ಅಧ್ಯಕ್ಷರಾಗಿ ಸೂಡಾ ಸದಸ್ಯ, ಬಿಜೆಪಿ ಮುಖಂಡ ಬಿ.ಜೆ ರಾಮಲಿಂಗಯ್ಯ
ಭದ್ರಾವತಿ ನ್ಯೂಟೌನ್ ವಿಐಎಸ್ಎಲ್ ನಿವೃತ್ತ ನೌಕರರ ಕಲ್ಯಾಣ ಕೇಂದ್ರಕ್ಕೆ ನೂತನವಾಗಿ ಆಯ್ಕೆಯಾಗಿರುವ ೧೫ ಮಂದಿ ಪದಾಧಿಕಾರಿಗಳು.
ಭದ್ರಾವತಿ, ಡಿ. ೨೮: ನಗರದ ನ್ಯೂಟೌನ್ ವಿಐಎಸ್ಎಲ್ ನಿವೃತ್ತ ನೌಕರರ ಕಲ್ಯಾಣ ಕೇಂದ್ರಕ್ಕೆ ೧೫ ಮಂದಿ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕಲ್ಯಾಣ ಕೇಂದ್ರದ ಸರ್ವ ಸದಸ್ಯರ ಸಭೆಯಲ್ಲಿ ಚುನಾವಣಾಧಿಕಾರಿಯಾದ ಹಿರಿಯ ನ್ಯಾಯವಾದಿ ಕೆ.ಎಂ ಸತೀಶ್ ೧೫ ಮಂದಿ ನೂತನ ಪದಾಧಿಕಾರಿಗಳ ಹೆಸರನ್ನು ಘೋಷಿಸಿದರು. ಅಧ್ಯಕ್ಷರಾಗಿ ಬಿ.ಜಿ ರಾಮಲಿಂಗಯ್ಯ, ಉಪಾಧ್ಯಕ್ಷರಾಗಿ ಎಸ್. ಅಡವೀಶಯ್ಯ, ಪ್ರಧಾನ ಕಾರ್ಯದರ್ಶಿಯಾಗಿ ಬಿ.ಆರ್ ನಾಗರಾಜ್, ಕಾರ್ಯದರ್ಶಿಗಳಾಗಿ ಎಸ್.ಎಚ್ ಹನುಮಂತರಾವ್ ಮತ್ತು ಡಿ. ನಂಜಪ್ಪ ಹಾಗೂ ಖಜಾಂಚಿಯಾಗಿ ಎಲ್. ಬಸವರಾಜಪ್ಪ, ಗೌರವಾಧ್ಯಕ್ಷರಾಗಿ ಜೆ.ಎಸ್ ನಾಗಭೂಷಣ್ ಹಾಗು ಸದಸ್ಯರಾಗಿ ನರಸಿಂಹಯ್ಯ ಎಚ್. ರಾಮಪ್ಪ, ಕೆಂಪಯ್ಯ, ಜಿ. ಶಂಕರ್, ಎಸ್.ಎಸ್ ಭೈರಪ್ಪ, ಗಂಗಾಧರ, ಮಹೇಶ್ವರಪ್ಪ ಮತ್ತು ಎಸ್. ನರಸಿಂಹಚಾರ್ ಆಯ್ಕೆಯಾಗಿದ್ದಾರೆ.