Wednesday, February 15, 2023

ಜೆಡಿಎಸ್ ಪರಿಶಿಷ್ಟ ಪಂಗಡದ ಅಧ್ಯಕ್ಷರಾಗಿ ಬಸವರಾಜ್ ಬಿ. ಆನೇಕೊಪ್ಪ

ಭದ್ರಾವತಿ ವಿಧಾನಸಭಾ ಕ್ಷೇತ್ರದ ಜಾತ್ಯತೀತ ಜನತಾದಳ ಪರಿಶಿಷ್ಟ ಪಂಗಡ ಅಧ್ಯಕ್ಷರಾಗಿ ನಗರಸಭಾ ಸದಸ್ಯ ಬಸವರಾಜ್ ಬಿ. ಆನೆಕೊಪ್ಪ ನೇಮಕಗೊಂಡಿದ್ದಾರೆ.
    ಭದ್ರಾವತಿ, ಫೆ. ೧೫ :  ವಿಧಾನಸಭಾ ಕ್ಷೇತ್ರದ ಜಾತ್ಯತೀತ ಜನತಾದಳ ಪರಿಶಿಷ್ಟ ಪಂಗಡ ಅಧ್ಯಕ್ಷರಾಗಿ ನಗರಸಭಾ ಸದಸ್ಯ ಬಸವರಾಜ್ ಬಿ. ಆನೆಕೊಪ್ಪ ನೇಮಕಗೊಂಡಿದ್ದಾರೆ.
    ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಶಾರದಾ ಅಪ್ಪಾಜಿಯವರ ನಿರ್ದೇಶನದ ಮೇರೆಗೆ ಜಿಲ್ಲಾ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷ ಎಚ್.ಆರ್ ಹನುಮಂತಪ್ಪ ಬಸವರಾಜ್ ಬಿ. ಆನೆಕೊಪ್ಪರವನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದು, ಪಕ್ಷದ ತತ್ವ, ಸಿದ್ದಾಂತಗಳಿಗೆ ಬದ್ಧರಾಗಿ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವಂತೆ ಸೂಚಿಸಿದ್ದಾರೆ.
    ಪಕ್ಷದ ನಗರ ಘಟಕದ ಅಧ್ಯಕ್ಷ ಆರ್. ಕರುಣಾಮೂರ್ತಿ, ಜಿಲ್ಲಾ ಪರಿಶಿಷ್ಟ ಪಂಗಡ ವಿಭಾಗದ ಉಪಾಧ್ಯಕ್ಷ ಶಿವಕುಮಾರ್, ಪರಿಶಿಷ್ಟ ಜಾತಿ ವಿಭಾಗದ ತಾಲೂಕು ಅಧ್ಯಕ್ಷ ಮೈಲಾರಪ್ಪ, ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಉಜ್ಜನಿಪುರ, ನಗರಸಭೆ ಮಾಜಿ ಅಧ್ಯಕ್ಷೆ ವಿಶಾಲಾಕ್ಷಿ, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಎಚ್.ಬಿ ರವಿಕುಮಾರ್, ಮಾಜಿ ಸದಸ್ಯ ಆನಂದ್, ಮುಖಂಡರಾದ ಚಂದ್ರಣ್ಣ, ಉಮೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಪರಿಶಿಷ್ಟ ಪಂಗಡದ ಅಧ್ಯಕ್ಷರಾಗಿ ನೇಮಕಗೊಳ್ಳಲು ಕಾರಣಕರ್ತರಾದ ಶಾರದ ಅಪ್ಪಾಜಿ, ಯುವ ಮುಖಂಡ ಎಂ.ಎ ಅಜಿತ್ ಹಾಗು ಪಕ್ಷದ ಜಿಲ್ಲಾ ಹಾಗು ತಾಲೂಕು ಮುಖಂಡರಿಗೆ ಬಸವರಾಜ್ ಬಿ. ಆನೇಕೊಪ್ಪ ಕೃತಜ್ಞತೆ ಸಲ್ಲಿಸಿದ್ದಾರೆ.

Tuesday, February 14, 2023

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಹಣ ಕಳೆದುಕೊಂಡ ಮಹಿಳೆ : ಹಣ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಸಿಬ್ಬಂದಿ

ಭದ್ರಾವತಿಯಲ್ಲಿ  ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುವಾಗ ಸುಮಾರು ೩೦,೦೦೦ ಹಣ ಕಳೆದುಕೊಂಡಿದ್ದ ಮಹಿಳೆಗೆ ಪುನಃ ಹಣ ಹಿಂದಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿರುವ ಘಟನೆ ನಡೆದಿದೆ.
    ಭದ್ರಾವತಿ, ಫೆ. ೧೪ : ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುವಾಗ ಸುಮಾರು ೩೦,೦೦೦ ಹಣ ಕಳೆದುಕೊಂಡಿದ್ದ ಮಹಿಳೆಗೆ ಪುನಃ ಹಣ ಹಿಂದಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿರುವ ಘಟನೆ ನಡೆದಿದೆ.
    ತಾಲೂಕಿನ ಕಾಡಿನಂಚಿನಲ್ಲಿರುವ ಬಂಡಿಗುಡ್ಡ ಗ್ರಾಮಕ್ಕೆ ತೆರಳುವ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಆಯಿಷಮ್ಮ ಎಂಬ ಮುಸ್ಲಿಂ ಮಹಿಳೆಯೊಬ್ಬರು ಬಂಡಿಗುಡ್ಡದಿಂದ ನಗರಕ್ಕೆ ಪ್ರಯಾಣ ಬೆಳೆಸಿದ್ದು, ಈ ಅವಧಿಯಲ್ಲಿ ಸುಮಾರು ೩೦,೦೦೦ ರು. ನಗದು ಹಣ ಕಳೆದುಕೊಂಡಿದ್ದಾರೆ. ಕಳೆದುಕೊಂಡ ಹಣ ಬಸ್‌ನಲ್ಲಿಯೇ ನಿರ್ವಾಹಕ ರವಿ ಅವರಿಗೆ ಪತ್ತೆಯಾಗಿದ್ದು, ಹಣ ಕಳೆದುಕೊಂಡ ಮಹಿಳೆಯನ್ನು ಪತ್ತೆ ಮಾಡಿ ನಗರದ ಮುಖ್ಯಬಸ್ ನಿಲ್ದಾಣದಲ್ಲಿ ಸರ್.ಎಂ ವಿಶ್ವೇಶ್ವರಾಯನವರ ಪ್ರತಿಮೆ ಬಳಿ ನಿರ್ವಾಹಕ ರವಿ, ಚಾಲಕ ರಾಜು ಮತ್ತು ಸಂಚಾರಿ ನಿಯಂತ್ರಕ ಪುರುಷೋತ್ತಮ್ ಹಣ ಹಿಂದಿರುಗಿಸಿದರು. ಪ್ರಾಮಾಣಿಕತೆ ಮೆರೆದಿರುವ ಸಿಬ್ಬಂದಿ ವರ್ಗವನ್ನು ಕೆಎಸ್‌ಆರ್‌ಟಿಸಿ ಭದ್ರಾವತಿ ಘಟಕ ಅಭಿನಂದಿಸಿದೆ.

ದೆಹಲಿ ಮಟ್ಟದಲ್ಲಿ ಹೋರಾಟಕ್ಕೆ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಕರೆ

ಫೆ.೧೫ರಂದು ಕ್ರೈಸ್ತರ ಬೆಂಬಲ : ಭದ್ರಾವತಿ.ಕಾಂ (bhadravathi.com)  ಅಂತರ್ಜಾಲದ ಮೂಲಕ ಹೋರಾಟ



ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆ ಉಳಿವಿಗಾಗಿ ಬಿ.ಎಸ್ ದಯಾನಂದ್‌ರವರು ಭದ್ರಾವತಿಯಿಂದ ಬೆಂಗಳೂರಿಗೆ ಹಮ್ಮಿಕೊಂಡಿದ್ದ ಪಾದಯಾತ್ರೆಗೆ ಮಂಗಳವಾರ ಬೆಂಗಳೂರಿನಲ್ಲಿ ಗುತ್ತಿಗೆ ಕಾರ್ಮಿಕರು ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಮತ್ತು ಶಾಸಕ ಬಿ.ಕೆ ಸಂಗಮೇಶ್ವರ್ ಸಹ ಬೆಂಬಲ ಸೂಚಿಸುವ ಜೊತೆಗೆ ಮುಂದಿನ ಹೋರಾಟಕ್ಕೆ ಕರೆ ನೀಡಿದರು.
    ಭದ್ರಾವತಿ: ವಿಐಎಸ್‌ಎಲ್ ಕಾರ್ಖಾನೆ ಉಳಿವಿಗಾಗಿ ಬಿ.ಎಸ್ ದಯಾನಂದ್‌ರವರು ಭದ್ರಾವತಿಯಿಂದ ಬೆಂಗಳೂರಿಗೆ ಹಮ್ಮಿಕೊಂಡಿದ್ದ ಪಾದಯಾತ್ರೆಗೆ ಮಂಗಳವಾರ ಬೆಂಗಳೂರಿನಲ್ಲಿ ಗುತ್ತಿಗೆ ಕಾರ್ಮಿಕರು ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
    ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಮತ್ತು ಶಾಸಕ ಬಿ.ಕೆ ಸಂಗಮೇಶ್ವರ್ ಸಹ ಬೆಂಬಲ ಸೂಚಿಸುವ ಜೊತೆಗೆ ಮುಂದಿನ ಹೋರಾಟಕ್ಕೆ ಕರೆ ನೀಡಿದರು. ಬಿ.ವಿ ಶ್ರೀನಿವಾಸ್‌ರವರು ಮುಂದಿನ ಹೋರಾಟ ದೆಹಲಿ ಮಟ್ಟದಲ್ಲಿ ನಡೆಯಬೇಕು. ಇದಕ್ಕೆ ಎಲ್ಲಾ ರೀತಿಯ ಸಹಕಾರ ನೀಡಲು ಬದ್ಧವಾಗಿದ್ದೇನೆ ಎಂದರು.
    ಕಾರ್ಮಿಕ ಸಂಘದ ಮಾಜಿ ಅಧ್ಯಕ್ಷ ಜೆ.ಎನ್ ಚಂದ್ರಹಾಸ ಕೇಂದ್ರ ಸರ್ಕಾರ ಹಾಗು ಉಕ್ಕು ಪ್ರಾಧಿಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಬಿ.ವಿ ಶ್ರೀನಿವಾಸ್‌ರವರಿಗೆ ವಿವರಿಸಿದರು.  ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಖಾನೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹೋರಾಟಕ್ಕೆ ಇನ್ನೂ ಹೆಚ್ಚಿನ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
    ಗುತ್ತಿಗೆ ಕಾರ್ಮಿಕರ ಹೋರಾಟಕ್ಕೆ ಫೆ.೧೫ರಂದು ಕ್ರೈಸ್ತರ ಬೆಂಬಲ:
    ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಹೋರಾಟಕ್ಕೆ ನಗರದ ಎಲ್ಲಾ ಕ್ರೈಸ್ತ ಸಭೆಗಳು ಮತ್ತು ಸಂಘ-ಸಂಸ್ಥೆಗಳು ಬೆಂಬಲ ಸೂಚಿಸಿಫೆ.೧೫ರಂದು ಸಂಜೆ ೬ ಗಂಟೆ ಕ್ಯಾಂಡಲ್ ಹಿಡಿದು ಪ್ರತಿಭಟನೆ ನಡೆಸಲಿವೆ.
    ಈ ಪ್ರತಿಭಟನೆಯಲ್ಲಿ ನಗರದ ಎಲ್ಲಾ ಕ್ರೈಸ್ತ ಸಮುದಾಯದವರು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಸೆಲ್ವರಾಜ್ ಕೋರಿದ್ದಾರೆ.
    ಭದ್ರಾವತಿ.ಕಾಂ (bhadravathi.com)  ಅಂತರ್ಜಾಲದ ಮೂಲಕ ಹೋರಾಟ :
    ವಿಐಎಸ್‌ಎಲ್ ಕಾರ್ಖಾನೆ ಉಳಿವಿಗಾಗಿ ಹಲವು ರೀತಿಯ ಹೋರಾಟಗಳು ಆರಂಭಗೊಂಡಿದ್ದು, ಇದೀತ ಅಂತರ್ಜಾಲ ಸಮರ್ಪಕವಾಗಿ ಬಳಸಿಕೊಂಡು ಹೋರಾಟ ಮಾಡಲು ಯುವ ಸಮುದಾಯ ಮುಂದಾಗಿದೆ.
    ಭದ್ರಾವತಿ ಉಳಿಸಿ ವಿಐಎಸ್‌ಎಲ್-ಎಂಪಿಎಂ ಚಳುವಳಿ ಎಂಬ ಶೀರ್ಷಿಕೆಯಡಿ ಹೋರಾಟ ಆರಂಭಗೊಂಡಿದ್ದು, ಅಂತರ್ಜಾಲದಲ್ಲಿ ಆಂಗ್ಲ ಮತ್ತು ಕನ್ನಡ ಎರಡು ಭಾಷೆಯಲ್ಲಿ ಚಳುವಳಿ ಆರಂಭಿಸಲಾಗಿದೆ. ಈ ಹೋರಾಟಕ್ಕೆ ಈಗಾಗಲೇ ೧೪೫ ಮಂದಿ ಬೆಂಬಲಿಸಿದ್ದಾರೆ.
ಚಳುವಳಿಯಲ್ಲಿ ಪಾಲ್ಗೊಳ್ಳುವವರು ನೇರವಾಗಿ bhadravathi.com ವಿಳಾಸಕ್ಕೆ ತೆರಳಿ ಬೆಂಬಲ ಮತ್ತು ವಿರೋಧಿಸುತ್ತಾರೆ. ಈ ಎರಡು ಆಯ್ಕೆಗಳಲ್ಲಿ ಯಾವುದಾದರೂ ಒಂದು ಆಯ್ಕೆ ಮಾಡುವ ಮೂಲಕ ಯಶಸ್ವಿಗೊಳಿಸುವಂತೆ ಕೋರಲಾಗಿದೆ.


ಭದ್ರಾವತಿ ಉಳಿಸಿ ವಿಐಎಸ್‌ಎಲ್-ಎಂಪಿಎಂ ಚಳುವಳಿ ಎಂಬ ಶೀರ್ಷಿಕೆಯಡಿ ಹೋರಾಟ ಆರಂಭಗೊಂಡಿದ್ದು, ಅಂತರ್ಜಾಲದಲ್ಲಿ ಆಂಗ್ಲ ಮತ್ತು ಕನ್ನಡ ಎರಡು ಭಾಷೆಯಲ್ಲಿ ಚಳುವಳಿ ಆರಂಭಿಸಲಾಗಿದೆ. ಈ ಹೋರಾಟಕ್ಕೆ ಈಗಾಗಲೇ ೧೪೫ ಮಂದಿ ಬೆಂಬಲಿಸಿದ್ದಾರೆ.

ವಿಐಎಸ್‌ಎಲ್ ಉಳಿಸಲು ಬೆಂಗಳೂರಿಗೆ ಯುವಕನ ಪಾದಯಾತ್ರೆ : ಪ್ರತಿಭಟನೆ

ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆ ಉಳಿವಿಗಾಗಿ ಬಿ.ಎಸ್ ದಯಾನಂದ್‌ರವರು ಭದ್ರಾವತಿಯಿಂದ ಬೆಂಗಳೂರಿಗೆ ಹಮ್ಮಿಕೊಂಡಿದ್ದ ಪಾದಯಾತ್ರೆಗೆ ಮಂಗಳವಾರ ಬೆಂಗಳೂರಿನಲ್ಲಿ ಗುತ್ತಿಗೆ ಕಾರ್ಮಿಕರು ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
    ಭದ್ರಾವತಿ, ಫೆ. ೧೪ : ವಿಶ್ವೇಶ್ವರಾಯ ಉಕ್ಕಿನ ಮತ್ತು ಕಬ್ಬಿಣ ಕಾರ್ಖಾನೆ  ಮುಚ್ಚುವ ನಿರ್ಧಾರ ಕೈಬಿಟ್ಟು, ಪುನಶ್ಚೇತನಗೊಳಿಸಬೇಕೆಂದು ಒತ್ತಾಯಿಸಿ ನಗರದ ಯುವಕನೊಬ್ಬ ಬೆಂಗಳೂರಿಗೆ ಪಾದಯಾತ್ರೆ ಕೈಗೊಳ್ಳುವಲ್ಲಿ ಯಶಸ್ವಿಯಾಗಿದ್ದು, ಮಂಗಳವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯೊಂದಿಗೆ ಪಾದಯಾತ್ರೆ ಮುಕ್ತಾಯಗೊಂಡಿದೆ.


    ನಗರದ ರೈಲ್ವೆ ನಿಲ್ದಾಣದ ಬಳಿ ಅಂಗಡಿ ಹೊಂದಿರುವ ಬಿ.ಎಸ್ ದಯಾನಂದ್ ಎಂಬ ಯುವಕ ಭದ್ರಾವತಿಗೆ ಬಂದು ನೆಲೆಸಿ ಕೇವಲ ೫-೬ ವರ್ಷಗಳಾಗಿವೆ. ಆದರೆ, ಉಕ್ಕಿನ ನಗರಿ ತನಗೆ ನೆಲೆಸಲು ಜಾಗ, ಅನ್ನ, ನೀರು ನೀಡಿ ಸಲುಹಿದೆ. ಇಂತಹ ನಗರ ಉಳಿಯಬೇಕು ಎಂದರೆ ವಿಐಎಸ್‌ಎಲ್ ಹಾಗೂ ಎಂಪಿಎಂ ಕಾರ್ಖಾನೆ ಉಳಿಯಬೇಕು. ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಲಕ್ಷಾಂತರ ಮಂದಿಯ ಜೀವನಕ್ಕೆ ಆಧಾರವಾಗಿರುವ ವಿಐಎಸ್‌ಎಲ್ ಕಾರ್ಖಾನೆ ಮುಚ್ಚುವುದರಿಂದ ಎಷ್ಟೋ ಕುಟುಂಬಗಳ ಜೀವನ ನಾಶವಾಗಲಿದೆ. ಹೀಗಾಗಿ, ಕಾರ್ಖಾನೆ ಮುಚ್ಚುವ ನಿರ್ಧಾರ ಕೈಬಿಟ್ಟು, ಅಗತ್ಯ ಬಂಡವಾಳ ತೊಡಗಿಸಿ ಗತವೈಭವ ಮರುಕಳಿಸುವಂತೆ ಕ್ರಮ ಕೈಗೊಳ್ಳಬೇಕೆಂಬ ಬೇಡಿಕೆಯೊಂದಿಗೆ ದಯಾನಂದ್ ಪಾದಯಾತ್ರೆ ಆರಂಭಿಸಿದ್ದರು.
    ಮೂಲತಃ ಶ್ರವಣಬೆಳಗೊಳದವರಾದ ದಯಾನಂದ್ ಫೆ.೧ರಂದು ಪಾದಯಾತ್ರೆ ಆರಂಭಿಸಿ ಮೊದಲು ಜಿಲ್ಲಾಧಿಕಾರಿಗಳ ಕಛೇರಿವರೆಗೂ ತೆರೆಳಿ ಮನವಿ ಸಲ್ಲಿಸಿದ್ದರು. ನಂತರ ಫೆ.೭ರಿಂದ ಬೆಂಗಳೂರಿಗೆ ಪಾದಯಾತ್ರೆ ಆರಂಭಿಸಿ ೧೪ರ ಮಂಗಳವಾರ ತಲುಪಿದ್ದು, ಇವರಿಗೆ ಪ್ರೀಡಂ ಪಾರ್ಕಿನಲ್ಲಿ ಗುತ್ತಿಗೆ ಕಾರ್ಮಿಕರು ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ಸರ್ಕಾರಕ್ಕೆ ಮನವಿ ಸಲ್ಲಿಸಿದರು.
    ಕಾರ್ಖಾನೆಗೆ ಡಿಸಿ ಮತ್ತು ಎಸ್‌ಪಿ ಭೇಟಿ : ಪರಿಶೀಲನೆ
    ಕೇಂದ್ರ ಸಚಿವರು ಕಾರ್ಖಾನೆ ಮುಚ್ಚುವ ಕುರಿತು ಸ್ಪಷ್ಟಪಡಿಸಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಮತ್ತು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್‌ಕುಮಾರ್ ಮಂಗಳವಾರ ಮಧ್ಯಾಹ್ನ ಏಕಾಏಕಿ ಕಾರ್ಖಾನೆಗೆ ಭೇಟಿ ನೀಡಿದ್ದು, ಹಲವು ಕುತೂಹಲಗಳಿಗೆ ಕಾರಣವಾಗಿವೆ.


    ಕಾರ್ಖಾನೆಯ ಎನ್‌ಫೋರ್ಸ್‌ಮೆಂಟ್ ಡೈರೆಕ್ಟರ್ ಜೊತೆ ಮಾತುಕತೆ ನಡೆಸಿದ್ದು, ಕಾರ್ಖಾನೆ ಹೊಂದಿರುವ ಖಾಲಿ ಜಾಗ ಮತ್ತು ವಸತಿಗೃಹಗಳಿರುವ ಜಾಗದ ನಕಾಶೆ ಪರಿಶೀಲನೆ ನಡೆಸಲಾಯಿತು. ಅಲ್ಲದೆ ಕಾರ್ಖಾನೆ ಅಡಳಿತ ಮಂಡಳಿ ಜೊತೆ ಸಹ ಚರ್ಚೆ ನಡೆಸಲಾಗಿದೆ. ಗುತ್ತಿಗೆ ಕಾರ್ಮಿಕರು ಬೆಂಗಳೂರಿನಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಹಿನ್ನಲೆಯಲ್ಲಿ ಕಾರ್ಖಾನೆ ಬಳಿ ಬಿಕೋ ಎನ್ನುವ ವಾತಾವರಣ ಕಂಡು ಬಂದಿತು.


ಕೇಂದ್ರ ಸಚಿವರು ಕಾರ್ಖಾನೆ ಮುಚ್ಚುವ ಕುರಿತು ಸ್ಪಷ್ಟಪಡಿಸಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಮತ್ತು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್‌ಕುಮಾರ್ ಮಂಗಳವಾರ ಮಧ್ಯಾಹ್ನ ಏಕಾಏಕಿ ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆಗೆ ಭೇಟಿ ನೀಡಿದ್ದು, ಹಲವು ಕುತೂಹಲಗಳಿಗೆ ಕಾರಣವಾಗಿವೆ.

Monday, February 13, 2023

ವಿಐಎಸ್‌ಎಲ್ ಉಳಿವಿಗಾಗಿ ಜೆಡಿಎಸ್ ಬೆಂಬಲಿಸಿ : ಶಾರದ ಅಪ್ಪಾಜಿ

ಸುಂಕದಮ್ಮ ಜಾತ್ರಾ ಮಹೋತ್ಸವ ಅಂಗವಾಗಿ ಹಿರಿಯ ನಾಗರೀಕರಿಗೆ ಸನ್ಮಾನ ಕಾರ್ಯಕ್ರಮ

ಭದ್ರಾವತಿ ನಗರಸಭೆ ವಾರ್ಡ್ ನಂ.೩೪ರ ಅಪ್ಪರ್ ಹುತ್ತಾದಲ್ಲಿ ಸುಂಕದಮ್ಮ ಜಾತ್ರಾ ಮಹೋತ್ಸವ ಅಂಗವಾಗಿ ಎಂ.ಜೆ ಅಪ್ಪಾಜಿ ಅಭಿಮಾನಿ ಬಳಗ ಮತ್ತು ಶಂಕರ್‌ನಾಗ್ ಅಭಿಮಾನಿ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಹಿರಿಯ ನಾಗರೀಕರಿಗೆ ಸನ್ಮಾನ ಹಾಗು ಸಾಂಸ್ಕೃತಿಕ ರಸಮಂಜರಿ ಕಾರ್ಯಕ್ರಮದಲ್ಲಿ ಜೆಡಿಎಸ್ ಪಕ್ಷದ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಶಾರದ ಅಪ್ಪಾಜಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಫೆ. ೧೪: ಮಾಜಿ ಶಾಸಕರಾದ ಎಂ.ಜೆ ಅಪ್ಪಾಜಿಯವರು ಅಂದು ಎಂಪಿಎಂ ಕಾರ್ಮಿಕರ ಪರವಾಗಿ ಹಗಲಿರುಳು ಹೋರಾಟ ನಡೆಸಿದರು. ಆದರೂ ಆ ಕಾರ್ಖಾನೆಯನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಇದೀಗ ವಿಐಎಸ್‌ಎಲ್ ಕಾರ್ಖಾನೆ ಮುಚ್ಚುವ ಸ್ಥಿತಿ ಎದುರಾಗಿದ್ದು, ಕಾರ್ಖಾನೆ ಉಳಿಸಿಕೊಳ್ಳಲು ರಾಜಕೀಯ ಅಧಿಕಾರ ಅಗತ್ಯವಾಗಿದೆ ಎಂದು ಜೆಡಿಎಸ್ ಪಕ್ಷದ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಶಾರದ ಅಪ್ಪಾಜಿ ಹೇಳಿದರು.
    ಅವರು ನಗರಸಭೆ ವಾರ್ಡ್ ನಂ.೩೪ರ ಅಪ್ಪರ್ ಹುತ್ತಾದಲ್ಲಿ ಸುಂಕದಮ್ಮ ಜಾತ್ರಾ ಮಹೋತ್ಸವ ಅಂಗವಾಗಿ ಎಂ.ಜೆ ಅಪ್ಪಾಜಿ ಅಭಿಮಾನಿ ಬಳಗ ಮತ್ತು ಶಂಕರ್‌ನಾಗ್ ಅಭಿಮಾನಿ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಹಿರಿಯ ನಾಗರೀಕರಿಗೆ ಸನ್ಮಾನ ಹಾಗು ಸಾಂಸ್ಕೃತಿಕ ರಸಮಂಜರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಎಂ.ಜೆ ಅಪ್ಪಾಜಿಯವರು ಕಾರ್ಮಿಕರಾಗಿ, ಕ್ಷೇತ್ರದ ಶಾಸಕರಾಗಿ ಅವರು ನಡೆಸಿದ ಹೋರಾಟ ಇಂದಿಗೂ ನಮ್ಮೆಲ್ಲರ ಕಣ್ಮುಂದೆ ಇದೆ. ಕ್ಷೇತ್ರ ಎರಡು ಕಣ್ಣುಗಳಲ್ಲಿ ಒಂದಾದ ಎಂಪಿಎ ಕಾರ್ಖಾನೆ ಈಗಾಗಲೇ ಮುಚ್ಚಿಹೋಗಿದ್ದು, ಕಾರ್ಮಿಕರು ಹಾಗು ಕುಟುಂಬ ವರ್ಗದವರು ಇಂದು ಸಂಕಷ್ಟ ಅನುಭವಿಸುತ್ತಿದ್ದಾರೆ. ಇದೀಗ ವಿಐಎಸ್‌ಎಲ್ ಕಾರ್ಖಾನೆ ಮುಚ್ಚುವ ಸ್ಥಿತಿ ಎದುರಾಗಿದ್ದು, ನಾವೆಲ್ಲರೂ ಒಗ್ಗಟ್ಟಿನಿಂದ ಹೋರಾಟ ಎದುರಿಸಬೇಕಾಗಿದೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಂದ ಮಾತ್ರ ಈ ಕಾರ್ಖಾನೆ ಉಳಿಸಿಕೊಳ್ಳಲು ಸಾಧ್ಯ. ಕ್ಷೇತ್ರದ ಮತದಾರರು ಜೆಡಿಎಸ್ ಬೆಂಬಲಿಸುವ ಮೂಲಕ ಅವರನ್ನು ಪುನಃ ಮುಖ್ಯಮಂತ್ರಿಯನ್ನಾಗಿಸಬೇಕೆಂದು ಮನವಿ ಮಾಡಿದರು.


    ನಗರಸಭೆ ಮಾಜಿ ಸದಸ್ಯ ಎಚ್.ಬಿ ರವಿಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಭಾಗದಲ್ಲಿ ಎಂ.ಜೆ ಅಪ್ಪಾಜಿಯವರಾಗಲಿ, ನಾನಗಲಿ ರಾಜಕೀಯವನ್ನು ವೈಯಕ್ತಿಕವಾಗಿ ಬಳಸಿಕೊಂಡಿಲ್ಲ. ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳು ಇಂದಿಗೂ ಉಳಿದುಕೊಂಡಿವೆ. ಮುಂದಿನ ದಿನಗಳಲ್ಲೂ ಸಹ ನಾವು ಅಪ್ಪಾಜಿ ಕುಟುಂಬವನ್ನು ಬೆಂಬಲಿಸುವುದು ಸೂಕ್ತವಾಗಿದೆ. ಅವರ ಕುಟುಂಬದ ಜೊತೆ ನಾನು ಸದಾ ಕಾಲ ಇರುತ್ತೇನೆ ಎಂದರು.
    ವೇದಿಕೆಯಲ್ಲಿ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಆರ್. ಕರುಣಾಮೂರ್ತಿ, ಮಾಜಿ ನಗರಸಭಾ ಸದಸ್ಯರಾದ ಕರಿಯಪ್ಪ, ಮುರ್ತುಜಾಖಾನ್, ವಿಶಾಲಾಕ್ಷಿ, ಎಸ್.ಬಿ ಮೋಹನ್ ರಾವ್, ನಗರಸಭಾ ಸದಸ್ಯರಾದ ಪಲ್ಲವಿ, ಜಯಶೀಲ, ನಾಗರತ್ನ, ಸವಿತಾ, ರೂಪಾವತಿ, ಬಸವರಾಜ ಬಿ. ಆನೇಕೊಪ್ಪ, ಕೋಟೇಶ್ವರ ರಾವ್, ಉದಯಕುಮಾರ್, ಮುಖಂಡರಾದ ಡಿ.ಟಿ ಶ್ರೀಧರ್, ಗೊಂದಿ ಜಯರಾಂ, ವಸಂತ್, ಭಾಗ್ಯಮ್ಮ, ಉಮೇಶ್, ಮಧುಸೂಧನ್, ಸಣ್ಣಯ್ಯ, ಮಲ್ಲೇಶ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಎಂ.ಜೆ ಅಪ್ಪಾಜಿ ಅಭಿಮಾನಿ ಬಳಗ ಮತ್ತು ಶಂಕರ್‌ನಾಗ್ ಅಭಿಮಾನಿ ಬಳಗದ ವತಿಯಿಂದ ಶಾರದ ಅಪ್ಪಾಜಿ, ವಾರ್ಡಿನ ಹಿರಿಯ ನಾಗರೀಕರು, ಮಹಿಳಾ ಪ್ರಮುಖರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಯಿತು. ಆರ್ಕೆಸ್ಟ್ರಾ ಕಲಾವಿದರಿಂದ ಸಾಂಸ್ಕೃತಿಕ ರಸಮಂಜರಿ ಕಾರ್ಯಕ್ರಮ ನಡೆಯಿತು.

ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರ ೨೬ನೇ ದಿನ ಹೋರಾಟ : ಕಾರ್ಖಾನೆಯನ್ನು ರಾಜ್ಯ ಸರ್ಕಾರ ಹಿಂಪಡೆಯಲಿ

ತಹಸೀಲ್ದಾರ್ ಆರ್. ಪ್ರದೀಪ್ ಮೂಲಕ ಪ್ರಧಾನಮಂತ್ರಿ ಮತ್ತು ಮುಖ್ಯಮಂತ್ರಿಗಳಿಗೆ ಮನವಿ

ಭದ್ರಾವತಿಯಲ್ಲಿ ವಿಐಎಸ್‌ಎಲ್ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ೨೬ನೇ ದಿನ ಅನಿರ್ಧಿಷ್ಟಾವಧಿ ಹೋರಾಟಕ್ಕೆ ಬೆಂಬಲ ಸೂಚಿಸಿ ಭಾರತರತ್ನ ಸರ್.ಎಂ. ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಡಿ.ದೇವರಾಜ ಅರಸು ಜನಸ್ಪಂದನ ವೇದಿಕೆ ಮತ್ತು ಸುವರ್ಣ ಮಹಿಳಾ ವೇದಿಕೆ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಆರ್. ಪ್ರದೀಪ್ ಮೂಲಕ ಪ್ರಧಾನಮಂತ್ರಿ ಮತ್ತು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಫೆ. ೧೩ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು ರಾಜ್ಯ ಸರ್ಕಾರ ಹಿಂಪಡೆದು ಅಭಿವೃದ್ಧಿಗೊಳಿಸಬೇಕೆಂದು ಒತ್ತಾಯಿಸಿ ಭಾರತರತ್ನ ಸರ್.ಎಂ. ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಡಿ.ದೇವರಾಜ ಅರಸು ಜನಸ್ಪಂದನ ವೇದಿಕೆ ಮತ್ತು ಸುವರ್ಣ ಮಹಿಳಾ ವೇದಿಕೆ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಆರ್. ಪ್ರದೀಪ್ ಮೂಲಕ ಪ್ರಧಾನಮಂತ್ರಿ ಮತ್ತು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ೨೬ನೇ ದಿನ ಅನಿರ್ಧಿಷ್ಟಾವಧಿ ಹೋರಾಟಕ್ಕೆ ಬೆಂಬಲ ಸೂಚಿಸಿ ಪ್ರತಿಭಟನೆ ನಡೆಸಿ ಮಾತನಾಡಿದ ಪ್ರಮುಖರು, ಕಾರ್ಖಾನೆಯಲ್ಲಿ ಉತ್ಪಾದನೆ ಪ್ರಾರಂಭ ಮಾಡಿ ೧೦೦ ವರ್ಷ ಪೂರೈಸುತ್ತಿರುವ ಈ ಸುಸಂದರ್ಭದಲ್ಲಿ ಉಕ್ಕು ಪ್ರಾಧಿಕಾರ ಮುಚ್ಚಲು ಹೊರಟಿರುವುದು ವಿಷಾದನೀಯ ಬೆಳವಣಿಗೆಯಾಗಿದೆ ಎಂದರು.
ಮೈಸೂರು ಸಂಸ್ಥಾನದ ಅಂದಿನ ಮಹಾರಾಜರಾದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್‌ರವರು ಅವರ ತಾಯಿ ಕೆಂಪನಂಜಮ್ಮಣಿ ದೇವಿ ಅವರಿಂದ ರು. ೧೦,೦೦೦ ಪಡೆದು  ಈ ಕಾರ್ಖಾನೆಯನ್ನು ನಿರ್ಮಿಸಿದರು. ಒಂದು ವೇಳೆ ಈ ಕಾರ್ಖಾನೆ ಮುಚ್ಚಿದರೆ ಇದರ ಸ್ಥಾಪನೆಗೆ ಕಾರಣಕರ್ತರಾಗಿರುವ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗು ಸರ್.ಎಂ. ವಿಶ್ವೇಶ್ವರಾಯ ಅವರ ಹೆಸರಿಗೆ ಮಸಿ ಬಳಿದಂತಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಖಾನೆಯಲ್ಲಿ ಸುಮಾರು ೧೪೦೦ ಗುತ್ತಿಗೆ ಕಾರ್ಮಿಕರು, ೨೧೧ ಕಾಯಂ ಕಾರ್ಮಿಕರು ಹಾಗೂ ೬೦ ಅಧಿಕಾರಿಗಳು ಹಾಗೂ ಇವರಿಗೆ ಅವಲಂಬಿತರಾಗಿರುವ ಪ್ರತ್ಯಕ್ಷವಾಗಿ ಸುಮಾರು ೮೦೦೦ ಜನ ಹಾಗೂ ಪರೋಕ್ಷವಾಗಿ ಅವಲಂಬಿತರಾಗಿರುವ  ಸುಮಾರು ೪೦,೦೦೦ ಜನ ಬೀದಿಗೆ ಬಿದ್ದು ಇಡೀ ಭದ್ರಾವತಿಯಲ್ಲಿ ಸ್ಮಶಾನ ಮೌನ ಆವರಿಸುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.
ಮಹಾರಾಷ್ಟ್ರದಲ್ಲಿ ಉಕ್ಕು ಪ್ರಾಧಿಕಾರಕ್ಕೆ ಒಳಪಟ್ಟ ಚಂದ್ರಾಪುರದಲ್ಲಿರುವ ಮಹಾರಾಷ್ಟ್ರ ಎಲೆಕ್ಟ್ರೋ ಸ್ಮೆಲ್ಟ್ ಕಾರ್ಖಾನೆಯನ್ನು ಖಾಸಗಿಯವರಿಗೆ ಮಾರಾಟ ಮಾಡಲು ಹೊರಟಾಗ ಮಹಾರಾಷ್ಟ್ರ ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು, ವಿಧಾನಸಭೆ ಹಾಗು ವಿಧಾನಪರಿಷತ್ ಸದಸ್ಯರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು ಹಾಗೂ ಸಂಘ ಸಂಸ್ಥೆಯವರು ಪಕ್ಷಾತೀತವಾಗಿ ಉಗ್ರವಾದ ಹೋರಾಟ ಹಾಗೂ ಮಹಾರಾಷ್ಟ್ರ ರಾಜ್ಯ ಬಂದ್ ಮಾಡುವ ಮೂಲಕ ಕೇಂದ್ರ ಸರ್ಕಾರದ ಗಮನ ಸೆಳೆದು ಉಕ್ಕು ಪ್ರಾಧಿಕಾರದಿಂದ ಕಾರ್ಖಾನೆಯನ್ನು ಹಿಂಪಡೆದು ಪ್ರಸ್ತುತ ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗುತ್ತಿದ್ದು, ಈ ವಿಚಾರವನ್ನು ರಾಜ್ಯದ ವಿಧಾನಸಭೆ ಮತ್ತು ವಿಧಾನಪರಿಷತ್‌ನಲ್ಲಿ ಮಂಡಿಸಿ ಸುಧೀರ್ಘವಾಗಿ ಚರ್ಚಿಸಿ  ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿ ಕೊಡುವಂತೆ ಒತ್ತಾಯಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ "ಸರ್ವರಿಗೂ ಸೂರು" ಯೋಜನೆ ಜಾರಿ ಮಾಡಲು ಸರ್ಕಾರಿ ನೌಕರರಿಗೆ ಬಾಡಿಗೆ ಆಧಾರದ ಮೇಲೆ ಹಾಗೂ ನಿವೃತ್ತ ಕಾರ್ಮಿಕರಿಗೆ ಗುತ್ತಿಗೆ ಆಧಾರದ ಮೇಲೆ ನೀಡಿರುವ ಮನೆಗಳನ್ನು ಹಾಗೂ ಪಾಳು ಬಿದ್ದಿರುವ ಮನೆಗಳನ್ನು ದುರಸ್ತಿಗೊಳಿಸಿ ಕಾರ್ಖಾನೆಯ ಆಧಾರಸ್ತಂಭಗಳಾಗಿರುವ ಗುತ್ತಿಗೆ ಕಾರ್ಮಿಕರಿಗೂ ಮಾರಾಟ ಮಾಡಿದ್ದಲ್ಲಿ, ಅವರವರ ಹೆಸರಿಗೆ ದಾಖಲಿಸಿಕೊಟ್ಟರೆ ಇದರಿಂದ ಬರುವ ಆದಾಯವನ್ನು ಕಾರ್ಖಾನೆಯ ಬಂಡವಾಳಕ್ಕೆ ಉಪಯೋಗಿಸಬಹುದು.
ಕಾರ್ಖಾನೆಯ ಆಡಳಿತ ವ್ಯಾಪ್ತಿಯ ಪ್ರದೇಶಗಳಲ್ಲಿ ಸಾವಿರಾರು ಎಕರೆ ಖಾಲಿ ಭೂಮಿ ಹೊಂದಿದ್ದು, ಇದರಲ್ಲಿ ಬಹಳಷ್ಟು ಒತ್ತುವರಿಯಾಗಿದ್ದು, ಇವುಗಳನ್ನು ತೆರವುಗೊಳಿಸಿ ಮಾರಾಟ ಮಾಡುವುದರಿಂದ ಹಾಗೂ ಉಳಿದ ಭೂಮಿಯಲ್ಲಿ ಶಿವಮೊಗ್ಗ ಮತ್ತು ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಮೂಲಕ ಬಡಾವಣೆಗಳನ್ನು ನಿರ್ಮಿಸಿ ಸಾರ್ವಜನಿಕರಿಗೆ ನಿವೇಶನಗಳನ್ನು ಹಂಚಿದರೆ ಸಾವಿರಾರು ಕೋಟಿ ರೂಗಳ ಆಧಾಯ ಬರುತ್ತದೆ. ಈ ಹಣವನ್ನು ಸಹ ಕಾರ್ಖಾನೆಗೆ ಬಂಡವಾಳವನ್ನಾಗಿ ಉಪಯೋಗಿಸಿಕೊಳ್ಳಬಹುದಾಗಿದೆ ಎಂದು ಸಲಹೆ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ಕಾರ್ಖಾನೆಯನ್ನು ಉಕ್ಕು ಪ್ರಾಧಿಕಾರದಿಂದ ಹಿಂಪಡೆದು ಕಾರ್ಖಾನೆಗೆ ಅಗತ್ಯವಿರುವ ಬಂಡವಾಳ ತೊಡಗಿಸಿದರೆ ಕಾರ್ಖಾನೆಯನ್ನು ಲಾಭದಾಯಕವಾಗಿ ಮುನ್ನಡೆಸಿಕೊಂಡು ಹೋಗಲು ಸಾಧ್ಯ. ಈ ಮೂಲಕ ಕಾರ್ಖಾನೆ, ಕಾರ್ಮಿಕರು ಹಾಗು ಭದ್ರಾವತಿ ಉಳಿಸುವಂತೆ ಕೋರಿದರು.  
ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಆರ್. ವೇಣುಗೋಪಾಲ್, ಸುವರ್ಣ ಮಹಿಳಾ ವೇದಿಕೆ ಅಧ್ಯಕ್ಷೆ ರಮಾವೆಂಕಟೇಶ್, ಗೀತಾ ರವಿಕುಮಾರ್, ಎಂ.ಆರ್ ಸುಜಾತ, ಎಂ. ರಾಧ, ಇಂದಿರಾಣಿ,  ಮುರುಗನ್, ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎನ್. ರಮೇಶ್, ಕಾರ್ಮಿಕ ಸಂಘದ ಮಾಜಿ ಅಧ್ಯಕ್ಷ ಜೆ.ಎನ್ ಚಂದ್ರಹಾಸ, ಗುತ್ತಿಗೆ ಕಾರ್ಮಿಕರ ಸಂಘದ ಪ್ರಮುಖರಾದ ಪಿ. ರಾಕೇಶ್, ಕುಮಾರಸ್ವಾಮಿ, ಸತೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಅರ್ಹ ಬಗರ್‌ಹುಕುಂ ಸಾಗುವಳಿದಾರರಿಗೆ ವಂಚನೆ : ದಾಖಲೆಪತ್ರ ವಿತರಣೆಯಲ್ಲಿ ಭ್ರಷ್ಟಾಚಾರ

ತಾಲೂಕು ಬಗರ್‌ಹುಕುಂ ಹೊರಾಟ ಸಮಿತಿವತಿಯಿಂದ ಬೃಹತ್ ಪ್ರತಿಭಟನೆ


ಭದ್ರಾವತಿ ತಾಲೂಕು ಕಛೇರಿಯಲ್ಲಿ ಕೆಲವು ಭ್ರಷ್ಟ ಅಧಿಕಾರಿಗಳು ಹಾಗೂ ಮಧ್ಯವರ್ತಿಗಳು ಸಾಗುವಳಿದಾರರಿಗೆ ಲಭಿಸಬೇಕಾದ ಸರ್ಕಾರಿ ಸೌಲಭ್ಯಗಳಿಂದ ವಂಚಿಸುತ್ತಿರುವುದನ್ನು ಖಂಡಿಸಿ ಸೋಮವಾರ ತಾಲೂಕು ಬಗರ್‌ಹುಕುಂ ಹೊರಾಟ ಸಮಿತಿವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಭದ್ರಾವತಿ, ಫೆ. ೧೩ : ತಾಲೂಕು ಕಛೇರಿಯಲ್ಲಿ ಕೆಲವು ಭ್ರಷ್ಟ ಅಧಿಕಾರಿಗಳು ಹಾಗೂ ಮಧ್ಯವರ್ತಿಗಳು ಸಾಗುವಳಿದಾರರಿಗೆ ಲಭಿಸಬೇಕಾದ ಸರ್ಕಾರಿ ಸೌಲಭ್ಯಗಳಿಂದ ವಂಚಿಸುತ್ತಿರುವುದನ್ನು ಖಂಡಿಸಿ ಸೋಮವಾರ ತಾಲೂಕು ಬಗರ್‌ಹುಕುಂ ಹೊರಾಟ ಸಮಿತಿವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಪ್ರಮುಖರು ಮಾತನಾಡಿ, ತಾಲೂಕಿನ ವ್ಯಾಪ್ತಿಯಲ್ಲಿ ಬಹುತೇಕ ಸಾಗುವಳಿದಾರರು ಹಲವಾರು ದಶಕಗಳಿಂದ ಗೋಮಾಳ, ಸೊಪ್ಪಿನಬೆಟ್ಟ, ಹುಲ್ಲುಬನ್ನಿ ಹರಾಜು ಸರಕಾರಿ ಪಡ, ಖರಾಬು ಸೇರಿದಂತೆ ಇನ್ನಿತರ ಸರ್ಕಾರಿ ಭೂಮಿಯಲ್ಲಿ ಗಿಡಗಂಟೆಗಳನ್ನು ತೆಗೆದು ಸ್ವಚ್ಛ ಮಾಡಿ ವ್ಯವಸಾಯಕ್ಕೆ ಯೋಗ್ಯವನ್ನಾಗಿಸಿಕೊಂಡು ಬದುಕು ಸಾಗಿಸುತ್ತಿದ್ದಾರೆ. ಕಾಲ ಕಾಲಕ್ಕೆ ಆಯಾ ಸರ್ಕಾರಗಳು ಸಹ ಸಾಗುವಳಿದಾರರ ಪರವಾದ ನಿಲುವುಗಳನ್ನು ಕೈಗೊಳ್ಳುತ್ತಿವೆ.  ಅಲ್ಲದೆ ಸಾಗುವಳಿದಾರರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಅವರಿಗೆ ದಾಖಲೆ ಪತ್ರಗಳನ್ನು ವಿತರಿಸಲು ಮುಂದಾಗಿವೆ. ಇದಕ್ಕೆ ಪೂರಕವೆಂಬಂತೆ ನಮೂನೆ ೫೦, ೫೩, ೫೭ರ ಅಡಿಯಲ್ಲಿ ಅರ್ಜಿ ಕರೆದಿದ್ದು, ನಿಯಮಾನುಸಾರ ಅರ್ಹ ಸಾಗುವಳಿದಾರರಿಗೆ ದಾಖಲೆಪತ್ರಗಳನ್ನು ನೀಡಬೇಕಾಗಿದೆ. ಆದರೆ ಅರ್ಹ ಸಾಗುವಳಿದಾರರಿಗೆ ದಾಖಲೆಪತ್ರಗಳನ್ನು ನೀಡದೆ ವಂಚಿಸಲಾಗುತ್ತಿದೆ ಎಂದು ಆರೋಪಿಸಿದರು.  
ತಾಲೂಕಿನಲ್ಲಿ ಸುಮಾರು ೧೨ ಸಾವಿರಕ್ಕೂ ಅಧಿಕ ಬಗರ್ ಹುಕುಂ ಸಾಗುವಳಿದಾರರು ಅರ್ಜಿ ಸಲ್ಲಿಸಿದ್ದು, ಆದರೆ ಸರ್ಕಾರದ ನಿಯಮಗಳನ್ನು ಪಾಲಿಸದೆ ೧೨ ಸಾವಿರ ಅರ್ಜಿಗಳ ಪೈಕಿ ಶ್ರೀಮಂತರಿಗೆ, ರಾಜಕೀಯ ಪ್ರಭಾವಿಗಳಿಗೆ ದಾಖಲೆಪತ್ರಗಳನ್ನು ನೀಡಲು ಟಿ.ಟಿ ಚಲನ್ ತಯಾರಿಸಿದ್ದು, ಕಾನೂನು ಉಲಂಘನೆ ಮಾಡಿ ಕಛೇರಿ ಸಮಯ ಮುಗಿದನಂತರವು ಕೆಲವು ಅಧಿಕಾರಿಗಳು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಶಾಸಕರ ಹಿಂಬಾಲಕರು, ಮಧ್ಯವರ್ತಿಗಳು ಅರ್ಹ ಸಾಗುವಳಿದಾರರಿಗೆ ವಂಚಿಸುತ್ತಿದ್ದಾರೆ. ದಾಖಲೆಪತ್ರಗಳ ವಿತರಣೆಯಲ್ಲಿ  ಸಾಕಷ್ಟು ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿದರು.
ತಕ್ಷಣ ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಅರ್ಹ ಫಲಾನುಭವಿಗಳಿಗೆ ದಾಖಲೆಪತ್ರಗಳನ್ನು ವಿತರಿಸಬೇಕು. ಮಧ್ಯವರ್ತಿಗಳ ಹಾವಳಿ ತಪ್ಪಿಸಬೇಕೆಂದು ಆಗ್ರಹಿಸಿದರು. ಪ್ರಮುಖರಾದ ಆರ್. ಕರುಣಾಮೂರ್ತಿ, ಎಂ.ಎ ಅಜಿತ್, ಗೊಂದಿ ಜಯರಾಂ, ಧರ್ಮರಾಜ್, ಹನುಮಂತನಾಯ್ಕ, ಗೋಕುಲ್ ಕೃಷ್ಣನ್, ದಿಲೀಪ್, ಗುಣಶೇಖರ್, ನಕುಲ್, ಯುವರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.