Monday, February 28, 2022

ವಿಜಯ್‌ಕುಮಾರ್ ವಸಂತ್ ದಂಡಿನರವರಿಗೆ ಕೆಎನ್‌ಡಿ ರತ್ನ ಬಿರುದು


ಕರ್ನಾಟಕ ಉತ್ತರ ಸಭಾ ಪ್ರಾಂತ್ಯದ ಕಾರ್ಯದರ್ಶಿ  ವಿಜಯ್‌ಕುಮಾರ್ ವಸಂತ್ ದಂಡಿನರವರಿಗೆ ಭದ್ರಾವತಿ ಸಿಎಸ್‌ಐ ಜೂಬ್ಲಿ ದೇವಾಲಯದಲ್ಲಿ ನಡೆದ ದೃಢೀಕರಣ ಆರಾಧನೆಯಲ್ಲಿ ಕೆಎನ್‌ಡಿ ರತ್ನ ಬಿರುದನ್ನು ನೀಡಿ ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಫೆ. ೨೮:  ಕರ್ನಾಟಕ ಉತ್ತರ ಸಭಾ ಪ್ರಾಂತ್ಯದ ಕಾರ್ಯದರ್ಶಿ ವಿಜಯ್‌ಕುಮಾರ್ ವಸಂತ್ ದಂಡಿನರವರಿಗೆ ನಗರದ ಸಿಎಸ್‌ಐ ಜೂಬ್ಲಿ ದೇವಾಲಯದಲ್ಲಿ ನಡೆದ ದೃಢೀಕರಣ ಆರಾಧನೆಯಲ್ಲಿ ಕೆಎನ್‌ಡಿ ರತ್ನ ಬಿರುದನ್ನು ನೀಡಿ ಸನ್ಮಾನಿಸಿ ಗೌರವಿಸಲಾಯಿತು.
    ಕರ್ನಾಟಕ ಉತ್ತರ ಸಭಾ ಪ್ರಾಂತ್ಯದಲ್ಲಿ ವಿಜಯ್‌ಕುಮಾರ್ ವಸಂತ್ ದಂಡಿನರವರು ಸಲ್ಲಿಸಿರುವ ಸೇವೆ ಹಾಗು ಅವರ ಸಾಧನೆಯನ್ನು ಗುರುತಿಸಿ ಬಿರುದನ್ನು ನೀಡಿ ಸನ್ಮಾನಿಸಲಾಗಿದೆ.
    ಪ್ರಾಂತ್ಯದ ಬಿಷಪ್ ರೈಟ್ ರೇವರೆಂಡ್ ಮಾರ್ಟೀನಿ ಸಿ ಬೋರಗೈ, ವಿಜಯ್ ಕನಕರಾಜನ್, ರೇವರೆಂಡ್‌ಗಳಾದ ಸತ್ಯಬಾಬು ಸ್ಯಾಮುಯಲ್, ಅನಿಲ್ ನಿಲುಗಲ್, ಬಾಬು, ಸ್ಟ್ಯಾಂಲಿ, ಅಬ್ರಹಾಂ ಸಂಕೇಶ್ವರ್, ಗಿಡಿಯೋನ್, ಬೋಬಿರಾಜ್ ಸೇರಿದಂತೆ ಇನ್ನಿತರರು ಸಮ್ಮುಖದಲ್ಲಿ ಸಿಎಸ್‌ಐ ತೆಲುಗು ಜೂಬ್ಲಿ ದೇವಾಲಯದ ಸಭಾ ಪಾಲಕರದ ರೇವರೆಂಡ್ ಎಸ್ತೆರ್ ಅಬ್ರಹಾಂ, ಸಭಾ ಪಾಲನ ಸಮಿತಿಯವರಾದ ಅಂಬದಪುಡಿ ಸುವರ್ಣಮ್ಮ, ಇಟ್ಟೆ ಸಂತೋಷ್ ಕುಮಾರ್, ಪಿಲ್ಲಿ ಇಸ್ರಾಲ್, ಚಾಲ್ತಿರಿ ಡ್ಯಾನಿಯಲ್ ಸೇರಿದಂತೆ ಇನ್ನಿತರರು ವಿಜಯ್‌ಕುಮಾರ್ ವಸಂತ್ ದಂಡಿನರವರಿಗೆ ಬಿರುದನ್ನು ನೀಡಿ ಸನ್ಮಾನಿಸಿ ಗೌರವಿಸಿದರು. ತೆಲುಗು ಕ್ರಿಶ್ಚಿಯನ್ ಸಮುದಾಯದವರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಸಾವಯುವ ಸಿರಿ ಯೋಜನೆ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

ಭದ್ರಾವತಿ, ಫೆ. ೨೮: ರಾಜ್ಯದಲ್ಲಿ ಹೊಸ ಸಾವಯುವ ಕೃಷಿ ಉತ್ತೇಜನಗೊಳಿಸಲು, ಜನರಿಗೆ ಆರೋಗ್ಯಕರ ಹಾಗು ರಾಸಾಯನಿಕ ಮುಕ್ತ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳನ್ನು ಒದಗಿಸಲು ಸರ್ಕಾರ ಇದೀಗ ಸಾವಯುವ ಸಿರಿ ಯೋಜನೆಯನ್ನು ಘೋಷಿಸಿದ್ದು, ಈ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕೃಷಿ ಇಲಾಖೆ ರೈತರ ಗುಂಪು ಅಥವಾ ಸಂಘ ಅಥವಾ ಒಕ್ಕೂಟಗಳಿಂದ ಅರ್ಜಿ ಆಹ್ವಾನಿಸಿದೆ.
    ಸಾರ್ವಯುವ ಕೃಷಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಹಾಗು ೧೦ ವರ್ಷಗಳ ಅನುಭವವುಳ್ಳ ಜವಾಬ್ದಾರಿಯುತ ಸ್ಥಳೀಯ ನೋಂದಾಯಿತ ಸಾವಯುವ ರೈತರ ಗುಂಪು ಅಥವಾ ಸಂಘ ಅಥವಾ ಒಕ್ಕೂಟ ಮಾ.೫ರ ಸಂಜೆ ೪ ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಸಹಾಯಕ ನಿರ್ದೇಶಕ ಬಿ.ಸಿ ಶಶಿಧರ ಕೋರಿದ್ದಾರೆ.

Sunday, February 27, 2022

ಬಿಎಸ್‌ವೈ ಹುಟ್ಟುಹಬ್ಬ : ಒಳರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ

ಭದ್ರಾವತಿಯಲ್ಲಿ ಭಾರತೀಯ ಜನತಾ ಪಕ್ಷ ತಾಲೂಕು ಮಂಡಲ ವತಿಯಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹುಟ್ಟುಹಬ್ಬದ ಅಂಗವಾಗಿ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಭಾನುವಾರ ಒಳರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ ನಡೆಯಿತು.
    ಭದ್ರಾವತಿ, ಫೆ. ೨೭: ಭಾರತೀಯ ಜನತಾ ಪಕ್ಷ ತಾಲೂಕು ಮಂಡಲ ವತಿಯಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹುಟ್ಟುಹಬ್ಬದ ಅಂಗವಾಗಿ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಭಾನುವಾರ ಒಳರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ ನಡೆಯಿತು.
    ಪ್ರತಿ ವರ್ಷ ತಾಲೂಕು ಮಂಡಲ ವತಿಯಿಂದ ಯಡಿಯೂರಪ್ಪನವರ ಹುಟ್ಟುಹಬ್ಬ ವಿಶೇಷವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಬೆಳಿಗ್ಗೆ ನಗರದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
    ಮಂಡಲ ಅಧ್ಯಕ್ಷ ಎಂ. ಪ್ರಭಾಕರ್ ನೇತೃತ್ವದಲ್ಲಿ ನಡೆದ  ಕಾರ್ಯಕ್ರಮದಲ್ಲಿ ಪ್ರಮುಖರಾದ ಬಿ.ಕೆ ಶ್ರೀನಾಥ್, ಜಿ. ಧರ್ಮಪ್ರಸಾದ್, ಎಸ್. ಕುಮಾರ್, ಎನ್. ವಿಶ್ವನಾಥರಾವ್, ಸಂಪತ್‌ರಾಜ್ ಬಾಂಟಿಯಾ, ಕರಿಗೌಡ, ಕೆ. ಮಂಜಪ್ಪ, ರಾಮ್‌ನಾಥ ಬರ್ಗೆ, ಬಿ.ಎಸ್ ಶ್ರೀನಾಥ್, ಶೋಭಾಪಾಟೀಲ್, ಹೇಮಾವತಿ, ಆರ್.ಎಸ್ ಶೋಭಾ, ಮಂಜುಳಾ, ಕವಿತಾ, ರವಿಕುಮಾರ್, ಮಂಜುನಾಥ್, ಚಂದ್ರು, ಸುಬ್ರಮಣ್ಯ, ಪಿ. ಗಣೇಶ್‌ರಾವ್, ಸೇರಿದಂತೆ ಪಕ್ಷದ ವಿವಿಧ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ತಾಲೂಕು ಮಟ್ಟದ ಷಟಲ್ ಪಂದ್ಯಾವಳಿಗೆ ಚಾಲನೆ

ಭದ್ರಾವತಿ ನಗರಸಭೆ ವ್ಯಾಪ್ತಿ ಜಟ್‌ಪಟ್ ನಗರದಲ್ಲಿರುವ ಷಟಲ್ ಒಳಾಂಗಣ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಆಯೋಜಿಸಲಾಗಿರುವ ತಾಲೂಕು ಮಟ್ಟದ ಷಟಲ್ ಪಂದ್ಯಾವಳಿಗೆ ಭಾನುವಾರ ಚಿಕ್ಕಮಗಳೂರು ಯೋಜನಾ ನಿರ್ದೇಶಕ ಮನೋಹರ್ ಷಟಲ್ ಬ್ಯಾಡ್ಮಿಂಟನ್ ಆಟವಾಡುವ ಮೂಲಕ ಚಾಲನೆ ನೀಡಿದರು.
    ಭದ್ರಾವತಿ, ಫೆ. ೨೭: ನಗರಸಭೆ ವ್ಯಾಪ್ತಿ ಜಟ್‌ಪಟ್ ನಗರದಲ್ಲಿರುವ ಷಟಲ್ ಒಳಾಂಗಣ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಆಯೋಜಿಸಲಾಗಿರುವ ತಾಲೂಕು ಮಟ್ಟದ ಷಟಲ್ ಪಂದ್ಯಾವಳಿಗೆ ಭಾನುವಾರ ಚಿಕ್ಕಮಗಳೂರು ಯೋಜನಾ ನಿರ್ದೇಶಕ ಮನೋಹರ್ ಚಾಲನೆ ನೀಡಿದರು.
    ಕ್ರೀಡಾಪಟುಗಳು, ಕ್ರೀಡಾಭಿಮಾನಿಗಳು ಮತ್ತು ನಗರಸಭಾ ಸದಸ್ಯರು ಹಾಗು ಕ್ರೀಡಾಂಗಣ ಉಸ್ತುವಾರಿ ಸಮಿತಿಯ ಪ್ರಮುಖರು ಈ ಹಿಂದೆ ನಗರಸಭೆ ಪೌರಾಯುಕ್ತರಾಗಿ ಮನೋಹರ್‌ರವರು ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಕ್ರೀಡಾಂಗಣದ ಅಭಿವೃದ್ಧಿಗಾಗಿ ಕೈಗೊಂಡ ಕಾರ್ಯವನ್ನು ಶ್ಲಾಘಿಸಿ ಅವರನ್ನು ಗೌರವಿಸುವ ಮೂಲಕ ಸನ್ಮಾನಿಸಲಾಯಿತು.
    ವಾರ್ಡ್ ವ್ಯಾಪ್ತಿಯ ನಗರಸಭಾ ಸದಸ್ಯರಾದ ಆರ್. ಶ್ರೇಯಸ್(ಚಿಟ್ಟೆ) ಮತ್ತು ಬಿ.ಎಂ ಮಂಜುನಾಥ್(ಟೀಕು) ಮುಂದಿನ ದಿನಗಳಲ್ಲಿ ಕ್ರೀಡಾಂಗಣದ ಅಭಿವೃದ್ಧಿಗೆ ಮತ್ತಷ್ಟು ಶಕ್ತಿ ಮೀರಿ ಶ್ರಮಿಸುವುದಾಗಿ ಭರವಸೆ ನೀಡಿದರು.
    ಇದೆ ಸಂದರ್ಭದಲ್ಲಿ ಒಳಾಂಗಣ ಕ್ರೀಡಾಂಗಣದಲ್ಲಿ  ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಲಾಯಿತು. ನಗರಸಭಾ ಸದಸ್ಯೆ ಅನುಪಮ ಚನ್ನೇಶ್, ಸಿದ್ದಲಿಂಗಯ್ಯ, ದೈಹಿಕ ಶಿಕ್ಷಕ ಶಿವಲಿಂಗೇಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


ಈ ಹಿಂದೆ ಭದ್ರಾವತಿ ನಗರಸಭೆ ಪೌರಾಯುಕ್ತರಾಗಿ ಮನೋಹರ್‌ರವರು ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ನಗರಸಭೆ ವ್ಯಾಪ್ತಿಯ ಜಟ್‌ಪಟ್ ನಗರದಲ್ಲಿರುವ ಷಟಲ್ ಒಳಾಂಗಣ ಕ್ರೀಡಾಂಗಣದ ಅಭಿವೃದ್ಧಿಗಾಗಿ ಕೈಗೊಂಡ ಕಾರ್ಯವನ್ನು ಶ್ಲಾಘಿಸಿ ಅವರನ್ನು ಗೌರವಿಸುವ ಮೂಲಕ ಸನ್ಮಾನಿಸಲಾಯಿತು.

ಭದ್ರಾವತಿಯಲ್ಲಿ ಪಕ್ಷದ ಶಾಸಕರಿಲ್ಲ ಎಂಬ ಕೊರಗು ನೀಗಿಸಿದ ರಾಜಕೀಯ ಮುತ್ಸದ್ದಿ ಬಿ.ಎಸ್.ವೈ

ಬಿ.ಎಸ್.ವೈ ಹುಟ್ಟುಹಬ್ಬ : ವಿಶೇಷ ಪೂಜೆ, ಬಡವರಿಗೆ ಹೊದಿಕೆ ವಿತರಣೆ


ಬಿ.ಎಸ್ ಯಡಿಯೂರಪ್ಪನವರ ಹುಟ್ಟುಹಬ್ಬದ ಅಂಗವಾಗಿ ಭಾನುವಾರ ಭದ್ರಾವತಿಯಲ್ಲಿ ಬಿ.ವೈ ರಾಘವೇಂದ್ರ ಅಭಿಮಾನಿಗಳ ಬಳಗದ ವತಿಯಿಂದ ಹೊಸಮನೆ ಹಿಂದೂ ಮಹಾಸಭಾ ಗಣಪತಿ ದೇವಸ್ಥಾನದಲ್ಲಿ  ವಿಶೇಷ ಪೂಜೆ ಹಾಗು ಬಡ ವರ್ಗದ ಅಸಹಾಯಕರಿಗೆ ಮಲಗುವ ಹೊದಿಕೆ(ಬ್ಲಾಂಕೆಟ್) ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
    ಭದ್ರಾವತಿ, ಫೆ. ೨೭: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕ್ಷೇತ್ರದಲ್ಲಿ ಪಕ್ಷದ ಶಾಸಕರಿಲ್ಲ ಎಂಬ ಕೊರಗನ್ನು ನೀಗಿಸಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿಸಿಕೊಟ್ಟಿದ್ದು, ಕ್ಷೇತ್ರದ ಜನರು ಇವರಿಗೆ ಚಿರಋಣಿಗಳಾಗಬೇಕಾಗಿದೆ ಎಂದು ಸ್ಥಳಿಯ ಬಿಜೆಪಿ ಮುಖಂಡರು ಪ್ರಶಂಸೆ ವ್ಯಕ್ತಪಡಿಸಿದರು.
    ಬಿ.ಎಸ್ ಯಡಿಯೂರಪ್ಪನವರ ಹುಟ್ಟುಹಬ್ಬದ ಅಂಗವಾಗಿ ಭಾನುವಾರ  ಬಿ.ವೈ ರಾಘವೇಂದ್ರ ಅಭಿಮಾನಿಗಳ ಬಳಗದ ವತಿಯಿಂದ ಹೊಸಮನೆ ಹಿಂದೂ ಮಹಾಸಭಾ ಗಣಪತಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಪೂಜೆ ಹಾಗು ಬಡ ವರ್ಗದ ಅಸಹಾಯಕರಿಗೆ ಮಲಗುವ ಹೊದಿಕೆ(ಬ್ಲಾಂಕೆಟ್) ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಪಕ್ಷದ ಪ್ರಮುಖರಾದ ವಿ. ಕದಿರೇಶ್, ಜಿ. ಧರ್ಮ ಪ್ರಸಾದ್, ಜಿ. ಆನಂದಕುಮಾರ್, ಎಚ್.ಸಿ ರಮೇಶ್, ಎಸ್. ಕುಮಾರ್ ಮತ್ತು ಎಂ. ಮಂಜುನಾಥ್ ಹಾಗು ಮಹಿಳಾ ಮುಖಂಡರಾದ ಸುಲೋಚನಾ ಪ್ರಕಾಶ್ ಸೇರಿದಂತೆ ಇನ್ನಿತರರು, ಕ್ಷೇತ್ರದಲ್ಲಿ ಪಕ್ಷದ ಶಾಸಕರಿಲ್ಲದಿದ್ದರೂ ಸಹ ಇಲ್ಲಿನ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಸದಾಕಾಲ ಹುಮ್ಮಸ್ಸು ತುಂಬುವ ಜೊತೆಗೆ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಬಿ.ಎಸ್ ಯಡಿಯೂರಪ್ಪ ಹಾಗು ಸಂಸದ ಬಿ.ವೈ ರಾಘವೆಂದ್ರರವರು ಕೈಗೊಂಡಿದ್ದಾರೆ.
    ಕುಡಿಯುವ ನೀರು, ರಸ್ತೆ, ಚರಂಡಿ ನಿರ್ಮಾಣ ಸೇರಿದಂತೆ ಮೂಲ ಸೌಕರ್ಯಗಳ ಜೊತೆಗೆ ಮಠ ಮಂದಿರಗಳ ಅಭಿವೃದ್ಧಿ, ಕಾರ್ಮಿಕರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಆರೋಗ್ಯ ಸೇವೆ ಒದಗಿಸಲು ಇಎಸ್‌ಐ ಆಸ್ಪತ್ರೆ, ಕೋವಿಡ್ ಸಂಕಷ್ಟದ ಸಮಯದಲ್ಲಿ ನೆರವಿನ ವ್ಯವಸ್ಥೆ, ಬಡ ಹಾಗು ಮಧ್ಯಮ ವರ್ಗದ ಜನರ ಪ್ರಯಾಣಕ್ಕೆ ಅನುಕೂಲವಾಗುವಂತೆ ರೈಲುಗಳ ವ್ಯವಸ್ಥೆ, ರೈಲ್ವೆ ಸೇತುವೆ ನಿರ್ಮಾಣ ಸೇರಿದಂತೆ ಹಲವಾರು ಅಭಿವೃದ್ಧಿಗಳನ್ನು ಯಾವುದೇ ಫಲಾಫೇಕ್ಷೆ ಇಲ್ಲದೆ ಕೈಗೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಇಂತಹ ಧೀಮಂತ ನಾಯಕರ ಹುಟ್ಟುಹಬ್ಬವನ್ನು ಎಲ್ಲರೂ ಒಗ್ಗಟ್ಟಾಗಿ ಸಂಭ್ರಮದಿಂದ ಆಚರಿಸುವಂತಾಗಿದೆ ಎಂದರು.
    ಬಿ.ವೈ ರಾಘವೇಂದ್ರ ಅಭಿಮಾನಿಗಳ ಬಳಗದ ಯುವ ಮುಖಂಡ ಕೆ. ಮಂಜುನಾಥ್ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
    ಪ್ರಮುಖರಾದ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ದುಗ್ಗೇಶ್ ತೇಲ್ಕರ್, ತಮಿಳು ಸಮಾಜದ ನಾರಾಯಣ, ರವಿಚಂದ್ರ, ಮಣಿ ಎಎನ್‌ಎಸ್, ಎನ್. ರಾಮಕೃಷ್ಣ, ರಾಮನಾಥ ಬರ್ಗೆ, ಬಿ.ಎಸ್ ಶ್ರೀನಾಥ್, ಸುಬ್ರಮಣ್ಯ, ಎಂ.ಎಸ್ ಸುರೇಶಪ್ಪ, ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಪಾಟೀಲ್, ನಗರಸಭಾ ಸದಸ್ಯೆ ಶಶಿಕಲಾ ನಾರಾಯಣಪ್ಪ, ಅನ್ನಪೂರ್ಣ ಸಾವಂತ್, ಮಂಜುಳ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ತಪ್ಪದೇ ೫ ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸಿ : ಗೀತಾರಾಜ್‌ಕುಮಾರ್

ಭದ್ರಾವತಿ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ದಿನಾಚರಣೆಗೆ ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್ ಪಲ್ಸ್ ಪೋಲಿಯೋ ಹನಿ ಹಾಕುವ ಮೂಲಕ ಚಾಲನೆ ನೀಡಿದರು.
    ಭದ್ರಾವತಿ, ಫೆ. ೨೭: ಪೋಲಿಯೋ ಬಗ್ಗೆ ನಿರ್ಲಕ್ಷ್ಯ ವಹಿಸದೆ ಪೋಷಕರು ತಮ್ಮ ೫ ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವಂತೆ ನಗರಸಭೆ ಅಧ್ಯಕ್ಷೆ  ಗೀತಾರಾಜ್‌ಕುಮಾರ್ ಕರೆ ನೀಡಿದರು.
    ಅವರು ಭಾನುವಾರ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು.
    ಮುನ್ನಚ್ಚರಿಕೆ ಕ್ರಮವಾಗಿ ಎಲ್ಲರೂ ತಮ್ಮ ಮಕ್ಕಳಿಗೆ ಸಮೀಪದ ಪಲ್ಸ್ ಪೋಲಿಯೋ ಲಸಿಕಾ ಕೇಂದ್ರಗಳಿಗೆ ತೆರಳಿ ಪೋಲಿಯೋ ಹನಿ ಹಾಕಿಸುವ ಮೂಲಕ ಭವಿಷ್ಯದ ಆರೋಗ್ಯವಂತ ಸಮಾಜಕ್ಕೆ ಕೈಜೋಡಿಸುವಂತೆ ಮನವಿ ಮಾಡಿದರು.
    ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಮಾತನಾಡಿ, ಈ ಬಾರಿ ತಾಲೂಕಿನಲ್ಲಿ ೧೮೦ ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದೆ. ಒಟ್ಟು ೨೬,೨೦೫ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಗುರಿ ಹೊಂದಲಾಗಿದ್ದು, ೭೨೦ ಮಂದಿ ಲಸಿಕೆ ಹಾಕುವವರು ಹಾಗು ೩೭ ಮಂದಿ ಮೇಲ್ವಿಚಾರಕರು ಕರ್ತವ್ಯ ನಿರ್ವಹಿಸಲಿದ್ದಾರೆ. ಸಾರ್ವಜನಿಕರು ಸಮೀಪದ ಕೇಂದ್ರಗಳಿಗೆ ತೆರಳಿ ಪೋಲಿಯೋ ಹನಿ ಹಾಕಿಸುವ ಮೂಲಕ ಸಹಕರಿಸುವಂತೆ ಮನವಿ ಮಾಡಿದರು.
    ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ವಾರ್ಡ್ ಸದಸ್ಯೆ ಅನುಸುಧಾ ಮೋಹನ್, ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಶಂಕರಪ್ಪ, ಆರೋಗ್ಯ ರಕ್ಷಾ ಸಮಿತಿ ಸದಸ್ಯ ರಾಮನಾಥ್ ಬರ್ಗೆ, ಪಿ. ಗಣೇಶ್‌ರಾವ್, ರೋಟರಿ ಸಂಸ್ಥೆಯ ಅಡವೀಶಯ್ಯ, ಸುಂದರ್ ಬಾಬು, ಆಸ್ಪತ್ರೆ ಸಿಬ್ಬಂದಿಗಳಾದ ಆನಂದಮೂರ್ತಿ, ರೇವತಿ, ವಸಂತ, ಗ್ರೇಷಿಯಾ, ನೇತ್ರಾ, ದೇವಿಕಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಗ್ರಾಮಾಂತರ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗಕ್ಕೆ ನೂತನ ಪದಾಧಿಕಾರಿಗಳ ನೇಮಕ

ಭದ್ರಾವತಿ ತಾಲೂಕು ಕಾಂಗ್ರೆಸ್ ಗ್ರಾಮಾಂತರ ಸಮಿತಿ ಹಿಂದುಳಿದ ವರ್ಗಗಳ ವಿಭಾಗಕ್ಕೆ ನೂತನ ಪದಾಧಿಕಾರಗಳನ್ನು ನೇಮಿಸಿದ್ದು, ಜಿಲ್ಲಾ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಎ.ಎನ್. ರಮೇಶ್ ಇಕ್ಕೇರಿ ಹಾಗೂ ನಗರಸಭಾ ಸದಸ್ಯರ ಬಿ.ಕೆ.ಮೋಹನ್ ನೇಮಕಾತಿ ಪತ್ರ ನೀಡಿದರು.
    ಭದ್ರಾವತಿ, ಫೆ. ೨೭: ತಾಲೂಕು ಕಾಂಗ್ರೆಸ್ ಗ್ರಾಮಾಂತರ ಸಮಿತಿ ಹಿಂದುಳಿದ ವರ್ಗಗಳ ವಿಭಾಗಕ್ಕೆ ನೂತನ ಪದಾಧಿಕಾರಗಳನ್ನು ನೇಮಿಸಿ ಅಧ್ಯಕ್ಷ ಎಂ.ರಮೇಶ್ ಶಂಕರಘಟ್ಟ ಇವರು ಆದೇಶ ಹೊರಡಿಸಿದ್ದಾರೆ.
    ಶಾಸಕ ಬಿ.ಕೆ.ಸಂಗಮೇಶ್ವರ್ ಶಿಫಾರಸ್ಸಿನ ಮೇರೆಗೆ ರಾಜ್ಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ ಎಂ.ಡಿ ಲಕ್ಷ್ಮಿನಾರಾಯಣ(ಅಣ್ಣಯ್ಯ) ಹಾಗೂ ಜಿಲ್ಲಾ ಅಧ್ಯಕ್ಷ ಇ.ಎನ್.ರಮೇಶ್ ಇಕ್ಕೇರಿಯವರ ಅನುಮೋದನೆಯೊಂದಿಗೆ ನೂತನ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ವಿತರಿಸಲಾಯಿತು.
    ತಾಲೂಕಿನ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಉಪಾಧ್ಯಕ್ಷರಾಗಿ ಸಿಂಗನಮನೆ ಟಿ.ಡಿ ಶಶಿಕುಮಾರ್, ಕೂಡಿಗ್ಲೆರೆ ಡಿ. ಪ್ರಭಾಕರ್ ಹಾಗೂ ಹಿರಿಯೂರು ಎಚ್.ಕೆ ಕುಮಾರ್ ನೇಮಿಸಲಾಗಿದೆ. ಉಳಿದಂತೆ ಸಂಘಟನಾ ಕಾರ್ಯದಶಿಗಳಾಗಿ ಕೂಡ್ಲಿಗೆರೆ ತಳ್ಳಿಕಟ್ಟೆ ಕುಪ್ಪೇಂದ್ರ, ಆರ್. ಮಂಜುನಾಥ್, ಸಿಂಗನಮನೆ ನಂಜಪ್ಪ, ಗಣೇಶ್ ರಾವ್, ಎಸ್. ಆನಂದ, ವಿ. ಗಿರೀಶ್, ಎಚ್. ಕಿರಣ್,  ಕಾರ್ಯದರ್ಶಿಗಳಾಗಿ ಹಿರಿಯೂರು ಎಚ್.ಆರ್ ವರದರಾಜ್, ಸಿಂಗನಮನೆ ಎನ್. ಮಂಜಪ್ಪ, ಪಿ. ನಂಜುಂಡೇಶ್ವರ ರಾವ್, ವಿ. ರೂಪೇಶ್, ಸುಜಾತ,  ಖಜಾಂಚಿಯಾಗಿ ಸಿಂಗನಮನೆ ಎನ್.ಶ್ರೀಕಾಂತ್, ಸಹಕಾರ್ಯದರ್ಶಿಗಳಾಗಿ ಕೂಡ್ಲಿಗೆರೆ ಜಡಿಯಪ್ಪ, ರಘು, ನಿತಿನ್ ಗಿರಿ, ಸಿಂಗನಮನೆ ಕೆ. ಸುರೇಶ್, ಹಾಗೂ ಸಂಚಾಲಕರಾಗಿ ಕೂಡ್ಲಿಗೆರೆ ವೀರಪ್ಪನ್, ಸಿಂಗನಮನೆ ಕುಮಾರ್‌ರವರನ್ನು ನೇಮಿಸಲಾಗಿದೆ.
    ಜಿಲ್ಲಾ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಎ.ಎನ್. ರಮೇಶ್ ಇಕ್ಕೇರಿ ಹಾಗೂ ನಗರಸಭಾ ಸದಸ್ಯರ ಬಿ.ಕೆ.ಮೋಹನ್ ನೇಮಕಾತಿ ಪತ್ರ ನೀಡಿದರು.
    ಮಾಜಿ ಸಚಿವ ಕೆ. ಶಿವಮೂರ್ತಿ, ಲೋಕೇಶ್‌ನಾಯ್ಕ್, ಕೆಪಿಸಿಸಿ ಸದಸ್ಯ ಎಚ್.ಸಿ ದಾಸೇಗೌಡ, ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಎಚ್ ಎಲ್ ಷಡಾಕ್ಷರಿ, ನಗರ ಅಧ್ಯಕ್ಷ ಟಿ. ಚಂದ್ರೇಗೌಡ, ಹಿಂದುಳಿದ ನಗರ ಘಟಕದ ಅಧ್ಯಕ್ಷ ಬಿ. ಗಂಗಾದರ್, ಜಿಲ್ಲಾ ಹಿಂದುಳಿದ ಘಟಕದ ಪ್ರಧಾನ ಕಾರ್ಯದರ್ಶಿ ರಾಘವೆಂದ್ರ, ಜಿಲ್ಲಾ ಕಾರ್ಯದರ್ಶಿ ಮಹೇಂದ್ರ, ಉಪಾಧ್ಯಕ್ಷ ಬಿ.ಎಸ್.ಗೋಪಾಲ್(ಗೋಪಿ), ಮಾಜಿ ಅಧ್ಯಕ್ಷರಾದ ತಳ್ಳಿಕಟ್ಟೆ ಪ್ರಕಾಶ್, ದಿನೇಶ್ ಸೇರಿದಂತೆ ಇನ್ನಿತರರು  ಉಪಸ್ಥಿತರಿದ್ದರು.