Monday, April 3, 2023

ಸಿದ್ದಲಿಂಗಯ್ಯರಿಗೆ ಭಾರತ ಕಲಾ ಭೂಷಣ ರಾಷ್ಟ್ರ ಪ್ರಶಸ್ತಿ

ಭದ್ರಾವತಿ ಸಿದ್ಧಾರೂಢನಗರದ ನಿವಾಸಿ, ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ಜಿಲ್ಲಾಧ್ಯಕ್ಷ, ಜೇಡಿಕಟ್ಟೆ ಮರುಳಸಿದ್ದೇಶ್ವರ ಜನ ಕಲ್ಯಾಣ ಟ್ರಸ್ಟ್ ಅಧ್ಯಕ್ಷ ಸಿದ್ದಲಿಂಗಯ್ಯನವರಿಗೆ ಭಾರತ ಕಲಾ ಭೂಷಣ ರಾಷ್ಟ್ರ ಪ್ರಶಸ್ತಿ ಲಭಿಸಿದ್ದು, ಮಂಗಳೂರಿನ ಕಥಾಬಿಂದು ಪ್ರಕಾಶನ ವತಿಯಿಂದ ಪಿ.ವಿ ಪ್ರದೀಪ್ ಕುಮಾರ್ ಸಾರಥ್ಯದಲ್ಲಿ ಭಾನುವಾರ ಮುಂಬೈನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. 
    ಭದ್ರಾವತಿ, ಏ. ೩ : ಸಿದ್ಧಾರೂಢನಗರದ ನಿವಾಸಿ, ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ಜಿಲ್ಲಾಧ್ಯಕ್ಷ, ಜೇಡಿಕಟ್ಟೆ ಮರುಳಸಿದ್ದೇಶ್ವರ ಜನ ಕಲ್ಯಾಣ ಟ್ರಸ್ಟ್ ಅಧ್ಯಕ್ಷ ಸಿದ್ದಲಿಂಗಯ್ಯನವರಿಗೆ ಭಾರತ ಕಲಾ ಭೂಷಣ ರಾಷ್ಟ್ರ ಪ್ರಶಸ್ತಿ ಲಭಿಸಿದೆ.
    ಮಂಗಳೂರಿನ ಕಥಾಬಿಂದು ಪ್ರಕಾಶನ ವತಿಯಿಂದ ಪಿ.ವಿ ಪ್ರದೀಪ್ ಕುಮಾರ್ ಸಾರಥ್ಯದಲ್ಲಿ ಭಾನುವಾರ ಮುಂಬೈನಲ್ಲಿ ಆಯೋಜಿಸಲಾಗಿದ್ದ ಭಾರತ ಕಲಾ ಭೂಷಣ ರಾಷ್ಟ್ರ ಪ್ರಶಸ್ತಿ ಪ್ರದಾನ, ಕವಿಗೋಷ್ಠಿ, ಕೃತಿಗಳ ಬಿಡುಗಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಿದ್ದಲಿಂಗಯ್ಯನವರು ಸಲ್ಲಿಸಿರುವ ಸಮಾಜ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
    ಸಿದ್ದಲಿಂಗಯ್ಯನವರು ಹಲವು ವರ್ಷಗಳ ಕಾಲ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷರಾಗಿ, ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ರಾಜ್ಯ, ಜಿಲ್ಲಾ ಹಾಗು ತಾಲೂಕು ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ ವಿವಿಧ ಸಂಘಟನೆಗಳಲ್ಲಿ ಸಕ್ರಿಯವಾಗಿದ್ದು,  ಧಾರ್ಮಿಕ ಹಾಗು ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.
    ಮಂಡ್ಯ ಶ್ರೀರಂಗಪಟ್ಟಣ ಶ್ರೀ ಕ್ಷೇತ್ರ ಕಾಶಿ ಚಂದ್ರಮೌಳೇಶ್ವರ ಸ್ವಾಮಿ ಸನ್ನಿಧಿ, ಚಂದ್ರವನ ಆಶ್ರಮ, ಶ್ರೀ ಕ್ಷೇತ್ರ ಬೇಬಿ ಮಠದ ಡಾ. ಶ್ರೀ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ ದಿವ್ಯ ಸಾನಿಧ್ಯವಹಿಸಿದ್ದರು.

೧೦ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹೊಸಳ್ಳಿ ದಾಳೇಗೌಡರಿಗೆ ಆಹ್ವಾನ

ಭದ್ರಾವತಿ ತಾಲೂಕು ೧೦ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸವಾಧ್ಯಕ್ಷರಾಗಿ ಆಯ್ಕೆಯಾಗಿರುವ ಕರ್ನಾಟಕ ಪವರ್ ಕಾರ್ಪೋರೇಷನ್ ಲಿಮಿಟೆಡ್(ಕೆಪಿಸಿ)ಬಿ.ಆರ್ ಪ್ರಾಜೆಕ್ಟ್ ನಿವೃತ್ತ ಅಭಿಯಂತರ, ಹಿರಿಯ ಸಾಹಿತಿ ಹೊಸಳ್ಳಿ ದಾಳೇಗೌಡ ಅವರನ್ನು ಸೋಮವಾರ ಸಮ್ಮೇಳನಕ್ಕೆ ಅಧಿಕೃತವಾಗಿ ಆಹ್ವಾನಿಸಲಾಯಿತು.
    ಭದ್ರಾವತಿ, ಏ. ೩: ತಾಲೂಕು ೧೦ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸವಾಧ್ಯಕ್ಷರಾಗಿ ಆಯ್ಕೆಯಾಗಿರುವ ಕರ್ನಾಟಕ ಪವರ್ ಕಾರ್ಪೋರೇಷನ್ ಲಿಮಿಟೆಡ್(ಕೆಪಿಸಿ)ಬಿ.ಆರ್ ಪ್ರಾಜೆಕ್ಟ್ ನಿವೃತ್ತ ಅಭಿಯಂತರ, ಹಿರಿಯ ಸಾಹಿತಿ ಹೊಸಳ್ಳಿ ದಾಳೇಗೌಡ ಅವರನ್ನು ಸೋಮವಾರ ಸಮ್ಮೇಳನಕ್ಕೆ ಅಧಿಕೃತವಾಗಿ ಆಹ್ವಾನಿಸಲಾಯಿತು.
    ತಾಲೂಕು ೧೦ನೇ ಕನ್ನಡ ಸಾಹಿತ್ಯ ಸಮ್ಮೇಳನ ಏ.೧೬ರ ಭಾನುವಾರ ನ್ಯೂಟೌನ್ ಮಹಾತ್ಮಗಾಂಧಿ ಉದ್ಯಾನವನ ಮುಂಭಾಗದಲ್ಲಿರುವ ಶ್ರೀ ರಾಮ ಸಮುದಾಯ ಭವನದಲ್ಲಿ ನಡೆಯಲಿದ್ದು, ಹೊಸಳ್ಳಿ ದಾಳೇಗೌಡರನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ನೇತೃತ್ವದಲ್ಲಿ ತಾಲೂಕು ಘಟಕದ ಪ್ರಮುಖರು ಬಿ.ಆರ್ ಪ್ರಾಜೆಕ್ಟ್‌ನಲ್ಲಿರುವ ಹೊಸಳ್ಳಿ ದಾಳೇಗೌಡರ ನಿವಾಸಕ್ಕೆ ತೆರಳಿ ಅವರನ್ನು ಸನ್ಮಾನಿಸಿ ಆಹ್ವಾನಿಸಲಾಯಿತು.
    ಪರಿಷತ್ ಜಿಲ್ಲಾ ಕಾರ್ಯದರ್ಶಿ ಎಂ.ಎಂ ಸ್ವಾಮಿ, ತಾಲೂಕು ಅಧ್ಯಕ್ಷ ಕೋಡ್ಲು ಯಜ್ಞಯ್ಯ, ಕಾರ್ಯದರ್ಶಿ ಟಿ. ತಿಮ್ಮಪ್ಪ, ಸಂಘಟನಾ ಕಾರ್ಯದರ್ಶಿ ಬಿ. ಕಮಲಾಕರ್, ಕೋಶಾಧ್ಯಕ್ಷ ನಾಗೋಜಿ ರಾವ್, ಕೆ.ಟಿ ಪ್ರಸನ್ನ, ಹೇಮಾವತಿ ವಿಶ್ವನಾಥ್, ಅನ್ನಪೂರ್ಣ ಸತೀಶ್, ಜಯಂತಿ ನಾಗರಾಜ್‌ಶೇಟ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸಂವಿಧಾನ, ಕಾನೂನು ಗಾಳಿಗೆ ತೂರಿ ಪರಿಶಿಷ್ಟ ಜಾತಿಗಳ ವರ್ಗೀಕರಣ ಹಂಚಿಕೆ : ಆರೋಪ

ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ


ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗಳ ವರ್ಗೀಕರಣ(ಒಳ ಮೀಸಲಾತಿ) ಹಂಚಿಕೆ ನಿರ್ಣಯ ವಿರೋಧಿಸಿ ಸೋಮವಾರ ಭದ್ರಾವತಿ ತಾಲೂಕು ಕಛೇರಿ ಮಿನಿವಿಧಾನಸೌಧ ಮುಂಭಾಗ ಮೀಸಲಾತಿ ಸಂರಕ್ಷಣಾ ಒಕ್ಕೂಟ ತಾಲೂಕು ಸಮಿತಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. 
    ಭದ್ರಾವತಿ, ಏ. ೩ : ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗಳ ವರ್ಗೀಕರಣ(ಒಳ ಮೀಸಲಾತಿ) ಹಂಚಿಕೆ ನಿರ್ಣಯ ಮಾಡಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ನಿರ್ಧರಿಸಲಾಗಿದೆ. ರಾಜ್ಯ ಸರ್ಕಾರದ ಈ ನಿರ್ಧಾರದಿಂದ ಭಾರತದ ಸಂವಿಧಾನ ಮತ್ತು ಕಾನೂನನ್ನು ಗಾಳಿಗೆ ತೂರಲಾಗಿದೆ. ಈ ಅಸಂವಿಧಾನಿಕ ಮತ್ತು ಅವೈಜ್ಞಾನಿಕ ಪ್ರಕ್ರಿಯೆಯನ್ನು ಮೀಸಲಾತಿ ಸಂರಕ್ಷಣಾ ಒಕ್ಕೂಟ ತಾಲೂಕು ಸಮಿತಿ ಖಂಡಿಸುವ ಜೊತೆಗೆ ವಿರೋಧಿಸುತ್ತದೆ ಎಂದು ಬಂಜಾರ ಸಮಾಜದ ಪ್ರಮುಖರು ಹೇಳಿದರು.
    ಸೋಮವಾರ ತಾಲೂಕು ಕಛೇರಿ ಮಿನಿವಿಧಾನಸೌಧ ಮುಂಭಾಗ ಪ್ರತಿಭಟನೆ ನಡೆಸಿ ಮಾತನಾಡಿದ ಪ್ರಮುಖರು, "ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಒಪ್ಪಿರುವುದಿಲ್ಲ" ಎನ್ನುತ್ತಲೇ ರಾಜ್ಯ ಸರ್ಕಾರ ಈ ವರದಿಯನ್ನುಆಧರಿಸಿ ಪರಿಶಿಷ್ಟ ಜಾತಿಗಳನ್ನು ೪ ಗುಂಪುಗಳಾಗಿ ವಿಭಜಿಸಿ, ಒಳ ಮೀಸಲಾತಿ ಹಂಚಿಕೆ ಮಾಡಿರುವುದು ನ್ಯಾಯ ಸಮ್ಮತವಾಗಿಲ್ಲ ಮತ್ತು ಸಂವಿಧಾನ ವಿರೋಧವಾಗಿರುತ್ತದೆ. ನಾಡಿನ ಬಂಜಾರ, ಭೋವಿ, ಕೊರಮ, ಕೊರಚ ಸಮುದಾಯಗಳು ಸರ್ಕಾರದ ಈ ನಿರ್ಧಾರವನ್ನು ವಿರೋಧಿಸುತ್ತವೆ. ಈ ಸಂಬಂಧ ಮಾ.೨೫ರಂದು ನಡೆದ ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ ಕೈಗೊಂಡಿರುವ ನಿರ್ಣಯ ತಕ್ಷಣ ಹಿಂಪಡೆಯಬೇಕೆಂದು ಆಗ್ರಹಿಸಿದರು.
    ಸರ್ಕಾರದ ಈ ನಿರ್ಧಾರ ವಿರೋಧಿಸಿ ಮಾ.೨೭ ರಂದು ಶಿಕಾರಿಮರದಲ್ಲಿ ನಡೆದ ಬೃಹತ್ ಪ್ರತಿಭಟನೆಯ ನೇತೃತ್ವವಹಿಸಿದ್ದ ಹೋರಾಟಗಾರರ ಮೇಲೆ ದೂರು ದಾಖಲಾಗಿದ್ದು, ದಾಖಲಾಗಿರುವ ಎಫ್‌ಐಆರ್ ಕೂಡಲೇ ರದ್ದುಪಡಿಸಬೇಕೆಂದು ಒತ್ತಾಯಿಸಿದರು. ಅಲ್ಪಸಂಖ್ಯಾತರಾದ ಮುಸ್ಲಿಂ ಸಮುದಾಯದವರ ಶೇ. ೪ ಮೀಸಲಾತಿ ರದ್ದು ಪಡಿಸಿರುವುದನ್ನು ಒಕ್ಕೂಟ ಖಂಡಿಸುತ್ತದೆ ಎಂದರು.
                                        ಪ್ರತಿಭಟನೆಯಲ್ಲಿ ತಾಲೂಕು ಬಂಜಾರ ಸಮಾಜದ ಅಧ್ಯಕ್ಷ ಪ್ರೇಮ್‌ಕುಮಾರ್, ಬಂಜಾರ ರೈತ ಸಂಘದ ರಾಜ್ಯಾಧ್ಯಕ್ಷ ಕೃಷ್ಣನಾಯ್ಕ, ಪ್ರಮುಖರಾದ ಡಿಎಸ್‌ಎಸ್ ಮುಖಂಡ ಸಿ. ಜಯಪ್ಪ, ಪ್ರವೀಣ್‌ನಾಯ್ಕ, ಎ. ಮಸ್ತಾನ್, ಇಬ್ರಾಹಿಂ ಖಾನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ತಾಲೂಕಿನ ವಿವಿಧ ತಾಂಡಗಳ ಬಂಜಾರ ಸಮಾಜದ ಮುಖಂಡರು, ಮಹಿಳೆಯರು ಪಾಲ್ಗೊಂಡಿದ್ದರು. ಹಳೇನಗರದ ಕನಕಮಂಟಪ ಮೈದಾನದಿಂದ ತಾಲೂಕು ಕಛೇರಿ ಮಿನಿವಿಧಾನಸೌಧದವರೆಗೂ ಪ್ರತಿಭಟನಾ ಮೆರವಣಿಗೆ ನಡೆಯಿತು. ತಹಸೀಲ್ದಾರ್ ಸುರೇಶ್ ಆಚಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಹೆಚ್ಚಿನ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

ಲಯನ್ಸ್ ಜಿಲ್ಲಾ ಗೌರ‍್ನರ್ ಡಾ.ಎಂ.ಕೆ ಭಟ್ ಅಧಿಕೃತ ಭೇಟಿ : ವಿವಿಧ ಸೇವಾ ಕಾರ್ಯಗಳ ಉದ್ಘಾಟನೆ

ಭದ್ರಾವತಿ ಬಿ.ಎಚ್ ರಸ್ತೆ ರೈಲ್ವೆ ನಿಲ್ದಾಣದ ಮುಂಭಾಗ ನೂತನವಾಗಿ ನಿರ್ಮಿಸಲಾಗಿರುವ ಗಡಿಯಾರ ಕಂಬ(ಕ್ಲಾಕ್ ಟವರ್)ಲಯನ್ಸ್ ಜಿಲ್ಲಾ ಗೌರ‍್ನರ್ ಡಾ. ಎಂ.ಕೆ ಭಟ್ ಉದ್ಘಾಟಿಸಿದರು.  
    ಭದ್ರಾವತಿ, ಏ. ೧:  ನಗರದ ಲಯನ್ಸ್ ಮತ್ತು ಲಿಯೋ ಕ್ಲಬ್‌ಗೆ ಭಾನುವಾರ ಲಯನ್ಸ್ ಜಿಲ್ಲಾ ಗೌರ‍್ನರ್ ಡಾ. ಎಂ.ಕೆ ಭಟ್ ಅಧಿಕೃತ ಭೇಟಿ ನೀಡುವ ಮೂಲಕ ಹಲವು ಸೇವಾಕಾರ್ಯಗಳಲ್ಲಿ ಪಾಲ್ಗೊಂಡರು.
    ಹೊಸಸೇತುವೆ ರಸ್ತೆ, ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಬಳಿ ನೂತನವಾಗಿ ನಿರ್ಮಿಸಲಾಗಿರುವ ಬಸ್ ತಂಗುದಾಣ ಡಾ.ಎಂ.ಕೆ ಭಟ್ ಉದ್ಘಾಟಿಸಿದರು. ಹಳೇನಗರದ ಪುರಾಣ ಪ್ರಸಿದ್ದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಶುದ್ಧ ಕುಡಿಯುವ ನೀರಿನ ಸೌಲಭ್ಯಕ್ಕೆ ಚಾಲನೆ ನೀಡಿದರು.
    ಬಿ.ಎಚ್ ರಸ್ತೆ ರೈಲ್ವೆ ನಿಲ್ದಾಣದ ಮುಂಭಾಗ ನೂತನವಾಗಿ ನಿರ್ಮಿಸಲಾಗಿರುವ ಗಡಿಯಾರ ಕಂಬ(ಕ್ಲಾಕ್ ಟವರ್) ಮತ್ತು  ಜನ್ನಾಪುರ ಜಯಶ್ರೀ ಕಲ್ಯಾಣ ಮಂಪಟ ಸಮೀಪದಲ್ಲಿರುವ ಕಾರುಣ್ಯ ಚಾರಿಟಬಲ್ ಟ್ರಸ್ಟ್‌ನಲ್ಲಿ ಅಳವಡಿಸಲಾಗಿರುವ ಎಲೆಕ್ಟ್ರಿಕ್ ಗೀಸರ್ ಉದ್ಘಾಟಿಸಿದರು. ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ಬಾಟಲ್‌ಗಳನ್ನು ವಿತರಿಸಿದರು.
    ಲಯನ್ಸ್ ಕ್ಲಬ್ ಅಧ್ಯಕ್ಷ ಎ.ಎನ್ ಕಾರ್ತಿಕ್ ಅಧ್ಯಕ್ಷತೆ ವಹಿಸಿದ್ದರು. ವಿಭಾಗ-೨, ವಲಯ-೨ರ ಅಧ್ಯಕ್ಷ ಕೆ.ವಿ ಚಂದ್ರಶೇಖರ್, ಲಯನ್ಸ್ ಕ್ಲಬ್ ಕಾರ್ಯದರ್ಶಿ ಎಂ. ನಾಗರಾಜ್ ಶೇಟ್, ಖಜಾಂಚಿ ಜಿ.ಪಿ ದರ್ಶನ್, ಪ್ರಮುಖರಾದ ಎಚ್.ವಿ ಶಿವರುದ್ರಪ್ಪ, ಕೆ.ಎನ್ ಭೈರಪ್ಪಗೌಡ, ಹೆಬ್ಬಂಡಿ ನಾಗರಾಜ್, ದೇವರಾಜ್, ರಾಜ್‌ಕುಮಾರ್, ಭುವನೇಶ್ವರ್, ಶ್ರೀನಿವಾಸ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

Sunday, April 2, 2023

ಶತಾಯುಷಿ ಅರ್ಚಕ ಸೀತಾರಾಮರಾವ್ ನಿಧನ


ಸೀತಾರಾಮರಾವ್ 
    ಭದ್ರಾವತಿ, ಏ. ೩: ನಗರದ ಮಿಲ್ಟ್ರಿಕ್ಯಾಂಪ್ ಶ್ರೀ ಶ್ರೀನಿವಾಸ ಸ್ವಾಮಿ ದೇವಸ್ಥಾನ ಹಾಗು ಶಿವಮೊಗ್ಗ ಶಂಕರ ಮಠ ರಸ್ತೆಯಲ್ಲಿರುವ ನವಿಲೇ ದೇವಸ್ಥಾನದ ಅರ್ಚಕರಾಗಿದ್ದ ಶತಾಯುಷಿ ಸೀತಾರಾಮ ರಾವ್(೧೦೧) ನಿಧನ ಹೊಂದಿದರು. 
೮ ಹೆಣ್ಣು, ೨ ಗಂಡು ಮಕ್ಕಳಿದ್ದು, ಶಿವಮೊಗ್ಗದಲ್ಲಿ ಇವರ ಅಂತ್ಯಸಂಸ್ಕಾರ ನೆರವೇರಲಿದೆ. ಸೀತಾರಾಮ ರಾವ್‌ರವರು ಸುಮಾರು ೨೫ ವರ್ಷ ಶ್ರೀ ಶ್ರೀನಿವಾಸ ಸ್ವಾಮಿ ದೇವಸ್ಥಾನದ ಅರ್ಚಕರಾಗಿ ಸೇವೆ ಸಲ್ಲಿಸಿದ್ದರು. ನಂತರ ಇವರ ಪುತ್ರ ರವಿಕುಮಾರ್ ಈ ದೇವಸ್ಥಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು. 
ಸೀತಾರಾಮ ರಾವ್‌ರವರ ಅಂತ್ಯಕ್ರಿಯೆ ಸೋಮವಾರ ಶಿವಮೊಗ್ಗದಲ್ಲಿ ನೆರವೇರಿತು. ಇವರ ನಿಧನಕ್ಕೆ ಅರ್ಚಕ ಸಮುದಾಯದ ಪ್ರಮುಖರು ಸಂತಾಪ ಸೂಚಿಸಿದ್ದಾರೆ. 

ಏ.೩೦ರೊಳಗೆ ತೆರಿಗೆ ಪಾವತಿಸಿದ್ದಲ್ಲಿ ಶೇ.೫ರಷ್ಟು ರಿಯಾಯಿತಿ

    ಭದ್ರಾವತಿ, ಏ. ೨ : ನಗರಸಭೆ ೨೦೨೩-೨೪ನೇ ಸಾಲಿನ ಆಸ್ತಿ ತೆರಿಗೆ ಏ.೩೦ರೊಳಗೆ ಪಾವತಿಸಿದ್ದಲ್ಲಿ ಶೇ.೫ರಷ್ಟು ರಿಯಾಯಿತಿ ನೀಡಲಾಗುವುದು. ತೆರಿಗೆ ಪಾವತಿಗಾಗಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ನಗರಸಭೆ ಕಛೇರಿ ಆವರಣದಲ್ಲಿ ಎರಡು ಹೆಚ್ಚಿನ ಕೌಂಟರ್‌ಗಳನ್ನು ತೆರೆಯಲಾಗಿದೆ ಇದರ ಸದುಪಯೋಗ ಪಡೆದುಕೊಳ್ಳುವಂತೆ ಪೌರಾಯುಕ್ತ ಮನುಕುಮಾರ್ ಕೋರಿದ್ದಾರೆ.
    ಏ.೩೦ರವರೆಗೆ ಮಾತ್ರ ಶೇ.೫ರಷ್ಟು ರಿಯಾಯಿತಿ ಇದ್ದು, ಉಳಿದಂತೆ ಮೇ.೧ ರಿಂದ ಜೂ.೩೦ರವರೆಗೆ ಯಾವುದೇ ರಿಯಾಯಿತಿ ಅಥವಾ ದಂಡ ಇರುವುದಿಲ್ಲ. ಜು.೧ರ ನಂತರ ಪಾವತಿಸಿದ್ದಲ್ಲಿ ಶೇ.೨ರಷ್ಟು ದಂಡ ವಿಧಿಸಲಾಗುವುದು.
    ಬಾಕಿ ಇರುವ ಆಸ್ತಿ ತೆರಿಗೆ, ನೀರಿನ ತೆರಿಗೆ, ವಾಣಿಜ್ಯ ಮಳಿಗೆ ಬಾಡಿಗೆ ಮತ್ತು ಉದ್ದಿಮೆ ಪರವಾನಿಗೆಯನ್ನು ಏ.೩೦ರೊಳಗೆ ಪಾವತಿಸುವ ಮೂಲಕ ಸಹಕರಿಸುವಂತೆ ಕೋರಲಾಗಿದೆ. ತೆರಿಗೆ ಪೋನ್ ಪೇ, ಪೇ ಟಿಎಂ, ಗೂಗಲ್ ಪೇ ಮೂಲಕ ಸಹ ಪಾವತಿಸಬಹುದಾಗಿದೆ.

ಶಾರದ ಅಪ್ಪಾಜಿ ಸಮ್ಮುಖದಲ್ಲಿ ೪೦ಕ್ಕೂ ಮಂದಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ

ಭದ್ರಾವತಿಯಲ್ಲಿ ಭಾನುವಾರ ಜೆಡಿಎಸ್ ಪಕ್ಷದ ವಿಧಾನಸಭಾ ಅಭ್ಯರ್ಥಿ ಶಾರದ ಅಪ್ಪಾಜಿ ಸಮ್ಮುಖದಲ್ಲಿ ಅವರ ನಿವಾಸದಲ್ಲಿ ಕಾಂಗ್ರೆಸ್ ಪಕ್ಷದ ಯುವ ಮುಖಂಡ ವಿನೋದ್ ವಿನ್ಸಂಟ್ ಸೇರಿದಂತೆ ಸುಮಾರು ೪೦ಕ್ಕೂ ಹೆಚ್ಚು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
    ಭದ್ರಾವತಿ, ಏ. ೨: ವಿಧಾನಸಭೆ ಚುನಾವಣೆ ಘೋಷಣೆಯಾದ ನಂತರ ಕ್ಷೇತ್ರದಲ್ಲಿ ಪಕ್ಷಾಂತರ ಪರ್ವ ಬಿರುಸಿನಿಂದ ನಡೆಯುತ್ತಿದ್ದು, ಹಲವು ಮುಖಂಡರು ಭಾನುವಾರ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
    ಜೆಡಿಎಸ್ ಪಕ್ಷದ ವಿಧಾನಸಭಾ ಅಭ್ಯರ್ಥಿ ಶಾರದ ಅಪ್ಪಾಜಿ ಸಮ್ಮುಖದಲ್ಲಿ ಅವರ ನಿವಾಸದಲ್ಲಿ ಕಾಂಗ್ರೆಸ್ ಪಕ್ಷದ ಯುವ ಮುಖಂಡ ವಿನೋದ್ ವಿನ್ಸಂಟ್, ಪ್ರಮುಖರಾದ ಚಂದ್ರಶೇಖರ್, ಹೊಸಮನೆ ಜಾರ್ಜ್, ಹೇಮಂತ್, ಮನು ಮಂಥಾರೋ, ಮಾರ್ಷಲ್, ಮನೋಜ್, ಮಂಜು, ಸಂತು, ಮನು, ದೀಕ್ಷಿತ್, ಶ್ರೀನಿಧಿ, ಹರ್ಷಿ, ಅಜಯ್, ಕಿರಣ, ಬಿ.ಬಿ ಮನೋಜ್, ಡಿ. ಮಂಜಾ, ಸಂಜು ಸೇರಿದಂತೆ ಸುಮಾರು ೪೦ಕ್ಕೂ ಹೆಚ್ಚು ಮಂದಿ ಸೇರ್ಪಡೆಗೊಂಡರು.
    ಪಕ್ಷದ ನಗರ ಘಟಕದ ಅಧ್ಯಕ್ಷ ಆರ್. ಕರುಣಾಮೂರ್ತಿ, ನಗರಸಭಾ ಸದಸ್ಯರಾದ ಬಸವರಾಜ ಬಿ. ಆನೇಕೊಪ್ಪ, ಉದಯ್‌ಕುಮಾರ್, ರಾಜ್ಯ ವಕ್ತಾರ ಅಮೋಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.