Wednesday, June 14, 2023

ಕೇಸರಿಪಡೆ ವತಿಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಲೇಖನ ಸಾಮಾಗ್ರಿ ವಿತರಣೆ

ಹಲವಾರು ವರ್ಷಗಳಿಂದ ಭದ್ರಾವತಿ ನಗರದಲ್ಲಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕೇಸರಿ ಪಡೆ ವತಿಯಿಂದ ಬುಧವಾರ ಸರ್ಕಾರಿ ಶಾಲೆಯ ಮಕ್ಕಳಿಗೆ ಉಚಿತ ಲೇಖನ ಸಾಮಾಗ್ರಿಗಳನ್ನು ವಿತರಿಸಲಾಯಿತು.
    ಭದ್ರಾವತಿ, ಜೂ. ೧೪ : ಹಲವಾರು ವರ್ಷಗಳಿಂದ ನಗರದಲ್ಲಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕೇಸರಿ ಪಡೆ ವತಿಯಿಂದ ಬುಧವಾರ ಸರ್ಕಾರಿ ಶಾಲೆಯ ಮಕ್ಕಳಿಗೆ ಉಚಿತ ಲೇಖನ ಸಾಮಾಗ್ರಿಗಳನ್ನು ವಿತರಿಸಲಾಯಿತು.
    ತಾಲೂಕಿನ ರಂಗನಾಥಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಪುಸ್ತಕ, ಪೆನ್ನು, ಪೆನ್ಸಿಲ್, ಶಾಲಾ ಬ್ಯಾಗ್ ಸೇರಿದಂತೆ ಲೇಖನ ಸಾಮಾಗ್ರಿಗಳನ್ನು ವಿತರಿಸುವ ಮೂಲಕ ಮಕ್ಕಳನ್ನು ಪ್ರೋತ್ಸಾಹಿಸಲಾಯಿತು.
    ಹಿಂದೂಪರ ಸಂಘಟನೆಗಳಲ್ಲಿ ಒಂದಾಗಿರುವ ಕೇಸರಿ ಪಡೆ ರಕ್ತದಾನ ಶಿಬಿರ, ಸಂಕಷ್ಟದಲ್ಲಿರುವ ಬಡವರಿಗೆ ನೆರವು, ಕ್ರೀಡಾಪಟುಗಳಿಗೆ ಪ್ರೋತ್ಸಾಹ, ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವು ಸೇರಿದಂತೆ ಹಲವು ರೀತಿಯ ಸೇವಾ ಕಾರ್ಯಗಳೊಂದಿಗೆ ವಿಭಿನ್ನತೆ ಕಾಯ್ದುಕೊಂಡಿದೆ.
    ಶಾಲೆಯ ಶಿಕ್ಷಕ ವೃಂದದವರು, ಸಿಬ್ಬಂದಿ ವರ್ಗದವರು, ಸ್ಥಳೀಯ ಮುಖಂಡರು, ಶಾಲೆಯ ಮಕ್ಕಳ ಪೋಷಕರು, ಕೇಸರಿ ಪಡೆ ಪ್ರಮುಖರು ಉಪಸ್ಥಿತರಿದ್ದರು.

ಜೂ.೧೮ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಭದ್ರಾವತಿ, ಜೂ. ೧೪ : ನಗರದ ಪ್ರಶಾಂತಿ ಸೇವಾ ಟ್ರಸ್ಟ್, ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆಗಳು ಹಾಗು ಶಿವಮೊಗ್ಗ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ವತಿಯಿಂದ ಜೂ.೧೮ರ ಭಾನುವಾರ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ.
    ನ್ಯೂಟೌನ್ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯಲ್ಲಿ ಬೆಳಿಗ್ಗೆ ೧೦ ಗಂಟೆಯಿಂದ ಮಧ್ಯಾಹ್ನ ೨ ಗಂಟೆವರೆಗೆ ಶಿಬಿರ ನಡೆಯಲಿದ್ದು, ಇ.ಸಿ.ಜಿ ಯೊಂದಿಗೆ ಹೃದಯ, ಕಿಡ್ನಿ, ದಂತ, ಕಣ್ಣು, ಕಿವಿ, ಮೂಗು, ಗಂಟಲು, ಮೂಳೆ, ನರ, ಚರ್ಮ ರೋಗಗಳು, ಸಕ್ಕರೆ ಖಾಯಿಲೆ, ಮಕ್ಕಳು ಮತ್ತು ಸ್ತ್ರೀಯರ ಖಾಯಿಲೆಗಳು ಹಾಗು ಇತರೆ ರೋಗಗಳಿಗೆ ಉಚಿತ ತಪಾಸಣೆ ಮತ್ತು ಚಿಕಿತ್ಸೆ ನಡೆಯಲಿದೆ.
    ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ಎಲ್ಲಾ ವಿಭಾಗದ ನುರಿತ ತಜ್ಞ ವೈದ್ಯರುಗಳು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿ ಶುಶ್ರೂಷೆ ನೀಡಲಿದ್ದಾರೆ. ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶಿಬಿರ ಯಶಸ್ವಿಗೊಳಿಸುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಕಾಂತರಾಜ್, ಮೊ: ೯೯೦೦೧೩೧೧೫೫ ಅಥವಾ ಮೊಹಮದ್, ಮೊ:೮೯೫೧೭೮೩೮ ಸಂಪರ್ಕಿಸಬಹುದಾಗಿದೆ.  

Tuesday, June 13, 2023

ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ, ಉಕ್ಕು ಕಾರ್ಖಾನೆ ಪುನಶ್ಚೇತನಗೊಳಿಸಿ ಬಂಡವಾಳ ತೊಡಗಿಸಿ

ಬಿ.ವೈ ರಾಘವೇಂದ್ರ ನೇತೃತ್ವದ ಕಾರ್ಮಿಕರ ನಿಯೋಗದಿಂದ ಸೈಲ್ ಅಧ್ಯಕ್ಷರಿಗೆ ಮನವಿ

ಸಂಸದ ಬಿ.ವೈ ರಾಘವೇಂದ್ರ ನೇತೃತ್ವದ ಕಾರ್ಮಿಕರ ನಿಯೋಗ ದೆಹಲಿಯಲ್ಲಿ ಮಂಗಳವಾರ ಭಾರತೀಯ ಉಕ್ಕು ಪ್ರಾಧಿಕಾರದ ನೂತನ ಅಧ್ಯಕ್ಷ ಅಮರೆಂದು ಪ್ರಕಾಶ್‌ರವರನ್ನು ಭೇಟಿ ಮಾಡಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನಶ್ಚೇತನಗೊಳಿಸುವಂತೆ ಮನವಿ ಸಲ್ಲಿಸಿತು.  
    ಭದ್ರಾವತಿ, ಜೂ. ೧೩ : ಸಂಸದ ಬಿ.ವೈ ರಾಘವೇಂದ್ರ ನೇತೃತ್ವದ ಕಾರ್ಮಿಕರ ನಿಯೋಗ ದೆಹಲಿಯಲ್ಲಿ ಮಂಗಳವಾರ ಭಾರತೀಯ ಉಕ್ಕು ಪ್ರಾಧಿಕಾರದ ನೂತನ ಅಧ್ಯಕ್ಷ ಅಮರೆಂದು ಪ್ರಕಾಶ್‌ರವರನ್ನು ಭೇಟಿ ಮಾಡಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನಶ್ಚೇತನಗೊಳಿಸುವಂತೆ ಮನವಿ ಸಲ್ಲಿಸಿತು.  
    ದೇಶದ ಪ್ರತಿಷ್ಠಿತ ಕಾರ್ಖಾನೆಗಳಲ್ಲಿ ಒಂದಾಗಿರುವ ವಿಐಎಸ್‌ಎಲ್ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಗುತ್ತಿಗೆ ಕಾರ್ಮಿಕರು ನಿರಂತರವಾಗಿ ಹೋರಾಟ ನಡೆಸುತ್ತಿದ್ದು, ಈ ಹಿನ್ನಲೆಯಲ್ಲಿ ತಕ್ಷಣ ಮುಚ್ಚುವ ಆದೇಶದ ಪ್ರಕ್ರಿಯೆ ಸ್ಥಗಿತಗೊಳಿಸಿ ಪುನಶ್ಚೇತನಕ್ಕೆ ಮುಂದಾಗಬೇಕು. ಅಗತ್ಯವಿರುವ ಬಂಡವಾಳ ತೊಡಗಿಸುವಂತೆ ಮನವಿ ಮಾಡಿದೆ
    ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತಗೊಳ್ಳುತ್ತಿದ್ದು, ಒಂದರ ನಂತರ ಒಂದು ಘಟಕ ಮುಚ್ಚುತ್ತಿವೆ. ಇದರಿಂದ ಗುತ್ತಿಗೆ ಕಾರ್ಮಿಕರು ಉದ್ಯೋಗವಿಲ್ಲದೆ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಈ ಹಿನ್ನಲೆಯಲ್ಲಿ  ಸ್ಥಗಿತಗೊಂಡಿರುವ ಎಲ್ಲಾ ಉತ್ಪಾದನಾ ಘಟಕಗಳನ್ನು ಪುನರ್ ಆರಂಭಿಸಬೇಕೆಂದು ಕೋರಿದೆ.
    ಕಳೆದ ೩ ದಿನದ ಹಿಂದೆ ಕಾರ್ಮಿಕರ ನಿಯೋಗ ಶಿವಮೊಗ್ಗದಲ್ಲಿ ಸಂಸದರನ್ನು ಭೇಟಿ ಮಾಡಿ ಅಳಲನ್ನು ತೋರ್ಪಡಿಸಿಕೊಂಡಿತ್ತು. ಈ ಹಿನ್ನಲೆಯಲ್ಲಿ ಸಂಸದರು ಕಾರ್ಮಿಕರ ನಿಯೋಗ ದೆಹಲಿಗೆ ಬರುವಂತೆ ಸೂಚಿಸಿದ್ದರು.
    ಯುವ ಮುಖಂಡ ಮಂಗೋಟೆ ರುದ್ರೇಶ್, ವಿಐಎಸ್‌ಎಲ್ ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್, ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್, ರಾಕೇಶ್, ನೌಕರರ ಅಸೋಸಿಯೇಷನ್ ಅಧ್ಯಕ್ಷ ಕುಮಾರಸ್ವಾಮಿ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ, ಉಕ್ಕು ಕಾರ್ಖಾನೆ ಪುನಶ್ಚೇತನಗೊಳಿಸಿ ಬಂಡವಾಳ ತೊಡಗಿಸಿ

ಬಿ.ವೈ ರಾಘವೇಂದ್ರ ನೇತೃತ್ವದ ಕಾರ್ಮಿಕರ ನಿಯೋಗದಿಂದ ಸೈಲ್ ಅಧ್ಯಕ್ಷರಿಗೆ ಮನವಿ

ಸಂಸದ ಬಿ.ವೈ ರಾಘವೇಂದ್ರ ನೇತೃತ್ವದ ಕಾರ್ಮಿಕರ ನಿಯೋಗ ದೆಹಲಿಯಲ್ಲಿ ಮಂಗಳವಾರ ಭಾರತೀಯ ಉಕ್ಕು ಪ್ರಾಧಿಕಾರದ ನೂತನ ಅಧ್ಯಕ್ಷ ಅಮರೆಂದು ಪ್ರಕಾಶ್‌ರವರನ್ನು ಭೇಟಿ ಮಾಡಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನಶ್ಚೇತನಗೊಳಿಸುವಂತೆ ಮನವಿ ಸಲ್ಲಿಸಿತು.  
    ಭದ್ರಾವತಿ, ಜೂ. ೧೩ : ಸಂಸದ ಬಿ.ವೈ ರಾಘವೇಂದ್ರ ನೇತೃತ್ವದ ಕಾರ್ಮಿಕರ ನಿಯೋಗ ದೆಹಲಿಯಲ್ಲಿ ಮಂಗಳವಾರ ಭಾರತೀಯ ಉಕ್ಕು ಪ್ರಾಧಿಕಾರದ ನೂತನ ಅಧ್ಯಕ್ಷ ಅಮರೆಂದು ಪ್ರಕಾಶ್‌ರವರನ್ನು ಭೇಟಿ ಮಾಡಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನಶ್ಚೇತನಗೊಳಿಸುವಂತೆ ಮನವಿ ಸಲ್ಲಿಸಿತು.  
    ದೇಶದ ಪ್ರತಿಷ್ಠಿತ ಕಾರ್ಖಾನೆಗಳಲ್ಲಿ ಒಂದಾಗಿರುವ ವಿಐಎಸ್‌ಎಲ್ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಗುತ್ತಿಗೆ ಕಾರ್ಮಿಕರು ನಿರಂತರವಾಗಿ ಹೋರಾಟ ನಡೆಸುತ್ತಿದ್ದು, ಈ ಹಿನ್ನಲೆಯಲ್ಲಿ ತಕ್ಷಣ ಮುಚ್ಚುವ ಆದೇಶದ ಪ್ರಕ್ರಿಯೆ ಸ್ಥಗಿತಗೊಳಿಸಿ ಪುನಶ್ಚೇತನಕ್ಕೆ ಮುಂದಾಗಬೇಕು. ಅಗತ್ಯವಿರುವ ಬಂಡವಾಳ ತೊಡಗಿಸುವಂತೆ ಮನವಿ ಮಾಡಿದೆ
    ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತಗೊಳ್ಳುತ್ತಿದ್ದು, ಒಂದರ ನಂತರ ಒಂದು ಘಟಕ ಮುಚ್ಚುತ್ತಿವೆ. ಇದರಿಂದ ಗುತ್ತಿಗೆ ಕಾರ್ಮಿಕರು ಉದ್ಯೋಗವಿಲ್ಲದೆ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಈ ಹಿನ್ನಲೆಯಲ್ಲಿ  ಸ್ಥಗಿತಗೊಂಡಿರುವ ಎಲ್ಲಾ ಉತ್ಪಾದನಾ ಘಟಕಗಳನ್ನು ಪುನರ್ ಆರಂಭಿಸಬೇಕೆಂದು ಕೋರಿದೆ.
    ಕಳೆದ ೩ ದಿನದ ಹಿಂದೆ ಕಾರ್ಮಿಕರ ನಿಯೋಗ ಶಿವಮೊಗ್ಗದಲ್ಲಿ ಸಂಸದರನ್ನು ಭೇಟಿ ಮಾಡಿ ಅಳಲನ್ನು ತೋರ್ಪಡಿಸಿಕೊಂಡಿತ್ತು. ಈ ಹಿನ್ನಲೆಯಲ್ಲಿ ಸಂಸದರು ಕಾರ್ಮಿಕರ ನಿಯೋಗ ದೆಹಲಿಗೆ ಬರುವಂತೆ ಸೂಚಿಸಿದ್ದರು.
    ಯುವ ಮುಖಂಡ ಮಂಗೋಟೆ ರುದ್ರೇಶ್, ವಿಐಎಸ್‌ಎಲ್ ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್, ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್, ರಾಕೇಶ್, ನೌಕರರ ಅಸೋಸಿಯೇಷನ್ ಅಧ್ಯಕ್ಷ ಕುಮಾರಸ್ವಾಮಿ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

Monday, June 12, 2023

ವಿದ್ಯುತ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ಮೆಸ್ಕಾಂ ಕಛೇರಿ ಮುಂಭಾಗ ಪ್ರತಿಭಟನೆ

ವಿದ್ಯುತ್ ದರ ಏರಿಕೆ ಖಂಡಿಸಿ ಮಂಗಳವಾರ ಭದ್ರಾವತಿ ಉಂಬ್ಳೆಬೈಲು ರಸ್ತೆಯಲ್ಲಿರುವ ಮೆಸ್ಕಾಂ ಕಛೇರಿ ಮುಂಭಾಗ ಭಾರತೀಯ ಜನತಾ ಪಕ್ಷ ತಾಲೂಕು ಮಂಡಲ ವತಿಯಿಂದ ಪ್ರತಿಭಟನೆ ನಡೆಸಲಾಯಿತು.  
    ಭದ್ರಾವತಿ, ಜೂ. ೧೩ : ವಿದ್ಯುತ್ ದರ ಏರಿಕೆ ಖಂಡಿಸಿ ಮಂಗಳವಾರ ನಗರದ ಉಂಬ್ಳೆಬೈಲು ರಸ್ತೆಯಲ್ಲಿರುವ ಮೆಸ್ಕಾಂ ಕಛೇರಿ ಮುಂಭಾಗ ಭಾರತೀಯ ಜನತಾ ಪಕ್ಷ ತಾಲೂಕು ಮಂಡಲ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
    ಪಕ್ಷದ ಪ್ರಮುಖರು ಮಾತನಾಡಿ, ಗ್ಯಾರಂಟಿ ಯೋಜನೆ ಘೋಷಣೆಗಳೊಂದಿಗೆ ಪ್ರಸ್ತುತ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ  ಒಂದೆಡೆ ಪ್ರತಿಯೊಬ್ಬರಿಗೂ ೨೦೦ ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವುದಾಗಿ ಘೋಷಿಸಿದೆ. ಮತ್ತೊಂದೆಡೆ ವಿದ್ಯುತ್ ದರ ಏರಿಕೆ ಮಾಡುವ ಮೂಲಕ ಜನರನ್ನು ಸಂಕಷ್ಟಕ್ಕೆ ತಳ್ಳಿದೆ. ತಕ್ಷಣ ವಿದ್ಯುತ್ ದರ ಇಳಿಕೆ ಮಾಡುವಂತೆ ಆಗ್ರಹಿಸಿದರು.
    ಪಕ್ಷದ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ನೇತೃತ್ವ ವಹಿಸಿದ್ದರು. ಪ್ರಮುಖರಾದ ಎಂ. ಮಂಜುನಾಥ್, ಚನ್ನೇಶ್, ಕರೀಗೌಡ, ರಾಜಶೇಖರ್ ಉಪ್ಪಾರ, ರವಿಕುಮಾರ್, ಎಂ.ಎಸ್ ಸುರೇಶಪ್ಪ, ಬಿ.ಜಿ ಈಶ್ವರ್, ರಂಗಸ್ವಾಮಿ, ಮೂರ್ತಿ(ಆಟೋ), ಅನ್ನಪೂರ್ಣ, ಮಂಜುಳ, ನಾಗಮಣಿ, ರೇಖಾ ಪದ್ಮಾವತಿ ಸೇರಿದಂತೆ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಬಜರಂಗದಳ ಜಿಲ್ಲಾ ಸಹ ಸಂಚಾಲಕ ಸುನಿಲ್‌ಕುಮಾರ್ ನಿಧನ

ಸುನಿಲ್‌ಕುಮಾರ್
    ಭದ್ರಾವತಿ, ಜೂ. ೧೩: ನಗರದ ಕೇಶವಪುರ-ಭೂತನಗುಡಿ ನಿವಾಸಿ, ಬಜರಂಗದಳ ಜಿಲ್ಲಾ ಸಹ ಸಂಚಾಲಕ ಸುನಿಲ್‌ಕುಮಾರ್(೩೯) ನಿಧನ ಹೊಂದಿದರು.
    ಅಪ್ಪ, ಅಮ್ಮ, ಪತ್ನಿ, ಇಬ್ಬರು ಪುತ್ರಿಯರು ಇದ್ದರು. ಸುನಿಲ್‌ಕುಮಾರ್ ಹಲವಾರು ವರ್ಷಗಳಿಂದ ಬಜರಂಗದಳದಲ್ಲಿ ಗುರುತಿಸಿಕೊಂಡಿದ್ದು, ಚಿಕ್ಕ ವಯಸ್ಸಿನಿಂದಲೇ ಹಲವಾರು ಹಿಂದೂಪರ ಹೋರಾಟಗಳಲ್ಲಿ ಪಾಲ್ಗೊಂಡು ಗಮನ ಸೆಳೆದಿದ್ದರು. ವಿಶೇಷವಾಗಿ ಮಹಾಮಾರಿ ಕೋವಿಡ್ ಸಂದರ್ಭದಲ್ಲಿ ಉಚಿತವಾಗಿ ಮೃತದೇಹಗಳ ಅಂತ್ಯಸಂಸ್ಕಾರ ನೆರವೇರಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.
    ಕೆಲವು ವರ್ಷಗಳಿಂದ ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಇವರ ನಿಧನಕ್ಕೆ ಸಂಸದ ಬಿ.ವೈ ರಾಘವೇಂದ್ರ, ಬಜರಂಗದಳ ಪ್ರಮುಖರು, ಬಿಜೆಪಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.

ಶ್ರೀ ಕೆರೆಕೋಡಮ್ಮ ದೇವಿ ಸೇವಾ ಸಮಿತಿಯಿಂದ ಅಂಗನವಾಡಿ ಕಟ್ಟಡ ಲೋಕಾರ್ಪಣೆ

  

ಭದ್ರಾವತಿ ಹೊಸಮನೆ ಶ್ರೀ ಕೆರೆಕೋಡಮ್ಮ ದೇವಿ ಸೇವಾ ಸಮಿತಿ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ಅಂಗನವಾಡಿ ಕಟ್ಟಡವನ್ನು ಸೋಮವಾರ ಲೋಕಾರ್ಪಣೆಗೊಳಿಸಲಾಯಿತು. ನಗರಸಭಾ ಸದಸ್ಯ ಬಿ.ಕೆ ಮೋಹನ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಜೂ. ೧೨ : ನಗರದ ಹೊಸಮನೆ ಶ್ರೀ ಕೆರೆಕೋಡಮ್ಮ ದೇವಿ ಸೇವಾ ಸಮಿತಿ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ಅಂಗನವಾಡಿ ಕಟ್ಟಡವನ್ನು ಸೋಮವಾರ ಲೋಕಾರ್ಪಣೆಗೊಳಿಸಲಾಯಿತು.
    ಶ್ರೀ ಕೆರೆಕೋಡಮ್ಮ ದೇವಿ ಸೇವಾ ಸಮಿತಿಗೆ ಸೇರಿರುವ ನಿವೇಶನದಲ್ಲಿ ಅಂಗನವಾಡಿ ಕಟ್ಟಡ ನಿರ್ಮಿಸಲು ಈ ಹಿಂದೆ ಸಮಿತಿ ನಿರ್ಧರಿಸಿತ್ತು. ಅದರಂತೆ ಸಮಿತಿ ತನ್ನ ಸ್ವಂತ ಹಣ ಹಾಗು ದಾನಿಗಳ ಸಹಕಾರದೊಂದಿಗೆ ಸುಮಾರು ೩.೫ ಲಕ್ಷ ರು. ವೆಚ್ಚದಲ್ಲಿ ಅಂಗನವಾಡಿ ಕಟ್ಟಡ ನಿರ್ಮಿಸಿದೆ. ಕಟ್ಟಡವನ್ನು ಬಾಡಿಗೆ ಆಧಾರದಲ್ಲಿ ಸರ್ಕಾರಕ್ಕೆ ಹಸ್ತಾಂತರಿಸಿದ್ದು, ಇದರಿಂದ ಸಮಿತಿಯ ಆರ್ಥಿಕ ಕ್ರೋಢೀಕರಣಕ್ಕೆ ಸಹಕಾರಿಯಾಗಿದೆ.
    ಕಟ್ಟಡ ಲೋಕಾರ್ಪಣೆ ಅಂಗವಾಗಿ ಧಾರ್ಮಿಕ ಆಚರಣೆಗಳು ಜರುಗಿದವು. ನಗರಸಭಾ ಸದಸ್ಯ ಬಿ.ಕೆ ಮೋಹನ್ ಕಟ್ಟಡ ಲೋಕಾರ್ಪಣೆಗೊಳಿಸಿದರು. ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಸ್ಥಳೀಯ ಮುಖಂಡರು, ನಿವಾಸಿಗಳು ಉಪಸ್ಥಿತರಿದ್ದರು. ಬಿ.ಕೆ ಮೋಹನ್ ಅವರನ್ನು ಸಮಿತಿವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.