Thursday, January 13, 2022

ಕೊರೋನಾ ೩ನೇ ಅಲೆ ನಡುವೆಯೂ ನಗರದ ವಿವಿಧ ದೇವಾಲಯಗಳಲ್ಲಿ ವಿಜೃಂಭಣೆಯಿಂದ ಜರುಗಿದ ವೈಕುಂಠ ಏಕಾದಶಿ

ಭದ್ರಾವತಿ ಬೈಪಾಸ್ ರಸ್ತೆ ಮಿಲ್ಟ್ರಿಕ್ಯಾಂಪ್‌ನಲ್ಲಿರುವ ಶ್ರೀ ಶ್ರೀನಿವಾಸ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ವೈಕುಂಠ ಏಕಾದಶಿ ಹಮ್ಮಿಕೊಳ್ಳಲಾಗಿತ್ತು.  ಆಕರ್ಷಕವಾದ ವೈಕುಂಠನಾಥನ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು.
    ಭದ್ರಾವತಿ, ಜ. ೧೩: ಕೊರೋನಾ ೩ನೇ ಅಲೆ ನಡುವೆಯೂ ನಗರದ ವಿವಿಧ ದೇವಾಲಯಗಳಲ್ಲಿ ಗುರುವಾರ ಸಂಪ್ರದಾಯದಂತೆ ಕೋವಿಡ್ ಮಾರ್ಗಸೂಚಿಗಳನ್ವಯ ವೈಕುಂಠ ಏಕಾದಶಿ ವಿಜೃಂಭಣೆಯಿಂದ ಜರುಗಿತು.
    ಮಿಲ್ಟ್ರಿಕ್ಯಾಂಪ್‌ನಲ್ಲಿ ವೈಕುಂಠ ಏಕಾದಶಿ:
    ಬೈಪಾಸ್ ರಸ್ತೆ ಮಿಲ್ಟ್ರಿಕ್ಯಾಂಪ್‌ನಲ್ಲಿರುವ ಶ್ರೀ ಶ್ರೀನಿವಾಸ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ವೈಕುಂಠ ಏಕಾದಶಿ ಹಮ್ಮಿಕೊಳ್ಳಲಾಗಿತ್ತು. ಬೆಳಿಗ್ಗೆ ೫ ಗಂಟೆಯಿಂದ ಧಾರ್ಮಿಕ ಆಚರಣೆಗಳು ಜರುಗಿದವು. ಸ್ವಾಮಿಗೆ ವಿಶೇಷ ಅಲಂಕಾರ, ವಿಶೇಷ ಪೂಜೆ ನೆರವೇರಿಸಲಾಯಿತು. ಅಲ್ಲದೆ ಈ ಬಾರಿ ವಿಶೇಷವಾಗಿ ವೈಕುಂಠನಾಥನ ದರ್ಶನದ ವ್ಯವಸ್ಥೆ ಕಲ್ಪಿಸಲಾಗಿತ್ತು.
    ಆಕರ್ಷಕವಾದ ವೈಕುಂಠನಾಥನ ದರ್ಶನ ಭಕ್ತರ ಮನಸೂರೆಗೊಂಡಿತು. ದೇವಸ್ಥಾನದ ಪ್ರಧಾನ ಅರ್ಚಕ ರವಿಕುಮಾರ್ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ಬೆಳಿಗ್ಗೆಯೇ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸ್ವಾಮಿಯ ದರ್ಶನ ಪಡೆದುಕೊಂಡರು.

ಭದ್ರಾವತಿ ಕಾಗದನಗರ ವಾರ್ಡ್ ನಂ.೭ರ ಮುಖ್ಯರಸ್ತೆಯಲ್ಲಿರುವ ಶ್ರೀಕ್ಷೇತ್ರ ನಾಗರಕಟ್ಟೆಯಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ವೈಕುಂಠ ಏಕಾದಶಿ ಹಮ್ಮಿಕೊಳ್ಳಲಾಗಿತ್ತು.

    ಶ್ರೀಕ್ಷೇತ್ರ ನಾಗರಕಟ್ಟೆಯಲ್ಲಿ ವೈಕುಂಠ ಏಕಾದಶಿ:
ಕಾಗದನಗರ ವಾರ್ಡ್ ನಂ.೭ರ ಮುಖ್ಯರಸ್ತೆಯಲ್ಲಿರುವ ಶ್ರೀಕ್ಷೇತ್ರ ನಾಗರಕಟ್ಟೆಯಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ವೈಕುಂಠ ಏಕಾದಶಿ ಹಾಗು ಸಹಸ್ರ ದೀಪೋತ್ಸವ ಹಮ್ಮಿಕೊಳ್ಳಲಾಗಿತ್ತು.
    ಬೆಳಿಗ್ಗೆ ೫.೩೦ರಿಂದ ಧಾರ್ಮಿಕ ಆಚರಣೆಗಳು ಜರುಗಿದವು. ಇಲ್ಲೂ ಸಹ ವೈಕುಂಠನಾಥನ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ನಾಗರಕಟ್ಟೆಯಲ್ಲಿ ಪ್ರತಿಷ್ಠಾಪಿಸಲಾಗಿರುವ ದೇವಾನುದೇವತೆಗಳಿಗೆ ವಿಶೇಷತೆ ಅಲಂಕಾರ ಕೈಗೊಳ್ಳಲಾಗಿತ್ತು. ದೇವಸ್ಥಾನದ ಪ್ರಧಾನ ಅರ್ಚಕ ರಮೇಶ್ ಭಟ್ಟರು ಧಾರ್ಮಿಕ ಆಚರಣೆಗಳ ನೇತೃತ್ವವಹಿಸಿದ್ದರು.


ಮುಜರಾಯಿ ಇಲಾಖೆಗೆ ಒಳಪಟ್ಟಿರುವ ಭದ್ರಾವತಿ ಹಳೇನಗರದ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ವೈಕುಂಠ ಏಕಾದಶಿ ಹಮ್ಮಿಕೊಳ್ಳಲಾಗಿತ್ತು. ಕೋವಿಡ್ ೩ನೇ ಅಲೆ ಹಿನ್ನಲೆಯಲ್ಲಿ ಸರಳವಾಗಿ ಧಾರ್ಮಿಕ ಆಚರಣೆಗಳು ಜರುಗಿದವು.
    ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ದೇವಸ್ಥಾನದಲ್ಲಿ :
    ಮುಜರಾಯಿ ಇಲಾಖೆಗೆ ಒಳಪಟ್ಟಿರುವ ಹಳೇನಗರದ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ವೈಕುಂಠ ಏಕಾದಶಿ ಜರುಗಿತು.
    ವೈಭವದ ವೈಕುಂಠ ಏಕಾದರ್ಶಿ ವೀಕ್ಷಣೆಗೆ ಪ್ರತಿ ವರ್ಷ ಸಾವಿರಾರು ಭಕ್ತಾಧಿಗಳು ಪಾಲ್ಗೊಳ್ಳುಲಿದ್ದು, ಕೋವಿಡ್-೧೯ರ ಹಿನ್ನಲೆಯಲ್ಲಿ ಕಳೆದ ೩ ವರ್ಷಗಳಿಂದ ವೈಕುಂಠ ಏಕಾದಶಿಯನ್ನು ಸಂಪ್ರದಾಯದಂತೆ ಸರಳವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಈ ಬಾರಿ ಸರಳವಾಗಿ ಧಾರ್ಮಿಕ ಆಚರಣೆಗಳು ಜರುಗಿದವು. ಉತ್ಸವ ಮೂರ್ತಿಗೆ ವಿಶೇಷ ಅಲಂಕಾರ ಕೈಗೊಂಡು ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.
    ದೇವಸ್ಥಾನ ಪ್ರಧಾನ ಅರ್ಚಕ ವೇದಬ್ರಹ್ಮ ರಂಗನಾಥ ಶರ್ಮ ಹಾಗು ಸಹಾಯಕ ಅರ್ಚಕ ಶ್ರೀನಿವಾಸ್ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು.

ಮುಜರಾಯಿ ಇಲಾಖೆಗೆ ಒಳಪಟ್ಟಿರುವ ಭದ್ರಾವತಿ ಹಳೇನಗರದ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ವೈಕುಂಠ ಏಕಾದಶಿ ಹಮ್ಮಿಕೊಳ್ಳಲಾಗಿತ್ತು. ಕೋವಿಡ್ ೩ನೇ ಅಲೆ ಹಿನ್ನಲೆಯಲ್ಲಿ ಸರಳವಾಗಿ ಧಾರ್ಮಿಕ ಆಚರಣೆಗಳು ಜರುಗಿದವು.
    ಬಾರಂದೂರು ಶ್ರೀ ಲಕ್ಷ್ಮೀ ವೆಂಕಟೇಶ್ವರ ಪದ್ಮಾವತಿ ದೇವಾಲಯದಲ್ಲಿ:
    ಬಾರಂದೂರು ಶ್ರೀ ಲಕ್ಷ್ಮೀ ವೆಂಕಟೇಶ್ವರ ಪದ್ಮಾವತಿ ದೇವಾಲಯದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ವಂದೇಮಾತಂ ಟ್ರಸ್ಟ್ ವತಿಯಿಂ ವೈಕುಂಠ ಏಕಾದಶಿ ಜರುಗಿತು.
    ಧಾರ್ಮಿಕ ಆಚರಣೆಗಳೊಂದಿಗೆ ದೇವಸ್ಥಾನದ ಮೂಲ ವಿಗ್ರಹಗಳಿಗೆ ಹಾಗು ಉತ್ಸವ ಮೂರ್ತಿಗಳಿಗೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು. ಬೆಳಗ್ಗೆಯಿಂದಲೇ ಭಕ್ತಾಧಿಗಳು ದೇವಸ್ಥಾನಕ್ಕೆ ಆಗಮಿಸಿ ಸ್ವಾಮಿಯ ದರ್ಶನ ಪಡೆದರು. ವಂದೇಮಾತರಂ ಟ್ರಸ್ಟ್‌ನ ಪ್ರಮುಖರು, ಆಯ್ಯಪ್ಪ ಸ್ವಾಮಿ ಭಕ್ತರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಏಕಾದಶಿ ಪ್ರಯುಕ್ತ ದಿನದರ್ಶಿಕೆ ಬಿಡುಗಡೆಗೊಳಿಸಲಾಯಿತು.

Wednesday, January 12, 2022

ಕೊರೋನಾ ೩ನೇ ಅಲೆ ನಡುವೆಯೂ ನಗರದ ವಿವಿಧ ದೇವಾಲಯಗಳಲ್ಲಿ ವೈಕುಂಠ ಏಕಾದಶಿಗೆ ಸಿದ್ದತೆ

ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ ಸ್ವಾಮಿಯ ದರ್ಶನ ಪಡೆಯಲು ಮನವಿ


    ಭದ್ರಾವತಿ, ಜ. ೧೨: ಕೊರೋನಾ ೩ನೇ ಅಲೆ ನಡುವೆಯೂ ನಗರದ ವಿವಿಧ ದೇವಾಲಯಗಳಲ್ಲಿ ಗುರುವಾರ ಸಂಪ್ರದಾಯದಂತೆ ಕೋವಿಡ್ ಮಾರ್ಗಸೂಚಿಗಳನ್ವಯ ವೈಕುಂಠ ಏಕಾದಶಿ ಜರುಗಲಿದೆ.
    ಮಿಲ್ಟ್ರಿಕ್ಯಾಂಪನಲ್ಲಿ ವೈಕುಂಠ ಏಕಾದಶಿ:
    ಬೈಪಾಸ್ ರಸ್ತೆ ಶ್ರೀ ಶ್ರೀನಿವಾಸ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ವೈಕುಂಠ ಏಕಾದಶಿ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ ೫ ಗಂಟೆಯಿಂದ ಧಾರ್ಮಿಕ ಆಚರಣೆಗಳು ಜರುಗಲಿವೆ. ಸ್ವಾಮಿಗೆ ವಿಶೇಷ ಅಲಂಕಾರ, ವಿಶೇಷ ಪೂಜೆ ನೆರವೇರಲಿದೆ.
        ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವ ಜೊತೆಗೆ ಶ್ರೀ ಸ್ವಾಮಿಯ ದರ್ಶನ ಪಡೆದು ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನದ ಪ್ರಧಾನ ಅರ್ಚಕ ರವಿಕುಮಾರ್ ಹಾಗು ಸೇವಾಕರ್ತ ನಾಗೇಶ್ ಕೋರಿದ್ದಾರೆ.
    ಶ್ರೀಕ್ಷೇತ್ರ ನಾಗರಕಟ್ಟೆಯಲ್ಲಿ ವೈಕುಂಠ ಏಕಾದಶಿ:
    ಕಾಗದನಗರ ವಾರ್ಡ್ ನಂ.೭ರ ಮುಖ್ಯರಸ್ತೆಯಲ್ಲಿರುವ ಶ್ರೀಕ್ಷೇತ್ರ ನಾಗರಕಟ್ಟೆಯಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ವೈಕುಂಠ ಏಕಾದಶಿ ಹಾಗು ಸಹಸ್ರ ದೀಪೋತ್ಸವ ಹಮ್ಮಿಕೊಳ್ಳಲಾಗಿದೆ.
    ಬೆಳಿಗ್ಗೆ ೫.೩೦ರಿಂದ ಧಾರ್ಮಿಕ ಆಚರಣೆಗಳು ಜರುಗಲಿದ್ದು, ಸಂಜೆ ೭ ಗಂಟೆಗೆ ಸಹಸ್ರ ದೀಪೋತ್ಸವ ಜರುಗಲಿದೆ. ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು ಭಾಗವಹಿಸಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಯಶಸ್ವಿಗೊಳಿಸುವಂತೆ ದೇವಸ್ಥಾನದ ಪ್ರಧಾನ ಅರ್ಚಕ ರಮೇಶ್ ಭಟ್ಟರು ಕೋರಿದ್ದಾರೆ.
    ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ದೇವಸ್ಥಾನದಲ್ಲಿ :
    ಮುಜರಾಯಿ ಇಲಾಖೆಗೆ ಒಳಪಟ್ಟಿರುವ ಹಳೇನಗರದ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ವೈಕುಂಠ ಏಕಾದಶಿ ಜರುಗಲಿದೆ.
    ವೈಭವದ ವೈಕುಂಠ ಏಕಾದರ್ಶಿ ವೀಕ್ಷಣೆಗೆ ಪ್ರತಿ ವರ್ಷ ಸಾವಿರಾರು ಭಕ್ತಾಧಿಗಳು ಪಾಲ್ಗೊಳ್ಳುಲಿದ್ದು, ಕೋವಿಡ್-೧೯ರ ಹಿನ್ನಲೆಯಲ್ಲಿ ಕಳೆದ ೩ ವರ್ಷಗಳಿಂದ ವೈಕುಂಠ ಏಕಾದಶಿಯನ್ನು ಸಂಪ್ರದಾಯದಂತೆ ಸರಳವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಭಕ್ತರು ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಸ್ವಾಮಿಯ ದರ್ಶನ ಪಡೆದು ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನ ಪ್ರಧಾನ ಅರ್ಚಕ ವೇದಬ್ರಹ್ಮ ರಂಗನಾಥ ಶರ್ಮ ಕೋರಿದ್ದಾರೆ.  

ಕಾಗದನಗರ ಆಂಗ್ಲಶಾಲೆಯಲ್ಲಿ ಸೈಬರ್ ಅಪರಾಧ ಕುರಿತು ಜಾಗೃತಿ ಕಾರ್ಯಕ್ರಮ


ಭದ್ರಾವತಿ ಕಾಗದನಗರ ಆಂಗ್ಲಶಾಲೆಯಲ್ಲಿ ಶಿವಮೊಗ್ಗ ಸಿಇಎನ್ ಮತ್ತು ಅಪರಾಧ ಪೊಲೀಸ್ ಠಾಣೆ ವತಿಯಿಂದ ಸೈಬರ್ ಅಪರಾಧಗಳ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
    ಭದ್ರಾವತಿ, ಜ. ೧೨: ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧಗಳು ಹೆಚ್ಚಾಗುತ್ತಿದ್ದು, ಈ ಹಿನ್ನಲೆಯಲ್ಲಿ ಸೈಬರ್ ಅಪರಾಧ ಕುರಿತು ಶಾಲಾ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಶಿವಮೊಗ್ಗ ಸಿಇಎನ್ ಮತ್ತು ಅಪರಾಧ ಪೊಲೀಸ್ ಠಾಣೆ ತೊಡಗಿಸಿಕೊಂಡಿದೆ.
    ಬುಧವಾರ ನಗರದ ಕಾಗದನಗರ ಆಂಗ್ಲ ಶಾಲೆಯಲ್ಲಿ ಠಾಣೆಯ ಇನ್ಸ್‌ಪೆಕ್ಟರ್ ಕೆ.ಟಿ ಗುರುರಾಜ್ ಮಾರ್ಗದರ್ಶನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಠಾಣೆಯ ಸಿಬ್ಬಂದಿ ನಿರ್ಮಲ ವಿದ್ಯಾರ್ಥಿಗಳಿಗೆ ಸೈಬರ್ ಅಪರಾಧಗಳ ಕುರಿತು ಮಾಹಿತಿ ನೀಡಿ ಜಾಗೃತಿ ಮೂಡಿಸಿದರು.
    ಅಲ್ಲದೆ ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ದೌರ್ಜನಗಳ ಬಗ್ಗೆವಿವರಿಸಿ ಹೆಣ್ಣು ಮಕ್ಕಳು ವಹಿಸಬೇಕಾದ ಮುನ್ನಚ್ಚರಿಕೆ ಕ್ರಮಗಳನ್ನು ತಿಳಿಸಿಕೊಟ್ಟರು. ಶಾಲೆಯ ಪ್ರಾಂಶುಪಾಲ ಆರ್. ಸತೀಶ್ ಅಧ್ಯಕ್ಷತೆ ವಹಹಿಸಿದ್ದರು. ಶಿಕ್ಷಕರಾದ ಸಿದ್ದಯ್ಯ, ಮಾರುತಿಕುಮಾರ್ ಮತ್ತು ಎಂ.ಸಿ ಗೋಪಾಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಉಪಪ್ರಾಂಶುಪಾಲ ಡಿ. ನಾಗರಾಜ್ ಸ್ವಾಗತಿಸಿದರು. ಮಮತ ವಂದಿಸಿದರು.

ಪಡಿತರ ವಿತರಣೆಯಲ್ಲಿ ಉಂಟಾಗಿರುವ ಸಮಸ್ಯೆ ಬಗೆಹರಿಸಿ, ವಿತರಕರ ಬೇಡಿಕೆಗಳನ್ನು ಈಡೇರಿಸಿ : ಟಿ. ಕೃಷ್ಣಪ್ಪ

ಭದ್ರಾವತಿ ನಗರದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸದಸ್ಯತ್ವ ನೋಂದಣಿ ಅಭಿಯಾನ ಮತ್ತು ಅಭಿನಂದನಾ ಸಮಾರಂಭವನ್ನು ಸಂಘದ ರಾಜ್ಯಾಧ್ಯಕ್ಷ ಟಿ. ಕೃಷ್ಣಪ್ಪ ಉದ್ಘಾಟಿಸಿದರು.  
    ಭದ್ರಾವತಿ, ಜ. ೧೨: ಸರ್ಕಾರ ರಾಜ್ಯದಲ್ಲಿ ಪಡಿತರ ವಿತರಣೆಯಲ್ಲಿ ಉಂಟಾಗಿರುವ ಸಮಸ್ಯೆಗಳನ್ನು ಬಗೆಹರಿಸಿ, ವಿತರಕರ ಹಲವು ಬೇಡಿಕೆಗಳನ್ನು ಈಡೇರಿಸುವ ಮೂಲಕ ಅವರ ಹಿತಕಾಪಾಡಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ಅಧ್ಯಕ್ಷ ಟಿ. ಕೃಷ್ಣಪ್ಪ ಆಗ್ರಹಿಸಿದರು.
    ಅವರು ಬುಧವಾರ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಸದಸ್ಯತ್ವ ನೋಂದಣಿ ಅಭಿಯಾನ ಮತ್ತು ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
    ರಾಜ್ಯದಲ್ಲಿ ಬಯೋಮೆಟ್ರಿಕ್ ಪದ್ದತಿಯಿಂದಾಗಿ ಪಡಿತರ ವಿತರಣೆಯಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾಗುತ್ತಿವೆ. ಪ್ರಮುಖವಾಗಿ ಸರ್ವರ್ ಸಮಸ್ಯೆ ಇದ್ದು, ಹಲವಾರು ಬಾರಿ ಈ ಕುರಿತು ಸರ್ಕಾರದ ಗಮನಕ್ಕೆ ತರಲಾಗಿದೆ. ಆದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿನ್ನಲೆಯಲ್ಲಿ ಈ ಪದ್ದತಿಯನ್ನು ರದ್ದುಪಡಿಸಿ ಈ ಹಿಂದಿನಂತೆ ಓಟಿಪಿ ಅಥವಾ ಚೆಕ್‌ಲಿಸ್ಟ್ ಪದ್ದತಿಯನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿದರು.
    ಈ ಹಿಂದಿನ ಪದ್ದತಿಯಲ್ಲಿ ಕೆಲವು ವಿತರಕರು ಅಕ್ರಮ ವೆಸಗಿದ್ದಾರೆಂದು ಇಡೀ ವಿತರಕರನ್ನು ಗುರಿಯಾಗಿಸಿಕೊಂಡು ಪದ್ದತಿಯನ್ನು ಬದಲಿಸುವುದು ಸರಿಯಾದ ಕ್ರಮವಲ್ಲ. ಬದಲಿಗೆ ಅಕ್ರಮ ವೆಸಗಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಆಗ ಎಲ್ಲವೂ ಸರಿಯಾಗುತ್ತದೆ ಎಂದರು.
    ಕೇರಳ ಸೇರಿದಂತೆ ದೇಶದ ಇತರೆ ರಾಜ್ಯಗಳಲ್ಲಿ ಪಡಿತರ ವಿತರಕರಿಗೆ ಹೆಚ್ಚಿನ ಕಮಿಷನ್ ನೀಡಲಾಗುತ್ತಿದ್ದು, ಅಲ್ಲದೆ ಪಡಿತರ ವಿತರಣೆಯೊಂದಿಗೆ ದಿನ ಬಳಕೆ ವಸ್ತುಗಳ ಮಾರಾಟಕ್ಕೂ ಅವಕಾಶ ಕಲ್ಪಿಸಿಕೊಡಲಾಗಿದೆ. ಇದೆ ಮಾದರಿಯಲ್ಲಿ ರಾಜ್ಯದಲ್ಲೂ ಅವಕಾಶ ಕಲ್ಪಿಸಿಕೊಡಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಇಂದಿನ ಸರ್ಕಾರ ವಿತರಕರಿಗೆ ನಿಗದಿತ ಸಮಯದಲ್ಲಿ ಕಮಿಷನ್ ಹಣ ಜಮಾ ಮಾಡದೆ ಬಾಕಿ ಉಳಿಸಿಕೊಂಡಿದೆ. ಕೊರೋನಾ ಸಂಕಷ್ಟದ ಸಮಯದಲ್ಲೂ ವಿತರಕರು ಯಶಸ್ವಿಯಾಗಿ ತಮ್ಮ ಕರ್ತವ್ಯವನ್ನು ನಿಭಾಯಿಸುತ್ತಿದ್ದಾರೆ. ಇದನ್ನು ಅರ್ಥ ಮಾಡಿಕೊಂಡು ತಕ್ಷಣ ಕಮಿಷನ್ ಬಾಕಿ ನೀಡಬೇಕೆಂದು ಆಗ್ರಹಿಸಿದರು.
    ಸಂಘದ ಪ್ರಮುಖರಾದ ಸಿದ್ದಲಿಂಗಯ್ಯ, ಪರಮೇಶ್ವರಪ್ಪ, ಕೆ. ಈಶ್ವರಾಚಾರಿ, ಎಸ್.ಆರ್ ನಾಗರಾಜ್, ಜವರಾಯಿ, ರಾಜೇಶ್, ಕೆ. ನಾಗರಾಜ್, ಕೆ. ಲಕ್ಷ್ಮೀಕಾಂತ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.



ಕುವಿವಿ ಸಿಂಡಿಕೇಟ್ ಸದಸ್ಯರಾಗಿ ಡಾ. ಬಿ.ಜಿ ಧನಂಜಯ

ಡಾ. ಬಿ.ಜಿ ಧನಂಜಯ
    ಭದ್ರಾವತಿ, ಜ. ೧೨: ಕುವೆಂಪು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಜಿ ಧನಂಜಯ ನಾಮನಿರ್ದೇಶನಗೊಂಡಿದ್ದಾರೆ.
    ಸೇವಾ ಜೇಷ್ಠತೆ ಹಾಗು ಸರದಿ ಆಧಾರದ ಮೇರೆಗೆ ಮುಂದಿನ ಒಂದು ವರ್ಷದ ಅವಧಿಗೆ ಅಥವಾ ವಯೋನಿವೃತ್ತಿ ದಿನಾಂಕದವರೆಗೂ ನಾಮನಿರ್ದೇಶನ ಸದಸ್ಯರಾಗಿ ನೇಮಕಗೊಳಿಸಿ ಕುಲಪತಿಗಳು ಆದೇಶ ಹೊರಡಿಸಿದ್ದಾರೆ.
    ಡಾ. ಬಿ.ಜಿ ಧನಂಜಯ ಸೇರಿದಂತೆ ಪಂಚನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪಿ.ಬಿ ರಾಜಶೇಖರ, ಶೃಂಗೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಭಾರತಿ ಮತ್ತು ಚಿಕ್ಕಮಗಳೂರು ಸರ್ಕಾರಿ ಮಹಿಳಾ ಕಾಲೇಜಿನ ಎಸ್.ಎಂ ನಟೇಶ್ ಒಟ್ಟು ೪ ಜನರನ್ನು ನಾಮನಿರ್ದೇಶನಗೊಳಿಸಲಾಗಿದೆ ಎಂದು ಕುಲಸಚಿವರು ಅಧಿಸೂಚನೆ ಹೊರಡಿಸಿದ್ದಾರೆ.

Tuesday, January 11, 2022

ಡಿಎಫ್ಒ ಕಛೇರಿ ಮುಂಭಾಗ ಕಾರು ಅಪಘಾತ


ಭದ್ರಾವತಿ : ನಗರದ ಬಿ.ಎಚ್ ರಸ್ತೆ  ಉಪಅರಣ್ಯ ಸಂರಕ್ಷಣಾಧಿಕಾರಿಯವರ ಕಛೇರಿ ಬಳಿ ಮಂಗಳವಾರ ಮಧ್ಯಾಹ್ನ ರಾತ್ರಿ ಕಾರು ಅಪಘಾತ ಸಂಭವಿಸಿದೆ.
       KA-14 ME 6537 ಕೆಂಪು ಬಣ್ಣದ  ಕಾರು ಅಪಘಾತಕ್ಕೆ ಒಳಗಾಗಿದ್ದು, ಕಾರಿನ ಮುಂಭಾಗ ಜಖಂಗೊಂಡಿದೆ.  ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಲಾಡ್ಜ್‌ಗೆ ಕರೆದೊಯ್ದು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ

ಪ್ರಕರಣ ದಾಖಲು : ಓರ್ವನ ಬಂಧನ


    ಭದ್ರಾವತಿ, ಜ. ೧೧:  ಅಪ್ರಾಪ್ತ ಬಾಲಕಿಯೊಬ್ಬಳನ್ನು ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ನಡೆಸಲಾಗಿದೆ ಎಂಬ ದೂರು ನಗರದ ಪೇಪರ್‌ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
    ಕಳೆದ ೨ ದಿನಗಳ ಹಿಂದೆ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ನಿದಿಗೆ ನಿವಾಸಿ ಉಮೇಶ್(೨೮) ಎಂಬಾತನನ್ನು ಬಂಧಿಸಲಾಗಿದೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗುತ್ತಿದೆ.
    ಬಾರಂದೂರು ಗ್ರಾಮದ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯೊಬ್ಬರ ಸುಮಾರು ೧೫ ವರ್ಷದ ಪುತ್ರಿಯನ್ನು ಶಾಲೆಗೆ ಹೋಗುವಾಗ ಮಾರ್ಗ ಮಧ್ಯದಲ್ಲಿ ತಡೆದು ತರೀಕೆರೆಗೆ ಕರೆದೊಯ್ದು ಲಾಡ್ಜ್ ಒಂದರಲ್ಲಿ ಅತ್ಯಾಚಾರ ನಡೆಸಲಾಗಿದ್ದು, ಅಲ್ಲದೆ ಈ ವಿಚಾರ ಯಾರಿಗಾದರೂ ತಿಳಿಸಿದ್ದಲ್ಲಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎಂಬ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
    ಈ ನಡುವೆ ಪೊಲೀಸರು ಬಾಲಕಿಯನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಆಪ್ತ ಸಮಾಲೋಚನೆಗೆ ಒಳಪಡಿಸಿದ್ದು, ಬಾಲಕಿಯಿಂದ ಇನ್ನೂ ಹೆಚ್ಚಿನ ಮಾಹಿತಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.