Friday, July 22, 2022

ಜಿಎಸ್‌ಟಿ ವಿರೋಧಿಸಿ ಜಯಕರ್ನಾಟಕ ಜನಪರ ವೇದಿಕೆ ಪ್ರತಿಭಟನೆ : ಮನವಿ

ಕೇಂದ್ರ ಸರ್ಕಾರ ಅಗತ್ಯ ಆಹಾರ ವಸ್ತುಗಳ ಮೇಲೆ ಜಿಎಸ್‌ಟಿ ವಿಧಿಸಿರುವುದನ್ನು ವಿರೋಧಿಸಿ ಭದ್ರಾವತಿಯಲ್ಲಿ ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಶುಕ್ರವಾರ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಜು. ೨೨: ಕೇಂದ್ರ ಸರ್ಕಾರ ಅಗತ್ಯ ಆಹಾರ ವಸ್ತುಗಳ ಮೇಲೆ ಜಿಎಸ್‌ಟಿ ವಿಧಿಸಿರುವುದನ್ನು ವಿರೋಧಿಸಿ ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಶುಕ್ರವಾರ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
    ವೇದಿಕೆ ಪ್ರಮುಖರು ಮಾತನಾಡಿ, ಕೇಂದ್ರ ಸರ್ಕಾರ ಅಸ್ವಾಭಾವಿಕ ಜಿಎಸ್‌ಟಿ ದರ ಜಾರಿಗೆ ತರಲು ಹೊರಟಿದೆ. ಆಹಾರ ಪದಾರ್ಥಗಳ ಮೇಲೂ ತೆರಿಗೆ ವಿಧಿಸಿದೆ. ಬಡವರು ಉಪಯೋಗಿಸುವ ಪ್ಯಾಕ್ ಮಾಡಿದ ಅಕ್ಕಿ, ಹಾಲು, ಮೊಸರು, ಮಜ್ಜಿಗೆ, ಹಪ್ಪಳ, ಉಪ್ಪಿನಕಾಯಿ, ಒಣಕಾಳು, ತರಕಾರಿ, ಮಾಂಸ, ಮೀನು ಸೇರಿದಂತೆ ಇನ್ನಿತರ ವಸ್ತುಗಳ ಮೇಲೆ ದೇಶದ ಬಡವರ್ಗದ ಪ್ರಜೆಗಳ ಮೆಲೆ ಚಿಂತನೆ ಇಲ್ಲದೆ ಅಸಂಬದ್ಧವಾದ ತೆರಿಗೆ ವಿಧಿಸಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಅಕ್ಕಿ ಮೇಲೆ ಜಿಎಸ್‌ಟಿ ಹೇರಿರುವುದು ಬಡವರ ಅನ್ನವನ್ನು ಕಸಿಕೊಂಡಂತಾಗಿದೆ. ಈಗಾಗಲೇ ಕೊರೋನಾದ ಹಿನ್ನಲೆಯಲ್ಲಿ ಯಾವುದೇ ಉದ್ಯೋಗವಿಲ್ಲದೆ ಆರ್ಥಿಕತೆಯಿಂದ ಹಾಗು ನಿರುದ್ಯೋಗದಿಂದ ಹಿಂದುಳಿದಿರುವ ದೇಶದ ಬಡ ವರ್ಗದವರ ಸ್ಥಿತಿ ಹೇಳತೀರದಾಗಿದೆ. ಅತಿವೃಷ್ಟಿ, ಅನಾವೃಷ್ಟಿಗಳಿಂದ ಜನಸಾಮಾನ್ಯರು ತೊಂದರೆಗೆ ಒಳಗಾಗಿದ್ದಾರೆ. ಇಂತಹ ಸ್ಥಿತಿಯಲ್ಲಿ ಗಾಯದ ಮೇಲೆ ಬರೆ ಎಳೆದಂತೆ ತೆರಿಗೆಯನ್ನು ವಿಧಿಸಲಾಗಿದೆ. ತಕ್ಷಣ ಜಿಎಸ್‌ಟಿ ರದ್ದು ಮಾಡಬೇಕೆಂದು ವೇದಿಕೆ ಆಗ್ರಹಿಸುತ್ತದೆ ಎಂದರು.
    ವೇದಿಕೆ ತಾಲೂಕು ಅಧ್ಯಕ್ಷ ಜಗದೀಶ್ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಮುಖಂಡರಾದ ಫ್ರಾನ್ಸಿಸ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಸಿಬಿಎಸ್‌ಇ ಪರೀಕ್ಷೆಯಲ್ಲಿ ಶೇ.೧೦೦ರಷ್ಟು ಫಲಿತಾಂಶ




ಎನ್. ವೈಷ್ಣವಿ ಕಾಮತ್(೪೮೫)


ಎಂ. ಪ್ರಜ್ವಲ್ (೪೬೩)


ಪಿ.ವಿ ಲಹರಿ (೪೬೧)


ತೇಜಸ್ವಿನಿ ಗೌಡ(೪೫೫)


ಮೇಘನಾ ಎಂ. ರೆಡ್ಡಿ (೪೫೨)


ಆರ್. ಹೇಮಾಲತಾ(೪೫೨)
    ಭದ್ರಾವತಿ, ಜು. ೨೨: ನಗರದ ನ್ಯೂಟೌನ್ ಶ್ರೀ ಸತ್ಯ ಸಾಯಿ ಜ್ಞಾನಪೀಠ ಶಾಲೆ ಈ ಬಾರಿ ಸಿಬಿಎಸ್‌ಇ ಪರೀಕ್ಷೆಯಲ್ಲಿ ಶೇ.೧೦೦ರಷ್ಟು ಫಲಿತಾಂಶ ಪಡೆದುಕೊಂಡಿದೆ.
    ಶಾಲೆಯ ವಿದ್ಯಾರ್ಥಿನಿ ಎನ್. ವೈಷ್ಣವಿ ಕಾಮತ್ ೫೦೦ಕ್ಕೆ ೪೮೫ ಅತಿ ಹೆಚ್ಚು ಶೇ.೯೭ ಅಂಕ ಪಡೆದುಕೊಂಡಿದ್ದು,  ಉಳಿದಂತೆ ಎಂ. ಪ್ರಜ್ವಲ್ ೫೦೦ಕ್ಕೆ ೪೬೩ ಶೇ.೯೨.೬, ಪಿ.ವಿ ಲಹರಿ ೫೦೦ಕ್ಕೆ ೪೬೧ ಶೇ.೯೨.೨, ತೇಜಸ್ವಿನಿ ಗೌಡ ೫೦೦ಕ್ಕೆ ೪೫೫ ಶೇ.೯೧, ಮೇಘನಾ ಎಂ. ರೆಡ್ಡಿ ೫೦೦ಕ್ಕೆ ೪೫೨ ಶೇ.೯೦.೪ ಹಾಗು ಆರ್. ಹೇಮಾಲತಾ ೫೦೦ಕ್ಕೆ ೫೫೨ಕ್ಕೆ ಶೇ.೯೦.೪ರಷ್ಟು ಅಂಕಗಳನ್ನು ಪಡೆದುಕೊಂಡಿದ್ದಾರೆ.
    ಒಟ್ಟು ೨೫ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲರೂ ವಿದ್ಯಾರ್ಥಿಯಾಗಿದ್ದಾರೆ. ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯ ಪ್ರಭಾಕರ ಬೀರಯ್ಯ, ಪರಮೇಶ್ವರಪ್ಪ, ಪ್ರಾಂಶುಪಾಲರಾದ ಮೃತ್ಯುಂಜಯ ಕಾನಿಟ್ಕರ್, ಶಾಮರಾಯ ಆಚಾರ್, ಉಪಪ್ರಾಂಶುಪಾಲ ಪ್ರಸನ್ನ ಹಾಗು ಶಿಕ್ಷಕ ಮತ್ತು ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

೨ನೇ ಮಹಿಳಾ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ : ಬಿಜೆಪಿ ಸಂಭ್ರಮಾಚರಣೆ

ಒಡಿಶಾ ರಾಜ್ಯದ ಬುಡಕಟ್ಟು ಜನಾಂಗದ ದ್ರೌಪತಿ ಮುರ್ಮು ಅವರು ದೇಶದ ೨ನೇ ಮಹಿಳಾ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ಹಿನ್ನಲೆಯಲ್ಲಿ ಶುಕ್ರವಾರ ಭದ್ರಾವತಿ ತಾಲೂಕು ಬಿಜೆಪಿ ಮಂಡಲ ವತಿಯಿಂದ ನಗರದ ರಂಗಪ್ಪ ವೃತ್ತದಲ್ಲಿ ಸಂಭ್ರಮಾಚರಣೆ ನಡೆಸಲಾಯಿತು.  
    ಭದ್ರಾವತಿ, ಜು. ೨೨: ಒಡಿಶಾ ರಾಜ್ಯದ ಬುಡಕಟ್ಟು ಜನಾಂಗದ ದ್ರೌಪತಿ ಮುರ್ಮು ಅವರು ದೇಶದ ೨ನೇ ಮಹಿಳಾ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ಹಿನ್ನಲೆಯಲ್ಲಿ ಶುಕ್ರವಾರ ತಾಲೂಕು ಬಿಜೆಪಿ ಮಂಡಲ ವತಿಯಿಂದ ನಗರದ ರಂಗಪ್ಪ ವೃತ್ತದಲ್ಲಿ ಸಂಭ್ರಮಾಚರಣೆ ನಡೆಸಲಾಯಿತು.
    ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಬುಡಕಟ್ಟು ಜನಾಂಗದ ಮಹಿಳೆಯೊಬ್ಬರು ದೇಶದ ೧೫ನೇ ರಾಷ್ಟ್ರಪತಿಯಾಗಿರುವುದು ಹೆಮ್ಮೆಯ ವಿಚಾರವಾಗಿದೆ. ದ್ರೌಪದಿ ಮುರ್ಮು ಅವರ ಆಯ್ಕೆ ಭಾರತ ದೇಶದ ಜನರು ಮಾತ್ರವಲ್ಲ ಇಡೀ ಜಗತ್ತು ಕುತೂಹಲದಿಂದ ನೋಡುವಂತಾಗಿದೆ. ಇವರ ಆಯ್ಕೆ ಐತಿಹಾಸಿಕವಾಗಿದೆ ಎಂದು ಬಣ್ಣಿಸಿದ್ದರು.
    ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ ಶ್ರೀನಾಥ್, ಮುಖಂಡರಾದ ಮಂಗೋಟೆ ರುದ್ರೇಶ್, ಎನ್. ವಿಶ್ವನಾಥರಾವ್, ಎಂ. ಪ್ರಭಾಕರ್, ನರಸಿಂಹಚಾರ್, ಎಂ. ಮಂಜುನಾಥ್, ಚನ್ನೇಶ್, ರಾಜಶೇಖರ ಉಪ್ಪಾರ, ರಾಮಚಂದ್ರಪ್ಪ, ಗಣೇಶ್‌ರಾವ್, ರಾಮನಾಥ್ ಬರ್ಗೆ, ಬಿ.ಎಸ್ ಶ್ರೀನಾಥ್, ಸತೀಶ್ ಕುಮಾರ್, ಧನುಷ್ ಬೋಸ್ಲೆ, ಮಂಜುನಾಥ್, ಬಿ.ಎಸ್ ನಾರಾಯಣಪ್ಪ, ಸತ್ಯಣ್ಣ, ವಿಜಯ್, ಶೋಭಾ ಪಾಟೀಲ್, ಹೇಮಾವತಿ, ಅನ್ನಪೂರ್ಣ, ಮಂಜುಳ, ಕವಿತಾ ರಾವ್, ಸುಲೋಚನಾ, ಶ್ಯಾಮಲ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಪ್ರಮುಖರು, ಕಾರ್ಯಕರ್ತರು ಪಾಲ್ಗೊಂಡಿದ್ದರು. ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಲಾಯಿತು.

೨ನೇ ಇಂಡೋ-ನೇಪಾಳ್ ಚಾಂಪಿಯನ್‌ಶಿಪ್ ಪಂದ್ಯಾವಳಿ ವಿಜೇತ ತಂಡಕ್ಕೆ ಅದ್ದೂರಿ ಸ್ವಾಗತ

ಭದ್ರಾವತಿ ತಾಲೂಕಿನ ಕಾರೇಹಳ್ಳಿ ಬಾಲಗಂಗಾಧರನಾಥ ಸ್ವಾಮೀಜಿ ಕೇಂದ್ರೀಯ ವಿದ್ಯಾಲಯ(ಬಿಜಿಎಸ್ ಶಾಲೆ)ದ ವಿದ್ಯಾರ್ಥಿಗಳು ನೇಪಾಳದ ಪೊಖಾರದಲ್ಲಿ ಜರುಗಿದ ೨ನೇ ಇಂಡೋ-ನೇಪಾಳ್ ಚಾಂಪಿಯನ್‌ಶಿಪ್ ಪಂದ್ಯಾವಳಿ ಭಾಗವಹಿಸಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡು ರಾಷ್ಟ್ರಕ್ಕೆ ಕೀರ್ತಿ ತಂದಿದ್ದಾರೆ. ಶುಕ್ರವಾರ ನಗರಕ್ಕೆ ಆಗಮಿಸಿದ ವಿಜೇತ ತಂಡಕ್ಕೆ ಅದ್ದೂರಿ ಸ್ವಾಗತ ಕೋರಲಾಯಿತು.
    ಭದ್ರಾವತಿ, ಜು. ೨೨: ತಾಲೂಕಿನ ಕಾರೇಹಳ್ಳಿ ಬಾಲಗಂಗಾಧರನಾಥ ಸ್ವಾಮೀಜಿ ಕೇಂದ್ರೀಯ ವಿದ್ಯಾಲಯ(ಬಿಜಿಎಸ್ ಶಾಲೆ)ದ ವಿದ್ಯಾರ್ಥಿಗಳು ನೇಪಾಳದ ಪೊಖಾರದಲ್ಲಿ ಜರುಗಿದ ೨ನೇ ಇಂಡೋ-ನೇಪಾಳ್ ಚಾಂಪಿಯನ್‌ಶಿಪ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡು ರಾಷ್ಟ್ರಕ್ಕೆ ಕೀರ್ತಿ ತಂದಿದ್ದಾರೆ. ಶುಕ್ರವಾರ ನಗರಕ್ಕೆ ಆಗಮಿಸಿದ ವಿಜೇತ ತಂಡಕ್ಕೆ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಬಳಿ ಅದ್ದೂರಿಯಾಗಿ ಸ್ವಾಗತ ಕೋರಲಾಯಿತು.
    ನಗರದ ಪ್ರಮುಖರು, ಪೋಷಕರು, ಕ್ರೀಡಾಭಿಮಾನಿಗಳು ವಿಜೇತ ತಂಡ ಆಗಮಿಸುತ್ತಿದ್ದಂತೆ ಮಳೆ ನಡುವೆಯೂ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿ ಸಿಹಿ ಹಂಚಿದರು. ಅಲ್ಲದೆ ವಿಜೇತ ತಂಡದ ಎಲ್ಲರನ್ನು ಸನ್ಮಾನಿಸಿ ಅಭಿನಂದಿಸಿದರು. ನಂತರ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಲ್ಲಿರುವ ಸರ್ ಎಂ. ವಿಶ್ವೇಶ್ವರಾಯನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.


    ಪಿಸಿಎ ಸ್ಪೋರ್ಟ್ಸ್ ಮ್ಯಾನೇಜ್‌ಮೆಂಟ್ ನೇಪಾಳ್ ಮತ್ತು ನ್ಯಾಷನಲ್ ಸ್ಪೋರ್ಟ್ಸ್ & ಎಜ್ಯುಕೇಷನ್ ಡೆವಲಪ್‌ಮೆಂಟ್ ಫೆಡರೇಷನ್ ಇಂಡಿಯಾ ವತಿಯಿಂದ ಆಯೋಜಿಸಲಾಗಿದ್ದ ಪಂದ್ಯಾವಳಿಯಲ್ಲಿ ೧೪ ವರ್ಷದೊಳಗಿನ ವಿಭಾಗದಲ್ಲಿ ಕೇಂದ್ರೀಯದ ವಿದ್ಯಾರ್ಥಿಗಳಾದ ಬಿ.ಎಂ ವೇದಾಂತ್ ಡಿಸ್ಕಸ್ ಥ್ರೋ, ಕೆ. ಸಮಥ ಗುಂಡು ಎಸೆತ, ಶರಥ್ವಿ ಬಾಗ್ಸಲೆ ೨೦೦ ಮೀ. ಓಟ, ಕೆ,ಎಸ್ ಮೊಹಮದ್ ರಯಾನ್ ೪೦೦ ಮೀ. ಓಟ, ಕೆ. ಸುಪ್ರಿತ ಯೋಗಾಸನ ಮತ್ತು ಡಿ. ಚಿನ್ಮಯ ಪ್ರಸಾದ್ ಚೆಸ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಹಾಗು ಕೆ.ಸಿ ಸಮರ್ಥ್ ಪುರಾಣಿಕ್ ಚೆಸ್ ಮತ್ತು ಪಿ. ಜಸ್ವಂತ್ ರೆಡ್ಡಿ ೨೦೦ ಮೀ. ಓಟದಲ್ಲಿ ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ.
    ವಿಐಎಸ್‌ಎಲ್ ಕಾರ್ಮಿಕ ಸಂಘದ ಉಪಾಧ್ಯಕ್ಷ ಕುಮಾರ್ ಎಎಲ್‌ಡಬ್ಲ್ಯೂ, ತರಬೇತಿದಾರರು, ಎಲ್. ವೆಂಕಟೇಶ್ ನಾಯಕ್, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಬಿಜೆಪಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಛಲವಾದಿ ಸಮಾಜದ ಪ್ರಮುಖರಾದ ಎಸ್.ಎಸ್ ಭೈರಪ್ಪ, ಡಿ. ನರಸಿಂಹಮೂರ್ತಿ, ಮಂಜುನಾಥ್, ಎ. ತಿಪ್ಪೇಸ್ವಾಮಿ, ತಾಲೂಕು ಒಕ್ಕಲಿಗ ಸಂಘದ ಅಧ್ಯಕ್ಷ ಎ.ಟಿ ರವಿ, ನಗರಸಭಾ ಸದಸ್ಯ ಕೋಟೇಶ್ವರರಾವ್, ದಿಲೀಪ್, ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಟಿ. ಚಂದ್ರೇಗೌಡ, ಬಿ.ಎಂ ರವಿಕುಮಾರ್, ಧನುಷ್ ಬೋಸ್ಲೆ, ನಕುಲ್, ಮಂಜುನಾಥ್ ಕೊಯ್ಲಿ, ಗಿರೀಶ್ ಸೇರಿದಂತೆ ಪೋಷಕರು, ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದರು.

Thursday, July 21, 2022

ದುಶ್ಚಟಗಳಿಗೆ ಬಲಿಯಾದ ಸಾವಿರಾರು ಕುಟುಂಬಗಳಿಗೆ ಹೊಸ ಬದುಕು

ಭದ್ರಾವತಿ ಬಿ.ಎಚ್ ರಸ್ತೆ ಶ್ರೀ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ತಾಲೂಕು ಶಾಖೆ, ಜಿಲ್ಲಾ ಜನಜಾಗೃತಿ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ನವಜೀವನೋತ್ಸವ ಕಾರ್ಯಕ್ರಮವನ್ನು ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಜಿ. ಆನಂದಕುಮಾರ್ ಉದ್ಘಾಟಿಸಿದರು.
          ಭದ್ರಾವತಿ, ಜು. ೨೧ : ದುಶ್ಚಟಗಳಿಗೆ ಬಲಿಯಾದ ಸಾವಿರಾರು ಕುಟುಂಬಗಳಿಗೆ ಹೊಸ ಬದುಕು ಕಟ್ಟಿಕೊಡುವಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಜನಜಾಗೃತಿ ವೇದಿಕೆ ಮೂಲಕ ಯಶಸ್ವಿಯಾಗಿದೆ ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸಂಟ್ ಪಾಯಿಸ್ ಹೇಳಿದರು.
      ಅವರು ಗುರುವಾರ ನಗರದ ಬಿ.ಎಚ್ ರಸ್ತೆ ಶ್ರೀ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ತಾಲೂಕು ಶಾಖೆ, ಜಿಲ್ಲಾ ಜನಜಾಗೃತಿ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ನವಜೀವನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
      ಮದ್ಯವ್ಯಸನ್ಯಕ್ಕೆ ಬಲಿಯಾದ ಸುಮಾರು ೯೦ ಸಾವಿರ ಮಂದಿ ಕುಡಿತ ಬಿಟ್ಟು ಉತ್ತಮ ಬದುಕು ರೂಪಿಸಿಕೊಂಡಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡಿದ್ದಾರೆ. ಇವರೆಲ್ಲರೂ ಸಂಘಟಿತರಾಗಿ ದುಶ್ಚಟಗಳ ವಿರುದ್ಧ ಜಾಗೃತಿ ಮೂಡಿಸುವಂತಾಗಬೇಕು. ಆಗ ಮಾತ್ರ ಜನಜಾಗೃತಿ ವೇದಿಕೆ ಕಾರ್ಯ ಸಾರ್ಥಕಗೊಳ್ಳುತ್ತದೆ ಎಂದರು.
      ಟ್ರಸ್ಟ್ ಜಿಲ್ಲಾ ನಿರ್ದೇಶಕ ಜೆ. ಚಂದ್ರಶೇಖರ್ ಮಾತನಾಡಿ, ಮಕ್ಕಳ ಉತ್ತಮ ಭವಿಷ್ಯ ರೂಪಿಸುವ ಜವಾಬ್ದಾರಿ ಪೋಷಕರದ್ದಾಗಿದೆ. ಶಿಕ್ಷಣದ ಜೊತೆಗೆ ಉತ್ತಮ ಸಂಸ್ಥಾರ ಸಹ ಮುಖ್ಯವಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆ ಹಾಗು ಅಮ್ಮನವರ ಮಾರ್ಗದರ್ಶನದಲ್ಲಿ ಪ್ರತಿಯೊಬ್ಬರ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಟ್ರಸ್ಟ್ ಕಾಳಜಿ ವಹಿಸಿದ್ದು, ಆ ಮೂಲಕ ಹಲವಾರು ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದೆ ಎಂದರು.
      ಜಿಲ್ಲಾ ಜನ ಜಾಗೃತಿ ವೇದಿಕೆ ಅಧ್ಯಕ್ಷ ಜಿ. ಆನಂದಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು. ಟ್ರಸ್ಟ್ ಚಿತ್ರದುರ್ಗ ಜಿಲ್ಲೆಯ ಪ್ರಾದೇಶಿಕ ನಿರ್ದೇಶಕಿ ಬಿ. ಗೀತಾ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಆರ್. ಕರುಣಾಮೂರ್ತಿ, ಪಾಲಾಕ್ಷಪ್ಪ, ಗೊಂದಿ ಜಯರಾಂ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ತಾಲೂಕು ಯೋಜನಾಧಿಕಾರಿ ಪ್ರಕಾಶ್ ಸ್ವಾಗತಿಸಿದರು.

ಭದ್ರಾ ಜಲಾಶಯ ಅಭಿವೃದ್ಧಿಯಲ್ಲಿ ಸರ್ಕಾರ ನಿರ್ಲಕ್ಷ್ಯತನ : ಕೆ.ಟಿ ಗಂಗಾಧರ್ ಆರೋಪ

ಕರ್ನಾಟಕ ರಾಜ್ಯ ರೈತ ಸಂಘದಿಂದ ಭದ್ರೆಗೆ ಬಾಗಿನ ಸಮರ್ಪಣೆ

ಭದ್ರಾವತಿ ತಾಲೂಕಿನ ಬಿಆರ್‌ಪಿ ಭದ್ರಾ ಜಲಾಶಯದಲ್ಲಿ ಗುರುವಾರ ಕರ್ನಾಟಕ ರಾಜ್ಯ ರೈತ ಸಂಘದ ವರಿಷ್ಠ ಕೆ.ಟಿ ಗಂಗಾಧರ್ ಭದ್ರೆಗೆ ಬಾಗಿನ ಸಮರ್ಪಿಸಿದರು.
    ಭದ್ರಾವತಿ, ಜು. ೨೧: ಭದ್ರಾ ಜಲಾಶಯದ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುವ ಮೂಲಕ ಈ ಭಾಗದ ಕಾರ್ಮಿಕರು, ರೈತರ ಹಿತ ಕಾಪಾಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದ ವರಿಷ್ಠ ಕೆ.ಟಿ ಗಂಗಾಧರ್ ಹೇಳಿದರು.
      ಅವರು ಗುರುವಾರ ತಾಲೂಕಿನ ಬಿಆರ್‌ಪಿ ಭದ್ರಾ ಜಲಾಶಯದಲ್ಲಿ ಭದ್ರೆಗೆ ಬಾಗಿನ ಸಮರ್ಪಿಸಿ ಮಾತನಾಡಿದರು. ಸರ್ಕಾರ ರಾಜ್ಯದ ಇತರೆ ಜಲಾಶಯಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಆದರೆ ಭದ್ರಾ ಜಲಾಶಯದ ಅಭಿವೃದ್ಧಿಯಲ್ಲಿ ನಿರ್ಲಕ್ಷ್ಯತನ ವಹಿಸುತ್ತಿದೆ. ಭದ್ರಾ ಜಲಾಶಯ ಸಹ ಈ ನಾಡಿನ ಆಸ್ತಿ ಎಂಬುದನ್ನು ಯಾರು ಸಹ ಮರೆಯಬಾರದು. ಸರ್ಕಾರ ನಿರ್ಲಕ್ಷ್ಯತನ ವಹಿಸಿದ್ದಲ್ಲಿ ಮುಂದಿನ ದಿನಗಳಲ್ಲಿ ಕಾರ್ಮಿಕರು, ರೈತರು ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
      ಜಲಾಶಯದಿಂದ ನಾಲೆಗೆ ನೀರು ಹರಿಸುವ ತಳ ಭಾಗದ ಸ್ಟೀಲ್ ಬೇಸನ್ ಕಾಮಗಾರಿ ಕಳಪೆಯಿಂದ ಕೂಡಿದ್ದು, ಈ ಬಗ್ಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಹಾಗು ಸರ್ಕಾರದ ಗಮನಕ್ಕೆ ಹಲವಾರು ಬಾರಿ ತರಲಾಗಿತ್ತು. ಆದರೆ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯತನ ವಹಿಸಲಾಗಿದೆ. ಇದರಿಂದಾಗಿ ಪ್ರಸ್ತುತ ಬೇಸನ್ ಕೂಡ ಹಾಳಾಗಿದ್ದು, ತಕ್ಷಣ ಸರ್ಕಾರ ದುರಸ್ತಿ ಕಾರ್ಯಕೈಗೊಳ್ಳಲು ಮುಂದಾಗಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಸಮಸ್ಯೆ ಎದುರಾಗಲಿದೆ. ಇದರಿಂದಾಗಿ ಕಾರ್ಮಿಕರು, ರೈತರು ಸಂಕಷ್ಟಕ್ಕೆ ಒಳಗಾಗಬೇಕಾಗುತ್ತದೆ ಎಂದರು.
      ರೈತರು ನೀರಿನ ಮಿತ ಬಳಕೆ ಬಗ್ಗೆ ಜಾಗೃತಿ ಹೊಂದಬೇಕು. ಕೆರೆಗಳ ಅಭಿವೃದ್ಧಿಯಲ್ಲಿ ಕೈಜೋಡಿಸಬೇಕು. ಅಧಿಕಾರಿಗಳು ಕೆರೆಗಳ ನಿರ್ವಹಣೆ ಜವಾಬ್ದಾರಿ ತೆಗೆದುಕೊಳ್ಳಬೇಕು. ಪ್ರತಿಯೊಬ್ಬರು ಕೆರೆಗಳನ್ನು ಅಭಿವೃದ್ಧಿಪಡಿಸುವ ಕಾರ್ಯದಲ್ಲಿ ಮುಂದಾಬೇಕೆಂದು ಕರೆ ನೀಡಿದರು.
      ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ವಿ ವೀರೇಶ್, ತಾಲೂಕು ಅಧ್ಯಕ್ಷ ಹಿರಿಯಣ್ಣಯ್ಯ, ಹಿರಿಯ ರೈತ ಮುಖಂಡ ಯಶವಂತರಾವ್ ಘೋರ್ಪಡೆ, ರಾಮಚಂದ್ರರಾವ್, ಮಂಜುನಾಥ್, ಸಣ್ಣರಂಗಪ್ಪ ಸೇರಿದಂತೆ ಹಾವೇರಿ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ರೈತ ಮುಖಂಡರು ಪಾಲ್ಗೊಂಡಿದ್ದರು.

೨ನೇ ಇಂಡೋ-ನೇಪಾಳ್ ಚಾಂಪಿಯನ್‌ಶಿಪ್ ಪಂದ್ಯಾವಳಿ ಬಿಜಿಎಸ್ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಭದ್ರಾವತಿ ತಾಲೂಕಿನ ಕಾರೇಹಳ್ಳಿ ಬಾಲಗಂಗಾಧರನಾಥ ಸ್ವಾಮೀಜಿ ಕೇಂದ್ರೀಯ ವಿದ್ಯಾಲಯ(ಬಿಜಿಎಸ್ ಶಾಲೆ)ದ ವಿದ್ಯಾರ್ಥಿಗಳು ನೇಪಾಳದ ಪೊಖಾರದಲ್ಲಿ ಜರುಗಿದ ೨ನೇ ಇಂಡೋ-ನೇಪಾಳ್ ಚಾಂಪಿಯನ್‌ಶಿಪ್ ಪಂದ್ಯಾವಳಿ ಭಾಗವಹಿಸಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡು ರಾಷ್ಟ್ರಕ್ಕೆ  ಕೀರ್ತಿ ತಂದಿದ್ದಾರೆ.
    ಭದ್ರಾವತಿ, ಜು. ೨೧: ತಾಲೂಕಿನ ಕಾರೇಹಳ್ಳಿ ಬಾಲಗಂಗಾಧರನಾಥ ಸ್ವಾಮೀಜಿ ಕೇಂದ್ರೀಯ ವಿದ್ಯಾಲಯ(ಬಿಜಿಎಸ್ ಶಾಲೆ)ದ ವಿದ್ಯಾರ್ಥಿಗಳು ನೇಪಾಳದ ಪೊಖಾರದಲ್ಲಿ ಜರುಗಿದ ೨ನೇ ಇಂಡೋ-ನೇಪಾಳ್ ಚಾಂಪಿಯನ್‌ಶಿಪ್ ಪಂದ್ಯಾವಳಿ ಭಾಗವಹಿಸಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡು ರಾಷ್ಟ್ರಕ್ಕೆ ಕೀರ್ತಿ ತಂದಿದ್ದಾರೆ.
    ಪಿಸಿಎ ಸ್ಪೋರ್ಟ್ಸ್ ಮ್ಯಾನೇಜ್‌ಮೆಂಟ್ ನೇಪಾಳ್ ಮತ್ತು ನ್ಯಾಷನಲ್ ಸ್ಪೋರ್ಟ್ಸ್ & ಎಜ್ಯುಕೇಷನ್ ಡೆವಲಪ್‌ಮೆಂಟ್ ಫೆಡರೇಷನ್ ಇಂಡಿಯಾ ವತಿಯಿಂದ ಆಯೋಜಿಸಲಾಗಿದ್ದ ಪಂದ್ಯಾವಳಿಯಲ್ಲಿ ೧೪ ವರ್ಷದೊಳಗಿನ ವಿಭಾಗದಲ್ಲಿ ಕೇಂದ್ರೀಯದ ವಿದ್ಯಾರ್ಥಿಗಳಾದ ಬಿ.ಎಂ ವೇದಾಂತ್ ಡಿಸ್ಕಸ್ ಥ್ರೋ, ಕೆ. ಸಮಥ ಗುಂಡು ಎಸೆತ, ಶರಥ್ವಿ ಬಾಗ್ಸಲೆ ೨೦೦ ಮೀ. ಓಟ, ಕೆ,ಎಸ್ ಮೊಹಮದ್ ರಯಾನ್ ೪೦೦ ಮೀ. ಓಟ, ಕೆ. ಸುಪ್ರಿತ ಯೋಗಾಸನ ಮತ್ತು ಡಿ. ಚಿನ್ಮಯ ಪ್ರಸಾದ್ ಚೆಸ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಹಾಗು ಕೆ.ಸಿ ಸಮರ್ಥ್ ಪುರಾಣಿಕ್ ಚೆಸ್ ಮತ್ತು ಪಿ. ಜಸ್ವಂತ್ ರೆಡ್ಡಿ ೨೦೦ ಮೀ. ಓಟದಲ್ಲಿ ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ.
    ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳನ್ನು ವಿಐಎಸ್‌ಎಲ್ ಕಾರ್ಮಿಕ ಸಂಘದ ಉಪಾಧ್ಯಕ್ಷ ಕುಮಾರ್ ಎಎಲ್‌ಡಬ್ಲ್ಯೂ ಹಾಗು ಕೇಂದ್ರೀಯ ವಿದ್ಯಾಲಯದ ಆಡಳಿತ ಮಂಡಳಿ, ಪ್ರಾಂಶುಪಾಲರು, ತರಬೇತಿದಾರರು, ಶಿಕ್ಷಕ ಹಾಗು ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
    ವಿಜೇತ ತಂಡ ಶುಕ್ರವಾರ ನಗರದಕ್ಕೆ ಆಗಮಿಸಲಿದ್ದು, ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತಕ್ಕೆ ಶಾಸಕ ಸಂಗಮೇಶ್ವರ್ ಸೇರಿದಂತೆ ಜನಪ್ರತಿನಿಧಿಗಳು, ಗಣ್ಯರು, ಪೋಷಕರು, ಕ್ರೀಡಾಭಿಮಾನಿಗಳು ಮುಂದಾಗಿದ್ದಾರೆ.