Monday, December 12, 2022

ಡಿ.೧೩ರಂದು ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯಲ್ಲಿ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ

ಡಿ.೧೩ರಂದು ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯಲ್ಲಿ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ

    ಭದ್ರಾವತಿ, ಡಿ. ೧೩ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಛೇರಿ, ಶಿವಮೊಗ್ಗ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗು ನ್ಯೂಟೌನ್ ಪ್ರಶಾಂತಿ ಸೇವಾ ಟ್ರಸ್ಟ್, ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ವತಿಯಿಂದ ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಡಿ.೧೩ರ ಮಂಗಳವಾರ ಬೆಳಿಗ್ಗೆ ೧೦ ಗಂಟೆಗೆ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಲಾಗಿದೆ.
    ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸಿ ನಾರಾಯಣಗೌಡ, ಗೃಹ ಸಚಿವ ಆರಗ ಜ್ಞಾನೇಂದ್ರ, ಪ್ರಾಥಮಿಕ ಹಾಗು ಪ್ರೌಢ ಶಿಕ್ಷಣ ಖಾತೆ ಸಚಿವ ಬಿ.ಸಿ ನಾಗೇಶ್, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಸಂಸದ ಬಿ.ವೈ ರಾಘವೇಂದ್ರ, ಶಾಸಕರಾದ ಕೆ.ಎಸ್ ಈಶ್ವರಪ್ಪ, ಹರತಾಳು ಹಾಲಪ್ಪ, ಎಸ್. ಕುಮಾರ್ ಬಂಗಾರಪ್ಪ, ಕೆ.ಬಿ ಅಶೋಕ್ ನಾಯ್ಕ್, ಆಯನೂರು ಮಂಜುನಾಥ್, ಎಸ್.ಎಲ್ ಭೋಜೇಗೌಡ, ಎಸ್. ರುದ್ರೇಗೌಡ, ಭಾರತಿ ಶೆಟ್ಟಿ, ಡಿ.ಎಸ್ ಅರುಣ್, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್ ಗುರುಮೂರ್ತಿ, ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರ ರಾಮಯ್ಯ, ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಜಿ ನಾಗರಾಜ್, ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳ ರಾಜ್ಯ ಸಂಯೋಜಕ ಡಿ. ಪ್ರಭಾಕರ ಬೀರಯ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಬಿ. ಸಿದ್ದಬಸಪ್ಪ, ಜಿಲ್ಲಾಧಿಕಾರಿ ಡಾ. ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ಕುಮಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರಾದ ಸಿ.ಆರ್ ಪರಮೇಶ್ವರಪ್ಪ, ಬಿ.ಆರ್ ಬಸವರಾಜಪ್ಪ, ತಹಸೀಲ್ದಾರ್ ಆರ್. ಪ್ರದೀಪ್ ಸೇರಿದಂತೆ ಇನ್ನಿತರರು ಮುಖ್ಯಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
    ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದು, ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಯಶಸ್ವಿಗೊಳಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಮತ್ತು ಪ್ರಶಾಂತಿ ಸೇವಾ ಟ್ರಸ್ಟ್ ಕಾರ್ಯದರ್ಶಿ ಡಿ. ಪ್ರಭಾಕರ ಬೀರಯ್ಯ ಕೋರಿದ್ದಾರೆ.

Sunday, December 11, 2022

ಕಾರ್ಖಾನೆಗಳ ಅಭಿವೃದ್ಧಿಗಾಗಿ ಚಿಟಿಕೆ ಉಪ್ಪು ಸಂಗ್ರಹಿಸಲು ಪಾದಯಾತ್ರೆ

ಭದ್ರಾವತಿ ಎಂಪಿಎಂ ಹಾಗು ವಿಐಎಸ್‌ಎಲ್ ಕಾರ್ಖಾನೆಗಳ ಅಭಿವೃದ್ಧಿಗಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ತಾಲೂಕಿನಾದ್ಯಂತ ಚಿಟಿಕೆ ಉಪ್ಪು ಸಂಗ್ರಹಿಸಿ ಮನವಿ ಸಲ್ಲಿಸಲು ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿರುವ ಪಾದಯಾತ್ರೆಗೆ ಹಳೇನಗರದ ಶ್ರೀ ಅಕ್ಕಮಹಾದೇವಿ ಸಮುದಾಯ ಭವನದಲ್ಲಿ ಶನಿವಾರ ಸಂಜೆ ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ ಪಾದಯಾತ್ರೆಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು.
    ಭದ್ರಾವತಿ, ಡಿ. ೧೧: ನಗರದ ಎಂಪಿಎಂ ಹಾಗು ವಿಐಎಸ್‌ಎಲ್ ಕಾರ್ಖಾನೆಗಳ ಅಭಿವೃದ್ಧಿಗಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ತಾಲೂಕಿನಾದ್ಯಂತ ಚಿಟಿಕೆ ಉಪ್ಪು ಸಂಗ್ರಹಿಸಿ ಮನವಿ ಸಲ್ಲಿಸಲು ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿರುವ ಪಾದಯಾತ್ರೆ ಭಾನುವಾರ ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್ ಬಳಿ ಇರುವ  ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್‌ರವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಆರಂಭಗೊಂಡಿತು.
    ಹಳೇನಗರದ ಶ್ರೀ ಅಕ್ಕಮಹಾದೇವಿ ಸಮುದಾಯ ಭವನದಲ್ಲಿ ಶನಿವಾರ ಸಂಜೆ ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ ಪಾದಯಾತ್ರೆಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಡಿ.೨೮ರವರೆಗೆ ನಗರಸಭೆ ವ್ಯಾಪ್ತಿಯಲ್ಲಿ ಡಿ.೩೦ರಿಂದ ತಾಲೂಕಿನ ಗ್ರಾಮಾಂತರ ಭಾಗದಲ್ಲಿ ಪಾದಯಾತ್ರೆ ನಡೆಯಲಿದೆ.
    ಕಡೂರಿನ ಮಾಜಿ ಶಾಸಕ ವೈ.ಎಸ್.ವಿ ದತ್ತಾ, ಹಿರಿಯ ಕಾರ್ಮಿಕ ಮುಖಂಡ ಡಿ.ಸಿ ಮಾಯಣ್ಣ ಮತ್ತು ರೈತ ಸಂಘ ಹಸಿರು ಸೇನೆ ವರಿಷ್ಠ ಕೆ.ಟಿ ಗಂಗಾಧರ್, ಶಾಸಕ ಬಿ.ಕೆ ಸಂಗಮೇಶ್ವರ್, ನಿವೃತ್ತ ಪ್ರಾಧ್ಯಾಪಕ ಪ್ರೊ. ಎಂ. ಚಂದ್ರಶೇಖರಯ್ಯ, ಜೆಡಿಎಸ್ ಪಕ್ಷದ ನಗರ ಘಟಕದ ಅಧ್ಯಕ್ಷ ಆರ್. ಕರುಣಾಮೂರ್ತಿ, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಶಿಕ್ಷಕ, ಗಾಯಕ ಹರೋನಹಳ್ಳಿ ಸ್ವಾಮಿ, ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಜಿಲ್ಲಾ ಸಮಿತಿ ಅಧ್ಯಕ್ಷೆ ಹನುಮಮ್ಮ, ನಗರಸಭೆ ಮಾಜಿ ಅಧ್ಯಕ್ಷೆ ಎಂ.ಎಸ್ ಸುಧಾಮಣೆ, ವಿಜಯಮ್ಮ ಎನ್. ಗಿರಿಯಪ್ಪ ಸಿದ್ದಲಿಂಗಯ್ಯ, ಆಂಜನೇಯ, ಶಶಿಕುಮಾರ್ ಎಸ್. ಗೌಡ, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು, ಪ್ರಧಾನ ಕಾರ್ಯದರ್ಶಿ ಅಕ್ರಂ ಖಾನ್, ಕಾರ್ಯಾಧ್ಯಕ್ಷ ಐ.ಎಲ್ ಅರುಣ್‌ಕುಮಾರ್, ಉಪಾಧ್ಯಕ್ಷರಾದ ಶೇಖರ್, ರಂಗಪ್ಪ, ಪ್ರಧಾನ ಸಂಚಾಲಕರಾದ ಶ್ರೀನಿವಾಸ್ ಮತ್ತು ಬಸವರಾಜ್ ಸೇರಿದಂತೆ ಪದಾಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು  ಉಪಸ್ಥಿತರಿದ್ದರು.  

ಪ್ರಾಧ್ಯಾಪಕ ಎಚ್.ಎಸ್ ಶಿವರುದ್ರಪ್ಪರಿಗೆ ಡಾಕ್ಟರೇಟ್ ಪದವಿ

ಎಚ್.ಎಸ್ ಶಿವರುದ್ರಪ್ಪ

    ಭದ್ರಾವತಿ, ಡಿ. ೧೧: ನಗರದ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಪ್ರಾಧ್ಯಾಪಕ ಎಚ್.ಎಸ್ ಶಿವರುದ್ರಪ್ಪ  ಹಂಪಿ ಕನ್ನಡ ವಿಶ್ವವಿದ್ಯಾಲಯದ ಪಿಎಚ್‌ಡಿ ಪದವಿ ಪಡೆದುಕೊಂಡಿದ್ದಾರೆ.
    ರಾಜ್ಯಶಾಸ್ತ್ರ ಸ್ನಾತಕೋತ್ತರ ಪದವಿಯಲ್ಲಿ ಕರ್ನಾಟಕದಲ್ಲಿ ಜಿಲ್ಲಾಡಳಿತ-ಶಿವಮೊಗ್ಗ ಜಿಲ್ಲೆಯ ಒಂದು ವಿಮರ್ಶಾತ್ಮಕ ಅಧ್ಯಯನ ವಿಷಯ ಕುರಿತು ವಿಶ್ವವಿದ್ಯಾಲಯದ ಅಭಿವೃದ್ಧಿ ಅಧ್ಯಯನ ವಿಭಾಗದ ಸಮಾಜವಿಜ್ಞಾನಗಳ ನಿಕಾಯ ಡಾ. ಎ. ಶ್ರೀಧರರವರ ಮಾರ್ಗದರ್ಶನದಲ್ಲಿ ಪ್ರಬಂಧ ಮಂಡಿಸಿದ್ದರು.
    ಇವರನ್ನು ಕಾಲೇಜಿನ ಪ್ರಾಂಶುಪಾಲರು, ಅಧ್ಯಾಪಕ ಹಾಗು ಅಧ್ಯಾಪಕೇತರ ಸಿಬ್ಬಂದಿ ವರ್ಗದವರು, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರು ಸೇರಿದಂತೆ ಇನ್ನಿತರರು ಅಭಿನಂದಿಸಿದ್ದಾರೆ.  

೩ ಗಣ್ಯರಿಗೆ ವಿಶ್ವ ಮಾನವ ಪ್ರಶಸ್ತಿ

ಭದ್ರಾವತಿಯಲ್ಲಿ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಹಳೇನಗರದ ಶ್ರೀ ಅಕ್ಕಮಹಾದೇವಿ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಮಾನವ ಸಮಾವೇಶದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಹೋರಾಟದ ಮುಂಚೂಣಿ ನಾಯಕರಾಗಿ ಗುರುತಿಸಿಕೊಂಡಿರುವ ೩ ಗಣ್ಯರಿಗೆ ವಿಶ್ವ ಮಾನವ ಪ್ರಶಸ್ತಿ ನೀಡಿ ಗೌರವಿಸಲಾಯಿತು.  
    ಭದ್ರಾವತಿ, ಡಿ. ೧೧: ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಹಳೇನಗರದ ಶ್ರೀ ಅಕ್ಕಮಹಾದೇವಿ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಮಾನವ ಸಮಾವೇಶದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಹೋರಾಟದ ಮುಂಚೂಣಿ ನಾಯಕರಾಗಿ ಗುರುತಿಸಿಕೊಂಡಿರುವ ೩ ಗಣ್ಯರಿಗೆ ವಿಶ್ವ ಮಾನವ ಪ್ರಶಸ್ತಿ ನೀಡಿ ಗೌರವಿಸಲಾಯಿತು.  
    ಕಡೂರಿನ ಮಾಜಿ ಶಾಸಕ ವೈ.ಎಸ್.ವಿ ದತ್ತಾ, ಹಿರಿಯ ಕಾರ್ಮಿಕ ಮುಖಂಡ ಡಿ.ಸಿ ಮಾಯಣ್ಣ ಮತ್ತು ರೈತ ಸಂಘ ಹಸಿರು ಸೇನೆ ವರಿಷ್ಠ ಕೆ.ಟಿ ಗಂಗಾಧರ್ ಅವರಿಗೆ ವಿಶ್ವ ಮಾನವ ಪ್ರಶಸ್ತಿ ನೀಡಲಾಯಿತು.
    ಶಾಸಕ ಬಿ.ಕೆ ಸಂಗಮೇಶ್ವರ್, ಪ್ರೊ. ಎಂ. ಚಂದ್ರಶೇಖರಯ್ಯ, ಜೆಡಿಎಸ್ ಪಕ್ಷದ ನಗರ ಘಟಕದ ಅಧ್ಯಕ್ಷ ಆರ್. ಕರುಣಾಮೂರ್ತಿ, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಶಿಕ್ಷಕ, ಗಾಯಕ ಹರೋನಹಳ್ಳಿ ಸ್ವಾಮಿ, ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಜಿಲ್ಲಾ ಸಮಿತಿ ಅಧ್ಯಕ್ಷೆ ಹನುಮಮ್ಮ, ನಗರಸಭೆ ಮಾಜಿ ಅಧ್ಯಕ್ಷೆ ಎಂ.ಎಸ್ ಸುಧಾಮಣೆ, ವಿಜಯಮ್ಮ ಎನ್. ಗಿರಿಯಪ್ಪ ಸಿದ್ದಲಿಂಗಯ್ಯ, ಆಂಜನೇಯ, ಶಶಿಕುಮಾರ್ ಎಸ್. ಗೌಡ, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಹಾಗು ಪದಾಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು  ಉಪಸ್ಥಿತರಿದ್ದರು.  

ಶಾಲಾ ಮಕ್ಕಳಿಗೆ ಉಚಿತ ಶೂ ವಿತರಣೆ

ಭದ್ರಾವತಿ ತಾಲೂಕಿನ ಹಿರಿಯೂರು ಗ್ರಾಮದಲ್ಲಿರುವ ಶ್ರೀ ಬಸಪ್ಪಗೌಡ ಮಲ್ಲಪ್ಪಗೌಡ ಸ್ಮಾರಕ ಪ್ರೌಢಶಾಲೆ(ಎಸ್‌ಬಿಎಂಎಂಆರ್)ಯಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ದಾನಿಗಳಿಂದ ಶಾಲಾ ಮಕ್ಕಳಿಗೆ ಉಚಿತವಾಗಿ ಶೂ ವಿತರಿಸಲಾಯಿತು.  
    ಭದ್ರಾವತಿ, ಡಿ. ೧೧: ತಾಲೂಕಿನ ಹಿರಿಯೂರು ಗ್ರಾಮದಲ್ಲಿರುವ ಶ್ರೀ ಬಸಪ್ಪಗೌಡ ಮಲ್ಲಪ್ಪಗೌಡ ಸ್ಮಾರಕ ಪ್ರೌಢಶಾಲೆ(ಎಸ್‌ಬಿಎಂಎಂಆರ್)ಯಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ದಾನಿಗಳಿಂದ ಶಾಲಾ ಮಕ್ಕಳಿಗೆ ಉಚಿತವಾಗಿ ಶೂ ವಿತರಿಸಲಾಯಿತು.
    ಬೆಂಗಳೂರಿನ ಶ್ರೀ ಗುರು ಮಹಾರುದ್ರಸ್ವಾಮಿ ಗುರುಕುಲ ವಿದ್ಯಾಸಂಸ್ಥೆ ವತಿಯಿಂದ ಈ ಪ್ರೌಢ ಶಾಲೆಯನ್ನು ಮುನ್ನಡೆಸಿಕೊಂಡು ಹೋಗಲಾಗುತ್ತಿದೆ. ತಾಲೂಕಿನಲ್ಲಿ ತನ್ನದೇ ಆದ ವಿಶಿಷ್ಟತೆಯಿಂದ ಈ ಶಾಲೆ ಗುರುತಿಸಿಕೊಂಡಿದ್ದು, ಇದರ ಬೆಳವಣಿಗೆಗೆ ದಾನಿಗಳು ಸಹ ಕೈಜೋಡಿಸುತ್ತಿರುವುದು ವಿಶೇಷತೆಯಾಗಿದೆ.
 ದಾನಿಗಳಾದ ಸತೀಶ್‌ಪವಾರ್‌ರವರು ಉಚಿತವಾಗಿ ಶೂ ವಿತರಿಸುವ ಮೂಲಕ ಮಕ್ಕಳ ಕಲಿಕೆಗೆ ಪೂರಕವಾಗಿ ಸ್ಪಂದಿಸುವುದಾಗಿ ಭರವಸೆ ನೀಡಿರು. ಶಾಲೆಯ ಮುಖ್ಯೋಪಾಧ್ಯಾಯ ಹರೋನಹಳ್ಳಿ ಸ್ವಾಮಿ ಅಧ್ಯಕ್ಷತೆ ವಹಿಸಿದ್ದರು.
    ಗ್ರಾಮದ ಮುಖಂಡರಾದ ಅಣ್ಣಪ್ಪ, ಪವಿತ್ರ, ಶಿಕ್ಷಕರುಗಳಾದ ಜಿ.ಬಿ ಮಲ್ಲಿಕಾರ್ಜುನ್, ಎಂ ಚೇತನ್ ಕುಮಾರಿ ಮತ್ತು ಪವಿತ್ರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Saturday, December 10, 2022

ಅನಾಥರು, ವೃದ್ಧರೊಂದಿಗೆ ಹುಟ್ಟುಹಬ್ಬ ಆಚರಣೆ

ಭದ್ರಾವತಿ ನಗರಸಭೆ ವ್ಯಾಪ್ತಿಯ ಹೊಸಸಿದ್ದಾಪುರದಲ್ಲಿ ಅನಾಥಾಶ್ರಮ ಹಾಗು ವೃದ್ಧಾಶ್ರಮ ಆರಂಭಿಸುವ ಮೂಲಕ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ  ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜ್ಯೋತಿ ಸೋಮಶೇಖರ್ ಹಾಗು ಸಾಮಾಜಿಕ ಸೇವಾಕರ್ತ ಪ್ರಶಾಂತ್‌ರವರು ತಮ್ಮ ಹುಟ್ಟುಹಬ್ಬವನ್ನು ಅನಾಥರು, ವೃದ್ಧರೊಂದಿಗೆ ಆಚರಿಸಿಕೊಂಡರು. 
    ಭದ್ರಾವತಿ, ಡಿ. ೧೦ : ನಗರಸಭೆ ವ್ಯಾಪ್ತಿಯ ಹೊಸಸಿದ್ದಾಪುರದಲ್ಲಿ ಅನಾಥಾಶ್ರಮ ಹಾಗು ವೃದ್ಧಾಶ್ರಮ ಆರಂಭಿಸುವ ಮೂಲಕ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ  ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜ್ಯೋತಿ ಸೋಮಶೇಖರ್ ಹಾಗು ಸಾಮಾಜಿಕ ಸೇವಾಕರ್ತ ಪ್ರಶಾಂತ್‌ರವರು ತಮ್ಮ ಹುಟ್ಟುಹಬ್ಬವನ್ನು ಅನಾಥರು, ವೃದ್ಧರೊಂದಿಗೆ ಆಚರಿಸಿಕೊಂಡರು.
    ಜ್ಯೋತಿ ಸೋಮಶೇಖರ್‌ರವರು ಹಲವಾರು ವರ್ಷಗಳಿಂದ ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ಗುರುತಿಸಿಕೊಂಡು ಹಲವು ಹೋರಾಟಗಳಲ್ಲಿ ಪಾಲ್ಗೊಂಡಿದ್ದರು.  ತದನಂತರ ಸುರಕ್ಷಾ ಸೇವಾ ಟ್ರಸ್ಟ್ ಮೂಲಕ ಸುರಕ್ಷಾ ವೃದ್ಧಾಶ್ರಮ ಮತ್ತು ಅನಾಥಾಶ್ರಮ ಆರಂಭಿಸಿ ಗಮನ ಸೆಳೆದಿದ್ದಾರೆ.
    ಜ್ಯೋತಿ ಸೋಮಶೇಖರ್ ಹಾಗು ಟ್ರಸ್ಟ್ ಖಜಾಂಚಿ ಪ್ರಶಾಂತ್ ತಮ್ಮ ಹುಟ್ಟುಹಬ್ಬವನ್ನು ಅನಾಥರು ಹಾಗು ವೃದ್ಧರೊಂದಿಗೆ ಆಚರಿಸಿಕೊಂಡರು. ವಿವಿಧ ಸಂಘಟನೆಗಳಿಂದ ಈ ಇಬ್ಬರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
    ಟ್ರಸ್ಟಿಗಳು, ಕರವೇ ಕಾರ್ಯಕರ್ತರು, ವಿವಿಧ ರಾಜಕೀಯ ಪಕ್ಷಗಳ, ಸಂಘ-ಸಂಸ್ಥೆಗಳ ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  



ಹೊಳೆಹೊನ್ನೂರು ಹೋಬಳಿ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಟಿ. ಮಂಜಪ್ಪ ಆಯ್ಕೆ

ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಹೋಬಳಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ನಿವೃತ್ತ ಮುಖ್ಯ ಶಿಕ್ಷಕ, ಸಾಹಿತಿ ಟಿ. ಮಂಜಪ್ಪರವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
    ಭದ್ರಾವತಿ, ಡಿ. ೧೦: ತಾಲೂಕಿನ ಹೊಳೆಹೊನ್ನೂರು ಹೋಬಳಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ನಿವೃತ್ತ ಮುಖ್ಯ ಶಿಕ್ಷಕ, ಸಾಹಿತಿ ಟಿ.ಮಂಜಪ್ಪ ಆಯ್ಕೆಯಾಗಿದ್ದಾರೆ.     ಮಂಜಪ್ಪರವರು ಮೂಲತಃ ಸರ್ಕಾರಿ ಶಾಲೆ ಶಿಕ್ಷಕರಾಗಿದ್ದು, ಸಾಹಿತ್ಯ ಕ್ಷೇತ್ರದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದರು. ಇವರ ಸಾಹಿತ್ಯ ಸೇವೆಯನ್ನು ಗುರುತಿಸಿ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.  
      ಹೋಬಳಿ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿದ್ದಪ್ಪ ನೇತೃತ್ವದಲ್ಲಿ ಮಂಜಪ್ಪರವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಗೌರವಾಧ್ಯಕ್ಷ ರೇಣುಕೇಶ್, ಹಿರಿಯ ಮಾರ್ಗದರ್ಶಕ ಧ್ಯಾಮಣ್ಣ, ಶಾಂತಕ್ಕ, ಶ್ರೀನಿವಾಸ್, ಮಂಜಣ್ಣ, ರಮೇಶ್ ಮತ್ತು ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.