![](https://blogger.googleusercontent.com/img/a/AVvXsEixvfcyAH5X-8BdCMAE5sUzRalm6LoO4GMTwd14wD9bpfzsIiVGtXe3ebSdCcTIxyJupEP2XLH1DxmOnV_rXmmyMjsy85UGiNQpLggYcEEjkEQsQveEZRKL_eM3AT8yIBl79P8wOaGlNRsxVWceb_DVgC4uEdfOSd2KgvCzhMAZudzwUOQ6mj8n8cAmIQH1=w400-h223-rw)
ಭದ್ರಾವತಿಯಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ, ನಿವೃತ್ತ ದೈಹಿಕ ಶಿಕ್ಷಕ ಶಿವಲಿಂಗೇಗೌಡರ ಸಾಧನೆಯನ್ನು ಗುರುತಿಸಿ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಆಡಳಿತ ಮಂಡಳಿವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ, ಜು. ೧೫: ರಾಷ್ಟ್ರಪ್ರಶಸ್ತಿ ವಿಜೇತ, ನಿವೃತ್ತ ದೈಹಿಕ ಶಿಕ್ಷಕ ಶಿವಲಿಂಗೇಗೌಡರ ಸಾಧನೆಯನ್ನು ಗುರುತಿಸಿ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಆಡಳಿತ ಮಂಡಳಿವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ದೈಹಿಕ ಶಿಕ್ಷಕರಾಗಿ ಶಿವಲಿಂಗೇಗೌಡರು ಉತ್ತಮವಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದು, ಅಲ್ಲದೆ ವೃತ್ತಿ ಬದುಕಿನ ಜೊತೆಗೆ ಸೇವಾ ಮನೋಭಾವನೆಯೊಂದಿಗೆ ಗುರುತಿಸಿಕೊಂಡಿದ್ದಾರೆ. ಪ್ರಸ್ತುತ ವಿಶ್ವೇಶ್ವರಯ್ಯ ವಿದ್ಯಾ ಸಂಸ್ಥೆಯಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿದ್ದಾರೆ. ಇವರಿಗೆ ಹಲವಾರು ಪ್ರಶಸ್ತಿಗಳು ಲಭಿಸಿದ್ದು, ಅಲ್ಲದೆ ಸಂಘ-ಸಂಸ್ಥೆಗಳು ಇವರ ಸಾಧನೆಯನ್ನು ಗುರುತಿಸಿ ಗೌರವಿಸಿವೆ.
ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ನಡೆದ ತಾಲೂಕು ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ತ್ರೈಮಾಸಿಕ ಸಭೆಯಲ್ಲಿ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.
ವಿದ್ಯಾಸಂಸ್ಥೆ ಕಾರ್ಯದರ್ಶಿ ತಿಪ್ಪೇಸ್ವಾಮಿ, ಖಜಾಂಚಿ ಮಂಜುನಾಥ್ ಪವಾರ್, ಸಹಕಾರ್ಯದರ್ಶಿ ಬೋಸುರಾಜ್ ರಾವ್, ಮುಖ್ಯೋಪಾಧ್ಯಾಯ ಸುರೇಶ್ ನಾಯ್ಕ, ಕ್ಷೇತ್ರ ಸಂಪನ್ಮೂಲ ಶಿಕ್ಷಕರಾದ ಯುವರಾಜ್ ಮತ್ತು ದಿವ್ಯ, ದೈಹಿಕ ಶಿಕ್ಷಣಾಧಿಕಾರಿ ಪ್ರಭು, ದೈಹಿಕ ಶಿಕ್ಷಣ ಶಿಕ್ಷಕ ರಾಜ ನಾಯ್ಕ, ರವಿ, ಗಿರೀಶ್ ಹಾಗು ಶಿಕ್ಷಕ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.