ಗ್ರಾಮಾಂತರ ಠಾಣೆ ಇಬ್ಬರು ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರ
ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಹಾಗು ನ್ಯಾಯಾಲಯದ ವಿಚಾರಣೆಯಲ್ಲಿ ಹಾಜರಾಗದೆ ತಲೆಮರೆಸಿಕೊಂಡಿದ್ದ ವ್ಯಕ್ತಿಯೋರ್ವನನ್ನು ಬೆರಳುಮುದ್ರೆ ಪರಿಶೀಲನೆ ಮೂಲಕ ಪತ್ತೆಹಚ್ಚುವಲ್ಲಿ ಯಶಸ್ವಿಯಾದ ಭದ್ರಾವತಿ ಗ್ರಾಮಾಂತರ ಪೊಲೀಸ್ಠಾಣೆಯ ಸಿಬ್ಬಂದಿಗಳನ್ನು ಜಿಲ್ಲಾ ಪೊಲೀಸ್ವತಿಯಿಂದ ಅಭಿನಂದಿಸಲಾಯಿತು.
ಭದ್ರಾವತಿ, ಆ. ೨೫: ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಹಾಗು ನ್ಯಾಯಾಲಯದ ವಿಚಾರಣೆಯಲ್ಲಿ ಹಾಜರಾಗದೆ ತಲೆಮರೆಸಿಕೊಂಡಿದ್ದ ವ್ಯಕ್ತಿಯೋರ್ವನನ್ನು ಬೆರಳುಮುದ್ರೆ ಪರಿಶೀಲನೆ ಮೂಲಕ ಪತ್ತೆಹಚ್ಚುವಲ್ಲಿ ಯಶಸ್ವಿಯಾದ ಗ್ರಾಮಾಂತರ ಪೊಲೀಸ್ಠಾಣೆಯ ಸಿಬ್ಬಂದಿಗಳನ್ನು ಜಿಲ್ಲಾ ಪೊಲೀಸ್ವತಿಯಿಂದ ಅಭಿನಂದಿಸಲಾಯಿತು.
ಗ್ರಾಮಾಂತರ ಠಾಣೆಯ ಸಿಬ್ಬಂದಿಗಳಾದ ಮಂಜುನಾಥ್ ಮತ್ತು ಗಂಗಾಧರ್ ನಾಶಿರವರು ರಾತ್ರಿ ಗಸ್ತು ಕರ್ತವ್ಯದಲ್ಲಿದ್ದಾಗ ಅನುಮಾನಾಸ್ಪದ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಆತನ ಬೆರಳು ಮುದ್ರೆ ಪರಿಶೀಲನೆ ನಡೆಸುವ ಮೂಲಕ ಆತ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಹಾಗು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿರುವುದನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದರು.
ಈ ಹಿನ್ನಲೆಯಲ್ಲಿ ಜಿಲ್ಲಾ ಪೊಲೀಸ್ವತಿಯಿಂದ ಮಂಜುನಾಥ್ಮತ್ತು ಗಂಗಾಧರ್ನಾಶಿ ಅವರಿಗೆ ಸನ್ಮಾನಿಸಿ ಪ್ರಶಂಸನಾ ಪತ್ರ ನೀಡಿ ಅಭಿನಂದಿಸಲಾಯಿತು.
ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್ಕುಮಾರ್, ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ಕುಮಾರ್ಭೂಮರೆಡ್ಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.