ಭದ್ರಾವತಿಯಲ್ಲಿ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬುಧವಾರ ಗ್ರಾಮಾಂತರ ಭಾಗದಲ್ಲಿ ಮತದಾರರು ಸರದಿ ಸಾಲಿನಲ್ಲಿ ನಿಂತು ಮತಚಲಾಯಿಸಿದರು.
ಭದ್ರಾವತಿ, ಮೇ. ೧೦: ಈ ಬಾರಿ ವಿಧಾನಸಭಾ ಚುನಾವಣೆ ಮತದಾನ ಬುಧವಾರ ಕ್ಷೇತ್ರದಾದ್ಯಂತ ಶಾಂತಿಯುತವಾಗಿ ನಡೆದಿದ್ದು, ಬೆಳಿಗ್ಗೆ ೭ ಗಂಟೆಯಿಂದ ಆರಂಭಗೊಂಡ ಮತದಾನ ೧೧ ಗಂಟೆವರೆಗೂ ಮಂದಗತಿಯಲ್ಲಿ ನಡೆದಿದ್ದು, ನಂತರ ಮತಗಟ್ಟೆಗಳಲ್ಲಿ ಜನಸಂದಣಿ ಕಂಡು ಬಂದಿತು. ಸಂಜೆ ವೇಳೆಗೆ ಶೇ.೭೦ರಷ್ಟು ಮತದಾರರು ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದರು.
ನಗರಸಭೆ ವ್ಯಾಪ್ತಿಯಲ್ಲಿ ಬೆಳಿಗ್ಗೆ ೧೧ ಗಂಟೆವರೆಗೆ ಮತಗಟ್ಟೆಗಳಲ್ಲಿ ಬೆರಳೆಣಿಕೆಯಷ್ಟು ಮಂದಿ ಮಾತ್ರ ಕಂಡ ಬಂದಿದ್ದು, ಆದರೆ ಗ್ರಾಮಾಂತರ ಭಾಗದಲ್ಲಿ ಬೆಳಿಗ್ಗೆಯಿಂದಲೇ ಮತದಾರರು ಸರದಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.
ಭದ್ರಾವತಿಯಲ್ಲಿ ಜಾತ್ಯತೀತ ಜನತಾದಳ ಅಭ್ಯರ್ಥಿ ಶಾರದ ಅಪ್ಪಾಜಿಯವರು ತಮ್ಮ ನಿವಾಸದ ಸಮೀಪದಲ್ಲಿರುವ ಹುತ್ತಾಕಾಲೋನಿ ಮತಗಟ್ಟೆ ೧೩೬ರಲ್ಲಿ ಬೆಳಿಗ್ಗೆ ೯ ಗಂಟೆ ಸಮಯದಲ್ಲಿ ಮತ ಚಲಾಯಿಸಿದರು. ಇವರ ಪುತ್ರಿ ಅರ್ಪಿತಾ ಹಾಗು ಪಕ್ಷದ ಏಜೆಂಟ್ ಎನ್. ರಾಮಕೃಷ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಈ ನಡುವೆ ಸಂಜೆ ೪ ಗಂಟೆ ಸುಮಾರಿಗೆ ಏಕಾಏಕ ಗಾಳಿ ಮಳೆಯಾಗಿದ್ದು, ಕೆಲವೆಡೆ ಮಳೆಗೆ ಮರಗಳು ನೆಲಕ್ಕುರುಳಿ ಬಿದ್ದಿವೆ. ೫ ಗಂಟೆ ವೇಳೆಗೆ ಮಳೆ ಕಡಿಮೆಯಾಗಿದ್ದು, ಕೊನೆ ಘಳಿಗೆಯಲ್ಲಿ ಮತಗಟ್ಟೆಗಳಿಗೆ ಮತದಾರರು ಆಗಮಿಸಿ ಮತ ಚಲಾಯಿಸಿದರು.
ಭದ್ರಾವತಿಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ನಗರಸಭೆ ಕಛೇರಿ ಮತಗಟ್ಟೆ ೧೦೬ರಲ್ಲಿ ಸಂಜೆ ೪.೩೦ರ ಸಮಯದಲ್ಲಿ ತಮ್ಮ ಬೆಂಬಲಿಗರೊಂದಿಗೆ ಆಗಮಿಸಿ ಮತ ಚಲಾಯಿಸಿದರು.
ಜಾತ್ಯತೀತ ಜನತಾದಳ ಅಭ್ಯರ್ಥಿ ಶಾರದ ಅಪ್ಪಾಜಿಯವರು ತಮ್ಮ ನಿವಾಸದ ಸಮೀಪದಲ್ಲಿರುವ ಹುತ್ತಾಕಾಲೋನಿ ಮತಗಟ್ಟೆ ೧೩೬ರಲ್ಲಿ ಬೆಳಿಗ್ಗೆ ೯ ಗಂಟೆ ಸಮಯದಲ್ಲಿ ಮತ ಚಲಾಯಿಸಿದರು. ಇವರ ಪುತ್ರಿ ಅರ್ಪಿತಾ ಹಾಗು ಪಕ್ಷದ ಏಜೆಂಟ್ ಎನ್. ರಾಮಕೃಷ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಮಂಗೋಟೆ ರುದ್ರೇಶ್ ನಗರಸಭೆ ಕಛೇರಿ ಮತಗಟ್ಟೆ ೧೦೬ರಲ್ಲಿ ಬೆಳಿಗ್ಗೆ ೯.೩೦ರ ಸಮಯದಲ್ಲಿ ಕುಟುಂಬ ಸಮೇತರಾಗಿ ಆಗಮಿಸಿ ಮತ ಚಲಾಯಿಸಿದರು. ಇವರ ತಾಯಿ ರತ್ನಮ್ಮ ಮುರಿಗೆಪ್ಪ, ಪತ್ನಿ ಶಾಂತಲಾ ಹಾಗು ಸಹೋದರಿ ಶೈಲಜಾ ಉಪಸ್ಥಿತರಿದ್ದರು.
ಭದ್ರಾವತಿಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಮಂಗೋಟೆ ರುದ್ರೇಶ್ ನಗರಸಭೆ ಕಛೇರಿ ಮತಗಟ್ಟೆ ೧೦೬ರಲ್ಲಿ ಬೆಳಿಗ್ಗೆ ೯.೩೦ರ ಸಮಯದಲ್ಲಿ ಕುಟುಂಬ ಸಮೇತರಾಗಿ ಆಗಮಿಸಿ ಮತ ಚಲಾಯಿಸಿದರು. ಇವರ ತಾಯಿ ರತ್ನಮ್ಮ ಮುರಿಗೆಪ್ಪ, ಪತ್ನಿ ಶಾಂತಲಾ ಹಾಗು ಸಹೋದರಿ ಶೈಲಜಾ ಉಪಸ್ಥಿತರಿದ್ದರು.
ಇಬ್ಬರು ಅಭ್ಯರ್ಥಿಗಳು ಮತ ಚಲಾಯಿಸಿದ ನಂತರ ಮಾತನಾಡಿ, ಕ್ಷೇತ್ರದಲ್ಲಿ ಮತದಾನ ಪ್ರಮಾಣ ಕಡಿಮೆಯಾಗುತ್ತಿದೆ. ಎಲ್ಲರೂ ಕಡ್ಡಾಯ ಮತದಾನ ಮಾಡುವಂತೆ ಮನವಿ ಮಾಡಿದರು.
ಸಂಯುಕ್ತ(ಕರ್ನಾಟಕ) ಜನತಾದಳ ಅಭ್ಯರ್ಥಿ ಶಶಿಕುಮಾರ್ ಎಸ್. ಗೌಡ ಜನ್ನಾಪುರ ಜಯಶ್ರೀ ವೃತ್ತದಲ್ಲಿರುವ ಲೇಡಿಸ್ ಕ್ಲಬ್ ಮತಗಟ್ಟೆ ೧೫೭ರಲ್ಲಿ ಕುಟುಂಬ ಸಮೇತರಾಗಿ ಆಗಮಿಸಿ ಮತದಾನ ಮಾಡಿದರು.
ಭದ್ರಾವತಿಯಲ್ಲಿ ಸಂಯುಕ್ತ(ಕರ್ನಾಟಕ) ಜನತಾದಳ ಅಭ್ಯರ್ಥಿ ಶಶಿಕುಮಾರ್ ಎಸ್. ಗೌಡ ಜನ್ನಾಪುರ ಜಯಶ್ರೀ ವೃತ್ತದಲ್ಲಿರುವ ಲೇಡಿಸ್ ಕ್ಲಬ್ ಮತಗಟ್ಟೆ ೧೫೭ರಲ್ಲಿ ಕುಟುಂಬ ಸಮೇತರಾಗಿ ಆಗಮಿಸಿ ಮತದಾನ ಮಾಡಿದರು.
ಈ ಬಾರಿ ಶಾಸಕ ಬಿ.ಕೆ ಸಂಗಮೇಶ್ವರ್ ನಗರಸಭೆ ಕಛೇರಿ ಮತಗಟ್ಟೆ ೧೦೬ರಲ್ಲಿ ಸಂಜೆ ೪.೩೦ರ ಸಮಯದಲ್ಲಿ ತಮ್ಮ ಬೆಂಬಲಿಗರೊಂದಿಗೆ ಆಗಮಿಸಿ ಮತ ಚಲಾಯಿಸಿ ಗೆಲುವಿನ ಸಂಕೇತ ಪ್ರದರ್ಶಿಸಿದರು.
ಜಾತ್ಯತೀತ ಜನತಾದಳ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ರಾಜ್ಯಾಧ್ಯಕ್ಷರಾದ ನಂತರ ಭದ್ರಾವತಿ ಅನ್ವರ್ ಕಾಲೋನಿಯಲ್ಲಿರುವ ಮತಗಟ್ಟೆಯಲ್ಲಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಮೊದಲ ಬಾರಿಗೆ ಮತ ಚಲಾಯಿಸಿದರು.
ಜಾತ್ಯತೀತ ಜನತಾದಳ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ರಾಜ್ಯಾಧ್ಯಕ್ಷರಾದ ನಂತರ ಮೊದಲ ಬಾರಿಗೆ ಅನ್ವರ್ ಕಾಲೋನಿಯಲ್ಲಿರುವ ಮತಗಟ್ಟೆಯಲ್ಲಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಮತ ಚಲಾಯಿಸಿದರು. ನಂತರ ತಮ್ಮ ಬೆಂಬಲಿಗರಿಂದ ಕ್ಷೇತ್ರದ ಮತದಾನದ ಮಾಹಿತಿ ಪಡೆದುಕೊಂಡರು. ಈ ಹಿಂದೆ ೨೦೧೩ರ ಚುನಾವಣೆಯಲ್ಲಿ ಸಿ.ಎಂ ಇಬ್ರಾಹಿಂ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಜೆಡಿಎಸ್ ಅಭ್ಯರ್ಥಿಯಾಗಿದ್ದ ಎಂ.ಜೆ ಅಪ್ಪಾಜಿ ಗೆಲುವು ಸಾಧಿಸಿದ್ದರು. ಈ ಬಾರಿ ಚುನಾವಣೆಯಲ್ಲಿ ಅಪ್ಪಾಜಿಯವರ ಪತ್ನಿ ಶಾರದ ಅಪ್ಪಾಜಿ ಅಭ್ಯರ್ಥಿಯಾಗಿದ್ದು, ಸಿ.ಎಂ ಇಬ್ರಾಹಿಂ ಇದೆ ಪಕ್ಷದ ರಾಜ್ಯಾಧ್ಯಕ್ಷರಾಗಿರುವುದು ವಿಶೇಷವಾಗಿದೆ
ಬಿಳಿಕಿ ಶ್ರೀಗಳಿಂದ ಮತದಾನ:
ತಾಲೂಕಿನ ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಗ್ರಾಮದ ಸರ್ಕಾರಿ ಶಾಲೆಯ ಮತಗಟ್ಟೆ ೨೨ರಲ್ಲಿ ಮತದಾನ ಮಾಡುವ ಮೂಲಕ ತಮ್ಮ ಹಕ್ಕು ಚಲಾಯಿಸಿದರು.
ಭದ್ರಾವತಿ ತಾಲೂಕಿನ ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಗ್ರಾಮದ ಸರ್ಕಾರಿ ಶಾಲೆಯ ಮತಗಟ್ಟೆ ೨೨ರಲ್ಲಿ ಮತದಾನ ಮಾಡುವ ಮೂಲಕ ತಮ್ಮ ಹಕ್ಕು ಚಲಾಯಿಸಿದರು.
ಇವಿಎಂ ತಾಂತ್ರಿಕ ಸಮಸ್ಯೆ : ಅರ್ಧ ತಾಸು ಕಾದ ಮತದಾರರು
ಜನ್ನಾಪುರ ಜಯಶ್ರೀ ವೃತ್ತದಲ್ಲಿರುವ ಮತಗಟ್ಟೆ ೧೪೯ರಲ್ಲಿ ಮಧ್ಯಾಹ್ನ ಸುಮಾರು ೩ ಗಂಟೆ ಸಮಯದಲ್ಲಿ ಇವಿಎಂ ತಾಂತ್ರಿಕ ಸಮಸ್ಯೆ ಕಂಡು ಬಂದಿದ್ದು, ಇದರಿಂದಾಗಿ ಸುಮಾರು ಅರ್ಧ ತಾಸು ಮತದಾರರು ಮತಗಟ್ಟೆಯಲ್ಲಿ ಕಾಯುವಂತಾಯಿತು.
ಈ ನಡುವೆ ಮತಗಟ್ಟೆ ಬಳಿ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ತಕ್ಷಣ ಪೊಲೀಸರು ಮಧ್ಯ ಪ್ರವೇಶಿಸಿ ನಿಯಂತ್ರಿಸುವಲ್ಲಿ ಯಶಸ್ವಿಯಾದರು.
ಗ್ರಾಮಾಂತರ ಭಾಗದಲ್ಲೂ ಇವಿಎಂ ತಾಂತ್ರಿಕ ಸಮಸ್ಯೆ :
ತಾಲೂಕಿನ ಸಿಂಗನಮನೆ ವ್ಯಾಪ್ತಿ ಗ್ಯಾರೇಜ್ ಕ್ಯಾಂಪ್ನಲ್ಲಿ ಮತಗಟ್ಟೆ ೨೫೩ರಲ್ಲಿ ತಾಂತ್ರಿಕ ಸಮಸ್ಯೆ ಕಂಡು ಬಂದಿದ್ದು, ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಸಮಸ್ಯೆ ಬಗೆಹರಿಸುವಲ್ಲಿ ಯಶಸ್ವಿಯಾದರು. ಮತದಾರರು ಸುಮಾರು ೧ ಗಂಟೆವರೆಗೂ ಮತಗಟ್ಟೆಯಲ್ಲಿ ಕಾಯುವಂತಾಯಿತು.
ಭದ್ರಾವತಿ ಜನ್ನಾಪುರ ಜಯಶ್ರೀ ವೃತ್ತದಲ್ಲಿರುವ ಮತಗಟ್ಟೆ ೧೪೯ರಲ್ಲಿ ಮಧ್ಯಾಹ್ನ ಸುಮಾರು ೩ ಗಂಟೆ ಸಮಯದಲ್ಲಿ ಇವಿಎಂ ತಾಂತ್ರಿಕ ಸಮಸ್ಯೆ ಕಂಡು ಬಂದಿದ್ದು, ಇದರಿಂದಾಗಿ ಸುಮಾರು ಅರ್ಧ ತಾಸು ಮತದಾರರು ಮತಗಟ್ಟೆಯಲ್ಲಿ ಕಾಯುವಂತಾಯಿತು.
ಬಿಸಿಲು ಏರಿಕೆಯಾಗುತ್ತಿದ್ದಂತೆ ಮತದಾನ ಪ್ರಮಾಣ ಸಹ ಏರಿಕೆಯಾಗಿದ್ದು, ಸುಡು ಬಿಸಿಲಿನಲ್ಲೂ ಸರದಿ ಸಾಲಿನಲ್ಲಿ ನಿಂತು ಮತದಾರರು ತಮ್ಮ ಹಕ್ಕು ಚಲಾಯಿಸಿದರು. ಮತಗಟ್ಟೆಗಳ ಸಮೀಪ ಅಭ್ಯರ್ಥಿಗಳ ಪರವಾಗಿ ಆಯಾ ಪಕ್ಷದ ಮುಖಂಡರು, ಕಾರ್ಯಕರ್ತರು ಬೀಡುಬಿಟ್ಟು ಮತ ಸೆಳೆಯಲು ನಾನಾ ರೀತಿಯ ಕಸರತ್ತು ನಡೆಸುತ್ತಿರುವುದು ಕಂಡು ಬಂದಿತು. ಮತದಾರರಿಗೆ ಚಿತ್ರನ್ನ, ಮೊಸರನ್ನ, ಮಜ್ಜಿಗೆ ವಿತರಿಸುತ್ತಿರುವುದು ಕಂಡು ಬಂದಿತು. ಮತಗಟ್ಟೆಗಳ ಬಳಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು.