![](https://blogger.googleusercontent.com/img/a/AVvXsEggHsshSkXEJVwDcyzctEVIboK0PEgrUt2_osnaQkw-D_maUv_TphF76NAmDVHYzdM3Ygxixb_G_QCSstnuta46u2M6t-0oIi39rVMHn0r1NMfUwqd17WoNyXGoaQoXS33JeP0X0BnomGSb3Bh52dVRsdZ8cmTG9Mf7BTBNNr9fzcdk3V7PtHkjgrXRvQ=w400-h223-rw)
ಭದ್ರಾವತಿಯಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ ಹಾಗು ವಿವಿಧ ಸಂಘಟನೆಗಳ ವತಿಯಿಂದ ಸೋಮವಾರ ಸಿದ್ದರೂಢ ನಗರದ ಬಸವೇಶ್ವರ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಶಾಸಕ ಬಿ.ಕೆ ಸಂಗಮೇಶ್ವರ ಉದ್ಘಾಟಿಸಿದರು.
ಭದ್ರಾವತಿ, ಜೂ. ೨೭ : ನಾಡಪ್ರಭು ಕೆಂಪೇಗೌಡರು ಜಾತ್ಯಾತೀತ ಮನೋಭಾವದವರಾಗಿದ್ದು, ಕೇವಲ ಒಂದೇ ಒಂದು ಜಾತಿಗೆ ಸೀಮಿತವಾಗಿಲ್ಲ. ಕೆಂಪೇಗೌಡರ ದಾರಿಯಲ್ಲಿ ನಾವೆಲ್ಲರೂ ಸಾಗಬೇಕೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ ಹಾಗು ವಿವಿಧ ಸಂಘಟನೆಗಳ ವತಿಯಿಂದ ಸೋಮವಾರ ಸಿದ್ದರೂಢ ನಗರದ ಬಸವೇಶ್ವರ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರಸ್ತುತ ಬೆಂಗಳೂರು ಮಹಾನಗರವನ್ನು ವಿಶ್ವವೇ ಎದುರು ನೋಡುವಂತಾಗಿದೆ. ಇಂತಹ ನಗರ ನಿರ್ಮಾಣಕ್ಕೆ ಕೆಂಪೇಗೌಡರ ಜಾತ್ಯಾತೀತ ಮನೋಭಾವ ಕಾರಣವಾಗಿದೆ. ಎಲ್ಲರನ್ನು ಒಗ್ಗೂಡಿಸಿ ಆಧುನಿಕ ಸಮಾಜ ನಿರ್ಮಾಣಕ್ಕೆ ಮುನ್ನುಡಿ ಬರೆದಿದ್ದಾರೆ. ಇಂತಹ ಆದರ್ಶ ವ್ಯಕ್ತಿಯನ್ನು ನಾವೆಲ್ಲರೂ ಸ್ಮರಿಸುವ ಮೂಲಕ ಅವರ ದಾರಿಯಲ್ಲಿ ಸಾಗಬೇಕಾಗಿದೆ ಎಂದರು.
ಕ್ಷೇತ್ರದಲ್ಲಿರುವ ಒಕ್ಕಲಿಗರ ಸಮುದಾಯದ ಏಳಿಗೆಗೆ ಬದ್ಧನಾಗಿದ್ದು, ಈ ಹಿಂದೆ ಸಮುದಾಯ ಭವನ ನಿರ್ಮಾಣಕ್ಕೆ ೧ ಕೋ. ರು. ಬಿಡುಗಡೆ ಮಾಡುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಸಮುದಾಯವರು ಯಾರು ಸಹ ಮುಂದೆ ಬಂದಿಲ್ಲ. ಈಗಲೂ ಸಹ ಅನುದಾನ ಬಿಡುಗಡೆ ಮಾಡಿಸಿಕೊಡಲು ಸಿದ್ದವಿದ್ದೇನೆ ಎಂದರು.
ಉಪನ್ಯಾಸ ನೀಡಿದ ಕುವೆಂಪು ವಿಶ್ವ ವಿದ್ಯಾನಿಲಯದ ಪ್ರೊ. ಇ. ಚಂದ್ರಶೇಖರ್, ಕೆಂಪೇಗೌಡರು ಒಬ್ಬ ರಾಜನಾಗಿ, ಸಾಮಾಜಿಕ ಸುಧಾರಕನಾಗಿ ಸ್ವಾಮಿ ನಿಷ್ಠೆಯನ್ನು ಪ್ರಾಮಾಣಿಕವಾಗಿ ಪಾಲಿಸಿಕೊಂಡು ಬಂದವರು. ಇವರ ನಡೆ ವಿಭಿನ್ನ ರೀತಿಯಿಂದ ಕೂಡಿದ್ದು, ವೈಶಿಷ್ಟ್ಯ ಪೂರ್ಣವಾಗಿದೆ. ಇವರು ಹೊಂದಿದ್ದ ಜನರ ಬಗೆಗಿನ ಕಾಳಜಿ, ದೂರದೃಷ್ಟಿ, ಆಡಳಿತ ವೈಖರಿಗಳು ಎಲ್ಲರನ್ನು ಬೆರಗುಗೊಳಿಸುತ್ತವೆ ಎಂದರು.
ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಟಿ ರವಿ ಮಾತನಾಡಿ, ಕೆಂಪೇಗೌಡ ಜಯಂತಿ ಯಶಸ್ವಿಗೊಳಿಸಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ಸರ್ಕಾರದ ನೀತಿ ನಿರೂಪಣೆಯಂತೆ ಕಾರ್ಯಕ್ರಮ ಆಯೋಜನೆ ಮಾಡಿರುವುದು ಸರಿಯಷ್ಟೆ, ಇದರಿಂದಾಗಿ ಈ ಬಾರಿ ಕೆಲವು ಗೊಂದಲಗಳು ಉಂಟಾಗಿದೆ. ಮುಂದಿನ ದಿನಗಳಲ್ಲಿ ಈ ರೀತಿಯಾಗದಂತೆ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದರು.
ನಗರಸಭೆ ಅಧ್ಯಕ್ಷೆ ಗೀತಾ ರಾಜ್ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್ಕುಮಾರ್, ಪೌರಾಯುಕ್ತ ಮನು ಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್. ರಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ನಗರಸಭಾ ಸದಸ್ಯರಾದ ಬಿ.ಕೆ ಮೋಹನ್, ಲತಾ ಚಂದ್ರಶೇಖರ್, ಶೃತಿ ವಸಂತ್, ಪಲ್ಲವಿ ದಿಲೀಪ್, ಅನುಪಮಾ ಚನ್ನೇಶ್, ಅನುಸುಧಾ, ಅನಿತಾ ಮಲ್ಲೇಶ್, ಬಿ.ಪಿ ಸ್ವರ್ಣಮಂಗಳ ಭೈರಪ್ಪ, ಕೋಟೇಶ್ವರ ರಾವ್, ಮಣಿ ಎಎನ್ಎಸ್, ಕಾಂತರಾಜ್, ಜಯಶೀಲ ಸುರೇಶ್, ಸವಿತಾ ಉಮೇಶ್, ಕೋಟೇಶ್ವರರಾವ್, ಉದಯಕುಮಾರ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸುಮತಿ ಕಾರಂತ್ ತಂಡವರು ಪ್ರಾರ್ಥಿಸಿದರು. ಶಿರಸ್ತೇದಾರ್ ರಾಧಾಕೃಷ್ಣಭಟ್ ಸ್ವಾಗತಿಸಿದರು. ಉಪ ತಹಸೀಲ್ದಾರ್ ಮಂಜ್ಯಾನಾಯ್ಕ ನಿರೂಪಿಸಿದರು.