ಭದ್ರಾವತಿ ವಿಐಎಸ್ಎಲ್ ಅತಿಥಿ ಗೃಹದಲ್ಲಿ ಪಾಕಶಾಲೆಯ ನಿವೀಕರಣಗೊಂಡ ಕೊಠಡಿಯನ್ನು ಸೋಮವಾರ ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಸುರಜಿತ್ ಮಿಶ್ರಾ ಉದ್ಘಾಟಿಸಿದರು.
ಭದ್ರಾವತಿ, ಫೆ. ೭: ವಿಐಎಸ್ಎಲ್ ಅತಿಥಿ ಗೃಹದಲ್ಲಿ ಪಾಕಶಾಲೆಯ ನಿವೀಕರಣಗೊಂಡ ಕೊಠಡಿಯನ್ನು ಸೋಮವಾರ ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಸುರಜಿತ್ ಮಿಶ್ರಾ ಉದ್ಘಾಟಿಸಿದರು.
ತುಂಬಾ ಹಳೇಯದಾದ ಅತಿಥಿ ಗೃಹದಲ್ಲಿ ಶಿಥಿಲಗೊಂಡ ಕೊಠಡಿಯನ್ನು ಆಧುನಿಕ ರೀತಿಯಲ್ಲಿ ನವೀಕರಣಗೊಳಿಸಲಾಗಿದೆ. ಧಾರ್ಮಿಕ ಆಚರಣೆಯೊಂದಿಗೆ ಕೊಠಡಿಯನ್ನು ಉದ್ಘಾಟಿಸಲಾಯಿತು.
ಸಿಬ್ಬಂದಿ ಮತ್ತು ಆಡಳಿತ ವಿಭಾಗದ ಪ್ರಭಾರ ಮಹಾಪ್ರಬಂಧಕ ಪಿ.ಪಿ ಚಕ್ರವರ್ತಿ, ಅಪರೇಷನ್ ವಿಭಾಗದ ಮುಖ್ಯ ವ್ಯವಸ್ಥಾಪಕ ಕೆ.ಎಸ್ ಸುರೇಶ್, ಅತಿಥಿ ಗೃಹದ ಅಧಿಕಾರಿಗಳಾದ ಎ.ಆರ್ ವೀರಣ್ಣ, ಚಂದ್ರಕಾಂತ್, ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್ ಹಾಗು ಪದಾಧಿಕಾರಿಗಳು, ಅಧಿಕಾರಿಗಳ ಸಂಘದ ಪದಾಧಿಕಾರಿಗಳು, ಅತಿಥಿ ಗೃಹದ ಸಿಬ್ಬಂದಿಗಳಾದ ಮೋಹನ್, ಪ್ರತಾಪ್, ಪ್ರಭಾಕರ್, ವಿಲ್ಸನ್, ಆದಿನಾರಾಯಣ, ಆಸ್ಲಾಂ, ಸುರೇಶ್, ಸುಜಾತ, ಸಾವಿತ್ರಮ್ಮ, ತುಳಸಿ, ಲಕ್ಷ್ಮೀಬಾಯಿ, ರೂಪ, ಪದ್ಮಮ್ಮ ಮತ್ತು ಪಾರ್ವತಮ್ಮ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.