ಭದ್ರಾವತಿ, ಅ. ೨೨ : ನಗರದ ಲಯನ್ಸ್ ಮತ್ತು ಲಿಯೋ ಕ್ಲಬ್ ವತಿಯಿಂದ ಶಿವಮೊಗ್ಗ ನಂಜಪ್ಪ ಮಲ್ಟಿ ಸ್ಪೆಷಾಲಿಟಿ ಹಾಗು ನಂಜಪ್ಪ ಲೈಫ್ಕೇರ್ ಸಹಕಾರದೊಂದಿಗೆ ಶನಿವಾರ ಹಮ್ಮಿಕೊಳ್ಳಲಾಗಿದ್ದ ಉಚಿತ ಹೃದ್ರೋಗ, ಮಧುಮೇಹ ಮತ್ತು ರಕ್ತದೊತ್ತಡ ಸಂಬಂಧಿಸಿದ ತಪಾಸಣಾ ಶಿಬಿರದಲ್ಲಿ ಸುಮಾರು ೧೫೦ಕ್ಕೂ ಹೆಚ್ಚು ಮಂದಿ ಪಾಲ್ಗೊಂಡು ಸದುಪಯೋಗಪಡೆದುಕೊಂಡರು.
ಉಂಬ್ಳೆಬೈಲು ರಸ್ತೆಯಲ್ಲಿರುವ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಶಿಬಿರದಲ್ಲಿ ನುರಿತ ವೈದ್ಯರು, ಸಿಬ್ಬಂದಿಗಳನ್ನೊಳಗೊಂಡ ೨೩ ಜನರ ತಂಡ ತಪಾಸಣೆ ನಡೆಸಿತು. ಬೆಳಿಗ್ಗೆ ೯.೩೦ರಿಂದ ಆರಂಭಗೊಂಡ ಶಿಬಿರ ಸಂಜೆ ೪ರವರೆಗೂ ನಡೆಯಿತು.
ಲಯನ್ಸ್ ಕ್ಲಬ್ ಅಧ್ಯಕ್ಷ ಎ.ಎನ್ ಕಾರ್ತಿಕ್, ಕಾರ್ಯದರ್ಶಿ ನಾಗರಾಜ್ ಎಂ. ಶೇಟ್, ಖಜಾಂಚಿ ದರ್ಶನ್, ಪ್ರಮುಖರಾದ ಶಿವರುದ್ರಯ್ಯ, ಹೆಬ್ಬಂಡಿ ನಾಗರಾಜ್, ಎಲ್. ದೇವರಾಜ್ ಸೇರಿದಂತೆ ಕ್ಲಬ್ ಪ್ರಮುಖರು ಪಾಲ್ಗೊಂಡಿದ್ದರು.
ಭದ್ರಾವತಿಯಲ್ಲಿ ಲಯನ್ಸ್ ಮತ್ತು ಲಿಯೋ ಕ್ಲಬ್ ವತಿಯಿಂದ ಶಿವಮೊಗ್ಗ ನಂಜಪ್ಪ ಮಲ್ಟಿ ಸ್ಪೆಷಾಲಿಟಿ ಹಾಗು ನಂಜಪ್ಪ ಲೈಫ್ಕೇರ್ ಸಹಕಾರದೊಂದಿಗೆ ಶನಿವಾರ ಉಚಿತ ಹೃದ್ರೋಗ, ಮಧುಮೇಹ ಮತ್ತು ರಕ್ತದೊತ್ತಡ ಸಂಬಂಧಿಸಿದ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.