ವಿಧಾನಸಭಾ ಚುನಾವಣೆ ಪ್ರಚಾರಕ್ಕೆ ಕೊನೆಯ ದಿನವಾದ ಸೋಮವಾರ ಭದ್ರಾವತಿಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಮಂಗೋಟೆ ಬೃಹತ್ ರೋಡ್ ಶೋ ನಡೆಸುವ ಮೂಲಕ ಗಮನ ಸೆಳೆದರು.
ಭದ್ರಾವತಿ, ಮೇ. ೮: ಈ ಬಾರಿ ವಿಧಾನಸಭಾ ಚುನಾವಣೆ ಪ್ರಚಾರಕ್ಕೆ ಕೊನೆಯ ದಿನವಾದ ಸೋಮವಾರ ಬಿಜೆಪಿ ಪಕ್ಷದ ಅಭ್ಯರ್ಥಿ ಮಂಗೋಟೆ ಬೃಹತ್ ರೋಡ್ ಶೋ ನಡೆಸುವ ಮೂಲಕ ಗಮನ ಸೆಳೆದರು.
ನಗರದ ಬಿ.ಎಚ್ ರಸ್ತೆ ಅಂಡರ್ ಬ್ರಿಡ್ಜ್ನಿಂದ ಬೆಳಿಗ್ಗೆ ೧೧ ಗಂಟೆ ಸುಮಾರಿಗೆ ಆರಂಭಗೊಂಡ ರೋಡ್ ಶೋ ಹಲವು ವಿಶಿಷ್ಟತೆಯಿಂದ ಕಂಡು ಬಂದಿತು. ಬಿಜೆಪಿ ಕೇಸರಿ ಪೇಟ ಧರಿಸಿ ಬಜರಂಗದಳ ಕಾರ್ಯಕರ್ತರಂತೆ ಕಂಗೊಳಿಸುವ ಮೂಲಕ ಶ್ರೀ ಆಂಜನೇಯ ಸ್ವಾಮಿಯ ಪ್ರತಿಮೆಯೊಂದಿಗೆ ಬೈಕ್ ರ್ಯಾಲಿ ನಡೆಸಿದರು.
ಕಾರ್ಯಕರ್ತರು, ಅಭಿಮಾನಿಗಳು ಸೇಬು, ಮೂಸುಂಬೆಯಿಂದ ತಯಾರಿಸಿದ ಬೃಹತ್ ಹಾರ ಕ್ರೇನ್ ಮೂಲಕ ಅರ್ಪಿಸಿದರು. ಡೊಳ್ಳು ಕುಣಿತದೊಂದಿಗೆ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹೆಜ್ಜೆ ಹಾಕಿದರು.
ಚಲನಚಿತ್ರ ನಟಿ ತಾರ, ವಿಧಾನಪರಿಷತ್ ಸದಸ್ಯ ಎಸ್. ರುದ್ರೇಗೌಡ ಹಾಗು ಪಕ್ಷದ ವಿವಿಧ ಮೋರ್ಚಾಗಳ, ಶಕ್ತಿ ಕೇಂದ್ರಗಳ ಅಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲಾ ಹಾಗು ಸ್ಥಳೀಯ ಮುಖಂಡರು ಪಾಲ್ಗೊಂಡಿದ್ದರು. ಹಾಲಪ್ಪ ವೃತ್ತ, ಮಾಧವಚಾರ್ ವೃತ್ತ ಮತ್ತು ರಂಗಪ್ಪ ವೃತ್ತದವರೆಗೂ ರೋಡ್ ಶೋ ನಡೆಯಿತು.
ಭದ್ರಾವತಿಯಲ್ಲಿ ಸೋಮವಾರ ನಡೆದ ಬಿಜೆಪಿ ಅಭ್ಯರ್ಥಿ ಮಂಗೋಟೆ ರುದ್ರೇಶ್ರವರ ರೋಡ್ ಶೋ ವಿಶೇಷವಾಗಿ ಗಮನ ಸೆಳೆಯಿತು. ಕಾರ್ಯಕರ್ತರು, ಅಭಿಮಾನಿಗಳು ಸೇಬು, ಮೂಸುಂಬೆಯಿಂದ ತಯಾರಿಸಿದ ಬೃಹತ್ ಹಾರ ಕ್ರೇನ್ ಮೂಲಕ ಅರ್ಪಿಸಿದರು.