ಭಾರತೀಯ ಜನತಾ ಪಕ್ಷದ ವತಿಯಿಂದ ಭದ್ರಾವತಿ ಜನ್ನಾಪುರ ಮಲ್ಲೇಶ್ವರ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿರುವ ಎರಡು ದಿನಗಳ ಅಭ್ಯಾಸ ವರ್ಗ ಶನಿವಾರ ಪಕ್ಷದ ಜಿಲ್ಲಾಧ್ಯಕ್ಷ ಡಿ.ಟಿ ಮೇಘರಾಜ್ ಉದ್ಘಾಟಿಸಿದರು.
ಭದ್ರಾವತಿ, ನ. ೨೮: ಭಾರತೀಯ ಜನತಾ ಪಕ್ಷದ ವತಿಯಿಂದ ನಗರದ ಜನ್ನಾಪುರ ಮಲ್ಲೇಶ್ವರ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿರುವ ಎರಡು ದಿನಗಳ ಅಭ್ಯಾಸ ವರ್ಗ ಶನಿವಾರ ಪಕ್ಷದ ಜಿಲ್ಲಾಧ್ಯಕ್ಷ ಡಿ.ಟಿ ಮೇಘರಾಜ್ ಉದ್ಘಾಟಿಸಿದರು.
ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಜಿ. ಧರ್ಮಪ್ರಸಾದ್, ಬಿ.ಕೆ ಶ್ರೀನಾಥ್, ಶಿವರಾಜ್, ವೆಂಕ್ಯಾನಾಯ್ಕ್, ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್, ಪ್ರಧಾನ ಕಾರ್ಯದರ್ಶಿಗಳಾದ ಚನ್ನೇಶ್, ಹನುಮಂತನಾಯ್ಕ್, ಮಂಜಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಪಕ್ಷದ ವಿವಿಧ ಮೋರ್ಚಾಗಳ, ಶಕ್ತಿ ಕೇಂದ್ರಗಳ, ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಅಭ್ಯಾಸ ವರ್ಗದಲ್ಲಿ ಪಾಲ್ಗೊಂಡಿದ್ದರು.