Sunday, September 11, 2022

ವಿಐಎಸ್‌ಎಲ್ ಸಹಕಾರ ಬ್ಯಾಂಕ್ ವತಿಯಿಂದ ಕ್ರೀಡಾಪಟು ಬಿ.ಎಂ ವೇದಾಂತ್‌ಗೆ ಸನ್ಮಾನ

ನೇಪಾಳದ ಪೊಖಾರದಲ್ಲಿ ಜರುಗಿದ ೨ನೇ ಇಂಡೋ ನೇಪಾಳ್ ಚಾಂಪಿಯನ್‌ಶಿಪ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಡಿಸ್ಕಸ್ ಥ್ರೋ ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದಿರುವ ಭದ್ರಾವತಿ ತಾಲೂಕಿನ ಕಾರೇಹಳ್ಳಿ ಬಾಲಗಂಗಾಧರನಾಥ ಸ್ವಾಮೀಜಿ ಕೇಂದ್ರೀಯ ವಿದ್ಯಾಲಯ(ಬಿಜಿಎಸ್ ಶಾಲೆ) ವಿದ್ಯಾರ್ಥಿ ಬಿ.ಎಂ ವೇದಾಂತ್ ಅವರನ್ನು ಭಾನುವಾರ ವಿಐಎಸ್‌ಎಲ್ ಉದ್ಯೋಗಿಗಳ ಸಹಕಾರ ಬ್ಯಾಂಕ್ ನಿಯಮಿತದಿಂದ ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಸೆ. ೧೧: ನೇಪಾಳದ ಪೊಖಾರದಲ್ಲಿ ಜರುಗಿದ ೨ನೇ ಇಂಡೋ ನೇಪಾಳ್ ಚಾಂಪಿಯನ್‌ಶಿಪ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಡಿಸ್ಕಸ್ ಥ್ರೋ ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದಿರುವ ತಾಲೂಕಿನ ಕಾರೇಹಳ್ಳಿ ಬಾಲಗಂಗಾಧರನಾಥ ಸ್ವಾಮೀಜಿ ಕೇಂದ್ರೀಯ ವಿದ್ಯಾಲಯ(ಬಿಜಿಎಸ್ ಶಾಲೆ) ವಿದ್ಯಾರ್ಥಿ ಬಿ.ಎಂ ವೇದಾಂತ್ ಅವರನ್ನು ಭಾನುವಾರ ವಿಐಎಸ್‌ಎಲ್ ಉದ್ಯೋಗಿಗಳ ಸಹಕಾರ ಬ್ಯಾಂಕ್ ನಿಯಮಿತದಿಂದ ಸನ್ಮಾನಿಸಿ ಗೌರವಿಸಲಾಯಿತು.
    ನ್ಯೂಟೌನ್ ಶಾರದ ಮಂದಿರದಲ್ಲಿ ನಡೆದ ಬ್ಯಾಂಕಿನ ೯೮ನೇ ವಾರ್ಷಿಕ ಮಹಾಸಭೆಯಲ್ಲಿ ಬ್ಯಾಂಕಿನ ಉದ್ಯೋಗಿ ಮಂಜುನಾಥ್ ಅವರ ಪುತ್ರರಾಗಿರುವ ಬಿ.ಎಂ ವೇದಾಂತ್ ಅವರನ್ನು ಸನ್ಮಾನಿಸಲಾಯಿತು. ಬ್ಯಾಂಕಿನ ಉಪಾಧ್ಯಕ್ಷೆ ಕೆ. ಚಂದ್ರಾವತಿ ಅಧ್ಯಕ್ಷತೆ ವಹಿಸಿದ್ದರು. ಎಚ್.ಎಸ್ ರಾಘವೇಂದ್ರ, ಆರ್. ಪ್ರೇಮ್‌ಕುಮಾರ್, ಬಿ. ಸಂತೋಷ್‌ಕುಮಾರ್, ಪಿ. ರಾಜು, ಕೆ.ಎಸ್ ರಾಘವೇಂದ್ರ, ಎಚ್.ಆರ್ ದಿವಾಕರ್, ವೈ.ಎಸ್ ನಾಗೇಶ್, ಸಿ. ವಿನಯ್‌ಕುಮಾರ್ ಮತ್ತು ಕೆ.ಎಚ್ ಬಸವರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕಲ್ಯಾಣಮ್ಮ ನಿಧನ

ಕಲ್ಯಾಣಮ್ಮ
    ಭದ್ರಾವತಿ, ಸೆ. ೧೧: ತಾಲೂಕಿನ ಭಂಡಾರಹಳ್ಳಿ ನಿವಾಸಿ ಕಲ್ಯಾಣಮ್ಮ(೯೨) ಭಾನುವಾರ ಬೆಳಿಗ್ಗೆ ನಿಧನ ಹೊಂದಿದರು.
    ೩ ಪುತ್ರರು, ೪ ಪುತ್ರಿಯರನ್ನು ಹೊಂದಿದ್ದರು. ಇವರ ಅಂತ್ಯಕ್ರಿಯೆ ಸಂಜೆ ಹುತ್ತಾಕಾಲೋನಿಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು. ಇವರ ನಿಧನಕ್ಕೆ ನಗರದ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಸಹಕಾರಸಂಘಗಳಲ್ಲಿ ನಂಬಿಕೆ, ವಿಶ್ವಾಸ ಹಾಗು ಪ್ರಾಮಾಣಿಕತೆ ಬಹಳ ಮುಖ್ಯ : ಕಾಗಿನೆಲೆ ಶ್ರೀ

ಭದ್ರಾವತಿ ಬಿ.ಎಚ್ ರಸ್ತೆ ಶ್ರೀ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಜರುಗಿದ ಶ್ರೀ ಕನಕ ಪತ್ತಿನ ಸಹಕರ ಸಂಘ ನಿಯಮಿತದ ದಶಮಾನೋತ್ಸವ ಸಮಾರಂಭದಲ್ಲಿ ಶ್ರೀ ಕ್ಷೇತ್ರ ಕಾಗಿನೆಲೆ ಕನಕ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಅವರಿಗೆ ಗುರು ವಂದನೆ ಸಲ್ಲಿಸಲಾಯಿತು.    
    ಭದ್ರಾವತಿ, ಸೆ. ೧೧: ಸಹಕಾರ ಸಂಘಗಳಲ್ಲಿ ನಂಬಿಕೆ, ವಿಶ್ವಾಸ ಹಾಗು ಪ್ರಾಮಾಣಿಕತೆ ಬಹಳ ಮುಖ್ಯ ಎಂದು ಶ್ರೀ ಕ್ಷೇತ್ರ ಕಾಗಿನೆಲೆ ಕನಕ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದರು.
    ಶ್ರೀಗಳು ಭಾನುವಾರ ನಗರದ ಬಿ.ಎಚ್ ರಸ್ತೆ ಶ್ರೀ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಜರುಗಿದ ಶ್ರೀ ಕನಕ ಪತ್ತಿನ ಸಹಕರ ಸಂಘ ನಿಯಮಿತದ ದಶಮಾನೋತ್ಸವ ಸಮಾರಂಭದ ದಿವ್ಯ ಸಾನಿಧ್ಯವಹಿಸಿ ಮಾತನಾಡಿದರು.
    ಸಹಕಾರ ಸಂಘ ಮುನ್ನಡೆಸುವವರಲ್ಲಿ ನಂಬಿಕೆ, ವಿಶ್ವಾಸ ಹಾಗು ಪ್ರಾಮಾಣಿಕತೆ ಎಂಬುದು ಬಹಳ ಮುಖ್ಯವಾಗಿದೆ. ಆಗ ಮಾತ್ರ ಸಹಕಾರ ಸಂಘ ನಿರೀಕ್ಷೆಗೂ ಮೀರಿದ ಬೆಳವಣಿಗೆ ಹೊಂದುತ್ತದೆ. ಕನಕದಾಸರು ತಮ್ಮ ವಚನಗಳಲ್ಲಿ ಇದನ್ನು ಸ್ಪಷ್ಟಪಡಿಸಿದ್ದಾರೆ. ಎಲ್ಲಿ ವಿಶ್ವಾಸ, ನಂಬಿಕೆ ಕಳೆದುಕೊಳ್ಳುತ್ತೇವೆಯೋ ಅಲ್ಲಿ ಬೆಳವಣಿಗೆ ನಿರೀಕ್ಷಿಸಲು ಸಾಧ್ಯವಿಲ್ಲ ಎಂದರು.
    ಸಮಾಜದಲ್ಲಿ ಸಹಕಾರ ಸಂಘಗಳು ಅಗತ್ಯವಾಗಿದ್ದು, ಹಿಂದುಳಿದ ಸಮಾಜಗಳು ಸದೃಢಗೊಳ್ಳಲು ಹೆಚ್ಚು ಸಹಕಾರಿಯಾಗಿವೆ. ಸಹಕಾರ ಸಂಘಗಳ ಬೆಳವಣಿಗೆಗೆ ಎಲ್ಲರೂ ಸಹ ಕೈಜೋಡಿಸಬೇಕು. ನಮ್ಮ ಅನಗತ್ಯ ದುಂದು ವೆಚ್ಚಗಳಿಗೆ ಕಡಿವಾಣಹಾಕಬೇಕು. ಸಮುದಾಯಗಳಲ್ಲಿನ ಕೆಲವು ಮೂಡನಂಬಿಕೆ, ಮೌಢ್ಯ ಆಚರಣೆಗಳಿಂದ ದೂರ ಉಳಿಯಬೇಕು. ಆರ್ಥಿಕ ಶಿಸ್ತಿನ ವಿವೇಚನೆ ಬೆಳೆಸಿಕೊಳ್ಳಬೇಕು. ಅನಗತ್ಯವಾಗಿ ವ್ಯಯ ಮಾಡುವ ಹಣವನ್ನು ಸಹಕಾರ ಸಂಘಗಳಲ್ಲಿ ತೊಡಗಿಸಿದಾಗ ಭವಿಷ್ಯದಲ್ಲಿ ಅದು ನಿಮ್ಮ ನೆರವಿಗೆ ಬರುತ್ತದೆ. ಅಲ್ಲದೆ ಸಮಾಜದಲ್ಲಿ ಮುಂದುವರೆದ ಸಮುದಾಯಗಳಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
    ಪ್ರಾಸ್ತಾವಿಕವಾಗಿ ಮಾತನಾಡಿದ ಸಂಘದ ನಿರ್ದೇಶಕ, ತಾಲೂಕು ಕುರುಬರ ಸಂಘದ ಅಧ್ಯಕ್ಷ ಬಿ.ಎಂ ಸತೋಷ್, ಕಳೆದ ೧೦ ವರ್ಷಗಳ ಹಿಂದೆ ಆರಂಭಗೊಂಡ ಸಹಕಾರ ಸಂಘ ಪ್ರಸ್ತುತ ೧೦ ಕೋ.ರು. ಗಳಿಗೂ ಹೆಚ್ಚಿನ ವಹಿವಾಟು ಹೊಂದಿದೆ. ಅಲ್ಲದೆ ಸಮಾಜದಲ್ಲಿ ಇತರೆ ಸಂಘಗಳಿಗೆ ಮಾದರಿಯಾಗಿ ಗುರುತಿಸಿಕೊಂಡಿದ್ದು, ಇದಕ್ಕೆ ಸಂಘದ ಹಿರಿಯರ ಮಾರ್ಗದರ್ಶನ, ಮುನ್ನಡೆಸುತ್ತಿರುವವರಲ್ಲಿನ ಪ್ರಾಮಾಣಿಕತೆ, ಬದ್ಧತೆ  ಕಾರಣವಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಬೆಳವಣಿಗೆ ಹೊಂದುವ ವಿಶ್ವಾಸವಿದೆ ಎಂದರು.
    ನಿವೃತ್ತ ಐಎಎಸ್ ಅಧಿಕಾರಿ ಬಿ.ಎಸ್ ಶೇಖರಪ್ಪ, ಸಂಘದ ಉಪಾಧ್ಯಕ್ಷ ಡಾ. ಎಚ್.ಆರ್ ನರೇಂದ್ರ, ನಗರಸಭಾ ಸದಸ್ಯರಾದ ಕಾಂತರಾಜ್, ಅನಿತಾ ಮಲ್ಲೇಶ್, ಆರ್. ಶ್ರೇಯಸ್(ಚಿಟ್ಟೆ), ಶಶಿಕಲಾ ನಾರಾಯಣಪ್ಪ, ಮಂಜುಳ ಸುಬ್ಬಣ್ಣ, ಜಿಲ್ಲಾ ಸಹಕಾರಿ ಯೂನಿಯನ್ ಬ್ಯಾಂಕ್ ಮಾಜಿ ಅಧ್ಯಕ್ಷ ಟಿ.ಎಸ್ ದುಗ್ಗೇಶ್, ಸಂಘದ ನಿರ್ದೇಶಕರಾದ ಬಿ.ಎಚ್ ವಸಂತ, ಬಿ.ಎಸ್ ಗೋಪಾಲ್, ವೈ. ನಟರಾಜ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

"ನಾನು ಯಾವುದೇ ಆಹಾರ ಪದ್ದತಿಗೆ ವಿರೋಧವಿಲ್ಲ. ಆಹಾರ ಪದ್ದತಿ ಅವರವರ ಆಯ್ಕೆ. ಆದರೆ ಆಹಾರ ಸೇವನೆಯಲ್ಲಿನ ಇತಿಮಿತಿ ಬಗ್ಗೆ ಎಲ್ಲರೂ ಅರಿವು ಹೊಂದಿರಬೇಕು.  ಸಂಪ್ರದಾಯದ ಆಚರಣೆ ನೆಪದಲ್ಲಿ ಅನಗತ್ಯವಾಗಿ ದುಂದು ವೆಚ್ಚ ಮಾಡಬಾರದು."
   - ಶ್ರೀ ನಿರಂಜನಾನಂದಪುರಿ ಸ್ವಾಮೀಜಿ

    ಸಂಘದ ಅಧ್ಯಕ್ಷ ಡಿ. ಪ್ರಭಾಕರ ಬೀರಯ್ಯ ಅಧ್ಯಕ್ಷತೆ ವಹಿಸಿದ್ದರು. ನಿರ್ದೇಶಕ ಎಂ. ರಾಜು ಸ್ವಾಗತಿಸಿದರು. ಪ್ರಶಾಂತ್ ಸಣ್ಣಕ್ಕಿ ಕಾರ್ಯಕ್ರಮ ನಿರೂಪಿಸಿದರು.

Saturday, September 10, 2022

ಗಮನ ಸೆಳೆಯುತ್ತಿದೆ ಅಯೋಧ್ಯೆ ಶ್ರೀರಾಮನನ್ನು ಹೋಲುವ ವಿನಾಯಕ ಮೂರ್ತಿ

ಸರ್.ಎಂ ವಿಶ್ವೇಶ್ವರಾಯ ಕನ್ನಡ ಯುವಕರ ಸಂಘದಿಂದ ಪ್ರತಿಷ್ಠಾಪನೆ, ಸೆ.೧೧ರಂದು ವಿಸರ್ಜನೆ

ಭದ್ರಾವತಿ ನಗರಸಭೆ ವ್ಯಾಪ್ತಿಯ ಹುತ್ತಾಕಾಲೋನಿ, ಜಿಂಕ್‌ಲೈನ್ ಮತ್ತು ಅಪ್ಟೈರ‍್ಸ್ ಬಿಲ್ಡಿಂಗ್ ಒಳಗೊಂಡ ಪ್ರಮುಖ ವೃತ್ತದಲ್ಲಿ ಈ ಬಾರಿ ಅಯೋಧ್ಯೆ ಶ್ರೀರಾಮನನ್ನು ಹೋಲುವ ವಿಶಿಷ್ಟ ವಿನಾಯಕ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದ್ದು, ಗಣಹೋಮ, ಅನ್ನಸಂತರ್ಪಣೆ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಜರುಗಿದವು.
    ಭದ್ರಾವತಿ, ಸೆ. ೧೦: ನಗರಸಭೆ ವ್ಯಾಪ್ತಿಯ ಹುತ್ತಾಕಾಲೋನಿ, ಜಿಂಕ್‌ಲೈನ್ ಮತ್ತು ಅಪ್ಟೈರ‍್ಸ್ ಬಿಲ್ಡಿಂಗ್ ಒಳಗೊಂಡ ಪ್ರಮುಖ ವೃತ್ತದಲ್ಲಿ ಈ ಬಾರಿ ಅಯೋಧ್ಯೆ ಶ್ರೀರಾಮನನ್ನು ಹೋಲುವ ವಿಶಿಷ್ಟ ವಿನಾಯಕ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದ್ದು, ಈ ವಿನಾಯಕ ಮೂರ್ತಿ ವಿಸರ್ಜನೆ ಸೆ.೧೧ರ ಭಾನುವಾರ ಸಂಜೆ ನಡೆಯಲಿದೆ.
    ಸರ್.ಎಂ ವಿಶ್ವೇಶ್ವರಾಯ ಕನ್ನಡ ಯುವಕರ ಸಂಘದ ವತಿಯಿಂದ ೭ನೇ ವರ್ಷದ ಅಂಗವಾಗಿ ಪ್ರತಿಷ್ಠಾಪಿಸಲಾಗಿರುವ ಸುಮಾರು ೬.೫ ಅಡಿ ಎತ್ತರವಿರುವ ಶ್ರೀ ವಿನಾಯಕ ಮೂರ್ತಿ ಬಿಲ್ಲು, ಬಾಣ ಹಿಡಿದ ಶ್ರೀರಾಮನನ್ನು ಹೋಲುತ್ತಿದ್ದು, ಭಕ್ತರನ್ನು ಆಕರ್ಷಿಸುತ್ತಿದೆ.
    ಕಡದಕಟ್ಟೆ ಪಾವರ್ತಿ ಶಾಮಿಯಾನ ಹಾಗು ಇನ್ನಿತರ ದಾನಿಗಳು, ಸ್ಥಳೀಯ ನಿವಾಸಿಗಳ ಸಹಕಾರದೊಂದಿಗೆ ೧೨ ದಿನಗಳ ಕಾಲ ವಿನಾಯಕ ಮೂರ್ತಿಯನ್ನು ವೈಶಾಕ್, ಚಂದ್ರಶೇಖರ್, ವಿನಾಯಕ, ಪ್ರಮೋದ್, ಸುರೇಶ್, ಪ್ರವೀಣ್ ಸೇರಿದಂತೆ ಇನ್ನಿತರರನ್ನೊಳಗೊಂಡ ಯುವಕರ ತಂಡ ಪ್ರತಿಷ್ಠಾಪಿಸುವಲ್ಲಿ ಯಶಸ್ವಿಯಾಗಿದೆ.


    ಪ್ರತಿಷ್ಠಾಪನೆ ಅಂಗವಾಗಿ ಸ್ವಾಮಿ ಮತ್ತು ದ್ವಾರಕನಾಥ ನೇತೃತ್ವದಲ್ಲಿ ಗಣಹೋಮ ಸೇರಿದಂತೆ ಧಾರ್ಮಿಕ ಆಚರಣೆಗಳು, ಮಹಿಳೆಯರಿಂದ ಕೀರ್ತನೆಗಳು, ಭಜನೆ ಹಾಗು ಸಾವಿರಾರು ಮಂದಿಗೆ ಅನ್ನಸಂತರ್ಪಣೆ ಸಹ ನೆರವೇರಿಸುವ ಮೂಲಕ ಯುವಕರ ತಂಡ ಗಮನ ಸೆಳೆದಿದೆ.
ಭಾನುವಾರ ಸಂಜೆ ೪ ಗಂಟೆಗೆ ಕಲಾತಂಡಗಳೊಂದಿಗೆ ವಿಸರ್ಜನಾ ಪೂರ್ವ ಮೆರವಣಿಗೆ ನಡೆಯಲಿದ್ದು, ರಾತ್ರಿ ವಿಶ್ವೇಶ್ವರಯ ನಗರದ ಬಳಿ ಭದ್ರಾ ಕಾಲುವೆಯಲ್ಲಿ ಮೂರ್ತಿ ವಿಸರ್ಜನೆಗೊಳ್ಳಲಿದೆ.


ಭದ್ರಾವತಿ ನಗರಸಭೆ ವ್ಯಾಪ್ತಿಯ ಹುತ್ತಾಕಾಲೋನಿ, ಜಿಂಕ್‌ಲೈನ್ ಮತ್ತು ಅಪ್ಟೈರ‍್ಸ್ ಬಿಲ್ಡಿಂಗ್ ಒಳಗೊಂಡ ಪ್ರಮುಖ ವೃತ್ತದಲ್ಲಿ ಈ ಬಾರಿ ಅಯೋಧ್ಯೆ ಶ್ರೀರಾಮನನ್ನು ಹೋಲುವ ವಿಶಿಷ್ಟ ವಿನಾಯಕ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ.




ವಲಯಮಟ್ಟದ ಕ್ರೀಡಾಕೂಟದಲ್ಲಿ ಅರಬಿಳಚಿ ಸರ್ಕಾರಿ ಶಾಲೆಗೆ ಹಲವು ಬಹುಮಾನ

ಭದ್ರಾವತಿ ತಾಲೂಕಿನ ಕಲ್ಲಿಹಾಳ್ ವಲಯಮಟ್ಟದ ಕ್ರೀಡಾಕೂಟದಲ್ಲಿ ಅರಬಿಳಚಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

    ಭದ್ರಾವತಿ, ಸೆ. ೧೦: ತಾಲೂಕಿನ ಕಲ್ಲಿಹಾಳ್ ವಲಯಮಟ್ಟದ ಕ್ರೀಡಾಕೂಟದಲ್ಲಿ ಅರಬಿಳಚಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
    ಕಬಡ್ಡಿ ಸ್ಪರ್ಧೆಯಲ್ಲಿ ಬಾಲಿಕಿಯರು ಪ್ರಥಮ ಸ್ಥಾನ ಬಾಲಕರು ದ್ವಿತೀಯ ಸ್ಥಾನ ಹಾಗು ಅಥ್ಲೆಟಿಕ್ಸ್ ವಿಭಾಗದಲ್ಲಿ ೧ ಪ್ರಥಮ, ೨ ದ್ವಿತೀಯ ಸ್ಥಾನಗಳಲ್ಲಿ ಗೆಲುವು ಸಾಧಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ.
    ವಿಜೇತ ವಿದ್ಯಾರ್ಥಿಗಳಿಗೆ ಶಾಲೆಯ ಮುಖ್ಯ ಶಿಕ್ಷಕರು ಹಾಗು ಶಿಕ್ಷಕ ಮತ್ತು ಸಿಬ್ಬಂದಿ ವರ್ಗದವರು ಹಾಗು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಹಾಗು ಗ್ರಾಮಸ್ಥರು ಅಭಿನಂದಿಸಿದ್ದಾರೆ.

ಮಾರಿ ಸುರೇಶ್ ನಿಧನ

ಮಾರಿ ಸುರೇಶ್
    ಭದ್ರಾವತಿ, ಸೆ. ೧೦: ನಗರದ ಬಿ.ಎಚ್ ರಸ್ತೆ ೫ನೇ ಕ್ರಾಸ್ ನಿವಾಸಿ ಮಾರಿ ಸುರೇಶ್(೫೬) ಶುಕ್ರವಾರ ನಿಧನ ಹೊಂದಿದರು.
    ಸುರೇಶ್ ಸುಮಾರು ೨೦ಕ್ಕೂ ಹೆಚ್ಚು ವರ್ಷಗಳಿಂದ ನಗರದ ದುರ್ಗಾ ನರ್ಸಿಂಗ್ ಹೋಂನಲ್ಲಿ ಕರ್ತವ್ಯ ನಿರ್ವಹಿಸುವ ಮೂಲಕ ಚಿರಪರಿಚಿತರಾಗಿದ್ದರು. ಇವರ ಅಂತ್ಯಕ್ರಿಯೆ ಶನಿವಾರ ಬೈಪಾಸ್ ರಸ್ತೆಯಲ್ಲಿರುವ ಕ್ರೈಸ್ತರ ಸಮಾಧಿಯಲ್ಲಿ ನೆರವೇರಿತು. ಇವರ ನಗರದ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಗರ್ಭಿಣಿ ಸ್ತ್ರೀಯರಿಗೆ ಪೌಷ್ಠಿಕಾಂಶಯುಕ್ತ ಆಹಾರ ಅತ್ಯಗತ್ಯ : ನ್ಯಾ. ವಿ.ಎನ್.ಮಿಲನ


ಶಿಶು ಅಭಿವೃದ್ಧಿ ಇಲಾಖೆ,ಆರೋಗ್ಯ ಇಲಾಖೆ, ಕಾನೂನು ಸೇವಾ ಪ್ರಾಧಿಕಾರಿ,ವಕೀಲರ ಸಂಘ ಸಂಯುಕ್ತವಾಗಿ ಗುರುವಾರ ಆಯೋಜಿಸಿದ್ದ ರಾಷ್ಟ್ರೀಯ ಪೋಷಣ್ ಸಪ್ತಾಹ ಉದ್ಘಾಟನೆಯನ್ನು ಸಿವಿಲ್ ಜಡ್ಜ್ ನ್ಯಾಯಾಧೀಶರಾದ ವಿ.ಎನ್.ಮಿಲನ ಉದ್ಘಾಟಿಸಿದರು.
    ಭದ್ರಾವತಿ, ಸೆ. ೧೦: ಗರ್ಭಿಣಿ ಸ್ತ್ರೀಯರು ಉತ್ತಮ ಪೌಷ್ಟಿಕಾಂಶ ಆಹಾರ ಸೇವನೆ ಮಾಡುವ ಮೂಲಕ ಮಕ್ಕಳ ಆರೋಗ್ಯ ರಕ್ಷಣೆಗೆ ಮುಂದಾಗಬೇಕೆಂದು  ನ್ಯಾಯಾಧೀಶರಾದ ವಿ.ಎನ್.ಮಿಲನ ಹೇಳಿದರು.
ಅವರು ಶಿಶು ಅಭಿವೃದ್ಧಿ ಮತ್ತು ಆರೋಗ್ಯ ಇಲಾಖೆ, ಕಾನೂನು ಸೇವಾ ಪ್ರಾಧಿಕಾರ ಹಾಗು ವಕೀಲರ ಸಂಘ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಪೋಷಣ್ ಸಪ್ತಾಹ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
    ಗರ್ಭಿಣಿ ಮಹಿಳೆಯರು ವೈದ್ಯರ ಸಲಹೆ ಜತೆಗೆ ಮನೆಯ ಹಿರಿಯರ ಸಲಹೆ ಪಡೆದು ತಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ಒಳಿತು ಎಂದರು.
    ತಾಲೂಕು ವೈದ್ಯಾಧಿಕಾರಿ ಡಾ. ಅಶೋಕ್ ಮಾತನಾಡಿ, ಹಲವು ಉತ್ಕೃಷ್ಟ ಮಟ್ಟದ ಆಹಾರಗಳು ನಮ್ಮ ಮನೆಯಲ್ಲಿಯೇ, ಸುತ್ತಮುತ್ತಲ ಪರಿಸರದಲ್ಲಿಯೇ ಲಭ್ಯವಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವ ಅಂಗನವಾಡಿ ಆಶಾ ಕಾರ್ಯಕರ್ತೆಯರು ಗರ್ಭಿಣಿ ಮಹಿಳೆಯರಿಗೆ ಅರಿವು ಮೂಡಿಸಬೇಕು. ಮಹಿಳೆಯರು ಗರ್ಭಾವಸ್ಥೆಗೆ ಕಾಲಿಟ್ಟ ತಕ್ಷಣ ನೋಂದಾಣಿ ಮಾಡಿಕೊಳ್ಳುವ ಮೂಲಕ ಆರೋಗ್ಯ ಇಲಾಖೆಯಿಂದ ತಾಯಿ ಮತ್ತು ಮಗುವಿಗೆ ಸಿಗುವ ಸೌಲಭ್ಯ ಪಡೆಯಬೇಕೆಂದರು.
    ಸರ್ಕಾರಿ ಅಭಿಯೋಜಕ ತ್ಯಾಗರಾಜ್, ವಕೀಲರ ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ, ಸಿಡಿಪಿಒ ಸಿ. ಸುರೇಶ್, ಪ್ರೇಮಾ ಸೇರಿದಂತೆ ಇತರರು ಉಪಸ್ಥಿತರಿದ್ದರು. ಇದೇ ವೇಳೆ ಅಂಗನವಾಡಿಗಳಿಗೆ ಅಗತ್ಯ ಇರುವ ಆರೋಗ್ಯ ಕಿಟ್ ವಿತರಣೆ ಮಾಡಲಾಯಿತು.