Thursday, August 4, 2022

ಹಿಂದಿ ಶಿಕ್ಷಕಿ ತ್ರಿವೇಣಿಗೆ ಗೌರವ ಡಾಕ್ಟರೇಟ್ ಪದವಿ

ಭದ್ರಾವತಿ ಹೊಸಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಕನ್ನಡ ಪ್ರೌಢಶಾಲೆಯ ಹಿಂದಿ ಶಿಕ್ಷಕಿ ಎನ್. ತ್ರಿವೇಣಿ ಅವರಿಗೆ ಏಷಿಯಾ ವೇದಿಕ್ ಕಲ್ಚರ್ ರಿಸರ್ಜ್ ಯುನವರ್ಸಿಟಿ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
    ಭದ್ರಾವತಿ, ಆ. ೪: ನಗರದ ಹೊಸಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಕನ್ನಡ ಪ್ರೌಢಶಾಲೆಯ ಹಿಂದಿ ಶಿಕ್ಷಕಿ ಎನ್. ತ್ರಿವೇಣಿ ಅವರಿಗೆ ಏಷಿಯಾ ವೇದಿಕ್ ಕಲ್ಚರ್ ರಿಸರ್ಜ್ ಯುನವರ್ಸಿಟಿ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
    ತ್ರಿವೇಣಿ ಅವರ ಕಲೆ, ಸಾಮಾಜಿಕ ಹಾಗು ಶೈಕ್ಷಣಿಕ ಸೇವೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ಪದವಿ ನೀಡಲಾಗಿದೆ. ತಮಿಳುನಾಡಿನಲ್ಲಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಸಾಧಕರ ಪದವಿ ವಿತರಣಾ ಸಮಾರಂಭದಲ್ಲಿ ತ್ರಿವೇಣಿ ಅವರು ಪದವಿ ಸ್ವೀಕರಿಸಿದ್ದಾರೆ.
    ಇವರು ಹಲವಾರು ವರ್ಷಗಳಿಂದ ವಿಇಎಸ್ ವಿದ್ಯಾಸಂಸ್ಥೆಯಲ್ಲಿ ಹಿಂದಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಮಹಾಮಾರಿ ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಅಲ್ಲದೆ ಭರತನಾಟ್ಯ ನೃತ್ಯ ಕಲಾವಿದೆಯಾಗಿದ್ದು, ಹಲವಾರು ವೇದಿಕೆಗಳಲ್ಲಿ ತಮ್ಮ ಪ್ರತಿಭೆ ಅನಾವರಣಗೊಳಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
    ಇವರ ಸಾಧನೆಗೆ ತಾಲೂಕು ಛಲವಾದಿಗಳ(ಪ.ಜಾ) ಸಮಾಜ, ವಿಇಎಸ್ ವಿದ್ಯಾಸಂಸ್ಥೆ ಆಡಳಿತ ಮಂಡಳಿ, ಕಬಡ್ಡಿ ಕೇಸರಿ ಪ್ರಶಸ್ತಿ ಪುರಸ್ಕೃತ ಎಚ್.ಆರ್ ರಂಗನಾಥ್ ಸೇರಿದಂತೆ ಅನೇಕ ಗಣ್ಯರು ಅಭಿನಂದಿಸಿದ್ದಾರೆ.

ವಿಐಎಸ್‌ಎಲ್ ಆಸ್ಪತ್ರೆಯಲ್ಲಿ ಉಚಿತ ಮೂಳೆ-ಕೀಲು ತಪಾಸಣೆ ಶಿಬಿರ

ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯು ತನ್ನ ಸಾಮಾಜಿಕ ಸಾಂಸ್ಥಿಕ ಹೊಣೆಗಾರಿಕೆ(ಸಿಎಸ್‌ಆರ್)ಯೊ೦ಂದಿಗೆ ಆಜಾದಿ ಕಾ ಅಮೃತ್ ಮಹೋತ್ಸವ ಮತ್ತು ಸೈಲ್ ಸ್ವರ್ಣ ಜಯಂತಿ ಅಂಗವಾಗಿ ಉಚಿತ 'ಮೂಳೆ ಮತ್ತು ಕೀಲು'  ತಪಾಸಣೆ ಶಿಬಿರ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆಯಲ್ಲಿ ಆಯೋಜಿಸಲಾಗಿತ್ತು.
    ಭದ್ರಾವತಿ, ಆ. ೪: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯು ತನ್ನ ಸಾಮಾಜಿಕ ಸಾಂಸ್ಥಿಕ ಹೊಣೆಗಾರಿಕೆ(ಸಿಎಸ್‌ಆರ್)ಯೊ೦ಂದಿಗೆ ಆಜಾದಿ ಕಾ ಅಮೃತ್ ಮಹೋತ್ಸವ ಮತ್ತು ಸೈಲ್ ಸ್ವರ್ಣ ಜಯಂತಿ ಅಂಗವಾಗಿ ಉಚಿತ 'ಮೂಳೆ ಮತ್ತು ಕೀಲು'  ತಪಾಸಣೆ ಶಿಬಿರ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆಯಲ್ಲಿ ಆಯೋಜಿಸಲಾಗಿತ್ತು.
    ಶಿವಮೊಗ್ಗ ಸುಬ್ಬಯ್ಯ ವೈದ್ಯಕೀಯ ಕಾಲೇಜು ಆಸ್ಪತ್ರೆ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಶಿಬಿರವನ್ನು ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ ಉದ್ಘಾಟಿಸಿದರು.
    ವಿಐಎಸ್‌ಎಲ್ ಆಸ್ಪತ್ರೆಯ ಹೆಚ್ಚುವರಿ ಮುಖ್ಯ ವೈದ್ಯಾಧಿಕಾರಿ ಡಾ. ಎಂ.ವೈ ಸುರೇಶ್, ಸುಬ್ಬಯ್ಯ ಆಸ್ಪತ್ರೆಯ ಮೂಳೆ ಮತ್ತು ಕೀಲು ರೋಗ ವಿಭಾಗದ ಮುಖ್ಯಸ್ಥರಾದ ಡಾ. ಹರೀಶ್ ಪೈ, ಡಾ. ಸಂದೀಪ್ ಕುಬ್ಸಾದ್, ಸಹಾಯಕ ಮುಖ್ಯಸ್ಥ ಡಾ. ಶರತ್, ಸಹಾಯಕ ವೈದ್ಯರಾದ ಡಾ. ಶಾನ್ ಮತ್ತು ಡಾ. ಶಾಜಿಯಾ ಅವರನ್ನೊಳಗೊಂಡ ತಂಡ ಶಿಬಿರವನ್ನು ಯಶಸ್ವಿಯಾಗಿ ನಡೆಸಿಕೊಟ್ಟಿತು. ಕಾರ್ಖಾನೆಯ ಕಾಯಂ, ಗುತ್ತಿಗೆ ಕಾರ್ಮಿಕರು ಹಾಗು ಅವರ ಕುಟುಂಬ ವರ್ಗದವರು ಸೇರಿದಂತೆ ಒಟ್ಟು ೭೬ ಮಂದಿ ಶಿಬಿರದ ಸದುಪಯೋಗ ಪಡೆದುಕೊಂಡರು.
    ವಿಐಎಸ್‌ಎಲ್ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ವರ್ಗದವರು, ಕಾರ್ಖಾನೆಯ ಅಧಿಕಾರಿಗಳು, ಕಾರ್ಮಿಕ ಮುಖಂಡರು ಉಪಸ್ಥಿತರಿದ್ದರು.


ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯು ತನ್ನ ಸಾಮಾಜಿಕ ಸಾಂಸ್ಥಿಕ ಹೊಣೆಗಾರಿಕೆ(ಸಿಎಸ್‌ಆರ್)ಯೊ೦ಂದಿಗೆ ಆಜಾದಿ ಕಾ ಅಮೃತ್ ಮಹೋತ್ಸವ ಮತ್ತು ಸೈಲ್ ಸ್ವರ್ಣ ಜಯಂತಿ ಅಂಗವಾಗಿ ಉಚಿತ 'ಮೂಳೆ ಮತ್ತು ಕೀಲು'  ತಪಾಸಣೆ ಶಿಬಿರ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆಯಲ್ಲಿ ಆಯೋಜಿಸಲಾಗಿತ್ತು. ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ ಅವರ ಆರೋಗ್ಯ ತಪಾಸಣೆ ನಡೆಸಲಾಯಿತು.

ಯುವ ಸಮೂಹ ಮೋಸ, ವಂಚನೆ ವಿರುದ್ಧ ಹೋರಾಟ ನಡೆಸಬೇಕಿದೆ : ಡಿ. ಮಂಜುನಾಥ್

ಭದ್ರಾವತಿ ನ್ಯೂಟೌನ್ ವಿಐಎಸ್‌ಎಸ್‌ಜೆ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಸ್ವಾತಂತ್ರ್ಯಕ್ಕೆ ಭದ್ರಾವತಿ ತಾಲೂಕಿನ ಕೊಡುಗೆ ಕುರಿತ ಕಾರ್ಯಕ್ರಮ ಉದ್ಯಮಿ ಬಿ.ಕೆ ಜಗನ್ನಾಥ, ಡಿ. ಮಂಜುನಾಥ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
    ಭದ್ರಾವತಿ, ಆ. ೪: ಪ್ರಸ್ತುತ ದೇಶದಲ್ಲಿ ನಂಬಿಕೆ ಎಂಬುದು ದೂರವಾಗಿದ್ದು, ಮೋಸ, ವಂಚನೆ ಹೆಚ್ಚಾಗಿದೆ. ಇದರ ವಿರುದ್ಧ ಯುವ ಸಮೂಹ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಹೇಳಿದರು.
    ಅವರು ಗುರುವಾರ ನ್ಯೂಟೌನ್ ವಿಐಎಸ್‌ಎಸ್‌ಜೆ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಸ್ವಾತಂತ್ರ್ಯಕ್ಕೆ ಭದ್ರಾವತಿ ತಾಲೂಕಿನ ಕೊಡುಗೆ ಕುರಿತ ಕಾರ್ಯಕ್ರಮ ಪಾಲ್ಗೊಂಡು ಮಾತನಾಡಿದರು.
    ಬ್ರಿಟಿಷರು ಈ ದೇಶದ ಜನರನ್ನು ದಾಸ್ಯಕ್ಕೆ ಒಳಪಡಿಸಿ ೨೦೦ ವರ್ಷಗಳ ಆಳ್ವಿಕೆ ನಡೆಸಿದ್ದು, ಇಂತಹ ಸಂದರ್ಭದಲ್ಲಿ ದಾಸ್ಯಕ್ಕೆ ಒಳಗಾದ ದೇಶದ ಜನರಲ್ಲಿ ಮಹಾತ್ಮಗಾಂಧಿ ಒಳಗೊಂಡಂತೆ ಅನೇಕ ರಾಷ್ಟ್ರ ನಾಯಕರು ದೇಶಭಕ್ತಿ ಅಭಿವ್ಯಕ್ತಿಗೊಳಿಸಿ ಜಾಗೃತಿ ಮೂಡಿಸುವ ಮೂಲಕ ಹೋರಾಟಕ್ಕೆ ಪ್ರೇರೇಪಿಸಿದರು. ಅಂದು ದೇಶದ ಜನರು ರಾಷ್ಟ್ರ ನಾಯಕರ ಮೇಲೆ ನಂಬಿಕೆ ಹೊಂದಿದ್ದರು. ಸಾವಿರಾರು ಯುವ ಸಮೂಹ ತಮ್ಮ ಶೈಕ್ಷಣಿಕ ಬದುಕನ್ನು ಸ್ವಾತಂತ್ರ್ಯಕ್ಕಾಗಿ ಬಲಿಕೊಟ್ಟು ಹೋರಾಟಕ್ಕೆ ಧುಮುಕಿದರು. ಇದರ ಫಲವಾಗಿ ನಾವೆಲ್ಲರೂ ಇಂದು ೭೫ನೇ ಸ್ವಾತಂತ್ರ್ಯ ಸಂಭ್ರಮ ಆಚರಿಸುವಂತಾಗಿದೆ ಎಂದರು.
    ೭೫ರ ಸ್ವಾತಂತ್ರ್ಯ ಸಂಭ್ರಮ ಕೇವಲ ಧ್ವಜಗಳನ್ನು ಹಾರಿಸುವುದಲ್ಲ ಬದಲಾಗಿ ನಮ್ಮ ಮುಂದಿನ ಸವಾಲುಗಳ ಬಗ್ಗೆ ಅವಲೋಕಿಸುವುದು, ಹೋರಾಟಗಳನ್ನು ರೂಪಿಸುವುದಾಗಿದೆ. ಪ್ರಸ್ತುತ ದೇಶದಲ್ಲಿ ನಂಬಿಕೆ ಇಲ್ಲವಾಗಿದೆ. ಮೋಸ, ವಂಚನೆ ಅಧಿಕವಾಗಿದೆ. ನಾವೆಲ್ಲರೂ ಸಂವಿಧಾನವನ್ನು ಗೌರವಿಸುವ ಮೂಲಕ ಅದರ ಆಶಯಗಳಿಗೆ ತಕ್ಕಂತೆ ನಡೆದುಕೊಳ್ಳುವ ಜೊತೆಗೆ ಭವಿಷ್ಯದ ಸರ್ಕಾರ ಆಯ್ಕೆ ಮಾಡಿಕೊಳ್ಳುವ ಬಹುದೊಡ್ಡ ಜವಾಬ್ದಾರಿ ನಮ್ಮ ಮೇಲಿದೆ ಎಂದರು.
    ಇಂದು ದೇಶದಲ್ಲಿ ನಿರುದ್ಯೋಗ ಸಂಖ್ಯೆ ಹೆಚ್ಚಳವಾಗಿದೆ. ಶ್ರೀಮಂತರು ಮತ್ತಷ್ಟು ಶ್ರೀಮಂತರಾಗುತ್ತಿದ್ದಾರೆ. ಕೌಶಲ್ಯ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳು ತಮ್ಮ ಜವಾಬ್ದಾರಿಗಳನ್ನು ಅರ್ಥಮಾಡಿಕೊಳ್ಳಬೇಕು. ಮುಂದೊಂದು ದಿನ ಯಾವುದೋ ಕಾರ್ಖಾನೆಯಲ್ಲಿ ನೌಕರನಾಗಿರುವ ಬದಲು ಒಂದಿಷ್ಟು ಜನರಿಗೆ ಉದ್ಯೋಗ ನೀಡುವಷ್ಟರ ಮಟ್ಟಿಗೆ ಬೆಳೆಯಬೇಕೆಂಬ ಗುರಿ ಹೊಂದಬೇಕು. ಆ ನಿಟ್ಟಿನಲ್ಲಿ ಮುನ್ನಡೆಯಬೇಕೆಂದು ಕರೆ ನೀಡಿದರು.
    ಉದ್ಯಮಿ ಬಿ.ಕೆ ಜಗನ್ನಾಥ ಕಾರ್ಯಕ್ರಮ ಉದ್ಘಾಟಿಸಿದರು. ಪಾಂಶುಪಾಲ ಮಹಾಲಿಂಗಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪರಿಷತ್ ತಾಲೂಕು ಕಾರ್ಯದರ್ಶಿ ಎಚ್. ತಿಮ್ಮಪ್ಪ ಉಪನ್ಯಾಸ ನೀಡಿದರು.
    ಹಿರಿಯ ಸಾಹಿತಿ ಜಿ.ವಿ ಸಂಗಮೇಶ್ವರ್, ಜಾನಪದ ಪರಿಷತ್ ತಾಲೂಕು ಶಾಖೆ ಅಧ್ಯಕ್ಷ ಕೋಡ್ಲು ಯಜ್ಞಯ್ಯ, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷೆ ಎಂ.ಎಸ್ ಸುಧಾಮಣಿ, ಕಾರ್ಯದರ್ಶಿ ಎಂ.ಈ ಜಗದೀಶ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಉಪನ್ಯಾಸಕ ಎಚ್.ಆರ್ ಶ್ರೀಧರೇಶ್ ಭಾರದ್ವಾಜ್ ನಿರೂಪಿಸಿದರು. ಕೆ.ಟಿ ಪ್ರಸನ್ನ, ಬಿ. ಗುರು, ಉಮರ್ ಕೋಯ, ಉಪನ್ಯಾಸಕ, ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

‘ಹರ್ ಘರ್ ತಿರಂಗಾ’ ಅಭಿಯಾನ : ಜಾಗೃತಿ ಜಾಥಾ

ದೇಶದ ಸ್ವಾತಂತ್ರ್ಯದ ೭೫ರ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಹಾಗು ರಾಜ್ಯ ಸರ್ಕಾರಗಳು 'ಹರ್ ಘರ್ ತಿರಂಗಾ' ಎಂಬ ಘೋಷವಾಕ್ಯದೊಂದಿಗೆ ಆ.೧೩ ರಿಂದ ೧೫ರ ವರೆಗೆ ದೇಶದ ಪ್ರತಿಯೊಬ್ಬರಲ್ಲೂ ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಗೊಳಿಸಿ ದಾಖಲಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ಅಭಿಯಾನವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಭದ್ರಾವತಿಯಲ್ಲಿ ನಗರಸಭೆ ವತಿಯಿಂದ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಗುರುವಾರ ಹಮ್ಮಿಕೊಳ್ಳಲಾಗಿದ್ದ ಜಾಥಾ ಕಾರ್ಯಕ್ರಮಕ್ಕೆ ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್ ಚಾಲನೆ ನೀಡಿದರು.
    ಭದ್ರಾವತಿ, ಆ. ೪: ದೇಶದ ಸ್ವಾತಂತ್ರ್ಯದ ೭೫ರ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಹಾಗು ರಾಜ್ಯ ಸರ್ಕಾರಗಳು 'ಹರ್ ಘರ್ ತಿರಂಗಾ' ಎಂಬ ಘೋಷವಾಕ್ಯದೊಂದಿಗೆ ಆ.೧೩ ರಿಂದ ೧೫ರ ವರೆಗೆ ದೇಶದ ಪ್ರತಿಯೊಬ್ಬರಲ್ಲೂ ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಗೊಳಿಸಿ ದಾಖಲಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ಅಭಿಯಾನವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ನಗರಸಭೆ ವತಿಯಿಂದ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಗುರುವಾರ ಹಮ್ಮಿಕೊಳ್ಳಲಾಗಿದ್ದ ಜಾಥಾ ಕಾರ್ಯಕ್ರಮಕ್ಕೆ ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್ ಚಾಲನೆ ನೀಡಿದರು.
    ಜಾಥಾ ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್ ಬಳಿ ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡಿತು. ಶಾಲಾ ವಿದ್ಯಾರ್ಥಿಗಳು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ನಗರಸಭೆ ಸದಸ್ಯರು ಅಭಿಯಾನ ಕುರಿತು ಜಾಗೃತಿ ಮೂಡಿಸುವ ಫಲಕಗಳನ್ನು ಹಿಡಿದು ಸಾಗಿದರು. ರಸ್ತೆ ಎರಡು ಬದಿಗಳ ಅಂಗಡಿ ಮುಂಗಟ್ಟುಗಳ ವ್ಯಾಪಾರಸ್ಥರಿಗೆ, ಬೀದಿ ಬದಿ ವ್ಯಾಪಾರಿಗಳಿಗೆ, ಪಾದಚಾರಿಗಳಿಗೆ, ವಾಹನ  ಸವಾರರಿಗೆ ಕರ ಪತ್ರಗಳನ್ನು ವಿತರಿಸಲಾಯಿತು.
    ಜಾಥಾ ರಂಗಪ್ಪ ವೃತ್ತದಲ್ಲಿ ಅಂತ್ಯಗೊಂಡಿತು. ಜಾಥಾ ಆರಂಭದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ನಂತರ ರಾಷ್ಟ್ರ ಧ್ವಜಗಳನ್ನು ಹಿಡಿದು ಘೋಷಣೆಗಳನ್ನು ಹಾಕಲಾಯಿತು.


    ತಹಸೀಲ್ದಾರ್ ಆರ್. ಪ್ರದೀಪ್, ನಗರಸಭೆ ಉಪಾಧ್ಯಕ್ಷ ಚನ್ನಪ್ಪ, ಪೌರಾಯುಕ್ತ ಮನುಕುಮಾರ್, ಕಂದಾಯಾಧಿಕಾರಿ ರಾಜ್‌ಕುಮಾರ್, ಪರಿಸರ ಅಭಿಯಂತರ ಪ್ರಭಾಕರ್, ಹಿರಿಯ ಆರೋಗ್ಯ ನಿರೀಕ್ಷಕ ಆರ್.ಬಿ ಸತೀಶ್, ಸಮುದಾಯ ಸಂಘಟನಾ ಅಧಿಕಾರಿ ಈಶ್ವರಪ್ಪ ಹಾಗು ನಗರಸಭೆ ಚುನಾಯಿತ ಹಾಗು ನಾಮನಿರ್ದೇಶಿತ ಮತ್ತು ಆಶ್ರಯ ಸಮಿತಿಯ ಬಹುತೇಕ ಸದಸ್ಯರು, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಹಿರಿಯ ಆರೋಗ್ಯ ಸಹಾಯಕ ಆನಂದಮೂರ್ತಿ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಹಾಗು ಕನಕ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.  

Wednesday, August 3, 2022

ವಿಐಎಸ್‌ಎಲ್ ಕಾರ್ಖಾನೆಗೆ ಬಂಡವಾಳ ತೊಡಗಿಸಿ : ಬಿ.ವೈ ರಾಘವೇಂದ್ರ

ಕೇಂದ್ರ ಉಕ್ಕು ಪ್ರಾಧಿಕಾರದ ಅಧ್ಯಕ್ಷೆ ರಾಧ ಸೋಮಮಂಡಲ್ ಜೊತೆ ಚರ್ಚೆ

ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಅಗತ್ಯವಿರುವ ಬಂಡವಾಳ ತೊಡಗಿಸುವುದು ಹಾಗು ನಿವೃತ್ತ ಕಾರ್ಮಿಕರ ವಿವಿಧ ಬೇಡಿಕೆಗಳ ಕುರಿತು ಬುಧವಾರ ದೆಹಲಿಯಲ್ಲಿ ಸಂಸದ ಬಿ.ವೈ ರಾಘವೇಂದ್ರ ಪ್ರಾಧಿಕಾರದ ಅಧ್ಯಕ್ಷೆ ರಾಧ ಸೋಮಮಂಡಲ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
    ಭದ್ರಾವತಿ, ಆ. ೩: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಅಗತ್ಯವಿರುವ ಬಂಡವಾಳ ತೊಡಗಿಸುವುದು ಹಾಗು ನಿವೃತ್ತ ಕಾರ್ಮಿಕರ ವಿವಿಧ ಬೇಡಿಕೆಗಳ ಕುರಿತು ಬುಧವಾರ ದೆಹಲಿಯಲ್ಲಿ ಸಂಸದ ಬಿ.ವೈ ರಾಘವೇಂದ್ರ ಪ್ರಾಧಿಕಾರದ ಅಧ್ಯಕ್ಷೆ ರಾಧ ಸೋಮಮಂಡಲ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
    ತಕ್ಷಣ ಕಾರ್ಖಾನೆಗೆ ಅಗತ್ಯವಿರುವ ಬಂಡವಾಳ ತೊಡಗಿಸುವುದು, ಕಾರ್ಖಾನೆಯ ವಸತಿ ಗೃಹಗಳನ್ನು ದೀರ್ಘಾವಧಿ ಬಾಡಿಗೆಗೆ ನೀಡುವುದು, ಮೆಡಿ ಕ್ಲೈಮ್ ಇನ್ಸೂರೆನ್ಸ್ ಪಾಲಿಸಿಯಿಂದ ವಂಚಿತರಾದ ನಿವೃತ್ತ ಕಾರ್ಮಿಕರಿಗೆ ಉಪಯೋಗವಾಗುವಂತೆ ಅವಕಾಶ ಕಲ್ಪಿಸಿಕೊಡುವುದು. ೩೩ ತಿಂಗಳ ಅವಧಿಗೆ ವಸತಿ ಗೃಹಗಳ ಕರಾರು ನವೀಕರಣಗೊಳಿಸುವುದು  ಹಾಗು ಖಾಲಿ ಇರುವ ಸುಮಾರು ೫೦೦ ವಸತಿ ಗೃಹಗಳನ್ನು ನಿವೃತ್ತ ಕಾರ್ಮಿಕರಿಗೆ ಬಾಡಿಗೆಗೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಸಂಸದರು ಅಧ್ಯಕ್ಷರೊಂದಿಗೆ ಚರ್ಚೆ ನಡೆಸಿದರು.
    ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ಅಧ್ಯಕ್ಷ ಬಿ.ಜಿ ರಾಮಲಿಂಗಯ್ಯ, ಸೈಲ್ ನಿವೃತ್ತ ಕಾರ್ಮಿಕರ ಸಂಘದ ಕೇಂದ್ರ ಒಕ್ಕೂಟದ ಉಪಾಧ್ಯಕ್ಷ ಸಿ.ಎಸ್ ನಾಗಭೂಷಣ್ ಹಾಗು ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.

ಜಾನಪದ ಕಲಾವಿದ ಉಮೇಶ್‌ನಾಯ್ಕರಿಗೆ ಸನ್ಮಾನ : ಆಕಾಡೆಮಿಗೆ ಆಯ್ಕೆ

ಜಾನಪದ ಕಲೆಯಲ್ಲಿ ಸುಮಾರು ೨೫ ವರ್ಷಗಳಿಂದ ತೊಡಗಿಸಿಕೊಂಡು ರಾಜ್ಯಾದ್ಯಂತ ಸಂಚರಿಸಿ ಜಾನಪದ ಕಲೆ ಕುರಿತು ಯುವ ಸಮುದಾಯಕ್ಕೆ ಜಾಗೃತಿ ಮೂಡಿಸುತ್ತಿರುವ ಕಲಾವಿದ ಉಮೇಶ್ ನಾಯ್ಕ ಅವರನ್ನು ಶಿವಮೊಗ್ಗ "ಆಸರೆ" ಮಹಿಳಾ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಆ. ೩: ಜಾನಪದ ಕಲೆಯಲ್ಲಿ ಸುಮಾರು ೨೫ ವರ್ಷಗಳಿಂದ ತೊಡಗಿಸಿಕೊಂಡು ರಾಜ್ಯಾದ್ಯಂತ ಸಂಚರಿಸಿ ಜಾನಪದ ಕಲೆ ಕುರಿತು ಯುವ ಸಮುದಾಯಕ್ಕೆ ಜಾಗೃತಿ ಮೂಡಿಸುತ್ತಿರುವ ಕಲಾವಿದ ಉಮೇಶ್ ನಾಯ್ಕ ಅವರನ್ನು ಶಿವಮೊಗ್ಗ "ಆಸರೆ" ಮಹಿಳಾ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
    ನಮ್ಮ ಹಿರಿಯರು ಗ್ರಾಮೀಣ ಸೊಗಡಿನ ಆಡು ಭಾಷೆಯಲ್ಲಿ ಜಾನಪದ ಪದಗಳನ್ನು ಕಟ್ಟುತ್ತಾ ಮನಸ್ಸನ್ನು ಹಗುರವಾಗಿಸಿಕೊಳ್ಳುತ್ತಿದ್ದರು. ಇಂತಹ ಜಾನಪದ ಕಲೆ ಪ್ರಸ್ತುತ ದಿನಮಾನಗಳಲ್ಲಿ ಕಣ್ಮರೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಮೂಲತಃ ದಾವಣಗೆರೆ ತಾಲೂಕು ಚಿನ್ನಸಮುದ್ರದ ನಿವಾಸಿ ಉಮೇಶ್‌ನಾಯ್ಕ ಅವರು ಜಾನಪದ ಕಲೆಯನ್ನು ಉಳಿಸಿಬೆಳೆಸುವ ಕಾಯಕದಲ್ಲಿ ತೊಡಗಿಸಿಕೊಂಡಿದ್ದಾರೆ.  
    ಯಾವುದೇ ಫಲಾಪೇಕ್ಷೆ ಇಲ್ಲದೆ ಪ್ರತಿ ಹಳ್ಳಿಹಳ್ಳಿಗೂ ಕಾಲ್ನಾಡಿಗೆಯಲ್ಲಿ ಸಂಚರಿಸಿ ಜಾನಪದ ಕಲೆ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಜೊತೆಗೆ ಕಲೆಯನ್ನು ಮೈಗೂಡಿಸಿಕೊಳ್ಳುವಂತೆ ಪ್ರೋತ್ಸಾಹಿಸುತ್ತಿದ್ದಾರೆ. ಇವರ ಕಲಾ ಸೇವೆಯನ್ನು ಗುರುತಿಸಿ "ಆಸರೆ" ಮಹಿಳಾ ಸಂಘ ಸನ್ಮಾನಿಸಿ ಗೌರವಿಸಿದೆ. ಸಂಘದ ಪದಾಧಿಕಾರಿಗಳು, ಮಹಿಳಾ ಪ್ರಮುಖರು ಉಪಸ್ಥಿತರಿದ್ದರು.  


ಜಾನಪದ ಕಲಾವಿದ ಉಮೇಶ್ ನಾಯ್ಕ
    ಲಂಬಾಣಿ ಸಂಸ್ಕೃತಿ ಮತ್ತು ಭಾಷಾ ಆಕಾಡೆಮಿಗೆ ನೇಮಕ :
    ಇವರ ಕಲಾ ಸೇವೆಯನ್ನು ಗುರುತಿಸಿ ಸರ್ಕಾರ ಲಂಬಾಣಿ ಸಂಸ್ಕೃತಿ ಮತ್ತು ಭಾಷಾ ಆಕಾಡೆಮಿ ಸದಸ್ಯರನ್ನಾಗಿ ನೇಮಕಗೊಳಿಸಿದೆ.
    ಇತ್ತೀಚೆಗೆ ನಡೆದ ಆಕಾಡೆಮಿಯ ಮೊದಲ ಸರ್ವ ಸದಸ್ಯರ ಸಭೆಯಲ್ಲಿ ರಾಜ್ಯದ ೩ ಮಂದಿಯನ್ನು ಸದಸ್ಯರನ್ನಾಗಿ ಆಯ್ಕೆ ಮಾಡಿಕೊಳ್ಳಲು ತೀರ್ಮಾನಿಸಲಾಗಿದ್ದು, ಈ ೩ ಜನರ ಪೈಕಿ ಉಮೇಶ್ ನಾಯ್ಕ ಸಹ ಒಬ್ಬರಾಗಿದ್ದಾರೆ. ಇವರಿಗೆ ಜನಪ್ರತಿನಿಧಿಗಳು, ಗಣ್ಯರು, ಜಾನಪದ ಕಲಾವಿದರು ಅಭಿನಂದಿಸಿದ್ದಾರೆ.

ಅಣ್ಣನಿಂದ ತಮ್ಮನ ಮೇಲೆ ಗುಂಡು


    ಭದ್ರಾವತಿ, ಜು. ೩: ದಾರಿ ಮಧ್ಯದಲ್ಲಿ ಹೂವಿನ ಗಿಡಗಳನ್ನು ನೆಟ್ಟು ಜಮೀನಿಗೆ ಹೋಗದಂತೆ ಅಡ್ಡಿಪಡಿಸುತ್ತಿದ್ದಾರೆಂದು ಆಕ್ರೋಶಗೊಂಡ ವ್ಯಕ್ತಿಯೋರ್ವ ತಮ್ಮನ ಕುಟುಂಬವನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊನೆಗೆ ಮನೆಯಲ್ಲಿದ್ದ ನಾಡಬಂದೂಕಿನಿಂದ ತಮ್ಮನ ಮೇಲೆ ಗುಂಡು ಹಾರಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
    ತಾಲೂಕಿನ ಸಿದ್ದರಮಟ್ಟಿ ಗ್ರಾಮದ ಮುನಿಸ್ವಾಮಿ ಎಂಬುವರು ತಮ್ಮ ಮುರುಗೇಶ್(೩೫) ಮೇಲೆ ಗುಂಡು ಹಾರಿಸಿದ್ದು, ಸದ್ಯ ಗುಂಡು ಎದೆಗೆ ಬೀಳದೆ ತೊಡೆಗೆ ತಗುಲಿದೆ. ಇದರಿಂದಾಗಿ ಪ್ರಾಣಾಪಾಯ ತಪ್ಪಿದೆ. ಗಾಯಗೊಂಡಿರುವ ಮುರುಗೇಶ್ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    ಘಟನೆ ವಿವರ :
    ಗ್ರಾಮದ ನಿವಾಸಿ ಆರ್ಮುಗಂ ಎಂಬುವರು ೨ ಎಕರೆ ಜಮೀನು ಹೊಂದಿದ್ದು, ಇವರು ನಿಧನ ಹೊಂದಿದ್ದ ನಂತರ ೭ ಜನ ಮಕ್ಕಳಿಗೆ ಜಮೀನು ಹಂಚಿಕೆಯಾಗಿದೆ. ಹಿರಿಯ ಮಗ ಮುನಿಸ್ವಾಮಿ ಮತ್ತು ಕಿರಿಯ ಮಗ ಮುರುಗೇಶ್ ಕುಟುಂಬದ ನಡುವೆ ಜಮೀನು ಸಂಬಂಧ ಗಲಾಟೆ ನಡೆಯುತ್ತಿದ್ದು, ಮುನಿಸ್ವಾಮಿ ಮಂಗಳವಾರ ಬೆಳಿಗ್ಗೆ  ತಮ್ಮನ ಪತ್ನಿ, ಮಗಳು ಹಾಗು ಮಾವನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ವಿಚಾರ ತಿಳಿದು ಪ್ರಶ್ನಿಸಲು ಬಂದ ಮುರುಗೇಶ್ ಮೇಲೂ ಆಕ್ರೋಶಗೊಂಡು ಮನೆಯಲ್ಲಿದ್ದ ನಾಡಬಂದೂಕಿನಿಂದ ಗುಂಡು ಹಾರಿಸಲಾಗಿದೆ. ಸದ್ಯ ಗುಂಡು ಮುರುಗೇಶ್ ತೊಡಗೆ ತಗುಲಿದೆ ಎನ್ನಲಾಗಿದೆ.
    ಮುರುಗೇಶ್ ಮೊದಲು ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ತೆರಳಿ ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.