Wednesday, September 1, 2021

ಜೆಡಿಎಸ್ ಅಭ್ಯರ್ಥಿ ಆರ್. ನಾಗರತ್ನ ಪರ ಶಾರದ ಅಪ್ಪಾಜಿ ನೇತೃತ್ವದಲ್ಲಿ ಪಾದಯಾತ್ರೆ

ಎಂ. ಶ್ರೀಕಾಂತ್ ಸೇರಿದಂತೆ ಇನ್ನಿತರ ಮುಖಂಡರಿಂದ ಮತಯಾಚನೆ

ಭದ್ರಾವತಿ ನಗರಸಭೆ ವಾರ್ಡ್ ನಂ.೨೯ರ ಚುನಾವಣೆ ಹಿನ್ನಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ಆರ್. ನಾಗರತ್ನ ಪರ ಶಾರದ ಅಪ್ಪಾಜಿ, ಎಂ. ಶ್ರೀಕಾಂತ್ ಸೇರಿದಂತೆ ಇನ್ನಿತರರು ಮತಯಾಚನೆ ನಡೆಸಿದರು.
    ಭದ್ರಾವತಿ, ಸೆ. ೧: ನಗರಸಭೆ ವಾರ್ಡ್ ನಂ.೨೯ರ ಚುನಾವಣೆ ಬಹಿರಂಗ ಪ್ರಚಾರ ಬುಧವಾರ ಅಂತ್ಯಗೊಳ್ಳಲಿದ್ದು, ಮಂಗಳವಾರ ರಾತ್ರಿ ಜೆಡಿಎಸ್ ಅಭ್ಯರ್ಥಿ ಆರ್. ನಾಗರತ್ನ ಪರವಾಗಿ ಪಕ್ಷದ ಮುಖಂಡರು ವಾರ್ಡ್ ವ್ಯಾಪ್ತಿಯಲ್ಲಿ ಪಾದಯಾತ್ರೆ ಮೂಲಕ ಮತಯಾಚನೆ ನಡೆಸಿದರು.
    ವಾರ್ಡ್ ನಂ.೨೯ರ ವ್ಯಾಪ್ತಿಯಲ್ಲಿ ಜೆಡಿಎಸ್ ಪ್ರಬಲವಾಗಿದ್ದು, ಈ ನಡುವೆ ಶಾಸಕ ಬಿ.ಕೆ ಸಂಗಮೇಶ್ವರ್ ವಾರ್ಡನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ಹೆಚ್ಚಿನ ಒಲವು ತೋರಿಸುತ್ತಿರುವ ಹಿನ್ನಲೆಯಲ್ಲಿ ಚುನಾವಣೆ ಹೆಚ್ಚಿನ ಗಮನ ಸೆಳೆದಿದೆ. ಜೆಡಿಎಸ್ ಸಹ ವಾರ್ಡ್ ಬಿಟ್ಟುಕೊಡುವ ಯಾವುದೇ ಲಕ್ಷಣಗಳು ಕಂಡು ಬರುತ್ತಿಲ್ಲ. ಹಲವು ರೀತಿಯ ಕಾರ್ಯತಂತ್ರಗಳ ನಡುವೆ ವ್ಯಾಪಕ ಪ್ರಚಾರದಲ್ಲಿ ತೊಡಗಿಸಿಕೊಂಡಿದೆ.
    ವಾರ್ಡ್ ಚುನಾವಣೆಯನ್ನು ಸ್ಥಳೀಯ ಜೆಡಿಎಸ್ ವರಿಷ್ಠರಾದ ಶಾರದ ಅಪ್ಪಾಜಿ ಸಹ ಪ್ರತಿಷ್ಠೆಯಾಗಿ ಸ್ವೀಕರಿಸಿದ್ದು, ಜಿಲ್ಲಾ ಹಾಗು ಸ್ಥಳೀಯ ಮುಖಂಡರನ್ನು ಹೆಚ್ಚಿನ ರೀತಿಯಲ್ಲಿ ಸಂಘಟಿಸುವ ಜೊತೆಗೆ ಒಗ್ಗಟ್ಟಿನಿಂದ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ಮುಂದಾಗಿದ್ದಾರೆ.
    ಶಾರದ ಅಪ್ಪಾಜಿ ನೇತೃತ್ವದಲ್ಲಿ ನಡೆದ ಪಾದಯಾತ್ರೆಯಲ್ಲಿ ಜೆಡಿಎಸ್ ರಾಜ್ಯ ಕಾರ್ಯದರ್ಶಿ ಎಂ. ಶ್ರೀಕಾಂತ್, ಜಿಲ್ಲಾ ಪಂಚಾಯಿತಿ ಸದಸ್ಯ ಜೆ.ಪಿ ಯೋಗೇಶ್, ಮಾಜಿ ಸದಸ್ಯ ಎಸ್. ಕುಮಾರ್, ನಗರಸಭಾ ಸದಸ್ಯರಾದ ಉದಯ್‌ಕುಮಾರ್, ಅಭ್ಯರ್ಥಿ ಆರ್. ನಾಗರತ್ನ, ಮುಖಂಡರಾದ ಅನಿಲ್‌ಕುಮಾರ್, ಕರಿಯಪ್ಪ, ಡಿ.ಟಿ ಶ್ರೀಧರ್, ಬದರಿನಾರಾಯಣ, ಗುಣಶೇಖರ್, ದಿಲೀಪ್, ರಾಮಕೃಷ್ಣ, ಮೈಲಾರಪ್ಪ, ಉಮೇಶ್ ಹಾಗು ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಕಾರ್ಯಕರ್ತರು ಸೇರಿದಂತೆ ನೂರಾರು ಮಂದಿ ಪಾಲ್ಗೊಂಡಿದ್ದರು. ಇದಕ್ಕೂ ಮೊದಲು ಪ್ಲೇಗ್ ಮಾರಿಯಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

Tuesday, August 31, 2021

ಅಪ್ಪಾಜಿ ಪುಣ್ಯ ಸ್ಮರಣೆ ಅಂಗವಾಗಿ ಸೆ.೨ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಭದ್ರಾವತಿ, ಆ. ೩೧: ಮಾಜಿ ಶಾಸಕ ಎಂ.ಜೆ ಅಪ್ಪಾಜಿಯವರ ಮೊದಲ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ಸೆ.೨ರಂದು ಬೆಳಿಗ್ಗೆ ೯ ಗಂಟೆಯಿಂದ ಮಧ್ಯಾಹ್ನ ೩ ಗಂಟೆ ವರೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಗರಸಭೆ ವಾರ್ಡ್ ನಂ.೩೧ರ ಜಿಂಕ್‌ಲೈನ್ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
    ವಾರ್ಡ್ ನಗರಸಭಾ ಸದಸ್ಯ ಪಲ್ಲವಿ ಎಸ್ ದಿಲೀಪ್ ನೇತೃತ್ವದಲ್ಲಿ ಶಿವಮೊಗ್ಗ ಸುಬ್ಬಯ್ಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಹಾಗು ತಾಲೂಕು ಸರ್ಕಾರಿ ಆಸ್ಪತ್ರೆ ಸಹಕಾರದೊಂದಿಗೆ ಶಿಬಿರ ಆಯೋಜಿಸಲಾಗಿದೆ.
    ಚರ್ಮ ವೈದ್ಯರು, ದಂತ ತಜ್ಞರು, ಸರ್ಜನ್, ಕಿವಿ, ಮೂಗು, ಗಂಟಲು, ಮಕ್ಕಳ ತಜ್ಞರು ಮತ್ತು ಕಣ್ಣಿನ ತಜ್ಞರು ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ. ಆರೋಗ್ಯ ತಪಾಸಣೆ ಜೊತೆಗೆ ಉಚಿತವಾಗಿ ಇಸಿಜಿ, ರಕ್ತದೊತ್ತಡ ಮತ್ತು ಮಧುಮೇಹ ಪರೀಕ್ಷೆ ಸಹನಡೆಸಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.

ನಗರಸಭೆ ವಾರ್ಡ್ ನಂ.೨೯ ಚುನಾವಣೆ : ಬಿಜೆಪಿಯಿಂದ ವ್ಯಾಪಕ ಪ್ರಚಾರ

ಭದ್ರಾವತಿ ನಗರಸಭೆ ವಾರ್ಡ್ ನಂ.೨೯ರ ಚುನಾವಣೆ ಪ್ರಚಾರದ ಭರಾಟೆ ಹೆಚ್ಚಾಗಿದ್ದು, ಮಂಗಳವಾರ ಬಿಜೆಪಿ ಅಭ್ಯರ್ಥಿ ರಮಾ ವೆಂಕಟೇಶ್ ಪರವಾಗಿ ಜಿಲ್ಲಾ ಹಾಗು ಸ್ಥಳೀಯ ಮುಖಂಡರು ಮನೆ ಮನೆಗೆ ತೆರಳಿ ವ್ಯಾಪಕ ಪ್ರಚಾರ ನಡೆಸಿದರು.
       ಭದ್ರಾವತಿ, ಆ. ೩೧: ನಗರಸಭೆ ವಾರ್ಡ್ ನಂ.೨೯ರ ಚುನಾವಣೆ ಪ್ರಚಾರದ ಭರಾಟೆ ಹೆಚ್ಚಾಗಿದ್ದು, ಮಂಗಳವಾರ ಬಿಜೆಪಿ ಅಭ್ಯರ್ಥಿ ರಮಾ ವೆಂಕಟೇಶ್ ಪರವಾಗಿ ಜಿಲ್ಲಾ ಹಾಗು ಸ್ಥಳೀಯ ಮುಖಂಡರು ಮನೆ ಮನೆಗೆ ತೆರಳಿ ವ್ಯಾಪಕ ಪ್ರಚಾರ ನಡೆಸಿದರು.
    ಬಹಿರಂಗ ಪ್ರಚಾರಕ್ಕೆ ೧ ದಿನ ಮಾತ್ರ ಬಾಕಿ ಉಳಿದಿದೆ. ಈ ಹಿನ್ನಲೆಯಲ್ಲಿ ವಿವಿಧ ಪಕ್ಷಗಳ ಪ್ರಮುಖರು ತಮ್ಮ ಅಭ್ಯರ್ಥಿಗಳ ಪರವಾರ ಪ್ರಚಾರಕ್ಕೆ ಮುಂದಾಗಿದ್ದಾರೆ.
    ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಎಸ್. ದತ್ತಾತ್ರಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಜಿ. ಧರ್ಮಪ್ರಸಾದ್, ರಾಜ್ಯ ಕಾರ್ಯಕಾರಿಣಿ ಸದಸ್ಯೆ ಆರ್.ಎಸ್ ಶೋಭಾ, ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್, ಪ್ರಧಾನ ಕಾರ್ಯದರ್ಶಿ ಚನ್ನೇಶ್, ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಪಾಟೀಲ್, ಯುವ ಘಟಕದ ಅಧ್ಯಕ್ಷ ವಿಜಯ್‌ರಾಜ್, ಪ್ರಮುಖರಾದ ಸೂಡಾ ಸದಸ್ಯರಾದ ವಿ. ಕದಿರೇಶ್, ರಾಮಲಿಂಗಯ್ಯ, ಭೋವಿ ಅಭಿವೃದ್ಧಿ ನಿಗಮದ ನಿರ್ದೇಶಕ ಜಿ. ಆನಂದಕುಮಾರ್, ಹಟ್ಟಿ ಚಿನ್ನದ ಗಣಿ ಕಂಪನಿ ಆಡಳಿತ ಮಂಡಳಿ ನಿರ್ದೇಶಕ ಕೂಡ್ಲಿಗೆರೆ ಹಾಲೇಶ್, ಜನ್ನಾಪುರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ನವೀನ್‌ಕುಮಾರ್, ಎಂ. ಮಂಜುನಾಥ್, ಶಿವಕುಮಾರ್, ಮಣಿ, ಮಂಜಪ್ಪ, ನಂಜಪ್ಪ, ಹೇಮಾವತಿ ವಿಶ್ವನಾಥ್, ಮಂಜುಳ, ಮಲ್ಲೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸಾಮಾಜಿಕ ಜಾಲತಾಣದ ಗ್ರಾಮಾಂತರ ಅಧ್ಯಕ್ಷರಾಗಿ ಪ್ರವೀಣ್ ನಾಯಕ್

ಭದ್ರಾವತಿ ತಾಲೂಕಿನ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿ ಪ್ರವೀಣ್‌ನಾಯಕ್ ನೇಮಕಗೊಂಡಿದ್ದು, ಆದೇಶ ಪತ್ರವನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್ ಸುಂದರೇಶ್ ವಿತರಿಸಿದರು.
    ಭದ್ರಾವತಿ, ಆ. ೩೧: ತಾಲೂಕಿನ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿ ಪ್ರವೀಣ್‌ನಾಯಕ್ ನೇಮಕಗೊಂಡಿದ್ದಾರೆ.
    ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಕಾರ್ಯದರ್ಶಿ ಎಸ್.ಆರ್ ಸೌಗಂಧಿಕಾ ಅವರ ಸೂಚನೆ ಮೇರೆಗೆ ಜಿಲ್ಲಾಧ್ಯಕ್ಷ ಎನ್.ಡಿ ಪ್ರವೀಣ್‌ಕುಮಾರ್ ನೇಮಕ ಆದೇಶ ಹೊರಡಿಸಿದ್ದು, ಪಕ್ಷದ ತತ್ವ, ಸಿದ್ದಾಂತಗಳಿಗೆ ಬದ್ಧರಾಗಿ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಜೊತೆಗೆ ಪಕ್ಷವನ್ನು ಮತ್ತಷ್ಟು ಸದೃಢಗೊಳಿಸಬೇಕೆಂದು ಆದೇಶ ಪತ್ರದಲ್ಲಿ ಸೂಚಿಸಿದ್ದಾರೆ.
    ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್ ಸುಂದರೇಶ್ ಆದೇಶ ಪತ್ರವನ್ನು ಪ್ರವೀಣ್‌ನಾಯಕ್ ಅವರಿಗೆ ವಿತರಿಸಿದರು. ಕೆಪಿಸಿಸಿ ಸಾಮಾಜಿಕ ಜಾಲತಾಣದ ತಾಲೂಕು ಅಧ್ಯಕ್ಷ ಸದಾಶಿವಮೂರ್ತಿ, ಉಪಾಧ್ಯಕ್ಷ ವಿನೋದ್, ಗ್ರಾಮಾಂತರ ಕಾರ್ಯದರ್ಶಿ ಹೇಮಾ ನಾಯಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Monday, August 30, 2021

ಕಟ್ಟಡ ಕಾರ್ಮಿಕರು ಕಡ್ಡಾಯವಾಗಿ ಗುರುತಿನ ಚೀಟಿ ಪಡೆಯಿರಿ : ಬಿ.ಕೆ ಮೋಹನ್

ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮದ ಸಮುದಾಯ ಭವನದಲ್ಲಿ ಕರ್ನಾಟಕ ಸ್ಟೇಟ್ ಕನ್ಸ್‌ಸ್ಟ್ರಕ್ಷನ್ ಸೆಂಟ್ರಲ್ ಯೂನಿಯನ್ ವತಿಯಿಂದ ಕೂಡ್ಲಿಗೆರೆ ಹಾಗು ಹರಳಿಹಳ್ಳಿ ಗ್ರಾಮದ ವ್ಯಾಪ್ತಿಯ ಕಟ್ಟಡ ಕಾರ್ಮಿಕರಿಗೆ ದಿನಸಿ ಸಾಮಗ್ರಿ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.  
    ಭದ್ರಾವತಿ, ಆ. ೩೦: ಕಟ್ಟಡ ಕಾರ್ಮಿಕರು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು ಕಡ್ಡಾಯವಾಗಿ ಗುರುತಿನ ಚೀಟಿ ಮಾಡಿಸಿಕೊಳ್ಳಬೇಕೆಂದು ನಗರಸಭಾ ಸದಸ್ಯ ಬಿ.ಕೆ ಮೋಹನ್ ಹೇಳಿದರು.
    ಅವರು ತಾಲೂಕಿನ ಕೂಡ್ಲಿಗೆರೆ ಗ್ರಾಮದ ಸಮುದಾಯ ಭವನದಲ್ಲಿ ಕರ್ನಾಟಕ ಸ್ಟೇಟ್ ಕನ್ಸ್‌ಸ್ಟ್ರಕ್ಷನ್ ಸೆಂಟ್ರಲ್ ಯೂನಿಯನ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕೂಡ್ಲಿಗೆರೆ ಹಾಗು ಹರಳಿಹಳ್ಳಿ ಗ್ರಾಮದ ವ್ಯಾಪ್ತಿಯ ಕಟ್ಟಡ ಕಾರ್ಮಿಕರಿಗೆ ದಿನಸಿ ಸಾಮಗ್ರಿ ವಿತರಿಸಿ ಮಾತನಾಡಿದರು.
    ಕಟ್ಟಡ ಕಾರ್ಮಿಕರು ಗುರುತಿನ ಚೀಟಿ ಹೊಂದುವುದರಿಂದ ಸಂಕಷ್ಟದ ಸಮಯದಲ್ಲಿ ಸರ್ಕಾರದ ಸೌಲಭ್ಯಗಳನ್ನು ತಕ್ಷಣ ಪಡೆದುಕೊಳ್ಳಬಹುದಾಗಿದೆ. ಅರ್ಹ ಕಾರ್ಮಿಕರು ಸೌಲಭ್ಯಗಳಿಂದ ವಂಚಿತವಾಗಬಾರದು ಎಂದರು.
    ಯೂನಿಯನ್ ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಸಂಜಯ್‌ಕುಮಾರ್, ತಾಲೂಕು ಅಧ್ಯಕ್ಷ ಚಂದ್ರಶೇಖರ್, ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ ಬಾಬು, ತಾಲೂಕು ಕಾರ್ಯಾಧ್ಯಕ್ಷ ಅಭಿಲಾಷ್, ತಾಂತ್ರಿಕ ಸಲಹೆಗಾರ ಮನೋಹರ್, ಸಂಘಟನಾ ಕಾರ್ಯದರ್ಶಿ ಕುಮಾರ್, ಉಪಾಧ್ಯಕ್ಷ ನಾಗೇಂದ್ರರೆಡ್ಡಿ, ಕೂಡ್ಲಿಗೆರೆ ಭಾಗದ ಅಧ್ಯಕ್ಷ ರುದ್ರಮುನಿ, ತಾಲೂಕು ಗ್ರಾಮಾಂತರ ಅಧ್ಯಕ್ಷ ಹಬೀಬ್, ಶಿವಣ್ಣಗೌಡ ಹಾಗು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗು ಗ್ರಾಮಸ್ಥರು ಉಪಸ್ಥಿತರಿದ್ದರು.


ನಗರಸಭೆ ವಾರ್ಡ್ ನಂ.೨೯ರ ಚುನಾವಣೆ : ೩ ಪಕ್ಷಗಳಿಂದ ಪ್ರಚಾರದ ಭರಾಟೆ

ಪಕ್ಷಗಳಿಗೆ ಗೆಲ್ಲುವ ಪ್ರತಿಷ್ಠೆ, ಉಳಿಸಿಕೊಳ್ಳುವ ತವಕ, ಅದೃಷ್ಟ ಪರೀಕ್ಷೆ


ಭದ್ರಾವತಿ ನಗರಸಭೆ ವಾಡ್ ನಂ.೨೯ರ ಚುನಾವಣೆ ಹಿನ್ನಲೆಯಲ್ಲಿ ಮತದಾರರನ್ನು ಸೆಳೆಯಲು ಮನೆ ಮನೆಗಳಿಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಗುತ್ತಿದೆ ಎಂದು ಆರೋಪಿಸಿ ೩ ಪಕ್ಷಗಳ ನಡುವೆ ಸೋಮವಾರ ಸಂಜೆ ಮಾತಿನ ಚಕಮಕಿ ನಡೆದಿದ್ದು, ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾದರು.
    ಭದ್ರಾವತಿ, ಆ. ೩೦; ನಗರಸಭೆ ವಾರ್ಡ್ ನಂ.೨೯ರ ಚುನಾವಣೆ ಪ್ರಚಾರದ ಭರಾಟೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ೩ ಪಕ್ಷಗಳು ತೀವ್ರ ಪೈಪೋಟಿಗೆ ಮುಂದಾಗಿವೆ.
    ಸೆ.೩ರಂದು ಮತದಾನ ನಡೆಯಲಿದ್ದು, ಉಳಿದಿರುವ ೨ ದಿನಗಳಲ್ಲಿ ವ್ಯಾಪಕ ಪ್ರಚಾರಕ್ಕೆ ೩ ಪಕ್ಷಗಳು ಸಿದ್ದತೆಗಳನ್ನು ಕೈಗೊಂಡಿವೆ. ಈಗಾಗಲೇ ವಾರ್ಡ್ ವ್ಯಾಪ್ತಿಯಲ್ಲಿ ೩-೪ ಸುತ್ತಿನ ಪ್ರಚಾರ ನಡೆಸಲಾಗಿದೆ.
    ಕಾಂಗ್ರೆಸ್ ಪಕ್ಷಕ್ಕೆ ಚುನಾವಣೆ ಗೆಲ್ಲುವುದು ಪ್ರತಿಷ್ಠೆಯಾಗಿದ್ದರೇ, ಜೆಡಿಎಸ್ ಪಕ್ಷಕ್ಕೆ ಉಳಿಸಿಕೊಳ್ಳುವ ತವಕ, ಈ ನಡುವೆ ಬಿಜೆಪಿ ಅದೃಷ್ಟ ಪರೀಕ್ಷೆಗೆ ಎದುರು ನೋಡುತ್ತಿದೆ. ೩ ಪಕ್ಷಗಳ ಅಭ್ಯರ್ಥಿಗಳು ಒಕ್ಕಲಿಗ ಸಮುದಾಯಕ್ಕೆ ಸೇರಿರುವ ಕಾರಣ ಚುನಾವಣೆ ಮತ್ತಷ್ಟು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.
    ಇವೆಲ್ಲದರ ನಡುವೆ ಚುನಾವಣಾ ಅಕ್ರಮಗಳು ಸಹ ಹೆಚ್ಚಾಗುತ್ತಿದ್ದು, ಮತದಾರರನ್ನು ಸೆಳೆಯಲು ನಾನಾ ರೀತಿಯ ಅಕ್ರಮಗಳನ್ನು ನಡೆಸಲಾಗುತ್ತಿದೆ ಎಂಬ ದೂರುಗಳು ಸ್ಥಳೀಯರಿಂದ ಕೇಳಿ ಬರುತ್ತಿವೆ. ಅಕ್ರಮಗಳ ವಿಚಾರಕ್ಕೆ ಸಂಬಂಧಿಸಿದಂತೆ ೩ ಪಕ್ಷಗಳು ಪರಸ್ಪರ ದೋಷಾರೋಪಣೆಗಳನ್ನು ಮಾಡುತ್ತಿವೆ. ಅಲ್ಲದೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ೩ ಪಕ್ಷಗಳ ಮುಖಂಡರ ನಡುವೆ ಮಾತಿನ ಚಕಮಕಿ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಮಾಹಿತಿ ಅರಿತು ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾದರು.

ದಲಿತ ಸಂಘರ್ಷ ಸಮಿತಿ ಮುಖಂಡರಿಂದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ


ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಶಾಖೆ ವತಿಯಿಂದ ಬಾಬಾ ಸಾಹೇಬ್ ಅಂಬೇಡ್ಕರ್‌ರವರ ೧೩೦ನೇ ಜನ್ಮದಿನ ಹಾಗು ಪ್ರೊ. ಬಿ. ಕೃಷ್ಣಪ್ಪನವರ ೮೩ನೇ ಜನ್ಮದಿನ  ಅಂಗವಾಗಿ ಸೋಮವಾರ ಶಿವಮೊಗ್ಗ ಸರ್ಕಾರಿ ನೌಕರರ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೊದಲು ನೂರಾರು ದಲಿತ ಮುಖಂಡರು, ಕಾರ್ಯಕರ್ತರು ಭದ್ರಾವತಿ ಬಿ.ಎಚ್ ರಸ್ತೆ, ಅಂಡರ್‌ಬ್ರಿಡ್ಜ್ ಬಳಿ ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
    ಭದ್ರಾವತಿ, ಆ. ೩೦: ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಶಾಖೆ ವತಿಯಿಂದ ಬಾಬಾ ಸಾಹೇಬ್ ಅಂಬೇಡ್ಕರ್‌ರವರ ೧೩೦ನೇ ಜನ್ಮದಿನ ಹಾಗು ಪ್ರೊ. ಬಿ. ಕೃಷ್ಣಪ್ಪನವರ ೮೩ನೇ ಜನ್ಮದಿನ  ಅಂಗವಾಗಿ ಸೋಮವಾರ ಶಿವಮೊಗ್ಗ ಸರ್ಕಾರಿ ನೌಕರರ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೊದಲು ನೂರಾರು ದಲಿತ ಮುಖಂಡರು, ಕಾರ್ಯಕರ್ತರು ನಗರದ ಬಿ.ಎಚ್ ರಸ್ತೆ, ಅಂಡರ್‌ಬ್ರಿಡ್ಜ್ ಬಳಿ ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
    ತಾಲೂಕು ಸಂಚಾಲಕ ರವಿನಾಯ್ಕ ಮಾತನಾಡಿ, ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿ ಡಾ. ಬಿ.ಆರ್ ಅಂಬೇಡ್ಕರ್ ಹಾಗು ಪ್ರೊ. ಬಿ. ಕೃಷ್ಣಪ್ಪನವರ ಚಿಂತನೆಗಳನ್ನು ಮೈಗೂಡಿಸಿಕೊಳ್ಳಬೇಕೆಂದು ಕರೆ ನೀಡಿದರು.
    ತಾಲೂಕು ನಗರ ಸಂಚಾಲಕ ತಮ್ಮಯ್ಯ, ಸಂಘಟನಾ ಸಂಚಾಲಕರಾದ ಶಿವಾನಾಯಕ, ಮುತ್ತು, ಅಣ್ಣಪ್ಪ, ಜೀವಾ, ನರಸಿಂಹಮೂರ್ತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.