Wednesday, January 5, 2022

ನೂತನ ದಂಪತಿಗೆ ಶುಭ ಹಾರೈಸಿದ ಶಾಸಕ ಬಿ.ಕೆ ಸಂಗಮೇಶ್ವರ್

ಭದ್ರಾವತಿಯಲ್ಲಿ ಜರುಗಿದ ಆಕ್ಷರತೆ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್, ಉದ್ಯಮಿ ಬಿ.ಕೆ ಜಗನ್ನಾಥ, ಯುವ ಮುಖಂಡ ಬಿ.ಎಸ್ ಗಣೇಶ್ ಸೇರಿದಂತೆ ನಗರದ ಅನೇಕ ಗಣ್ಯರು ಜಹೈನುಲ್ ಅಬಿದ್(ಎಬಿಡಿ) ನೂತನ ದಂಪತಿಗೆ ಶುಭ ಹಾರೈಸಿದರು.
    ಭದ್ರಾವತಿ, ಜ. ೫: ನಗರಸಭೆ ವ್ಯಾಪ್ತಿಯ ಸೀಗೆಬಾಗಿ ಸಿ.ಎನ್ ರಸ್ತೆಯ, ಎ.ಎಸ್ ಫರ್ನಿಚರ್ ಅಬ್ದುಲ್ ರಶೀದ್ ಅವರ ಪುತ್ರ ಜಹೈನುಲ್ ಅಬಿದ್(ಎಬಿಡಿ) ವಿವಾಹ ಅರಕ್ಷತೆ ಬುಧವಾರ ಹೊಳೆಹೊನ್ನೂರು ರಸ್ತೆಯ ಅನ್ವರ್ ಕಾಲೋನಿ ಹಜರತ್ ಸೈಯದ್ ಸಾದತ್ ಮದರಸ(ದಾರುಲುಲೂಮ್)ನಲ್ಲಿ ನಡೆಯಿತು.
    ಶಾಸಕ ಬಿ.ಕೆ ಸಂಗಮೇಶ್ವರ್, ಉದ್ಯಮಿ ಬಿ.ಕೆ ಜಗನ್ನಾಥ, ಯುವ ಮುಖಂಡ ಬಿ.ಎಸ್ ಗಣೇಶ್ ಸೇರಿದಂತೆ ನಗರದ ಅನೇಕ ಗಣ್ಯರು ಪಾಲ್ಗೊಂಡು ಶುಭ ಹಾರೈಸಿದರು.
    ಅಬಿದ್ ಚಿಕ್ಕಮಗಳೂರಿನ ಅರಣ್ಯ ಗುತ್ತಿಗೆದಾರ ಪಿ.ಕೆ ಸೈಯದ್ ಆಲಿ ಅವರ ಪುತ್ರಿ ಫಾತಿಮಾ ಶಿಫಾನ ಅವರೊಂದಿಗೆ ಜ.೨ರಂದು ಚಿಕ್ಕಮಗಳೂರಿನ ಸಹಾರ ಶಾದಿ ಮಹಲ್‌ನಲ್ಲಿ ವಿವಾಹವಾಗಿದ್ದರು. ಅಬಿದ್ ಕಾಂಗ್ರೆಸ್ ಪಕ್ಷದ ಮಾಧ್ಯಮ ವಿಭಾಗದಲ್ಲಿ ಕೆಲವು ವರ್ಷಗಳಿಂದ ವೃತ್ತಿ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಜೆಎಂಎಫ್‌ಸಿ ನ್ಯಾಯಾಲಯ ಮುಂಭಾಗ ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಪ್ರತಿಭಟನೆ

೧೦ದಿನದಲ್ಲಿ ಸಮಸ್ಯೆ ಇತ್ಯರ್ಥ : ಸಾರ್ವಜನಿಕ ಕುಂದು ಕೊರತೆ ಹೋರಾಟ ಸಮಿತಿಗೆ ಭರವಸೆ


 ಕಳೆದ ಸುಮಾರು ೨-೩ ವರ್ಷಗಳಿಂದ ಭದ್ರಾವತಿ ತಾಲೂಕು ಕಛೇರಿ ರಸ್ತೆಯ ಜೆಎಂಎಫ್‌ಸಿ ನ್ಯಾಯಾಲಯದ ಮುಂಭಾಗದಲ್ಲಿ ರಸ್ತೆ ಅಗಲೀಕರಣ ಮಾಡದೆ ನಿರ್ಲಕ್ಷ್ಯವಹಿಸಲಾಗಿದೆ ಎಂದು ಆರೋಪಿಸಿ ಬುಧವಾರ ಸಾರ್ವಜನಿಕ ಕುಂದು ಕೊರತೆ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
    ಭದ್ರಾವತಿ, ಜ. ೫: ಕಳೆದ ಸುಮಾರು ೨-೩ ವರ್ಷಗಳಿಂದ ತಾಲೂಕು ಕಛೇರಿ ರಸ್ತೆಯ ಜೆಎಂಎಫ್‌ಸಿ ನ್ಯಾಯಾಲಯದ ಮುಂಭಾಗದಲ್ಲಿ ರಸ್ತೆ ಅಗಲೀಕರಣ ಮಾಡದೆ ನಿರ್ಲಕ್ಷ್ಯವಹಿಸಲಾಗಿದೆ ಎಂದು ಆರೋಪಿಸಿ ಬುಧವಾರ ಸಾರ್ವಜನಿಕ ಕುಂದು ಕೊರತೆ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
    ರಸ್ತೆ ಅಗಲೀಕರಣ ಕಾರ್ಯ ಅಪೂರ್ಣಗೊಳಿಸಲಾಗಿದ್ದು, ಈಗಾಗಲೇ ತಾಲೂಕು ಕಛೇರಿವರೆಗೂ ರಸ್ತೆ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದೆ. ಆದರೆ ನ್ಯಾಯಾಲಯದ ಮುಂಭಾಗದಲ್ಲಿ ಅಗಲೀಕರಣ ಕಾರ್ಯ ಕೈಗೊಂಡಿಲ್ಲ. ಇದರಿಂದಾಗಿ ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ, ಶಾಲಾ ಮಕ್ಕಳಿಗೆ, ಸಾರ್ವಜನಿಕರಿಗೆ ತೊಂದರೆಯಾಗಿದೆ. ಅಲ್ಲದೆ ಪ್ರತಿದಿನ ಹಲವಾರು ಅಪಘಾತಗಳು ಸಂಭವಿಸುತ್ತಿವೆ. ಈ  ಹಿನ್ನಲೆಯಲ್ಲಿ ತಕ್ಷಣ ರಸ್ತೆ ಅಗಲೀಕರಣ ಕಾರ್ಯ ಕೈಗೊಳ್ಳಬೇಕೆಂದು ಆಗ್ರಹಿಸಲಾಯಿತು.
    ಈ ಸಂಬಂಧ ಈಗಾಗಲೇ ಹಲವಾರು ಬಾರಿ ಹೋರಾಟ ನಡೆಸಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೂ ಸಹ ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ. ರಸ್ತೆ ಅಗಲೀಕರಣ ಕಾರ್ಯದಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಅಲ್ಲದೆ ಅಧಿಕಾರಿಗಳು ನಿರ್ಲಕ್ಷ್ಯತನದಿಂದ ವರ್ತಿಸುತ್ತಿದ್ದಾರೆಂದು ಆರೋಪಿಸಲಾಯಿತು.
    ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಜಗದೀಶ್ ಮತ್ತು ಸಹಾಯಕ ಅಭಿಯಂತರರಾದ ಭರ್ಮಪ್ಪ ಮತ್ತು ಸಂಪತ್ ಎದುರಾಗಿರುವ ಸಮಸ್ಯೆಗಳನ್ನು ವಿವರಿಸಿ ಶೀಘ್ರದಲ್ಲಿಯೇ ಕಾಮಗಾರಿ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಆದರೆ ಇದಕ್ಕೆ ಒಪ್ಪದ ಪ್ರತಿಭಟನಾಕಾರರು ಸ್ಥಳಕ್ಕೆ ಉಪವಿಭಾಗಾಧಿಕಾರಿಗಳು ಬಂದು ಸ್ಪಷ್ಟನೆ ನೀಡುವವರೆಗೂ ಪ್ರತಿಭಟನೆ ಮುಂದುವರೆಸುವರೆಸುವುದಾಗಿ ಎಚ್ಚರಿಸಿದರು.
    ಎ.ಸಿ ಪತ್ರ ರವಾನೆ:
    ಪ್ರತಿಭಟನಾ ಸ್ಥಳಕ್ಕೆ ಆಗಮಿಸಲು ಸಾಧ್ಯವಾಗದ ಹಿನ್ನಲೆಯಲ್ಲಿ ಉಪವಿಭಾಗಾಧಿಕಾರಿಗಳು ಲೋಕೋಪಯೋಗಿ ಇಲಾಖೆ ವಿಶೇಷ ವಿಭಾಗದ ಕಾರ್ಯಪಾಲಕ ಅಭಿಯಂತರರು ಸಲ್ಲಿಸಿರುವ ವರದಿಯನ್ನು ಕಳುಹಿಸಿಕೊಟ್ಟಿದ್ದು, ನ್ಯಾಯಾಲಯದ ಮುಂಭಾಗದಲ್ಲಿರುವ ಖಾಸಗಿ ಸ್ವತ್ತುಗಳ ಭೂಸ್ವಾಧೀನ ಪ್ರಕ್ರಿಯೆ ಇನ್ನೂ ಪೂರ್ಣಗೊಳ್ಳದ ಕಾರಣ ಅಗಲೀಕರಣ ಕಾರ್ಯ ಕೈಗೊಂಡಿಲ್ಲ ಎಂದು ಪತ್ರದಲ್ಲಿ ಸ್ಪಷ್ಟಡಿಸಿದ್ದಾರೆ.
    ಈ ನಡುವೆ ಪ್ರತಿಭಟನಾ ಸ್ಥಳದಲ್ಲಿ ಹಾಜರಿದ್ದ ಇಲಾಖೆ ಅಧಿಕಾರಿಗಳು ಮುಂದಿನ ೧೦ ದಿನಗಳಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.
    ಸಮಿತಿ ಅಧ್ಯಕ್ಷ, ನಗರಸಭೆ ಮಾಜಿ ಸದಸ್ಯ ಬಾಲಕೃಷ್ಣ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಡಿಎಸ್‌ಎಸ್ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ, ಪ್ರಗತಿಪರ ಸಂಘಟನೆಯ ಸುರೇಶ್, ಹಿರಿಯ ಕಾಂಗ್ರೆಸ್ ಮುಖಂಡ ಟಿ.ವಿ ಗೋವಿಂದಸ್ವಾಮಿ, ನಗರಸಭಾ ಸದಸ್ಯ ಕಾಂತರಾಜ್, ಪ್ರಮುಖರಾದ ಮಾದಿಗ ಸಮಾಜದ ರಾಜ್ಯಾಧ್ಯಕ್ಷ ಎಸ್. ಮಂಜುನಾಥ್, ಡಿಎಸ್‌ಎಸ್ ಮುಖಂಡರಾದ ಚಿನ್ನಯ್ಯ, ಕೆ. ರಂಗನಾಥ್, ಕೆ. ಮಂಜುನಾಥ್, ವಿಲ್ಸನ್ ಬಾಬು, ಕೃಷ್ಣನಾಯ್ಕ, ಅಂತೋಣಿ ವಿಲ್ಸನ್, ಬಿ. ಗಂಗಾಧರ ಸೇರಿದಂತೆ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Tuesday, January 4, 2022

ಎಎಪಿ ಪುನರ್ ಸಂಘಟನೆ : ಹಂಗಾಮಿ ಸಮಿತಿ ರಚನೆ

ಸಂಚಾಲಕಾಗಿ ಅಬ್ದುಲ್ ಖದೀರ್ ನೇಮಕ

ಭದ್ರಾವತಿಯಲ್ಲಿ ಜರುಗಿದ ಆಮ್ ಆದ್ಮಿ ಪಾರ್ಟಿ ನಗರ ಕಾರ್ಯಕರ್ತರ ಸಭೆಯಲ್ಲಿ ನೂತನ ಸಂಘಟನಾ ಸಂಚಾಲಕ ಮನೋಹರ ಗೌಡ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಜ. ೪: ದೆಹಲಿ ಮೂಲಕ ಹಂತ ಹಂತವಾಗಿ ದೇಶದ ಇತರೆ ರಾಜ್ಯಗಳಿಗೂ ವಿಸ್ತರಿಸಿಕೊಳ್ಳುತ್ತಿರುವ ಆಮ್ ಆದ್ಮಿ ಪಾರ್ಟಿ ಇದೀಗ ತಾಲೂಕಿನಲ್ಲಿ ಪಕ್ಷವನ್ನು ಪುನರ್ ಸಂಘಟಿಸಲು ಮುಂದಾಗಿದ್ದು, ಪ್ರಸ್ತುತ ೫ ಜನರ ನೂತನ ಹಂಗಾಮಿ ಸಮಿತಿ ರಚಿಸಲಾಗಿದೆ.
    ಜಿಲ್ಲಾ ಸಂಘಟನಾ ಸಂಚಾಲಕ ಮನೋಹರ ಗೌಡ ಅಧ್ಯಕ್ಷತೆಯಲ್ಲಿ ನಡೆದ ಪಕ್ಷದ ನಗರ ಕಾರ್ಯಕರ್ತರ ಸಭೆಯಲ್ಲಿ ಪಕ್ಷದ ಹಿರಿಯರಾದ ಪರಮೇಶ್ವರಚಾರ್, ಎಚ್. ರವಿಕುಮಾರ್, ಪೀಟರ್, ರೇಷ್ಮಬಾನು ಮತ್ತು ಅಬ್ದುಲ್ ಖದೀರ್ ಸೇರಿದಂತೆ ೫ ಜನರನ್ನೊಳಗೊಂಡ ಹಂಗಾಮಿ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಗೆ ಅಬ್ದುಲ್ ಖದೀರ್ ಅವರನ್ನು ತಾಲೂಕು ಸಂಚಾಲಕರಾಗಿ ನೇಮಕಗೊಳಿಸಲಾಗಿದೆ.
    ಸಭೆಯಲ್ಲಿ ನೂತನ ಜಿಲ್ಲಾ ಸಂಘಟನಾ ಸಂಚಾಲಕ ಮನೋಹರ ಗೌಡ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಭೆಯಲ್ಲಿ ಸುರೇಶ ಕೋಟೆಕರ್, ಅರವಿಂದ್, ಕಿರಣ್, ಲಕ್ಷ್ಮೀಶ್, ಶಶಿಧರ್, ವಿನಯ್, ರಮೇಶ್, ಬಸವಕುಮಾರ್, ಮಹಮ್ಮದ್ ಪರ್ವೀಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಶಿಕ್ಷಣ ಕ್ಷೇತ್ರಕ್ಕೆ ಸಾವಿತ್ರಿ ಬಾಯಿ ಪುಲೆ, ಜ್ಯೋತಿ ಬಾಪುಲೆ ಕೊಡುಗೆ ಅಪಾರ : ಜಗನ್ನಾಥ ಡಾಂಗೆ

ಕರ್ನಾಟಕ ದಲಿತ ನೌಕರರ ಒಕ್ಕೂಟದ ವತಿಯಿಂದ ಭದ್ರಾವತಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಅಕ್ಷರದವ್ವ ಶ್ರೀಮಾತೆ ಸಾವಿತ್ರಿ ಬಾಯಿ ಪುಲೆ ಅವರ ೧೯೧ನೇ ಜಯಂತಿ ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್ ಸೇರಿದಂತೆ ಇನ್ನಿತರರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಜ. ೪: ಶಿಕ್ಷಣ ಕ್ಷೇತ್ರಕ್ಕೆ ಸಾವಿತ್ರಿ ಬಾಯಿ ಪುಲೆ ಮತ್ತು ಜ್ಯೋತಿ ಬಾಪುಲೆ ಅವರ ಕೊಡುಗೆ ಅಪಾರವಾಗಿದ್ದು, ಈ ದಂಪತಿ ಸಾಧನೆಯನ್ನು ಯಾರು ಮರೆಯುವಂತಿಲ್ಲ ಎಂದು ಕುವೆಂಪು ವಿಶ್ವ ವಿದ್ಯಾನಿಲಯದ ಪ್ರಾಧ್ಯಾಪಕ ಜಗನ್ನಾಥ ಡಾಂಗೆ ಹೇಳಿದರು.
    ಅವರು ಕರ್ನಾಟಕ ದಲಿತ ನೌಕರರ ಒಕ್ಕೂಟದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಕ್ಷರದವ್ವ ಶ್ರೀಮಾತೆ ಸಾವಿತ್ರಿ ಬಾಯಿ ಪುಲೆ ಅವರ ೧೯೧ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಮಹಿಳೆಯರು ಮನೆಯಿಂದ ಹೊರಬರದಿರುವಂತಹ ಕಾಲಘಟ್ಟದಲ್ಲಿ ಶಿಕ್ಷಣವನ್ನು ಕಲಿತು ಶಿಕ್ಷಣದೊಂದಿಗೆ ಜ್ಞಾನದ ಮಹತ್ವವನ್ನು ತಿಳಿಸಿಕೊಟ್ಟ ಮೊದಲ ಮಹಿಳೆ ಸಾವಿತ್ರಿ ಬಾಯಿ ಪುಲೆ ಎಂಬುದನ್ನು ಎಲ್ಲರೂ ನೆನಪಿನಲ್ಲಿಟ್ಟುಕೊಳ್ಳಬೇಕು.
    ಸಾವಿತ್ರಿ ಬಾಯಿ ಪುಲೆ ಮತ್ತು ಜ್ಯೋತಿ ಬಾಪುಲೆ ಇಬ್ಬರು ಸಹ ತಮ್ಮ ಬದುಕನ್ನು ಕೇವಲ ಶಿಕ್ಷಣಕ್ಕೆ ಮೀಸಲಿಡದೆ ಜಾತಿ, ಲಿಂಗ ತಾರತಮ್ಯ ಹಾಗು ಅನಿಷ್ಟ ಪದ್ದತಿಗಳ ನಿರ್ಮೂಲನೆ ಸೇರಿದಂತೆ ಸಾಮಾಜಿಕ ಸುಧಾರಣೆಗಾಗಿ ಹೋರಾಟ ನಡೆಸಿರುವುದು ವಿಶೇಷವಾಗಿದೆ. ಪ್ರಸ್ತುತ ಈ ದಂಪತಿಯ ಆದರ್ಶತನವನ್ನು ಸಮಾಜದ ಎಲ್ಲರಿಗೂ ಮೈಗೂಡಿಸಿಕೊಳ್ಳಬೇಕಾಗಿದೆ. ಆಗ ಮಾತ್ರ ಇವರ ಜಯಂತಿ ಆಚರಣೆಗೆ ಅರ್ಥ ಬರುತ್ತದೆ ಎಂದರು.
    ತಹಸೀಲ್ದಾರ್ ಆರ್. ಪ್ರದೀಪ್ ಮಾತನಾಡಿ, ಸಾವಿತ್ರಿ ಬಾಯಿ ಪುಲೆ ಮತ್ತು ಜ್ಯೋತಿ ಬಾಪುಲೆ ಅವರು ಸಮಾಜಕ್ಕೆ ನೀಡಿರುವ ಕೊಡುಗೆಯನ್ನು ವಿಶೇಷವಾಗಿ ಸ್ಮರಿಸಿದರು.
    ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ಡಿಎಸ್‌ಎಸ್  ರಾಜ್ಯ ಖಜಾಂಚಿ ಸತ್ಯ, ಜಿಲ್ಲಾ ಸಂಚಾಲಕ ಚಿನ್ನಯ್ಯ ಸೇರಿದಂತೆ ಇನ್ನಿತರರು ಮಾತನಾಡಿದರು.
    ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ದಲಿತ ನೌಕರರ ಒಕ್ಕೂಟದ ಕಾರ್ಯಾಧ್ಯಕ್ಷ ಸಿ. ಜಯಪ್ಪ, ಡಿಎಸ್‌ಎಸ್ ತಾಲೂಕು ಸಂಚಾಲಕ ಕೆ. ರಂಗನಾಥ್, ನಗರಸಭಾ ಸದಸ್ಯ ಬಸವರಾಜ ಬಿ. ಆನೇಕೊಪ್ಪ, ಬಿಸಿಯೂಟ ನೌಕರರ ಸಂಘದ ಅಧ್ಯಕ್ಷೆ ಶಾರದಮ್ಮ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಒಕ್ಕೂಟದ ಅಧ್ಯಕ್ಷೆ ಎಸ್. ಉಮಾ ಅಧ್ಯಕ್ಷತೆ ವಹಿಸಿದ್ದರು. ಈಶ್ವರಪ್ಪ  ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಎ. ತಿಪ್ಪೇಸ್ವಾಮಿ ಸೇರಿದಂತೆ ದಲಿತ ನೌಕರರು, ಮಹಿಳೆಯರು ಪಾಲ್ಗೊಂಡಿದ್ದರು.

ಡಿ.ಕೆ ಸುರೇಶ್ ವಿರುದ್ಧ ಬಿಜೆಪಿಯಿಂದ ರಸ್ತೆ ತಡೆ ನಡೆಸಿ ಪ್ರತಿಭಟನೆ

ರಾಮನಗರದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಸಚಿವ ಡಾ. ಅಶ್ವಥ್ ನಾರಾಯಣ್ ವಿರುದ್ಧ ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಗೂಂಡಾಗಿರಿ ವರ್ತನೆ ಖಂಡಿಸಿ ಮಂಗಳವಾರ ಭದ್ರಾವತಿ ಮಾಧವಚಾರ್ ವೃತ್ತದಲ್ಲಿ ಬಿಜೆಪಿ ಮಂಡಲ ವತಿಯಿಂದ ರಸ್ತೆ ತಡೆ ಮೂಲಕ ಪ್ರತಿಭಟನೆ ನಡೆಸಲಾಯಿತು.
    ಭದ್ರಾವತಿ, ಜ. ೪: ರಾಮನಗರದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಸಚಿವ ಡಾ. ಅಶ್ವಥ್ ನಾರಾಯಣ್ ವಿರುದ್ಧ ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಗೂಂಡಾಗಿರಿ ವರ್ತನೆ ಖಂಡಿಸಿ ಮಂಗಳವಾರ ನಗರದ ಮಾಧವಚಾರ್ ವೃತ್ತದಲ್ಲಿ ಬಿಜೆಪಿ ಮಂಡಲ ವತಿಯಿಂದ ರಸ್ತೆ ತಡೆ ಮೂಲಕ ಪ್ರತಿಭಟನೆ ನಡೆಸಲಾಯಿತು.
    ಡಿ.ಕೆ ಸುರೇಶ್ ಗೂಂಡಾಗಿರಿತನದಿಂದ ವರ್ತಿಸಿರುವುದು ಅಕ್ಷಮ್ಯ ಅಪರಾಧವಾಗಿದ್ದು, ತಕ್ಷಣ ನಾಡಿನ ಜನತೆಗೆ ಕ್ಷಮೆಯಾಚಿಸಬೇಕು. ಅಲ್ಲದೆ ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುವ ಜೊತೆಗೆ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಪ್ರತಿಕೃತಿ ದಹಿಸಲಾಯಿತು.


    ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್ ನೇತೃತ್ವ ವಹಿಸಿದ್ದರು.  ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಳಾದ ಬಿ.ಕೆ.ಶ್ರೀನಾಥ್, ಜಿ. ಧರ್ಮಪ್ರಸಾದ್, ಭೋವಿ ನಿಗಮದ ನಿರ್ದೇಶಕ ಜಿ. ಆನಂದ ಕುಮಾರ್, ಹಟ್ಟಿ ಚಿನ್ನದ ಗಣಿ ಕಂಪನಿ ಆಡಳಿತ ಮಂಡಳಿ ನಿರ್ದೇಶಕ ಕೂಡ್ಲಿಗೆರೆ ಹಾಲೇಶ್, ನಗರಸಭಾ ಸದಸ್ಯರಾದ ವಿ. ಕದಿರೇಶ್, ಅನುಪಮ ಚನ್ನೆಶ್, ಮುಖಂಡರಾದ , ಎಂ. ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಚನ್ನೆಶ್, ಯುವ ಮೋರ್ಚಾ ಅಧ್ಯಕ್ಷ ವಿಜಯ್‌ರಾಜ್, ಎಸ್‌ಸಿ ಮೋರ್ಚಾ ಅಧ್ಯಕ್ಷ ಪಿ. ಗಣೇಶ್‌ರಾವ್, ರಾಜ್ಯ ಕಾರ್ಯಕಾರಿಣಿ ಸದಸ್ಯೆ  ಆರ್.ಎಸ್. ಶೋಭಾ, ಮಹಿಳಾ ಮೋರ್ಚಾಅಧ್ಯಕ್ಷೆ ಶೋಭಾ ಪಾಟೀಲ್, ಕಾರ್ಯದರ್ಶಿ ಮಂಜುಳ, ಸುಲೋಚನಾ ಪ್ರಕಾಶ್, ಅನ್ನಪೂರ್ಣ ಸಾವಂತ್, ಹೇಮಾವತಿ ಕುಟ್ಟಿ, ಉಷಾ, ಕರುಣಾಕರ, ಆಟೋ ಮೂರ್ತಿ, ಚಂದ್ರು, ಓಬಿಸಿ ಅಧ್ಯಕ್ಷ ಸುಬ್ರಮಣಿ, ಕೆ.ಆರ್ ಸತೀಶ್, ರಾಮನಾಥ ಬರ್ಗೆ, ಬಿ.ಎಸ್ ಶ್ರೀನಾಥ್ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.
    ಪ್ರತಿಭಟನೆಯಿಂದಾಗಿ ಸುಮಾರು ಅರ್ಧಗಂಟೆಗೂ ಹೆಚ್ಚು ಸಮಯ ವಾಹನ ದಟ್ಟಣೆ ಅಧಿಕಗೊಂಡು ಸಂಚಾರ ವ್ಯವಸ್ಥೆ ಅಸ್ತವ್ಯಸ್ತ ಗೊಂಡಿತ್ತು.


Monday, January 3, 2022

ಯಾವುದೇ ಭಯವಿಲ್ಲದೆ ಕಡ್ಡಾಯವಾಗಿ ಲಸಿಕೆ ಪಡೆಯಿರಿ : ಶಾಸಕ ಬಿ.ಕೆ ಸಂಗಮೇಶ್ವರ್

ಆರೋಗ್ಯ ಇಲಾಖೆ ವತಿಯಿಂದ ಶಿಕ್ಷಣ ಇಲಾಖೆ ಸಹಕಾರದೊಂದಿಗೆ ಭದ್ರಾವತಿ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ೧೫ ರಿಂದ ೧೮ ವರ್ಷದೊಳಗಿನ ಮಕ್ಕಳಿಗೆ ಕೋವಿಡ್-೧೯ ಲಸಿಕೆ ಕಾರ್ಯಕ್ರಮಕ್ಕೆ ಸೋಮವಾರ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ ನೀಡಿದರು.
    ಭದ್ರಾವತಿ, ಜ. ೩: ಕೋವಿಡ್-೧೯ ಲಸಿಕೆಯಿಂದ ಯಾವುದೇ ರೀತಿಯ ಅಡ್ಡ ಪರಿಣಾಮ ಉಂಟಾಗುವುದಿಲ್ಲ. ಮಕ್ಕಳು ಯಾವುದೇ ಭಯವಿಲ್ಲದೆ ಕಡ್ಡಾಯವಾಗಿ ಲಸಿಕೆಯನ್ನು ಪಡೆಯಬೇಕೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಮನವಿ ಮಾಡಿದರು.
    ಅವರು ಸೋಮವಾರ ಆರೋಗ್ಯ ಇಲಾಖೆ ವತಿಯಿಂದ ಶಿಕ್ಷಣ ಇಲಾಖೆ ಸಹಕಾರದೊಂದಿಗೆ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ೧೫ ರಿಂದ ೧೮ ವರ್ಷದೊಳಗಿನ ಮಕ್ಕಳಿಗೆ ಕೋವಿಡ್-೧೯ ಲಸಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಪ್ರತಿಯೊಬ್ಬರಿಗೂ ಆರೋಗ್ಯವೇ ಮುಖ್ಯ. ಎಲ್ಲರೂ ತಮ್ಮ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಕೆಲವರು ಕೋವಿಡ್ ಲಸಿಕೆ ಕುರಿತು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದು, ಇವುಗಳಿಗೆ ಮಕ್ಕಳು ಕಿವಿ ಕೊಡಬಾರದು. ದೇಶದಲ್ಲಿ ಕೋಟ್ಯಾಂತರ ಜನರು ಲಸಿಕೆ ಪಡೆದುಕೊಂಡಿದ್ದಾರೆ. ಬಹುತೇಕ ಜನರು ಲಸಿಕೆ ಪಡೆದುಕೊಂಡಿರುವ ಪರಿಣಾಮ ಸೋಂಕಿನ ಪರಿಣಾಮ ಇಳಿಮುಖವಾಗಿದೆ. ಈ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡು ಮಕ್ಕಳು ಲಸಿಕೆ ಪಡೆದುಕೊಳ್ಳಬೇಕೆಂದರು.
    ತಹಸೀಲ್ದಾರ್ ಆರ್. ಪ್ರದೀಪ್, ನಗರಸಭೆ ಅಧ್ಯಕ್ಷೆ ಗೀತಾರಾಜ್‌ಕುಮಾರ್, ಸದಸ್ಯೆ ಶಶಿಕಲಾ ನಾರಾಯಣಪ್ಪ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ವೆಂಕಟರಮಣಶೇಟ್, ಪ್ರಾಂಶುಪಾಲ ಸಿದ್ದಲಿಂಗಮೂರ್ತಿ, ಉಪ ಪ್ರಾಂಶುಪಾಲರಾದ ಶಾಂತಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿದ್ದಬಸಪ್ಪ ಹಾಗು ಆರೋಗ್ಯ ಇಲಾಖೆಯ ಆರೋಗ್ಯ ಶಿಕ್ಷಣಾಧಿಕಾರಿ ರಾಜೇಗೌಡ, ಹಿರಿಯ ಆರೋಗ್ಯ ಸಹಾಯಕರಾದ ರೇವತಿ, ಆನಂದಮೂರ್ತಿ, ಸಿಬ್ಬಂದಿಗಳಾದ ವಸಂತ, ಗ್ರೇಸಿಯಾ  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ನೆಹರುನಗರ ಆರೋಗ್ಯ ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿ ಡಾ. ಹರ್ಷಿತ್ ನೇತೃತ್ವದಲ್ಲಿ ಶೃತಿ ಮತ್ತು ಚೈತ್ರ ಮಕ್ಕಳಿಗೆ ಲಸಿಕೆ ನೀಡಿದರು. ಶಿಕ್ಷಕ ದಿವಾಕರ್ ಕಾರ್ಯಕ್ರಮ ನಿರೂಪಿಸಿದರು.
    ತಾಲೂಕಿನಲ್ಲಿ ಒಟ್ಟು ೧೦೯ ಶಾಲಾ-ಕಾಲೇಜುಗಳಲ್ಲಿ ೧೫ ರಿಂದ ೧೮ ವರ್ಷದೊಳಗಿನ ಒಟ್ಟು ೧೪,೫೯೧ ಮಕ್ಕಳಿದ್ದು, ಈ ಪೈಕಿ ಸೋಮವಾರ ೨೧೧೧ ಮಕ್ಕಳಿಗೆ ಲಸಿಕೆ ನೀಡಲಾಯಿತು. ಶಾಲಾ-ಕಾಲೇಜುಗಳ ಮಕ್ಕಳಿಗೆ ಲಸಿಕೆ ನೀಡಿಕೆ ನಂತರ ಶಾಲೆಯಿಂದ ಹೊರಗುಳಿದಿರುವ ಮಕ್ಕಳಿಗೆ ಲಸಿಕೆ ನೀಡುವ ಕಾರ್ಯ ನಡೆಯಲಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಗ್ರಾಮಾಂತರ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ನೂತನ ಅಧ್ಯಕ್ಷರಾಗಿ ಎಂ.ರಮೇಶ್ ನೇಮಕ

ಭದ್ರಾವತಿ ತಾಲೂಕಿನ ಶಂಕರಘಟ್ಟ ದೀನಬಂಧು ಸೇವಾ ಟ್ರಸ್ಟ್ ಅಧ್ಯಕ್ಷ ಎಂ.ರಮೇಶ್ ಬ್ಲಾಕ್ ಕಾಂಗ್ರೆಸ್‍ ಗ್ರಾಮಾಂತರ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿದ್ದು, ಶಿವಮೊಗ್ಗ ಜಿಲ್ಲಾ ಹಿಂದುಳಿದ ಘಟಕದ ಜಿಲ್ಲಾಧ್ಯಕ್ಷ ರಮೇಶ್ ಇಕ್ಕೇರಿ ನೇಮಕಾತಿ ಪತ್ರ ವಿತರಿಸಿ ಎಂ. ರಮೇಶ್‌ ಅವರನ್ನು ಅಭಿನಂದಿಸಿದರು.  
    ಭದ್ರಾವತಿ ಜ. 3: ತಾಲೂಕಿನ ಶಂಕರಘಟ್ಟ ದೀನಬಂಧು ಸೇವಾ ಟ್ರಸ್ಟ್ ಅಧ್ಯಕ್ಷ ಎಂ.ರಮೇಶ್ ಬ್ಲಾಕ್ ಕಾಂಗ್ರೆಸ್‍ ಗ್ರಾಮಾಂತರ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.  
    ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸೋಮವಾರ  ಜಿಲ್ಲಾ ಹಿಂದುಳಿದ ವರ್ಗಗಳ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾ‍ರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲಾ ಹಿಂದುಳಿದ ಘಟಕದ ಜಿಲ್ಲಾಧ್ಯಕ್ಷ ರಮೇಶ್ ಇಕ್ಕೇರಿ ನೇಮಕಾತಿ ಪತ್ರ ವಿತರಿಸಿ ಎಂ. ರಮೇಶ್‌ ಅವರನ್ನು ಅಭಿನಂದಿಸಿದರು.  
    ಈ ಸಂದರ್ಭದಲ್ಲಿ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಎಚ್.ಎಸ್‌ ಸುಂದರೇಶ್‌, ಯುವ ಮುಖಂಡ ಡಾ. ಶ್ರೀನಿವಾಸ್‌ ಕರಿಯಣ್ಣ, ಮುಖಂಡರಾದ ಸೇವಾದಳದ ವೈ.ಎಚ್‌ ನಾಗರಾಜ್‌ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ರಾಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಹಾಗು ಜರ್ನಲಿಸಂ ಪಿಜಿ ಡಿಪ್ಲೋಮಾ ಪದವಿ ಪಡೆದಿರುವ ಎಂ. ರಮೇಶ್‌ರವರು ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಹೊಂದಿದ್ದರು. ಈ ಹಿಂದೆ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಿದ್ದರು. ಅಲ್ಲದೇ ಈ ಹಿಂದಿನ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸ್ರಮ್ಮಿಶ್ರ ಸರ್ಕಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ವಿಶೇಷಾಧಿಕಾರಿ ಕರ್ತವ್ಯ ನಿ‍ರ್ವಹಿಸಿದ್ದರು. ಈ ನಡುವೆ ದೀನಬಂಧು ಸೇವಾ ಟ್ರಸ್ಟ್ ಅಧ್ಯಕ್ಷರಾಗಿ ಸಮಾಜಸೇವೆಯಲ್ಲೂ ತೊಡಗಿಸಿಕೊಂಡಿದ್ದಾರೆ.
    ಬ್ಲಾಕ್ ಕಾಂಗ್ರೆಸ್‍ ಗ್ರಾಮಾಂತರ ಹಿಂದುಳಿದ ವರ್ಗಗಳ ಘಟಕದ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಎಂ. ರಮೇಶ್‌ ಅವರಿಗೆ ಶಾಸಕ ಬಿ.ಕೆ ಸಂಗಮೇಶ್ವರ್‌ ಹಾಗು ಬ್ಲಾಕ್‌ ಕಾಂಗ್ರೆಸ್‌ ನಗರ ಮತ್ತು ಗ್ರಾಮಾಂತರ ಘಟಕಗಳ ಅಧ್ಯಕ್ಷರು, ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಜಯಕರ್ನಾಟಕ ಸಂಘಟನೆ ಜಿಲ್ಲಾ ಉಪಾಧ್ಯಕ್ಷ, ಗೋಣಿಬೀಡಿನ ತ್ಯಾಗರಾಜ್‌ ಸೇರಿದಂತೆ ಇನ್ನಿತರರು ಅಭಿನಂದಿಸಿದ್ದಾರೆ. 




ಶಾಸಕ ಬಿ.ಕೆ.ಸಂಗಮೇಶ್ವರ್ ಸಲಹೆ ಸೂಚನೆ ಮೇರೆಗೆ ನೂತನ ಜವಾಬ್ದಾರಿ ಒಪ್ಪಿಕೊಂಡಿದ್ದು, ಈಗಾಗಲೇ ಶಾಸಕರ ನೇತೃತ್ವದಲ್ಲಿ ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷ ಸದೃಢವಾಗಿದೆ. ಹಿಂದುಳಿದ ವರ್ಗಗಳ ಜನರನ್ನು ಕಾಂಗ್ರೆಸ್‌  ಪಕ್ಷದ ಮಖ್ಯವಾಹಿನಿಗೆ ತರಲು ಪ್ರಾಮಾಣಿಕವಾಗಿ ಪ್ರಯತ್ನಿಸುವ ಜೊತೆಗೆ ಪಕ್ಷವನ್ನು ಮತ್ತಷ್ಟು ಸದೃಢಗೊಳಿಸಲು ಪ್ರಯತ್ನಿಸುತ್ತೇನೆ.
 - ಎಂ.ರಮೇಶ್, ಅಧ್ಯಕ್ಷರು, ಬ್ಲಾಕ್‌ ಕಾಂಗ್ರೆಸ್‌ ಗ್ರಾಮಾಂತರ ಹಿಂದುಳಿದ ವರ್ಗಗಳ