Monday, January 9, 2023

ಡಿ. ನಾಗರಾಜ್‌ಗೆ ಯೋಗ ಸ್ಪರ್ಧೆಯಲ್ಲಿ ಬೆಳ್ಳಿ ಪದಕ

ಅಂತರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ ಪಂದ್ಯಾವಳಿಯಲ್ಲಿ ಭದ್ರಾವತಿ ವಿವೇಕಾನಂದ ಯೋಗ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಡಿ. ನಾಗರಾಜ್ ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದ್ದಾರೆ.
    ಭದ್ರಾವತಿ, ಜ. ೧೦ : ಅಂತರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ ಪಂದ್ಯಾವಳಿಯಲ್ಲಿ ನಗರದ ವಿವೇಕಾನಂದ ಯೋಗ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಡಿ. ನಾಗರಾಜ್ ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದ್ದಾರೆ.
    ಪಾಂಡಿಚೇರಿ ಸರ್ಕಾರದ ಪ್ರವಾಸೋದ್ಯಮ ಇಲಾಖೆ ವತಿಯಿಂದ ಪಾಂಡಿಚೇರಿ ಕರುವಾಡಿಕುಪ್ಪಂನ ಕಾಮರಾಜ ಮಣಿಮಂಟಪಂನಲ್ಲಿ ಆಯೋಜಿಸಲಾಗಿದ್ದ ೨೮ನೇ ಅಂತರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್‌ನಲ್ಲಿ ನಾಗರಾಜ್‌ರವರು ೪೬ ವರ್ಷ ಮೇಲ್ಪಟ್ಟವರ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ.
    ಮುಖ್ಯಮಂತ್ರಿ ರಂಗಸ್ವಾಮಿ ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು. ಪ್ರವಾಸೋದ್ಯಮ ಮತ್ತು ಲೋಕೋಪಯೋಗಿ ಸಚಿವ ಕೆ. ಲಕ್ಷ್ಮೀನಾರಾಯಣನ್, ಸಭಾಧ್ಯಕ್ಷ ಆರ್. ಸೆಲ್ವಂ, ಇಲಾಖೆ ನಿರ್ದೇಶಕಿ ಪಿ. ಪ್ರಿಯದರ್ಶಿನಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಅಕ್ಷರ ಸಂತ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಲ ಹಾಜಬ್ಬರಿಗೆ ಸನ್ಮಾನ

ಅಕ್ಷರ ಸಂತ, ಸಮಾಜ ಸೇವಕ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಲ ಹಾಜಬ್ಬ ಅವರನ್ನು ಭದ್ರಾವತಿ ಅಪ್ಪರ್ ಹುತ್ತಾ ಅನನ್ಯ ಎಜ್ಯುಕೇಷನ್ ಟ್ರಸ್ಟ್ ವತಿಯಿಂದ ಸೋಮವಾರ ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ: ಅಕ್ಷರ ಸಂತ, ಸಮಾಜ ಸೇವಕ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಲ ಹಾಜಬ್ಬ ಅವರನ್ನು ನಗರದ ಅಪ್ಪರ್ ಹುತ್ತಾ ಅನನ್ಯ ಎಜ್ಯುಕೇಷನ್ ಟ್ರಸ್ಟ್ ವತಿಯಿಂದ ಸೋಮವಾರ ಸನ್ಮಾನಿಸಿ ಗೌರವಿಸಲಾಯಿತು.
    ಟ್ರಸ್ಟ್ ೧೦ನೇ ವರ್ಷದ ದಶ ಸಂಭ್ರಮ ಅನನ್ಯೋತ್ಸವ ವಾರ್ಷಿಕ ದಿನಾಚರಣೆಯಲ್ಲಿ ಹಾಜಬ್ಬ ಅವರ ಸೇವೆಯನ್ನು ಸ್ಮರಿಸಿ ಗೌರವಿಸಲಾಯಿತು. ಟ್ರಸ್ಟ್ ಅಧ್ಯಕ್ಷ ಡಾ. ಕೆ ನಾಗರಾಜ್ ಅಧ್ಯಕ್ಷತೆ ವಹಿಸಿದ್ದರು.
    ಟ್ರಸ್ಟ್ ಉಪಾಧ್ಯಕ್ಷ ಕೆ.ಪಿ ಹರೀಶ್‌ಕುಮಾರ್, ಕಾರ್ಯದರ್ಶಿ ಅನಿಲ್‌ಕುಮಾರ್, ಟ್ರಸ್ಟಿಗಳಾದ ಸುರೇಶ್‌ಕುಮಾರ್, ಸಿ.ಎನ್ ಗಿರೀಶ್, ಗುರುಪ್ರಸಾದ್ ತಂತ್ರಿ, ಗಿರಿರಾಜ್, ಶ್ರೀನಿಧಿ, ಭಾಗ್ಯ ಸೇರಿದಂತೆ ಒಟ್ಟು ೧೯ ಜನ ಟ್ರಸ್ಟಿಗಳು, ಆಡಳಿತಾಧಿಕಾರಿ ವೇಣುಗೋಪಾಲ್, ಪ್ರಾಂಶುಪಾಲ ಕಲ್ಲೇಶ್, ವಾರ್ಡ್ ನಗರಸಭಾ ಸದಸ್ಯೆ ಲತಾ ಚಂದ್ರಶೇಖರ್ ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.    

ಅಕ್ರಮ ಮದ್ಯಮಾರಾಟಕ್ಕೆ ಕಡಿವಾಣ ಹಾಕಿ : ಕೆಆರ್‌ಎಸ್ ಪಕ್ಷ ಆಗ್ರಹ

ತಾಲೂಕು ಆಡಳಿತ, ಅಬಕಾರಿ ಇಲಾಖೆಗೆ ಮನವಿ

ಭದ್ರಾವತಿ ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟ ಹೆಚ್ಚಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕುವಂತೆ ಆಗ್ರಹಿಸಿ ಸೋಮವಾರ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ(ಕೆಆರ್‌ಎಸ್)ದ ವತಿಯಿಂದ ತಾಲೂಕು ಆಡಳಿತ ಹಾಗು ಅಬಕಾರಿ ಇಲಾಖೆಗೆ ಮನವಿ ಸಲ್ಲಿಸಲಾಗಿದೆ.
    ಭದ್ರಾವತಿ, ಜ. ೯: ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟ ಹೆಚ್ಚಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕುವಂತೆ ಆಗ್ರಹಿಸಿ ಸೋಮವಾರ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ(ಕೆಆರ್‌ಎಸ್)ದ ವತಿಯಿಂದ ತಾಲೂಕು ಆಡಳಿತ ಹಾಗು ಅಬಕಾರಿ ಇಲಾಖೆಗೆ ಮನವಿ ಸಲ್ಲಿಸಲಾಗಿದೆ.
   ತಾಲೂಕಿನ ನಗರ ಹಾಗು ಗ್ರಾಮಾಂತರ ಪ್ರದೇಶದಲ್ಲಿ  ಅಕ್ರಮ ಮದ್ಯ ಮಾರಾಟವನ್ನು ಹೆಚ್ಚಾಗಿದ್ದು,  ಇದರಿಂದಾಗಿ ತಾಲೂಕಿನಲ್ಲಿ ಅಶಾಂತಿ ವಾತಾವರಣ ನಿರ್ಮಾಣವಾಗುತ್ತಿದೆ. ಅಲ್ಲದೆ ಮಕ್ಕಳ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿದೆ. ಗ್ರಾಮಾಂತರ ಭಾಗದಲ್ಲಿನ ಮಹಿಳೆಯರು ಮತ್ತು ಮಕ್ಕಳು ದೌರ್ಜನ್ಯಕ್ಕೆ ಒಳಗಾಗುತ್ತಿದ್ದು, ಈ ಹಿನ್ನಲೆಯಲ್ಲಿ ತಾಲೂಕು ದಂಡಾಧಿಕಾರಿಗಳು ಹಾಗು ಅಬಕಾರಿ ಇಲಾಖೆಗಳು ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು. ತಾಲೂಕಿನಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಕೋರಲಾಗಿದೆ.
        ಕರ್ನಾಟಕ ರಾಷ್ಟ್ರ ಸಮಿತಿ ಯುವ ಘಟಕದ ತಾಲೂಕು ಅಧ್ಯಕ್ಷ ಆರ್. ತ್ಯಾಗರಾಜ ನೇತೃತ್ವದಲ್ಲಿ ಮನವಿ ಮನವಿ ಸಲ್ಲಿಸಲಾಯಿತು. ತೀರ್ಥಕುಮಾರ್ ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಗೆ ಎನ್‌ಎಂಎಂಎಸ್ ಪರೀಕ್ಷೆಯಿಂದ ಹೆಚ್ಚಿನ ಅನುಕೂಲ : ವೈ.ಎಂ ಧರ್ಮಪ್ಪ

ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲೂಕು ಘಟಕ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ನ್ಯೂಟೌನ್ ಸೇಂಟ್ ಚಾರ್ಲ್ಸ್ ಶಾಲೆಯಲ್ಲಿ ೮ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಎನ್‌ಎಂಎಂಎಸ್ ಪರೀಕ್ಷೆ ಎದುರಿಸಲಿರುವ ನಗರದ ವಿವಿಧ ಪ್ರೌಡಶಾಲೆಗಳ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಪರೀಕ್ಷಾ ತರಬೇತಿ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ವೈ.ಎಂ ಧರ್ಮಪ್ಪರನ್ನು ಸನ್ಮಾನಿಸಿ ಗೌರವಿಸಲಾಯಿತು. 
    ಭದ್ರಾವತಿ, ಜ. ೯ : ಎನ್‌ಎಂಎಂಎಸ್ ಪರೀಕ್ಷೆ ಅತ್ಯಂತ ಮಹತ್ವದ ಪರೀಕ್ಷೆಯಾಗಿದ್ದು, ಹೆಚ್ಚಿನ ವಿದ್ಯಾರ್ಥಿಗಳು ಇದರ ಸದುಪಯೋಗಪಡೆದುಕೊಳ್ಳುವಂತೆ ಶಿವಮೊಗ್ಗ ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ವೈ.ಎಂ ಧರ್ಮಪ್ಪ ಹೇಳಿದರು.
    ಅವರು ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲೂಕು ಘಟಕ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ನ್ಯೂಟೌನ್ ಸೇಂಟ್ ಚಾರ್ಲ್ಸ್ ಶಾಲೆಯಲ್ಲಿ ೮ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಎನ್‌ಎಂಎಂಎಸ್ ಪರೀಕ್ಷೆ ಎದುರಿಸಲಿರುವ ನಗರದ ವಿವಿಧ ಪ್ರೌಡಶಾಲೆಗಳ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಪರೀಕ್ಷಾ ತರಬೇತಿ ಉದ್ಘಾಟಿಸಿ ಮಾತನಾಡಿದರು.
    ಎನ್‌ಎಂಎಂಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸರ್ಕಾರ ಪ್ರತಿ ತಿಂಗಳು ೧ ಸಾವಿರ ರು. ವಿದ್ಯಾರ್ಥಿವೇತನ ೪ ವರ್ಷಗಳ ಕಾಲ ನೀಡುತ್ತದೆ. ಇದರಿಂದಾಗಿ ಭವಿಷ್ಯದಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ನೆರವಾಗಲಿದೆ. ಈ ಹಿನ್ನಲೆಯಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದರು.  
     ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಮಾತನಾಡಿ, ನುರಿತ ಹಾಗೂ ಅನುಭವಿ ಸಂಪನ್ಮೂಲ ವ್ಯಕ್ತಿಗಳ ಮೂಲಕ ಈ ತರಬೇತಿ ಆಯೋಜಿಸಲಾಗಿದೆ. ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಉತ್ತೀರ್ಣರಾಗುವಂತೆ ಕರೆ ನೀಡಿದರು.
    ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಕೆ. ಬಸವರಾಜಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಎಂ. ದಿವಾಕರ ಪ್ರಾಸ್ತಾವಿಕವಾಗಿ ಮಾತನಾಡಿದರು.
    ಶಿವಮೊಗ್ಗ ಜಿಲ್ಲಾ ಡಯಟ್ ಪ್ರಾಂಶುಪಾಲ ಬಸವರಾಜಪ್ಪ,  ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿ ವಿ.ಎಚ್ ಪಂಚಾಕ್ಷರಿ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಜಿ.ಎಚ್ ಪ್ರಭು,  ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ್, ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರ ಸಂಘದ ಅಧ್ಯಕ್ಷ ಸಿ.ಎಸ್ ನಾಗರಾಜ, ಸಹ ಶಿಕ್ಷಕರ ಸಂಘದ ರಾಜ್ಯ ಪರಿಷತ್ ಸದಸ್ಯ ಬಿ.ಪಿ ನಾಗರಾಜಪ್ಪ,  ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಎಂ.ಜಿ.ನವೀನ್ ಕುಮಾರ್, ಸಿ.ಡಿ ಮಂಜುನಾಥ್, ವೈ.ಕೆ ರಾಜು, ಶ್ರೀನಿವಾಸ, ನಾಗರಾಜ, ರವಿನಾಯ್ಕ, ಸುರೇಶ್, ಎಚ್.ಎಸ್ ಶಕುಂತಲ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ನಗರದ ವಿವಿಧ ಪ್ರೌಡಶಾಲೆಗಳ ೩೭೫ಕ್ಕೂ ಹೆಚ್ಚು ವಿದ್ಯಾರ್ಥಿಗಳು ತರಬೇತಿ ಪ್ರಯೋಜನ ಪಡೆದುಕೊಂಡರು . ಸಂಪನ್ಮೂಲ ವ್ಯಕ್ತಿಗಳಾಗಿ ದಯಾನಂದ, ಸತೀಶ್, ಲೀಲಾವತಿ  ಸೇರಿದಂತೆ ಇನ್ನಿತರರು ಕಾರ್ಯನಿರ್ವಹಿಸಿದರು.

Sunday, January 8, 2023

ಪ್ರತಿಭಾ ಕಾರಂಜಿ-ಕಲೋತ್ಸವದಲ್ಲಿ ಎರಡು ಶಾಲೆಗಳಿಗೆ ಪ್ರಶಸ್ತಿ


    ಭದ್ರಾವತಿ, ಜ. ೮: ಶಿವಮೊಗ್ಗದಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದಲ್ಲಿ ತಾಲೂಕಿನ ಎರಡು ಶಾಲೆಗಳ ಮಕ್ಕಳು ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
    ಹಳೇನಗರದ ಸಂಚಿಹೊನ್ನಮ್ಮ ಪ್ರೌಢಶಾಲೆಯ ವಿದ್ಯಾರ್ಥಿನಿ ನೇಹಾ ತಮಿಳು ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಪಡೆದುಕೊಂಡಿದ್ದು, ಕವ್ವಾಲಿಯಲ್ಲಿ ಸರ್ಕಾರಿ ಉರ್ದು ಶಾಲೆಯ ನಶ್ರಾ, ಅಮೀನಾ ಖಾನಂ, ಆಫೀಪಾ ಕೌನಯನ್, ಶರ್‌ಪುನ್ನಿಸಾ, ಸೈಯದ್ ಸಾದಿಕ್ ಮತ್ತು ಫಾತೀಮಾ ಬಾಯಿ ಅವರನ್ನೊಳಗೊಂಡ ತಂಡ ದ್ವಿತೀಯ ಬಹುಮಾನ ಪಡೆದುಕೊಂಡಿದೆ.
    ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರು ವಿಜೇತರ ಪಟ್ಟಿ ಬಿಡುಗಡೆಗೊಳಿಸಿದ್ದು, ಈ ಎರಡು ಶಾಲೆಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಅಭಿನಂದಿಸಿದ್ದಾರೆ.

ಜನ ಚೈತನ್ಯ ಯಾತ್ರೆಗೆ ಸ್ವಾಗತ : ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಬೆಂಬಲಿಸಿ ಮನವಿ

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ(ಕೆಆರ್‌ಎಸ್)ದ ವತಿಯಿಂದ ಜಿಲ್ಲೆಯಾದ್ಯಂತ ಜ.೧೧ರವರೆಗೆ ಹಮ್ಮಿಕೊಳ್ಳಲಾಗಿರುವ ಜನ ಚೈತನ್ಯ ಯಾತ್ರೆ ಭಾನುವಾರ ಭದ್ರಾವತಿ ನಗರಕ್ಕೆ ಆಗಮಿಸಿತು. ಅಂಬೇಡ್ಕರ್ ವೃತ್ತದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
    ಭದ್ರಾವತಿ, ಜ. ೮: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ(ಕೆಆರ್‌ಎಸ್)ದ ವತಿಯಿಂದ ಜಿಲ್ಲೆಯಾದ್ಯಂತ ಜ.೧೧ರವರೆಗೆ ಹಮ್ಮಿಕೊಳ್ಳಲಾಗಿರುವ ಜನ ಚೈತನ್ಯ ಯಾತ್ರೆ ಭಾನುವಾರ ನಗರಕ್ಕೆ ಆಗಮಿಸಿತು.
    ಪಕ್ಷದ ಸ್ಥಳೀಯ ಮುಖಂಡರು ನಗರದ ಬಿ.ಎಚ್ ರಸ್ತೆ ಲೋಯರ್ ಹುತ್ತಾದಲ್ಲಿ ಜನ ಚೈತನ್ಯ ಯಾತ್ರೆಗೆ ಸ್ವಾಗತ ಕೋರಿದರು. ನಂತರ ಯಾತ್ರೆ ಅಂಬೇಡ್ಕರ್ ವೃತ್ತ, ಹಾಲಪ್ಪ ವೃತ್ತ, ಮಾಧವಚಾರ್ ವೃತ್ತ, ರಂಗಪ್ಪ ವೃತ್ತ ಮತ್ತು ಹೊಸಮನೆ ಶಿವಾಜಿವೃತ್ತದವರೆಗೂ ಸಾಗಿತು.
    ಕರ್ನಾಟಕದಲ್ಲಿ ಸ್ವಚ್ಛ, ಪ್ರಾಮಾಣಿಕ, ಜನಪರ ರಾಜಕಾರಣದ ಸ್ಥಾಪನೆಗಾಗಿ ರಾಜ್ಯದ ಸಮಗ್ರ ಅಭಿವೃದ್ಧಿಗೆ ನಮ್ಮ ನೀಲಿ ನಕ್ಷೆ ಎಂಬ ಹಲವು ಭರವಸೆಗಳನ್ನೊಳಗೊಂಡ ಕರಪತ್ರ ವಿತರಿಸುವ ಮೂಲಕ ಪಕ್ಷದ ಕಾರ್ಯಕರ್ತರು ಸಾಗಿದರು.
    ಪ್ರಮುಖ ವೃತ್ತಗಳಲ್ಲಿ ಪಕ್ಷದ ಪ್ರಮುಖರು ಮಾತನಾಡಿ, ಪಕ್ಷದ ತತ್ವ, ಸಿದ್ದಾಂತಗಳಿಗೆ ಬದ್ಧರಾಗಿ ಪಕ್ಷಕ್ಕೆ ಸೇರ್ಪಡೆಗೊಳ್ಳಲು ಎಲ್ಲರಿಗೂ ಮುಕ್ತವಾದ ಅವಕಾಶವಿದೆ. ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಕೈಜೋಡಿಸುವಂತೆ ಮನವಿ ಮಾಡಿದರು.
    ಯಾತ್ರೆಯಲ್ಲಿ ಪಕ್ಷದ ಶಿವಮೊಗ್ಗ ಜಿಲ್ಲಾ ಯುವ ಘಟಕ ಮತ್ತು ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಅಧ್ಯಕ್ಷ ಪ್ರಭು, ಬಿ.ಆರ್ ಮಧು, ಅರಳಿಹಳ್ಳಿ ತ್ಯಾಗರಾಜು, ತೀರ್ಥಕುಮಾರ್, ಮಲ್ಲಿಕಾರ್ಜುನ್, ಅಯಾಜ್, ಶರತ್‌ಕುಮಾರ್, ವಿನೋದ್, ವಾಣಿ, ಸುಮಿತ್ರ, ಶಬರೀಶ್, ನಾಗರಾಜ್‌ರಾವ್ ಶಿಂಧೆ, ಭದ್ರಾಕಾಲೋನಿ ಚಿಂಪಯ್ಯ, ವೆಂಕಟೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಉದ್ಯೋಗ ಮೇಳಕ್ಕೆ ಸಂಸದ ಬಿ.ವೈ ರಾಘವೇಂದ್ರ ಚಾಲನೆ : ೨೫ಕ್ಕೂ ಹೆಚ್ಚು ಕಂಪನಿಗಳು ಬಾಗಿ

ಮಂಗೋಟೆ ಮುರಿಗೆಪ್ಪ ಚಾರಿಟಬಲ್ ಟ್ರಸ್ಟ್ ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ಭದ್ರಾವತಿ ಹೊಸಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಭಾನುವಾರ ಆಯೋಜಿಸಲಾಗಿದ್ದ ಉದ್ಯೋಗ ಮೇಳಕ್ಕೆ ಸಂಸದ ಬಿ.ವೈ ರಾಘವೇಂದ್ರ ಚಾಲನೆ ನೀಡಿದರು.
    ಭದ್ರಾವತಿ, ಜ. ೮: ಮಂಗೋಟೆ ಮುರಿಗೆಪ್ಪ ಚಾರಿಟಬಲ್ ಟ್ರಸ್ಟ್ ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ನಗರದ ಹೊಸಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಭಾನುವಾರ ಆಯೋಜಿಸಲಾಗಿದ್ದ ಉದ್ಯೋಗ ಮೇಳಕ್ಕೆ ಸಂಸದ ಬಿ.ವೈ ರಾಘವೇಂದ್ರ ಚಾಲನೆ ನೀಡಿದರು.
    ಬಳ್ಳಾರಿ ಜೆಎಸ್‌ಡಬ್ಲ್ಯೂ ಸ್ಟೀಲ್ ಲಿ., ಕೊಪ್ಪಳ ಕಲ್ಯಾಣಿ ಸ್ಟೀಲ್ಸ್ ಲಿ. ಮತ್ತು  ಕೊಪ್ಪಳ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿ. ಮತ್ತು ಮುಕುಂದ ಸುಮಿ ಸ್ಪೆಷಲ್ ಸ್ಟ್ರೀಲ್ ಲಿ. ಹಾಗು ಎಕ್ಸ್‌ಇಂಡಿಯಾ ಸ್ಟೀಲ್ ಲಿ., ಹಗರಿಬೊಮ್ಮನಹಳ್ಳಿ ಎಸ್‌ಎಲ್‌ಆರ್ ಮೆಟಾಲಿಕ್ಸ್ ಲಿ., ಹೊಸಪೇಟೆ ಸಂಡೂರು ಮ್ಯಾಗ್ನೆಸ್ ಅಂಡ್ ಐರನ್ ಓರ‍್ಸ್ ಲಿ. ಮತ್ತು ಬಿಎಂಎಂ ಇನ್‌ಸ್ಪಾಟ್ ಲಿ., ಮಾಚೇನಹಳ್ಳಿ ಶಾಂತಲ ಸ್ಪೆರೋಕ್ಯಾಸ್ಟ್ ಪ್ರೈ.ಲಿ., ಮಲ್ನಾಡ್ ಅಲಾಯ್ ಕ್ಯಾಸ್ಟಿಂಗ್ ಪ್ರೈ. ಲಿ.,  ವಿಜಯ್ ಟೆಕ್ನೋಕ್ರಾಟ್ಸ್ ಪ್ರೈ.ಲಿ.,  ಪ್ರಗತಿ ಸ್ಟೀಲ್ ಕ್ಯಾಸ್ಟಿಂಗ್ ಪ್ರೈ.ಲಿ., ನೀಟೆಕ್ ಫೆರೋ ಕ್ಯಾಸ್ಟಿಂಗ್ ಪ್ರೈ.ಲಿ., ಭೈರವೇಶ್ವರ ಎಂಟರ್‌ಪ್ರೈಸಸ್ ಮತ್ತು ಮೆ|| ಪ್ರಾರ್ಥನ ಇಂಜಿನಿಯರಿಂಗ್ ಪ್ರೈ. ಲಿ., ಶಾಹಿ ಎಕ್ಸ್‌ಪೋರ್ಟ್ಸ್ ಪ್ರೈ.ಲಿ., ಬೆಂಗಳೂರಿನ ನಿಕೇತನ್ ಕನ್ಸಲ್‌ಟೆಂಟ್ಸ್, ಶಿವಮೊಗ್ಗದ ಟೆಕ್ನೋ ರಿಂಗ್ಸ್, ಪರ್‌ಫೆಕ್ಟ್ ಅಲಾಯ್ ಕಾಂಪೋನೆಂಟ್ಸ್ ಪ್ರೈ.ಲಿ., ನಂಜಪ್ಪ ಹಾಸ್ಪಿಟಲ್, ಸರ್ಜಿ ಹಾಸ್ಪಿಟಲ್, ಓಪನ್ ಅಮೈನ್ಸ್ ವರ್ಲ್ಡ್ ಸ್ಕೂಲ್ ಮತ್ತು ಸನ್‌ರೈಸ್ ಫ್ಯಾಸಿಲಿಟಿ ಸರ್ವಿಸ್ ಸೇರಿದಂತೆ ಸುಮಾರು ೨೫ಕ್ಕೂ ಹೆಚ್ಚು ಪ್ರತಿಷ್ಠಿತ ಖಾಸಗಿ ಕಂಪನಿಗಳು ಮೇಳದಲ್ಲಿ ಭಾಗವಹಿಸಿದ್ದರು.
    ಬಹುತೇಕ ಕಂಪನಿಗಳು ಸ್ಥಳದಲ್ಲಿಯೇ ಸಂದರ್ಶನ ನಡೆಸಿ ಆಯ್ಕೆಯನ್ನು ಅಂತಿಮಗೊಳಿಸಿದವು. ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೊಮ, ನರ್ಸಿಂಗ್, ಲ್ಯಾಬ್ ಟೆಕ್ನಿಷಿಯನ್, ಬಿ.ಎ, ಬಿ.ಕಾಂ., ಬಿ.ಎಸ್ಸಿ., ಎಂ.ಎಸ್ಸಿ., ಬಿಬಿಎ/ಬಿಬಿಎಂ., ಬಿ.ಇ., ಸೇರಿದಂತೆ ಪದವಿ ಹಾಗೂ ಸ್ನಾತಕೋತ್ತರ ಪದವೀಧರ ನಿರುದ್ಯೋಗಿಗಳು ಮೇಳದಲ್ಲಿ ಪಾಲ್ಗೊಂಡು ಸದುಪಯೋಗಪಡೆದುಕೊಂಡರು. ಯುವ ಮುಖಂಡ ಮಂಗೋಟೆ ರುದ್ರೇಶ್ ಉದ್ಯೋಗ ಮೇಳದ ನೇತೃತ್ವ ವಹಿಸಿದ್ದರು.
    ಸಮಾರಂಭದಲ್ಲಿ ವಿಧಾನಪರಿಷತ್ ಸದಸ್ಯ ಎಸ್. ರುದ್ರೇಗೌಡ, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್. ಗೋಪಿನಾಥ್, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಬಿ. ಸಿದ್ದಬಸಪ್ಪ, ಶಿವಮೊಗ್ಗ ಎಪಿಎಂಸಿ ಮಾಜಿ ಅಧ್ಯಕ್ಷ ಎಸ್.ಎಸ್ ಜ್ಯೋತಿ ಪ್ರಕಾಶ್ ಸೇರಿದಂತೆ ಟ್ರಸ್ಟ್ ಪದಾಧಿಕಾರಿಗಳು ಉಪಸ್ಥಿತರಿದ್ದರು.  


ಮಂಗೋಟೆ ಮುರಿಗೆಪ್ಪ ಚಾರಿಟಬಲ್ ಟ್ರಸ್ಟ್ ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ಭದ್ರಾವತಿ ಹೊಸಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಭಾನುವಾರ ಆಯೋಜಿಸಲಾಗಿತ್ತು.