Saturday, December 5, 2020

ಜನ್ನಾಪುರ ಕೆರೆ ಅಳತೆ, ಬೌಂಡರಿ ನಿಗದಿ ಸ್ಥಳದಲ್ಲಿ ಕಂದಕ ನಿರ್ಮಾಣ

ಕೆಲವೇ ದಿನಗಳಲ್ಲಿ ಸಂಪೂರ್ಣ ತೆರವು ಕಾರ್ಯಾಚರಣೆ



ಶುಕ್ರವಾರ ಭದ್ರಾವತಿ ನಗರಸಭೆ ವ್ಯಾಪ್ತಿಯ ಜನ್ನಾಪುರ ಸರ್ವೆ ನಂ.೭೦ರ ೪೫ ಎಕರೆ, ೨೦ ಗುಂಟೆ ವಿಸ್ತೀರ್ಣವುಳ್ಳ ಜನ್ನಾಪುರ ಕೆರೆ ಅಳತೆ ಕಾರ್ಯ ನಡೆದು ಬೌಂಡರಿ ನಿಗದಿಪಡಿಸಲಾಗಿತ್ತು. ಶನಿವಾರ ಮೊದಲ ಹಂತದಲ್ಲಿ ಗುರುತು ಮಾಡಲಾದ ಸ್ಥಳದಲ್ಲಿ ಕಂದಕ ನಿರ್ಮಿಸಲಾಗಿದೆ.
    ಭದ್ರಾವತಿ, ಡಿ. ೫ : ಶುಕ್ರವಾರ ನಗರಸಭೆ ವ್ಯಾಪ್ತಿಯ ಜನ್ನಾಪುರ ಸರ್ವೆ ನಂ.೭೦ರ ೪೫ ಎಕರೆ, ೨೦ ಗುಂಟೆ ವಿಸ್ತೀರ್ಣವುಳ್ಳ ಜನ್ನಾಪುರ ಕೆರೆ ಅಳತೆ ಕಾರ್ಯ ನಡೆದು ಬೌಂಡರಿ ನಿಗದಿಪಡಿಸಲಾಗಿತ್ತು. ಶನಿವಾರ ಮೊದಲ ಹಂತದಲ್ಲಿ ಗುರುತು ಮಾಡಲಾದ ಸ್ಥಳದಲ್ಲಿ ಕಂದಕ ನಿರ್ಮಿಸಲಾಗಿದೆ.
    ಪ್ರಭಾವಿ ವ್ಯಕ್ತಿಗಳು ಕೆರೆಯನ್ನು ಕಳೆದ ೪-೫ ದಶಕಗಳಿಂದ ಒತ್ತುವರಿ ಮಾಡಿಕೊಂಡು ಬರುತ್ತಿದ್ದು, ಸಮೃದ್ಧವಾದ ಭೂಮಿಯನ್ನಾಗಿ ಪರಿವರ್ತಿಸಿಕೊಂಡು ಅಡಕೆ, ಬಾಳೆ, ತೆಂಗಿನ ತೋಟಗಳನ್ನು ನಿರ್ಮಿಸಿಕೊಂಡಿದ್ದಾರೆ.  ಪೌರಾಯುಕ್ತರ ಮನೋಹರ್‌ರವರ ದಿಟ್ಟ ಪ್ರಯತ್ನದಿಂದಾಗಿ ಕೆರೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಮೊದಲ ಹಂತದಲ್ಲಿ ಗುರುತು ಮಾಡಲಾಗಿರುವ ಸ್ಥಳದಲ್ಲಿ ಕಂದಕ ನಿಮಿಸಲಾಗಿದೆ. ಕೆಲವೇ ದಿನಗಳಲ್ಲಿ ಸಂಪೂರ್ಣ ತೆರವು ಕಾರ್ಯಾಚರಣೆ ನಡೆಯಲಿದೆ.
    ಇದೆ ರೀತಿ ನಗರಸಭೆ ವ್ಯಾಪ್ತಿಯ ಹಳೇ ಸೀಗೆಬಾಗಿ ಸರ್ವೆ ನಂ.೩೩ರ ಸುಮಾರು ೧೮ ಎಕರೆ ೧೯ ಗುಂಟೆ ವಿಸ್ತೀರ್ಣವುಳ್ಳ ಸರ್ಕಾರಿ ಕೆರೆ ಒತ್ತುವರಿ ಕಾರ್ಯಾಚರಣೆ ಸಹ ನಡೆಸಲಾಗುತ್ತಿದೆ.



Friday, December 4, 2020

ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಭೆ

ಭದ್ರಾವತಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಭೆ ಶುಕ್ರವಾರ ನ್ಯೂಟೌನ್‌ನಲ್ಲಿರುವ ಪರಿಷತ್ ಕಚೇರಿಯಲ್ಲಿ ನಡೆಯಿತು.  
ಭದ್ರಾವತಿ, ಡಿ. ೪: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಭೆ ಶುಕ್ರವಾರ  ನ್ಯೂಟೌನ್‌ನಲ್ಲಿರುವ ಪರಿಷತ್ ಕಚೇರಿಯಲ್ಲಿ ನಡೆಯಿತು.  
   ಪರಿಷತ್ ಅಧ್ಯಕ್ಷ ಅಪೇಕ್ಷ ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಸಾಹಿತ್ಯ ಸಮ್ಮೇಳನ, ಜಿಲ್ಲಾ ಸಾಹಿತ್ಯ ಸಮ್ಮೇಳನಗಳನ್ನು ಯಶಸ್ವಿಯಾಗಿ ನಡೆಸುವ ಬಗ್ಗೆ  ಹಾಗೂ ಪರಿಷತ್ತಿನ ಕಾರ್ಯಚಟುವಟಿಕೆಗಳ ಕುರಿತು ಚರ್ಚಿಸಲಾಯಿತು.  
     ಕೋಶಾಧ್ಯಕ್ಷ ಜಿ.ಎನ್ ಸತ್ಯಮೂರ್ತಿ, ಕಾರ್ಯದರ್ಶಿಗಳಾದ ವೈ.ಕೆ  ಹನುಮಂತಯ್ಯ ಸಿ. ಚನ್ನಪ್ಪ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಸೇರಿದಂತೆ ಇನ್ನಿತರರಿದ್ದರು.

ಜಹರ ಹರ್ಮೈನ್ ವೈದ್ಯಕೀಯ ವಿಭಾಗದಲ್ಲಿ ಡಾಕ್ಟರೇಟ್ ಪದವಿ

ಭದ್ರಾವತಿ ಖಲಂದರ್ ನಗರದ ನಿವಾಸಿ ಜಹರ ಹರ್ಮೈನ್ ವೈದ್ಯಕೀಯ ವಿಭಾಗದಲ್ಲಿ ಡಾಕ್ಟರೇಟ್ ಪದವಿ ಪಡೆದುಕೊಂಡರು.
ಭದ್ರಾವತಿ, ಡಿ. ೪: ನಗರಸಭೆ ವ್ಯಾಪ್ತಿಯ ಖಲಂದರ್ ನಗರದ ನಿವಾಸಿ ಜಹರ ಹರ್ಮೈನ್ ವೈದ್ಯಕೀಯ ವಿಭಾಗದಲ್ಲಿ ಡಾಕ್ಟರೇಟ್ ಪದವಿ ಪಡೆದುಕೊಂಡಿದ್ದಾರೆ.
   ಓರಲ್ ಅಂಡ್ ಮ್ಯಾಕ್ಸಿಲೊಫೇಶಿಯಲ್ ಶಸ್ತ್ರ ಚಿಕಿತ್ಸೆ ವಿಭಾಗದಲ್ಲಿ ಮೊದಲಸ್ಥಾನ ಕಾಯ್ದುಕೊಂಡಿದ್ದಾರೆ. ಇವರು ನಗರದ ಹಫೀಸಿಯ ಮಸೀದಿ ಮತ್ತು ಉಸ್ಮಾನಿಯಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಹಬೀಬುಲ್ಲಾ ಖಾನ್(ನಾಸಿರ್‌ಖಾನ್) ಪುತ್ರಿಯಾಗಿದ್ದಾರೆ. ಶಿವಮೊಗ್ಗ ಸುಬ್ಬಯ್ಯ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಯಾಗಿರುವ ಇವರನ್ನು ಕಾಲೇಜಿನ ಆಡಳಿತ ಮಂಡಳಿ ಅಭಿನಂದಿಸಿದೆ.

ಲೈಂಗಿಕ ಕಿರುಕುಳ ಆರೋಪ : ವೈದ್ಯರೊಬ್ಬರ ವಿರುದ್ಧ ಪ್ರಕರಣ ದಾಖಲು

ಭದ್ರಾವತಿ: ಮೂಲವ್ಯಾಧಿ ವೈದ್ಯರೊಬ್ಬರು ಮಹಿಳೆಯೊಬ್ಬರಿಗೆ ಚಿಕಿತ್ಸೆ ನೀಡುವಾಗ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರಕುಳ ನೀಡಿದ್ದಾರೆಂದು ಆರೋಪಿಸಿ ಹಳೇನಗರ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣವೊಂದು ದಾಖಲಾಗಿದೆ.  
ಹಳೇನಗರದ ಖಾಜಿ ಮೊಹಲ್ಲಾದಲ್ಲಿ ಕ್ಲಿನಿಕ್ ಹೊಂದಿರುವ ವೈದ್ಯರೊಬ್ಬರು ಲೈಂಗಿಕ ನೀಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ.


Thursday, December 3, 2020

ರೈತ ವಿರೋಧಿ ಕೃಷಿ ಮಸೂದೆಗಳನ್ನು ಕೇಂದ್ರ ಸರ್ಕಾರ ತಕ್ಷಣ ಹಿಂಪಡೆಯಲಿ : ರೈತರ ಆಗ್ರಹ

ದೆಹಲಿ ರೈತರ ಹೋರಾಟ ಬೆಂಬಲಿಸಿ ರಂಗಪ್ಪ ವೃತ್ತದಲ್ಲಿ ಪ್ರತಿಭಟನೆ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಮಸೂದೆ ಹಿಂಪಡೆಯಲು ಆಗ್ರಹಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ವತಿಯಿಂದ ಗುರುವಾರ ನಗರದ ರಂಗಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
   ಭದ್ರಾವತಿ, ಡಿ. ೩: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಮಸೂದೆ ಹಿಂಪಡೆಯಲು ಆಗ್ರಹಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ವತಿಯಿಂದ ಗುರುವಾರ ನಗರದ ರಂಗಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
     ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ರೈತ ಮುಖಂಡರು ಹಾಗೂ ವಿವಿಧ ಸಂಘಟನೆಗಳ ಪ್ರಮುಖರು ಮಾತನಾಡಿ, ಪ್ರಸ್ತುತ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಮಸೂದೆಗಳು ದೇಶದಲ್ಲಿ ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳಲಿವೆ. ಕೃಷಿಯನ್ನು ನಂಬಿ ಬದುಕುತ್ತಿರುವ ರೈತರು ಭೂಮಿ ಕಳೆದುಕೊಳ್ಳುವ ಆತಂಕ ಎದುರಾಗಿದೆ. ಈ ಮಸೂದೆಗಳು ಬಂಡವಾಳ ಶಾಹಿಗಳಿಗೆ ನೆರವಾಗಲಿವೆ ಎಂದು ಆರೋಪಿಸಿದರು.
   ತಕ್ಷಣ ಕೇಂದ್ರ ಸರ್ಕಾರ ರೈತ ವಿರೋಧಿ ಕೃಷಿ ಮಸೂದೆಗಳನ್ನು ಹಿಂಪಡೆಯಬೇಕು. ರೈತರಿಗೆ ಅಗತ್ಯವಿರುವ ನೆರವು ಕಲ್ಪಿಸಿ ಹಿತ ಕಾಪಾಡಬೇಕೆಂದು ಆಗ್ರಹಿಸಿದರು.
   ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಯಶವಂತರಾವ್ ಘೋರ್ಪಡೆ, ಹಿರಿಯಣ್ಣಯ್ಯ, ಡಿ.ವಿ ವೀರೇಶ್, ರಾಮಚಂದ್ರರಾವ್, ಮೋಹನ್, ಬಸವರಾಜ, ತಿಮ್ಮಣ್ಣ, ರುದ್ರೇಶ್, ವಸಂತ, ವೀರೇಶ್,  ಆಮ್ ಆದ್ಮಿ ಪಕ್ಷದ ಎಚ್. ರವಿಕುಮಾರ್, ಜೋಸೆಫ್, ಪರಮೇಶ್ವರಚಾರ್, ಇಬ್ರಾಹಿಂ ಖಾನ್, ಜನಶಕ್ತಿ ಜಿ. ರಾಜು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.    

ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಕನಕಶ್ರೀ ಚೇತನ ಪತಂಜಲಿ ರತ್ನ ಪ್ರಶಸ್ತಿ

ಭದ್ರಾವತಿ ಕ್ಷೇತ್ರದಲ್ಲಿ ೩ ಬಾರಿ ಶಾಸಕರಾಗಿ ಆಯ್ಕೆಯಾಗುವ ಮೂಲಕ ಎಲ್ಲಾ ಧರ್ಮ, ಜಾತಿ, ಜನಾಂಗದವರೊಂದಿಗೆ ಗುರುತಿಸಿಕೊಂಡಿರುವ ಬಿ.ಕೆ ಸಂಗಮೇಶ್ವರ್‌ರವರ ರಾಜಕೀಯ ಸೇವೆಯನ್ನು ಪರಿಗಣಿಸಿ ಕನಕಶ್ರೀ ಚೇತನ ಪತಂಜಲಿ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಭದ್ರಾವತಿ, ಡಿ. ೩: ಕ್ಷೇತ್ರದಲ್ಲಿ ೩ ಬಾರಿ ಶಾಸಕರಾಗಿ ಆಯ್ಕೆಯಾಗುವ ಮೂಲಕ ಎಲ್ಲಾ ಧರ್ಮ, ಜಾತಿ, ಜನಾಂಗದವರೊಂದಿಗೆ ಗುರುತಿಸಿಕೊಂಡಿರುವ ಬಿ.ಕೆ ಸಂಗಮೇಶ್ವರ್‌ರವರ ರಾಜಕೀಯ ಸೇವೆಯನ್ನು ಪರಿಗಣಿಸಿ ಕನಕಶ್ರೀ ಚೇತನ ಪತಂಜಲಿ ರತ್ನ ಪ್ರಶಸ್ತಿ ನೀಡಲಾಗಿದೆ.
      ಶಿವಮೊಗ್ಗ ಪತಂಜಲಿ ಯೋಗ ಮತ್ತು ಪ್ರಕೃತಿ ಸಂಸ್ಥೆ ಮತ್ತು ನಗರದ ಕನಕ ಯುವಪಡೆ ವತಿಯಿಂದ ೫೩೩ನೇ ಶ್ರೀ ಕನಕದಾಸರ ಜಯಂತ್ಯೋತ್ಸವ ಮತ್ತು ೨೫ನೇ ವರ್ಷದ ಬೆಳ್ಳಿ ಹಬ್ಬ ಸಂಭ್ರಮೋತ್ಸವದ ಅಂಗವಾಗಿ ರಾಜ್ಯಮಟ್ಟದ ಕನಕ ಕಥಾಕೀರ್ತನ ಮಹೋತ್ಸವ ಸಮ್ಮೇಳನ, ತರಬೇತಿ ಕಾರ್ಯಾಗಾರ ಹಾಗೂ ಕನಕದಾಸರ ಗೀತಾಗಾಯನ, ಹಾಲುಮತ ಸಂಸ್ಕೃತಿ, ಕನಕ ಕಲಾ ವೈಭವ, ಕನಕಶ್ರೀ ಚೇತನ ಪತಂಜಲಿ ರತ್ನ ಮತ್ತು ವಿಶ್ವಕನ್ನಡ ಕಣ್ಮಣಿ ರಾಜ್ಯ ಪ್ರಶಸ್ತಿ ಸಮಾರಂಭದಲ್ಲಿ ಶಾಸಕರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
    ಪತಂಜಲಿ ಯೋಗ ಮತ್ತು ಪ್ರಕೃತಿ ಸಂಸ್ಥೆ ಕಾರ್ಯದರ್ಶಿ ಪತಂಜಲಿ ಜೆ ನಾಗರಾಜ್ ಹಾಗೂ ಕನಕ ಯುವ ಪಡೆ ಉಪಾಧ್ಯಕ್ಷ ಕೆ. ಕೇಶವ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಜನ್ನಾಪುರದ ವಿವಿಧೆಡೆ ಸಿಮೆಂಟ್ ರಸ್ತೆ, ಬಾಕ್ಸ್ ಡ್ರೈನೇಜ್ ಕಾಮಗಾರಿಗಳಿಗೆ ಗುದ್ದಲಿ ಪೂಜೆ

ಭದ್ರಾವತಿ ನಗರಸಭೆ ವ್ಯಾಪ್ತಿಯ ಜನ್ನಾಪುರದ ವಿವಿಧೆಡೆ ಶಾಸಕ ಬಿ.ಕೆ ಸಂಗಮೇಶ್ವರ್ ಸಿಮೆಂಟ್ ರಸ್ತೆ ಮತ್ತು ಬಾಕ್ಸ್ ಡ್ರೈನೇಜ್ ಕಾಮಗಾರಿಗೆ ಗುರುವಾರ ಗುದ್ದಲಿ ಪೂಜೆ ನೆರವೇರಿಸಿದರು.
ಭದ್ರಾವತಿ, ಡಿ. ೩: ನಗರಸಭೆ ವ್ಯಾಪ್ತಿಯ ಜನ್ನಾಪುರದ ವಿವಿಧೆಡೆ ಶಾಸಕ ಬಿ.ಕೆ ಸಂಗಮೇಶ್ವರ್ ಸಿಮೆಂಟ್ ರಸ್ತೆ ಮತ್ತು ಬಾಕ್ಸ್ ಡ್ರೈನೇಜ್ ಕಾಮಗಾರಿಗೆ ಗುರುವಾರ ಗುದ್ದಲಿ ಪೂಜೆ ನೆರವೇರಿಸಿದರು.
      ೧.೭೦ ಕೋ.ರು ವೆಚ್ಚದಲ್ಲಿ ಜನ್ನಾಪುರ ಜಯಶ್ರೀ ವೃತ್ತದಿಂದ ಗಣಪತಿ ದೇವಸ್ಥಾನದವರೆಗೆ ಮತ್ತು ೧.೮೪ ಕೋ. ರು ವೆಚ್ಚದಲ್ಲಿ ಜನ್ನಾಪುರ ಮಹಾಗಣಪತಿ ದೇವಸ್ಥಾನದಿಂದ ಶ್ರೀ ಮಲ್ಲೇಶ್ವರ ಸಮುದಾಯ ಭವನ ಸಮೀಪದ ಶ್ರೀ ಈಶ್ವರ ದೇವಸ್ಥಾನದವರೆಗೆ ಸಿಮೆಂಟ್ ರಸ್ತೆ ನಿರ್ಮಾಣ, ೫೩ ಲಕ್ಷ ರು. ವೆಚ್ಚದಲ್ಲಿ ವೆಲೂರುಶೆಡ್‌ನಿಂದ ಜಿಂಕ್‌ಲೈನ್‌ವರೆಗೆ ಸಿವೆಂಟ್ ರಸ್ತೆ ಮತ್ತು ಬಾಕ್ಸ್ ಚರಂಡಿ ನಿರ್ಮಾಣ ಹಾಗು ೧೩ ಲಕ್ಷ ರು. ವೆಚ್ಚದಲ್ಲಿ ಜನ್ನಾಪುರ ಮಹಾಗಣಪತಿ ದೇವಸ್ಥಾನದಿಂದ ಬಸವೇಶ್ವರ ಶಾಲೆವರೆಗೆ ಸಿಮೆಂಟ್ ರಸ್ತೆ ನಿರ್ಮಾಣ ಹಾಗು ೬೮ ಲಕ್ಷ ರು. ವೆಚ್ಚದಲ್ಲಿ ಜನ್ನಾಪುರ ಕೆ.ಸಿ ಬ್ಲಾಕ್‌ನಿಂದ ಹಾಲಪ್ಪಶೆಡ್‌ವರೆಗೆ ಸಿಮೆಂಟ್ ರಸ್ತೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು.
     ಪೌರಾಯುಕ್ತ ಮನೋಹರ್, ಮುಖಂಡರಾದ ಬಾಲಕೃಷ್ಣ, ಲೋಕೇಶ್, ಚನ್ನಪ್ಪ, ಕಾಂತರಾಜ್, ಆರ್. ವೇಣುಗೋಪಾಲ್, ಆಟೊ ಶಂಕರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.