ಕುಟುಂಬಸ್ಥರಿಗೆ ಸಾಂತ್ವನ, ನಗರಸಭೆಯಿಂದ ೫೦ ಸಾವಿರ ರು. ಪರಿಹಾರ
ಭದ್ರಾವತಿ ಜೈ ಭೀಮಾ ನಗರದಲ್ಲಿ ಇತ್ತೀಚೆಗೆ ಕ್ಷುಲ್ಲಕ ಕಾರಣಕ್ಕೆ ಹತ್ಯೆಯಾದ ಗುತ್ತಿಗೆ ಪೌರ ನೌಕರ ಸುನಿಲ್ ಮನೆಗೆ ಮಂಗಳವಾರ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ, ಮಾಜಿ ಸಚಿವ ಶಿವಣ್ಣ ಎಂ. ಕೋಟೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ನಗರಸಭೆಯಿಂದ ೫೦ ಸಾವಿರ ರು. ಪರಿಹಾರದ ಚೆಕ್ ವಿತರಿಸಿದರು.
ಭದ್ರಾವತಿ, ಜೂ. ೧: ಇತ್ತೀಚಿಗೆ ಜೈ ಭೀಮಾ ನಗರದಲ್ಲಿ ಹತ್ಯೆಯಾದ ನಗರಸಭೆ ಗುತ್ತಿಗೆ ಪೌರ ನೌಕರನ ಕುಟುಂಬಕ್ಕೆ ನಗರಸಭೆ ವತಿಯಿಂದ ೫೦ ಸಾವಿರ ರು. ಪರಿಹಾರದ ಚೆಕನ್ನು ಮಂಗಳವಾರ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ, ಮಾಜಿ ಸಚಿವ ಶಿವಣ್ಣ ಎಂ. ಕೋಟೆ ಕುಟುಂಬಸ್ಥರಿಗೆ ವಿತರಿಸಿದರು.
ಆಯೋಗದ ಕಾರ್ಯದರ್ಶಿ ಆರ್. ರಮಾ, ಶಿವಮೊಗ್ಗ ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್, ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ ಉಪನಿರ್ದೇಶಕರು, ನಗರಸಭೆ ಪೌರಾಯುಕ್ತ ಪರಮೇಶ್ ಸೇರಿದಂತೆ ಇನ್ನಿತರ ಅಧಿಕಾರಿಗಳ ತಂಡದೊಂದಿಗೆ ಜೈ ಭೀಮಾ ನಗರಕ್ಕೆ ಭೇಟಿ ನೀಡಿದ ಅಧ್ಯಕ್ಷರು, ಹತ್ಯೆಯಾದ ಗುತ್ತಿಗೆ ಪೌರ ನೌಕರ ಸುನಿಲ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಸರ್ಕಾರದಿಂದ ಲಭಿಸುವ ಸೌಲಭ್ಯಗಳನ್ನು ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದರು.
ಜಿಲ್ಲಾ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯ, ದಲಿತ ಮುಖಂಡ ಚಿನ್ನಯ್ಯ, ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ಅಧ್ಯಕ್ಷ ಮಂಜುನಾಥ್, ನಗರಸಭೆ ಕಂದಾಯಾಧಿಕಾರಿ ರಾಜ್ಕುಮಾರ್, ಪರಿಸರ ಅಭಿಯಂತರ ಪ್ರಭಾಕರ್, ಹಿರಿಯ ಆರೋಗ್ಯ ನಿರೀಕ್ಷ ಆರ್.ಬಿ ಸತೀಶ್, ಸೂಪರ್ ವೈಸರ್ ಗೋವಿಂದ, ಪೊಲೀಸ್ ನಗರ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ, ಹಳೇನಗರ ಪೊಲೀಸ್ ಠಾಣೆ ಪ್ರಭಾರಿ ಸಬ್ಇನ್ಸ್ಪೆಕ್ಟರ್ ಕವಿತಾ, ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.