ಭದ್ರಾವತಿ ತಾಲೂಕಿನ ದೇವರನರಸೀಪುರ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನೂತನವಾಗಿ ಅಟಲ್ ಟಿಂಕರಿಂಗ್ ಲ್ಯಾಬ್ ಉದ್ಘಾಟಿಸಲಾಯಿತು.
ಭದ್ರಾವತಿ, ಜು. ೨೪: ತಾಲೂಕಿನ ದೇವರನರಸೀಪುರ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನೂತನವಾಗಿ ಅಟಲ್ ಟಿಂಕರಿಂಗ್ ಲ್ಯಾಬ್ ಉದ್ಘಾಟಿಸಲಾಯಿತು.
ಆಟ-ಪಾಠದ ಜೊತೆಯಲ್ಲಿ ನವೀನ ಕೌಶಲ್ಯ, ವೈಜ್ಞಾಜಿಕ ತಂತ್ರಜ್ಞಾನ, ಉದ್ಯೋಗ ಸೃಷ್ಟಿ, ನೂತನ ಅವಿಷ್ಕಾರದ ಜೊತೆ ವೈಜ್ಞಾನಿಕ ಮನೋಭಾವ ಬೆಳವಣಿಗೆಯ ಮೂಲಕ ನವೀನ ಭಾರತ ನಿರ್ಮಾಣಕ್ಕಾಗಿ ಎಟಿಎಲ್ ಲ್ಯಾಬ್ ಸಹಕಾರಿ ಆಗಿವೆ.
ಎರೇಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ಮತ್ತು ಅಂತರಗಂಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕವಿತಾ ಲ್ಯಾಬ್ ಉದ್ಘಾಟಿಸಿದರು. ವಸತಿ ಶಾಲೆಯ ಪ್ರಾಂಶುಪಾಲ ಬಿ. ಬಸವರಾಜಪ್ಪ ಅಧ್ಯಕ್ಷತೆ ವಹಿಸಿದ್ದರು.
ಅಂತರಗಂಗೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶೋಭಾ, ಸದಸ್ಯರಾದ ನಾಗೇಶ್, ರವಿ, ಆನಂದ್, ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯೋಪಾಧ್ಯಾಯರು, ದೇವರನರಸೀಪುರ ಗ್ರಾಮ ಪಂಚಾಯಿತಿ ಸದಸ್ಯರು, ವಸತಿ ಶಾಲೆಯ ಶಿಕ್ಷಕ, ಸಿಬ್ಬಂದಿ ವರ್ಗದವರು, ಪೋಷಕರು ಉಪಸ್ಥಿತರಿದ್ದರು. ಸಹ ಶಿಕ್ಷಕರಾದ ಬಿಂದು ನಿರೂಪಿಸಿದರು. ಕೆ. ರಂಗನಾಥ್ ಸ್ವಾಗತಿಸಿ ಕೃಷ್ಣಪ್ರಸಾದ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ನಿಲಯಪಾಲಕ ಶಿವಕುಮಾರ್ ವಂದಿಸಿದರು.