ಭದ್ರಾವತಿ ನ್ಯೂಟೌನ್ ಅಮಲೋದ್ಭವಿ ಮಾತೆ ದೇವಾಲಯದ ನವೀಕರಣಗೊಂಡ ಪ್ರಾಂಗಣವನ್ನು ಶಿವಮೊಗ್ಗ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಡಾ. ಫ್ರಾನ್ಸಿಸ್ ಸೆರಾವೋ ಲೋಕಾರ್ಪಣೆಗೊಳಿಸಿದರು.
ಭದ್ರಾವತಿ, ಜು. ೨೭ : ನಗರದ ಪ್ರಮುಖ ಕ್ರೈಸ್ತ ದೇವಾಲಯಗಳಲ್ಲಿ ಒಂದಾಗಿರುವ ನ್ಯೂಟೌನ್ ಅಮಲೋದ್ಭವಿ ಮಾತೆ ದೇವಾಲಯದ ನವೀಕರಣಗೊಂಡ ಪ್ರಾಂಗಣವನ್ನು ಶಿವಮೊಗ್ಗ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಡಾ. ಫ್ರಾನ್ಸಿಸ್ ಸೆರಾವೋ ಲೋಕಾರ್ಪಣೆಗೊಳಿಸಿದರು.
ತನ್ನದೇ ಆದ ವಿಶಿಷ್ಟತೆಯನ್ನು ಕಾಯ್ದುಕೊಂಡು ಬಂದಿರುವ ಅಮಲೋದ್ಭವಿ ಮಾತೆ ದೇವಾಲಯದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿದ್ದು, ಇಂಟರ್ಲಾಕ್ ಅಳವಡಿಕೆಯೊಂದಿಗೆ ನವೀಕರಣಗೊಳಿಸುವ ಮೂಲಕ ಪ್ರಾಂಗಣ ಮತ್ತಷ್ಟು ಆಕರ್ಷಕವಾಗಿ ಕಂಗೊಳಿಸುವಂತೆ ಮಾಡಲಾಗಿದೆ. ಲೋಕಾರ್ಪಣೆಗೊಳಿಸಿದ ಡಾ. ಫ್ರಾನ್ಸಿಸ್ ಸೆರಾವೋ ಅವರು ನವೀಕರಣ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ :
ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ೬೦೦ಕ್ಕೂ ಹೆಚ್ಚು ಅಂಕ ಪಡೆದ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಕ್ರೈಸ್ತ ಸಮುದಾಯದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ವೈಸಿಎಸ್/ಐಸಿವೈಎಂ, ಪೀಠ ಸೇವಕರು ಮತ್ತು ಮಹಿಳಾ ಸಂಘಟನೆಯ ನೂತನ ಪದಾಧಿಕಾರಿಗಳ ಪ್ರಮಾಣ ವಚನ ಸ್ವೀಕಾರ ನಡೆಯಿತು.
ದೇವಾಲಯದ ಧರ್ಮಗುರು ಫಾದರ್ ಲಾನ್ಸಿ ಡಿಸೋಜ, ಪಾಲನ ಪರಿಷತ್ ಕಾರ್ಯದರ್ಶಿ ಅಂತೋಣಿ ವಿಲ್ಸನ್, ಡಾನ್ ಬಾಸ್ಕೋ ಕೈಗಾರಿಕಾ ತರಬೇತಿ ಸಂಸ್ಥೆ ನಿರ್ದೇಶಕ ಫಾದರ್ ಆರೋಗ್ಯ ರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.