ಜೆಡಿಎಸ್ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಶಾರದ ಅಪ್ಪಾಜಿ ನಿವಾಸಿದಲ್ಲಿ ಸಭೆ
ಭದ್ರಾವತಿ ವಿಧಾನಸಭಾಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಶಾರದ ಅಪ್ಪಾಜಿ ನಿವಾಸದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಪ್ರಮುಖರಿಗೆ ಪದಾಧಿಕಾರಿಗಳ ನೇಮಕಾತಿ ಆದೇಶ ಪತ್ರ ವಿತರಿಸಲಾಯಿತು.
ಭದ್ರಾವತಿ, ಡಿ. ೨೦: ಜಾತ್ಯಾತೀತ ಜನತಾದಳ ವಿಧಾನಸಭಾ ಚುನಾವಣೆಗೆ ಮೊದಲ ಹಂತದ ಪಟ್ಟಿ ಘೋಷಿಸಿದ ನಂತರ ಕ್ಷೇತ್ರದಲ್ಲಿ ಪಕ್ಷದ ಕಾರ್ಯ ಚಟುವಟಿಕೆಗಳು ಮತ್ತಷ್ಟು ಚುರುಕಾಗಿದ್ದು, ಪಕ್ಷದ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಶಾರದ ಅಪ್ಪಾಜಿ ಮಂಗಳವಾರ ತಮ್ಮ ನಿವಾಸದಲ್ಲಿ ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು ಹಾಗು ಕಾರ್ಯಕರ್ತರ ಸಭೆ ನಡೆಸಿದರು.
ಸಭೆಯಲ್ಲಿ ಬಹುತೇಕ ಮುಖಂಡರು ಮಾತನಾಡಿ, ಪ್ರತಿಯೊಬ್ಬರು ಸಹ ಶಾರದ ಅಪ್ಪಾಜಿಯವರ ಗೆಲುವಿಗೆ ಶಕ್ತಿಮೀರಿ ಶ್ರಮಿಸಬೇಕು. ಮನೆ ಮನೆಗೆ ತೆರಳಿ ಮಾಜಿ ಶಾಸಕ ಎಂ.ಜೆ ಅಪ್ಪಾಜಿಯವರು ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ತಿಳಿಸುವ ಮೂಲಕ ಮತಯಾಚಿಸಬೇಕು. ಯಾವುದೇ ಭಿನ್ನಾಭಿಪ್ರಾಯಗಳಿಗೆ ಅವಕಾಶ ನೀಡಬಾರದು. ಪಕ್ಷವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಸಂಘಟಿಸುವ ಮೂಲಕ ಎಲ್ಲರೂ ಒಗ್ಗಟ್ಟಾಗಿ ಕಾರ್ಯ ನಿರ್ವಹಿಸಬೇಕೆಂದರು.
ಶಾರದ ಅಪ್ಪಾಜಿ ಮಾತನಾಡಿ, ಪಕ್ಷದ ವರಿಷ್ಠರು ಅಪ್ಪಾಜಿ ಕುಟುಂಬದ ಮೇಲೆ ವಿಶ್ವಾಸವಿಟ್ಟು ಚುನಾವಣೆಗೆ ನನ್ನನ್ನು ಅಭ್ಯರ್ಥಿಯಾಗಿ ಘೋಷಿಸಿದ್ದಾರೆ. ಕ್ಷೇತ್ರದಲ್ಲಿ ಅಪ್ಪಾಜಿಯವರು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಕ್ಷೇತ್ರದ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ. ಅಪ್ಪಾಜಿ ಕುಟುಂಬದ ಮೇಲೆ ಜನರು ಹೊಂದಿರುವ ಪ್ರೀತಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ನನ್ನನ್ನು ಸಹ ನಿಮ್ಮ ಕುಟುಂಬ ಒಬ್ಬ ಸದಸ್ಯೆಯಂತೆ ಭಾವಿಸಿ ನನ್ನ ಗೆಲುವಿಗೆ ಶ್ರಮಿಸಬೇಕೆಂದು ಕೋರಿದರು.
ಸಭೆಯಲ್ಲಿ ಪ್ರಮುಖರಾದ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಆರ್. ಕರುಣಾಮೂರ್ತಿ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಗೀತಾ ಸತೀಶ್, ಯುವ ಘಟಕದ ಅಧ್ಯಕ್ಷ ಮಧುಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜೆ.ಪಿ ಯೋಗೇಶ್, ಕರಿಯಪ್ಪ, ಡಿ.ಟಿ ಶ್ರೀಧರ್, ಮೈಲಾರಪ್ಪ, ಲೋಕೇಶ್ವರ್ ರಾವ್, ವೆಂಕಟೇಶ್, ನಂಜುಂಡೇಗೌಡ, ಗೊಂದಿ ಜಯರಾಂ, ಮುತುರ್ಜಾಖಾನ್, ವಿಶಾಲಾಕ್ಷಿ, ಯಶೋಧಮ್ಮ, ಭಾಗ್ಯಮ್ಮ, ನಗರಸಭೆ ಸದಸ್ಯ ಬಸವರಾಜ ಬಿ ಆನೇಕೊಪ್ಪ, ಉದಯಕುಮಾರ್, ಸವಿತ, ನಾಗರತ್ನ, ರೂಪಾವತಿ, ಪಲ್ಲವಿ, ಮಾಜಿ ಸದಸ್ಯರಾದ ಎಂ.ಎ ಅಜಿತ್, ಎಚ್.ಬಿ ರವಿಕುಮಾರ್, ಆನಂದ್, ಎಂ. ರಾಜು, ಉಮೇಶ್, ದಿಲೀಪ್ ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.