Saturday, July 1, 2023

ಭದ್ರಾವತಿ ಲಯನ್ಸ್ ಕ್ಲಬ್‌‌ಜಿಲ್ಲೆಯಲ್ಲಿಯೇ ಮಾದರಿ

ಉತ್ತಮ ನಾಯಕರ ಕೊಡುಗೆ,  ಅನನ್ಯಸೇವೆ ಎನ್‌.ಎಂ ಹೆಗ್ಡೆ

ಭದ್ರಾವತಿ ಲಯನ್ಸ್ ಕ್ಲಬ್ ೨೦೨೩-೨೪ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ  ಸಮಾರಂಭದಲ್ಲಿ ಮಾಜಿ ಜಿಲ್ಲಾ ರಾಜ್ಯಪಾಲ‌ಎನ್.ಎಂ ಹೆಗ್ಡೆ ಪ್ರಮಾಣವಚನ ಬೋಧಿಸಿದರು ಬಿ.ಎಸ್‌ರಾಜೇಶ್‌ಸೇರಿದಂತೆ ಇನ್ನಿತರರು ಪದಗ್ರಹಣ ಸ್ವೀಕರಿಸಿದರು.

    ಭದ್ರಾವತಿ, ಜು. :  ನಗರದ ಲಯನ್ಸ್ ಸಂಸ್ಥೆ ಕಳೆದ ಸುಮಾರು ೫೭ ವರ್ಷಗಳಿಂದ  ಸಾಮಾಜಿಕ ಸೇವಾ ಕಾರ್ಯಗಳನ್ನು ನಿಸ್ವಾರ್ಥವಾಗಿ ಕೈಗೊಳ್ಳುವ  ಮೂಲಕ ಜಿಲ್ಲೆಯಲ್ಲಿ ಮಾದರಿಯಾಗಿದೆ ಎಂದು ಮಾಜಿ ಜಿಲ್ಲಾ ರಾಜ್ಯಪಾಲ‌ಎನ್.ಎಂ ಹೆಗ್ಡೆ ಹೇಳಿದರು.

          ಅವರು ನಗರದ ಲಯನ್ಸ್ ಕ್ಲಬ್ ೨೦೨೩-೨೪ ನೇ ಸಾಲಿನ ನೂತನ ಪದಾಧಿಕಾರಿಗಳಿಗೆ ಪದಗ್ರಹಣ ಪ್ರಮಾಣವಚನ ಬೋಧಿಸಿ ಮಾತನಾಡಿದರು.

           ಸಮಾಜದಲ್ಲಿ ಪ್ರತಿಯೊಬ್ಬ ವ್ಯಕ್ತಿ ತನ್ನ ವ್ಯಕ್ತಿತ್ವ ರೂಪಿಸಿಕೊಳ್ಳಲು ಲಯನ್ಸ್ ಸಂಸ್ಥೆ ಉತ್ತಮ ವೇದಿಕೆಯಾಗಿದೆ.  ಇಲ್ಲಿನ ಕ್ಲಬ್‌ಜಿಲ್ಲೆಗೆ ಉತ್ತಮ ನಾಯಕರುಗಳನ್ನು ನೀಡಿದ ಹೆಗ್ಗಳಿಕೆಗೆ  ಪಾತ್ರವಾಗಿದೆ.  ರಾಜ್ಯಪಾಲರು, ವಲಯಾಧ್ಯಕ್ಷರು ಸೇರಿದಂತೆ  ಹಲವು ಸ್ಥಾನಮಾನಗಳಲ್ಲಿ ಸಮರ್ಥ ವ್ಯಕ್ತಿಗಳು ಅಧಿಕಾರ ಹೊಂದುವ ಮೂಲಕ ಲಯನ್ಸ್ ಸಂಸ್ಥೆಯನ್ನು ಧೃಢವಾಗಿ ಸಂಘಟಿಸಿ ಬಲಪಡಿಸುತ್ತಿದ್ದಾರೆಂದು ಪ್ರಶಂಸೆ ವ್ಯಕ್ತಪಡಿಸಿದರು.

  ಶಿವಮೊಗ್ಗ ಪೋದಾರ್ ಇಂಟರ್‌ನ್ಯಾಷನಲ್ ಶಾಲೆಯ ಪ್ರಾಂಶುಪಾಲ ಸುಖೇಶ್‌ಮಾತನಾಡಿಭಾರತ ದೇಶ ಜಗತ್ತಿಗೆ ಕೊಡುವುದನ್ನು ಕಲಿಸಿದೆ ಹೊರತು ಬೇಡುವುದನ್ನು ಕಲಿಸಿಲ್ಲ. ಇದು ಇತಿಹಾಸದ ಪುಟಗಳಿಂದ ತಿಳಿದು ಬರುತ್ತದೆ. ಅಂದಿನಿಂದ ಇಂದಿನವರೆಗೆ ಹಲವಾರು ದೇಶಗಳ ಸಂಕಷ್ಟಗಳಿಗೆ ಭಾರತ ದೇಶ ನೆರವಾಗಿದೆ. ಇದಕ್ಕೆ ಇಂದಿನ ಜ್ವಲಂತ ಉದಾಹರಣೆ ಎಂದರೆ ಕೋವಿಡ್ ಸಂಕಷ್ಟದ ಸಮಯದಲ್ಲಿ ವಿದೇಶಗಳಿಗೆ ಆರ್ಥಿಕ, ಸಾಮಾಜಿಕ, ಔಷಧಿಯ ನೆರವನ್ನು ನೀಡಿರುವುದನ್ನು ಸ್ಮರಿಸಿ ಉದಾಹರಿಸಿದರು.

   ಸಮಾಜದಲ್ಲಿ ಯಾರು ಇತರರಿಗೋಸ್ಕರವಾಗಿ ಬದುಕುತ್ತಾರೋ ಅವರುಗಳು ನೈಜವಾಗಿ ಬದುಕ್ಕಿದ್ದಂತೆ, ಇಲ್ಲದಿದ್ದರೆ ಅವರುಗಳು ಬದುಕ್ಕಿದ್ದು ಸತ್ತಂತೆ. ಇದಕ್ಕೆ ಲಯನ್ಸ್ ಸದಸ್ಯರುಗಳು ಸಾಕ್ಷಿ. ಅವರುಗಳು ತಮ್ಮ ಬದುಕಿನ ಜೊತೆಗೆ ಇತರರ  ಬದುಕಿನ ಸಂಕಷ್ಟ್ಟಗಳಿಗೆ ನಿರಂತರವಾಗಿ ಸ್ಪಂದಿಸುವ ಮೂಲಕ ಮಾನವೀಯ ಕಾರ್ಯಗಳನ್ನು ಮಾಡುತ್ತಿದ್ದಾರೆ. ಸಮಾಜಿಕ ಬದ್ದತೆ, ಸಾಮಾಜಿಕ ಕಳಕಳಿ ಹೊಂದಿರುವವರು ಮಾತ್ರ ಸಾಮಾಜಿಕ ಹೊಣೆಗಾರಿಕೆಯನ್ನು ಯಶಸ್ವಿಯಾಗಿ ನಿಭಾಯಿಸುತ್ತಾರೆ ಎಂದರು.

   ರವಿರಾಜ್ ನಾಯ್ಕ್, ದೇವರಾಜ್, ಚಂದ್ರಶೇಖರ್, ರಮೇಶ್, ಜಿ.ಪಿ ದರ್ಶನ್ ಸೇರಿದಂತೆ ಇತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

    ನಗರದ ರೈಲ್ವೆ ನಿಲ್ದಾಣ  ಮುಂಭಾಗ ಸುಮಾರು ೩.೫೦ ಲಕ್ಷ ರು. ವೆಚ್ಚದಲ್ಲಿ ನಿರ್ಮಿಸಲಾಗಿರುವ ಕಂಬದ ಗಡಿಯಾರ (ಟವರ್ ಕ್ಲಾಕ್)  ದಾನಿ ಹಾಗು ಕ್ಲಬ್ ವಿವಿಧ ಸೇವಾ ಚಟುವಟಿಕೆಗಳಿಗೆ ಆರ್ಥಿಕ ಧನ ಸಹಾಯ ಮಾಡಿದ ದಾನಿಗಳು ಹಾಗು ಗಣ್ಯರುಗಳನ್ನು ಅಭಿನಂದಿಸಿ ಸನ್ಮಾನಿಸಲಾಯಿತು.

          ದಿವಂಗತ ಕೆ.ಸಿ ವೀರಭದ್ರ ಸ್ಮರಣಾರ್ಥವಾಗಿ ಆಯೋಜಿಸಲಾಗಿದ್ದ  ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಕುಂದಾಪುರ ಆತ್ರಾಡಿ ಚನ್ನಕೇಶವ ಲಯನ್ಸ್ ಕ್ಲಬ್  ಪ್ರಥಮ ಸ್ಥಾನದೊಂದಿಗೆ ಸಮಗ್ರ ಪ್ರಶಸ್ತಿ, ಚಾಂಪಿಯನ್ ಟ್ರೋಫಿ ಹಾಗು ನಗರದ ಲಯನ್ಸ್ ಕ್ಲಬ್ ದ್ವಿತೀಯ ಸ್ಥಾನ ಪಡೆದಿದ್ದುಬಹುಮಾನಗಳನ್ನು ವಿತರಿಸಲಾಯಿತು.

    ೨೦೨೩-೨೪ ನೇ ಸಾಲಿನ ನೂತನ ಪದಾಧಿಕಾರಿಗಳಾಗಿ ಅಧ್ಯಕ್ಷರಾಗಿ ಬಿ.ಎಸ್‌ರಾಜೇಶ್‌, ಕಾರ್ಯದರ್ಶಿಯಾಗಿ ಎಂ. ದಿವಾಕರ್‌ಮತ್ತು ಖಜಾಂಚಿಯಾಗಿ ಎನ್.‌ ಶ್ರೀನಿವಾಸ್‌, ಲಿಯೋ ಕ್ಲಬ್‌ಅಧ್ಯಕ್ಷರಾಗಿ ಆರ್.‌ ಪ್ರೇಕ್ಷಾ, ಕಾರ್ಯದರ್ಶಿಯಾಗಿ ಎಸ್.‌ ವರ್ಷ ಮತ್ತು ಖಜಾಂಚಿಯಾಗಿ ಎನ್.ಎಚ್‌ನಿಧಿ ಕೇಶವ ಪದಗ್ರಹಣ ಸ್ವೀಕರಿಸಿದರು.

          ನಿಖಿತಾ ಪ್ರಾರ್ಥಿಸಿ, ಎ.ಎನ್  ಕಾರ್ತೀಕ್ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ನಾಗರಾಜ ಶೇಟ್ ಅತಿಥಿಗಳ ಪರಿಚಯ ಮಾಡಿದರು. ಎಸ್.ಜಿ.ಶಂಕರ ಮೂರ್ತಿ ಕಾರ್ಯಕ್ರಮ ನಿರೂಪಿಸಿದರು. ದಿವಾಕರ್ ವಂದಿಸಿದರು.

Friday, June 30, 2023

ವಿಕಲಚೇತನ ಮಕ್ಕಳೊಂದಿಗೆ ಸಂಭ್ರಮಿಸಿದ ಶ್ರೀ ದತ್ತಾವಧೂತ ವಿನಯ್‌ಗುರೂಜಿ

ಚಿಕ್ಕಮಗಳೂರು ಸ್ವರ್ಣಪೀಠಿಕಾಪುರ ಗೌರಿಗದ್ದೆ ಹರಿಹರಪುರದ ಶ್ರೀ ದತ್ತಾವಧೂತ ವಿನಯ್ ಗುರೂಜಿಯವರು  ವಿಕಲಚೇತನ ಮಕ್ಕಳೊಂದಿಗೆ ಕೆಲ ಕ್ಷಣ ಬೆರೆತು ಅವರೊಂದಿಗೆ ಮಕ್ಕಳಂತೆ  ಸಂಭ್ರಮಿಸಿದ ಘಟನೆ ಭದ್ರಾವತಿ ನ್ಯೂಟೌನ್‌ತರಂಗ ಕಿವುಡು ಮಕ್ಕಳ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ನಡೆಯಿತು.
    ಭದ್ರಾವತಿ, ಜೂ. ೩೦:  ಚಿಕ್ಕಮಗಳೂರು ಸ್ವರ್ಣಪೀಠಿಕಾಪುರ ಗೌರಿಗದ್ದೆ ಹರಿಹರಪುರದ ಶ್ರೀ ದತ್ತಾವಧೂತ ವಿನಯ್ ಗುರೂಜಿಯವರು  ವಿಕಲಚೇತನ ಮಕ್ಕಳೊಂದಿಗೆ ಕೆಲ ಕ್ಷಣ ಬೆರೆತು ಅವರೊಂದಿಗೆ ಮಕ್ಕಳಂತೆ  ಸಂಭ್ರಮಿಸಿದ ಘಟನೆ ನಗರದ ನ್ಯೂಟೌನ್‌ತರಂಗ ಕಿವುಡು ಮಕ್ಕಳ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ನಡೆಯಿತು.
    ವಿಶೇಷ ಎಂಬಂತೆ ವಿನಯ್‌ಗುರೂಜಿಯವರು ಶಾಸಕ ಬಿ.ಕೆ ಸಂಗಮೇಶ್ವರ್‌ಜೊತೆಗೆ ಶಾಲೆಗೆ ಆಗಮಿಸಿ ವಿಕಲಚೇತನ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಶ್ರಮಿಸುತ್ತಿರುವ ಶಿವಭದ್ರ ಟ್ರಸ್ಟ್‌ಆಡಳಿತ ಮಂಡಳಿಯನ್ನು ಅಭಿನಂದಿಸಿದರು.
    ಅಲ್ಲದೆ ಶಾಲೆಯ ಪ್ರಗತಿಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡುವ ಮೂಲಕ ಒಂದು ತಿಂಗಳಿಗೆ ಅಗತ್ಯವಿರುವಷ್ಟು ದವಸ-ಧಾನ್ಯದ ಜೊತೆಗೆ ಶಾಲೆಯ ಬಣ್ಣ ಬಳಿಯುವ ಕಾರ್ಯಕ್ಕೆ ನೆರವು ನೀಡುವುದಾಗಿ ಭರವಸೆ ನೀಡಿದರು.
    ಗುರೂಜಿಯವರು ಮಕ್ಕಳಿಗೆ ಸಿಹಿ ಹಾಗು ಹಣ್ಣು ವಿತರಿಸುವ ಮೂಲಕ ಮಕ್ಕಳೊಂದಿಗೆ ಸಂಭ್ರಮ ಹಂಚಿಕೊಂಡರು.


    ಶಾಸಕ ಬಿ.ಕೆ ಸಂಗಮೇಶ್ವರ್‌ರವರು ಶಾಲೆಗೆ ೫ ಲಕ್ಷ ರು. ನೆರವು ನೀಡುವುದಾಗಿ ಹಾಗು ಪ್ರತಿ ತಿಂಗಳು ೫ ಸಾವಿರ ರು. ನಗದು ನೀಡುವುದಾಗಿ ಭರವಸೆ ನೀಡಿದರು.
    ಕೇಸರಿ ಪಡೆ ಅಧ್ಯಕ್ಷ ಕೆ.ಪಿ ಗಿರೀಶ್‌ರವರು ಸ್ಥಳದಲ್ಲಿಯೇ ೧೦ ಸಾವಿರ ರು. ನಗದು ಧನಸಹಾಯ ನೀಡುವ ಮೂಲಕ ಮಾನವೀಯತೆ ಮೆರೆದರು. ಇದೆ ರೀತಿ ಬಿ.ಎಚ್‌ರಸ್ತೆ ರೀಸೆಂಟ್‌ಟೈಲರ್‌ಅಶೋಕ್‌ರವರು ಪ್ರತಿ ತಿಂಗಳು ೨ ಸಾವಿರ ರು. ನೀಡುವುದಾಗಿ ಘೋಷಿಸಿದರು.
    ಟ್ರಸ್ಟ್‌ಪದಾಧಿಕಾರಿ, ನಿವೃತ್ತ ಪಶುವೈದ್ಯ ಡಾ. ಜಿ.ಎಂ ನಟರಾಜ್‌ಮತ್ತು ಮುಖ್ಯ ಶಿಕ್ಷಕಿ ತಾರಾಮಣಿಯವರು ಶಾಲೆಯ ಪ್ರಗತಿ ಕುರಿತು ಮಾಹಿತಿ ನೀಡಿದರು.
    ಈ ಶಾಲೆಯಲ್ಲಿಯೇ ವ್ಯಾಸಂಗ ಮಾಡಿ, ಇಲ್ಲಿಯೇ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕರಕುಶಲ ಶಿಕ್ಷಕಿ ಎಂ.ಸಿ ಗಾಯತ್ರಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಡಾ. ನರೇಂದ್ರಭಟ್‌, ವೃಂದಭಟ್‌, ಅನಂತಕೃಷ್ಣನಾಯಕ್‌, ಮದಿಅಲಗನ್‌, ಎಸ್.ಎನ್‌ಸುಭಾಷ್‌ಸೇರಿದಂತೆ ಟ್ರಸ್ಟ್‌ಪದಾಧಿಕಾರಿಗಳು, ಸದಸ್ಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  ಶಿಕ್ಷಕರಾದ ಎಂ.ಜಿ ಬಸವರಾಜ ಸ್ವಾಗತಿಸಿದರು. ಅರುಣ್‌ಕುಮಾರ್‌ವಂದಿಸಿದರು.

ಜು.೨ರಂದು ಬಿ.ಕೃಷ್ಣಪ್ಪ ೮೬ನೇ ಜನ್ಮದಿನಾಚರಣೆ

ಪ್ರೊ. ಬಿ. ಕೃಷ್ಣಪ್ಪ 
    ಭದ್ರಾವತಿ, ಜೂ. ೩೦ : ಕರ್ನಾಟಕ ದಲಿತ ನೌಕರರ ಒಕ್ಕೂಟ ತಾಲೂಕು ಶಾಖೆ ವತಿಯಿಂದ ಪ್ರೊ. ಬಿ. ಕೃಷ್ಣಪ್ಪನವರ ೮೬ನೇ ಜನ್ಮದಿನಾಚರಣೆ ಜು.೨ರ ಭಾನುವಾರ ಬೆಳಿಗ್ಗೆ ೧೧ ಗಂಟೆಗೆ ಜೆಟಿಎಸ್‌ಶಾಲೆ ಸಮೀಪದಲ್ಲಿರುವ ಶುಗರ್‌ಟೌನ್‌ಲಯನ್ಸ್‌ಕ್ಲಬ್‌ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
    ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ ಉದ್ಘಾಟಿಸಲಿದ್ದು, ಒಕ್ಕೂಟದ ತಾಲೂಕು ಅಧ್ಯಕ್ಷೆ ಎಸ್.‌ ಉಮಾ ಅಧ್ಯಕ್ಷತೆ ವಹಿಸಲಿದ್ದಾರೆ.
    ಶಾಸಕ ಬಿ.ಕೆ ಸಂಗಮೇಶ್ವರ್‌ಪ್ರೊ. ಬಿ. ಕೃಷ್ಣಪ್ಪನವರ ಪ್ರಶಸ್ತಿ ಪ್ರದಾನ ಮಾಡಲಿದ್ದು, ತಹಸೀಲ್ದಾರ್‌ಟಿ.ಜಿ ಸುರೇಶ್‌ಆಚಾರ್‌,  ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ರಮೇಶ್‌ಮತ್ತು ನೌಕರರ ಒಕ್ಕೂಟದ ಪ್ರಭಾರ ಜಿಲ್ಲಾಧ್ಯಕ್ಷ ಸಿ.ಕೆ ಗಂಗಾಧರಮೂರ್ತಿ ಪ್ರತಿಭಾ ಪುರಸ್ಕಾರ ನೆರವೇರಿಸಲಿದ್ದಾರೆ.
    ನೌಕರರ ಒಕ್ಕೂಟದ ಗೌರವ ಸಲಹೆಗಾರ ಸಿ. ಜಯಪ್ಪ ಹೆಬ್ಬಳಗೆರೆ, ಪೌರಾಯುಕ್ತ ಮನುಕುಮಾರ್‌, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎನ್.‌ ಗೋಪಾಲಪ್ಪ, ಇಂದಿರಾ ಪ್ರೊ. ಕೃಷ್ಣಪ್ಪ, ನಗರಸಭೆ ಉಪಾಧ್ಯಕ್ಷ ಸರ್ವಮಂಗಳ ಭೈರಪ್ಪ, ಡಿಎಸ್‌ಎಸ್‌ಜಿಲ್ಲಾ ಸಂಚಾಲಕ ಚಿನ್ನಯ್ಯ, ಬಿ. ಸಿದ್ದಬಸಪ್ಪ, ಪಿ. ಸುರೇಶ್‌, ಎನ್.‌ ಉಮೇಶ್‌, ಕೆ.ಬಿ ಜುಂಜಾನಾಯ್ಕ್‌, ಕೆ.ಎನ್‌ಶ್ರೀಹರ್ಷ, ಡಾ. ವರ್ಷ ಮತ್ತು ರಂಗನಾಥ್‌ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.  

Thursday, June 29, 2023

ವಿಐಎಸ್‌ಎಲ್‌ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತ : ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮುಂಭಾಗ ಗುರುವಾರ ಗುತ್ತಿಗೆ ಕಾರ್ಮಿಕರು ಪ್ರತಿಭಟನೆ ನಡೆಸಿದರು.

    ಭದ್ರಾವತಿ, ಜೂ. ೨೯: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ದಿನ ಕಳೆದಂತೆ ಒಂದೊಂದು ಘಟಕಗಳು ಉತ್ಪಾದನೆ ಸ್ಥಗಿತಗೊಳ್ಳುತ್ತಿದ್ದು, ಇದನ್ನು ವಿರೋಧಿಸಿ ಗುರುವಾರ ಗುತ್ತಿಗೆ ಕಾರ್ಮಿಕ ಸಂಘಟನೆಗಳು ಕಾರ್ಖಾನೆ ಮುಂಭಾಗ ಪ್ರತಿಭಟನೆ ನಡೆಸಿದವು.

          ಕಳೆದ ದಿನಗಳ ಹಿಂದೆ ಶಾಸಕ ಬಿ.ಕೆ ಸಂಗಮೇಶ್ವರ್ಕಾರ್ಖಾನೆ ಆಡಳಿತ ಮಂಡಳಿ ಜೊತೆಗೆ ಚರ್ಚಿಸಿ ಉತ್ಪಾದನೆ ಸ್ಥಗಿತಗೊಳಿಸದೆ ಗುತ್ತಿಗೆ ಕಾರ್ಮಿಕರ ಹಿತಕಾಪಾಡುವಂತೆ ಆಗ್ರಹಿಸಿದ್ದರು. ಆದರೆ ಆಡಳಿತ ಮಂಡಳಿ ಅಸಹಾಯಕತೆ ವ್ಯಕ್ತಪಡಿಸಿದ್ದು, ಮೇಲಾಧಿಕಾರಿಗಳು ಈಗಾಗಲೇ ಉತ್ಪಾದನೆ ಸ್ಥಗಿತಗೊಳಿಸುವಂತೆ ಆದೇಶಿಸಿದ್ದಾರೆ. ಅಲ್ಲದೆ ಕಚ್ಚಾ ಸಾಮಾಗ್ರಿಗಳು ಸಹ ಸ್ಥಗಿತಗೊಂಡಿದ್ದು, ಹಿನ್ನಲೆಯಲ್ಲಿ ಉತ್ಪಾದನೆ ಮುಂದುವರೆಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

          ಹಿನ್ನಲೆಯಲ್ಲಿ ಗುತ್ತಿಗೆ ಕಾರ್ಮಿಕರು ಕಾರ್ಖಾನೆ ಮುಂಭಾಗ ಮಳೆಯಲ್ಲಿಯೇ ಪ್ರತಿಭಟನೆ ಮುಂದುವರೆಸಿದರು. ನಡುವೆ ಪ್ರತಿಭಟನೆ ತೀವ್ರಗೊಳ್ಳುತ್ತಿದೆ.  

ಹಿರಿಯ ವೈದ್ಯ ಡಾ.ಕೆ.ಜಿ ಭಟ್ ನಿಧನ



ಭದ್ರಾವತಿ, ಜೂ. 29: ಸಿದ್ದಾರೂಢ ನಗರದ ನಿವಾಸಿ, ವಿಐಎಸ್ಎಲ್ ಕಾರ್ಖಾನೆಯ ನಿವೃತ್ತ  ವೈದ್ಯ ಡಾ.ಕೆ.ಜಿ ಭಟ್(67) ನಿಧನ ಹೊಂದಿದ್ದರು.
   ಇವರಿಗೆ ಓರ್ವ ಪುತ್ರ ಇದ್ದು, ಅನಾರೋಗ್ಯಕ್ಕೆ ಒಳಗಾಗಿದ್ದ ಇವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮಧ್ಯ ರಾತ್ರಿ ಮೃತಪಟ್ಟಿದ್ದಾರೆ.   
      ಇವರ ಅಂತ್ಯಸಂಸ್ಕಾರ ಗುರುವಾರ ನಗರದ ಹಿಂದೂ ರುದ್ರ ಭೂಮಿಯಲ್ಲಿ ನೆರವೇರಿತು.
ಕೆ.ಜಿ. ಭಟ್ ಅವರು ವಿಐಎಸ್'ಎಲ್ ಆಸ್ಪತ್ರೆಯಲ್ಲಿ ವೈದ್ಯರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದರು. ನಂತರ ಖಾಸಗಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಇವರ ಪತ್ನಿ ಡಾ.ಕವಿತಾ ಭಟ್ ಅವರು ಕಳೆದ  ವರ್ಷ ಡಿಸೆಂಬರ್ 26ರಂದು ಹೃದಯಾಘಾತದಿಂದ ನಿಧನರಾಗಿದ್ದರು.  
  ಇವರ ನಿಧನಕ್ಕೆ ನಗರದ ಅನೇಕ ಗಣ್ಯರು, ವೈದ್ಯರು ಸಂತಾಪ ಸೂಚಿಸಿದ್ದಾರೆ.

Wednesday, June 28, 2023

ವಿಐಎಸ್ಎಲ್ ಗುತ್ತಿಗೆ ಕಾರ್ಮಿಕ ಮಂಜುನಾಥ್ ನಿಧನ



ಭದ್ರಾವತಿ, ಜೂ. 28: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಗುತ್ತಿಗೆ ಕಾರ್ಮಿಕ ಬಿ. ಮಂಜುನಾಥ್(43) ಬುಧವಾರ ಬೆಳಗ್ಗೆ ನಿಧನ ಹೊಂದಿದರು.
          ಪತ್ನಿ, ಓರ್ವ ಪುತ್ರಿ ಇದ್ದರು. ಕಳೆದ ಸುಮಾರು ಒಂದು ವರ್ಷದಿಂದ ಜನ್ನಾಪುರ ಲಿ೦ಗಾಯತರ ಬೀದಿಯಲ್ಲಿ ವಾಸವಾಗಿದ್ದರು.   ಹಲವಾರು ವರ್ಷಗಳಿಂದ ವಿಐಎಸ್ಎಲ್ ಗುತ್ತಿಗೆ ಕಾರ್ಮಿಕರಾಗಿದ್ದು, ಬದುಕು ಸಾಗಿಸುತ್ತಿದ್ದರು. ಕಾರ್ಖಾನೆಯಲ್ಲಿ ಕೇವಲ 13 ದಿನ ಕೆಲಸ ನಿರ್ವಹಿಸಬೇಕಾದ ಹಿನ್ನೆಲೆಯಲ್ಲಿ ಹೊರಗೆ ಪೇಂಟಿಂಗ್ ಕೆಲಸ ಸಹ ನಿರ್ವಹಿಸುತ್ತಿದ್ದರು. ಪೇಂಟಿಂಗ್ ಕೆಲಸ ನಿರ್ವಹಿಸುವಾಗ ಕಟ್ಟಡದಿಂದ ಕೆಳಗೆ ಬಿದ್ದು ತೀವ್ರ ಗಾಯಗೊಂಡಿದ್ದು, ಇವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
     ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಯುವ ಘಟಕದ ನಿರ್ದೇಶಕರಾಗಿದ್ದರು. ಇವರ ನಿಧಾನಕ್ಕೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಯುವ ಘಟಕ ಮತ್ತು ಗುತ್ತಿಗೆ ಕಾರ್ಮಿಕರ ಸಂಘ ಸಂತಾಪ ಸೂಚಿಸಿವೆ.
  

Tuesday, June 27, 2023

ಉತ್ಪಾದನೆ ಸ್ಥಗಿತಗೊಳಿಸದೆ ಗುತ್ತಿಗೆ ಕಾರ್ಮಿಕರ ಹಿತ ಕಾಪಾಡಿ

ವಿಐಎಸ್‌ಎಲ್ ಆಡಳಿತ ಮಂಡಳಿ ಜೊತೆಗೆ ಶಾಸಕ ಸಂಗಮೇಶ್ವರ್ ಚರ್ಚೆ

ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತಗೊಳಿಸದೆ ಗುತ್ತಿಗೆ ಕಾರ್ಮಿಕರಿಗೆ ಉದ್ಯೋಗ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳವಾರ ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಖಾನೆ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿದರು.
    ಭದ್ರಾವತಿ, ಜೂ. ೨೭: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತಗೊಳಿಸದೆ ಗುತ್ತಿಗೆ ಕಾರ್ಮಿಕರಿಗೆ ಉದ್ಯೋಗ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳವಾರ ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಖಾನೆ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿದರು.
    ಕಾರ್ಖಾನೆ ಮುಚ್ಚುವ ಆದೇಶ ಹಿಂಪಡೆಯುವಂತೆ ಹಾಗು ಕಾರ್ಖಾನೆಗೆ ಅಗತ್ಯವಿರುವ ಬಂಡವಾಳ ತೊಡಗಿಸುವಂತೆ ಮತ್ತು ಗುತ್ತಿಗೆ ಕಾರ್ಮಿಕರ ಹಿತಕಾಪಾಡುವಂತೆ ಆಗ್ರಹಿಸಿ ಕಳೆದ ಸುಮಾರು ೬ ತಿಂಗಳಿನಿಂದ ನಿರಂತರವಾಗಿ ಹೋರಾಟ ನಡೆಸುತ್ತಿರುವ ಗುತ್ತಿಗೆ ಕಾರ್ಮಿಕರಿಗೆ ಆರಂಭದಿಂದಲೂ ಶಾಸಕ ಬಿ.ಕೆ ಸಂಗಮೇಶ್ವರ್ ಬೆಂಬಲ ಸೂಚಿಸಿಕೊಂಡು ಬಂದಿದ್ದು, ಈ ನಡುವೆ ವಿಧಾನಸಭಾ ಚುನಾವಣೆ ಎದುರಾದ ಹಿನ್ನಲೆಯಲ್ಲಿ ಗುತ್ತಿಗೆ ಕಾರ್ಮಿಕರ ಹೋರಾಟಕ್ಕೆ ಸ್ಪಂದಿಸಲು ಅವರಿಗೆ ಸಾಧ್ಯವಾಗಿರಲಿಲ್ಲ.
    ಕಳೆದ ತಿಂಗಳು ಚುನಾವಣೆ ಮುಕ್ತಾಯಗೊಂಡಿದ್ದು, ೪ನೇ ಬಾರಿಗೆ ಕ್ಷೇತ್ರದ ಶಾಸಕರಾಗಿ ಸಂಗಮೇಶ್ವರ್ ಆಯ್ಕೆಯಾಗಿದ್ದಾರೆ. ಚುನಾವಣೆ ಫಲಿತಾಂಶ ಪ್ರಕಟಗೊಂಡ ನಂತರ ಬೆಂಗಳೂರಿನಲ್ಲಿಯೇ ಉಳಿದುಕೊಂಡಿದ್ದ ಇವರು ಕಳೆದ ೪ ತಿಂಗಳ ಹಿಂದೆ ನಗರಕ್ಕೆ ಆಗಮಿಸಿದ್ದು, ಈ ಹಿನ್ನಲೆಯಲ್ಲಿ ಮಂಗಳವಾರ ಕಾರ್ಖಾನೆ ಆಡಳಿತ ಮಂಡಳಿ ಜೊತೆ ಪ್ರಸ್ತುತ ಬೆಳವಣಿಗೆಗಳ ಕುರಿತು ಮಾಹಿತಿ ಪಡೆದು ಗುತ್ತಿಗೆ ಕಾರ್ಮಿಕರ ಹಿತಕಾಪಾಡುವ ನಿಟ್ಟಿನಲ್ಲಿ ಮುಂದಿನ ಕ್ರಮಗಳನ್ನು ಚರ್ಚಿಸಿದರು.
    ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ, ಸಾರ್ವಜನಿಕ ಸಂಪರ್ಕಾಧಿಕಾರಿ ಎಲ್. ಪ್ರವೀಣ್‌ಕುಮಾರ್ ಹಾಗು ಕಾಯಂ ಮತ್ತು ಗುತ್ತಿಗೆ ಕಾರ್ಮಿಕರ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.