Wednesday, March 31, 2021

ಕೋಮಾರನಹಳ್ಳಿ, ವೀರಾಪುರ ಗ್ರಾಮ ಪಂಚಾಯಿತಿ ಫಲಿತಾಂಶ ಪ್ರಕಟ

ಭದ್ರಾವತಿ, ಮಾ. ೩೧: ತಾಲೂಕಿನ ಕೋಮಾರನಹಳ್ಳಿ ಮತ್ತು ವೀರಾಪುರ ಎರಡು ಗ್ರಾಮ ಪಂಚಾಯಿತಿಗಳ ಚುನಾವಣೆಯ ಮತ ಎಣಿಕೆ ಬುಧವಾರ ನಡೆದಿದ್ದು, ಅಭ್ಯರ್ಥಿಗಳ ಭವಿಷ್ಯ ಹೊರ ಬಿದ್ದಿದೆ.
ಕೋಮಾರನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೧೩ ಸ್ವಾನಗಳಿದ್ದು, ಮಂಜುನಾಥನಾಯ್ಕ, ಕೆ. ರವಿಕುಮಾರ್, ದೇವಮ್ಮ, ಸಿ.ಎಲ್ ನೇತ್ರಾವತಿ, ಎ. ಷಣ್ಮುಗ, ಸರಸ್ವತಿ ವಿಜಯಕುಮಾರ್, ರುದ್ರಮ್ಮ ಕೃಷ್ಣಮೂರ್ತಿ, ಸುನೀತ ಸತೀಶ್, ಆರ್. ಮಾಧುರಾವ್, ನಂದಿನಿಬಾಯಿ, ಮಂಜುಳ ಮತ್ತು ಆರ್. ಮಂಜುನಾಥ್ ಆಯ್ಕೆಯಾಗಿದ್ದಾರೆ.
ವೀರಾಪುರ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೧೧ ಸ್ಥಾನಗಳಿದ್ದು, ರಾಧ ಮಂಗಳಮ್ಮ, ಮಂಜಮ್ಮ ಜಡಿಯಪ್ಪ, ಜಬೀವುಲ್ಲಾ, ರೇಣುಕಮ್ಮ ರಾಜು, ಲೋಲಾಕ್ಷಿ, ಪಿ. ರಂಗಸ್ವಾಮಿ, ಎಂ. ವೆಂಕಟೇಶ್, ಎಂ.ಎಲ್ ಯಶೋಧರಯ್ಯ, ಜ್ಯೋತಿ, ಅಸಿಯಾಬಾನು ಮತ್ತು ಸೈಯದ್ ಜಬೀವುಲ್ಲಾ ಆಯ್ಕೆಯಾಗಿದ್ದಾರೆಂದು ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ತಿಳಿಸಿದ್ದಾರೆ.  

ಕಟ್ಟಡ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳು ಸಮರ್ಪಕವಾಗಿ ತಲುಪಲಿ : ಪದ್ಮಾವತಿ ಸಂಜೀವ್‌ಕುಮಾರ್

ಇಲ್ಲಿಗೆ ಸಮೀಪದ ಶ್ರೀಕ್ಷೇತ್ರ ಭದ್ರಗಿರಿ ಶ್ರೀ ಶಿವಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಕನ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ಭದ್ರಾವತಿ ತಾಲೂಕು ಶಾಖೆಯ ಸದಸ್ಯರಿಗೆ ಗುರುತಿನ ಚೀಟಿ ವಿತರಣೆ, ಪೈಂಟ್‌ರ್ ಸಂಘದ ಉದ್ಘಾಟನೆ, ಕೋವಿಡ್-೧೯ ಕುರಿತು ಆರೋಗ್ಯ ಜಾಗೃತಿ ಮತ್ತು ಮಹಿಳಾ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮವನ್ನು ತರೀಕೆರೆ ತಾಲೂಕು ಪಂಚಾಯಿತಿ ಅಧ್ಯಕ್ಷೆ ಪದ್ಮಾವತಿ ಸಂಜೀವ್‌ಕುಮಾರ್ ಉದ್ಘಾಟಿಸಿದರು.
    ಭದ್ರವತಿ, ಮಾ. ೩೧: ಕಟ್ಟಡ ಕಾರ್ಮಿಕರಿಗೆ ಸರ್ಕಾರದ ಎಲ್ಲಾ ಸೌಲಭ್ಯಗಳು ಸಮರ್ಪಕವಾಗಿ ತಲುಪಬೇಕು. ಈ ನಿಟ್ಟಿನಲ್ಲಿ ಸಂಘಟನೆ ಹೆಚ್ಚು ಕ್ರಿಯಾಶೀಲವಾಗಬೇಕೆಂದು ತರೀಕೆರೆ ತಾಲೂಕು ಪಂಚಾಯಿತಿ ಅಧ್ಯಕ್ಷೆ ಪದ್ಮಾವತಿ ಸಂಜೀವ್‌ಕುಮಾರ್ ಹೇಳಿದರು.
   ಅವರು ಬುಧವಾರ ಇಲ್ಲಿಗೆ ಸಮೀಪದ ಶ್ರೀಕ್ಷೇತ್ರ ಭದ್ರಗಿರಿ ಶ್ರೀ ಶಿವಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕನ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ಭದ್ರಾವತಿ ತಾಲೂಕು ಶಾಖೆಯ ಸದಸ್ಯರಿಗೆ ಗುರುತಿನ ಚೀಟಿ ವಿತರಣೆ, ಪೈಂಟ್‌ರ್ ಸಂಘದ ಉದ್ಘಾಟನೆ, ಕೋವಿಡ್-೧೯ ಕುರಿತು ಆರೋಗ್ಯ ಜಾಗೃತಿ ಮತ್ತು ಮಹಿಳಾ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
   ಕಟ್ಟಡ ಕಾರ್ಮಿಕರು ಇಂದಿಗೂ ಬಡತನ ರೇಖೆಯಿಂದ ಹೊರಬಂದಿಲ್ಲ. ಸಂಕಷ್ಟದಲ್ಲಿ ಬದುಕು ಸಾಗಿಸುತ್ತಿದ್ದಾರೆ. ಸರ್ಕಾರ ಕಟ್ಟಡ ಕಾರ್ಮಿಕರಿಗೆ ಹಲವು ಯೋಜನೆಗಳನ್ನು ರೂಪಿಸಿದೆ. ಆದರೂ ಸಹ ಯೋಜನೆಗಳು ಸಮರ್ಪಕವಾಗಿ ತಲುಪುದಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
    ವಿಶೇಷವಾಗಿ ಮಹಿಳಾ ಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳ ಬಗ್ಗೆ ಹೆಚ್ಚು ಗಮನ ಹರಿಸಬೇಕಾಗಿದೆ. ಮಹಿಳೆಯರು ಸಹ ಸಂಘಟನೆಯಲ್ಲಿ ತೊಡಗಿಸಿಕೊಂಡು ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಮುಂದಾಗಿರುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದರು.
    ಶ್ರೀ ಕ್ಷೇತ್ರದ ಮುರುಗೇಶ್ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ಸಂಘಟನೆ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್‌ಬಾಬು ಪ್ರಾಸ್ತಾವಿಕವಾಗಿ ಮಾತನಾಡಿ, ಕಟ್ಟಡ ಕಾರ್ಮಿಕರಿಗಾಗಿ ಸರ್ಕಾರ ರೂಪಿಸಿರುವ ಯೋಜನೆಗಳನ್ನು ವಿವರಿಸಿದರು.
    ಜಿಲ್ಲಾಧ್ಯಕ್ಷ ಸುಬ್ರಮಣಿ, ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಸಂಜಯ್‌ಕುಮಾರ್, ತಾಲೂಕು ಗೌರವಾಧ್ಯಕ್ಷ ಅಂತೋಣಿ ಕ್ರೂಸ್, ತಾಲೂಕು ಅಧ್ಯಕ್ಷ ನಾಗರಾಜ್, ಪೈಂಟರ್ ಸಂಘದ ಅಧ್ಯಕ್ಷ ಶಿವಣ್ಣ, ಮಹಿಳಾ ಘಟಕದ ಪದಾಧಿಕಾರಿಗಳಾದ ವಿಜಿಯಮ್ಮ, ಇಂಚರ, ಪ್ರಮುಖರಾದ ನಾರಾಯಣಸ್ವಾಮಿ, ಚಂದ್ರಶೇಖರ್, ಶಿವಣ್ಣ, ಶ್ರೀನಿವಾಸ್, ಷಣ್ಮುಖಂ, ಸಂಪತ್, ಅಭಿಲಾಶ್, ಮನೋಹರ್, ಸುಬ್ಬು, ಮಂಜುನಾಥ್, ರಘು, ಮಾರಸ್ವಾಮಿ, ಆರ್‍ಮುಗಂ, ಮಣಿಕಂಠ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tuesday, March 30, 2021

ಸಾಧನಾ ಮಹಿಳಾ ವೇದಿಕೆಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಭದ್ರಾವತಿ ತಾಲೂಕಿನ ಶಂಕರಘಟ್ಟ ಸಾಧನಾ ಮಹಿಳಾ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಹಿರಿಯ ಮಹಿಳೆ ಶಾಂತಮ್ಮ ಉದ್ಘಾಟಿಸಿದರು.
   ಭದ್ರಾವತಿ, ಮಾ. ೩೦: ತಾಲೂಕಿನ ಶಂಕರಘಟ್ಟ ಸಾಧನಾ ಮಹಿಳಾ ವೇದಿಕೆ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆಯರಿಗೆ ಕ್ರೀಡಾಕೂಟ ನಡೆಸಲಾಯಿತು.
ವೇದಿಕೆ ಅಧ್ಯಕ್ಷೆ ಅಶ್ವಿನಿ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಮಹಿಳೆ ಶಾಂತಮ್ಮ ಕಾರ್ಯಕ್ರಮ ಉದ್ಘಾಟಿಸಿದರು. ಜಯಕರ್ನಾಟಕ ಜಿಲ್ಲಾ ಉಪಾಧ್ಯಕ್ಷ ತ್ಯಾಗರಾಜ್, ಶಂಕರಘಟ್ಟ ಘಟಕದ ಅಧ್ಯಕ್ಷ ಡಿ.ಟಿ ಶಶಿಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಗ್ರಾಮ ಪಂಚಾಯಿತಿಗಳಿಗೆ ನೂತನವಾಗಿ ಆಯ್ಕೆಯಾದ ಮಹಿಳಾ ಸದಸ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಮೀನಾ ಪ್ರಾರ್ಥಿಸಿದರು. ಹಾಲಮ್ಮ ಸ್ವಾಗತಿಸಿ ಎಸ್. ಗುಣ ವಾರ್ಷಿಕ ವರದಿ ಮಂಡಿಸಿದರು. ಅಶ್ವಿನಿ ನಿರೂಪಿಸಿ, ಆಶಾ ವಂದಿಸಿದರು.

ಮಾ.೩೧ರಂದು ವಿಶ್ವ ರಂಗಭೂಮಿ ದಿನಾಚರಣೆ

ಭದ್ರಾವತಿ, ಮಾ. ೩೦: ಹವ್ಯಾಸಿ ರಂಗ ತಂಡಗಳ ಒಕ್ಕೂಟ ಪ್ರತಿನಿಧಿಸುವ ರಂಗ ಕಲಾವಿದರು ಸಂಘಟನೆ ವತಿಯಿಂದ ಮಾ.೩೧ರಂದು ಸಂಜೆ ೫.೩೦ಕ್ಕೆ ಸಿದ್ದಾರೂಢನಗರದ ಧರ್ಮಶ್ರೀ ಸಭಾಭವನದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
     ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಿವಮೊಗ್ಗ ಸಹಾಯಕ ನಿರ್ದೇಶಕ ಎಚ್. ಉಮೇಶ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಉಪನ್ಯಾಸಕ ಡಾ. ಸಾಸ್ವೆಹಳ್ಳಿ ಸತೀಶ್, ವಿಕಸಂ ಅಧ್ಯಕ್ಷ ಲಕ್ಷ್ಮೀನಾರಾಯಣಪ್ಪ, ಲಲಿತ ಕಲಾ ಸಂಘದ ಅಧ್ಯಕ್ಷ ಎಚ್.ಬಿ ಉಮೇಶ್‌ರಾವ್, ಮಿತ್ರಕಲಾ ಮಂಡಳಿ ಅಧ್ಯಕ್ಷ ಎ. ಮೈಲಾರಪ್ಪ, ನವೋದಯ ಕಲಾಸಂಘದ ಅಧ್ಯಕ್ಷೆ ಡಾ. ಜಿ.ಎಂ ನಟರಾಜ್, ಶಾಂತಲಾ ಕಲಾವೇದಿಕೆ ಅಧ್ಯಕ್ಷೆ ಯಶೋಧ ವೀರಭದ್ರಪ್ಪ, ಅಪರಂಜಿ ಅಭಿನಯ ಶಾಲೆ ಸಂಸ್ಥಾಪಕ ಅಪರಂಜಿ ಶಿವರಾಜ್, ಹಿರಿಯ ರಂಗ ಕಲಾವಿದ ಕೆ.ಬಿ ಕಪನಿಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.

ಮಾ.೩೧ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಭದ್ರಾವತಿ, ಮಾ. ೩೦: ತಾಲೂಕು ಮಹಿಳಾ ಒಕ್ಕಲಿಗರ ವೇದಿಕೆ ವತಿಯಿಂದ ಮಾ.೩೧ರ ಬುಧವಾರ ಅಪ್ಪರ್‌ಹುತ್ತಾ ಶ್ರೀ ಕೆಂಪೇಗೌಡ ಸಮುದಾಯ ಭವನದಲ್ಲಿ ಬೆಳಿಗ್ಗೆ ೧೧ ಗಂಟೆಗೆ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
     ಶ್ರೀ ಕ್ಷೇತ್ರ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಪ್ರಸನ್ನನಾಥ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದು, ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಕೆ.ಬಿ ಪವಿತ್ರ ರಾಮಯ್ಯ ಉದ್ಘಾಟಿಸಲಿದ್ದಾರೆ.
    ವೇದಿಕೆ ಅಧ್ಯಕ್ಷೆ ಅನ್ನಪೂರ್ಣ ಸತೀಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಗೌರವಾಧ್ಯಕ್ಷೆ ಶಾರದ ಅಪ್ಪಾಜಿ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದು, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಎಸ್. ಕುಮಾರ್, ಕೆಎಸ್‌ಆರ್‌ಟಿಸಿ ಹಿರಿಯ ಘಟಕ ವ್ಯವಸ್ಥಾಪಕಿ ಅಂಬಿಕ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ಸ್ನೇಹ ಜೀವಿ ಬಳಗದ ಪೊಲೀಸ್ ಉಮೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. ಸಮಾಜ ಸೇವಕಿ, ಶಿಕ್ಷಕಿ ಅನಿತ ಮೇರಿ ಹಾಗು ಸುಧಾರವರಿಗೆ ಸನ್ಮಾನ ನಡೆಯಲಿದೆ.

ಮಹಿಳೆಯರು ಗರ್ಭಕೋಶದ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿವಹಿಸಿ : ಡಾ. ರಕ್ಷಾ ಯು. ರಾವ್

ಭದ್ರಾವತಿ ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ . ಸಮಾಜದ ಹಿರಿಯ ಸದಸ್ಯರಾದ ವಸುಧಾ ಮುಕುಂದ್, ರಾಧ ಕೆ. ಭಟ್, ಪುಷ್ಪ ಕೃಷ್ಣಮೂರ್ತಿ ಸೇರಿದಂತೆ ಇನ್ನಿತರರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
  ಭದ್ರಾವತಿ, ಮಾ. ೩೦: ಮಹಿಳೆಯರು ಗರ್ಭಕೋಶದ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿವಹಿಸಬೇಕೆಂದು ಶಿವಮೊಗ್ಗ ಉಷಾ ನರ್ಸಿಂಗ್ ಹೋಂ ತಜ್ಞೆ ಡಾ. ರಕ್ಷಾ ಯು. ರಾವ್ ತಿಳಿಸಿದರು.
    ಅವರು ಮಂಗಳವಾರ ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು.
   ಮಹಿಳೆಯರಲ್ಲಿ ಗರ್ಭಕೋಶದ ಸಮಸ್ಯೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಇದರಿಂದಾಗಿ ಆರೋಗ್ಯದ ಮೇಲೆ ಹಲವು ರೀತಿಯ ದುಷ್ಪರಿಣಾಮಗಳು ಉಂಟಾಗುತ್ತಿವೆ. ಈ ಹಿನ್ನಲೆಯಲ್ಲಿ ಗರ್ಭಕೋಶದ ಆರೋಗ್ಯದ ಬಗ್ಗೆ ಹೆಚ್ಚಿನ ತಿಳುವಳಿಕೆ ಹೊಂದುವ ಜೊತೆಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆಯುವುದು ಅಗತ್ಯ ಎಂದರು.
   ಕಾರ್ಯಕ್ರಮವನ್ನು ನಗರಸಭೆ ಪೌರಾಯುಕ್ತ ಮನೋಹರ್ ಉದ್ಘಾಟಿಸಿದರು. ಸಮಾಜದ ಹಿರಿಯ ಸದಸ್ಯರಾದ ವಸುಧಾ ಮುಕುಂದ್, ರಾಧ ಕೆ. ಭಟ್, ಪುಷ್ಪ ಕೃಷ್ಣಮೂರ್ತಿ ಸೇರಿದಂತೆ ಇನ್ನಿತರರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
   ಸಮಾಜದ ಅಧ್ಯಕ್ಷೆ ಹೇಮಾವತಿ ವಿಶ್ವನಾಥ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಶೋಭ ಗಂಗರಾಜ್, ಖಜಾಂಚಿ ಜಯಂತಿ ಶೇಟ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಕಮಲಕುಮಾರಿ, ಡಾ. ವೀಣಾ ಎಸ್ ಭಟ್, ಅನ್ನಪೂರ್ಣಸತೀಶ್, ಇಂದಿರಾ ರಮೇಶ್, ರೂಪರಾವ್, ಯಶೋಧ ವೀರಭದ್ರಪ್ಪ, ಚಂದ್ರಕಲಾ ವರದರಾಜ್, ಶಕುಂತಲ ರವಿಕುಮಾರ್, ಭಾಗ್ಯ ನಿಜಗುಣ, ಶಾರದ ಶ್ರೀನಿವಾಸ್, ಕಮಲರಾಯ್ಕರ್ ಸೇರಿದಂತೆ ಬಹುತೇಕ ಸದಸ್ಯರು ಪಾಲ್ಗೊಂಡಿದ್ದರು.

ಚಿತ್ರ: ಡಿ೩೦-ಬಿಡಿವಿಟಿ೨



ಚಂದ್ರಶೇಖರ್ ತೋರಣ್ಣಘಟ್ಟರವರ ಹೋರಾಟದ ಗುಣಗಳು ಇತರರಿಗೆ ಸ್ಪೂರ್ತಿದಾಯಕ : ಕೈದಾಳ್ ಕೃಷ್ಣಮೂರ್ತಿ


ಭದ್ರಾವತಿ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಹೋರಾಟಗಾರ ಚಂದ್ರಶೇಖರ್ ತೋರಣಘಟ್ಟರಿಗೆ ಚಂದ್ರ ನಮನ ಹಾಗು ಚಂದ್ರಶಿಕಾರಿ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಕೈದಾಳ್ ಕೃಷ್ಣಮೂರ್ತಿರವರ ಚಂದ್ರಶಿಕಾರಿ ಪುಸ್ತಕ ಬಿಡುಗಡೆಗೊಳಿಸಲಾಯಿತು.
   ಭದ್ರಾವತಿ, ಮಾ. ೩೦: ಚಂದ್ರಶೇಖರ್ ತೋರಣಘಟ್ಟರವರು ಸಮಾಜಮುಖಿ ಚಿಂತನೆಗಳೊಂದಿಗೆ ಹಲವಾರು ಚಳುವಳಿಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ಇತರರಿಗೆ ಸ್ಫೂರ್ತಿದಾಯಕರಾಗಿದ್ದರು ಎಂದು ಚಂದ್ರಶಿಕಾರಿ ಪುಸ್ತಕದ ಸಂಪಾದಕ ಕೈದಾಳ್ ಕೃಷ್ಣಮೂರ್ತಿ ತಿಳಿಸಿದರು.
   ಅವರು ಮಂಗಳವಾರ ನಗರದ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಹೋರಾಟಗಾರ ಚಂದ್ರಶೇಖರ್ ತೋರಣಘಟ್ಟರಿಗೆ ಚಂದ್ರ ನಮನ ಹಾಗು ಚಂದ್ರಶಿಕಾರಿ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
   ಹೋರಾಟಗಾರರಲ್ಲಿ ಸದಾಕಾಲ ಸಮಾಜಮುಖಿ ಚಿಂತನೆಗಳಿರಬೇಕು. ಎಲ್ಲರನ್ನು ಸಂಘಟಿಸುವ ಮನೋಭಾವವಿರಬೇಕು. ಯಾವುದೇ ರೀತಿಯ ಹೋರಾಟಕ್ಕೂ ಸಿದ್ದರಿರಬೇಕು. ಆಗ ಮಾತ್ರ ಹೋರಾಟಗಳು ಅವರಿಗೆ ಯಶಸ್ವಿ ತಂದುಕೊಡುತ್ತವೆ. ಈ ನಿಟ್ಟಿನಲ್ಲಿ ತೋರಣಘಟ್ಟರವರು ಎಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆ ಎಂದರು.
   ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಡಿ.ಸಿ ಮಾಯಣ್ಣ, ಪ್ರಮುಖರಾದ ಚಿತ್ರದುರ್ಗದ ಉಪನ್ಯಾಸಕಿ ಸಿ.ವೈ ಯಶೋಧ, ಮೈಸೂರು ಕಂದೇಗಾಲ ಶಿವಣ್ಣ, ಸಾಮಾಜಿಕ ಹೋರಾಟಗಾರ ದೇವೇಂದ್ರಪ್ಪ, ಡಿಎಸ್‌ಎಸ್ ರಾಜ್ಯ ಖಜಾಂಚಿ ಸತ್ಯ, ಪ್ರಜಾಪ್ರತಿನಿಧಿ ಸುರೇಶ್ ಸೇರಿದಂತೆ ಇನ್ನಿತರರು ಚಳುವಳಿಗಳಲ್ಲಿ ತೋರಣಘಟ್ಟರವರೊಂದಿಗಿನ ತಮ್ಮ ಅನುಭವಗಳನ್ನು ಹಂಚಿಕೊಂಡರು.
   ಜಿ. ರಾಜು, ಕಾಳುವರಕ್, ಶ್ರೀನಿವಾಸ್, ಡಿ. ರಾಜು, ಡಾ. ಮಂಜುನಾಥ್, ಚನ್ನಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಕಾಳಿಂಗನಹಳ್ಳಿ ಎಂ. ಶಂಕ್ರಣ್ಣ ಅಧ್ಯಕ್ಷತೆ ವಹಿಸಿದ್ದರು.


ಭದ್ರಾವತಿ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಹೋರಾಟಗಾರ ಚಂದ್ರಶೇಖರ್ ತೋರಣಘಟ್ಟರಿಗೆ ಚಂದ್ರ ನಮನ ಹಾಗು ಚಂದ್ರಶಿಕಾರಿ ಪುಸ್ತಕ ಬಿಡುಗಡೆ ಸಮಾರಂಭವನ್ನು ಚಿತ್ರದುರ್ಗದ ಉಪನ್ಯಾಸಕಿ ಸಿ.ವೈ ಯಶೋಧ, ಮೈಸೂರು ಕಂದೇಗಾಲ ಶಿವಣ್ಣ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.