Saturday, December 24, 2022

ಭದ್ರಾವತಿಯಲ್ಲಿ ಕನ್ನಡ ಜ್ಯೋತಿಗೆ ಅದ್ದೂರಿ ಸ್ವಾಗತ


ಭದ್ರಾವತಿ, ಡಿ. 24 : ಹಾವೇರಿಯಲ್ಲಿ ನಡೆಯಲಿರುವ ೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ಶನಿವಾರ ತಾಲೂಕಿಗೆ ಆಗಮಿಸಿತು.
ಚಿಕ್ಕಮಗಳೂರು ಜಿಲ್ಲೆಯಿಂದ  ನಗರದ ತರೀಕರೆ ರಸ್ತೆಯ ಮಹಾತ್ಮಗಾಂಧಿ ವೃತ್ತಕ್ಕೆ ಕನ್ನಡ ರಥದಲ್ಲಿ ಆಗಮಿಸಿದ ಜ್ಯೋತಿಯನ್ನು ಜಿಲ್ಲಾಡಳಿತ ಪರವಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಿ. ಮಂಜುನಾಥ್ ಹಾಗೂ ತಾಲೂಕು ಆಡಳಿತ, ನಗರಸಭೆ ಅಧಿಕಾರಿಗಳು, ಜನಪ್ರತಿನಿಧಿಗಳು, ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು, ಮಹಿಳೆಯರು, ವಿವಿಧ ಸಂಘ ಸಂಸ್ಥೆಗಳು, ವಿವಿಧ ಕಲಾ ತಂಡಗಳೊಂದಿಗೆ ಅದ್ದೂರಿಯಾಗಿ ಸ್ವಾಗತಿಸಿದರು.
   ನಂತರ ಕಾಲ್ನಡಿಗೆ ಜಾಥಾ ಮಾಧವಚಾರ್ ವೃತ್ತದಿಂದ ಕನಕಮಂಟ ಮೈದಾನದ ವರೆಗೂ ಸಾಗಿತು.  ಶಾಸಕ ಬಿ.ಕೆ ಸಂಗಮೇಶ್ವರ್  ವೇದಿಕೆ ಕಾರ್ಯಕ್ರಮ  ಉಟ್ಕಾಟಿಸಿದರು ಡಿ. ಮಂಜುನಾಥ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. 
ನಗರಸಭೆ ಅಧ್ಯಕ್ಷ ಅನುಸುಧಾ ಮೋಹನ್ ಪಳನಿ, ಉಪಾಧ್ಯಕ್ಷ ಚನ್ನಪ್ಪ, ಪೌರಾಯುಕ್ತ ಮನುಕುಮಾರ್,  ಸದಸ್ಯ ಬಿ.ಕೆ ಮೋಹನ್, ತಹಸೀಲ್ದಾರ್  ಗ್ರೇಡ್-2  ರಂಗಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಎ.ಕೆ ನಾಗೇಂದ್ರಪ್ಪ, ಸಮನ್ವಯಾಧಿಕಾರಿ ಪಂಚಾಕ್ಷರಿ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳು ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು ಕೋಗಲೂರು ತಿಪ್ಪೇಸ್ವಾಮಿ ಸ್ವಾಗತಿಸಿದರು, ನಾಡಗೀತೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು.

Friday, December 23, 2022

ಡಿ.೨೪ರಂದು ಕನ್ನಡ ಜ್ಯೋತಿ ಆಗಮನ : ಅದ್ದೂರಿ ಸ್ವಾಗತಕ್ಕೆ ತಾಲೂಕು ಆಡಳಿತ ಸಿದ್ದತೆ

    ಭದ್ರಾವತಿ, ಡಿ. ೨೩ : ಹಾವೇರಿಯಲ್ಲಿ ನಡೆಯಲಿರುವ ೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ಡಿ.೨೪ರ ಶನಿವಾರ ಬೆಳಿಗ್ಗೆ ತಾಲೂಕಿಗೆ ಆಗಮಿಸಲಿದೆ.
    ಕನ್ನಡ ರಥದಲ್ಲಿ ಜಾಥಾ ಮೂಲಕ ಕನ್ನಡ ಜ್ಯೋತಿ ಶಿವಮೊಗ್ಗ ಜಿಲ್ಲೆಯಲ್ಲಿ ತಾಲೂಕಿಗೆ ಮಾತ್ರ ಆಗಮಿಸುತ್ತಿದ್ದು, ಈ ಹಿನ್ನಲೆಯಲ್ಲಿ ಜ್ಯೋತಿಯನ್ನು ಅದ್ದೂರಿಯಾಗಿ ಸ್ವಾಗತಿಸಲು ತಾಲೂಕು ಆಡಳಿತ ಜಿಲ್ಲಾಮಟ್ಟದಲ್ಲಿ ಕಾರ್ಯಕ್ರಮ ರೂಪಿಸಿದೆ.
    ಚಿಕ್ಕಮಗಳೂರು ಜಿಲ್ಲೆಯಿಂದ ಆಗಮಿಸಲಿರುವ ಜ್ಯೋತಿಯನ್ನು ನಗರದ ತರೀಕರೆ ರಸ್ತೆಯ ಮಹಾತ್ಮಗಾಂಧಿ ವೃತ್ತದಲ್ಲಿ ಬೆಳಿಗ್ಗೆ ೧೧ ಗಂಟೆಗೆ ಸ್ವಾಗತಿಸಲಿದ್ದು, ನಂತರ ಕಾಲ್ನಡಿಗೆ ಜಾಥಾ ಮಾಧವಚಾರ್ ವೃತ್ತ ದಿಂದ ಕನಕಮಂಟ ಮೈದಾನದ ವರೆಗೂ ಸಾಗಲಿದೆ. ನಂತರ ವೇದಿಕೆ ಕಾರ್ಯಕ್ರಮ ನಡೆಯಲಿದೆ.


    ಜಿಲ್ಲೆಯ ಜನಪ್ರತಿನಿಧಿಗಳು, ಜಿಲ್ಲಾ ಹಾಗು ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳು, ಗಣ್ಯರು ಪಾಲ್ಗೊಳ್ಳಲಿದ್ದಾರೆ. ಕನ್ನಡಾಭಿಮಾನಿಗಳು, ಸಾಹಿತ್ಯಾಸಕ್ತರು ಸೇರಿದಂತೆ ಸಮಸ್ತೆ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.
    ವೇದಿಕೆ ಕಾರ್ಯಕ್ರಮ ಮುಕ್ತಾಯಗೊಂಡ ನಂತರ ಜಾಥಾ ತಾಲೂಕು ಕಛೇರಿ ರಸ್ತೆ ಮೂಲಕ ರಂಗಪ್ಪವೃತ್ತ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿವರೆಗೂ ನಡೆಯಲಿದೆ. ನಂತರ ದಾವಣಗೆರೆ ಜಿಲ್ಲೆಗೆ ಬೀಳ್ಕೊಡುಗೆ ನೀಡಲಾಗುವುದು.

ಸಂಚಾರದ ವೇಳೆ ರಸ್ತೆಗಳಲ್ಲಿ ಕಿರಿಕಿರಿ : ೧೩೩ ಸೈಲೆನ್ಸರ್‌ಗಳು ಧ್ವಂಸ

    ಭದ್ರಾವತಿ, ಡಿ. ೨೩ : ಸಂಚಾರದ ವೇಳೆ ರಸ್ತೆಗಳಲ್ಲಿ ಕಿರಿಕಿರಿ ಉಂಟು ಮಾಡುತ್ತಿದ್ದ ಸುಮಾರು ೧೩೩ ದ್ವಿಚಕ್ರ ವಾಹನಗಳ ಸೈಲೆನ್ಸರ್‌ಗಳನ್ನು ಪೊಲೀಸ್ ಉಪವಿಭಾಗ ನಗರ ವೃತ್ತ ಮತ್ತು ಸಂಚಾರಿ ಠಾಣೆ ಸಿಬ್ಬಂದಿಗಳು ಪತ್ತೆ ಹಚ್ಚಿ ಶುಕ್ರವಾರ ಸೈಲೆನ್ಸರ್‌ಗಳನ್ನು ಬುಲ್ಡೋಜರ್ ಬಳಸಿ ಧ್ವಂಸಗೊಳಿಸಿರುವ ಘಟನೆ ನಡೆದಿದೆ.
    ಈ ಹಿಂದೆ ದಂಡ ವಿಧಿಸಿ ಎಚ್ಚರಿಕೆ ನೀಡಿದರೂ ಸಹ ವಾಹನದ ಮಾಲೀಕರು ಬದಲಿಸಿಕೊಳ್ಳದ ಹಿನ್ನಲೆಯಲ್ಲಿ ಆ ವಾಹನಗಳನ್ನು ವಶಕ್ಕೆ ಪಡೆದು ಅವುಗಳ ಸೈಲೆನ್ಸರ್‌ಗಳನ್ನು ಬೇರ್ಪಡಿಸಿ ನಗರದ ಬಿ.ಎಚ್ ರಸ್ತೆ ,ಅಂಡರ್ ಬ್ರಿಡ್ಜ್, ಅಂಬೇಡ್ಕರ್ ವೃತ್ತದ ಬಳಿ ಸಾರ್ವಜನಿಕವಾಗಿ ಅವುಗಳನ್ನು ಬುಲ್ಡೋಜರ್ ಬಳಸಿ ಧ್ವಂಸಗೊಳಿಸುವ ಮೂಲಕ ಅಪರಾಧ ತಡೆ ಮಾಸಚರಣೆ ನಡೆಸಿ ಜಾಗೃತಿ ಮೂಡಿಸಲಾಯಿತು.
     ವಾಹನ ಕಾಯ್ದೆಗಳ ಪ್ರಕಾರ ಕಿರಿಕಿರಿ ಉಂಟು ಮಾಡುವ ಸೈಲೆನ್ಸರ್‌ಗಳನ್ನು ಬಳಸುವುದು ಕಾನೂನು ಉಲ್ಲಂಘನೆಯಾಗಿದ್ದು, ಈ ಸಂಬಂಧ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯಾದ್ಯಂತ ಅಭಿಯಾನ ಕೈಗೊಂಡು ಜಾಗೃತಿ ಮೂಡಿಸಲಾಗುತ್ತಿದೆ.
    ಈ ಸಂದರ್ಭದಲ್ಲಿ ಪೊಲೀಸ್ ಉಪಾಧೀಕ್ಷಕ ಜಿತೇಂದ್ರಕುಮಾರ್ ದಯಾಮ, ನಗರ ಪೊಲೀಸ್ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ, ಸಂಚಾರಿ ಪೊಲೀಸ್ ಠಾಣಾಧಿಕಾರಿ ಸುರೇಶ್ ಹಾಗು ಸಿಬ್ಬಂದಿಗಳು ಉಪಸ್ಥಿತರಿದ್ದರು.


ಸಂಚಾರದ ವೇಳೆ ರಸ್ತೆಗಳಲ್ಲಿ ಕಿರಿಕಿರಿ ಉಂಟು ಮಾಡುತ್ತಿದ್ದ ಸುಮಾರು ೧೩೩ ದ್ವಿಚಕ್ರ ವಾಹನಗಳ ಸೈಲೆನ್ಸರ್‌ಗಳನ್ನು ಭದ್ರಾವತಿ ಪೊಲೀಸ್ ಉಪವಿಭಾಗ ನಗರ ವೃತ್ತ ಮತ್ತು ಸಂಚಾರಿ ಠಾಣೆ ಸಿಬ್ಬಂದಿಗಳು ಪತ್ತೆ ಹಚ್ಚಿ ಶುಕ್ರವಾರ ಸೈಲೆನ್ಸರ್‌ಗಳನ್ನು ಬುಲ್ಡೋಜರ್ ಬಳಸಿ ಧ್ವಂಸಗೊಳಿಸಿರುವ ಘಟನೆ ನಡೆದಿದೆ.

ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕಾರಿಣಿ, ವಿಧಾನಸಭಾ ಚುನಾವಣಾ ತಯಾರಿ ಸಭೆ

ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಹಾಗೂ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಹ್ಯಾರಿಸ್ ನಲಪಾಡ್ ಅವರ ನಿರ್ದೇಶನದಂತೆ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಹಾಗೂ ವಿಧಾನಸಭಾ ಚುನಾವಣಾ ತಯಾರಿ ಸಭೆ ಭದ್ರಾವತಿಯಲ್ಲಿ  ಶುಕ್ರವಾರ ನಡೆಯಿತು.
    ಭದ್ರಾವತಿ, ಡಿ. ೨೩ : ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಹಾಗೂ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಹ್ಯಾರಿಸ್ ನಲಪಾಡ್ ಅವರ ನಿರ್ದೇಶನದಂತೆ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಹಾಗೂ ವಿಧಾನಸಭಾ ಚುನಾವಣಾ ತಯಾರಿ ಸಭೆ ನಗರದಲ್ಲಿ ಶುಕ್ರವಾರ ನಡೆಯಿತು.
    ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ .ಗಿರೀಶ್ ಸಭೆ ನೇತೃತ್ವ ವಹಿಸಿದ್ದರು. ಸಭೆಯಲ್ಲಿ ರಾಷ್ಟ್ರೀಯ ಕಾರ್ಯದರ್ಶಿ ಮಹಿನ್ ಖಾನ್‌ರವರು, 'ಬದಲಾವಣೆಯ ಹಬ್ಬ'  ಹಾಗೂ 'ಯೂಥ್ ಜೋಡೋ, ಬೂತ್ ಜೋಡೋ' ಕಾರ್ಯಕ್ರಮದ ರೂಪುರೇಷೆಗಳನ್ನು ತಿಳಿಸಿದರು.
    ಸಭೆಯಲ್ಲಿ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚೇತನ್, ಯುವ ಮುಖಂಡ ಬಿ.ಎಸ್ ಗಣೇಶ್ , ನಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ವಿನೋದ್ ಕುಮಾರ್, ಗ್ರಾಮಾಂತರ ಅಧ್ಯಕ್ಷ ಅಫ್ತಾಬ್ ಅಹಮದ್ , ಶಿವಮೊಗ್ಗ ಗ್ರಾಮಾಂತರ ಹೊಳೆ ಹೊನ್ನೂರು ಬ್ಲಾಕ್ ಅಧ್ಯಕ್ಷ ಇ.ಟಿ ನಿತಿನ್,  ಶಿವಮೊಗ್ಗ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಎಸ್. ಕುಮಾರೇಶ್,  ಗ್ರಾಮಾಂತರ ಅಧ್ಯಕ್ಷ ಮನು , ಶಿಕಾರಿಪುರ ಬ್ಲಾಕ್ ಅಧ್ಯಕ್ಷ ಮಲ್ಲಿಕ್, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಸಚಿನ್ ಸಿಂದ್ಯಾ, ರೂಪನಾರಾಯಣ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ  ಗಗನ್ ಗೌಡ, ನಾಗರಾಜ್ ಕುರ್ವಳ್ಳಿ, ಶಿವರಾಜ್, ಇಮ್ರಾನ್ ಖಾನ್, ಸಂದೀಪ್, ಅಕ್ಬರ್ ಸಾಬ್,  ರಾಘು ಪುರದಾಳ್ , ಗ್ರಾಮಾಂತರ ಬ್ಲಾಕ್ ಉಪಾಧ್ಯಕ್ಷ ತಬ್ರೇಸ್ ಖಾನ್ ಹಾಗೂ ಜಿಲ್ಲಾ ಹಾಗು ಬ್ಲಾಕ್ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಹೋಬಳಿ ಸಾಹಿತ್ಯ ಸಮ್ಮೇಳನಾಧ್ಯಕ್ಷ ಟಿ. ಮಂಜಪ್ಪರಿಗೆ ಸನ್ಮಾನ, ಅಭಿನಂದನೆ

ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಹೋಬಳಿ ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನಿವೃತ್ತ ಮುಖ್ಯಶಿಕ್ಷಕ, ಸಾಹಿತಿ ಟಿ. ಮಂಜಪ್ಪ ದಂಪತಿಯನ್ನು ವಿಶ್ರಾಂತ ಗೆಳೆಯರ ಬಳಗದಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
    ಭದ್ರಾವತಿ, ಡಿ. ೨೩: ತಾಲೂಕಿನ ಹೊಳೆಹೊನ್ನೂರು ಹೋಬಳಿ ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನಿವೃತ್ತ ಮುಖ್ಯಶಿಕ್ಷಕ, ಸಾಹಿತಿ ಟಿ. ಮಂಜಪ್ಪ ದಂಪತಿಯನ್ನು ವಿಶ್ರಾಂತ ಗೆಳೆಯರ ಬಳಗದಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
    ಸಭೆಯಲ್ಲಿ ಭಾಗವಹಿಸಿದ್ದ ವಿಶ್ರಾಂತ ಗೆಳೆಯರು ಮಂಜಪ್ಪರವರೊಂದಿಗಿನ ಒಡನಾಟದ ಅನುಭವಗಳನ್ನು ಹಂಚಿಕೊಂಡರು. ಅಲ್ಲದೆ ಅವರ ಸಾಹಿತ್ಯ ಕೃಷಿ ಮತ್ತು ಶಿಕ್ಷಕ ವೃತ್ತಿಯಲ್ಲಿನ ಸಾಧನೆಗೆ ಮುಚ್ಚುಗೆ ವ್ಯಕ್ತಪಡಿಸಿದರು.
    ಮಂಜಪ್ಪರವರ ಆಯ್ಕೆಗೆ ಕಾರಣೀಭೂತರಾದ ಎಲ್ಲರನ್ನೂ ಸ್ಮರಿಸಿಕೊಂಡು ಡಿ.೨೫ರಂದು ನಡೆಯಲಿರುವ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಲೆಂದು ಶುಭಕೋರಿದರು.
    ಪ್ರಾಚಾರ್ಯರಾದ ಗುಡ್ಡಪ್ಪ ಕುಟ್ರಿ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಪ್ರಾಚಾರ್ಯರಾದ ಎ.ಕೆ.ಚಂದ್ರಪ್ಪ, ಸೋಮಶೇಖರ್, ನಿವೃತ್ತ ಉಪನ್ಯಾಸಕರಾದ ಬಸವರಾಜಪ್ಪ, ಆಯನೂರು ಬಸವರಾಜಪ್ಪ, ನಿವೃತ್ತ ಶಿಕ್ಷಕ ನಾಗೇಂದ್ರಪ್ಪ, ಪ್ರಾಚಾರ್ಯ ಉದಯಕುಮಾರ್, ಸಾಹಿತಿ ಬಸವರಾಜಪ್ಪ, ಡಾ.ಎಂ. ವಿವೇಕಾನಂದ, ಶಿಕ್ಷಕಿಯರಾದ ನಿರ್ಮಲ, .ನೀಲಮ್ಮ ಮತ್ತು ವೇದ ಉಪಸ್ಥಿತರಿದ್ದರು.

Thursday, December 22, 2022

ಎಲ್ಲಾ ಧರ್ಮಗಳು ಒಂದೇ ಒಗ್ಗಟ್ಟಾಗಿ ಬದುಕಿದಾಗ ಮಾತ್ರ ಜೀವನ ಸಾರ್ಥಕ : ಮೌಲಾನ ಶಾಹುಲ್ ಹಬೀಬ್

ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಸೌಹಾರ್ದ ಕ್ರಿಸ್‌ಮಸ್ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕ್ರಿಸ್‌ಮಸ್ ಹಬ್ಬದ ಸಂಭ್ರಮಾಚರಣೆ ಸಮಾರಂಭದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಕೇಕ್ ಕತ್ತರಿಸಿ ಸಿಹಿ ವಿತರಿಸಿದರು.
    ಭದ್ರಾವತಿ, ಡಿ. ೨೨: ಎಲ್ಲಾ ಧರ್ಮಗಳ ಸಂದೇಶ ಒಂದೇ ಆಗಿದ್ದು, ಎಲ್ಲರೂ ಒಗ್ಗಟ್ಟಾಗಿ ಬದುಕಿದಾಗ ಮಾತ್ರ ನಮ್ಮ ಜೀವನ ಸಾರ್ಥಕಗೊಳ್ಳುತ್ತದೆ ಎಂದು ಶಿವಮೊಗ್ಗ ಧರ್ಮಗುರು ಮೌಲಾನ ಶಾಹುಲ್ ಹಬೀಬ್ ಹೇಳಿದರು.
    ಅವರು ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಸೌಹಾರ್ದ ಕ್ರಿಸ್‌ಮಸ್ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕ್ರಿಸ್‌ಮಸ್ ಹಬ್ಬದ ಸಂಭ್ರಮಾಚರಣೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
    ಮನುಷ್ಯರೆಲ್ಲರೂ ಒಂದೇ ಆಗಿದ್ದು, ನಮ್ಮಲ್ಲಿ ಯಾವುದೇ ತಾರತಮ್ಯವಿರಬಾರದು. ಪ್ರತಿಯೊಬ್ಬರೂ ಸಹ ನಮ್ಮವರು ಎಂಬ ಭಾವನೆ ಬೆಳೆಸಿಕೊಳ್ಳಬೇಕು. ಎಲ್ಲಾ ಧರ್ಮಗಳು ಸಹ ಮನುಷ್ಯನ ಬದುಕಿಗೆ ದಾರಿದೀಪವಾಗಿವೆ. ಎಲ್ಲಾ ಧರ್ಮಗಳ ಸಂದೇಶ ಒಂದೇ ಆಗಿದ್ದು, ಇದನ್ನು ಅರಿತುಕೊಂಡು ಸೌಹಾರ್ದತೆಯಿಂದ ಬದುಕಬೇಕೆಂದರು.
    ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ಸಮಾಜದಲ್ಲಿ ಸೌಹಾರ್ದತೆ ಬಹಳ ಮುಖ್ಯವಾಗಿದೆ. ನಾವೆಲ್ಲರೂ ಇದನ್ನು ಅರಿತುಕೊಂಡು ಬದುಕು ಸಾಗಿಸುವಂತಾಗಬೇಕೆಂದರು.
ಉಜ್ಜನಿಪುರ ಡಾನ್ ಬೋಸ್ಕೋ ಕೈಗಾರಿಕಾ ತರಬೇತಿ ಸಂಸ್ಥೆ ನಿರ್ದೇಶಕ ಪಾದರ್ ಆರೋಗ್ಯ ರಾಜ್ ಕಾರ್ಯಕ್ರಮ ಉದ್ಘಾಟಿಸಿದರು. ನಗರಸಭಾ ಸದಸ್ಯ ಜಾರ್ಜ್ ಅಧ್ಯಕ್ಷತೆ ವಹಿಸಿದ್ದರು. ರೆವರೆಂಡ್ ಪಿ.ಎಫ್ ಗಿಡಿಯೋನ್ ಕ್ರಿಸ್‌ಮಸ್ ಸಂದೇಶ ನೀಡಿದರು.
    ಹಳೇನಗರ ಕಂಚಿಬಾಗಿಲು ವೃತ್ತ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ಅರ್ಚಕ ಪವನ್‌ಕುಮಾರ್ ಉಡುಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಮಣಿಶೇಖರ್, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಹೇಮಾವತಿ, ಆಲ್ ಇಂಡಿಯಾ ಕ್ಯಾಥೋಲಿಕ್ ಯೂನಿಯನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅಂತೋಣಿ ವಿಲ್ಸನ್, ಕಾಂಗ್ರೆಸ್ ವಕ್ತಾರ ಅಮೋಸ್ ಸೇರಿದಂತೆ ವಿವಿಧ ಚರ್ಚ್‌ಗಳ ಧರ್ಮಗುರುಗಳು, ವಿವಿಧ ಧರ್ಮಗಳ ಮುಖಂಡರು ಉಪಸ್ಥಿತರಿದ್ದರು.


ಭದ್ರಾವತಿ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಸೌಹಾರ್ದ ಕ್ರಿಸ್‌ಮಸ್ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕ್ರಿಸ್‌ಮಸ್ ಹಬ್ಬದ ಸಂಭ್ರಮಾಚರಣೆ ಸಮಾರಂಭದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

‘ಮ್ಯೂಚ್ಯುಯಲ್ ಫಂಡ್‌ನಿಂದ ಸಂಪತ್ತಿನ ವೃದ್ಧಿ’ ಕಾರ್ಯಾಗಾರ

ಶಿವಮೊಗ್ಗ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಬಿ.ಕಾಂ ವಿದ್ಯಾರ್ಥಿಗಳಿಗೆ ಇನ್ನರ್‌ವೀಲ್ ಕ್ಲಬ್ ಶಿವಮೊಗ್ಗ ಉತ್ತರ ಹಾಗು ಐಸಿಐಸಿಐ ಪ್ರುಡೆನ್ಸಿಯಲ್ ಮ್ಯೂಚ್ಯುಯಲ್ ಫಂಡ್ ಕಂಪನಿ ಸಹಯೋಗದೊಂದಿಗೆ 'ಮ್ಯೂಚ್ಯುಯಲ್ ಫಂಡ್‌ನಿಂದ ಸಂಪತ್ತಿನ ವೃದ್ಧಿ' ಘೋಷಣೆಯೊಂದಿಗೆ ಕಾರ್ಯಾಗಾರ ಆಯೋಜಿಸಲಾಗಿತ್ತು.
    ಭದ್ರಾವತಿ, ಡಿ. ೨೨: ಶಿವಮೊಗ್ಗ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಬಿ.ಕಾಂ ವಿದ್ಯಾರ್ಥಿಗಳಿಗೆ ಇನ್ನರ್‌ವೀಲ್ ಕ್ಲಬ್ ಶಿವಮೊಗ್ಗ ಉತ್ತರ ಹಾಗು ಐಸಿಐಸಿಐ ಪ್ರುಡೆನ್ಸಿಯಲ್ ಮ್ಯೂಚ್ಯುಯಲ್ ಫಂಡ್ ಕಂಪನಿ ಸಹಯೋಗದೊಂದಿಗೆ 'ಮ್ಯೂಚ್ಯುಯಲ್ ಫಂಡ್‌ನಿಂದ ಸಂಪತ್ತಿನ ವೃದ್ಧಿ' ಘೋಷಣೆಯೊಂದಿಗೆ ಕಾರ್ಯಾಗಾರ ಆಯೋಜಿಸಲಾಗಿತ್ತು.  
'    ವಿದ್ಯಾರ್ಥಿಗಳಲ್ಲಿ ಉಳಿತಾಯದ ಬಗ್ಗೆ ಅರಿವು ಮೂಡಿಸುವಲ್ಲಿ ಮ್ಯೂಚ್ಯುಯಲ್ ಫಂಡ್‌ನ ಪಾತ್ರ' ವಿಷಯ ಕುರಿತು  ಐಸಿಐಸಿಐ ಪ್ರುಡೆನ್ಸಿಯಲ್ ಮ್ಯೂಚ್ಯುಯಲ್ ಫಂಡ್ ಕಂಪನಿ ಕ್ಲಸ್ಟರ್ ಮ್ಯಾನೇಜರ್ ರೋಹಿತ್‌ಶೆಟ್ಟಿ ಪ್ರಾತ್ಯಕ್ಷಿಕೆಯೊಂದಿಗೆ ಉಪನ್ಯಾಸ ನೀಡಿ, ಮ್ಯೂಚ್ಯುಯಲ್ ಫಂಡ್ ಹಾಗು ಅದರ ಬೆಳವಣಿಗೆ ಕುರಿತು ವಿವರಿಸಿದರು. ಮ್ಯೂಚ್ಯುಯಲ್ ಫಂಡ್ ಹೂಡಿಕೆಯಿಂದ ಹೂಡಿಕೆದಾರನು ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಂತೆ. ಅಲ್ಲದೆ ಹೂಡಿಕೆಯು ಪ್ರತಿಯೊಬ್ಬರ ಸಂಪತ್ತಿನ ವೃದ್ಧಿಗೆ ದಾರಿಯಾಗುತ್ತದೆ. ಈ ಹಿನ್ನಲೆಯಲ್ಲಿ ಪ್ರತಿಯೊಬ್ಬರು ಹೂಡಿಕೆ ಮಾಡಬೇಕೆಂದರು.
ಇಂಜಿನಿಯರ್ ಎಂ.ಎಸ್ ಸೋಮಶೇಖರ್ ಪ್ರಾಸ್ತಾವಿಕವಾಗಿ ಮಾತನಾಡಿ, ಉಳಿತಾಯ ಹಾಗು ಮ್ಯೂಚ್ಯುಯಲ್ ಫಂಡ್‌ನಲ್ಲಿ ತೊಡಗಿಸುವುದರಿಂದ ಆಗುವ ಲಾಭದ ಬಗ್ಗೆ ಯುವ ಜನತೆ ಚಿಂತಿಸಬೇಕು ಹಾಗು ಯೋಜಿತ ಜೀವನವಿದ್ದಲ್ಲಿ ಮಾತ್ರ ನೆಮ್ಮದಿಯ ಜೀವನ ಸಾಗಿಸಬಹುದು ಎಂದರು.
    ಇನ್ನರ್‌ವೀಲ್ ಕ್ಲಬ್ ಶಿವಮೊಗ್ಗ ಉತ್ತರ ಅಧ್ಯಕ್ಷೆ ಜಿ.ಪಿ ಚಂದ್ರಮ್ಮ ಮಾತನಾಡಿ, ವಿದ್ಯಾರ್ಥಿಗಳು ಚಿಕ್ಕ ವಯಸ್ಸಿನಲ್ಲಿಯೇ ಉಳಿತಾಯ ಮಾಡುವುದರಿಂದ ಆಗುವ ಲಾಭ ಹಾಗು ಭವಿಷ್ಯದಲ್ಲಿ ಹೇಗೆ ತೊಡಗಿಸಿಕೊಳ್ಳಬೇಕು ಎನ್ನುವುದನ್ನು ವಿವರಿಸಿದರು.
    ಕಾಲೇಜಿನ ಪ್ರಾಂಶುಪಾಲ ಪ್ರೊ. ಯು.ಎಸ್ ರಾಜಕುಮಾರ್ ಕಾರ್ಯಾಗಾರ ಉದ್ಘಾಟಿಸಿದರು. ಸುಧಾ, ನಳಿನಿ ಐತಾಳ್, ಪ್ರೊ. ಬಿ.ಎಚ್ ವಾಸಪ್ಪ, ನವೀನ್, ಪ್ರವೀಣ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಉಷಾ ವೆಂಕಟೇಶ್ ಪ್ರಾರ್ಥಿಸಿ, ಸುನೀತ ಸ್ವಾಗತಿಸಿದರು. ವಾರಿಜಾ ಜಗದೀಶ್ ವಂದಿಸಿದರು.