Wednesday, December 9, 2020

ಚೌಡೇಶ್ವರಿ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ


ಭದ್ರಾವತಿ ನಗರಸಭೆ ವ್ಯಾಪ್ತಿಯ ಸುರಗಿತೋಪು ಶ್ರೀ ಚೌಡೇಶ್ವರಿ ದೇವಸ್ಥಾನ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ತಿಕ ದೀಪೋತ್ಸವದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ. ಧರ್ಮಪ್ರಸಾದ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಭದ್ರಾವತಿ, ಡಿ. ೯: ನಗರಸಭೆ ವ್ಯಾಪ್ತಿಯ ಸುರಗಿತೋಪು ಶ್ರೀ ಚೌಡೇಶ್ವರಿ ದೇವಸ್ಥಾನ ಟ್ರಸ್ಟ್ ವತಿಯಿಂದ ಕಾರ್ತಿಕ ದೀಪೋತ್ಸವದ ಅಂಗವಾಗಿ ಕಲಾದುರ್ಗ ಹೋಮ ಹಮ್ಮಿಕೊಳ್ಳಲಾಗಿತ್ತು.
   ಅಮ್ಮನವರಿಗೆ ವಿಶೇಷ ಅಲಂಕಾರ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಹಾಗು ಮಧ್ಯಾಹ್ನ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಸಂಜೆ ದೀಪೋತ್ಸವ ನಡೆಯಿತು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ. ಧರ್ಮಪ್ರಸಾದ್, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಾಮನಿರ್ದೇಶಿತ ಸದಸ್ಯ ಮಂಗೋಟೆ ರುದ್ರೇಶ್, ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ಎಂ. ಪ್ರಭಾಕರ್, ಯುವ ಮೋರ್ಚಾ ಅಧ್ಯಕ್ಷ ವಿಜಯ್‌ಕುಮಾರ್, ಬಜರಂಗದಳ ಜಿಲ್ಲಾ ಸಂಚಾಲಕ ಸುನಿಲ್‌ಕುಮಾರ್ ಹಾಗು ದೇವಸ್ಥಾನ ಟ್ರಸ್ಟ್ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ನೂರಾರು ಭಕ್ತಾಧಿಗಳು ಪಾಲ್ಗೊಂಡಿದ್ದರು.

ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ

ಸಿ.ಎಸ್ ಷಡಾಕ್ಷರಿ ಹೆಸರಿನಲ್ಲೇ ಎರಡು ಬಣಗಳ ನಡುವೆ ಪೈಪೋಟಿ


ಭದ್ರಾವತಿ, ಡಿ. ೯: ಯಾವುದೇ ಚುನಾವಣೆಗೆ ಕಡಿಮೆ ಇಲ್ಲದಂತೆ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ ಸಹ ನಡೆಯುತ್ತಿದೆ. ನಾಮಪತ್ರ ಸಲ್ಲಿಕೆ ಹಾಗು ಪರಿಶೀಲನೆ ಬುಧವಾರ ನಡೆದಿದ್ದು, ಒಟ್ಟು ೪೦ ನಾಮಪತ್ರಗಳು ಸಲ್ಲಿಕೆಯಾಗಿವೆ.
    ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಹೆಸರಿನಲ್ಲಿ ಎರಡು ಬಣಗಳು ಪೈಪೋಟಿಗೆ ಮುಂದಾಗಿವೆ. ಸಿ.ಎಸ್ ಷಡಾಕ್ಷರಿ ಸಮಾನ ಮನಸ್ಕರ ಶಿಕ್ಷಕರ ಬಳಗ (ಸ್ಪಂದನ ತಂಡ) ಹಾಗು ಸಿ.ಎಸ್ ಷಡಾಕ್ಷರಿ ಅಭಿಮಾನಿ ಸಮಸ್ತ ಶಿಕ್ಷಕರ ಬಳಗ ಎರಡು ಬಣಗಳ ನಡುವೆ ತೀವ್ರ ಪೈಪೋಟಿ ಕಂಡು ಬರುತ್ತಿದೆ.
    ತಾಲೂಕು ಸಂಘದ ಒಟ್ಟು ೧೮ ಕಾರ್ಯಕಾರಿ ಸಮಿತಿ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ಡಿ.೧೫ರಂದು ನಡೆಯುತ್ತಿದ್ದು, ಈ ಪೈಕಿ ೬ ಸ್ಥಾನಗಳನ್ನು ಮಹಿಳಾ ಶಿಕ್ಷಕಿಯರಿಗೆ ಮೀಸಲಿಡಲಾಗಿದೆ. ಸಿ.ಎಸ್ ಷಡಾಕ್ಷರಿ ಸಮಾನ ಮನಸ್ಕರ ಶಿಕ್ಷಕರ ಬಳಗದಿಂದ ಯು. ಮಹಾದೇವಪ್ಪ, ಎಂ.ಎಸ್ ಮಲ್ಲಿಕಾರ್ಜುನ, ಬಸವಂತರಾವ್ ದಾಳೆ, ಜಬ್ಬಾರ್‌ಖಾನ್, ಮುಕ್ತಿಯಾರ ಅಹಮದ್, ರಾಜಾನಾಯಕ್, ಜಿ.ಎಚ್ ವೇಣುಗೋಪಾಲ್, ಎಂ.ಆರ್ ರೇವಣಪ್ಪ, ಎಸ್.ಎನ್ ರವಿ, ಎ.ಎಸ್ ಜೈಕುಮಾರ್, ಕೆ.ವಿ ತಿಪ್ಪೇಸ್ವಾಮಿ, ಎಚ್.ಎಂ ಜಗದೀಶ್, ಮರ್ಸಿಲಿನ್ ಲೀನಾ ಡಿಮೆಲ್ಲೋ, ಫರೀದುನ್ನೀಸಾ, ಎಂ. ರುದ್ರಮ್ಮ, ಎನ್. ಜ್ಯೋತಿ, ಎಚ್.ಎಸ್ ಸುಮಾ ಮತ್ತು ಜಿ.ಎಸ್ ಜ್ಯೋತಿ ಕಣದಲ್ಲಿದ್ದಾರೆ.
    ಸಿ.ಎಸ್ ಷಡಾಕ್ಷರಿ ಅಭಿಮಾನಿ ಸಮಸ್ತ ಶಿಕ್ಷಕರ ಬಳಗದಿಂದ ಎಂ.ಎಸ್ ಬಸವರಾಜ್, ಜೆ. ಮೋಹಿದ್ದೀನ್ ಸಾಬ್, ಕೆ.ಆರ್ ಅಶೋಕ್, ಎಸ್.ಕೆ ಮೋಹನ್, ವೈ.ಎನ್ ಶ್ರೀಧರಗೌಡ, ಟಿ. ಪೃಥ್ವಿರಾಜ್, ಪಿ. ಭರತ್‌ಕುಮಾರ್, ಎಂ.ಸಿ ಆನಂದ್, ಎಸ್. ಹನುಮಂತಪ್ಪ, ಕೆ.ಎನ್ ರವಿಕುಮಾರ್, ಎಸ್.ಪಿ ರಾಜು, ಕೆ. ಬದಿಯನಾಯ್ಕ, ಕೆ.ಎಂ ಶಾರದಮ್ಮ, ಸುಮತಿ ಕಾರಂತ್, ಎಸ್. ಚೈತ್ರ, ಎಚ್.ಎಸ್ ಮಾಯಮ್ಮ ಅಸ್ಮಾ ಬೇಗಂ ಮತ್ತು ಎಸ್.ಎಸ್ ಸುರ್ಮಲ ಕಣದಲ್ಲಿದ್ದಾರೆ.
    ಈ ಬಣದ ಎಂ.ಎಸ್ ಬಸವರಾಜ್‌ರವರು ೩ ಬಾರಿ ಆಯ್ಕೆಯಾಗಿ ಸಂಘದ ಅಧ್ಯಕ್ಷರಾಗಿದ್ದು, ೪ನೇ ಬಾರಿಗೆ ಸ್ಪರ್ಧಿಸಿದ್ದಾರೆ.  ಉಳಿದಂತೆ ೪ ಮಂದಿ ಸ್ವತಂತ್ರ ಅಭ್ಯರ್ಥಿಗಳಾಗಿ ಕಣದಲ್ಲಿದ್ದು, ನಿವೃತ್ತ ಪ್ರಾಂಶುಪಾಲ ಗೋವಿಂದರಾಜು ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಸಂಘದ ಚುನಾವಣೆ ಸುಮಾರು ೧ ತಿಂಗಳ ಹಿಂದೆಯೇ ಘೋಷಿಸಲಾಗಿತ್ತು. ಅದರೆ ಚುನಾವಣಾ ಸಂಬಂಧ ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆಯಲ್ಲಿದ್ದ ಕಾರಣ ತಡೆ ನೀಡಲಾಗಿತ್ತು.

ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆಗೆ ಶಶಿಕುಮಾರ್ ಎಸ್ ಗೌಡ ಸ್ಪರ್ಧೆ

ಶಶಿಕುಮಾರ್ ಎಸ್ ಗೌಡ
ಭದ್ರಾವತಿ, ಡಿ. ೯: ೩ ಬಾರಿ ಲೋಕಸಭಾ ಚುನಾವಣೆ ಹಾಗು ೧ ಬಾರಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಗಮನ ಸೆಳೆದಿದ್ದ ನಗರದ ನಿವಾಸಿ ಜನತಾದಳ(ಸಂಯುಕ್ತ) ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್. ಗೌಡ ಇದೀಗ ಒಕ್ಕಲಿಗರ ನಿರ್ದೇಶಕರ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ೩ ಮತ್ತು ೪ನೇ ಸ್ಥಾನ ಕಾಯ್ದುಕೊಂಡಿದ್ದರು. ಹಲವು ವಿಭಿನ್ನ ಸಾಮಾಜಿಕ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಒಕ್ಕಲಿಗ ಸಮಾಜದ ಮುಖಂಡರಾಗಿ ಶಶಿಕುಮಾರ್ ನಿರ್ದೇಶಕರ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಡಿ.೧೦ರಂದು ಹುತ್ತಾಕಾಲೋನಿಯಲ್ಲಿರುವ ಒಕ್ಕಲಿಗರ ಸಂಘದ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.



Tuesday, December 8, 2020

ಶ್ರೀ ಕಾಲಭೈರವೇಶ್ವರಸ್ವಾಮಿ ಜಯಂತಿ, ಕಾರ್ತಿಕ ದೀಪೋತ್ಸವ

ಭದ್ರಾವತಿ ತಾಲೂಕಿನ ಕಂಬದಾಳು ಹೊಸೂರು ಗ್ರಾಮದಲ್ಲಿ ಜರುಗಿದ ಶ್ರೀ ಕಾಲಭೈರವೇಶ್ವರಸ್ವಾಮಿ ಜಯಂತಿ ಮತ್ತು ಕಾರ್ತಿಕ ದೀಪೋತ್ಸವದಲ್ಲಿ ಸ್ನೇಹ ಜೀವಿ ಬಳಗದ ಉಮೇಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಭದ್ರಾವತಿ, ಡಿ. ೯: ತಾಲೂಕಿನ ಕಂಬದಾಳು ಹೊಸೂರು ಗ್ರಾಮದಲ್ಲಿ ಶ್ರೀ ಕಾಲಭೈರವೇಶ್ವರಸ್ವಾಮಿ ಜಯಂತಿ ಮತ್ತು ಕಾರ್ತಿಕ ದೀಪೋತ್ಸವ ಅದ್ದೂರಿಯಿಂದ ಜರುಗಿತು.
   ಸ್ವಾಮಿಗೆ ವಿಶೇಷ ಅಲಂಕಾರ, ವಿಶೇಷ ಪೂಜೆ ಕೈಗೊಳ್ಳಲಾಯಿತು. ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಜರುಗಿದವು. ಸ್ನೇಹಜೀವಿ ಉಮೇಶ್ ಬಳಗದಿಂದ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಸ್ನೇಹಜೀವಿ ಬಳಗದ ಸತೀಶ್, ಸುತ್ತಮುತ್ತಲಿನ ಗ್ರಾಮಸ್ಥರು ಸೇರಿದಂತೆ ಭಕ್ತಾಧಿಗಳು ಪಾಲ್ಗೊಂಡಿದ್ದರು.

ಡಿ.೧೦ರಂದು ವಿಶ್ವ ಮಾನವ ಹಕ್ಕುಗಳ ದಿನ


ಭದ್ರಾವತಿ, ಡಿ. ೯: ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಡಿ.೧೦ರಂದು ಸಂಜೆ ೬ ಗಂಟೆಗೆ ಬಿ.ಎಚ್ ರಸ್ತೆ ಪದ್ಮ ನಿಲಯ ಹೋಟೆಲ್ ಸಭಾಂಗಣದಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
    ಮಾಜಿ ಶಾಸಕ ವೈ.ಎಸ್.ವಿ ದತ್ತಾ ಉದ್ಘಾಟಿಸಲಿದ್ದು, ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ಡಾ. ಹರಿಣಾಕ್ಷಿ ಉಪನ್ಯಾಸ ನೀಡಲಿದ್ದಾರೆ. ತಹಸೀಲ್ದಾರ್ ಜೆ. ಸಂತೋಷ್‌ಕುಮಾರ್, ಪೊಲೀಸ್ ಉಪಾಧೀಕ್ಷಕ ಕೃಷ್ಣಮೂರ್ತಿ, ನಗರಸಭೆ ಪೌರಾಯುಕ್ತ ಮನೋಹರ್, ಶಾರದಾ ಅಪ್ಪಾಜಿ, ಸರೋಜಮ್ಮ ಬಿ. ಶಂಕರಪ್ಪ ಮತ್ತು ನಿತಿಲ್ ಎಂ. ಶ್ರೀನಿವಾಸನ್, ನಗರಸಭೆ ಸದಸ್ಯರಾದ ಆರ್. ಕರುಣಾಮೂರ್ತಿ, ಎಂ.ಎ ಅಜಿತ್, ಮಾಜಿ ಸದಸ್ಯ ಕೆ. ಕರಿಯಪ್ಪ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎನ್. ಕೃಷ್ಣಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. ಹಿರಿಯ ಕಾರ್ಮಿಕ ಮುಖಂಡ ಡಿ.ಸಿ ಮಾಯಣ್ಣ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಕೋರಿದ್ದಾರೆ.


ಗ್ರಾಮ ಪಂಚಾಯಿತಿ ಚುನಾವಣೆ : ಜೆಡಿಎಸ್ ಪಕ್ಷದ ಮೇಲ್ವಿಚಾರಕರಾಗಿ ಶಾರದ ಪೂರ‍್ಯಾನಾಯ್ಕ

ಮಾಜಿ ಶಾಸಕಿ ಶಾರದ ಪೂರ‍್ಯಾನಾಯ್ಕ

ಭದ್ರಾವತಿ, ಡಿ. ೮: ತಾಲ್ಲೂಕಿನಲ್ಲಿ ಡಿ.೨೨ ರಂದು ಮೊದಲ ಹಂತದಲ್ಲಿ ೩೫ ಗ್ರಾಮ ಪಂಚಾಯಿತಿಗಳಿಗೆ ನಡೆಯುತ್ತಿರುವ ಚುನಾವಣೆಗೆ ಜಾತ್ಯತೀತ ಜನತಾದಳ ಮೇಲ್ವಿಚಾರಕರಾಗಿ ಮಾಜಿ ಶಾಸಕಿ ಶಾರದಾ ಪೂರ‍್ಯಾನಾಯ್ಕ್ ರವರನ್ನು ನೇಮಕಗೊಳಿಸಿ ಪಕ್ಷದ ರಾಜ್ಯಾಧ್ಯಕ್ಷ ಎಚ್.ಕೆ ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ. 
     ಮಾಜಿ ಶಾಸಕ ಎಂ ಜೆ ಅಪ್ಪಾಜಿ ನಿಧನ ಹೊಂದಿದ ನಂತರ ಕ್ಷೇತ್ರದಲ್ಲಿ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದ್ದು, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಂ.ಜೆ ಅಪ್ಪಾಜಿ ಹೆಚ್ಚಿನ ಹಿಡಿತ ಹೊಂದಿದ್ದರು. ಈ ಹಿನ್ನಲೆಯಲ್ಲಿ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಎರಡರಲ್ಲೂ ಜೆಡಿಎಸ್ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿತ್ತು. ಇದೀಗ ಕ್ಷೇತ್ರದಲ್ಲಿ ಇದುವರೆಗೂ ಅಪ್ಪಾಜಿಗೆ ಪರ್ಯಾಯ ನಾಯಕನನ್ನು ಹುಡುಕಲು ಸಾಧ್ಯವಾಗಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಶಾರದಾ ಪೂರ‍್ಯಾನಾಯ್ಕ್ ರವರಿಗೆ ಜವಾಬ್ದಾರಿ ನೀಡಲಾಗಿದೆ. ಇವರು ಶಿವಮೊಗ್ಗ ಗ್ರಾಮಾಂತರದಲ್ಲಿ ಹೆಚ್ಚಿನ ಪ್ರಭಾವ ಹೊಂದಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆ ಮುಗಿದ ತಕ್ಷಣ ತಾಲೂಕು ಪಂಚಾಯಿತಿ ಚುನಾವಣೆ ಸಹ ಎದುರಾಗಿದೆ.



ಮದ್ಯದಂಗಡಿ ತೆರವಿಗೆ ಆಗ್ರಹಿಸಿ ಪ್ರತಿಭಟನೆ : ಗ್ರಾ. ಪಂ. ಚುನಾವಣೆ ನಂತರ ಕ್ರಮ ಕೈಗೊಳ್ಳುವ ಭರವಸೆ

ಭದ್ರಾವತಿ ನಗರಸಭೆ ವ್ಯಾಪ್ತಿಯ ಜನ್ನಾಪುರ ಶ್ರೀ ಅಂತರಘಟ್ಟಮ್ಮ ದೇವಸ್ಥಾನದ ಮುಂಭಾಗದಲ್ಲಿರುವ ಶ್ರೀ ಅನ್ನಪೂರ್ಣೇಶ್ವರಿ ಮದ್ಯದಂಗಡಿ ತೆರವುಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ಜನ ಸೈನ್ಯ ಹಾಗು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
   ಭದ್ರಾವತಿ, ಡಿ. ೮: ನಗರಸಭೆ ವ್ಯಾಪ್ತಿಯ ಜನ್ನಾಪುರ ಶ್ರೀ ಅಂತರಘಟ್ಟಮ್ಮ ದೇವಸ್ಥಾನದ ಮುಂಭಾಗದಲ್ಲಿರುವ ಶ್ರೀ ಅನ್ನಪೂರ್ಣೇಶ್ವರಿ ಮದ್ಯದಂಗಡಿ ತೆರವುಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ಜನ ಸೈನ್ಯ ಹಾಗು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
    ಈ ಮದ್ಯದಂಗಡಿಯಿಂದ ರಸ್ತೆಯಲ್ಲಿ ಸಂಚರಿಸುವ ಪಾದಚಾರಿಗಳಿಗೆ, ಮಹಿಳೆಯರಿಗೆ, ದೇವಸ್ಥಾನಕ್ಕೆ ಬರುವ ಭಕ್ತಾಧಿಗಳಿಗೆ, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ, ಸಮೀಪದ ನಿವಾಸಿಗಳಿಗೆ ತೊಂದರೆಯಾಗುತ್ತಿದೆ. ಈಗಾಗಲೇ ಈ ಸಂಬಂಧ ತಾಲೂಕು ಆಡಳಿತ, ಅಬಕಾರಿ ಮತ್ತು ಪೊಲೀಸ್ ಇಲಾಖೆ ಮತ್ತು ನಗರಸಭೆ ಆಡಳಿತಕ್ಕೆ ಮನವಿ ಸಲ್ಲಿಸಲಾಗಿದೆ. ಆದರೆ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸುವ ಮೂಲಕ ತಕ್ಷಣ ಮದ್ಯದಂಗಡಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗಯಿತು.
     ಸ್ಥಳಕ್ಕೆ ಆಗಮಿಸಿದ ಅಬಕಾರಿ ನಿರೀಕ್ಷಕ ಸುನಿಲ್ ಕಲ್ಲೂರು ಪ್ರತಿಭಟನಾಕಾರರ ದೂರುಗಳನ್ನು ಆಲಿಸಿ ಮದ್ಯದಂಗಡಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮೇಲಾಧಿಕಾರಿಗಳಿಗೆ ವರದಿಸಲ್ಲಿಸುವುದಾಗಿ ಭರವಸೆ ನೀಡಿದರು. ಆದರೆ ಪ್ರತಿಭಟನಾಕಾರರು ತಕ್ಷಣ ಕ್ರಮ ಕೈಗೊಳ್ಳುವಂತೆ ಬಿಗಿಪಟ್ಟು ಹಿಡಿದರು. ಕೊನೆಯಲ್ಲಿ ತಹಸೀಲ್ದಾರ್‌ರವರನ್ನು ಪ್ರತಿಭಟನಾಕಾರರು ಮೊಬೈಲ್ ಮೂಲಕ ಸಂಪರ್ಕಿಸಿದ್ದು, ಗ್ರಾ.ಪಂ. ಚುನಾವಣೆ ಮುಕ್ತಾಯಗೊಂಡ ನಂತರ ಸಭೆ ಕರೆದು ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಪ್ರತಿಭಟನೆ ಅಂತ್ಯಗೊಂಡಿತು.
    ನಗರಸಭೆ ಸದಸ್ಯ ಎಂ.ಎ ಅಜಿತ್ ನೇತೃತ್ವ ವಹಿಸಿದ್ದರು. ಕರ್ನಾಟಕ ಜನ ಸೈನ್ಯ ಜಿಲ್ಲಾಧ್ಯಕ್ಷ ಕೆ. ಮಂಜುನಾಥ್, ಅನಂತರಾಮು, ಅನಿಲ್, ಸಂತೋಷ್, ಶ್ರೀನಿವಾಸ್, ಪರಮೇಶ್, ದೀಪು, ದೀಕ್ಷಿತ್, ಪ್ರಶಾಂತ್, ಹರೀಶ್, ಜನ ಸೈನ್ಯ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶಾರದಮ್ಮ, ಅನುರಾಧ, ವಿನೂತ, ಸ್ವಾತಿ, ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕ ಜಿಲ್ಲಾಧ್ಯಕ್ಷೆ ಜ್ಯೋತಿ ಸೋಮಶೇಖರ್, ಅನಿತಾ, ಶಾರದ, ಮಹೇಶ್ವರಿ, ಪದ್ಮಮ್ಮ, ಸುಮಿತ್ರಾ, ಹೇಮಾ, ಸೌಮ್ಯ, ಶಾರದಕುಮಾರಿ, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು, ನಗರಸಭಾ ಸದಸ್ಯರಾದ ಬದರಿನಾರಾಯಣ, ಗುಣಶೇಖರ್, ಮಾಜಿ ಸದಸ್ಯ ಮೈಲಾರಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.