ಕರ್ನಾಟಕ ಸ್ಟೇಟ್ ಕನ್ಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ ಭದ್ರಾವತಿ ತಾಲೂಕು ಶಾಖೆ ವತಿಯಿಂದ ಶುಕ್ರವಾರ ಪತ್ರಿಕಾಗೋಷ್ಠಿ ನಡೆಯಿತು.
ಭದ್ರಾವತಿ, ಜ. ೨೦: ಕರ್ನಾಟಕ ಸ್ಟೇಟ್ ಕನ್ಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ ತಾಲೂಕು ಶಾಖೆ ವತಿಯಿಂದ ಜ. ೨೨ರಂದು ಗಾಂಧಿನಗರ ಅಗ ಮುಡಿ ಮೊದಲಿಯಾರ್ ಸಮುದಾಯ ಭವನದಲ್ಲಿ ವಿವಿಧ ಸೌಲಭ್ಯಗಳ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಕೆ. ಸುಂದರ್ ಬಾಬು ಮತ್ತು ತಾಲೂಕು ಶಾಖೆ ಅಧ್ಯಕ್ಷ ಕೆ. ಚಂದ್ರಶೇಖರ್ ತಿಳಿಸಿದರು.
ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮರಣ ಹೊಂದಿದ ಕಾರ್ಮಿಕರ ವಾರಸುದಾರರಿಗೆ ೫ ಲಕ್ಷ ರೂ. ಹಣ ಮಂಜೂರಾತಿ ಆದೇಶ ಪತ್ರ, ಇ-ಶಮ್ ಕಾರ್ಡ್, ಕಿಟ್ (ಎಲೆಕ್ಟ್ರಿಷಿಯನ್, ಮೇಷನ್ ಮತ್ತು ಮಹಿಳೆಯರಿಗೆ ನ್ಯೂಟ್ರಿಷಿನ್ ಕಿಟ್) ಮತ್ತು ಕೆಎಸ್ಆರ್ಟಿಸಿ ಉಚಿತ ಬಸ್ ಪಾಸ್ ವಿತರಣೆ ನಡೆಯಲಿದೆ. ಅಲ್ಲದೆ ಸಂಸದರು, ಶಾಸಕರು, ಹಿರಿಯ ಮಹಿಳಾ ಮತ್ತು ಪುರುಷ ಕಾರ್ಮಿಕರಿಗೆ, ಯೂನಿಯನ್ ರಾಜ್ಯಾಧ್ಯಕ್ಷರು, ತಾಲೂಕು ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಹಾಗು ದಾನಿಗಳಿಗೆ ಮತ್ತು ಪ್ರತಿನಿಧಿಗಳಿಗೆ ಸನ್ಮಾನ ಹಮ್ಮಿಕೊಳ್ಳಲಾಗಿದೆ ಎಂದರು.
ಶ್ರೀ ಕ್ಷೇತ್ರ, ಭದ್ರಗಿರಿ.(ಎಂ.ಸಿ.ಹಳ್ಳಿ) ಶ್ರೀ ಮುರುಗೇಶ್ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದು, ಶ್ರಮಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟದ ಗೌರವಾಧ್ಯಕ್ಷರಾದ ಸಂಸದ ಬಿ.ವೈ ರಾಘವೇಂದ್ರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದು, ಯೂನಿಯನ್ ರಾಜ್ಯಾಧ್ಯಕ್ಷ ಎನ್.ಪಿ ಸಾಮಿ, ಜಿಲ್ಲಾ ಗೌರವಾಧ್ಯಕ್ಷ ಭಾನುಪ್ರಕಾಶ್, ಶ್ರಮಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟದ ಜಿಲ್ಲಾ ಗೌರವ ಸಲಹೆಗಾರ ಬಿ.ಕೆ ಶ್ರೀನಾಥ್, ಜಿಲ್ಲಾ ಕಾರ್ಮಿಕ ಅಧಿಕಾರಿ ಸೀಬಿರಂಗಯ್ಯ, ಯೂನಿಯನ್ ತಾಲೂಕು ಅಧ್ಯಕ್ಷ ಕೆ. ಚಂದ್ರಶೇಖರ್, ನಿರ್ದೇಶಕ ಅಂತೋಣಿ ಕ್ರೂಸ್, ಯೂನಿಯನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಧನಶೇಖರ್, ರಾಜ್ಯ ಮಹಿಳಾ ಕಾರ್ಯದರ್ಶಿ, ಲೀಲಾವತಿ, ಜಿಲ್ಲಾ ಗೌರವ ಸಲಹೆಗಾರ ಭೂಪಾಲ್, ಜಿಲ್ಲಾಧ್ಯಕ್ಷ ಸುಬ್ರಮಣಿ, ಗ್ರಾಮಾಂತರ ಜಿಲ್ಲಾಧ್ಯಕ್ಷ ಕೆ. ಸಂಜಯ್ ಕುಮಾರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಸ್. ಕುಮಾರ್, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್, ಉದ್ಯಮಿಗಳಾದ ಡಿ.ವಿ ಶಿವಕುಮಾರ್, ಎ. ಮಾದಣ್ಣ, ಜಿ. ಸುರೇಶ್ ಕುಮಾರ್, ರಾಜಶೇಖರ್, ಮಣಿಕಂಠ, ಆರ್ಮುಗಮ್, ಮುಮ್ತಾಜ್ ಬೇಗಂ, ಅಂಬಿಕಾ, ಸುಬ್ರಮಣಿ ಮೇಸ್ತ್ರೀ, ಅನುಸುಧಾ ಮೋಹನ್ ಪಳನಿ, ಚೆನ್ನಪ್ಪ, ವಿ. ಕದೀರೇಶ್, ಸುದೀಪ್ ಕುಮಾರ್, ಜಾರ್ಜ್, ಮಣಿ, ಟಿಪ್ಪುಸುಲ್ತಾನ್, ಲಕ್ಷಣ, ಹಾಲೇಶ್ ಮೇಸ್ತ್ರೀ, ವೆಂಕಟೇಶ್ ಕಂಟ್ರಾಕ್ಟರ್, ಬಿ. ಉಬೆದುಲ್ಲಾ, ಶರವಣ ಮೇಸ್ತ್ರೀ, ವೆಂಕಟೇಶ್, ದೇವೇಂದ್ರ, ಸುಬ್ರಮಣಿ, ಶರವಣ ಮತ್ತು ಕುಬೇಂದ್ರಪ್ಪ ಹಾಗು ಯೂನಿಯನ್ ತಾಲೂಕು ಶಾಖಾ ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಯೂನಿಯನ್ ಪ್ರಮುಖರಾದ ಉಪಾಧ್ಯಕ್ಷ ಬಿ.ಎಚ್ ನಾಗೇಂದ್ರರೆಡ್ಡಿ, ಕಾರ್ಯದರ್ಶಿ ಎಂ.ಪಿ ನಾರಾಯಣಸ್ವಾಮಿ, ಕಾರ್ಯಾಧ್ಯಕ್ಷ ಬಿ.ಎಸ್ ಅಭಿಲಾಷ್, ಸಹ ಕಾರ್ಯದರ್ಶಿ ಎಂ. ಗಣೇಶ್, ಅಜೀವ ನಿರ್ದೇಶಕ ಅಂತೋಣಿ ಕ್ರೂಸ್, ಗೌರವಾಧ್ಯಕ್ಷ ಜಿ. ಸುರೇಶ್ ಕುಮಾರ್, ತಾಂತ್ರಿಕ ಸಲಹೆಗಾರ ಕೆ. ಮನೋಹರ್, ಗೌರವ ಸಲಹೆಗಾರ ಶಿವಣ್ಣ ಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.