ಡಿ.೩೧ರ ಕರ್ನಾಟಕ ಬಂದ್ಗೆ ಬೆಂಬಲ ಇಲ್ಲ
ಕುವೆಂಪು ಜನ್ಮದಿನದ ಅಂಗವಾಗಿ ಶಿವಮೊಗ್ಗ ಕುವೆಂಪು ರಂಗಮಂದಿರದಲ್ಲಿ ಕುವೆಂಪು ಅವರ ಪ್ರತಿಮೆಗೆ ಜಯಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಡಾ. ದೀಪಕ್ ನೇತೃತ್ವದಲ್ಲಿ ಮಾಲಾರ್ಪಣೆ ಮಾಡಿದ ಸಂಘಟನೆ ಪ್ರಮುಖರು ನಂತರ ಸುದ್ದಿ ಮಾಧ್ಯಮಗಳೊಂದಿಗೆ ಮಾತನಾಡಿದರು.
ಭದ್ರಾವತಿ: ಜಯಕರ್ನಾಟಕ ಸಂಘಟನೆ ಜಿಲ್ಲಾ ಘಟಕದ ವತಿಯಿಂದ ಬುಧವಾರ ರಾಷ್ಟ್ರಕವಿ ಕುವೆಂಪು ಜನ್ಮದಿನ ಆಚರಿಸಲಾಯಿತು.
ಕುವೆಂಪು ಜನ್ಮದಿನದ ಅಂಗವಾಗಿ ಶಿವಮೊಗ್ಗ ಕುವೆಂಪು ರಂಗಮಂದಿರದಲ್ಲಿ ಕುವೆಂಪು ಅವರ ಪ್ರತಿಮೆಗೆ ಸಂಘಟನೆ ಜಿಲ್ಲಾಧ್ಯಕ್ಷ ಡಾ. ದೀಪಕ್ ನೇತೃತ್ವದಲ್ಲಿ ಮಾಲಾರ್ಪಣೆ ಮಾಡಲಾಯಿತು.
ಡಾ. ದೀಪಕ್ ಮಾತನಾಡಿ, ಸಂಘಟನೆ ಸದಾ ನಾಡು-ನುಡಿ ಹೋರಾಟಕ್ಕೆ ಬದ್ಧವಾಗಿದೆ. ಡಿ.೩೧ ರಂದು ಕರೆ ನೀಡಲಾಗಿರುವ ಕರ್ನಾಟಕ ಬಂದ್ಗೆ ಸಂಘಟನೆ ಯಾವುದೇ ರೀತಿ ಬೆಂಬಲ ನೀಡುವುದಿಲ್ಲ. ಆದರೆ ನಮ್ಮ ಹೋರಾಟ ನಿರಂತರವಾಗಿ ನಡೆಯಲಿದೆ ಎಂದರು.
ಕಾರ್ಯಾಧ್ಯಕ್ಷ ಅಬ್ದುಲ್ ರಹೀಮ್, ಪ್ರಧಾನ ಕಾರ್ಯದರ್ಶಿ ನಾಸಿರ್, ಜಿಲ್ಲಾ ಪ್ರಧಾನ ಸಂಚಾಲಕ ದಿವ್ಯರಾಜ್, ಸಂಘಟನಾ ಕಾರ್ಯದರ್ಶಿ ಶ್ರೀಕಾಂತ್, ನಗರ ಅಧ್ಯಕ್ಷ ಸಿಕಂದರ್, ಹೊಳೆಹೊನ್ನೂರು ಅಧ್ಯಕ್ಷ ಸತೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.