Tuesday, August 22, 2023

ಪಾರ್ವತಿ ಸಾಲೇರ ಇಂಜಿನಿಯರಿಂಗ್‌ನಲ್ಲಿ ಪ್ರಥಮ ‌ರ‍್ಯಾಂಕ್ : ಸನ್ಮಾನ

ವಿಶ್ವೇಶ್ವರಾಯ ತಾಂತ್ರಿಕ ವಿಶ್ವವಿದ್ಯಾಲಯ ೨೦೨೩ನೇ ಶೈಕ್ಷಣಿಕ ಸಾಲಿನಲ್ಲಿ ನಡೆಸಿದ  ಇಂಜಿನಿಯರಿಂಗ್‌ ಪರೀಕ್ಷೆಯ ಕಂಪ್ಯೂಟರ್‌ ಸೈನ್ಸ್‌ ವಿಭಾಗದಲ್ಲಿ ಪ್ರಥಮ ‌ರ‍್ಯಾಂಕ್ ಪಡೆದ ಭದ್ರಾವತಿ ನಗರದ ಜನ್ನಾಪುರ ನಿವಾಸಿ ಪಾರ್ವತಿ ಸಾಲೇರ .ಜೆ ಅವರನ್ನು ನ್ಯೂಟೌನ್‌ ಅಮಲೋದ್ಭವಿ ಮಾತೆ ದೇವಾಲಯದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
    ಭದ್ರಾವತಿ, ಆ. ೨೨: ವಿಶ್ವೇಶ್ವರಾಯ ತಾಂತ್ರಿಕ ವಿಶ್ವವಿದ್ಯಾಲಯ ೨೦೨೩ನೇ ಶೈಕ್ಷಣಿಕ ಸಾಲಿನಲ್ಲಿ ನಡೆಸಿದ  ಇಂಜಿನಿಯರಿಂಗ್‌ ಪರೀಕ್ಷೆಯ ಕಂಪ್ಯೂಟರ್‌ ಸೈನ್ಸ್‌ ವಿಭಾಗದಲ್ಲಿ ಪ್ರಥಮ ‌ರ‍್ಯಾಂಕ್ ಪಡೆದ ನಗರದ ಜನ್ನಾಪುರ ನಿವಾಸಿ ಪಾರ್ವತಿ ಸಾಲೇರ .ಜೆ ಅವರನ್ನು ನ್ಯೂಟೌನ್‌ ಅಮಲೋದ್ಭವಿ ಮಾತೆ ದೇವಾಲಯದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
    ಪಾರ್ವತಿ ಸಾಲೇರ .ಜೆ ಅವರು ಜಮೀನ್ದಾರ್‌ ಜ್ಯೋತಿ ಸಾಲೇರ .ಎಸ್‌ ಹಾಗು ಐಶ್ವರ್ಯ ದಂಪತಿಯ ಪುತ್ರಿಯಾಗಿದ್ದು, ಇವರು ಕಂಪ್ಯೂಟರ್‌ ಸೈನ್ಸ್‌ ವಿಭಾಗದಲ್ಲಿ ೬ ಚಿನ್ನದ ಪದಕದೊಂದಿಗೆ ಪ್ರಥಮ ‌ರ‍್ಯಾಂಕ್ ಪಡೆದುಕೊಂಡು ಕೀರ್ತಿತಂದಿದ್ದಾರೆ. ವಿಶೇಷವಾಗಿ ಪಾರ್ವತಿಯವರು ಕ್ಷೇತ್ರದಲ್ಲಿ ೨ ಬಾರಿ ಶಾಸಕರಾಗಿ ನಿಧನ ಹೊಂದಿರುವ ಸಾಲೇರ ಎಸ್‌ ಸಿದ್ದಪ್ಪ ಅವರ ಮೊಮ್ಮಗಳು ಎಂಬುದು ಹೆಮ್ಮೆಯ ಸಂಗತಿಯಾಗಿದೆ.
    ಇವರ ಸಾಧನೆಯನ್ನು ಅಭಿನಂದಿಸಿ ದೇವಾಲಯದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಧರ್ಮಗುರು ಫಾದರ್‌ ಲಾನ್ಸಿ ಡಿಸೋಜ, ಕಾರ್ಯದರ್ಶಿ ಅಂತೋಣಿ ವಿಲ್ಸನ್‌, ಸೈಂಟ್‌ ಚಾರ್ಲ್ಸ್‌ ಸಂಸ್ಥೆಯ ಸುಪೀರಿಯರ್‌ ಸಿಸ್ಟರ್‌ ಜೆಸಿಂತಾ ಡಿಸೋಜಾ, ವ್ಯಾಲೆಂಟೀನಾ ಸಿಕ್ವೆರಾ, ಆರ್.ಎಸ್‌ ಪೀಟರ್‌ ಜೋಸೆಫ್‌, ಅಂತೋನಿ ಕ್ರೂಸ್‌ , ಸಲಿನ್‌ ಗೊನ್ಸಲ್ವಿಸ್‌, ರೋಸಿ ಡಿಸೋಜ, ನಿರ್ಮಲ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಅಂತರಾಷ್ಟ್ರೀಯ ಕ್ರೀಡಾಕೂಟದಲ್ಲಿ ವಿಕಲಚೇತನ ಕ್ರೀಡಾಪಟು ಎಸ್. ಜ್ಯೋತಿ ಸಾಧನೆ

ಯರೇಹಳ್ಳಿ ಗ್ರಾಮ ಪಂಚಾಯಿತಿ ಅಭಿನಂದನೆ

ಭದ್ರಾವತಿ ತಾಲೂಕಿನ ಯರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಣೀನರಸೀಪುರ ಗ್ರಾಮದ ನಿವಾಸಿ, ವಿಕಲಚೇತನ ಕ್ರೀಡುಪಟು, ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಎಸ್. ಜ್ಯೋತಿ ಅಂತರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಿ ಉತ್ತಮ ಸಾಧನೆಯೊಂದಿಗೆ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಇವರನ್ನು ಮಂಗಳವಾರ ಗ್ರಾಮ ಪಂಚಾಯಿತಿ ಸನ್ಮಾನಿಸಿ ಅಭಿನಂದಿಸಿತು.
    ಭದ್ರಾವತಿ, ಆ. ೨೨ : ತಾಲೂಕಿನ ಯರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಣೀನರಸೀಪುರ ಗ್ರಾಮದ ನಿವಾಸಿ, ವಿಕಲಚೇತನ ಕ್ರೀಡುಪಟು, ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಎಸ್. ಜ್ಯೋತಿ ಅಂತರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಿ ಉತ್ತಮ ಸಾಧನೆಯೊಂದಿಗೆ ಚಿನ್ನದ ಪದಕ ಪಡೆದುಕೊಂಡಿದ್ದಾರೆ.
    ಮಲೇಷಿಯಾದಲ್ಲಿ ಜರುಗಿದ ಕ್ರೀಡಾಕೂಟದ  ಪ್ಯಾರ ಥ್ರೋಬಾಲ್‌ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದು  ದೇಶಕ್ಕೆ ಕೀರ್ತಿ ತಂದಿದ್ದಾರೆ.  ಜ್ಯೋತಿಯವರು ಕ್ರೀಡಾ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡಿದ್ದು, ಇವರ ಸಾಧನೆಯನ್ನು ರಾಜ್ಯ ಸರ್ಕಾರ ಗುರುತಿಸಿ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಇದೀಗ ಅಂತರಾಷ್ಟ್ರೀಯ ಮಟ್ಟದಲ್ಲೂ ಜ್ಯೋತಿಯವರು ಸಾಧನೆ ಮಾಡಿರುವುದು ಉಕ್ಕಿನ ನಗರದ ಕೀರ್ತಿ ಪತಾಕೆಯನ್ನು ಮತ್ತಷ್ಟು ಹೆಚ್ಚಿಸಿದೆ.
    ಯರೇಹಳ್ಳಿ ಗ್ರಾಮ ಪಂಚಾಯಿತಿ ಅಭಿನಂದನೆ:
    ಜ್ಯೋತಿಯವರ ಸಾಧನೆಯನ್ನು ಯರೇಹಳ್ಳಿ ಗ್ರಾಮ ಪಂಚಾಯಿತಿ ಪ್ರಶಂಸಿಸುವ ಜೊತೆಗೆ ಅಭಿನಂದಿಸಿದೆ. ಮಂಗಳವಾರ ಪಂಚಾಯಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷೆ ಶಾಂತಬಾಯಿ ರಮೇಶ್‌ .ಬಿ ಅಧ್ಯಕ್ಷತೆ ವಹಿಸಿದ್ದರು. ಪಂಚಾಯಿತಿ ಉಪಾಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿ ಹಾಗು ಸಿಬ್ಬಂದಿಗಳು  ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.  

ಬೆರಳು ಮುದ್ರೆ ಪರಿಶೀಲನೆ : ತಲೆಮರೆಸಿಕೊಂಡಿದ್ದ ವ್ಯಕ್ತಿ ಸೆರೆ

ಭದ್ರಾವತಿ ಬೆರಳು ಮುದ್ರೆ ಪರಿಶೀಲನೆ ಮೂಲಕ ೬ ಪ್ರಕರಣಗಳಲ್ಲಿ ಭಾಗಿಯಾಗಿರುವ ವ್ಯಕ್ತಿಯೋರ್ವನನ್ನು ಪತ್ತೆ ಮಾಡುವಲ್ಲಿ ಇಲ್ಲಿನ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿರುವ ಘಟನೆ ನಡೆದಿದೆ.
    ಭದ್ರಾವತಿ, ಆ. ೨೨: ಬೆರಳು ಮುದ್ರೆ ಪರಿಶೀಲನೆ ಮೂಲಕ ೬ ಪ್ರಕರಣಗಳಲ್ಲಿ ಭಾಗಿಯಾಗಿರುವ ವ್ಯಕ್ತಿಯೋರ್ವನನ್ನು ಪತ್ತೆ ಮಾಡುವಲ್ಲಿ ಇಲ್ಲಿನ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿರುವ ಘಟನೆ ನಡೆದಿದೆ.


    ಆಕಾಶ್ ಗೌಡ ಅಲಿಯಾಸ್ ಅಪ್ಪ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದ್ದು, ರಾತ್ರಿ ಗಸ್ತು ವೇಳೆಯಲ್ಲಿ ಈತ ಅನುಮಾನಸ್ಪದವಾಗಿ ಸಿಕ್ಕಿ ಬಿದ್ದಿದ್ದಾನೆ. ತಕ್ಷಣ ಜಾಗೃತರಾದ ಪೊಲೀಸರು ಎಂಸಿಸಿಟಿಎನ್‌ಎಸ್ ಫಿಂಗರ್ ಪ್ರಿಂಟ್ ಸ್ಕ್ಯಾನರ್‌ನ ಮೂಲಕ ಈತನ ಬೆರಳು ಮುದ್ರೆ ಪರಿಶೀಲನೆ ನಡೆಸಿದ್ದು, ೬ ಪ್ರಕರಣಗಳಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿರುವುದು ಪತ್ತೆಯಾಗಿದೆ. ಈ ಹಿನ್ನಲೆಯಲ್ಲಿ ಈತನನ್ನು ಬಂಧಿಸಿ ಮುಂದಿನ ಕ್ರಮ ಕ್ರೈಗೊಂಡಿದ್ದಾರೆ.
    ಪೊಲೀಸ್ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್‌ಕುಮಾರ್ ಹಾಗು ಪೊಲೀಸ್ ಉಪಾಧೀಕ್ಷಕ ನಾಗರಾಜ್ ಅಭಿನಂದಿಸಿದ್ದಾರೆ.

ಆ.೨೯ರಂದು ಶ್ರೀಕೃಷ್ಣ ವೇಷ ಪ್ರದರ್ಶನ

    ಭದ್ರಾವತಿ, ಆ. ೨೨ : ತರುಣಭಾರತಿ ವಿಶ್ವಸ್ಥ ಮಂಡಳಿ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶ್ರೀಕೃಷ್ಣ ವೇಷ ಪ್ರದರ್ಶನ ಆ.೨೯ರ ಮಂಗಳವಾರ ಹಮ್ಮಿಕೊಳ್ಳಲಾಗಿದೆ.
    ಬಿ.ಎಚ್ ರಸ್ತೆ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಪ್ರದರ್ಶನ ಮಧ್ಯಾಹ್ನ ೧.೩೦ಕ್ಕೆ ನಡೆಯಲಿದ್ದು, ಪ್ರದರ್ಶನದಲ್ಲಿ ೫ ವರ್ಷದೊಳಗಿನ ಮಕ್ಕಳು ಭಾಗವಹಿಸಬಹುದಾಗಿದೆ. ಪ್ರದರ್ಶನದಲ್ಲಿ ಪಾಲ್ಗೊಳ್ಳುವ ಎಲ್ಲಾ ಮಕ್ಕಳಿಗೂ ಬಹುಮಾನ ಹಾಗು ಸಿಹಿ ವಿತರಿಸಲಾಗುವುದು ಎಂದು ತರುಣಭಾರತಿ ಶಿಶುಮಂದಿರದ ಸಂಚಾಲಕಿ ಸರ್ವಮಂಗಳ ತಿಳಿಸಿದ್ದಾರೆ.

Monday, August 21, 2023

ಕುಮಾರ್‌ಗೆ `ಶ್ರೀ ರಾಘವೇಂದ್ರ ಸದ್ಭಾವನಾ ಪ್ರಶಸ್ತಿ'

ಕುಮಾರ್
    ಭದ್ರಾವತಿ, ಆ. ೨೧:  ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆವತಿಯಿಂದ ನೀಡಲಾಗುವ `ಶ್ರೀ ರಾಘವೇಂದ್ರ ಸದ್ಭಾವನಾ ಪ್ರಶಸ್ತಿ' ಜನ್ನಾಪುರ ನಿವಾಸಿ ಕುಮಾರ್  ಅವರಿಗೆ ಲಭಿಸಿದೆ.  
    ಸಾಹಿತ್ಯ ಮತ್ತು ರಂಗಭೂಮಿ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಶ್ರೀ ರಾಘವೇಂದ್ರ ಸ್ವಾಮಿಗಳ ೩೫೨ನೇ ಆರಾಧನಾ ಮಹೋತ್ಸವ ಸಂಧರ್ಭದಲ್ಲಿ ಕುಮಾರ್ ಅವರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
    ಸೆ.೧ರಂದು ಬೆಳಿಗ್ಗೆ ೧೦.೩೦ಕ್ಕೆ ಬೆಂಗಳೂರಿನ ಕುಮಾರ ಪಾರ್ಕ್ ವೆಸ್ಟ್ ಸಮೀಪದಲ್ಲಿರುವ ಕೋದಂಡರಾಮ ವಿದ್ಯಾರ್ಥಿ ನಿಲಯದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಸಾವು


    ಭದ್ರಾವತಿ, ಆ. ೨೧: ದ್ವಿಚಕ್ರ ವಾಹನ ಸವಾರನೋರ್ವ ಆಕಸ್ಮಿಕವಾಗಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ತೀವ್ರಗಾಯಗೊಂಡು ಮೃತಪಟ್ಟಿರುವ ಘಟನೆ ನಗರದ ಹೊಸಮನೆ ಮುಖ್ಯ ರಸ್ತೆಯಲ್ಲಿ ನಡೆದಿದೆ.
    ದರ್ಶನ್‌ ಮೃತಪಟ್ಟಿದ್ದು, ಈತ ಆ.೨೦ರ ಬೆಳಗಿನ ಜಾವ  ತನ್ನ ರಾಯಲ್ ಎನ್ಫೀಲ್ಡ್ ಹಿಮಾಲಯ ದ್ವಿಚಕ್ರವಾಹನದಲ್ಲಿ ಹೊಸಮನೆ ಮುಖ್ಯ ರಸ್ತೆಯ ಭವಾನಿ ಶಾಮಿಯಾನ ಅಂಗಡಿ ಮುಂಭಾಗ ಹೋಗುತ್ತಿರುವಾಗ ನಾಯಿಯೊಂದು ಅಡ್ಡ ಬಂದಿದ್ದರಿಂದ ಅದನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು  ರಸ್ತೆಯ ಪಕ್ಕದಲ್ಲಿರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ತಕ್ಷಣ ಈತನನ್ನು ನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಈತನನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದನ್ನು ಖಚಿತ ಪಡಿಸಿದ್ದಾರೆ. ಈ ಸಂಬಂಧ ಈತನ ತಾಯಿ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಕೇರಳ ಸಮಾಜಂ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ಗಂಗಾಧರ್

ಭದ್ರಾವತಿ ಕೇರಳ ಸಮಾಜಂ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು, ಅಧ್ಯಕ್ಷರಾಗಿ ಗಂಗಾಧರ್ ಪುನರ್ ಆಯ್ಕೆಯಾಗಿದ್ದಾರೆ.
    ಭದ್ರಾವತಿ, ಆ. ೨೧:  ನಗರದ ಕೇರಳ ಸಮಾಜಂ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು,  ಅಧ್ಯಕ್ಷರಾಗಿ ಗಂಗಾಧರ್ ಪುನರ್ ಆಯ್ಕೆಯಾಗಿದ್ದಾರೆ.
  ಇತ್ತೀಚೆಗೆ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು, ಉಪಧ್ಯಕ್ಷರಾಗಿ ವಿ.ಕೆ ಮಾಹೀನ್, ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಕುಮಾರ್,  ಜಂಟಿ ಕಾರ್ಯದರ್ಶಿಯಾಗಿ ಪಿ.ಆರ್ ಪ್ರಭಾಕರನ್, ಖಜಂಚಿಯಾಗಿ ಎ. ಚಂದ್ರಶೇಖರ್, ಸಲಹೆಗಾರಾಗಿ ಹಾಗೂ ಆಂತರಿಕ ಲೆಕ್ಕ ಪರಿಶೋಧಕರಾಗಿ ಜಿ. ರಾಮಚಂದ್ರನ್  ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ರಾಧಾಕೃಷ್ಣನ್, ಎಸ್.ಎಚ್ ಕಲ್ಯಾಣಿ ಶಶಿಧರನ್, ಕೆ. ರಾಜೇಂದ್ರನ್, ರೇಖಾಚಂದ್ರನ್, ಪ್ರಸನ್ನಕುಮಾರ್, ಕೆ.ಸಿ ರಾಜಶೇಖರ್, ಸುನೀತಾ ಸುರೇಶ್ ಹಾಗು ನಾಮ ನಿರ್ದೇಶಕರ ಸಮಿತಿ ಸದಸ್ಯರಾಗಿ ಮಿಥುನ್, ಶೈಲಜಾ ಸುರೇಶ್, ಪ್ರಶಾಂತ್ (ಅಪ್ಪು), ಬಾಲ ಸುಬ್ರಹ್ಮಣ್ಯ, ಫ್ರಾನ್ಸಿಸ್ ಕ್ಸೇವಿಯರ್ ಮತ್ತು ಯಶೋಧ ಆಯ್ಕೆಯಾಗಿದ್ದಾರೆ.