Thursday, March 10, 2022

ಪಂಜಾಬ್‌ನಲ್ಲಿ ಎಎಪಿ ಗೆಲುವು : ವಿಜಯೋತ್ಸವ

ದೇಶದ ಎಲ್ಲಾ ರಾಜ್ಯಗಳಲ್ಲೂ ಪಕ್ಷ ಮುಂಚೂಣಿಗೆ ಬರುವ ವಿಶ್ವಾಸ

ಪಂಚ ರಾಜ್ಯಗಳ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ ಪಂಜಾಬ್‌ನಲ್ಲಿ ಹೆಚ್ಚಿನ ಸ್ಥಾನಗಳೊಂದಿಗೆ ಗೆಲುವು ಸಾಧಿಸಿರುವ ಹಿನ್ನಲೆಯಲ್ಲಿ ಗುರುವಾರ ಪಕ್ಷದ ಮುಖಂಡರು ಭದ್ರಾವತಿ ರಂಗಪ್ಪ ವೃತ್ತದಲ್ಲಿ ಮಾಸ್ಕ್ ಜೊತೆಗೆ ಸಿಹಿ ಹಂಚಿಕೆ ಮಾಡಿ ಸಂಭ್ರಮಿಸಲಾಯಿತು.
    ಭದ್ರಾವತಿ, ಮಾ. ೧೦: ಕೇಂದ್ರಾಡಳಿ ಪ್ರದೇಶವಾಗಿರುವ ದೆಹಲಿಯಲ್ಲಿ ಆಮ್ ಆದ್ಮಿ ಪಾರ್ಟಿ ಸರ್ಕಾರ ಮಾಡಿರುವ ಸಾಧನೆಯ ಹಿನ್ನಲೆಯಲ್ಲಿ ಪಂಜಾಬ್ ಮತದಾರರು ಪಕ್ಷವನ್ನು ಬೆಂಬಲಿಸಿದ್ದು, ಪಂಜಾಬ್‌ನಲ್ಲೂ ಉತ್ತಮ ಆಡಳಿತ ನೀಡಲಿದೆ. ಮುಂದಿನ ದಿನಗಳಲ್ಲಿ ದೇಶದ ಎಲ್ಲಾ ರಾಜ್ಯಗಳಲ್ಲೂ ಪಕ್ಷ ಮುಂಚೂಣಿಗೆ ಬರುವ ವಿಶ್ವಾಸವಿದೆ ಎಂದು ಆಮ್ ಆದ್ಮಿ ಪಾರ್ಟಿ ಮುಖಂಡರು ಹೇಳಿದರು.
    ಪಂಚ ರಾಜ್ಯಗಳ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ ಪಂಜಾಬ್‌ನಲ್ಲಿ ಹೆಚ್ಚಿನ ಸ್ಥಾನಗಳೊಂದಿಗೆ ಗೆಲುವು ಸಾಧಿಸಿರುವ ಹಿನ್ನಲೆಯಲ್ಲಿ ಗುರುವಾರ ಪಕ್ಷದ ಮುಖಂಡರು ನಗರದ ರಂಗಪ್ಪ ವೃತ್ತದಲ್ಲಿ ಮಾಸ್ಕ್ ಜೊತೆಗೆ ಸಿಹಿ ಹಂಚಿಕೆ ಮಾಡಿ ಸಂಭ್ರಮಿಸಿ ಮಾತನಾಡಿದರು.
    ದೆಹಲಿ ಸರ್ಕಾರ ಶಿಕ್ಷಣ, ಆರೋಗ್ಯ, ಕೃಷಿ, ಕೈಗಾರಿಕೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಗಣನೀಯವಾದ ಸಾಧನೆ ಮಾಡಿದೆ. ಹಲವಾರು ಜನಪರವಾದ ಯೋಜನೆಗಳನ್ನು ಜಾರಿಗೆ ತಂದಿದೆ. ಮುಖ್ಯಮಂತ್ರಿ ಕೇಜ್ರಿವಾಲ್‌ರವರ ದೂರದೃಷ್ಟಿ ಆಡಳಿತ ದೇಶಕ್ಕೆ ಅಗತ್ಯವಿದ್ದು, ಪ್ರಾಮಾಣಿಕ ಮತ್ತು ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಗುರಿಯೊಂದಿಗೆ ಮುಂದಿನ ದಿನಗಳಲ್ಲಿ ದೇಶಾದ್ಯಂತ ಪ್ರಬಲವಾಗಿ ವ್ಯಾಪಿಸುವ ವಿಶ್ವಾಸವಿದೆ ಎಂದರು.
    ಪಕ್ಷದ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್ ನೇತೃತ್ವದಲ್ಲಿ ನಡೆದ ವಿಯೋತ್ಸವದಲ್ಲಿ ಪ್ರಮುಖರಾದ  ಡಿ.ಎಂ ಚಂದ್ರಪ್ಪ, ಪರಮೇಶ್ವರಚಾರ್, ರಮೇಶ್, ಅಬ್ದುಲ್ ಖದೀರ್, ಇಬ್ರಾಹಿಂ ಖಾನ್, ಎ. ಮಸ್ತಾನ್, ರೇಷ್ಮಾಬಾನು, ಜಾವಿದ್, ಪರಮೇಶ್ವರನಾಯ್ಕ್, ಬಸವಕುಮಾರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.  


ಸಹ್ಯಾದ್ರಿ, ವಿನಾಯಕ ಪ್ರದೇಶ ಮಟ್ಟದ ಮಹಿಳಾ ಒಕ್ಕೂಟಗಳ ಸಾಧನೆ : ಅಭಿನಂದನೆ


ದೀನದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ಭದ್ರಾವತಿ ನಗರಸಭೆ ವತಿಯಿಂದ ರಚಿಸಲ್ಪಟ್ಟ  ಸಹ್ಯಾದ್ರಿ ಪ್ರದೇಶ ಮಟ್ಟದ ಮಹಿಳಾ ಒಕ್ಕೂಟ ಮತ್ತು ವಿನಾಯಕ ಪ್ರದೇಶ ಮಟ್ಟದ ಮಹಿಳಾ ಒಕ್ಕೂಟಗಳ ಸಾಧನೆಯನ್ನು ಗುರುತಿಸಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ರಾಷ್ಟ್ರೀಯ ಜೀವನೋಪಾಯ ಅಭಿಯಾನ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗು ಜೀವನೋಪಾಯ ಇಲಾಖೆವತಿಯಿಂದ ಅಭಿನಂದಿಸಲಾಯಿತು.
    ಭದ್ರಾವತಿ, ಮಾ. ೧೦: ದೀನದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ನಗರಸಭೆ ವತಿಯಿಂದ ರಚಿಸಲ್ಪಟ್ಟ  ಸಹ್ಯಾದ್ರಿ ಪ್ರದೇಶ ಮಟ್ಟದ ಮಹಿಳಾ ಒಕ್ಕೂಟ ಮತ್ತು ವಿನಾಯಕ ಪ್ರದೇಶ ಮಟ್ಟದ ಮಹಿಳಾ ಒಕ್ಕೂಟಗಳ ಸಾಧನೆಯನ್ನು ಗುರುತಿಸಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ರಾಷ್ಟ್ರೀಯ ಜೀವನೋಪಾಯ ಅಭಿಯಾನ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗು ಜೀವನೋಪಾಯ ಇಲಾಖೆವತಿಯಿಂದ ಅಭಿನಂದಿಸಲಾಯಿತು.
    ಈ ಎರಡು ಒಕ್ಕೂಟಗಳು ೨೦೧೭-೧೮ನೇ ಸಾಲಿನ ರಾಷ್ಟ್ರಮಟ್ಟದ ಸ್ವಚ್ಛತಾ ಎಕ್ಸಲೆನ್ಸ್ ಪ್ರಶಸ್ತಿ ವಿಭಾಗದಲ್ಲಿ ಪ್ರಥಮ ಸ್ಥಾನದೊಂದಿಗೆ ಪ್ರಶಸ್ತಿ ಪಡೆದುಕೊಂಡಿದ್ದವು. ಈ ಹಿನ್ನಲೆಯಲ್ಲಿ  ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸಮ್ಮುಖದಲ್ಲಿ ಒಕ್ಕೂಟದ ಅಧ್ಯಕ್ಷರಾದ ರೂಪ ನಾಗರಾಜ್ ಮತ್ತು ಲಕ್ಷ್ಮಿಯವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
    ನಗರಸಭೆ ಸಮುದಾಯ ಸಂಘಟನಾ ಅಧಿಕಾರಿ ಸುಹಾಸಿನಿ, ಒಕ್ಕೂಟ ಕಾರ್ಯದರ್ಶಿ ಧನಲಕ್ಷ್ಮೀ, ಗೀತಾ, ಶಕುಂತಲಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಮಾ.೧೧ರಂದು ಮೊದಲ ಬಾರಿಗೆ ಬಜೆಟ್ ಮಂಡಿಸಲಿರುವ ಗೀತಾ ರಾಜ್‌ಕುಮಾರ್

೨೦೧೩ರಿಂದ ಮಹಿಳಾ ಅಧ್ಯಕ್ಷರಿಂದಲೇ ಬಜೆಟ್ ಮಂಡನೆ


ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್
    ಭದ್ರಾವತಿ, ಮಾ. ೧೦: ನಗರಸಭೆಯಲ್ಲಿ ಜನಪ್ರತಿನಿಧಿ ಆಡಳಿತ ಸುಮಾರು ೨ ವರ್ಷಗಳ ನಂತರ ಅಸ್ತಿತ್ವಕ್ಕೆ ಬಂದು ಕಳೆದ ಸುಮಾರು ೫ ತಿಂಗಳಿನಿಂದ ಕಾಂಗ್ರೆಸ್ ಅಧಿಕಾರ ಮುನ್ನಡೆಸಿಕೊಂಡು ಬರುತ್ತಿದ್ದು, ಇದೀಗ ಮೊದಲ ಬಜೆಟ್ ಮಂಡನೆ ಮಾ.೧೧ರ ಶುಕ್ರವಾರ ಬೆಳಿಗ್ಗೆ ೧೧ ಗಂಟೆಗೆ ನಡೆಯಲಿದೆ. ಅಧ್ಯಕ್ಷೆ ಜೆ.ಸಿ ಗೀತಾ ರಾಜ್‌ಕುಮಾರ್ ಮೊದಲ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ.
    ಈ ಹಿಂದೆ ಕಳೆದ ೨ ಅವಧಿಯಲ್ಲಿ ಅಧಿಕಾರಿಗಳು ಬಜೆಟ್ ಮಂಡಿಸಿದ್ದರು. ಆದರೆ ಈ ಬಜೆಟ್ ಮಂಡನೆಗಳು ಹೆಚ್ಚಿನ ಗಮನ ಸೆಳೆದಿರಲಿಲ್ಲ. ಅಲ್ಲದೆ ಮಹಾಮಾರಿ ಕೊರೋನಾ ಹಿನ್ನಲೆಯಲ್ಲಿ ಜನರು ಸಾಕಷ್ಟು ಸಂಕಷ್ಟಕ್ಕೆ ಒಳಗಾಗಿದ್ದರು. ಈ ಹಿನ್ನಲೆಯಲ್ಲಿ ಬಜೆಟ್ ಬಗ್ಗೆ ಹೆಚ್ಚಿನ ಆಸಕ್ತಿ ತೋರಲಿಲ್ಲ. ಆದರೆ ಇದೀಗ ಜನಪ್ರತಿನಿಧಿ ಆಡಳಿತ ಬಜೆಟ್ ಮಂಡಿಸುತ್ತಿರುವುದು ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ಅಲ್ಲದೆ ೨೦೧೩ರಿಂದ ಮಹಿಳಾ ಅಧ್ಯಕ್ಷರೇ ಬಜೆಟ್ ಮಂಡಿಸಿಕೊಂಡು ಬರುತ್ತಿರುವುದು ವಿಶೇಷತೆಯಾಗಿದೆ.
    ನಗರಸಭೆ ೩೫ ವಾರ್ಡ್‌ಗಳ ವ್ಯಾಪ್ತಿಯಲ್ಲಿ ಹಲವಾರು ಮೂಲ ಸೌಲಭ್ಯಗಳ ಕೊರತೆ ಕಂಡು ಬರುತ್ತಿದ್ದು, ಈ ಹಿನ್ನಲೆಯಲ್ಲಿ ಸದಸ್ಯರು ವಾರ್ಡ್‌ಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನವನ್ನು ಈ ಬಾರಿ ಬಜೆಟ್ ಮಂಡನೆಯಲ್ಲಿ ನಿರೀಕ್ಷಿಸುತ್ತಿದ್ದಾರೆ. ಈ ನಡುವೆ ಬಜೆಟ್ ಪೂರ್ವಭಾವಿ ಸಭೆಯಲ್ಲಿ ವಿವಿಧ ಸಂಘ-ಸಂಸ್ಥೆಗಳು ನಗರದ ಬೆಳವಣಿಗೆಗೆ ಪೂರಕವಾದ ಹಲವಾರು ಸಲಹೆ-ಸೂಚನೆಗಳನ್ನು ಸಹ ನೀಡಿವೆ. ಗೀತಾ ರಾಜ್‌ಕುಮಾರ್‌ರವರು ಉತ್ತಮ ಬಜೆಟ್ ಮಂಡನೆ ಮಾಡಲಿದ್ದಾರೆಂಬ ನಿರೀಕ್ಷೆ ಹೊಂದಲಾಗಿದೆ.
    ಕೋವಿಡ್ ಹಿನ್ನಲೆಯಲ್ಲಿ ಕಳೆದ ೨ ಅವಧಿಯಲ್ಲಿ ನಗರಸಭೆ ಆದಾಯ ಸಹ ಸ್ವಲ್ಪಮಟ್ಟಿಗೆ ಕುಂಠಿತವಾಗಿದ್ದು, ಇದೀಗ ಆದಾಯ ಕ್ರೋಢೀಕರಣದ ಜೊತೆಗೆ ಹಲವು ಹೊಸ ಯೋಜನೆಗಳೊಂದಿಗೆ ಉಳಿತಾಯ ಬಜೆಟ್ ಮಂಡಿಸುವುದು ಸವಾಲಿನ ಕೆಲಸವಾಗಿದೆ. ಇದನ್ನು ಅಧ್ಯಕ್ಷೆ ಗೀತಾ ರಾಜ್‌ಕುಮಾರ್ ಯಾವ ರೀತಿ ನಿಭಾಯಿಸುತ್ತಾರೆಂಬುದು ಕುತೂಹಲಕಾರಿಯಾಗಿದೆ.    

Wednesday, March 9, 2022

ಮಾ.೧೨ರಂದು ‘ಮಧುರ ಮಿಲನ’ ಸಮ್ಮೇಳನ

ಭದ್ರಾವತಿ ಬಂಟರ ಭವನದಲ್ಲಿ ಮಾ.೧೨ರಂದು ಆಯೋಜಿಸಲಾಗಿರುವ 'ಮಧುರ ಮಿಲನ' ಸಮ್ಮೇಳನ ಕುರಿತು ಸಮ್ಮೇಳನ ಸಮಿತಿ ಅಧ್ಯಕ್ಷ ಎಂ.ಎಸ್ ಜನಾರ್ಧನ ಅಯ್ಯಂಗಾರ್ ಮಾಹಿತಿ ನೀಡಿದರು.
    ಭದ್ರಾವತಿ, ಮಾ. ೯: ದಿ ಇಂಟರ್‌ನ್ಯಾಷನಲ್ ಅಸೋಸಿಯೇಷನ್ ಆಫ್ ಲಯನ್ಸ್ ಕ್ಲಬ್ ಡಿಸ್ಟ್ರಿಕ್-೩೧೭ಸಿ ರಿಜಿಯನ್-೭ರ ಸಮ್ಮೇಳನ 'ಮಧುರ ಮಿಲನ' ಮಾ.೧೨ರಂದು ಮಧ್ಯಾಹ್ನ ೩ ಗಂಟೆಗೆ ಜನ್ನಾಪುರ ಬಂಟರ ಭವನದಲ್ಲಿ ಆಯೋಜಿಸಲಾಗಿದೆ ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಎಂ.ಎಸ್ ಜನಾರ್ಧನ ಅಯ್ಯಂಗಾರ್ ಹೇಳಿದರು.
    ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಿಜಿಯನ್-೭ರ ಅಧ್ಯಕ್ಷ ಹೆಬ್ಬಂಡಿ ಬಿ. ನಾಗರಾಜ್ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದು, ರಿಜಿಯನ್-೭ರ ಪ್ರಥಮ ಮಹಿಳೆ ಕೆ.ಎಚ್ ದೀಪಶ್ರೀ ಉದ್ಘಾಟಿಸುವರು ಎಂದರು.
    ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಜೀವ ವೈವಿಧ್ಯ ಮಂಡಳಿ ಮಾಜಿ ಅಧ್ಯಕ್ಷ ಅನಂತ ಹೆಗಡೆ ಆಶಿಸಿರ, ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಲಯನ್ಸ್ ಕ್ಲಬ್ ಡಿಸ್ಟ್ರಿಕ್-೩೧೭ಸಿ ಗೌರ್‍ನರ್ ಡಾ. ಎಂ.ಕೆ ಭಟ್ ಮತ್ತು ರಿಜಿಯನ್-೭ರ ಮಾರ್ಗದರ್ಶಕ ಬಿ. ದಿವಾಕರ ಶೆಟ್ಟಿ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ. ಲಯನ್ಸ್ ಕ್ಲಬ್ ಎಲ್ಲಾ ವಿಭಾಗಗಳ ಪದಾಧಿಕಾರಿಗಳು, ರಿಜಿಯನ್ ಕ್ಲಬ್‌ಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಮ್ಮೇಳನ ಯಶಸ್ವಿಗೊಳಿಸುವಂತೆ ಕೋರಿದರು.
    ಪತ್ರಿಕಾಗೋಷ್ಠಿಯಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷ ಬಿ.ಎಸ್ ಮಹೇಶ್‌ಕುಮಾರ್, ಕಾರ್ಯದರ್ಶಿ ಡಿ. ಶಂಕರಮೂರ್ತಿ, ಖಜಾಂಚಿ ವಿನೋದ್ ಗಿರಿ, ವಲಯ ಸಲಹೆಗಾರ ಜಿ.ಎಸ್ ಕುಮಾರ್, ಸಮ್ಮೇಳನ ಸಮಿತಿ ಕಾರ್ಯದರ್ಶಿ ಎ.ಎನ್ ಕಾರ್ತಿಕ್, ಖಜಾಂಚಿ ಎಂ. ಪರಮೇಶ್ವರಪ್ಪ, ಜೋನ್-೧ರ ಎ.ಎಸ್ ಕುಮಾರಸ್ವಾಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಮಾ.೧೨ರಂದು ಹಳೇಯ ವಿದ್ಯಾರ್ಥಿಗಳ ಸ್ನೇಹ ಕೂಟ

    ಭದ್ರಾವತಿ, ಮಾ. ೯: ತಾಲೂಕಿನ ಕೂಡ್ಲಿಗೆರೆ ಶ್ರೀ ಹರಿಹರೇಶ್ವರ ಪ್ರೌಢಶಾಲೆಯಲ್ಲಿ ೧೯೯೨-೯೩ನೇ ಸಾಲಿನ ಹಳೇಯ ವಿದ್ಯಾರ್ಥಿಗಳ ಸ್ನೇಹ ಕೂಟ ಮಾ.೧೨ರಂದು ಬೆಳಿಗ್ಗೆ ೯ ಗಂಟೆಗೆ ಹಮ್ಮಿಕೊಳ್ಳಲಾಗಿದೆ.
    ಸ್ನೇಹ ಸಮ್ಮಿಲನ ಪ್ರೇರಣ ಹೆಸರಿನಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಹಳೇಯ ವಿದ್ಯಾರ್ಥಿಗಳು ಮತ್ತು ಉಪಾಧ್ಯಾಯರುಗಳಿಗೆ ಸನ್ಮಾನ ನಡೆಯಲಿದೆ. ಹಳೇಯ ನೆನಪುಗಳೊಂದಿಗೆ ಒಂದೆಡೆ ಸೇರಿ ಸಂಭ್ರಮಿಸುವ ಈ ಕಾರ್ಯಕ್ರಮಕ್ಕೆ ಹಳೇಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.

ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿಗೆ ಅಭಿನಂದನೆ

ನೌಕರರ ಸಲಹೆ-ಸಹಕಾರ ಕೋರಿದ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಂದ್ರಪ್ಪ


ಭದ್ರಾವತಿ ತಾಲೂಕಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರವಹಿಸಿಕೊಂಡಿರುವ ನಾಗೇಂದ್ರಪ್ಪರವರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿಯವರನ್ನು ಭೇಟಿ ಮಾಡಿ ಅಭಿನಂದಿಸಿದರು.
    ಭದ್ರಾವತಿ, ಮಾ. ೯: ತಾಲೂಕಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರವಹಿಸಿಕೊಂಡಿರುವ ನಾಗೇಂದ್ರಪ್ಪರವರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿಯವರನ್ನು ಭೇಟಿ ಮಾಡಿ ಅಭಿನಂದಿಸಿದರು.
    ತಾಲೂಕಿನಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಲು ಸಮಸ್ತ ನೌಕರರ ಸಲಹೆ-ಸಹಕಾರ ಅಗತ್ಯವಿದ್ದು, ಈ ಹಿನ್ನಲೆಯಲ್ಲಿ ಪೂರಕವಾಗಿ ಸ್ಪಂದಿಸುವಂತೆ ಮನವಿ ಮಾಡಿದರು.
    ಸಿ.ಎಸ್ ಷಡಾಕ್ಷರಿ ಮಾತನಾಡಿ, ಶಿಕ್ಷಕರ ಸಮಸ್ಯೆಗಳನ್ನು ಪ್ರಾಮಾಣಿಕವಾಗಿ ಬಗೆಹರಿಸುವ ಜೊತೆಗೆ ಪ್ರಸ್ತುತ ಶಿಕ್ಷಕರಿಗೆ ನಿಗದಿತ ಸಮಯಕ್ಕೆ ವೇತನ ಪಾವತಿಸಲು ಕ್ರಮ ಕೈಗೊಳ್ಳಬೇಕೆಂದರು.
    ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಡಿ.ಬಿ ರುದ್ರಪ್ಪ, ಉಪಾಧ್ಯಕ್ಷ ದಿನೇಶ್, ಸಾಹಿತಿ ಅರಳೇಹಳ್ಳಿ ಅಣ್ಣಪ್ಪ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಗೌರವಾಧ್ಯಕ್ಷ ಯು. ಮಹದೇವಪ್ಪ, ನಿರ್ದೇಶಕ ಡಿ.ಎಸ್ ಬಸವಂತರಾವ್ ದಾಳೆ, ಸಂಘದ ಸದ್ಯಸ್ಯರಾದ ಆರ್.ಟಿ ಲೋಹಿತೇಶಪ್ಪ, ಜಾನಪದ ಕಲಾವಿದ ಶಿಕ್ಷಕ ರೇವಣಪ್ಪ, ಸಿಆರ್‌ಪಿ ಚನ್ನಪ್ಪ ಸೇರಿದಂತೆ  ಇನ್ನಿತರರು ಉಪಸ್ಥಿತರಿದ್ದರು.

ಇಕೋ-ಕ್ಲಬ್ ಶಾಲೆಗಳ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ

ಬೆಂಗಳೂರಿನ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ ವತಿಯಿಂದ ಕೇಂದ್ರ ಸರ್ಕಾರದ ಸ್ವಚ್ಛತಾ ಕ್ರಿಯಾ ಯೋಜನೆಯಡಿಯಲ್ಲಿ ಇಕೋ-ಕ್ಲಬ್ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆ ಬುಧವಾರ ಭದ್ರಾವತಿ ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿಗಳ ಕಛೇರಿ(ಬಿಆರ್‌ಸಿ) ಆವರಣದಲ್ಲಿ ಆಯೋಜಿಸಲಾಗಿತ್ತು.    
    ಭದ್ರಾವತಿ, ಮಾ. ೯: ಬೆಂಗಳೂರಿನ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ ವತಿಯಿಂದ ಕೇಂದ್ರ ಸರ್ಕಾರದ ಸ್ವಚ್ಛತಾ ಕ್ರಿಯಾ ಯೋಜನೆಯಡಿಯಲ್ಲಿ ಇಕೋ-ಕ್ಲಬ್ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆ ಬುಧವಾರ ನಗರದ ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿಗಳ ಕಛೇರಿ(ಬಿಆರ್‌ಸಿ) ಆವರಣದಲ್ಲಿ ಆಯೋಜಿಸಲಾಗಿತ್ತು.
    ತಾಲೂಕಿನ ಇಕೋ ಕ್ಲಬ್ ಶಾಲೆಗಳ ೮ ಮತ್ತು ೯ನೇ ತರಗತಿ ವಿದ್ಯಾರ್ಥಿಗಳು ಭಾಗವಹಿಸಿದ್ದರು. ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಂದ್ರಪ್ಪ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವುದು ಮುಖ್ಯ ಎಂದರು.
    ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿ ಗಣೇಶ್ ಅಧ್ಯಕ್ಷತೆ ವಹಿಸಿದ್ದರು. ಶಕ್ತಿ/ಇಂಧನ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ಪ್ರಬಂಧ ಸ್ಪರ್ಧೆಯನ್ನು ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಆಯೋಜಿಸಲಾಗಿತ್ತು.
    ಸ್ಪರ್ಧೆಯ ನೋಡಲ್ ಅಧಿಕಾರಿ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ನವೀದ್ ಪರ್ವೀಜ್ ಅಹಮದ್ ಸ್ವಾಗತಿಸಿದರು. ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಮನ್ಸೂರ್ ಅಹಮದ್ ವಂದಿಸಿದರು. ಶಿಕ್ಷಣ ಸಂಯೋಜಕ ರವಿಕುಮಾರ್ ಹಾಗು ಶಿಕ್ಷಕರು ಮತ್ತು ಕಛೇರಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದದರು.