ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಕಾರ್ಮಿಕರು ಹೊಂದಿದ್ದ ಆತಂಕ ಇದೀಗ ಸ್ವಲ್ಪಮಟ್ಟಿಗೆ ಕಡಿಮೆಯಾಗುತ್ತಿದ್ದು, ಸೋಮವಾರ ಬೆಳಿಗ್ಗೆ ಕಾರ್ಖಾನೆಯ ಎನ್ಆರ್ಎಂ ಘಟಕ ಆರಂಭಗೊಂಡಿದೆ.
ಭದ್ರಾವತಿ, ಆ. ೨೮: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಕಾರ್ಮಿಕರು ಹೊಂದಿದ್ದ ಆತಂಕ ಇದೀಗ ಸ್ವಲ್ಪಮಟ್ಟಿಗೆ ಕಡಿಮೆಯಾಗುತ್ತಿದ್ದು, ಸೋಮವಾರ ಬೆಳಿಗ್ಗೆ ಕಾರ್ಖಾನೆಯ ಎನ್ಆರ್ಎಂ ಘಟಕ ಆರಂಭಗೊಂಡಿದೆ. ಇದರಿಂದಾಗಿ ಕಾರ್ಮಿಕರಲ್ಲಿ ಸಂತಸ ಮನೆ ಮಾಡಿದೆ.
ಕಳೆದ ಸುಮಾರು ೬ ದಿನಗಳ ಹಿಂದೆ ಉಕ್ಕು ಪ್ರಾಧಿಕಾರ ಬಿಲಾಯ್ ಘಟಕದಿಂದ ಕಾರ್ಖಾನೆಗೆ ೧೯ ವ್ಯಾಗನ್ಗಳಲ್ಲಿ ಬ್ಲೂಮ್ಗಳು ಕಾರ್ಖಾನೆಗೆ ಬಂದಿದ್ದು, ಎನ್ಆರ್ಎಂ ಘಟಕ ಆರಂಭಗೊಂಡಿದೆ. ಈ ನಡುವೆ ಕಳೆದ ಸುಮಾರು ೮ ತಿಂಗಳಿನಿಂದ ಕಾರ್ಖಾನೆ ಮುಂಭಾಗದಲ್ಲಿ ಹೋರಾಟ ನಡೆಸುತ್ತಿರುವ ಗುತ್ತಿಗೆ ಕಾರ್ಮಿಕರು ತಮ್ಮ ಹೋರಾಟ ಮುಂದುವರೆಸಿದ್ದಾರೆ. ಅಲ್ಲದೆ ಕಾರ್ಮಿಕರಿಗೆ ಕಡ್ಡಾಯವಾಗಿ ೨೬ ದಿನ ಕೆಲಸ ನೀಡುವಂತೆ ಕಾರ್ಖಾನೆ ಆಡಳಿತ ಮಂಡಳಿಗೆ ಆಗ್ರಹಿಸಿದ್ದಾರೆ.
ಎನ್ಆರ್ಎಂ ಘಟಕ ಆರಂಭವಾಗಿರುವ ಕುರಿತು ಕಾರ್ಮಿಕರು ವಾಟ್ಸಫ್, ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪೋಟೋ ಹಂಚಿಕೊಂಡಿದ್ದಾರೆ. ಅಲ್ಲದೆ ಮುಂದಿನ ಹೋರಾಟ ಕುರಿತು ಸಲಹೆ, ಸೂಚನೆ ನೀಡುವಂತೆ ಕೋರಿದ್ದಾರೆ.