ರಾಘವೇಂದ್ರ, ಆಕಾಶ್, ಕೆ. ಲಕ್ಷ್ಮಣ್ ಮತ್ತು ಪುನಿತ್ ಗೌಡ ನೇಮಕಗೊಂಡಿದ್ದಾರೆ.
     ಮಹಿಳಾ ಮೋರ್ಚಾ: ಅಧ್ಯಕ್ಷರಾಗಿ ಬಿ.ಎಸ್ ಕಲ್ಪನ ಸುದರ್ಶನ್, ಉಪಾಧ್ಯಕ್ಷರಾಗಿ ಜಯಲಕ್ಷ್ಮಿ, ರೇಖಾ ಪದ್ಮಾವತಿ, ವಿ. ಶಾಮಲ ಮತ್ತು ಮಧುಮಾಲ, ಪ್ರಧಾನ ಕಾರ್ಯದರ್ಶಿಗಳಾಗಿ ಬಿ.ಎಂ. ಮಂಜುಳ ಮತ್ತು ಶಕುಂತಲ, ಕಾರ್ಯದರ್ಶಿಗಳಾಗಿ ಕವಿತ, ಆರತಿ, ರಾಜೇಶ್ವರಿ ಮತ್ತು ಸುಶೀಲ, ಖಜಾಂಚಿಯಾಗಿ ಸಿಂಧು, ಸದಸ್ಯರಾಗಿ ರಕ್ಷ್ಮೀಣಿ, ಉಮಾಲಕ್ಷ್ಮಿ, ಉಜಾಲಬಾಯಿ, ಭಾಗ್ಯ, ವಾಣಿ, ಧನಲಕ್ಷ್ಮಿ, ಉಷಾ, ವನಜಾಕ್ಷಿ ಮತ್ತು ವಿದ್ಯಾಲಕ್ಷ್ಮಿ ನೇಮಕಗೊಂಡಿದ್ದಾರೆ.


ಎಸ್.ಸಿ ಮೋರ್ಚಾ ಅಧ್ಯಕ್ಷ ಪಿ. ಗಣೇಶ್‌ರಾವ್
    ಎಸ್.ಸಿ ಮೋರ್ಚಾ : ಅಧ್ಯಕ್ಷರಾಗಿ ಪಿ. ಗಣೇಶ್‌ರಾವ್, ಉಪಾಧ್ಯಕ್ಷರಾಗಿ ಡಾ. ಪುಷ್ಪಲತಾ, ಕುಪ್ಪಣ್ಣ, ಮಂಜನಾಯ್ಕ ಮತ್ತು ದುರ್ಗೇಶ್, ಪ್ರಧಾನ ಕಾರ್ಯದರ್ಶಿಗಳಾಗಿ ಸುಶ್ಮಿತಾ ಮತ್ತು ಮಂಜುನಾಥ್, ಕಾರ್ಯದರ್ಶಿಗಳಾಗಿ ನಾಗೇಶ್, ಗಿರೀಶ್, ಮಾಲತೇಶ್ ಮತ್ತು ಮಂಜುನಾಥ್, ಖಜಾಂಚಿಯಾಗಿ ರವಿಕುಮಾರ್ ನಾಯ್ಕ್, ಸದಸ್ಯರಾಗಿ ಅವಿನಾಶ್, ಚಂದ್ರು, ಜಗನ್ನಾಥ್, ರಾಜೇಶ್ವರಿ, ರವಿಕುಮಾರ್ ನಾಯ್ಕ್, ಹನುಮಂತನಾಯ್ಕ್, ಸಂದೀಪ್, ಮುರಳಿ ಮತ್ತು ಗೋಪಾಲ್ ನಾಯ್ಕ್ ನೇಮಕಗೊಂಡಿದ್ದಾರೆ.  

ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಕೇಶವಮೂರ್ತಿ ನಿಧನ

ಕೇಶವಮೂರ್ತಿ
ಭದ್ರಾವತಿ, ನ. ೨೪: ನಗರಸಭೆ ಚಾಲಕ, ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಕೇಶವಮೂರ್ತಿ(೪೮) ಮಂಗಳವಾರ ನಿಧನ ಹೊಂದಿದರು.
     ಪತ್ನಿ, ಒಂದು ಗಂಡು, ಒಂದು ಹೆಣ್ಣು ಮಕ್ಕಳನ್ನು ಹೊಂದಿದ್ದರು. ಹಳೇನಗರದ ಕನಕಮಂಟ ಮೈದಾನದ ಪಕ್ಕದಲ್ಲಿರುವ ನಗರಸಭೆ ವಸತಿ ಗೃಹದಲ್ಲಿ ವಾಸವಾಗಿದ್ದ ಇವರು ಕಳೆದ ೪-೫ ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.  
    ಪ್ರಸ್ತುತ ನಗರಸಭೆ ಕಂದಾಯಾಧಿಕಾರಿಗಳ ವಾಹನ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೃತರ ನಿಧನಕ್ಕೆ ನಗರಸಭೆ ಪೌರಾಯುಕ್ತ ಮನೋಹರ್, ಪೌರ ಕಾರ್ಮಿಕರ ಸಂಘದ ಪದಾಧಿಕಾರಿಗಳು, ಹಿರಿಯ ಆರೋಗ್ಯ ನಿರೀಕ್ಷಕ ಆರ್.ಬಿ ಸತೀಶ್ ಸೇರಿದಂತೆ ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು ಸಂತಾಪ ಸೂಚಿಸಿದ್ದಾರೆ.

Monday, November 23, 2020

ಕರ್ತವ್ಯ ಲೋಪ : ಮಾವಿನಕಟ್ಟೆ ವಲಯ ಅರಣ್ಯಾಧಿಕಾರಿ ವಿರುದ್ಧ ದೂರು

ದಿನಗೂಲಿ/ಪಿಸಿಪಿ ನೌಕರರಿಂದ ಸ್ವಂತ ಜಮೀನಿನಲ್ಲಿ ಜೋಳ ಮುರಿದು ತುಂಬಿಸುವ ಕೆಲಸಕ್ಕೆ

ಅರಣ್ಯ ಇಲಾಖೆಯ ದಿನಗೂಲಿ/ಪಿಸಿಪಿ ನೌಕರರನ್ನು ಮೀರಿ ಚನ್ನಗಿರಿ ತಾಲೂಕಿನ ಚಿಕ್ಕಗಂಗೂರು ಗ್ರಾಮದಲ್ಲಿ ತಮ್ಮ ಸ್ವಂತ ಜಮೀನಿನಲ್ಲಿ ಜೋಳ ಮುರಿದು ತುಂಬಿಸುವ ಕೆಲಸದಲ್ಲಿ ತೊಡಗಿಸಿಕೊಂಡಿರುವುದು.
ಭದ್ರಾವತಿ, ನ. ೨೩: ಅರಣ್ಯ ಇಲಾಖೆಯ ಮಾವಿನಕಟ್ಟೆ ವಲಯ(ಶಾಂತಿಸಾಗರ)ದ ವಲಯ ಅರಣ್ಯಾಧಿಕಾರಿಯೊಬ್ಬರು ಕರ್ತವ್ಯ ಲೋಪ ವೆಸಗಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ತಾಲೂಕಿನ ಉಕ್ಕುಂದ ಗ್ರಾಮದ ಸಾಮಾಜಿಕ ಹೋರಾಟಗಾರ ಶಿವಕುಮಾರ್ ಶಿವಮೊಗ್ಗ ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೋಮವಾರ ದೂರು ಸಲ್ಲಿಸಿದ್ದಾರೆ.
     ವಲಯ ಅರಣ್ಯಾಧಿಕಾರಿಯವರು ತಮ್ಮ ವಲಯದ ಎಲ್ಲಾ ದಿನಗೂಲಿ/ಪಿಸಿಪಿ ನೌಕರರನ್ನು ತಮ್ಮ ವಲಯದ ವ್ಯಾಪ್ತಿ ಮೀರಿ ಚನ್ನಗಿರಿ ತಾಲೂಕಿನ ಚಿಕ್ಕಗಂಗೂರು ಗ್ರಾಮದಲ್ಲಿ ತಮ್ಮ ಸ್ವಂತ ಜಮೀನಿನಲ್ಲಿ ಜೋಳ ಮುರಿದು ತುಂಬಿಸುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಕೆಲಸ ಮಾಡುವ ಜಮೀನಿನ ಸ್ಥಳಕ್ಕೆ ತೆರಳಿ ವಿಡಿಯೋ ಚಿತ್ರೀಕರಣ ನಡೆಸಲಾಗಿದೆ. ಈ ಕುರಿತು ಈಗಾಗಲೇ ನ.೧೯ರಂದು ದೂರವಾಣಿ ಮೂಲಕ ಮಾಹಿತಿ ಸಹ ನೀಡಲಾಗಿದೆ. ವಲಯ ಅರಣ್ಯಾಧಿಕಾರಿಗಳು ಕೆಲಸಕ್ಕೆ ಕರೆತಂದಿರುವ ಸತ್ಯ ಸಂಗತಿಯನ್ನು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಕೆಲವು ಪಿಸಿಪಿ ನೌಕರರು ಹೊರ ಹಾಕಿದ್ದಾರೆ. ಅಲ್ಲದೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಸಹ ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
     ಈ ಎಲ್ಲಾ ವಿಚಾರಗಳನ್ನು ಪರಿಶೀಲಿಸಿ ಸರ್ಕಾರಕ್ಕೆ ಮಾಡಿರುವ ನಷ್ಟ, ದ್ರೋಹದ ಹಿನ್ನಲೆಯಲ್ಲಿ ತಕ್ಷಣ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.  



ವಿಐಎಸ್‌ಎಲ್ ಖಾಸಗಿಕರಣ ಭೀತಿ : ವಾಸದ ಗೃಹಗಳನ್ನು ನಿವೃತ್ತ ಕಾರ್ಮಿಕರಿಗೆ ವಹಿಸಿಕೊಡಿ

ಸಹಿ ಅಭಿಯಾನದ ಮೂಲಕ ಪ್ರಧಾನಿ ನರೇಂದ್ರ ಮೋದಿಗೆ ಮನವಿ


ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ವಸತಿ ಗೃಹಗಳನ್ನು ಶಾಶ್ವತವಾಗಿ ನಿವೃತ್ತ ಕಾರ್ಮಿಕರಿಗೆ ವಹಿಸಿಕೊಡಲು ಪತ್ರದ ಮೂಲಕ ಸಹಿ ಅಭಿಯಾನ ನಡೆಸಲಾಗುತ್ತಿದೆ.

      ಭದ್ರಾವತಿ, ನ. ೨೩: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಪುನಃ ಖಾಸಗಿಕರಣಗೊಳ್ಳುವ ಭೀತಿ ಎದುರಾಗಿದ್ದು, ಮುಂದಿನ ಹೋರಾಟಗಳ ಬಗ್ಗೆ ರೂಪುರೇಷೆಗಳು ಸಿದ್ದಗೊಳ್ಳುತ್ತಿರುವ ನಡುವೆ ನಿವೃತ್ತ ಕಾರ್ಮಿಕರು ತಮ್ಮ ಭವಿಷ್ಯದ ಬದುಕಿನ ಸೂರಿಗಾಗಿ ಎದುರು ನೋಡುವ ಪರಿಸ್ಥಿತಿ ನಿರ್ಮಾಣವಾಗಿದೆ.
      ದೇಶದ ಬೃಹತ್ ಕೈಗಾರಿಕೆಗಳಲ್ಲಿ ಒಂದಾಗಿರುವ ವಿಐಎಸ್‌ಎಲ್ ಕಾರ್ಖಾನೆ ಇದೀಗ ಖಾಸಗಿಯವರಿಗೆ ವಹಿಸಿಕೊಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಉತ್ಸುಕವಾಗಿದ್ದು, ಈ ನಿಟ್ಟಿನಲ್ಲಿ ನಡೆಯುತ್ತಿರುವ ಪ್ರಕ್ರಿಯೆಗಳು ಕಾರ್ಮಿಕ ವಲಯವನ್ನು ಆತಂಕಕ್ಕೆ ಎಡೆ ಮಾಡಿಕೊಟ್ಟಿವೆ. ಈ ಹಿಂದೆ ಸಹ ಖಾಸಗಿಕರಣಗೊಳಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿತ್ತು. ಕಾರ್ಮಿಕ ಸಂಘಟನೆಗಳು, ಜನಪ್ರತಿನಿಧಿಗಳು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಸಂಘ-ಸಂಸ್ಥೆಗಳು, ಮಠಮಂದಿರಗಳು, ರೈತರು, ಮಹಿಳೆಯರು, ವಿದ್ಯಾರ್ಥಿಗಳು ಸೇರಿದಂತೆ ಸಮಸ್ತ ನಾಗರೀಕರು ನಿರಂತರವಾಗಿ ಹೋರಾಟ ನಡೆಸಿದ ಪರಿಣಾಮ ಖಾಸಗಿಕರಣ ಕೈಬಿಡಲಾಗಿತ್ತು. ಇದೀಗ ಪುನಃ ಹೋರಾಟದ ಲಕ್ಷಣಗಳು ಎದ್ದು ಕಾಣುತ್ತಿವೆ.
     ಕಾರ್ಖಾನೆಯಲ್ಲಿ ಸುಮಾರು ೩೦-೪೦ ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಕಾರ್ಮಿಕರು ತಮಗೆ ಬಂದ ನಿವೃತ್ತಿ ಹಣದಲ್ಲಿ ಬದುಕು ಕಟ್ಟಿಕೊಂಡಿದ್ದು, ಯಾವುದೇ ಸ್ವಂತ ಸೂರಿಲ್ಲದ ಬಹುತೇಕ ನಿವೃತ್ತ ಕಾರ್ಮಿಕರು ಲಕ್ಷಾಂತರ ರು. ವೆಚ್ಚದಲ್ಲಿ ಕಾರ್ಖಾನೆಯ ಹಾಳಾದ ವಸತಿ ಗೃಹಗಳನ್ನು ವಾಸಿಸಲು ಯೋಗ್ಯವಾದ ರೀತಿಯಲ್ಲಿ ದುರಸ್ತಿಪಡಿಸಿಕೊಂಡು ವಾಸಿಸುತ್ತಿದ್ದಾರೆ. ಇದೀಗ ಈ ಮನೆಗಳನ್ನು ಸಹ ಖಾಸಗಿಯವರಿಗೆ ವಹಿಸಿಕೊಡುವ ಭೀತಿ ಎದುರಾಗಿದೆ. ಈ ಹಿನ್ನಲೆಯಲ್ಲಿ ನಿವೃತ್ತ ಕಾರ್ಮಿಕರು ವಾಸದ ಗೃಹಗಳನ್ನು ಶಾಶ್ವತವಾಗಿ ತಮಗೆ ವಹಿಸಿಕೊಡುವಂತೆ ಪ್ರಧಾನಿ ನರೇಂದ್ರ ಮೋದಿಯವರ ಗಮನ ಸೆಳೆಯಲು ಮುಂದಾಗಿದ್ದಾರೆ.
     ನಿವೃತ್ತ ಕಾರ್ಮಿಕರು ಪತ್ರದ ಮೂಲಕ ಸಹಿ ಅಭಿಯಾನ ಕೈಗೊಂಡು ನರೇಂದ್ರ ಮೋದಿಯವರಿಗೆ ಮನವಿ ಸಲ್ಲಿಸುವ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಕಳೆದ ಸುಮಾರು ಒಂದು ವಾರದಿಂದ ಪ್ರತಿಯೊಂದು ಮನೆಗೆ ತೆರಳಿ ಸಹಿ ಸಂಗ್ರಹಿಸುತ್ತಿದ್ದು, ಈ ಕಾರ್ಯದಲ್ಲಿ ನಿವೃತ್ತ ಕಾರ್ಮಿಕರಾದ ನರಸಿಂಹಚಾರ್, ರಾಜಪ್ಪ, ಜಗದೀಶ್, ನಂಜಪ್ಪ, ಸುಬ್ರಮಣ್ಯ, ಕೆಂಪಯ್ಯ, ನಾಗರಾಜ್, ವಿ ಪ್ರಸಾದ್ ಸೇರಿದಂತೆ ಇನ್ನಿತರರು ತೊಡಿಗಿಸಿಕೊಂಡಿದ್ದಾರೆ.

ರು.೫೦ ಲಕ್ಷ ವೆಚ್ಚದಲ್ಲಿ ೧೧ ಅಡಿ ಎತ್ತರದ ಅಂಬೇಡ್ಕರ್ ಕಂಚಿನ ಪ್ರತಿಮೆ ಪ್ರತಿಸ್ಥಾಪನೆಗೆ ಆಗ್ರಹ

ಡಿಎಸ್‌ಎಸ್‌ವತಿಯಿಂದ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಮನವಿ

ಭದ್ರಾವತಿ ಬಿ.ಎಚ್ ರಸ್ತೆ ಅಂಡರ್ ಬ್ರಿಡ್ಜ್ ಬಳಿ ಇರುವ ಅಂಬೇಡ್ಕರ್ ವೃತ್ತವನ್ನು ಅಭಿವೃದ್ಧಿಪಡಿಸಿ ಹೆಚ್ಚಿನ ಅನುದಾನ ಬಳಸಿ ಸುಮಾರು ೧೧ ಅಡಿ ಎತ್ತರದ ಕಂಚಿನ ಪ್ರತಿಮೆ ಪ್ರತಿಷ್ಠಾಪಿಸಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘಷ ಸಮಿತಿ ವತಿಯಿಂದ ಸೋಮವಾರ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ನ. ೨೩: ನಗರದ ಬಿ.ಎಚ್ ರಸ್ತೆ ಅಂಡರ್ ಬ್ರಿಡ್ಜ್ ಬಳಿ ಇರುವ ಅಂಬೇಡ್ಕರ್ ವೃತ್ತವನ್ನು ಅಭಿವೃದ್ಧಿಪಡಿಸಿ ಹೆಚ್ಚಿನ ಅನುದಾನ ಬಳಸಿ ಸುಮಾರು ೧೧ ಅಡಿ ಎತ್ತರದ ಕಂಚಿನ ಪ್ರತಿಮೆ ಪ್ರತಿಷ್ಠಾಪಿಸಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘಷ ಸಮಿತಿ ವತಿಯಿಂದ ಸೋಮವಾರ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಮನವಿ ಸಲ್ಲಿಸಲಾಯಿತು.
    ರಾಜ್ಯ ಖಜಾಂಚಿ ಸತ್ಯ ಮಾತನಾಡಿ, ಸಮಿತಿ ವತಿಯಿಂದ ಈ ಹಿಂದೆ ನಿರಂತರವಾಗಿ ಹೋರಾಟ ನಡೆಸಿದ ಪರಿಣಾಮ ಅಂಡರ್ ಬ್ರಿಡ್ಜ್ ವೃತ್ತಕ್ಕೆ ೨೦೦೪ರಲ್ಲಿ ಅಂದಿನ ಶಾಸಕರಾಗಿದ್ದ ದಿವಂಗತ ಎಂ.ಜೆ ಅಪ್ಪಾಜಿ ಹಾಗು ನಗರಸಭೆ ಆಡಳಿತ ಅಂಬೇಡ್ಕರ್ ವೃತ್ತ ಹೆಸರನ್ನು ಶಿಫಾರಸ್ಸು ಮಾಡಿದ ಪರಿಣಾಮ ಸರ್ಕಾರದಿಂದ ಅಧಿಕೃತವಾಗಿ ನಾಮಕರಣಗೊಳಿಸಿ ಉದ್ಘಾಟಿಸಲಾಯಿತು. ನಂತರ ೨೦೦೬ರಲ್ಲಿ ತಾವು ಶಾಸಕರಾಗಿದ್ದ ಅವಧಿಯಲ್ಲಿ ಪ್ರತಿಮೆ ಪ್ರತಿಷ್ಠಾಪನೆಗೆ ಶಂಕುಸ್ಥಾಪನೆ ನೆರವೇರಿಸಿದ್ದು, ೨೦೦೭ರಲ್ಲಿ ಬಿ.ಎಸ್ ಯಡಿಯೂರಪ್ಪ ೬ ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ಅನಾವರಣಗೊಳಿಸಿದ್ದರು ಎಂದರು.
   ತದ ನಂತರ ವೃತ್ತವನ್ನು ಅಭಿವೃದ್ಧಿಗೊಳಿಸಿ ೧೧ ಅಡಿ ಎತ್ತರದ ನೂತನ ಕಂಚಿನ ಪ್ರತಿಮೆ ಪ್ರತಿಷ್ಠಾಪಿಸಬೇಕೆಂದು ಹೋರಾಟ ನಡೆಸಲಾಯಿತು. ಇದರ ಪರಿಣಾಮ ನಗರಸಭೆ ಆಡಳಿತ ಸುಮಾರು ರು. ೨೫ ಲಕ್ಷ ಅನುದಾನ ಮೀಸಲಿರಿಸಿತ್ತು. ಅಂದಿನ ಜಿಲ್ಲಾಧಿಕಾರಿಯಾಗಿದ್ದ ವಿ.ಪಿ ಇಕ್ಕೇರಿಯವರು ರು.೧೦ ಲಕ್ಷ ಹೆಚ್ಚಿನ ಅನುದಾನ ಮೀಸಲಿರಿಸುವಂತೆ ನಗರಸಭೆ ಆಡಳಿತಕ್ಕೆ ಸೂಚಿಸಿದ್ದರು. ಪ್ರಸ್ತುತ ವೃತ್ತವನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ  ರು.೩೫ ಲಕ್ಷ ಅನುದಾನದ ಜೊತೆಗೆ ಹೆಚ್ಚುವರಿಯಾಗಿ ರು.೧೫ ಲಕ್ಷ ಸೇರಿಸಿ ಒಟ್ಟು ರು. ೫೦ ಲಕ್ಷ ವೆಚ್ಚದಲ್ಲಿ ನೂತನ ಪ್ರತಿಮೆ ಪ್ರತಿಷ್ಠಾಪಿಸಬೇಕು. ವೃತ್ತವನ್ನು ಮತ್ತಷ್ಟು ವಿಸ್ತರಿಸಿ ನಗರವನ್ನು ಸುಂದರಗೊಳಿಸುವ ಜೊತೆಗೆ ಸುಗಮ ಸಂಚಾರ ವ್ಯವಸ್ಥೆಗೆ ಅನುಕೂಲ ಕಲ್ಪಿಸಿಕೊಡುವಂತೆ ಕೋರಿದರು.
    ಮನವಿ ಸ್ವೀಕರಿಸಿದ ಶಾಸಕ ಬಿ.ಕೆ ಸಂಗಮೇಶ್ವರ್, ನೂತನ ಪ್ರತಿಮೆ ನಿರ್ಮಾಣಕ್ಕೆ ಹೆಚ್ಚಿನ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಭದ್ರಾವತಿ ಬಿ.ಎಚ್ ರಸ್ತೆ ಅಂಡರ್ ಬ್ರಿಡ್ಜ್ ಬಳಿ ಇರುವ ಅಂಬೇಡ್ಕರ್ ವೃತ್ತವನ್ನು ಅಭಿವೃದ್ಧಿಪಡಿಸಿ ಹೆಚ್ಚಿನ ಅನುದಾನ ಬಳಸಿ ಸುಮಾರು ೧೧ ಅಡಿ ಎತ್ತರದ ಕಂಚಿನ ಪ್ರತಿಮೆ ಪ್ರತಿಷ್ಠಾಪಿಸಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘಷ ಸಮಿತಿ ರಾಜ್ಯ ಖಜಾಂಚಿ ಸತ್ಯ ಮಾತನಾಡಿದರು.
     ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಚಿನ್ನಯ್ಯ, ಮುಖಂಡರಾದ ಡಿ. ರಾಜು, ಈಶ್ವರಪ್ಪ ಸೇರಿದಂತೆ ಇನ್ನಿತರರು ಮಾತನಾಡಿದರು. ತಹಸೀಲ್ದಾರ್ ಗ್ರೇಡ್-೨ ರಂಗಮ್ಮ, ನಗರಸಭೆ ಪೌರಾಯುಕ್ತ ಮನೋಹರ್, ಕಂದಾಯಾಧಿಕಾರಿ ಪ್ರಶಾಂತ್, ಪೊಲೀಸ್ ನಗರವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ ಉಪಸ್ಥಿತರಿದ್ದರು.
    ಡಿಎಸ್‌ಎಸ್ ತಾಲೂಕು ಸಂಚಾಲಕ ಕೆ. ರಂಗನಾಥ್, ರಾಜ್ಯ ಸಹ ಸಂಚಾಲಕಿ ಪಿ.ಆರ್ ಶಾಂತಿ, ಅಂಗವಿಕಲರ ವಿಭಾಗದ ಜಿಲ್ಲಾಧ್ಯಕ್ಷ ಕಾಣಿಕ್‌ರಾಜ್, ಜಿಲ್ಲಾ ಸಮಿತಿ ಸದಸ್ಯ ಜಿಂಕ್‌ಲೈನ್ ಮಣಿ, ಶಿವಶಂಕರ್, ಕೆ. ಸುರೇಶ್, ಆರ್. ಸಂದೀಪ, ನರಸಿಂಹ, ಪಿ.ಸಿ ರಾಜು(ದಾಸ), ಅವಿನಾಶ್, ಪ್ರಸನ್ನ, ಪೊಬಾಲನ್, ಕೆ. ಕುಪ್ಪಸ್ವಾಮಿ, ಮಂಜುಮಣಿ, ಗೋವಿಂದ, ಕಬಡ್ಡಿ ಸುಬ್ಬು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

Sunday, November 22, 2020

ಸರ್.ಎಂ ವಿಶ್ವೇಶ್ವರಾಯ ವಿವಿದೋದ್ದೇಶ ಸಹಕಾರ ಸಂಘ ರು. ೬೨,೪೮೫ ಲಾಭ

ಭದ್ರಾವತಿ ನ್ಯೂಟೌನ್ ಸರ್.ಎಂ ವಿಶ್ವೇಶ್ವರಾಯ ವಿವಿದೋದ್ದೇಶ ಸಹಕಾರ ಸಂಘದ ಸರ್ವ ಸದಸ್ಯರ ೫೪ನೇ ವಾರ್ಷಿಕ ಮಹಾಸಭೆ ಭಾನುವಾರ ನಡೆಯಿತು.
ಭದ್ರಾವತಿ, ನ. ೨೨: ಮಾಜಿ ಶಾಸಕ ದಿವಂಗತ ಅಬ್ದುಲ್ ಖುದ್ದೂಸ್ ಅನ್ವರ್‌ರವರ ಪರಿಶ್ರಮದಿಂದ ಸ್ಥಾಪಿತವಾಗಿ ೫ ದಶಕಗಳನ್ನು ಪೂರೈಸಿರುವ ನಗರದ ನ್ಯೂಟೌನ್ ಸರ್.ಎಂ ವಿಶ್ವೇಶ್ವರಾಯ ವಿವಿದೋದ್ದೇಶ ಸಹಕಾರ ಸಂಘ ಪ್ರಸಕ್ತ ಸಾಲಿನಲ್ಲಿ ರು. ೬೨,೪೮೫ ಲಾಭ ಗಳಿಸಿದ್ದು, ಸದಸ್ಯರುಗಳಿಗೆ ಹೊಸ ಯೋಜನೆಗಳನ್ನು ರೂಪಿಸಿಕೊಂಡಿದೆ ಎಂದು ಸಂಘದ ಅಧ್ಯಕ್ಷ ಎಚ್.ಎಸ್ ಸಿದ್ದಯ್ಯ ತಿಳಿಸಿದರು.
    ಅವರು ಭಾನುವಾರ ಸಂಘದ ಆವರಣದಲ್ಲಿ ಏರ್ಪಡಿಸಲಾಗಿದ್ದ ೫೪ನೇ ವರ್ಷದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
    ಸದಸ್ಯರುಗಳಿಂದ ಒಟ್ಟು ರು. ೪೬ ಲಕ್ಷ ಠೇವಣಿ ಇದ್ದು, ರು. ೧೦.೬೭ ಲಕ್ಷ ಷೇರು ಬಂಡವಾಳ ಹೊಂದಲಾಗಿದೆ. ಒಟ್ಟು ರು.೬೮,೯೯,೩೭೦ ಸಾಲ ನೀಡಲಾಗಿದ್ದು, ರು. ೫೯,೧೦,೮೮೬ ವಸೂಲಾತಿ ಮಾಡಲಾಗಿದೆ. ಬಾಕಿ ಸಾಲದ ಮೊತ್ತ ರು.೭೩,೫೦,೩೯೮ ಬರಬೇಕಾಗಿದ್ದು, ಈ ನಡುವೆ ಬೈಲಾ ತಿದ್ದುಪಡಿ ಮಾಡಿ ಸಂಘದ ಕಾರ್ಯವ್ಯಾಪ್ತಿಯಲ್ಲಿ ವಾಸಿಸುತ್ತಿರುವ ನಿವಾಸಿಗಳಿಗೂ ಸದಸ್ಯತ್ವ ನೀಡಲು ಕ್ರಮ ಕೈಗೊಳ್ಳಲಾಗಿದೆ. ಸದಸ್ಯರುಗಳಿಗೆ ಸಂಬಳ ಆಧಾರ ಸಾಲ, ಜಾಮೀನು ಆಧಾರ ಸಾಲ, ನಿವೇಶನ/ಗೃಹ ಖರೀದಿ/ರಿಪೇರಿ ಸಾಲ ಸ್ವಸಹಾಯ ಗುಂಪುಗಳ ಸಾಲ ಮತ್ತು ವ್ಯಾಪಾರ ಉತ್ತೇಜಕ ಸಾಲಗಳನ್ನು ನೀಡಲು ತೀರ್ಮಾನಿಸಲಾಗಿದೆ ಎಂದರು.
   ಸಂಘದ ಸಂಸ್ಥಾಪಕ ಅಧ್ಯಕ್ಷ ಮಾಜಿ ಶಾಸಕ ದಿವಂಗತ ಅಬ್ದುಲ್ ಖುದ್ದೂಸ್ ಅನ್ವರ್‌ರವರ ಪುತ್ರ, ಸಂಘದ ಅಧ್ಯಕ್ಷರಾಗಿದ್ದ ಸಿ.ಕೆ ಅಸ್ಮತ್‌ಪಾಷರವರು ಕಳೆದ ೨ ತಿಂಗಳ ಹಿಂದೆ ನಿಧನ ಹೊಂದಿದ್ದು, ಇವರಿಗೆ ಸಂತಾಪ ಸೂಚಿಸಲಾಯಿತು.
    ಸಂಘದ ಛೇರ‍್ಮನ್ ಬೋರೇಗೌಡ, ಕಾರ್ಯದರ್ಶಿ ಮುಕುಂದಪ್ಪ, ಖಜಾಂಚಿ ಸಿ. ದಾಸಿ, ನಿರ್ದೇಶಕರಾದ ಎನ್. ರಂಗಸ್ವಾಮಿ, ಎಚ್. ಮಲ್ಲೇಶ್, ರಾಜ, ಗಂಗಾಧರ ಗೌಡ, ಮಹಮ್ಮದ್  ಬುಡೇನ್, ಮಂಜುನಾಥ ಮತ್ತು ಶಾರದಮ್ಮ ಉಪಸ್ಥಿತರಿದ್ದರು.

ಬಸ್ ನಿಲ್ದಾಣ ಪುನರ್ ನಿರ್ಮಾಣಕ್ಕೆ ಆಗ್ರಹಿಸಿ ನಗರಸಭೆಗೆ ಮನವಿ

ಭದ್ರಾವತಿ ಚನ್ನಗಿರಿ ರಸ್ತೆಯ ಉಪನೋಂದಣಾಧಿಕಾರಿಗಳ ಕಛೇರಿ ಮುಂಭಾಗ ನೆಲಸಮಗೊಳಿಸಿರುವ ೨ ಬಸ್ ನಿಲ್ದಾಣಗಳನ್ನು ಪುನರ್ ನಿರ್ಮಾಣ ಮಾಡುವಂತೆ ಆಗ್ರಹಿಸಿ ಕನಾ೯ಟಕ ಜನ ಸೈನ್ಯ ವಿದ್ಯಾರ್ಥಿ ಘಟಕದ ವತಿಯಿಂದ ನಗರಸಭೆ ಆಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ನ. ೨೨: ನಗರದ ಚನ್ನಗಿರಿ ರಸ್ತೆಯ ಉಪನೋಂದಣಾಧಿಕಾರಿಗಳ ಕಛೇರಿ ಮುಂಭಾಗ ನೆಲಸಮಗೊಳಿಸಿರುವ ೨ ಬಸ್ ನಿಲ್ದಾಣಗಳನ್ನು ಪುನರ್ ನಿರ್ಮಾಣ ಮಾಡುವಂತೆ ಆಗ್ರಹಿಸಿ ಕನಾ೯ಟಕ ಜನ ಸೈನ್ಯ ವಿದ್ಯಾರ್ಥಿ ಘಟಕದ ವತಿಯಿಂದ ನಗರಸಭೆ ಆಡಳಿತಕ್ಕೆ ಮನವಿ ಸಲ್ಲಿಸಲಾಯಿತು.
    ಯಾವುದೇ ರೀತಿ ಟೆಂಡರ್ ಕರೆಯದೆ ಬಸ್ ನಿಲ್ದಾಣಗಳನ್ನು ಅನಧಿಕೃತವಾಗಿ ನೆಲಸಮ ಮಾಡಲಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ತೊಂದರೆಯಾಗಿದ್ದು, ತಕ್ಷಣ ತಾತ್ಕಾಲಿಕವಾಗಿ ಬಸ್ ನಿಲ್ದಾಣಗಳನ್ನು ನಿರ್ಮಾಣ ಮಾಡಬೇಕೆಂದು ಹಾಗು ಕಾನೂನು ಬಾಹಿರವಾಗಿ ಬಸ್ ನಿಲ್ದಾಣಗಳನ್ನು ನೆಲಸಮಗೊಳಿಸಿರುವ ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗಿದೆ.
    ಮನವಿ ಸ್ವೀಕರಿಸಿದ ನಗರಸಭೆ ಇಂಜಿನಿಯರ್ ರಂಗರಾಜಪುರೆ ಮುಂದಿನ ಕ್ರಮ ಕೈಗೊಳ್ಳುವ ಭರವಸೆ  ನೀಡಿದರು. ಘಟಕದ ಅಧ್ಯಕ್ಷ ದೀಕ್ಷಿತ್, ಕಾರ್ಯಕರ್ತರಾದ ಸುದೈವ, ಮನೋಜ್, ಮಂಜುನಾಥ್, ಗಿರೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.