ಭದ್ರಾವತಿ ಬಿ.ಎಚ್ ರಸ್ತೆ ರೈಲ್ವೆ ನಿಲ್ದಾಣದ ಮುಂಭಾಗ ನೂತನವಾಗಿ ನಿರ್ಮಿಸಲಾಗಿರುವ ಗಡಿಯಾರ ಕಂಬ(ಕ್ಲಾಕ್ ಟವರ್)ಲಯನ್ಸ್ ಜಿಲ್ಲಾ ಗೌರ್ನರ್ ಡಾ. ಎಂ.ಕೆ ಭಟ್ ಉದ್ಘಾಟಿಸಿದರು.
ಭದ್ರಾವತಿ, ಏ. ೧: ನಗರದ ಲಯನ್ಸ್ ಮತ್ತು ಲಿಯೋ ಕ್ಲಬ್ಗೆ ಭಾನುವಾರ ಲಯನ್ಸ್ ಜಿಲ್ಲಾ ಗೌರ್ನರ್ ಡಾ. ಎಂ.ಕೆ ಭಟ್ ಅಧಿಕೃತ ಭೇಟಿ ನೀಡುವ ಮೂಲಕ ಹಲವು ಸೇವಾಕಾರ್ಯಗಳಲ್ಲಿ ಪಾಲ್ಗೊಂಡರು.
ಹೊಸಸೇತುವೆ ರಸ್ತೆ, ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಬಳಿ ನೂತನವಾಗಿ ನಿರ್ಮಿಸಲಾಗಿರುವ ಬಸ್ ತಂಗುದಾಣ ಡಾ.ಎಂ.ಕೆ ಭಟ್ ಉದ್ಘಾಟಿಸಿದರು. ಹಳೇನಗರದ ಪುರಾಣ ಪ್ರಸಿದ್ದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಶುದ್ಧ ಕುಡಿಯುವ ನೀರಿನ ಸೌಲಭ್ಯಕ್ಕೆ ಚಾಲನೆ ನೀಡಿದರು.
ಬಿ.ಎಚ್ ರಸ್ತೆ ರೈಲ್ವೆ ನಿಲ್ದಾಣದ ಮುಂಭಾಗ ನೂತನವಾಗಿ ನಿರ್ಮಿಸಲಾಗಿರುವ ಗಡಿಯಾರ ಕಂಬ(ಕ್ಲಾಕ್ ಟವರ್) ಮತ್ತು ಜನ್ನಾಪುರ ಜಯಶ್ರೀ ಕಲ್ಯಾಣ ಮಂಪಟ ಸಮೀಪದಲ್ಲಿರುವ ಕಾರುಣ್ಯ ಚಾರಿಟಬಲ್ ಟ್ರಸ್ಟ್ನಲ್ಲಿ ಅಳವಡಿಸಲಾಗಿರುವ ಎಲೆಕ್ಟ್ರಿಕ್ ಗೀಸರ್ ಉದ್ಘಾಟಿಸಿದರು. ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ಬಾಟಲ್ಗಳನ್ನು ವಿತರಿಸಿದರು.
ಲಯನ್ಸ್ ಕ್ಲಬ್ ಅಧ್ಯಕ್ಷ ಎ.ಎನ್ ಕಾರ್ತಿಕ್ ಅಧ್ಯಕ್ಷತೆ ವಹಿಸಿದ್ದರು. ವಿಭಾಗ-೨, ವಲಯ-೨ರ ಅಧ್ಯಕ್ಷ ಕೆ.ವಿ ಚಂದ್ರಶೇಖರ್, ಲಯನ್ಸ್ ಕ್ಲಬ್ ಕಾರ್ಯದರ್ಶಿ ಎಂ. ನಾಗರಾಜ್ ಶೇಟ್, ಖಜಾಂಚಿ ಜಿ.ಪಿ ದರ್ಶನ್, ಪ್ರಮುಖರಾದ ಎಚ್.ವಿ ಶಿವರುದ್ರಪ್ಪ, ಕೆ.ಎನ್ ಭೈರಪ್ಪಗೌಡ, ಹೆಬ್ಬಂಡಿ ನಾಗರಾಜ್, ದೇವರಾಜ್, ರಾಜ್ಕುಮಾರ್, ಭುವನೇಶ್ವರ್, ಶ್ರೀನಿವಾಸ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.