Friday, November 19, 2021

ಕನ್ನಡ ರಾಜ್ಯೋತ್ಸವ, ನೃತ್ಯ ಸಂಭ್ರಮ : ವಿವಿಧ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪುರಸ್ಕಾರ

ಭದ್ರಾವತಿಯಲ್ಲಿ ಅಪೇಕ್ಷ ನೃತ್ಯ ಕಲಾ ವೃಂದ ಹಾಗು ಶ್ರೀ ಬಸವೇಶ್ವರ ಧರ್ಮಸಂಸ್ಥೆ ವತಿಯಿಂದ ಶಿವಮೊಗ್ಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಸಿದ್ದರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಕನ್ನಡ ರಾಜ್ಯೋತ್ಸವ ಹಾಗು ಸಂಗೀತ ನೃತ್ಯ ಸಂಭ್ರಮ, ವಿವಿಧ ಕ್ಷೇತ್ರದ ಸಾಧಕರಿಗೆ ಪುರಸ್ಕಾರ ಮತ್ತು ಸನ್ಮಾನ ಮತ್ತು ಕನ್ನಡದಲ್ಲಿ ೧೨೫ಕ್ಕೆ ೧೨೫ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಕನ್ನಡ ಕುವರ/ಕುವರಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಆನೇಕೊಪ್ಪ ಸಂಜೀವಿನಿ ಹಿರಿಯ ನಾಗರೀಕರ ಆರೈಕೆ ಕೇಂದ್ರದ ಮುಖ್ಯಸ್ಥೆ ಸವಿತಾ ಅವರಿಗೆ ಸಮಾಜ ಸೇವಾ ರತ್ನ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಭದ್ರಾವತಿ, ನ. 19: ಅಪೇಕ್ಷ ನೃತ್ಯ ಕಲಾ ವೃಂದ ಹಾಗು ಶ್ರೀ ಬಸವೇಶ್ವರ ಧರ್ಮಸಂಸ್ಥೆ ವತಿಯಿಂದ ಶಿವಮೊಗ್ಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಸಿದ್ದರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಕನ್ನಡ ರಾಜ್ಯೋತ್ಸವ ಹಾಗು ಸಂಗೀತ ನೃತ್ಯ ಸಂಭ್ರಮ, ವಿವಿಧ ಕ್ಷೇತ್ರದ ಸಾಧಕರಿಗೆ ಪುರಸ್ಕಾರ ಮತ್ತು ಸನ್ಮಾನ ಮತ್ತು ಕನ್ನಡದಲ್ಲಿ ೧೨೫ಕ್ಕೆ ೧೨೫ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಕನ್ನಡ ಕುವರ/ಕುವರಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
    ಅಪೇಕ್ಷ ನೃತ್ಯ ಕಲಾ ವೃಂದದ ಅಧ್ಯಕ್ಷೆ ಭಾರತಿ ಗೋವಿಂದಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ,  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಿದ್ದಬಸಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಚ್. ಉಮೇಶ್, ಉದ್ಯಮಿ ಬಿ.ಕೆ ಜಗನ್ನಾಥ ಹಾಗು ಶ್ರೀ ಬಸವೇಶ್ವರ ಧರ್ಮ ಸಂಸ್ಥೆ ಅಧ್ಯಕ್ಷ ಟ್ರಸ್ಟಿ ಶಿವಕುಮಾರ್ ಸೇರಿದಂತೆ ಇನ್ನಿತರರು ಕಾರ್ಯಕ್ರಮ ಉದ್ಘಾಟಿಸಿದರು.  ಅಪೇಕ್ಷ ನೃತ್ಯ ಕಲಾ ವೃಂದದ ಕಾರ್ಯದರ್ಶಿ ಅಪೇಕ್ಷ ಮಂಜುನಾಥ್ ಆಶಯ ನುಡಿಗಳನ್ನಾಡಿದರು.
    ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಮಣಿಶೇಖರ್, ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆಗಳ ರಾಜ್ಯ ಸಂಯೋಜಕ ಡಿ. ಪ್ರಭಾಕರ ಬೀರಯ್ಯ, ತುಳು ಕೂಟದ ಅಧ್ಯಕ್ಷ ಸುಧಾಕರ ಶೆಟ್ಟಿ, ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಎಲ್. ದೇವರಾಜ್, ಕರ್ನಾಟಕ ರಾಜ್ಯ ಅಲೆಮಾರಿ ದೊಂಬಿದಾಸ ಸಂಘದ ರಾಜ್ಯಾಧ್ಯಕ್ಷ ರಾಜು ಆರ್. ದೊಂಬಿದಾಸ ಮತ್ತು ಆನೇಕೊಪ್ಪ ಸಂಜೀವಿನಿ ಹಿರಿಯ ನಾಗರೀಕರ ಆರೈಕೆ ಕೇಂದ್ರದ ಮುಖ್ಯಸ್ಥೆ ಸವಿತಾ ಅವರಿಗೆ ಸಮಾಜ ಸೇವಾ ರತ್ನ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
    ಬಿಜಾಪುರ ಮಹಿಳಾ ವಿಶ್ವವಿದ್ಯಾಲಯದ ಎಮೆರಿಟರ್‍ಸ್ ಪ್ರಾಧ್ಯಾಪಕಿ ಡಾ. ವಿಜಯಾದೇವಿಗೆ ಸಾಹಿತ್ಯ ರತ್ನ, ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಹಿರಿಯ ವೈದ್ಯ ಡಾ. ಡಿ.ಎಸ್ ಶಿವಪ್ರಕಾಶ್‌ಗೆ ವೈದ್ಯಕೀಯ ರತ್ನ, ರಾಜ್ಯ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ. ಬಾಲಾಜಿಗೆ ಜಾನಪದ ಕಲಾ ಸಾಮ್ರಾಟ, ಇಂಡಿಯಾ ಬುಕ್ ಆಪ್ ರೆಕಾರ್ಡ್ ಪ್ರತಿಭಾನ್ವಿತ ಬಾಲಕಿ ಬೇಬಿ ತನಿಷಾ ಗೌಡಗೆ ಪ್ರತಿಭಾ ರತ್ನ, ಬೆಂಗಳೂರಿನ ಆಧುನಿಕ ಕೃಷಿ ತಜ್ಞ  ಕೃಷ್ಣಪ್ಪ ಗೌಡ ಪಡ್ಡಂಬೈಲ್‌ರಿಗೆ ಆಧುನಿಕ ಕೃಷಿ ಸಾಮ್ರಾಟ, ಮಂಗಳೂರಿನ ಕಾದಂಬರಿಕಾರ ಪಿ.ವಿ ಪ್ರದೀಪ್‌ಕುಮಾರ್‌ಗೆ ಕಾದಂಬರಿ ಸಾಮ್ರಾಟ, ಶಿವಮೊಗ್ಗ ಕಸ್ತೂರಬಾ ಬಾಲಕಿಯರ ಪ್ರೌಢಶಾಲೆ ಸಂಗೀತ ಶಿಕ್ಷಕಿ ಕೆ.ಎಸ್ ದಾಕ್ಷಾಯಿಣಿ ರಾಜ್‌ಕುಮಾರ್‌ಗೆ ಸಂಗೀತ ರತ್ನ, ಶಿವಮೊಗ್ಗದ ಸುಗಮ ಸಂಗೀತ ಗಾಯಕಿ ರೇವತಿ ರಾಜ್‌ಕುಮಾರ್ ಮತ್ತು ಹಿರಿಯ ಗಾಯಕ ಹರೀಶ್‌ಗೆ ಗಾಯನಶ್ರೀ, ಶಿವಮೊಗ್ಗ ಅಭಿನವ ಕಲಾ ಕೇಂದ್ರದ ನೃತ್ಯ ಶಿಕ್ಷಕಿ ವೇದಾವತಿ ಸೋಮಸುಂದರ್‌ಗೆ ನೃತ್ಯಕಲಾ ರತ್ನ ರಾಜ್ಯ ಪ್ರಶಸ್ತಿಗಳನ್ನು ನೀಡಲಾಯಿತು.
    ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಸಿ.ಕೆ ರಮೇಶ್, ಬೆಳ್ತಂಗಡಿ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಶಂಕರ್ ದೇವಾಡಿಗ, ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಎನ್.ಕೆ ಪಾಲಾಕ್ಷಪ್ಪ, ನಿವೃತ್ತ ಶಿಕ್ಷಕಿ ಮೀನಾಕ್ಷಿ ಮತ್ತು ಶಿವಮೊಗ್ಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ರಾಧಾಬಾಯಿ ಅವರಿಗೆ ಶಿಕ್ಷಣ ಸೇವಾ ರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು
    ಪ್ರಸ್ತಕ್ತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಭಾಷೆ ಕನ್ನಡದಲ್ಲಿ ೧೨೫ಕ್ಕೆ ೧೨೫ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಕನ್ನಡ ಕುವರ/ಕುವರಿ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.
    ಕಸಾಪ ಪ್ರಮುಖರಾದ ಸಿ. ಚನ್ನಪ್ಪ, ಜಿ.ಎನ್ ಸತ್ಯಮೂರ್ತಿ, ವೈ.ಕೆ ಹನುಮಂತಯ್ಯ, ಅರಳೇಹಳ್ಳಿ ಅಣ್ಣಪ್ಪ, ಸಾಹಿತಿ ಜೆ.ಎನ್ ಬಸವರಾಜಪ್ಪ, ಹಿಂದಿ ಶಿಕ್ಷಕ ನಾಗರಾಜ್ ಹಾಗು ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.


ಮತಾಂತರ ನಿಷೇಧ ಕಾಯ್ದೆ ಕೋಮುವಾದಿಗಳಿಂದ ದುರ್ಬಳಕೆ ಆತಂಕ

ಕಾಯ್ದೆ ಜಾರಿಗೊಳಿಸದಿರಲು ಕ್ರೈಸ್ತ ಸಮುದಾಯದವರಿಂದ ಪ್ರತಿಭಟನೆ : ಮನವಿ

ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸದಿರುವಂತೆ ಹಾಗು ಕ್ರೈಸ್ತ ಸಮುದಾಯದ ಚರ್ಚ್‌ಗಳು ಮತ್ತು ಧಾರ್ಮಿಕ ಸಂಘ-ಸಂಸ್ಥೆಗಳ ಗಣತಿ ನಡೆಸಬೇಕೆಂಬ ಹಿಂದುಳಿದ ವರ್ಗಗಳ ಇಲಾಖೆಯ ಆದೇಶವನ್ನು ತಕ್ಷಣ ಹಿಂಪಡೆಯಬೇಕೆಂದು ಆಗ್ರಹಿಸಿ ಶುಕ್ರವಾರ ಭದ್ರಾವತಿಯಲ್ಲಿ ತಾಲೂಕು ಕಛೇರಿ ಮುಂಭಾಗ ಅಖಿಲ ಕರ್ನಾಟಕ ಯುನೈಟೆಡ್ ಕ್ರಿಶ್ಚಿಯನ್ ಫೋರಂ ಹ್ಯೂಮನ್ ರೈಟ್ಸ್ ವತಿಯಿಂದ ವಿವಿಧ ಚರ್ಚ್‌ಗಳ ಧರ್ಮಗುರುಗಳ ನೇತೃತ್ವದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು.

    ಭದ್ರಾವತಿ, ನ. ೧೯: ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸದಿರುವಂತೆ ಹಾಗು ಕ್ರೈಸ್ತ ಸಮುದಾಯದ ಚರ್ಚ್‌ಗಳು ಮತ್ತು ಧಾರ್ಮಿಕ ಸಂಘ-ಸಂಸ್ಥೆಗಳ ಗಣತಿ ನಡೆಸಬೇಕೆಂಬ ಹಿಂದುಳಿದ ವರ್ಗಗಳ ಇಲಾಖೆಯ ಆದೇಶವನ್ನು ತಕ್ಷಣ ಹಿಂಪಡೆಯಬೇಕೆಂದು ಆಗ್ರಹಿಸಿ ಶುಕ್ರವಾರ ತಾಲೂಕು ಕಛೇರಿ ಮುಂಭಾಗ ಅಖಿಲ ಕರ್ನಾಟಕ ಯುನೈಟೆಡ್ ಕ್ರಿಶ್ಚಿಯನ್ ಫೋರಂ ಹ್ಯೂಮನ್ ರೈಟ್ಸ್ ವತಿಯಿಂದ ನಗರದ ವಿವಿಧ ಚರ್ಚ್‌ಗಳ ಧರ್ಮಗುರುಗಳ ನೇತೃತ್ವದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಲಾಯಿತು.
    ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಪ್ರಮುಖರು ಮಾತನಾಡಿ, ಸರ್ಕಾರ ಯಾವುದೋ ಒಂದೆರೆಡು ಘಟನೆಗಳನ್ನು ಆಧಾರವಾಗಿಟ್ಟುಕೊಂಡು ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸಲು ಮುಂದಾಗುತ್ತಿರುವುದನ್ನು ರಾಜ್ಯದ ಸಮಸ್ತ ಕ್ರೈಸ್ತ ಸಮುದಾಯದವರು ವಿರೋಧಿಸುತ್ತೇವೆ. ಸಂವಿಧಾನದಲ್ಲಿ ಯಾವುದೇ ಧರ್ಮ ಆಚರಿಸಲು, ಪ್ರತಿಪಾದಿಸಲು ಹಾಗು ಅದನ್ನು ಪ್ರಕಟಿಸಲು ಹಕ್ಕುಗಳನ್ನು ನೀಡಲಾಗಿದೆ. ಈಗಿರುವಾಗ ಮತಾಂತರ ನಿಷೇಧ ಕಾಯ್ಕೆ ಜಾರಿಗೆ ತರುವುದರಲ್ಲಿ ಯಾವುದೇ ಅರ್ಥವಿಲ್ಲ. ಕೆಲವು ಮತಾಂಧ ಕಿಡಿಗೇಡಿಗಳಿಂದ ಸಮಾಜದಲ್ಲಿ ಆಶಾಂತಿ ವಾತಾವರಣ ನಿರ್ಮಾಣವಾಗುತ್ತಿದ್ದು, ಈ ನಡುವೆ ವಿನಾಕಾರಣ ರಾಜ್ಯದಲ್ಲಿರುವ ಇಡೀ ಕ್ರೈಸ್ತ ಸಮುದಾಯದವರ ಮೇಲೆ ಮತಾಂತರ ಆರೋಪ ಮಾಡುತ್ತಿರುವುದು ಸರಿಯಲ್ಲ. ಒಂದು ವೇಳೆ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದಲ್ಲಿ ಇದರಿಂದ ಯಾವುದೇ ರೀತಿ ಪ್ರಯೋಜನವಾಗುತ್ತಿಲ್ಲ. ಬದಲಿಗೆ ಈ ಕಾಯ್ದೆಯನ್ನು ಕೋಮುವಾದಿಗಳು ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯವೆಸಗಲು ಬಳಸಿಕೊಳ್ಳುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ಕಾಯ್ದೆಯನ್ನು ಜಾರಿಗೊಳಿಸದಿರುವಂತೆ ಮನವಿ ಮಾಡಿದರು.  
    ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬಳಿ ಈಗಾಗಲೇ ಕ್ರೈಸ್ತ ಸಮುದಾಯಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಳು ಇವೆ. ಜನಸಂಖ್ಯೆ ಗಣತಿ ನಡೆಸಲು ಯಾವುದೇ ವಿರೋಧವಿಲ್ಲ. ಆದರೆ ಪ್ರತ್ಯೇಕವಾಗಿ ಕ್ರೈಸ್ತ ಸಮುದಾಯದ ಚರ್ಚ್‌ಗಳು ಮತ್ತು ಧಾರ್ಮಿಕ ಸಂಘ-ಸಂಸ್ಥೆಗಳ ಗಣತಿ ನಡೆಸಬೇಕೆಂಬ ಉದ್ದೇಶ ಸರಿಯಲ್ಲ. ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬಳಿ ಇರುವ ಜನಗಣತಿ ಅಂಕಿ ಅಂಶಗಳನ್ನು ಗಮನಿಸಿದಾಗ ದೇಶ ಹಾಗು ರಾಜ್ಯದಲ್ಲಿ ಕ್ರೈಸ್ತ ಸಮುದಾಯದವರು ಸ್ವಾತಂತ್ರ್ಯ ಪೂರ್ವದಿಂದಲೂ ಇಲ್ಲಿಯವರೆಗೂ ಯಾವುದೇ ರೀತಿಯ ವ್ಯತ್ಯಾಸಗಳು ಕಂಡು ಬರುತ್ತಿಲ್ಲ. ಒಂದು ವೇಳೆ ಮತಾಂತರ ನಡೆದಿದ್ದಲ್ಲಿ ಕ್ರೈಸ್ತರ ಸಂಖ್ಯೆಯಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿತ್ತು. ಇದನ್ನು ಗಮನಿಸಿದಾಗ ವಾಸ್ತವಾಂಶ ತಿಳಿದು ಬರುತ್ತದೆ. ಅಲ್ಲದೆ ದೇಶದಲ್ಲಿ, ರಾಜ್ಯದಲ್ಲಿ ಕ್ರೈಸ್ತ ಸಮುದಾಯಕ್ಕೆ ಸೇರಿದ ಲಕ್ಷಾಂತರ ಆಸ್ಪತ್ರೆಗಳು, ಶಿಕ್ಷಣ ಸಂಸ್ಥೆಗಳು ಹಾಗು ಸ್ವಯಂ ಸೇವಾ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿವೆ. ಮತಾಂತರದ ಬಗ್ಗೆ ಇದುವರೆಗೂ ಇವುಗಳಿಂದ ಸೇವೆ ಪಡೆಯುತ್ತಿರುವ ಯಾರೊಬ್ಬರ   ಆರೋಪಗಳು ಸಹ ಇರುವುದಿಲ್ಲ. ಈಗಿರುವಾಗ ಪ್ರತ್ಯೇಕವಾಗಿ  ಕ್ರೈಸ್ತ ಸಮುದಾಯದ ಚರ್ಚ್‌ಗಳು ಮತ್ತು ಧಾರ್ಮಿಕ ಸಂಘ-ಸಂಸ್ಥೆಗಳ ಗಣತಿ ನಡೆಸಬೇಕೆಂಬ ಉದ್ದೇಶ ಸರಿಯಲ್ಲ. ಈ ಹಿನ್ನಲೆಯಲ್ಲಿ ಹಿಂದುಳಿದ ವರ್ಗಗಳ ಇಲಾಖೆಯ ಆದೇಶವನ್ನು ತಕ್ಷಣ ಹಿಂಪಡೆಯಬೇಕೆಂದು ಆಗ್ರಹಿಸಿದರು.
    ನ್ಯೂಟೌನ್ ಅಮಲೋದ್ಭವಿ ಮಾತೆ ದೇವಾಲಯದ ಧರ್ಮಗುರು ಫಾ. ಲಾನ್ಸಿ ಡಿಸೋಜ, ಹಳೇನಗರದ ವೇಲಾಂಗಣಿ ಆರೋಗ್ಯ ಮಾತೆ ದೇವಾಲಯದ ಧರ್ಮ ಗುರು ಫಾ. ಸ್ಟೀವನ್ ಡೇಸಾ, ಹಿರಿಯೂರು ಧರ್ಮ ಕೇಂದ್ರದ ಫಾ. ಸಂತೋಷ್ ಪಿರೇರಾ, ಮಾವಿನಕೆರೆ ಧರ್ಮ ಕೇಂದ್ರದ ಫಾ. ವೀನಸ್, ರೆವರೆಂಡ್ ಎಸ್. ದೇವನೇಸನ್,  ನ್ಯೂಟೌನ್ ಅಮಲೋದ್ಭವಿ ಮಾತೆ ದೇವಾಲಯದ ಪಾಲನಾ ಪರಿಷತ್ ಕಾರ್ಯದರ್ಶಿ ಅಂತೋಣಿ ವಿಲ್ಸನ್,  ಗಾಂಧಿನಗರ ಕ್ಯಾಥೋಲಿಕ್ ಅಸೋಸಿಯೇಷನ್ ಅಧ್ಯಕ್ಷ ಅಂತೋಣಿ, ಯುನೈಟೆಡ್ ಕ್ರಿಶ್ವಿಯನ್ ಅಸೋಸಿಯೇಷನ್ ಅಧ್ಯಕ್ಷ ಸೆಲ್ವರಾಜ್, ನಗರಸಭಾ ಸದಸ್ಯ ಜಾಜ್,  ಮಾಜಿ ಸದಸ್ಯ ಪ್ರಾನ್ಸಿಸ್, ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್ ಸೇರಿದಂತೆ ವಿವಿಧ ಚರ್ಚ್‌ಗಳ ಧರ್ಮಗುರುಗಳು, ಕ್ರೈಸ್ತ ಸಮುದಾಯದ ವಿವಿಧ ಸಂಘಟನೆಗಳ ಪ್ರಮುಖರು, ಮಹಿಳಾ ಪ್ರಮುಖರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. ಮನವಿಯನ್ನು ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಲಾಯಿತು.

Thursday, November 18, 2021

ಗ್ರೇಸಿ ಆಲ್ವಿನ್ ಕ್ರಾಸ್ಟಾ ನಿಧನ

ಗ್ರೇಸಿ ಆಲ್ವಿನ್ ಕ್ರಾಸ್ಟಾ
ಭದ್ರಾವತಿ: ನಗರದ ಬೊಮ್ಮನಕಟ್ಟೆ ನಿವಾಸಿ ಗ್ರೇಸಿ ಆಲ್ವಿನ್ ಕ್ರಾಸ್ಟಾ (೫೬) ಗುರುವಾರ  ನಿಧನ ಹೊಂದಿದರು.
     ಪತಿ ರೋಟರಿ ಕ್ಲಬ್ ಮಾಜಿ ಅಧ್ಯಕ್ಷ, ನಿವೃತ್ತ ಇಂಜಿನಿಯರ್ ಆಲ್ವಿನ್ ಹಾಗು ೩ ಹೆಣ್ಣು ಮಕ್ಕಳನ್ನು ಹೊಂದಿದ್ದರು. ಇವರ ಅಂತ್ಯಕ್ರಿಯೆ ಬುಳ್ಳಾಪುರದ ಬೈಪಾಸ್ ರಸ್ತೆಯಲ್ಲಿರುವ ಕ್ರೈಸ್ತ ರುದ್ರಭೂಮಿಯಲ್ಲಿ ನೆರವೇರಿತು. ಕೈಸ್ತ ಸಮಾಜ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಗಣ್ಯರು ಸಂತಾಪ ಸೂಚಿಸಿದ್ದಾರೆ.


ಆರೋಗ್ಯ ಕಾಳಜಿಯಿಂದ ಸದಾ ಕಾಲ ಸದೃಢ : ಸುರಜಿತ್ ಮಿಶ್ರ

    ಭದ್ರಾವತಿ, ನ. ೧೮:  ನಾವುಗಳು ಸದಾ ಕಾಲ ಸದೃಢವಾಗಿರಲು ಆರೋಗ್ಯದ ಹೆಚ್ಚಿನ ಕಾಳಜಿ ವಹಿಸಬೇಕೆಂದು ಭಾರತೀಯ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಪ್ರಭಾರ ಕಾರ್ಯಪಾಲಕ ನಿರ್ದೇಶಕ ಸುರಜಿತ್ ಮಿಶ್ರ ಕರೆ ನೀಡಿದರು.
    ಅವರು ಅಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ತಾಲೂಕು ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಕಾರ್ಖಾನೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
    ನಮ್ಮ ಆರೋಗ್ಯದ ರಕ್ಷಣೆ ನಮ್ಮ ಜವಾಬ್ದಾರಿಯಾಗಿದ್ದು, ಪ್ರತಿಯೊಬ್ಬರು ಇದನ್ನು ಅರಿತುಕೊಂಡು ಆರೋಗ್ಯದ ಬಗ್ಗೆನಿರ್ಲಕ್ಷ್ಯತನ ವಹಿಸದೆ ಜಾಗೃತಿ ವಹಿಸಬೇಕೆಂದರು.
    ಅಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ಕಾಯಂ, ಗುತ್ತಿಗೆ ಹಾಗು ನಿವೃತ್ತ ಕಾರ್ಮಿಕರು ಮತ್ತು ಕುಟುಂಬ ವರ್ಗದವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಲವಾರು ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.
    ವಿಐಎಸ್‌ಎಲ್ ಆಸ್ಪತ್ರೆಯ ಹೆಚ್ಚುವರಿ ಮುಖ್ಯ ವ್ಯದ್ಯಾಧಿಕಾರಿ ಡಾ. ಎಂ.ವೈ ಸುರೇಶ್ ಮಾತನಾಡಿ, ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ವೈಯಕ್ತಿಕ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡಬೇಕೆಂದರು.
    ಕಾರ್ಖಾನೆಯ ಸಿಬ್ಬಂದಿ ಮತ್ತು ಆಡಳಿತ ವಿಭಾಗದ ಪ್ರಭಾರ ಮಹಾಪ್ರಬಂಧಕ ಪಿ.ಪಿ ಚಕ್ರವರ್ತಿ, ಸಾರ್ವಜನಿಕ ಸಂಪರ್ಕ ಇಲಾಖೆಯ ಮಹಾಪ್ರಬಂಧಕ ಎಲ್. ಪ್ರವೀಣ್‌ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ನೇತೃತ್ವದ ತಾಲೂಕು ಸರ್ಕಾರಿ ಆಸ್ಪತ್ರೆಯ ದಂತ ವೈದ್ಯರಾದ ಡಾ. ರಶ್ಮಿ, ಡಾ. ಮಯೂರಿ, ಸಮಾಲೋಚಕರಾದ ಶ್ರೀದೇವಿ, ಪ್ರಭಾವತಿ, ಪ್ರಯೋಗಾಲಯ ತಂತ್ರಜ್ಞ ರಘುವೀರ್, ಆಶಾ ಕಾರ್ಯಕರ್ತೆಯರಾದ ಕವಿತಾ, ನೀಲಾಂಬಿಕ, ಶಾಹೀನ್ ಮತ್ತು ಆರೋಗ್ಯ ಮೇರಿ ಅವರನ್ನೊಳಗೊಂಡ ತಂಡ ಆರೋಗ್ಯ ತಪಾಸಣೆ ನಡೆಸಿತು.
    ಮಧುಮೇಹ, ರಕ್ತದೊತ್ತಡ ಮತ್ತು ಬಾಯಿ ಕ್ಯಾನ್ಸರ್ ತಪಾಸಣೆ ನಡೆಸಲಾಯಿತು. ಶಿಬಿರದಲ್ಲಿ ಸುಮಾರು ೨೭೦ ಮಂದಿ ಪಾಲ್ಗೊಂಡು ಆರೋಗ್ಯ ತಪಾಸಣೆ ಸದುಪಯೋಗ ಪಡೆದುಕೊಂಡರು.



ಅಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಭದ್ರಾವತಿಯಲ್ಲಿ ತಾಲೂಕು ಆರೋಗ್ಯ ಇಲಾಖೆ ಸಹಯೋಗದೊಂದಿಗೆ ವಿಐಎಸ್‌ಎಲ್ ಕಾರ್ಖಾನೆ ವತಿಯಿಂದ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.

ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಜಿಲ್ಲಾಮಟ್ಟದ ಸ್ಪರ್ಧೆಗಳ

 ಭದ್ರಾವತಿ:  ಶಿವಮೊಗ್ಗ ಕಸ್ತೂರಬಾ ಬಾಲಿಕ ಪ್ರೌಢ ಶಾಲೆಯಲ್ಲಿ  ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಸ್ಪರ್ಧೆಗಳನ್ನು  ನ. 24 ರಂದು ಬೆಳಿಗ್ಗೆ 10 ಗಂಟೆಗೆ  ಆಯೋಜಿಸಲಾಗಿದೆ.

ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಾದ ಪ್ರಬಂಧ (ಕನ್ನಡ ಮತ್ತು ಇಂಗ್ಲೀಷ್), ಭಿತ್ತಿ ಚಿತ್ರ ಸ್ಪರ್ಧೆಗಳಲ್ಲಿ ಪ್ರಥಮ ಹಾಗೂ ದ್ವಿತೀಯಾ ಸ್ಥಾನ ಪಡೆದ ವಿದ್ಯಾರ್ಥಿಗಳು ಹಾಗೂ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು ಭಾಗವಹಿಸಲು ಆಯಾ ಶಾಲೆಗಳ ಮುಖ್ಯ ಶಿಕ್ಷಕರು ಸೂಚಿಸುವಂತೆ  ಹಾಗು ಹೆಚ್ಚಿನ ಮಾಹಿತಿಗೆ  ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಹಾಗೂ ತಾಲೂಕು ನೋಡಲ್ ಅಧಿಕಾರಿ ನವೀದ್ ಅಹಮದ್ ಪರ್ವೀಜ್,  ದೂರವಾಣಿ ಸಂ : 9886214160 ಇವರನ್ನು ಸಂಪರ್ಕಿಸುವಂತೆ  ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರ್ ತಿಳಿಸಿದ್ದಾರೆ.

ಮನೆಗೊಂದು ಸಸಿ, ಸುತ್ತಮುತ್ತಲ ಪರಿಸರ ಹಸಿರಾಗಿಸೋಣ : ಶೃತಿ ವಸಂತ್

ಭದ್ರಾವತಿ ನಗರಸಭೆ ವಾರ್ಡ್ ನಂ.೨೫ರ ಭಂಡಾರಹಳ್ಳಿ ಕಡದಕಟ್ಟೆ ಎಸ್‌ವಿಎಸ್ ಶಾಲೆ ಮುಂಭಾಗದಲ್ಲಿರುವ ನಾಗಮ್ಮ ಬಡಾವಣೆ ನಗರಸಭೆ ಉದ್ಯಾನವನದಲ್ಲಿ ಅರಣ್ಯ ಇಲಾಖೆ ಸಹಕಾರದೊಂದಿಗೆ ಜಮಾಅತೆ ಇಸ್ಲಾಮೀ ಹಿಂದ್, ತಾಲೂಕು ಕಟ್ಟಡ ಕಾರ್ಮಿಕರ ಸಂಘ, ಎಸ್‌ವಿಎಸ್ ಶಾಲೆ ಮತ್ತು ಕುಂಚ ಕಲಾವಿದರ ಸಂಘದ ವತಿಯಿಂದ ಗುರುವಾರ ವನಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
    ಭದ್ರಾವತಿ, ನ. ೧೮: ಮನೆಗೊಂದು ಸಸಿ ನೆಡುವ ಮೂಲಕ ನಮ್ಮ ಸುತ್ತಮುತ್ತಲ ಪರಿಸರವನ್ನು ಹಸಿರಾಗಿಸುವ ನಿಟ್ಟಿನಲ್ಲಿ ಗಮನ ಹರಿಸೋಣ ಎಂದು ನಗರಸಭಾ ಸದಸ್ಯೆ ಶೃತಿ ವಸಂತ್ ಹೇಳಿದರು.
    ಅವರು ಗುರುವಾರ ವಾರ್ಡ್ ನಂ.೨೫ರ ಭಂಡಾರಹಳ್ಳಿ ಕಡದಕಟ್ಟೆ ಎಸ್‌ವಿಎಸ್ ಶಾಲೆ ಮುಂಭಾಗದಲ್ಲಿರುವ ನಾಗಮ್ಮ ಬಡಾವಣೆ ನಗರಸಭೆ ಉದ್ಯಾನವನದಲ್ಲಿ ಅರಣ್ಯ ಇಲಾಖೆ ಸಹಕಾರದೊಂದಿಗೆ ಜಮಾಅತೆ ಇಸ್ಲಾಮೀ ಹಿಂದ್, ತಾಲೂಕು ಕಟ್ಟಡ ಕಾರ್ಮಿಕರ ಸಂಘ, ಎಸ್‌ವಿಎಸ್ ಶಾಲೆ ಮತ್ತು ಕುಂಚ ಕಲಾವಿದರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವನ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಪರಿಸರವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ವನಮಹೋತ್ಸವ ಹೆಚ್ಚು ಸಹಕಾರಿಯಾಗಿದ್ದು, ದೇಶದಲ್ಲಿ ವನ ಮಹೋತ್ಸವ ಮಹತ್ವ ಅರಿತುಕೊಂಡು ೧೯೫೦ರಿಂದ ನಿರಂತರವಾಗಿ ವನ ಮಹೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರದ ವಿವಿಧ ಸ್ಥಳೀಯ ಸಂಸ್ಥೆಗಳು, ಖಾಸಗಿ ಸಂಘ-ಸಂಸ್ಥೆಗಳು, ಶಾಲಾ-ಕಾಲೇಜುಗಳು ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿವೆ. ಪ್ರತಿಯೊಬ್ಬರು ವನ ಮಹೋತ್ಸವ ಮಹತ್ವ ಅರಿತು ಖಾಲಿ ಇರುವ ಜಾಗಗಳಲ್ಲಿ ಮನೆಗೊಂದು ಸಸಿ ಎಂಬ ಪರಿಕಲ್ಪನೆಯೊಂದಿಗೆ ಸಸಿಗಳನ್ನು ನೆಡುವ ಮೂಲಕ ಅವುಗಳನ್ನು ಪೋಷಿಸಿ ಬೆಳೆಸಬೇಕೆಂದರು.
    ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ ಬಾಬು ಮಾತನಾಡಿ, ಮಕ್ಕಳು ದೇಶದ ಭವಿಷ್ಯದ ಪ್ರಜೆಗಳು. ಪರಿಸರ ಕಾಪಾಡಿಕೊಳ್ಳುವ ಜವಾಬ್ದಾರಿ ಹೆಚ್ಚಿನಾದ್ದಾಗಿದೆ. ಒಳ್ಳೆಯ ಶಿಕ್ಷಣ ಪಡೆಯುವ ಜೊತೆಗೆ ಒಳ್ಳೆಯ ಪರಿಸರ ನಿರ್ಮಾಣ ಮಾಡಿಕೊಳ್ಳುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಗಮನ ಹರಿಸಬೇಕೆಂದರು.
    ಎಸ್‌ವಿಎಸ್ ಶಾಲೆಯ ಸಂಸ್ಥಾಪಕ ಪ್ರಭಾಕರ್ ಮಾತನಾಡಿ, ದೆಹಲಿಯಲ್ಲಿ ಪ್ರಸ್ತುತ ಪರಿಸರ ಮಾಲಿನ್ಯ ತೀರ ಹದಗೆಟ್ಟಿದೆ. ಮಾಲಿನ್ಯ ನಿಯಂತ್ರಿಸಲು ಅಲ್ಲಿನ ಸರ್ಕಾರ ಲಾಕ್‌ಡೌನ್ ಘೋಷಿಸಿದೆ. ಭವಿಷ್ಯದಲ್ಲಿ ಈ ರೀತಿಯ ಪರಿಸ್ಥಿತಿ ರಾಜ್ಯದಲ್ಲೂ ಸಹ ಕಂಡು ಬರಬಹುದು. ಈ ಹಿನ್ನಲೆಯಲ್ಲಿ ನಾವೆಲ್ಲರೂ ಎಚ್ಚತ್ತುಕೊಳ್ಳಬೇಕಾಗಿದೆ. ಈ ಹಿನ್ನಲೆಯಲ್ಲಿ ನಮ್ಮ ಸುತ್ತಮುತ್ತ ಖಾಲಿ ಇರುವ ಸ್ಥಳಗಳಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ರಕ್ಷಣೆಗೆ ಮುಂದಾಗುವಂತೆ ಕರೆ ನೀಡಿದರು.
    ಕಾರ್ಯಕ್ರಮದಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಶಿವಮೊಗ್ಗ ವಲಯ ಸಂಚಾಲಕ ಸಲೀಮ್ ಉಮರಿ, ತಾಲೂಕು ಅಧ್ಯಕ್ಷ ಹಫೀಜ್ ರಹಮಾನ್ ಹಾಗು ಪದಾಧಿಕಾರಿಗಳು, ಕುಂಚ ಕಲಾವಿದರ ಸಂಘದ ಪದಾಧಿಕಾರಿಗಳು, ಕಟ್ಟಡ ಕಾರ್ಮಿಕರ ಸಂಘದ ತಾಲೂಕು ಅಧ್ಯಕ್ಷ ಚಂದ್ರಶೇಖರ್, ತಾಂತ್ರಿಕ ಸಲಹೆಗಾರ ಮನೋಹರ್ ಮತ್ತು ಎಸ್‌ವಿಎಸ್ ಶಾಲೆಯ ಶಿಕ್ಷಕರು ಹಾಗು ಮಕ್ಕಳು ಉಪಸ್ಥಿತರಿದ್ದರು.
    ಕಟ್ಟಡ ಕಾರ್ಮಿಕರ ಸಂಘದ ತಾಲೂಕು ಕಾರ್ಯಾಧ್ಯಕ್ಷ ಅಭಿಲಾಷ್ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.  ಕುಂಚ ಕಲಾವಿದರ ಸಂಘದ ಗುರು ವಂದಿಸಿದರು.

ಮಕ್ಕಳಿಂದಲೇ ಕಾರ್ಯಕ್ರಮ ಆಯೋಜನೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ

ಭದ್ರಾವತಿಯಲ್ಲಿ ಕಾಗದ ನಗರದ ಎಂಪಿಎಂ ಆಂಗ್ಲ ಶಾಲೆಯ ವಿದ್ಯಾರ್ಥಿಗಳು ಮಕ್ಕಳ ದಿನಾಚರಣೆ ಆಯೋಜಿಸುವ ಮೂಲಕ ಶಾಲೆಯಲ್ಲಿ ಸುಮಾರು ೧೭ ವರ್ಷಗಳಿಂದ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಕೆ.ಆರ್ ಮಹೇಶ್ ಅವರನ್ನು ಸನ್ಮಾನಸಿ ಬೀಳ್ಕೊಡುಗೆ ನೀಡಿದರು.
    ಭದ್ರಾವತಿ, ನ. ೧೮: ಶಾಲಾ ಮಕ್ಕಳೇ ಕಾರ್ಯಕ್ರಮ ಆಯೋಜಿಸಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಬೀಳ್ಕೊಡುಗೆ ನೀಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
    ಕಾಗದ ನಗರದ ಎಂಪಿಎಂ ಆಂಗ್ಲ ಶಾಲೆಯ ವಿದ್ಯಾರ್ಥಿಗಳು ಮಕ್ಕಳ ದಿನಾಚರಣೆ ಆಯೋಜಿಸುವ ಮೂಲಕ ಶಾಲೆಯಲ್ಲಿ ಸುಮಾರು ೧೭ ವರ್ಷಗಳಿಂದ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಕೆ.ಆರ್ ಮಹೇಶ್ ಅವರನ್ನು ಸನ್ಮಾನಸಿ ಬೀಳ್ಕೊಡುಗೆ ನೀಡಿದರು.
    ಎಲ್‌ಕೆಜಿಯಿಂದ ೩ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ವಿವಿಧ ವೇಷಭೂಷಣ ಸ್ಪರ್ಧೆ ಆಯೋಜಿಸಲಾಗಿತ್ತು. ವೇದಿಕೆಯಲ್ಲಿ ವಿದ್ಯಾರ್ಥಿಗಳಾದ ದೃವನಶ್ರೀ, ವರ್ಷಿತ, ಪೃಥ್ವಿ, ಸ್ಪೂರ್ತಿ, ರಜತ್ ಮತ್ತು ಆಕಾಶ್ ಉಪಸ್ಥಿತರಿದ್ದರು.
    ಶಾಲೆಯ ಪ್ರಾಂಶುಪಾಲ ಆರ್. ಸತೀಶ್, ಉಪ ಪ್ರಾಂಶುಪಾಲ ನಾಗರಾಜ್ ಪಾಲ್ಗೊಂಡಿದ್ದರು. ಅನುರಾಧ ಮತ್ತು ಮಾರುತಿ ಕುಮಾರ್ ತೀರ್ಪುಗಾರರಾಗಿ ಕರ್ತವ್ಯ ನಿರ್ವಹಿಸಿದರು. ಪರಿಣಿತಾ ಮತ್ತು ಪ್ರೇರಣಾ ಪ್ರಾರ್ಥಿಸಿ, ಬಿಂದು ನಿರೂಪಿಸಿದರು.