ಭದ್ರಾವತಿ ತಾಲೂಕಿನ ಶ್ರೀ ರಾಮನಗರದ ಶ್ರೀ ರಾಮೇಶ್ವರ ಯುವಕರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಜೆಡಿಎಸ್ ಪಕ್ಷದ ಮುಖಂಡರಾದ ಶಾರದ ಅಪ್ಪಾಜಿ, ಎಸ್. ಮಣಿಶೇಖರ್, ಧರ್ಮೇಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಭದ್ರಾವತಿ, ನ. ೨೯: ತಾಲೂಕಿನ ಶ್ರೀ ರಾಮನಗರದ ಶ್ರೀ ರಾಮೇಶ್ವರ ಯುವಕರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವ ಜೆಡಿಎಸ್ ಪಕ್ಷದ ಮುಖಂಡರಾದ ಶಾರದ ಅಪ್ಪಾಜಿ ಉದ್ಘಾಟಿಸಿದರು.
ಶ್ರೀ ರಾಮೇಶ್ವರ ರಂಗಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಭದ್ರಾವತಿ ಬೀಟ್ಸ್ ಆರ್ಕೇಸ್ಟ್ರಾ ವತಿಯಿಂದ ರಸಮಂಜರಿ ಕಾರ್ಯಕ್ರಮ ನಡೆಯಿತು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಮಣಿಶೇಖರ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಧರ್ಮೇಗೌಡ(ಕುಂಬ್ರಿ ಚಂದ್ರಣ್ಣ), ವೀರಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಎಲ್ ಯಶೋಧರಯ್ಯ, ಜೆಡಿಎಸ್ ಪಕ್ಷದ ಮುಖಂಡರಾದ ಭಾಗ್ಯಮ್ಮ, ಶ್ರೀ ರಾಮೇಶ್ವರ ಯುವಕರ ಸಂಘದ ಗೌರವಾಧ್ಯಕ್ಷ ಟಿ.ಎಸ್ ಶಶಿಕಾಂತ, ಅಧ್ಯಕ್ಷ ಎಸ್.ಪಿ ಅಭಿರಾಜ್, ನಿರಂಜನ ಕೆ ಗೌಡ ಸೇರಿದಂತೆ ಸಂಘದ ಪದಾಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರು, ಎಂ.ಜೆ ಅಪ್ಪಾಜಿ ಅಭಿಮಾನಿಗಳು, ಗ್ರಾಮದ ಪ್ರಮುಖರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.