Tuesday, March 30, 2021

ಮಾ.೩೧ರಂದು ವಿಶ್ವ ರಂಗಭೂಮಿ ದಿನಾಚರಣೆ

ಭದ್ರಾವತಿ, ಮಾ. ೩೦: ಹವ್ಯಾಸಿ ರಂಗ ತಂಡಗಳ ಒಕ್ಕೂಟ ಪ್ರತಿನಿಧಿಸುವ ರಂಗ ಕಲಾವಿದರು ಸಂಘಟನೆ ವತಿಯಿಂದ ಮಾ.೩೧ರಂದು ಸಂಜೆ ೫.೩೦ಕ್ಕೆ ಸಿದ್ದಾರೂಢನಗರದ ಧರ್ಮಶ್ರೀ ಸಭಾಭವನದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
     ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಿವಮೊಗ್ಗ ಸಹಾಯಕ ನಿರ್ದೇಶಕ ಎಚ್. ಉಮೇಶ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಉಪನ್ಯಾಸಕ ಡಾ. ಸಾಸ್ವೆಹಳ್ಳಿ ಸತೀಶ್, ವಿಕಸಂ ಅಧ್ಯಕ್ಷ ಲಕ್ಷ್ಮೀನಾರಾಯಣಪ್ಪ, ಲಲಿತ ಕಲಾ ಸಂಘದ ಅಧ್ಯಕ್ಷ ಎಚ್.ಬಿ ಉಮೇಶ್‌ರಾವ್, ಮಿತ್ರಕಲಾ ಮಂಡಳಿ ಅಧ್ಯಕ್ಷ ಎ. ಮೈಲಾರಪ್ಪ, ನವೋದಯ ಕಲಾಸಂಘದ ಅಧ್ಯಕ್ಷೆ ಡಾ. ಜಿ.ಎಂ ನಟರಾಜ್, ಶಾಂತಲಾ ಕಲಾವೇದಿಕೆ ಅಧ್ಯಕ್ಷೆ ಯಶೋಧ ವೀರಭದ್ರಪ್ಪ, ಅಪರಂಜಿ ಅಭಿನಯ ಶಾಲೆ ಸಂಸ್ಥಾಪಕ ಅಪರಂಜಿ ಶಿವರಾಜ್, ಹಿರಿಯ ರಂಗ ಕಲಾವಿದ ಕೆ.ಬಿ ಕಪನಿಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.

ಮಾ.೩೧ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಭದ್ರಾವತಿ, ಮಾ. ೩೦: ತಾಲೂಕು ಮಹಿಳಾ ಒಕ್ಕಲಿಗರ ವೇದಿಕೆ ವತಿಯಿಂದ ಮಾ.೩೧ರ ಬುಧವಾರ ಅಪ್ಪರ್‌ಹುತ್ತಾ ಶ್ರೀ ಕೆಂಪೇಗೌಡ ಸಮುದಾಯ ಭವನದಲ್ಲಿ ಬೆಳಿಗ್ಗೆ ೧೧ ಗಂಟೆಗೆ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
     ಶ್ರೀ ಕ್ಷೇತ್ರ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಪ್ರಸನ್ನನಾಥ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದು, ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಕೆ.ಬಿ ಪವಿತ್ರ ರಾಮಯ್ಯ ಉದ್ಘಾಟಿಸಲಿದ್ದಾರೆ.
    ವೇದಿಕೆ ಅಧ್ಯಕ್ಷೆ ಅನ್ನಪೂರ್ಣ ಸತೀಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಗೌರವಾಧ್ಯಕ್ಷೆ ಶಾರದ ಅಪ್ಪಾಜಿ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದು, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಎಸ್. ಕುಮಾರ್, ಕೆಎಸ್‌ಆರ್‌ಟಿಸಿ ಹಿರಿಯ ಘಟಕ ವ್ಯವಸ್ಥಾಪಕಿ ಅಂಬಿಕ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ಸ್ನೇಹ ಜೀವಿ ಬಳಗದ ಪೊಲೀಸ್ ಉಮೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. ಸಮಾಜ ಸೇವಕಿ, ಶಿಕ್ಷಕಿ ಅನಿತ ಮೇರಿ ಹಾಗು ಸುಧಾರವರಿಗೆ ಸನ್ಮಾನ ನಡೆಯಲಿದೆ.

ಮಹಿಳೆಯರು ಗರ್ಭಕೋಶದ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿವಹಿಸಿ : ಡಾ. ರಕ್ಷಾ ಯು. ರಾವ್

ಭದ್ರಾವತಿ ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ . ಸಮಾಜದ ಹಿರಿಯ ಸದಸ್ಯರಾದ ವಸುಧಾ ಮುಕುಂದ್, ರಾಧ ಕೆ. ಭಟ್, ಪುಷ್ಪ ಕೃಷ್ಣಮೂರ್ತಿ ಸೇರಿದಂತೆ ಇನ್ನಿತರರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
  ಭದ್ರಾವತಿ, ಮಾ. ೩೦: ಮಹಿಳೆಯರು ಗರ್ಭಕೋಶದ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿವಹಿಸಬೇಕೆಂದು ಶಿವಮೊಗ್ಗ ಉಷಾ ನರ್ಸಿಂಗ್ ಹೋಂ ತಜ್ಞೆ ಡಾ. ರಕ್ಷಾ ಯು. ರಾವ್ ತಿಳಿಸಿದರು.
    ಅವರು ಮಂಗಳವಾರ ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು.
   ಮಹಿಳೆಯರಲ್ಲಿ ಗರ್ಭಕೋಶದ ಸಮಸ್ಯೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಇದರಿಂದಾಗಿ ಆರೋಗ್ಯದ ಮೇಲೆ ಹಲವು ರೀತಿಯ ದುಷ್ಪರಿಣಾಮಗಳು ಉಂಟಾಗುತ್ತಿವೆ. ಈ ಹಿನ್ನಲೆಯಲ್ಲಿ ಗರ್ಭಕೋಶದ ಆರೋಗ್ಯದ ಬಗ್ಗೆ ಹೆಚ್ಚಿನ ತಿಳುವಳಿಕೆ ಹೊಂದುವ ಜೊತೆಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆಯುವುದು ಅಗತ್ಯ ಎಂದರು.
   ಕಾರ್ಯಕ್ರಮವನ್ನು ನಗರಸಭೆ ಪೌರಾಯುಕ್ತ ಮನೋಹರ್ ಉದ್ಘಾಟಿಸಿದರು. ಸಮಾಜದ ಹಿರಿಯ ಸದಸ್ಯರಾದ ವಸುಧಾ ಮುಕುಂದ್, ರಾಧ ಕೆ. ಭಟ್, ಪುಷ್ಪ ಕೃಷ್ಣಮೂರ್ತಿ ಸೇರಿದಂತೆ ಇನ್ನಿತರರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
   ಸಮಾಜದ ಅಧ್ಯಕ್ಷೆ ಹೇಮಾವತಿ ವಿಶ್ವನಾಥ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಶೋಭ ಗಂಗರಾಜ್, ಖಜಾಂಚಿ ಜಯಂತಿ ಶೇಟ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಕಮಲಕುಮಾರಿ, ಡಾ. ವೀಣಾ ಎಸ್ ಭಟ್, ಅನ್ನಪೂರ್ಣಸತೀಶ್, ಇಂದಿರಾ ರಮೇಶ್, ರೂಪರಾವ್, ಯಶೋಧ ವೀರಭದ್ರಪ್ಪ, ಚಂದ್ರಕಲಾ ವರದರಾಜ್, ಶಕುಂತಲ ರವಿಕುಮಾರ್, ಭಾಗ್ಯ ನಿಜಗುಣ, ಶಾರದ ಶ್ರೀನಿವಾಸ್, ಕಮಲರಾಯ್ಕರ್ ಸೇರಿದಂತೆ ಬಹುತೇಕ ಸದಸ್ಯರು ಪಾಲ್ಗೊಂಡಿದ್ದರು.

ಚಿತ್ರ: ಡಿ೩೦-ಬಿಡಿವಿಟಿ೨



ಚಂದ್ರಶೇಖರ್ ತೋರಣ್ಣಘಟ್ಟರವರ ಹೋರಾಟದ ಗುಣಗಳು ಇತರರಿಗೆ ಸ್ಪೂರ್ತಿದಾಯಕ : ಕೈದಾಳ್ ಕೃಷ್ಣಮೂರ್ತಿ


ಭದ್ರಾವತಿ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಹೋರಾಟಗಾರ ಚಂದ್ರಶೇಖರ್ ತೋರಣಘಟ್ಟರಿಗೆ ಚಂದ್ರ ನಮನ ಹಾಗು ಚಂದ್ರಶಿಕಾರಿ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಕೈದಾಳ್ ಕೃಷ್ಣಮೂರ್ತಿರವರ ಚಂದ್ರಶಿಕಾರಿ ಪುಸ್ತಕ ಬಿಡುಗಡೆಗೊಳಿಸಲಾಯಿತು.
   ಭದ್ರಾವತಿ, ಮಾ. ೩೦: ಚಂದ್ರಶೇಖರ್ ತೋರಣಘಟ್ಟರವರು ಸಮಾಜಮುಖಿ ಚಿಂತನೆಗಳೊಂದಿಗೆ ಹಲವಾರು ಚಳುವಳಿಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ಇತರರಿಗೆ ಸ್ಫೂರ್ತಿದಾಯಕರಾಗಿದ್ದರು ಎಂದು ಚಂದ್ರಶಿಕಾರಿ ಪುಸ್ತಕದ ಸಂಪಾದಕ ಕೈದಾಳ್ ಕೃಷ್ಣಮೂರ್ತಿ ತಿಳಿಸಿದರು.
   ಅವರು ಮಂಗಳವಾರ ನಗರದ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಹೋರಾಟಗಾರ ಚಂದ್ರಶೇಖರ್ ತೋರಣಘಟ್ಟರಿಗೆ ಚಂದ್ರ ನಮನ ಹಾಗು ಚಂದ್ರಶಿಕಾರಿ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
   ಹೋರಾಟಗಾರರಲ್ಲಿ ಸದಾಕಾಲ ಸಮಾಜಮುಖಿ ಚಿಂತನೆಗಳಿರಬೇಕು. ಎಲ್ಲರನ್ನು ಸಂಘಟಿಸುವ ಮನೋಭಾವವಿರಬೇಕು. ಯಾವುದೇ ರೀತಿಯ ಹೋರಾಟಕ್ಕೂ ಸಿದ್ದರಿರಬೇಕು. ಆಗ ಮಾತ್ರ ಹೋರಾಟಗಳು ಅವರಿಗೆ ಯಶಸ್ವಿ ತಂದುಕೊಡುತ್ತವೆ. ಈ ನಿಟ್ಟಿನಲ್ಲಿ ತೋರಣಘಟ್ಟರವರು ಎಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆ ಎಂದರು.
   ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಡಿ.ಸಿ ಮಾಯಣ್ಣ, ಪ್ರಮುಖರಾದ ಚಿತ್ರದುರ್ಗದ ಉಪನ್ಯಾಸಕಿ ಸಿ.ವೈ ಯಶೋಧ, ಮೈಸೂರು ಕಂದೇಗಾಲ ಶಿವಣ್ಣ, ಸಾಮಾಜಿಕ ಹೋರಾಟಗಾರ ದೇವೇಂದ್ರಪ್ಪ, ಡಿಎಸ್‌ಎಸ್ ರಾಜ್ಯ ಖಜಾಂಚಿ ಸತ್ಯ, ಪ್ರಜಾಪ್ರತಿನಿಧಿ ಸುರೇಶ್ ಸೇರಿದಂತೆ ಇನ್ನಿತರರು ಚಳುವಳಿಗಳಲ್ಲಿ ತೋರಣಘಟ್ಟರವರೊಂದಿಗಿನ ತಮ್ಮ ಅನುಭವಗಳನ್ನು ಹಂಚಿಕೊಂಡರು.
   ಜಿ. ರಾಜು, ಕಾಳುವರಕ್, ಶ್ರೀನಿವಾಸ್, ಡಿ. ರಾಜು, ಡಾ. ಮಂಜುನಾಥ್, ಚನ್ನಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಕಾಳಿಂಗನಹಳ್ಳಿ ಎಂ. ಶಂಕ್ರಣ್ಣ ಅಧ್ಯಕ್ಷತೆ ವಹಿಸಿದ್ದರು.


ಭದ್ರಾವತಿ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಹೋರಾಟಗಾರ ಚಂದ್ರಶೇಖರ್ ತೋರಣಘಟ್ಟರಿಗೆ ಚಂದ್ರ ನಮನ ಹಾಗು ಚಂದ್ರಶಿಕಾರಿ ಪುಸ್ತಕ ಬಿಡುಗಡೆ ಸಮಾರಂಭವನ್ನು ಚಿತ್ರದುರ್ಗದ ಉಪನ್ಯಾಸಕಿ ಸಿ.ವೈ ಯಶೋಧ, ಮೈಸೂರು ಕಂದೇಗಾಲ ಶಿವಣ್ಣ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.

Monday, March 29, 2021

ಮಾ.೩೦ರಂದು ಕೆಂಪು ನಮನ, ಪುಸ್ತಕ ಬಿಡುಗಡೆ

ಭದ್ರಾವತಿ, ಮಾ. ೩೦: ಹೋರಾಟಗಾರ ಚಂದ್ರಶೇಖರ್ ತೋರಣಘಟ್ಟರಿಗೆ ಕೆಂಪು ನಮನ ಹಾಗು ಚಂದ್ರಶಿಕಾರಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ಮಾ.೩೦ರಂದು ಬೆಳಿಗ್ಗೆ ೧೦.೩೦ಕ್ಕೆ ನ್ಯೂಟೌನ್ ಲಯನ್ಸ್‌ಕ್ಲಬ್ ಸಭಾಂಗಣದಲ್ಲಿ ನಡೆಯಲಿದೆ.
    ಪ್ರಮುಖರಾದ ಚಿತ್ರದುರ್ಗದ ಉಪನ್ಯಾಸಕಿ ಸಿ.ವೈ ಯಶೋಧ, ಮೈಸೂರು ಕಂದೇಗಾಲ ಶಿವಣ್ಣ, ಸಾಮಾಜಿಕ ಹೋರಾಟಗಾರ ದೇವೇಂದ್ರಪ್ಪ, ಡಿಎಸ್‌ಎಸ್ ರಾಜ್ಯ ಖಜಾಂಚಿ ಸತ್ಯ, ಜಿಲ್ಲಾ ಸಂಘಟನಾ ಸಂಚಾಲಕ ರಾಜ್‌ಕುಮಾರ್, ಕೈದಾಳ್ ಕೃಷ್ಣಮೂರ್ತಿ, ಸುರೇಶ್, ಜಿ. ರಾಜು, ಕಾಳುವರಕ್, ಕೈದಾಳ್ ಕೃಷ್ಣಮೂರ್ತಿ, ಡಿ. ರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
   ಕಾಳಿಂಗನಹಳ್ಳಿ ಎಂ. ಶಂಕ್ರಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.

ಮಾ.೩೦ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಭದ್ರಾವತಿ, ಮಾ. ೨೯: ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಮಾ.೩೦ರಂದು ಮಧ್ಯಾಹ್ನ ೩.೩೦ಕ್ಕೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
ನಗರಸಭೆ ಪೌರಾಯುಕ್ತ ಮನೋಹರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಮಾಜದ ಅಧ್ಯಕ್ಷೆ ಹೇಮಾವತಿ ವಿಶ್ವನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ. ಶಿವಮೊಗ್ಗ ಉಷಾ ನರ್ಸಿಂಗ್ ಹೋಂ ತಜ್ಞೆ ರಕ್ಷಾ ಯು. ರಾವ್ ಉಪನ್ಯಾಸ ನೀಡಲಿದ್ದು, ವಸುಧಾ ಮುಕುಂದ್, ರಾಧ ಕೆ. ಭಟ್, ಪುಷ್ಪ ಕೃಷ್ಣಮೂರ್ತಿ, ಶೋಭಾ ಗಂಗರಾಜ್ ಮತ್ತು ಜಯಂತಿ ಶೇಟ್ ಉಪಸ್ಥಿತರಿರುವರು.

ಎರಡು ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ : ಶೇ.೮೪.೨೯ರಷ್ಟು ಮತದಾನ

ಭದ್ರಾವತಿ ತಾಲೂಕಿನ ವೀರಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತಗಟ್ಟೆಯೊಂದರ ಸೋಮವಾರ ಮತದಾನದ ವೇಳೆ ಜನಸಂದಣಿ ಉಂಟಾಗದಂತೆ ಪೊಲೀಸರು ಎಚ್ಚರ ವಹಿಸುತ್ತಿರುವುದು.  

   ಭದ್ರಾವತಿ, ಮಾ. ೨೯: ತಾಲೂಕಿನ ಕೊಮಾರನಹಳ್ಳಿ ಮತ್ತು ವೀರಾಪುರ ಗ್ರಾಮ ಪಂಚಾಯಿತಿಗಳಿಗೆ ಸೋಮವಾರ ನಡೆದ ಚುನಾವಣೆಯಲ್ಲಿ ಶೇ.೮೪.೨೯ರಷ್ಟು ಮತದಾನ ನಡೆದಿದೆ.
    ಕೊಮಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಟ್ಟು ೬ ಮತಗಟ್ಟೆಗಳಲ್ಲಿ ಹಾಗು ವೀರಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿ ೪ ಮತಗಟ್ಟೆಗಳಲ್ಲಿ ನಡೆದ ಮತದಾನದಲ್ಲಿ ಒಟ್ಟು ೭೧೧೬ ಮತದಾರರ ಪೈಕಿ ೫೯೯೮ ಮತದಾರರು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.
   ಕೊಮಾರನಹಳ್ಳಿ ಮತಗಟ್ಟೆ ೯೨ರಲ್ಲಿ ಒಟ್ಟು ೯೬೧ ಮತದಾರರ ಪೈಕಿ ಒಟ್ಟು ೭೫೪ ಮತದಾರರು ಹಕ್ಕು ಚಲಾಯಿಸಿದ್ದು, ಅತಿ ಕಡಿಮೆ ಮತದಾನವಾದ ಮತಗಟ್ಟೆ ಇದಾಗಿದೆ. ಮತಗಟ್ಟೆ ೯೫ರಲ್ಲಿ ಒಟ್ಟು ೨೫೧ ಮತದಾರರ ಪೈಕಿ ೨೩೧ ಮತದಾರರು ಹಕ್ಕು ಚಲಾಯಿಸಿದ್ದು, ಅತಿ ಹೆಚ್ಚು ಮತದಾನವಾದ ಮತಗಟ್ಟೆ ಇದಾಗಿದೆ.
    ಕೊಮಾರನಹಳ್ಳಿ ಗ್ರಾಮ ಪಂಚಾಯಿತಿ ಒಟ್ಟು ೧೩ ಸ್ಥಾನಗಳಿಗೆ ೪೩ ಮಂದಿ ಹಾಗು ವೀರಾಪುರ ಗ್ರಾಮ ಪಂಚಾಯಿತಿ ಒಟ್ಟು ೧೧ ಸ್ಥಾನಗಳಿಗೆ ೩೦ ಮಂದಿ ಸ್ಪರ್ಧಿಸಿದ್ದಾರೆ. ಈ ಎರಡು ಗ್ರಾಮ ಪಂಚಾಯಿತಿಗಳ ಅವಧಿ ಮುಕ್ತಾಯಗೊಳ್ಳದ ಕಾರಣ ಈ ಹಿಂದೆ ಚುನಾವಣೆ ನಡೆದಿರಲಿಲ್ಲ.
   ಮತಗಟ್ಟೆ ಬಳಿ ಜನಸಂದಣಿಗೆ ಅವಕಾಶ ನೀಡದಂತೆ ಎಚ್ಚರ ವಹಿಸಲಾಗಿತ್ತು. ಕೋವಿಡ್-೧೯ರ ಹಿನ್ನಲೆಯಲ್ಲಿ ಎಲ್ಲಾ ಮತದಾರರಿಗೆ ಥರ್ಮಲ್ ಸ್ಕೀನಿಂಗ್ ನಡೆಸಲಾಯಿತು. ಜೊತೆಗೆ ಕಡ್ಡಾಯವಾಗಿ ಸ್ಯಾನಿಟೈಜರ್ ಹಾಗು ಮಾಸ್ಕ್ ಬಳಕೆ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮತದಾರರಿಗೆ ಸೂಚಿಸಲಾಯಿತು.