ಭದ್ರಾವತಿ ಬಿ.ಎಚ್ ರಸ್ತೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಹಾಗು ನ್ಯೂಟೌನ್ ವಿಐಎಸ್ಎಸ್ಜೆ ಸರ್ಕಾರಿ ಪಾಲಿಟೆಕ್ನಿಕ್ನಲ್ಲಿ ಆಯೋಜಿಸಲಾಗಿದ್ದ ವಿಶ್ವ ಗ್ರಾಹಕರ ದಿನಾಚರಣೆ ಹಾಗು ಸೈಬರ್ ಜಾಗೃತಿ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಸಿ.ಇ.ಎನ್ ಮತ್ತು ಅಪರಾಧ (ಪಿಐ)ಪೊಲೀಸ್ ಠಾಣಾಧಿಕಾರಿ ಸಂತೋಷ್ ಪಾಟೀಲ್ ಪಾಲ್ಗೊಂಡು ಮಾತನಾಡಿದರು.
ಭದ್ರಾವತಿ, ಮಾ. ೩೧ : ವಿದ್ಯಾರ್ಥಿಗಳು ಸೈಬರ್ ಅಪರಾಧಗಳ ಕುರಿತು ಹೆಚ್ಚಿನ ತಿಳುವಳಿಕೆ ಹೊಂದಬೇಕೆಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ಸಿ.ಇ.ಎನ್ ಮತ್ತು ಅಪರಾಧ (ಪಿಐ)ಪೊಲೀಸ್ ಠಾಣಾಧಿಕಾರಿ ಸಂತೋಷ್ ಪಾಟೀಲ್ ಹೇಳಿದರು.
ಅವರು ನಗರದ ಬಿ.ಎಚ್ ರಸ್ತೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಹಾಗು ನ್ಯೂಟೌನ್ ವಿಐಎಸ್ಎಸ್ಜೆ ಸರ್ಕಾರಿ ಪಾಲಿಟೆಕ್ನಿಕ್ನಲ್ಲಿ ಆಯೋಜಿಸಲಾಗಿದ್ದ ವಿಶ್ವ ಗ್ರಾಹಕರ ದಿನಾಚರಣೆ ಹಾಗು ಸೈಬರ್ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಇತ್ತೀಚಿಗೆ ಸೈಬರ್ ಅಪರಾಧಗಳು ಹೆಚ್ಚಾಗುತ್ತಿದ್ದು, ಇವುಗಳ ನಿಯಂತ್ರಣಕ್ಕೆ ಇಲಾಖೆ ಹೆಚ್ಚಿನ ಗಮನ ಹರಿಸುತ್ತಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಸೈಬರ್ ತಿಳುವಳಿಕೆ ಜೊತೆಗೆ ಕಾನೂನು ಅರಿವು ಹೊಂದಬೇಕೆಂದರು.
ಕಳೆದು ಹೋದ ಮೊಬೈಲ್ ಪತ್ತೆ ಮಾಡಲು ಹಾಗು ದೂರು ನೀಡಲು ಇಲಾಖೆ ವತಿಯಿಂದ ನೂತನವಾಗಿ ಸಿದ್ದಪಡಿಸಲಾಗಿರುವ ಸಿಇಐಆರ್ ಪೋರ್ಟಲ್ ಹಾಗು ಕೆಎಸ್ಪಿ ಅರ್ಜಿ ಕುರಿತು ಮಾಹಿತಿ ನೀಡಲಾಯಿತು.
ಕೈಗಾರಿಕಾ ತರಬೇತಿ ಸಂಸ್ಥೆಯ ಉಪ ಪ್ರಾಚಾರ್ಯ ಎಸ್.ಎನ್ ಚಂದ್ರಶೇಖರ್, ಡಿ. ಮಹಾಂತೇಶ್, ಸಹಾಯಕ ಪೊಲೀಸ್ ಠಾಣಾಧಿಕಾರಿ ವಿರೂಪಾಕ್ಷಪ್ಪ, ಸೂರ್ಯನಾರಾಯಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಕೈಗಾರಿಕಾ ತರಬೇತಿ ಸಂಸ್ಥೆಯ ಬೋಧಕ ಹಾಗು ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.