ಮೈಸೂರಿನ ಶರಣ ವಿಶ್ವವಚನ ಫೌಂಡೇಷನ್ ವತಿಯಿಂದ ನೀಡಲಾಗುವ ರಾಜ್ಯಮಟ್ಟದ 'ಚಿನ್ಮಯಿಜ್ಞಾನಿ ಶಿಕ್ಷಕ ಪ್ರಶಸ್ತಿ'ಯನ್ನು ಈ ಬಾರಿ ಭದ್ರಾವತಿ ನಗರಸಭೆ ವ್ಯಾಪ್ತಿಯ ಕಡದಕಟ್ಟೆ ಗ್ರಾಮದ ನವಚೇತನ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಸಿ.ಎಚ್.ನಾಗೇಂದ್ರಪ್ಪ ಪಡೆದುಕೊಂಡಿದ್ದಾರೆ.
ಭದ್ರಾವತಿ: ಮೈಸೂರಿನ ಶರಣ ವಿಶ್ವವಚನ ಫೌಂಡೇಷನ್ ವತಿಯಿಂದ ನೀಡಲಾಗುವ ರಾಜ್ಯಮಟ್ಟದ 'ಚಿನ್ಮಯಿಜ್ಞಾನಿ ಶಿಕ್ಷಕ ಪ್ರಶಸ್ತಿ'ಯನ್ನು ಈ ಬಾರಿ ನಗರಸಭೆ ವ್ಯಾಪ್ತಿಯ ಕಡದಕಟ್ಟೆ ಗ್ರಾಮದ ನವಚೇತನ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಸಿ.ಎಚ್.ನಾಗೇಂದ್ರಪ್ಪ ಪಡೆದುಕೊಂಡಿದ್ದಾರೆ.
ಪ್ರತಿ ಜಿಲ್ಲೆಯಿಂದ ಒಬ್ಬರಂತೆ ರಾಜ್ಯಾದ್ಯಂತ ಸುಮಾರು ೩೨ ಸಾಧಕ ಶಿಕ್ಷಕ, ಶಿಕ್ಷಕಿಯರನ್ನು ಗುರುತಿಸಿ ಆಯ್ಕೆಮಾಡುವ ಮೂಲಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮೈಸೂರಿನ ಹೊಸಮಠದ ನಟರಾಜ ಸಭಾಭವನದಲ್ಲಿ ನಡೆದ ಸಮಾರಂಭದಲ್ಲಿ ಬೀದರ್ ಜಿಲ್ಲೆಯ ಬಸವ ಕಲ್ಯಾಣ ಅನುಭವ ಮಂಟಪದ ಡಾ. ಶ್ರೀ ಬಸವಲಿಂಗ ಪಟ್ಟದೇವರು ದಿವ್ಯ ಸಾನಿಧ್ಯ ವಹಿಸಿದ್ದರು.
ಮೈಸೂರಿನ ಹೊಸಮಠದ ಶ್ರೀ ಚಿದಾನಂದ ಸ್ವಾಮೀಜಿ, ಶರಣು ವಿಶ್ವ ವಚನ ಫೌಂಡೇಶನ್ ಸಂಸ್ಥಾಪಕ ಡಾ. ವಚನ ಕುಮಾರಸ್ವಾಮಿ, ರೂಪ ಕುಮಾರಸ್ವಾಮಿ, ವಿಶ್ರಾಂತ ಉಪ ನಿರ್ದೇಶಕ ಸ್ವಾಮಿ, ಮೈಸೂರು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಬಿ ಸೋಮೇಗೌಡ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷ ಮಾಲಂಗಿ ಸುರೇಶ್, ಮೈಸೂರು ಜಿಲ್ಲಾ ಶರಣು ವಿಶ್ವವಚನ ಫೌಂಡೇಶನ್ ಅಧ್ಯಕ್ಷ ಅನಿಲ್ ಕುಮಾರ್ ವಾಜಂತ್ರಿ ಅನಿಲ್, ಕ್ರಿಷ್ಟಿ, ಪ್ರಶಸ್ತಿ ಪುರಸ್ಕೃತ ಸಿ.ಎಚ್ ನಾಗೇಂದ್ರಪ್ಪನವರ ಅವರ ತಾಯಿ ಚಂದ್ರಮ್ಮ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.