Thursday, August 26, 2021

ಶಾಸಕ ಬಿ.ಕೆ ಸಂಗಮೇಶ್ವರ್ ಮೊಮ್ಮಗನ ಮೊದಲನೇ ವರ್ಷದ ಹುಟ್ಟುಹಬ್ಬ

ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ವರ್ ಅವರ ೨ನೇ ಪುತ್ರ ಬಸವೇಶ್ ಅವರ ಪುತ್ರನ ಮೊದಲನೇ ವರ್ಷದ ಹುಟ್ಟುಹಬ್ಬ ತಾಲೂಕಿನ ತಮ್ಮಡಿಹಳ್ಳಿ ಶ್ರೀಗಂಧ ಫಾರಂ ಹೌಸ್‌ನಲ್ಲಿ ಬುಧವಾರ ಅದ್ದೂರಿಯಾಗಿ ಜರುಗಿತು.
    ಭದ್ರಾವತಿ, ಆ. ೨೬: ಶಾಸಕ ಬಿ.ಕೆ ಸಂಗಮೇಶ್ವರ್ ಅವರ ೨ನೇ ಪುತ್ರ ಬಸವೇಶ್ ಅವರ ಪುತ್ರನ ಮೊದಲನೇ ವರ್ಷದ ಹುಟ್ಟುಹಬ್ಬ ತಾಲೂಕಿನ ತಮ್ಮಡಿಹಳ್ಳಿ ಶ್ರೀಗಂಧ ಫಾರಂ ಹೌಸ್‌ನಲ್ಲಿ ಬುಧವಾರ ಅದ್ದೂರಿಯಾಗಿ ಜರುಗಿತು.
    ಕೋವಿಡ್-೧೯ರ ಹಿನ್ನಲೆಯಲ್ಲಿ ನಗರ ಪ್ರದೇಶದಿಂದ ಹೊರವಲಯದಲ್ಲಿ ಮೊಮ್ಮಗನ ಹುಟ್ಟುಹಬ್ಬ ಆಚರಣೆಯನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಕೈಗೊಂಡಿದ್ದರು. ಹುಟ್ಟುಹಬ್ಬಕ್ಕೆ ನಿರೀಕ್ಷೆಗೂ ಹೆಚ್ಚಿನ ಜನರು ಆಗಮಿಸಿ ಮೊಮ್ಮಗನಿಗೆ ಶುಭ ಕೋರಿದರು.
    ಕಾರ್ಯಕರ್ತರು, ಅಭಿಮಾನಿಗಳು, ಕುಟುಂಬ ವರ್ಗದವರು ಮಾತ್ರವಲ್ಲದೆ. ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಸಹ ಪಾಲ್ಗೊಂಡಿದ್ದರು.

ಅಶೋಕ್‌ರಾವ್ ವಾಗ್ಮೋಡೆ ನಿಧನ

ಅಶೋಕ್‌ರಾವ್ ವಾಗ್ಮೋಡೆ
    ಭದ್ರಾವತಿ, ಆ. ೨೬: ಎಂಪಿಎಂ ಕಾರ್ಖಾನೆಯ ಗುತ್ತಿಗೆದಾರ, ಮರಾಠ ಸಮಾಜದ ಮುಖಂಡರಾದ ಅಶೋಕ್‌ರಾವ್ ವಾಗ್ಮೋಡೆ(೬೦) ನಿಧನ ಹೊಂದಿದರು.
    ಮೃತರು ವಿಐಎಸ್‌ಎಲ್ ಆಸ್ಪತ್ರೆ ಮುಂಭಾಗದಲ್ಲಿರುವ ಸುನಿಲ್ ಮೆಡಿಕಲ್ ಸ್ಟೋರ್ ಮಾಲೀಕ ಸುನಿಲ್ ಅವರ ತಂದೆಯಾಗಿದ್ದು, ಪತ್ನಿ ಮತ್ತು ಪುತ್ರ ಸುನಿಲ್ ಹಾಗು ಸೊಸೆ, ಮೊಮಕ್ಕಳನ್ನು ಹೊಂದಿದ್ದರು. ಮೃತರ ನಿಧನಕ್ಕೆ ಮರಾಠ ಸಮಾಜದ ಪ್ರಮುಖರು ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.

Wednesday, August 25, 2021

೩ ದಿನಗಳ ಕಾಲ ಅದ್ದೂರಿಯಾಗಿ ಜರುಗಿದ ಶ್ರೀ ರಾಘವೇಂದ್ರ ಸ್ವಾಮಿಗಳ ೩೫೦ನೇ ಆರಾಧನಾ ಮಹೋತ್ಸವ – Prathikshana

೩ ದಿನಗಳ ಕಾಲ ಅದ್ದೂರಿಯಾಗಿ ಜರುಗಿದ ಶ್ರೀ ರಾಘವೇಂದ್ರ ಸ್ವಾಮಿಗಳ ೩೫೦ನೇ ಆರಾಧನಾ ಮಹೋತ್ಸವ – Prathikshana

೩ ದಿನಗಳ ಕಾಲ ಅದ್ದೂರಿಯಾಗಿ ಜರುಗಿದ ಶ್ರೀ ರಾಘವೇಂದ್ರ ಸ್ವಾಮಿಗಳ ೩೫೦ನೇ ಆರಾಧನಾ ಮಹೋತ್ಸವ

ಭದ್ರಾವತಿ ಹಳೇನಗರ ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದಲ್ಲಿ ೩೫೦ ಆರಾಧನಾ ಮಹೋತ್ಸವದ ೩ ದಿನಗಳ ಕಾಲ ಅದ್ದೂರಿಯಾಗಿ ನಡೆಯಿತು.
    ಭದ್ರಾವತಿ, ಆ. ೨೫ : ಹಳೇನಗರ ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದಲ್ಲಿ ೩೫೦ ಆರಾಧನಾ ಮಹೋತ್ಸವದ ೩ ದಿನಗಳ ಕಾಲ ಅದ್ದೂರಿಯಾಗಿ ನಡೆಯಿತು.
    ಬುಧವಾರ ಬೆಳಗ್ಗೆ ರಾಯರ ಬೃಂದಾವನಕ್ಕೆ ಹಾಲಿನ ಅಭಿಷೇಕ, ಹೂವಿನ ಅಲಂಕಾರ ಮತ್ತು ಪ್ರಾಕಾರದಲ್ಲಿ ರಾಜಬೀದಿ ಉತ್ಸವ ನಡೆಯಿತು. ಮಧ್ಯಾಹ್ನ ೧೨ ಗಂಟೆಗೆ ತೀರ್ಥಪ್ರಸಾದ ವಿನಿಯೋಗ, ಮಹಾಮಂಗಳಾರತಿ, ಅನ್ನಸಂತರ್ಪಣೆ ಕಾರ್ಯಕ್ರಮಗಳು ಜರುಗಿದವು.
    ಸಂಜೆ ಹರಿಪ್ರಿಯ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ಮತ್ತು ಶ್ರೀಕೃಷ್ಣ ಚಂಡೆ ಬಳಗದಿಂದ ಉತ್ಸವ ಹಾಗೂ ಕರಾವಳಿ ವಿಪ್ರ ಬಳಗದಿಂದ ನೃತ್ಯ ಕಾರ್ಯಕ್ರಮ ನಡೆಯಿತು.
    ಗುರುರಾಜ ಸೇವಾ ಸಮಿತಿ ಅಧ್ಯಕ್ಷ ಮುರಳೀಧರ ತಂತ್ರಿ, ಉಪಾಧ್ಯಕ್ಷೆ ಸುಮಾ ರಾಘವೇಂದ್ರ,  ಪ್ರಧಾನ ಕಾರ್ಯದರ್ಶಿ ರಮಾಕಾಂತ್, ನಿರಂಜನ ಆಚಾರ್,  ಪವನ್‌ಕುಮಾರ್ ಉಡುಪ, ಪ್ರಮೋದ್ ಹಾಗೂ ಪ್ರಧಾನ ಅರ್ಚಕ ಸತ್ಯನಾರಾಯಣ, ಗೋಪಾಲಚಾರಿ, ಶ್ರೀನಿವಾಸ, ಸಹಾಯಕ ಅರ್ಚಕ ಮಾಧುರಾವ್, ಶ್ರೀಪತಿ, ಮಧು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tuesday, August 24, 2021

ಮದ್ಯದಂಗಡಿ ತೆರವಿಗೆ ಆಗ್ರಹಿಸಿ ಕರಾವೇ ಮಹಿಳಾ ಘಟಕ ಪ್ರತಿಭಟನೆ : ಗೃಹ ಸಚಿವರಿಗೆ ಮನವಿ

ಭದ್ರಾವತಿ ಡೈರಿ ಸರ್ಕಲ್‌ನಲ್ಲಿ ಹೆದ್ದಾರಿ ಪಕ್ಕದಲ್ಲಿರುವ ೨ ಮದ್ಯದಂಗಡಿಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
    ಭದ್ರಾವತಿ, ಆ. ೨೪: ಡೈರಿ ಸರ್ಕಲ್‌ನಲ್ಲಿ ಹೆದ್ದಾರಿ ಪಕ್ಕದಲ್ಲಿರುವ ೨ ಮದ್ಯದಂಗಡಿಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ಗೃಹ ಸಚಿವ ಅರಗಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಲಾಯಿತು.
    ಗೃಹ ಸಚಿವ ಅರಗಜ್ಞಾನೇಂದ್ರ ಅವರು ಮಂಗಳವಾರ ಕೆಎಸ್‌ಆರ್‌ಪಿ ೮ನೇ ಪಡೆಗೆ ಆಗಮಿಸಿದ ಸಂದರ್ಭದಲ್ಲಿ ಕರಾವೇ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಜ್ಯೋತಿ ಸೋಮಶೇಖರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಎರಡು ಮದ್ಯದಂಗಡಿಗಳನ್ನು ತಕ್ಷಣ ಬೇರೆಡೆಗೆ ಸ್ಥಳಾಂತರಿಸುವ ಜೊತೆಗೆ ವಿದ್ಯಾರ್ಥಿಗಳು, ಮಹಿಳೆಯರು, ಪ್ರಯಾಣಿಕರು ಹಾಗು ಸಾರ್ವಜನಿಕರಿಗೆ ಉಂಟಾಗುತ್ತಿರುವ ಸಮಸ್ಯೆಗಳನ್ನು ತಪ್ಪಿಸಬೇಕೆಂದು ಆಗ್ರಹಿಸಲಾಯಿತು. ಮನವಿ ಸ್ವೀಕರಿಸಿದ ಸಚಿವರು ತಕ್ಷಣ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.  
    ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾರದ, ತಾಲೂಕು ಅಧ್ಯಕ್ಷೆ ಮಹೇಶ್ವರಿ, ಯಾಸ್ಮಿನ್ ಸೇರಿದಂತೆ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಸಾರ್ವಜನಿಕವಾಗಿ ವಿನಾಯಕ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಿ

ರಾಮ್ ಸೇನಾ ಕರ್ನಾಟಕ ತಾಲೂಕು ಶಾಖೆ ವತಿಯಿಂದ ಭದ್ರಾವತಿಯಲ್ಲಿ ಈ ಬಾರಿ ಸಾರ್ವಜನಿಕವಾಗಿ ವಿನಾಯಕ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕಲ್ಪಿಸಿಕೊಡುವಂತೆ ಒತ್ತಾಯಿಸಿ ಮಂಗಳವಾರ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಆ. ೨೪: ಕೋವಿಡ್-೧೯ ಪರಿಮಿತಿಯಲ್ಲಿ ಈ ಬಾರಿ ವಿನಾಯಕ ಚತುರ್ಥಿಯಂದು ಸಾರ್ವಜನಿಕವಾಗಿ ವಿನಾಯಕ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕಲ್ಪಿಸಿಕೊಡುವಂತೆ ಒತ್ತಾಯಿಸಿ ಮಂಗಳವಾರ ರಾಮ್ ಸೇನಾ ಕರ್ನಾಟಕ ತಾಲೂಕು ಶಾಖೆವತಿಯಿಂದ ತಹಸೀಲ್ದಾರ್ ಆರ್. ಪ್ರದೀಪ್‌ಗೆ ಮನವಿ ಸಲ್ಲಿಸಲಾಯಿತು.
    ರಾಮ್ ಸೇನಾ ಕರ್ನಾಟಕ ಜಿಲ್ಲಾಧ್ಯಕ್ಷ ಉಮೇಶ್‌ಗೌಡ, ತಾಲೂಕು ಅಧ್ಯಕ್ಷ ಸಚಿನ್ ಎಂ. ವರ್ಣೇಕರ್, ಪ್ರವೀಣ್‌ಶೆಟ್ಟಿ, ಪವನ್, ಮಹೇಶ್ ಶೇಟ್, ಪ್ರತೀಕ್ ಜಿ ಶೇಟ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಔರದ್ಕರ್ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಗೃಹ ಸಚಿವರಿಗೆ ಮನವಿ

ರಾಜ್ಯದಲ್ಲಿ ಔರದ್ಕರ್ ವರದಿಯನ್ನು ಸಮರ್ಪಕವಾಗಿ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಭದ್ರಾವತಿ ನಿವಾಸಿ ಜನತಾದಳ (ಸಂಯುಕ್ತ) ಕರ್ನಾಟಕ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ಮಂಗಳವಾರ ಏಕಾಂಗಿಯಾಗಿ ಹೋರಾಟ ನಡೆಸುವ ಮೂಲಕ ಗೃಹ ಸಚಿವ ಅರಗಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಿದ್ದಾರೆ.
    ಭದ್ರಾವತಿ, ಆ. ೨೪: ರಾಜ್ಯದಲ್ಲಿ ಔರದ್ಕರ್ ವರದಿಯನ್ನು ಸಮರ್ಪಕವಾಗಿ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜನತಾದಳ (ಸಂಯುಕ್ತ) ಕರ್ನಾಟಕ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ಮಂಗಳವಾರ ಏಕಾಂಗಿಯಾಗಿ ಹೋರಾಟ ನಡೆಸುವ ಮೂಲಕ ಗೃಹ ಸಚಿವ ಅರಗಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಿದ್ದಾರೆ.
    ಅಕ್ಕಪಕ್ಕದ ರಾಜ್ಯಗಳಲ್ಲಿ ಪೊಲೀಸರಿಗೆ ಹೆಚ್ಚಿನ ವೇತನ, ಭತ್ಯೆ ಜೊತೆಗೆ ಹಲವಾರು ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗಿದೆ. ರಾಜ್ಯದಲ್ಲೂ ಇದೆ ಮಾದರಿಯನ್ನು ಅನುಸರಿಸಬೇಕು. ರಾಜ್ಯದಲ್ಲಿ ಹಲವಾರು ವರ್ಷಗಳಿಂದ ಔರದ್ಕರ್ ವರದಿ ನೆನೆಗುದಿಗೆ ಬಿದ್ದಿದ್ದು, ತಕ್ಷಣ ವರದಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.
    ಇತ್ತೀಚಿನ ವರ್ಷಗಳಲ್ಲಿ ರಸ್ತೆ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಕುರಿತು ಸರ್ವೋಚ್ಛ ನ್ಯಾಯಾಲಯ ಸಹ ಕಳವಳ ವ್ಯಕ್ತಪಡಿಸುವ ಜೊತೆಗೆ ೨೦೧೬ರಲ್ಲಿ ನೀಡಿರುವ ಆದೇಶದಂತೆ ಹೆದ್ದಾರಿ ಪಕ್ಕದಲ್ಲಿ ೫೦೦ ಮೀಟರ್ ವ್ಯಾಪ್ತಿಯೊಳಗಿರುವ ಮದ್ಯದಂಗಡಿಗಳನ್ನು ತೆರವುಗೊಳಿಸಬೇಕು.  ಬಹುತೇಕ ಮೈಕ್ರೋ ಫೈನಾನ್ಸ್ ಕಂಪನಿಗಳು ಬಡ ಮಹಿಳೆಯರಿಗೆ ಸಾಲ ನೀಡಿದ್ದು, ಕೊರೋನಾ ಸಂದರ್ಭದಲ್ಲೂ ಮರುಪಾವತಿಗೆ ಕಾಲಾವಕಾಶ ನೀಡದೆ ಕಿರುಕುಳ ನೀಡುತ್ತಿವೆ. ಈ ಸಂಬಂಧ ಮೈಕ್ರೋ ಫೈನಾನ್ಸ್ ಕಂಪನಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.