Wednesday, July 5, 2023
ಜು.೭ರಂದು ಉಚಿತ ನೇತ್ರ ತಪಾಸಣೆ, ಶಸ್ತ್ರ ಚಿಕಿತ್ಸೆ ಶಿಬಿರ
ಚುಂಚಾದ್ರಿ ಮಹಿಳಾವೇದಿಕೆಯಿಂದ ಗುರು ಪೂರ್ಣಿಮಾ ಆಚರಣೆ
ಭದ್ರಾವತಿಯಲ್ಲಿ ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ಪ್ರತಿವರ್ಷದಂತೆ ಈ ಬಾರಿ ಸಹ ವಿಶೇಷವಾಗಿ ಗುರುಪೂರ್ಣಿಮಾ ಆಚರಿಸಲಾಯಿತು.
ಭದ್ರಾವತಿ, ಜು. ೫ : ನಗರದ ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ಪ್ರತಿವರ್ಷದಂತೆ ಈ ಬಾರಿ ಸಹ ವಿಶೇಷವಾಗಿ ಗುರುಪೂರ್ಣಿಮಾ ಆಚರಿಸಲಾಯಿತು.
ಇಂದಿನ ಪೀಳಿಗೆಗೆ ಗುರುಪೂರ್ಣಿಮಾ ಮಹತ್ವ ತಿಳಿಸಿಕೊಂಡುವ ಜೊತೆಗೆ ಧಾರ್ಮಿಕ ಪರಂಪರೆ ಎತ್ತಿ ಹಿಡಿಯುವ ಕಾರ್ಯದಲ್ಲಿ ವೇದಿಕೆ ತೊಡಗಿಸಿಕೊಂಡಿದೆ. ಹಲವಾರು ವರ್ಷಗಳಿಂದ ವಿಭಿನ್ನ ಕಾರ್ಯಕ್ರಮಗಳ ಆಯೋಜನೆ ಮೂಲಕ ಕ್ರಿಯಾಶೀಲವಾಗಿ ಮುನ್ನಡೆಯುತ್ತಿದೆ.
ಕಾರ್ಯಕ್ರಮದಲ್ಲಿ ಗುರು ಪೂರ್ಣಿಮಾ ಕುರಿತು ಪುಷ್ಟ ಕೇಶವ ಮಾತನಾಡಿದರು. ನಗರಸಭೆ ಮಾಜಿ ಅಧ್ಯಕ್ಷೆ, ವೇದಿಕ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಅಧ್ಯಕ್ಷತೆ ವಹಿಸಿದ್ದರು.
ಶೀಲಾ ರವಿ ಪ್ರಾರ್ಥಿಸಿ, ಲತಾ ಪ್ರಭಾಕರ್ ಸ್ವಾಗತಿಸಿದರು. ಭಾರತಿ ಕುಮಾರ್, ಮಂಗಳಾ, ಮಂಜುಳಾ, ಪ್ರೇಮ, ಕುಸುಮ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
Tuesday, July 4, 2023
ಪ್ರೌಢಶಾಲಾ ಕನ್ನಡ ಭಾಷಾ ಶಿಕ್ಷಕರಿಗೆ ಎರಡು ದಿನಗಳ ಸಾಹಿತ್ಯ ರಸಗ್ರಹಣ ಶಿಬಿರ
ಗುರು ಕೃಪೆಯಿಂದ ಎಲ್ಲವೂ ಸಾಧ್ಯ : ಶ್ರೀ ಕೃಷ್ಣಮೂರ್ತಿ ಸೋಮಯಾಜಿ
ಭದ್ರಾವತಿ ತಾಲೂಕು ಶಂಕರ ಸಮಿತಿ ಸಂಚಾಲಕರಾದ ವೇದಬ್ರಹ್ಮ ಶ್ರಿ ಕೃಷ್ಣ ಮೂರ್ತಿ ಸೋಮಯಾಜಿ ಜನ್ನಾಪುರ ಶ್ರೀ ಮಹಾಗಣಪತಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಗುರುಪೂರ್ಣಿಮೆ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದರು.
ಭದ್ರಾವತಿ, ಜು. ೪ : ಜೀವನದಲ್ಲಿ ಗುರು ಕೃಪೆಯಿಂದ ಲೌಕಿಕ ಹಾಗೂ ಅಲೌಕಿಕ ಸಾಧನೆ ಗುರಿ ತಲುಪಲು ಸಾಧ್ಯ ಎಂದು ತಾಲೂಕು ಶಂಕರ ಸಮಿತಿ ಸಂಚಾಲಕರಾದ ವೇದಬ್ರಹ್ಮ ಶ್ರಿ ಕೃಷ್ಣಮೂರ್ತಿ ಸೋಮಯಾಜಿ ಹೇಳಿದರು.
ಅವರು ಜನ್ನಾಪುರ ಶ್ರೀ ಮಹಾಗಣಪತಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಗುರುಪೂರ್ಣಿಮೆ ಕಾರ್ಯಕ್ರಮದ ನೇತೃತ್ವವಹಿಸಿ ಮಾತನಾಡಿದರು
ಗುರುಪೂರ್ಣಿಮೆ ಮಹತ್ವ ತಿಳಿಸಿಕೊಡಲಾಯಿತು. ಅಲ್ಲದೆ ಭಜನೆ ಹಾಗೂ ಅಷ್ಟೋತ್ತರ ಪಠಣ ನಡೆಯಿತು. ಜಯಲಕ್ಷ್ಮಿ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಎನ್ ಎಸ್ ಸುಬ್ರಹ್ಮಣ್ಯ ಸ್ವಾಗತಿಸಿ, ಸ್ವರ್ಣ ನಾಗೇಂದ್ರ ವಂದಿಸಿದರು
Monday, July 3, 2023
ಎಂ. ಸಿಂಚನಾಗೆ ಅತ್ಯುತ್ತಮ ಎನ್ಎಸ್ಎಸ್ಸ್ವಯಂ ಸೇವಕಿ ಪ್ರಶಸ್ತಿ
ನಗರಸಭೆ ಅಧ್ಯಕ್ಷರಾಗಿ ಶೃತಿ ವಸಂತಕುಮಾರ್
Sunday, July 2, 2023
ಪ್ರೊ. ಬಿ. ಕೃಷ್ಣಪ್ಪ ದಲಿತರ ಬಾಳಿನ ಆಶಾಕಿರಣ : ಸತ್ಯ ಭದ್ರಾವತಿ
ಭದ್ರಾವತಿ ನ್ಯೂಟೌನ್ ಜೆಟಿಎಸ್ಶಾಲೆ ಸಮೀಪದ ಲಯನ್ಸ್ಕಣ್ಣಿನ ಆಸ್ಪತ್ರೆ ಸಭಾ ಭವನದಲ್ಲಿ ಭಾನುವಾರ ಕರ್ನಾಟಕ ದಲಿತ ನೌಕರರ ಒಕ್ಕೂಟದ ತಾಲೂಕು ಶಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರೊ. ಬಿ. ಕೃಷ್ಣಪ್ಪನವರ ೮೬ನೇ ಜನ್ಮದಿನಾಚರಣೆ ದಲಿತ ಸಂಘರ್ಷ ಸಮಿತಿ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ ಉದ್ಘಾಟಿಸಿದರು.
ಅವರು ಭಾನುವಾರ ನ್ಯೂಟೌನ್ ಜೆಟಿಎಸ್ಶಾಲೆ ಸಮೀಪದ ಲಯನ್ಸ್ಕಣ್ಣಿನ ಆಸ್ಪತ್ರೆ ಸಭಾ ಭವನದಲ್ಲಿ ಕರ್ನಾಟಕ ದಲಿತ ನೌಕರರ ಒಕ್ಕೂಟದ ತಾಲೂಕು ಶಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರೊ. ಬಿ. ಕೃಷ್ಣಪ್ಪನವರ ೮೬ನೇ ಜನ್ಮದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ವಿಶ್ವಜ್ಞಾನಿ, ಭಾರತರತ್ನ ಬಾಬಾ ಸಾಹೇಬ್ಅಂಬೇಡ್ಕರ್ರವರ ದಾರಿಯಲ್ಲಿ ಸಾಗಿಬಂದ ಪ್ರೊ. ಬಿ. ಕೃಷ್ಣಪ್ಪನವರು ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯಗಳ ವಿರುದ್ಧ ೧೯೭೫ರ ಅವಧಿಯಲ್ಲಿ ದಲಿತ ಸಂಘಟನೆ ಮೂಲಕ ಚಳುವಳಿಗಳನ್ನು ಆರಂಭಿಸಿ ನ್ಯಾಯ ಒದಗಿಸಿಕೊಡುವಲ್ಲಿ ಯಶಸ್ವಿಯಾದರು. ಹಲವಾರು ಪ್ರಮುಖ ಹೋರಾಟಗಳಲ್ಲಿ ಪ್ರೊ. ಬಿ. ಕೃಷ್ಣಪ್ಪನವರು ಮುಂಚೂಣಿ ನಾಯಾಕರಾಗಿದ್ದರು. ಅವರ ಹೋರಾಟ ನಮ್ಮೆಲ್ಲರಿಗೂ ಮಾದರಿಯಾಗಿದ್ದು, ಆ ದಾರಿಯಲ್ಲಿ ನಾವುಗಳು ಸಹ ಸಾಗಬೇಕಾಗಿದೆ ಎಂದರು.
ಒಕ್ಕೂಟದ ಅಧ್ಯಕ್ಷೆ ಎಸ್. ಉಮಾ ಅಧ್ಯಕ್ಷತೆ ವಹಿಸಿದ್ದರು. ಗೌರವ ಸಲಹೆಗಾರ ಸಿ. ಜಯಪ್ಪ ಹೆಬ್ಬಳಗೆರೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಿವಮೊಗ್ಗ ಇತಿಹಾಸ ತಜ್ಞ, ಚಿಂತಕ ಡಾ. ಕೆ.ಜಿ ವೆಂಕಟೇಶ್ಉಪನ್ಯಾಸ ನಡೆಸಿ ಕೊಟ್ಟರು.
ಹಿರಿಯ ರೈತ ಮುಖಂಡ ಎಚ್.ಆರ್ಬಸವರಾಜಪ್ಪ, ಬೆಂಗಳೂರು ಗಾಂಧಿಭವನ ಪ್ರೊ. ಬಿ. ಕೃಷ್ಣಪ್ಪ ಟ್ರಸ್ಟ್ಕಾರ್ಯದರ್ಶಿ, ಮ್ಯಾನೆಜಿಂಗ್ಟ್ರಸ್ಟಿ ಇಂದಿರಾ ಪ್ರೊ. ಕೃಷ್ಣಪ್ಪ, ಹಿರಿಯ ಸಾಹಿತಿ ಜಿ.ವಿ ಸಂಗಮೇಶ್ವರ್, ನಿವೃತ್ತ ಉಪನ್ಯಾಸಕ ಪ್ರೊ. ಎಂ. ಚಂದ್ರಶೇಖರಯ್ಯ, ನಗರಸಭೆ ಪ್ರಭಾರ ಅಧ್ಯಕ್ಷೆ ಬಿ.ಪಿ ಸರ್ವಮಂಗಳ ಭೈರಪ್ಪ, ಮಾಜಿ ಅಧ್ಯಕ್ಷ ಬಿ.ಕೆ ಮೋಹನ್, ಪೌರಾಯುಕ್ತ ಎಚ್.ಎಂ ಮನುಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎನ್. ಗೋಪಾಲಪ್ಪ, ಒಕ್ಕೂಟದ ಪ್ರಭಾರ ಜಿಲ್ಲಾಧ್ಯಕ್ಷ ಸಿ.ಕೆ ಗಂಗಾಧರಮೂರ್ತಿ, ಡಿಎಸ್ಎಸ್ಜಿಲ್ಲಾ ಸಂಚಾಲಕ ಚಿನ್ನಯ್ಯ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಟಿ. ಪೃಥ್ವಿರಾಜ್, ತಾಲೂಕು ಸರ್ಕಾರಿ ಆಸ್ಪತ್ರೆ ವೈದ್ಯೆ ಡಾ. ವರ್ಷ, ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ರಂಗನಾಥ್ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಒಕ್ಕೂಟದ ಉಪಾಧ್ಯಕ್ಷ ಲೋಕೇಶ್(ಮೆಸ್ಕಾಂ) ಸ್ವಾಗತಿಸಿದರು. ಗೌರವಾಧ್ಯಕ್ಷ ಎಂ. ಈಶ್ವರಪ್ಪ(ನಗರಸಭೆ) ನಿರೂಪಿಸಿದರು. ಒಕ್ಕೂಟದ ಮಾರ್ಗದರ್ಶಕ ಕೆ.ಬಿ ಜುಂಜಾನಾಯ್ಕ್, ಸಂಘಟನಾ ಕಾರ್ಯದರ್ಶಿ ಕೆ. ರಂಗನಾಥ್ಹಾಗು ವಿವಿಧ ಸಂಘಟನೆಗಳ ಪ್ರಮುಖರು, ದಲಿತ ನೌಕರರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.