ಭದ್ರಾವತಿ ಕಾಲ್ವರಿ ಕಾರುಣ್ಯ ಟ್ರಸ್ಟ್ ವತಿಯಿಂದ ನೂತನವಾಗಿ ಅಂಬ್ಯುಲೆನ್ಸ್ ಸೇವೆ ಆರಂಭಿಸಲಾಗಿದ್ದು, ಗುರುವಾರ ಸೇವೆಗೆ ಚಾಲನೆ ನೀಡಲಾಯಿತು.
ಭದ್ರಾವತಿ, ಜ. ೫ : ನಗರದ ಕಾಲ್ವರಿ ಕಾರುಣ್ಯ ಟ್ರಸ್ಟ್ ವತಿಯಿಂದ ನೂತನವಾಗಿ ಅಂಬ್ಯುಲೆನ್ಸ್ ಸೇವೆ ಆರಂಭಿಸಲಾಗಿದ್ದು, ಗುರುವಾರ ಸೇವೆಗೆ ಚಾಲನೆ ನೀಡಲಾಯಿತು.
ತುರ್ತು ಸಂದರ್ಭದಲ್ಲಿ ಕಡುಬಡವರಿಗೆ ಕಡಿಮೆ ದರದಲ್ಲಿ ಸೇವೆ ನೀಡುವ ಉದ್ದೇಶ ಟ್ರಸ್ಟ್ ಹೊಂದಿದ್ದು, ಅಂಬ್ಯುಲೆನ್ಸ್ ರಾಜ್ಯದ ಎಲ್ಲೆಡೆ ಸಂಚರಿಸಲಿದೆ. ಚಾಲನೆ ನೀಡಿದ ಪ್ರಮುಖರು ಮಾತನಾಡಿ, ಟ್ರಸ್ಟ್ ಕಾರ್ಯ ಶ್ಲಾಘನೀಯವಾಗಿದೆ. ಉತ್ತಮ ಸೇವೆ ನೀಡುವ ಕಡೆ ಹೆಚ್ಚಿನ ಗಮನ ಹರಿಸಿ ಸೇವಾ ಕಾರ್ಯ ಸಾರ್ಥಕಗೊಳಿಸಬೇಕೆಂದು ಕರೆ ನೀಡಿದರು.
ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಸ್ಟೀವನ್ ಜೋನಾಥನ್, ಕಾರ್ಯದರ್ಶಿ ಮನೋಹರ್ ಬಾಬು, ಪಾಸ್ಟರ್ ರವಿಕುಮಾರ್, ಪಾಸ್ಟರ್ ರೈಮಂಡ್, ತೆಲುಗು ಕ್ರಿಶ್ಚಿಯನ್ ಅಸೋಸಿಯೇಷನ್ ಅಧ್ಯಕ್ಷ ಬಾಸ್ಕರ್ ಬಾಬು, ಯುವ ಮುಖಂಡ ವಿಲ್ಸನ್ ಬಾಬು, ನಗರಸಭೆ ಮಾಜಿ ಸದಸ್ಯ ಮುಕುಂದಪ್ಪ, ಯಂಗ್ ಕ್ರಿಶ್ಚಿಯನ್ ಅಸೋಸಿಯೇಷನ್ ಅಧ್ಯಕ್ಷ ಆರ್. ಮೋಸಸ್, ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ನಿಯಂತ್ರಣ ಮಂಡಳಿ ತಾಲೂಕು ಅಧ್ಯಕ್ಷ ಸಂತೋಷ್ ಕುಮಾರ್, ಕಾಕನಿ ಪ್ರಕಾಶ್, ಬಾಬು, ಕೇವಿನ, ಬಾಲಾಜಿ, ಅಶೋಕ್ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.