Sunday, June 20, 2021

ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿ ನಮ್ಮೆಲ್ಲರೂ ದಾರಿದೀಪ : ಬಸವರಾಜ ಬಿ ಆನೇಕೊಪ್ಪ

ಮಾಜಿ ಶಾಸಕ ಎಂ.ಜೆ ಅಪ್ಪಾಜಿಯವರ ೬೮ನೇ ಜನ್ಮದಿನದ ಅಂಗವಾಗಿ ಕಾಗದನಗರ ವಾರ್ಡ್ ನಂ.೧ರ ಪಾರ್ಕ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಮರೆತೇವೆಂದರು ಮರೆಯಲಿ ನಿನ್ನ ಹೆಂಗ..! ವಿಶೇಷ ಕಾರ್ಯಕ್ರಮ ಜೆಡಿಎಸ್  ಮುಖಂಡರಾದ ಶಾರದ ಅಪ್ಪಾಜಿ ಉದ್ಘಾಟಿಸಿದರು.
    ಭದ್ರಾವತಿ, ಜೂ. ೨೦: ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿ ತಮ್ಮ ಅಧಿಕಾರದ ಅವಧಿಯಲ್ಲಿ ಯಾವುದೇ ತಾರತಮ್ಯವಿಲ್ಲದೆ ಭದ್ರಾವತಿ ಕ್ಷೇತ್ರ ಸರ್ವತೋಮುಖ ಅಭಿವೃದ್ಧಿಗೆ ಪಾತ್ರರಾಗಿದ್ದರು. ಅವರಲ್ಲಿ ಸಾಮಾಜಿಕ ಬದ್ಧತೆ, ಜನಪರ ಕಾಳಜಿ ನಮ್ಮೆಲ್ಲರೂ ದಾರಿದೀಪವಾಗಿದೆ ಎಂದು ವಾರ್ಡ್ ನಂ.೧೯ರ ನಗರಸಭಾ ಸದಸ್ಯ ಬಸವರಾಜ ಬಿ.  ಆನೇಕೊಪ್ಪ ಹೇಳಿದರು.
    ಅವರು ಭಾನುವಾರ ಮಾಜಿ ಶಾಸಕ ಎಂ.ಜೆ ಅಪ್ಪಾಜಿಯವರ ೬೮ನೇ ಜನ್ಮದಿನದ ಅಂಗವಾಗಿ ಕಾಗದನಗರ ವಾರ್ಡ್ ನಂ.೧ರ ಪಾರ್ಕ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಮರೆತೇವೆಂದರು ಮರೆಯಲಿ ನಿನ್ನ ಹೆಂಗ..! ವಿಶೇಷ ಕಾರ್ಯಕ್ರಮದ ನೇತೃತ್ವವಹಿಸಿ ಮಾತನಾಡಿದರು.
ಅಪ್ಪಾಜಿಯವರು ಯಾವುದೇ ಜಾತಿ, ಧರ್ಮ, ಜನಾಂಗಕ್ಕೆ ಮೀಸಲಾಗಿರದೆ ಎಲ್ಲರ ಅಭಿವೃದ್ಧಿಗೆ ಮುಂದಾಗಿದ್ದರು. ಈ ಹಿನ್ನಲೆಯಲ್ಲಿ ಅವರು ಎಲ್ಲರ ಮನಸ್ಸಿನಲ್ಲಿ ಅಚ್ಚಳಿಯದಂತೆ ಉಳಿದುಕೊಂಡಿದ್ದಾರೆಂದರು.
    ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ ಕಾರ್ಯಕ್ರಮ ಉದ್ಘಾಟಿಸಿದರು. ವಾರ್ಡ್ ೧೯ರ ವ್ಯಾಪ್ತಿಯಲ್ಲಿನ ಆಶಾ ಕಾರ್ಯಕರ್ತರು, ಪೌರಕಾರ್ಮಿಕರು ಹಾಗು ಬಡವರ್ಗದವರಿಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು. ಸಸಿ ನೆಡುವ ಮೂಲಕ ವನಮಹೋತ್ಸವ ಆಚರಿಸಲಾಯಿತು.
    ನಗರಸಭಾ ಸದಸ್ಯೆ ಜಯಶೀಲ, ಕಾಗದನಗರ ಆಂಗ್ಲ ಶಾಲೆ ಪ್ರಾಂಶುಪಾಲ ಸತೀಶ್, ಮುಖಂಡರಾದ ಡಿ.ಟಿ ಶ್ರೀಧರ್, ಲೋಕೇಶ್ವರ್‌ರಾವ್, ತಿಮ್ಮಪ್ಪ, ಎಸ್. ಚಂದ್ರಶೇಖರ್, ಕೇಬಲ್ ಸುರೇಶ್, ರಮೇಶ್, ಡಾ. ಮಂಜುನಾಥ್,  ಕಮಲಕರ್, ವಿಲಿಯಂ, ಗಿರ್ಗೇಶ್, ವೆಂಕಟೇಶ್ ಉಜ್ಜನಿಪುರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ತಮಟೆ ಜಗದೀಶ್ ತಂಡದಿಂದ ಜಾನಪದ ಗಾಯನ ನಡೆಯಿತು.

Saturday, June 19, 2021

ರಾಹುಲ್‌ಗಾಂಧಿ ಜನ್ಮದಿನ : ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ಹಣ್ಣು ವಿತರಣೆ

ಭದ್ರಾವತಿ : ರಾಹುಲ್ ಗಾಂಧಿ ಜನ್ಮ ದಿನಾಚರಣೆ ಅಂಗವಾಗಿ ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ವಿತರಿಸಲಾಯಿತು.
   ಭದ್ರಾವತಿ, ಜೂ. ೧೯: ರಾಹುಲ್ ಗಾಂಧಿ ಜನ್ಮ ದಿನಾಚರಣೆ ಅಂಗವಾಗಿ ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ವಿತರಿಸಲಾಯಿತು.
    ಕಾರ್ಯಾಧ್ಯಕ್ಷ ಅಫ್ತಾಬ್ ಅಹಮದ್, ಉಪಾಧ್ಯಕ್ಷ ಪ್ರವೀಣ್ ಕಲ್ಪನಹಳ್ಳಿ, ನಗರಸಭೆ ೬ನೇ ವಾರ್ಡ್ ಸದಸ್ಯ ಆರ್. ಶ್ರೇಯಸ್(ಚಿಟ್ಟೆ), ತಬ್ರೆಜ್ ಖಾನ್ ಸಜ್ಜಾದ್, ಫೈಸಲ್ ಅಭಿ, ವಾಹಿದ್ ಖಾನ್, ತೇಜಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
     ಬಿ.ಕೆ ಮೋಹನ್ ಜನ್ಮದಿನಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ:
  ಶಾಸಕ ಬಿ.ಕೆ ಸಂಗಮೇಶ್ವರ್ ಸಹೋದರ, ನಗರಸಭೆ ಸದಸ್ಯ ಬಿ.ಕೆ ಮೋಹನ್‌ರವರ ೬೦ನೇ ಹುಟ್ಟುಹಬ್ಬ ಜೂ.೨೦ರ ಭಾನುವಾರ ನಡೆಯಲಿದ್ದು, ಇದರ ಅಂಗವಾಗಿ ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ಜನ್ನಾಪುರ ಜಯಶ್ರೀ ವೃತ್ತದಲ್ಲಿರುವ ಕಾಂಗ್ರೆಸ್ ಕಛೇರಿಯಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಜೂ.೨೦ರಂದು ನಗರದ ವಿವಿಧೆಡೆ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಹುಟ್ಟುಹಬ್ಬ ಆಚರಣೆ

ಮಾಜಿ ಶಾಸಕ ಎಂ.ಜೆ ಅಪ್ಪಾಜಿ
    ಭದ್ರಾವತಿ, ಜೂ. ೧೯: ಮಾಜಿ ಶಾಸಕ ಎಂ.ಜೆ ಅಪ್ಪಾಜಿ ೬೮ನೇ ಹುಟ್ಟುಹಬ್ಬ ಜೂ.೨೦ರಂದು ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳಿಂದ ನಗರದ ವಿವಿಧೆಡೆ ಸರಳವಾಗಿ ನಡೆಯಲಿದೆ.
  ಮಾಜಿ ಶಾಸಕ ಎಂ.ಜೆ ಅಪ್ಪಾಜಿ ನಿಧನ ಹೊಂದಿದ ನಂತರ ನಡೆಯುತ್ತಿರುವ ಮೊದಲ ಹುಟ್ಟುಹಬ್ಬ ಇದಾಗಿದ್ದು, ಕುಟುಂಬ ವರ್ಗದವರಿಂದ ಬಿ.ಎಚ್ ರಸ್ತೆ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಪೆಟ್ರೋಲ್ ಬಂಕ್‌ನಲ್ಲಿ ಸಂಜೆ ೬ ಗಂಟೆಗೆ ಹುಟ್ಟುಹಬ್ಬದ ಅಂಗವಾಗಿ ಸಿಹಿ ವಿತರಣೆ ನಡೆಯಲಿದೆ.
    ಕಾಗದನಗರ ವಾರ್ಡ್ ನಂ.೧ರ ಪಾರ್ಕ್ ಮೈದಾನದಲ್ಲಿ ನಗರಸಭಾ ಸದಸ್ಯ ಬಸವರಾಜ್ ಬಿ. ಆನೇಕೊಪ್ಪ ನೇತೃತ್ವದಲ್ಲಿ ಮರೆತೇವೆಂದರು ಮರೆಯಲಿ ನಿನ್ನ ಹೆಂಗ..! ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಹುಟ್ಟುಹಬ್ಬದ ಅಂಗವಾಗಿ ಬಡವರಿಗೆ ದಿನಸಿ ಸಾಮಗ್ರಿ ವಿತರಣೆ ನಡೆಯಲಿದೆ.
        ವಾರ್ಡ್ ನಂ.೨೧ರ ನಗರಸಭಾ ಸದಸ್ಯೆ ವಿಜಯ ಹಾಗು ಸಮಾಜ ಸೇವಕ ಅಶೋಕ್‌ಕುಮಾರ್ ನೇತೃತ್ವದಲ್ಲಿ ಉಜ್ಜನಿಪುರ ಬೈಪಾಸ್ ರಸ್ತೆಯಲ್ಲಿರುವ ಸರ್.ಎಂ. ವಿಶೇಶ್ವರಯ್ಯ ಪ್ರತಿಮೆ ಬಳಿ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ. 
            ನಗರಸಭೆ ವಾರ್ಡ್ ನಂ.೨೫ರ ನಗರಸಭಾ ಸದಸ್ಯ ಉದಯ್‌ಕುಮಾರ್, ಮುಖಂಡ ಎಂ. ರಾಜು ನೇತೃತ್ವದಲ್ಲಿ ಹುಟ್ಟುಹಬ್ಬದ ಅಂಗವಾಗಿ ಬೆಳಿಗ್ಗೆ ೯.೩೦ಕ್ಕೆ ಲೋಕೋಪಯೋಗಿ ಇಲಾಖೆ ಅತಿಥಿ ಗೃಹದ ಬಳಿ ಪ್ರೊ. ಬಿ. ಕೃಷ್ಣಪ್ಪ ವೃತ್ತದಲ್ಲಿ ಅನ್ನಸಂತರ್ಪಣೆ ನಡೆಯಲಿದೆ.
     ಇದೆ ರೀತಿ ಜಿಂಕ್‌ಲೈನ್, ಬಾರಂದೂರು, ಕಾರೇಹಳ್ಳಿ, ಬಿಆರ್‌ಪಿ ಮತ್ತು ಗೋಣಿಬೀಡು ಸೇರಿದಂತೆ ಹಲವೆಡೆ ಅಭಿಮಾನಿಗಳು, ಕಾರ್ಯಕರ್ತರಿಂದ ಹುಟ್ಟುಹಬ್ಬ ಆಚರಣೆ ನಡೆಯಲಿದೆ.

Friday, June 18, 2021

ಕಸ ವಿಲೇವಾರಿ ವಾಹನ ಸೇವೆಗೆ ಸಮರ್ಪಣೆ


ಭದ್ರಾವತಿ ತಾಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸ ವಿಲೇವಾರಿಗೆ ಮಂಜೂರಾಗಿರುವ ವಾಹನಗಳನ್ನು ಶುಕ್ರವಾರ ಶಾಸಕ ಬಿ.ಕೆ ಸಂಗಮೇಶ್ವರ್ ಆಯಾ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರಿಗೆ ಹಸ್ತಾಂತರಿಸುವ ಮೂಲಕ ಸೇವೆಗೆ ಸಮರ್ಪಿಸಿದರು.
ಭದ್ರಾವತಿ, ಜೂ. ೧೮: ತಾಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸ ವಿಲೇವಾರಿಗೆ ಮಂಜೂರಾಗಿರುವ ವಾಹನಗಳನ್ನು ಶುಕ್ರವಾರ ಶಾಸಕ ಬಿ.ಕೆ ಸಂಗಮೇಶ್ವರ್ ಆಯಾ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರಿಗೆ ಹಸ್ತಾಂತರಿಸುವ ಮೂಲಕ ಸೇವೆಗೆ ಸಮರ್ಪಿಸಿದರು.
ತಾಲೂಕಿನಲ್ಲಿ ಒಟ್ಟು ೪೧ ಗ್ರಾಮ ಪಂಚಾಯಿತಿಗಳಿದ್ದು, ಒಂದೊಂದು ಗ್ರಾಮ ಪಂಚಾಯಿತಿಗೂ ತಲಾ ಒಂದೊಂದು ವಾಹನ ಮೀಸಲಿಡಲಾಗಿದೆ. ಸದ್ಯಕ್ಕೆ ೭ ಗ್ರಾಮ ಪಂಚಾಯಿತಿಗಳಿಗೆ ವಾಹನಗಳು ಬಂದಿದ್ದು, ಉಳಿದ ವಾಹನಗಳು ಸಹ ಶೀಘ್ರದಲ್ಲಿಯೇ ಬರಲಿವೆ.
ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್ ಹಾಗು ಸಿಬ್ಬಂದಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.




ಭದ್ರಾವತಿ ತಾಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸ ವಿಲೇವಾರಿಗೆ ಮಂಜೂರಾಗಿರುವ ವಾಹನಗಳನ್ನು ಶುಕ್ರವಾರ ಶಾಸಕ ಬಿ.ಕೆ ಸಂಗಮೇಶ್ವರ್ ಆಯಾ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರಿಗೆ ಹಸ್ತಾಂತರಿಸುವ ಮೂಲಕ ಸ್ವತಃ ವಾಹನ ಚಾಲನೆಗೆ ಮುಂದಾಗಿ ಗಮನ ಸೆಳೆದರು.

ಸೋಂಕು ಇಳಿಕೆ : ಒಂದೇ ದಿನ ೬ ಬಲಿ

   ಭದ್ರಾವತಿ, ಜೂ. ೧೮: ತಾಲೂಕಿನಲ್ಲಿ ಕೊರೋನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದು, ಆದರೆ ಸಾವಿನ ಪ್ರಮಾಣ ಏರಿಕೆಯಾಗುತ್ತಿದೆ. ಶುಕ್ರವಾರ ಒಂದೇ ದಿನ ೬ ಮಂದಿ ಮೃತಪಟ್ಟಿದ್ದಾರೆ.
    ಒಟ್ಟು ೧೦೫೫ ಮಂದಿಯ ಮಾದರಿ ಸಂಗ್ರಹಿಸಲಾಗಿದ್ದು, ೫೨ ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ೧೮ ಮಂದಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಇದುವರೆಗೂ ಒಟ್ಟು ೬೭೪೧ ಸೋಂಕು ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ ೬೫೭೧ ಮಂದಿ ಗುಣಮುಖರಾಗಿದ್ದಾರೆ. ೧೭೦ ಸಕ್ರಿಯ ಪ್ರಕರಣಗಳು ಬಾಕಿ ಉಳಿದಿದ್ದು, ಇದುವರೆಗೂ ಒಟ್ಟು ೧೮೯ ಮೃತಪಟ್ಟಿದ್ದಾರೆ.
    ಒಟ್ಟು ೧೫೮ ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ನಗರ ವ್ಯಾಪ್ತಿಯಲ್ಲಿ ಒಟ್ಟು ೩೬ ಕಂಟೈನ್‌ಮೆಂಟ್ ಜೋನ್‌ಗಳು ಸಕ್ರಿಯವಾಗಿವೆ. ಇದುವರೆಗೂ ೧೦೩ ಜೋನ್‌ಗಳನ್ನು ತೆರವುಗೊಳಿಸಲಾಗಿದೆ. ಗ್ರಾಮೀಣ ವ್ಯಾಪ್ತಿಯಲ್ಲಿ ೨೭ ಜೋನ್‌ಗಳು ಸಕ್ರಿಯವಾಗಿವೆ.

ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ವೈದ್ಯರಿಂದ ಪ್ರಧಾನಿಗೆ ಮನವಿ


ಕರ್ತವ್ಯ ನಿರತ ವೈದ್ಯರು ಕಪ್ಪು ಪಟ್ಟಿ ಧರಿಸಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತೀಯ ವೈದ್ಯಕೀಯ ಸಂಘ ತಾಲೂಕು ಶಾಖೆ ನೇತೃತ್ವದಲ್ಲಿ ಶುಕ್ರವಾರ  ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದರು.
    ಭದ್ರಾವತಿ, ಜೂ. ೧೮: ಕರ್ತವ್ಯ ನಿರತ ವೈದ್ಯರು ಕಪ್ಪು ಪಟ್ಟಿ ಧರಿಸಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತೀಯ ವೈದ್ಯಕೀಯ ಸಂಘ ತಾಲೂಕು ಶಾಖೆ ನೇತೃತ್ವದಲ್ಲಿ ಶುಕ್ರವಾರ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದರು.
     ಆರೋಗ್ಯ ಸೇವೆಗಳ ಸಿಬ್ಬಂದಿ ಮತ್ತು ವೈದ್ಯಕೀಯ ಸಂಸ್ಥೆಗಳು(ಹಿಂಸೆ ಮತ್ತು ಆಸ್ತಿಗೆ ಹಾನಿ ನಿಷೇಧ) ಮಸೂದೆ-೨೦೧೯ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಸಮಾಜ ವಿರೋಧಿ ಶಕ್ತಿಗಳಿಗೆ ತಕ್ಕ ಶಿಕ್ಷೆಯಾಗಬೇಕು. ಕೋವಿಡ್-೧೯ರ ಪರಿಣಾಮ ಮೃತಪಟ್ಟ ವೈದ್ಯರನ್ನು ಕೋವಿಡ್ ಹುತಾತ್ಮರೆಂದು ಗುರುತಿಸಬೇಕು. ಹುತಾತ್ಮ ಯೋಧರನ್ನು ಗುರುತಿಸಲು ಮತ್ತು ಪರಿಶೀಲಿಸಲು ಕೇಂದ್ರೀಯ ಆರೋಗ್ಯ ಗುಪ್ತಚರ ಬ್ಯೂರೋ(ಸಿಬಿಎಚ್‌ಐ) ಮೂಲಕ ಪರಿಣಾಮ ವ್ಯವಸ್ಥೆಯನ್ನು ರೂಪಿಸಬೇಕು. ಹುತಾತ್ಮ ವೈದ್ಯರ ಕುಟುಂಬಗಳಿಗೆ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಿಕೊಡಬೇಕೆಂದು ಮನವಿ ಮಾಡಲಾಗಿದೆ.
     ಪ್ರಸ್ತುತ ಕೊರೋನಾ ಸೋಂಕು ಎದುರಿಸಲು ಲಸಿಕೆಯೊಂದೇ ಪರಿಣಾಮಕಾರಿ ವಿಧಾನ ಎಂಬುದು ಬಹುತೇಕ ಸಾಬೀತಾಗಿದ್ದು, ಹೆಚ್ಚಿನ ಪ್ರಾಣ ಹಾನಿ, ಸೋಂಕಿನ ತೀವ್ರತೆ ತಡೆಯಲು ೧೮ ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕಬೇಕು. ಕೋವಿಡ್-೧೯ರ ನಂತರ ಎದುರಾಗಿರುವ ಸಮಸ್ಯೆಗಳನ್ನು ಸಂಪೂರ್ಣವಾಗಿ ಅರಿಯಲು ಅಧ್ಯಯನ ಮಾಡಲು ಮತ್ತು ಔಷಧದ ಎಲ್ಲಾ ವಿಭಾಗಗಳಲ್ಲಿ ಬಹುಮುಖಿ ಚಿಕಿತ್ಸಾ ಮಾರ್ಗಸೂಚಿಗಳನ್ನು ಹೊರತರಲು ಪ್ರತ್ಯೇಕ ಸಂಶೋಧನಾ ಕೋಶವನ್ನು ಸ್ಥಾಪಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
     ಐಎಂಎ ತಾಲೂಕು ಶಾಖೆ ಅಧ್ಯಕ್ಷೆ ಡಾ. ವೀಣಾ ಎಸ್. ಭಟ್, ಕಾರ್ಯದರ್ಶಿ ಡಾ. ಎಂ.ಸಿ ಸ್ವರ್ಣಲತಾ,  ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಓ. ಮಲ್ಲಪ್ಪ. ಡಾ. ಗ್ಲಾಡಿಸ್, ಡಾ. ನಿತೀನ್, ಡಾ. ಶಿವಪ್ರಕಾಶ್, ಡಾ. ಗುರುಮೂರ್ತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಶಿಕ್ಷಕರು, ಬಡ ವರ್ಗದವರಿಗೆ ದಿನಸಿ ಸಾಮಗ್ರಿ ವಿತರಣೆ


ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಭದ್ರಾವತಿಯಲ್ಲಿ ತರುಣ ಭಾರತಿ ವಿಶ್ವಸ್ಥ ಮಂಡಳಿ ಮತ್ತು ವಿಶ್ವ ಭೂಷಣ ವಿಶ್ವಸ್ಥ ಮಂಡಳಿ ವತಿಯಿಂದ ಶುಕ್ರವಾರ ಹಿಂದೂ ಸಾಮ್ರಾಜ್ಯೋತ್ಸವ ದಿನಾಚರಣೆ ಮತ್ತು ಶಾಲಾ ಶಿಕ್ಷಕರು ಹಾಗು ಬಡ ವರ್ಗದವರಿಗೆ ದಿನಸಿ ಸಾಮಗ್ರಿ ವಿತರಣೆ ಕಾರ್ಯಕ್ರಮ ನಡೆಯಿತು.  
     ಭದ್ರಾವತಿ, ಜೂ. ೧೮: ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ತರುಣ ಭಾರತಿ ವಿಶ್ವಸ್ಥ ಮಂಡಳಿ ಮತ್ತು ವಿಶ್ವ ಭೂಷಣ ವಿಶ್ವಸ್ಥ ಮಂಡಳಿ ವತಿಯಿಂದ ಶುಕ್ರವಾರ ಹಿಂದೂ ಸಾಮ್ರಾಜ್ಯೋತ್ಸವ ದಿನಾಚರಣೆ ಮತ್ತು ಶಾಲಾ ಶಿಕ್ಷಕರು ಹಾಗು ಬಡ ವರ್ಗದವರಿಗೆ ದಿನಸಿ ಸಾಮಗ್ರಿ ವಿತರಣೆ ಕಾರ್ಯಕ್ರಮ ನಡೆಯಿತು.  
   ಕೇಶವಪುರ ಬಡಾವಣೆಯ ತರುಣ ಭಾರತಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿಶ್ವ ಭೂಷಣ ವಿಶ್ವಸ್ಥ ಮಂಡಳಿ ಕಾರ್ಯದರ್ಶಿ ಮಧುಕರ್ ಕಾನಿಟ್ಕರ್ ಮಾತನಾಡಿ, ಹಿಂದೂ ಸಾಮ್ರಾಜ್ಯೋತ್ಸವ ಹಾಗು ಶಿವಾಜಿ ಮಹಾರಾಜರು ನಡೆಸಿದ ಹೋರಾಟಗಳನ್ನು ವಿವರಿಸಿದರು.  ಅವರ ಸಾಹಸವನ್ನು ತಿಳಿಸಿದರು.
      ತರುಣ ಭಾರತಿ ವಿದ್ಯಾ ಕೇಂದ್ರದ ಅಧ್ಯಕ್ಷ ಶಿವಕುಮಾರ್ ಅಧ್ಯಕ್ಷತೆ ವಹಿಸಿದ್ದರು. ವಿಶ್ವಭೂಷಣ ವಿಶ್ವಸ್ಥ ಮಂಡಳಿಯ ಅಧ್ಯಕ್ಷ ಹಾಗು ತರುಣ ಭಾರತಿ  ವಿದ್ಯಾ ಕೇಂದ್ರದ ಕಾರ್ಯದರ್ಶಿ ಡಾ. ಎಂ.ಎಚ್ ವಿದ್ಯಾಶಂಕರ್ ಪ್ರಾಸ್ತಾವಿಕ ನುಡಿಗಳನ್ನಾಡಿ, ಯೋಗದ ಮಹತ್ವ ವಿವರಿಸಿದರು. ಸಹ ಕಾರ್ಯದರ್ಶಿ ರಮೇಶ್ ಉಪಸ್ಥಿತರಿದ್ದರು.  
     ಸವಿತಾ ನಿರೂಪಿಸಿದರು. ಸುಜಾತ ಸ್ವಾಗತಿಸಿದರು. ಪೂರ್ಣಿಮಾ ಅಮೃತವಚನ ನಡೆಸಿಕೊಟ್ಟರು. ಸರ್ವಮಂಗಳ ವಂದಿಸಿದರು. ಸುಮಾರು ೩೫ಕ್ಕೂ ಹೆಚ್ಚು ಮಂದಿಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು.
     ಖಜಾಂಚಿ ವಿಶ್ವನಾಥ್, ಸದಸ್ಯರಾದ ರಾಮಚಂದ್ರ, ಸತ್ಯನಾರಾಯಣ, ಸಿದ್ದರಾಮಣ್ಣ, ಬೋಧಕ ಹಾಗು ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.