Monday, August 28, 2023

ಭೂಮಿ ಮೇಲೆ ಜೀವಿಗಳಿಗೆ ಮಳೆ ಇಲ್ಲದೆ ಬದುಕಿಲ್ಲ : ಡಾ.ಎಸ್.ಎಸ್ ಸತ್ಯನಾರಾಯಣ

ಭದ್ರಾವತಿ ತರೀಕೆರೆ ರಸ್ತೆಯ ನಯನ ಆಸ್ಪತ್ರೆ ಸಭಾಂಗಣದಲ್ಲಿ ನಾಡು-ನುಡಿ ವೇದಿಕೆ ಭೂಮಿಕಾ ವತಿಯಿಂದ ಏರ್ಪಡಿಸಲಾಗಿದ್ದ ಕನ್ನಡ ಕವಿಗಳ ಋತು ವಿಲಾಸ ಕಾರ್ಯಕ್ರಮದಲ್ಲಿ ವಿಮರ್ಶಕ ಡಾ.ಎಚ್.ಎಸ್ ಸತ್ಯನಾರಾಯಣ ಪಾಲ್ಗೊಂಡು ಮಾತನಾಡಿದರು.
    ಭದ್ರಾವತಿ, ಆ. ೨೮ : ಮಳೆ ಇಲ್ಲದೆ ಭೂಮಿ ಮೇಲೆ ಯಾವ ಜೀವಿಯೂ ಬದುಕುಲಾರದು. ಈ ಹಿನ್ನಲೆಯಲ್ಲಿ ಮಳೆ ಬರಲೇ ಬೇಕು. ಕವಿಗಳ ಆಶಯ ಸಹ ಇದೆ ಆಗಿದ್ದು, ಈ ನಿಟ್ಟಿನಲ್ಲಿ ಕನ್ನಡದ ಕವಿಗಳು ವರ್ಷದ ಮಳೆ ಋತು ಕುರಿತು ತಮ್ಮದೇ ಭಾವನೆ ವ್ಯಕ್ತಪಡಿಸಿದ್ದಾರೆಂದು ವಿಮರ್ಶಕ ಡಾ.ಎಚ್.ಎಸ್ ಸತ್ಯನಾರಾಯಣ ಹೇಳಿದರು.
    ಅವರು ನಗರದ ತರೀಕೆರೆ ರಸ್ತೆಯ ನಯನ ಆಸ್ಪತ್ರೆ ಸಭಾಂಗಣದಲ್ಲಿ ನಾಡು-ನುಡಿ ವೇದಿಕೆ ಭೂಮಿಕಾ ವತಿಯಿಂದ ಏರ್ಪಡಿಸಲಾಗಿದ್ದ ಕನ್ನಡ ಕವಿಗಳ ಋತು ವಿಲಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಮಳೆಯಿಲ್ಲದೆ ಇಳೆಯುಂಟೆ? ಭೂಮಿಯ ಮೇಲಿನ ಜೀವಕೋಟಿ ಬದುಕುಳಿಯಲು ಮಳೆ ಬೇಕು. ಹಾಗೆಂದೇ ಕನ್ನಡ ಕವಿಗಳು ವರ್ಷ ಋತುವನ್ನು ಬಣ್ಣಿಸಿರುವ ಪರಿ ಅನನ್ಯವಾಗಿದೆ. ಪಂಪ, ರನ್ನ, ಹರಿಹರ, ಕುಮಾರವ್ಯಾಸ, ರತ್ನಾಕರವರ್ಣಿಯಿಂದ ಮೊದಲ್ಗೊಂಡು ಆಧುನಿಕ ಕವಿಗಳು ಮಳೆಯನ್ನು ಜೀವನಾಡಿಯಾಗಿ ಕಂಡಿರುವ ಬಗೆಯನ್ನು  ವಿವರಿಸಿದರು.
    ಬಿಎಂಶ್ರೀ, ಬೇಂದ್ರೆ, ಕುವೆಂಪು, ಪುತೀನ ಕೆ.ಎಸ್ ನರಸಿಂಹಸ್ವಾಮಿ, ಜಿ.ಎಸ್ ಶಿವರುದ್ರಪ್ಪ, ಕಣವಿ, ನಿಸಾರ್ ಅಹಮದ್, ಸು.ರಂ ಎಕ್ಕುಂಡಿ ಕಂಬಾರ, ಎಂ.ಆರ್ ಕಮಲ, ಪ್ರತಿಭಾ ನಂದಕುಮಾರ್ ಮುಂತಾದವರ ಕವಿತೆಗಳಲ್ಲಿ ಚಿತ್ರಿತವಾಗಿರುವ ಮಳೆಯ ವರ್ಣನೆಯನ್ನು ಸಭೆಗೆ ಪರಿಚಯಿಸಿದರು. ಅಲ್ಲದೆ ಜನಪದದ ಅನೇಕ ಮಳೆಯ ಹಾಡುಗಳನ್ನು ಉಲ್ಲೇಖಿಸುತ್ತಾ ಕನ್ನಡದ ಸುಪ್ರಸಿದ್ಧ ಕವಿಗಳ ರಚನೆಗಳನ್ನು ಚರ್ಚಿಸಿದರು.
    ವೇದಿಕೆ ಅಧ್ಯಕ್ಷ ಅಧ್ಯಕ್ಷ ಡಾ. ಕೃಷ್ಣ ಭಟ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಕನ್ನಡ ಕವಿಗಳು ಕಂಡ ಋತು ವಿಲಾಸವನ್ನು ಅಭ್ಯಸಿಸುವುದೇ ಒಂದು ಸೊಗಸೆಂದು ಬಣ್ಣಿಸಿದರು. ಈ ಬಗೆಯ ಕಾರ್ಯಕ್ರಮದಿಂದಲಾದರೂ ವರುಣ ದೇವ ಮಳೆಯನ್ನು ಕರುಣಿಸಲೆಂದು ಆಶಿಸಿದರು.
    ಪ್ರಧಾನ ಕಾರ್ಯದರ್ಶಿ ಅಪರಂಜಿ ಶಿವರಾಜ್ ಉಪಸ್ಥಿತರಿದ್ದರು. ಕಾರ್ಯದರ್ಶಿ ಡಾ. ವೀಣಾ ಭಟ್ ಸ್ವಾಗತಿಸಿದರು. ಸದಸ್ಯರಾದ ಕೆ. ಆನಂದ್ ಅತಿಥಿಗಳ ಪರಿಚಯ ನಡೆಸಿಕೊಟ್ಟರು. ಡಾ. ನಾಗರಾಜ್ ಕಾರ್ಯಕ್ರಮ ನಿರೂಪಿಸಿ, ರಾಮಾಚಾರಿ ವಂದಿಸಿದರು.

ವಿಐಎಸ್‌ಎಲ್‌ನಲ್ಲಿ ಎನ್‌ಆರ್‌ಎಂ ಘಟಕ ಆರಂಭ : ಕಾರ್ಮಿಕರಲ್ಲಿ ಸಂತಸ

ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಕಾರ್ಮಿಕರು ಹೊಂದಿದ್ದ ಆತಂಕ ಇದೀಗ ಸ್ವಲ್ಪಮಟ್ಟಿಗೆ ಕಡಿಮೆಯಾಗುತ್ತಿದ್ದು, ಸೋಮವಾರ ಬೆಳಿಗ್ಗೆ ಕಾರ್ಖಾನೆಯ ಎನ್‌ಆರ್‌ಎಂ ಘಟಕ ಆರಂಭಗೊಂಡಿದೆ.
    ಭದ್ರಾವತಿ, ಆ. ೨೮: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಕಾರ್ಮಿಕರು ಹೊಂದಿದ್ದ ಆತಂಕ ಇದೀಗ ಸ್ವಲ್ಪಮಟ್ಟಿಗೆ ಕಡಿಮೆಯಾಗುತ್ತಿದ್ದು, ಸೋಮವಾರ ಬೆಳಿಗ್ಗೆ ಕಾರ್ಖಾನೆಯ ಎನ್‌ಆರ್‌ಎಂ ಘಟಕ ಆರಂಭಗೊಂಡಿದೆ. ಇದರಿಂದಾಗಿ ಕಾರ್ಮಿಕರಲ್ಲಿ ಸಂತಸ ಮನೆ ಮಾಡಿದೆ.
    ಕಳೆದ ಸುಮಾರು ೬ ದಿನಗಳ ಹಿಂದೆ ಉಕ್ಕು ಪ್ರಾಧಿಕಾರ ಬಿಲಾಯ್ ಘಟಕದಿಂದ ಕಾರ್ಖಾನೆಗೆ ೧೯ ವ್ಯಾಗನ್‌ಗಳಲ್ಲಿ ಬ್ಲೂಮ್‌ಗಳು ಕಾರ್ಖಾನೆಗೆ ಬಂದಿದ್ದು, ಎನ್‌ಆರ್‌ಎಂ ಘಟಕ ಆರಂಭಗೊಂಡಿದೆ. ಈ ನಡುವೆ ಕಳೆದ ಸುಮಾರು ೮ ತಿಂಗಳಿನಿಂದ ಕಾರ್ಖಾನೆ ಮುಂಭಾಗದಲ್ಲಿ ಹೋರಾಟ ನಡೆಸುತ್ತಿರುವ ಗುತ್ತಿಗೆ ಕಾರ್ಮಿಕರು ತಮ್ಮ ಹೋರಾಟ ಮುಂದುವರೆಸಿದ್ದಾರೆ. ಅಲ್ಲದೆ ಕಾರ್ಮಿಕರಿಗೆ ಕಡ್ಡಾಯವಾಗಿ ೨೬ ದಿನ ಕೆಲಸ ನೀಡುವಂತೆ ಕಾರ್ಖಾನೆ ಆಡಳಿತ ಮಂಡಳಿಗೆ ಆಗ್ರಹಿಸಿದ್ದಾರೆ.


    ಎನ್‌ಆರ್‌ಎಂ ಘಟಕ ಆರಂಭವಾಗಿರುವ ಕುರಿತು ಕಾರ್ಮಿಕರು ವಾಟ್ಸಫ್, ಫೇಸ್‌ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪೋಟೋ ಹಂಚಿಕೊಂಡಿದ್ದಾರೆ. ಅಲ್ಲದೆ ಮುಂದಿನ ಹೋರಾಟ ಕುರಿತು ಸಲಹೆ, ಸೂಚನೆ ನೀಡುವಂತೆ ಕೋರಿದ್ದಾರೆ.  

ಸರ್ಕಾರಿ ಸಂಚಿ ಹೊನ್ನಮ್ಮ ಬಾಲಕಿಯರ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಭದ್ರಾವತಿ ಹಳೇನಗರದ ಸರ್ಕಾರಿ ಸಂಚಿ ಹೊನ್ನಮ್ಮ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡು ಕೀರ್ತಿ ತಂದಿದ್ದಾರೆ.
    ಭದ್ರಾವತಿ, ಆ. ೨೮ : ಹಳೇನಗರದ ಸರ್ಕಾರಿ ಸಂಚಿ ಹೊನ್ನಮ್ಮ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡು ಕೀರ್ತಿ ತಂದಿದ್ದಾರೆ.
    ೨ ದಿನಗಳ ೨೦೨೩-೨೦೨೪ನೇ ಸಾಲಿನ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾ ಕೂಟದಲ್ಲಿ ಬಾಲಕಿಯರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಹಾಗೂ ವಿದ್ಯಾರ್ಥಿನಿ ತೇಜಸ್ವಿ ಬಾಯಿ ಸಮಗ್ರ ಪ್ರಶಸ್ತಿ ಪಡೆದುಕೊಂಡು ಕೀರ್ತಿ ತಂದಿದ್ದಾರೆ.
    ವಿಜೇತ ವಿದ್ಯಾರ್ಥಿನಿಯರನ್ನು ಕಾಲೇಜಿನ ಪ್ರಾಚಾರ್ಯರು, ಉಪನ್ಯಾಸಕರು ಹಾಗೂ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶಾಸಕ ಬಿ ಕೆ ಸಂಗಮೇಶ್ವರ ಹಾಗೂ ಸದಸ್ಯರು ಅಭಿನಂದಿಸಿದ್ದಾರೆ.

ಶಿವಮೊಗ್ಗ ಜಿಲ್ಲಾ ಯೋಜನಾ ನಿರ್ದೇಶಕರಾಗಿ ಮನೋಹರ್

ಮನೋಹರ್ 
    ಭದ್ರಾವತಿ, ಆ. ೨೮ : ಶಿವಮೊಗ್ಗ ಜಿಲ್ಲಾ ಯೋಜನಾ ನಿರ್ದೇಶಕರಾಗಿ ಪೌರಾಡಳಿತ ಇಲಾಖೆಯ ಹಿರಿಯ ಅಧಿಕಾರಿ ಮನೋಹರ್ ಅಧಿಕಾರ ಸ್ವೀಕರಿಸಿದ್ದಾರೆ.
    ಈ ಹಿಂದಿನ ಯೋಜನಾಧಿಕಾರಿಯಾಗಿದ್ದ ಎಂ.ಎಂ ಕರಭೀಮಣ್ಣನವರ್ ವಯೋನಿವೃತ್ತಿ ಹೊಂದಿದ ಹಿನ್ನಲೆಯಲ್ಲಿ ತೆರವಾಗಿದ್ದ ಹುದ್ದೆಗೆ ಮನೋಹರ್ ಅವರನ್ನು ಸರ್ಕಾರ ನೇಮಕಗೊಳಿಸಿದ್ದು, ಮನೋಹರ್‌ರವರು ಈ ಹಿಂದೆ ಎರಡು ಬಾರಿ ಇಲ್ಲಿನ ನಗರಸಭೆ ಪೌರಾಯುಕ್ತರಾಗಿ ಸೇವೆ ಸಲ್ಲಿಸಿದ್ದಾರೆ.
    ಕೆಎಂಎಎಸ್ ಗ್ರೇಡ್-೧ ಅಧಿಕಾರಿಯಾಗಿರುವ ಮನೋಹರ್‌ರವರು ಉತ್ತಮವಾಗಿ ಕರ್ತವ್ಯ ನಿರ್ವಹಿಸುವ ಮೂಲಕ ಹಲವು ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದೀಗ ಜಿಲ್ಲಾ ಯೋಜನಾ ನಿರ್ದೇಶಕರಾಗಿರುವುದು ಇಲ್ಲಿನ ಜನರಲ್ಲಿ ಸಂತಸವನ್ನುಂಟು ಮಾಡಿದೆ.

Sunday, August 27, 2023

ಬೆಳ್ಳಿಗೆರೆ ಗ್ರಾಮದಲ್ಲಿ ವ್ಯಕ್ತಿ ಮೃತ

    ಭದ್ರಾವತಿ, ಆ. ೨೭: ತಾಲೂಕಿನ ದೊಡ್ಡೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳ್ಳಿಗೆರೆ ಗ್ರಾಮದಲ್ಲಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.
    ಬಾಬು(೪೫) ಮೃತಪಟ್ಟಿದ್ದು, ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಮತ್ತೊಂದೆಡೆ ಕೊಲೆ ಮಾಡಲಾಗಿದೆ ಎಂಬ ಸುದ್ದಿ ಎಲ್ಲೆಡೆ ವ್ಯಾಪಕವಾಗಿ ಹಬ್ಬಿದ್ದು, ಈ ಸಂಬಂಧ ಗ್ರಾಮಾಂತರ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು,  ಪ್ರಕರಣ ದಾಖಲಾಗಿಲ್ಲ.

ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಕ್ರೀಡಾ ತರಬೇತಿ

ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಪಾಪಣ್ಣ, ಕಾರ್ತಿಕ್‌

ಭದ್ರಾವತಿ ಕ್ರೀಡಾಪಟುಗಳಾದ ಪಾಪಣ್ಣ ಮತ್ತು ಕಾರ್ತಿಕ್‌ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತವಾಗಿ ಕ್ರೀಡಾ ತರಬೇತಿ ನೀಡುತ್ತಿದ್ದು, ಇವರ ನಿಸ್ವಾರ್ಥ ಸೇವೆಯನ್ನು ನ್ಯೂಟೌನ್‌ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಅಭಿನಂದಿಸಿದೆ.
    ಭದ್ರಾವತಿ,  ಆ. ೨೭ :  ಇಬ್ಬರು ಕ್ರೀಡಾಪಟುಗಳು ಸರ್ಕಾರಿ ಶಾಲೆಗಳ ಮಕ್ಕಳಿಗೆ ಉಚಿತವಾಗಿ ಕ್ರೀಡಾ ತರಬೇತಿ ನೀಡುವ ಮೂಲಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಇವರ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ.
    ಹಳೆನಗರದ ನಿವಾಸಿ ಪಾಪಣ್ಣ ಹೆಚ್ಚು ಓದಿಲ್ಲದಿದ್ದರೂ ಕ್ರೀಡೆಗಳಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದು, ಹಲವಾರು ವರ್ಷಗಳಿಂದ ಸರ್ಕಾರಿ ಶಾಲೆಗಳ ಮಕ್ಕಳಿಗೆ ಉಚಿತವಾಗಿ ಕ್ರೀಡಾ ತರಬೇತಿ ನೀಡುವ ಮೂಲಕ ಆ ಮಕ್ಕಳು ತಾಲೂಕು ಹಾಗು ಜಿಲ್ಲಾಮಟ್ಟದ ಕ್ರೀಡಾಕೂಟಗಳಿಗೆ ಆಯ್ಕೆಯಲ್ಲಿ ನೆರವಾಗುತ್ತಿದ್ದಾರೆ.  ಅಲ್ಲದೆ ವೃತ್ತಿಯಲ್ಲಿ ಪಾಪಣ್ಣ ಕೂಲಿ ಕೆಲಸಗಾರನಾಗಿದ್ದು,  ದುಡಿದ ಹಣದಲ್ಲಿ ಬಡ ಕ್ರೀಡಾಪಟುಗಳಿಗೆ ಕೈಲಾದ ನೆರವು ನೀಡುತ್ತಿದ್ದಾರೆ.
    ಇದೆ ರೀತಿ  ಹುಣಸೇಕಟ್ಟೆ ನಿವಾಸಿ, ವಿದ್ಯಾರ್ಥಿ ಕಾರ್ತಿಕ್  ಕೂಡ ಕ್ರೀಡಾಪಟು ಆಗಿದ್ದು, ಸರ್ಕಾರಿ ಶಾಲೆಗಳಿಗೆ ತೆರಳಿ ಕ್ರೀಡಾ ತರಬೇತಿ ನೀಡುತ್ತಿದ್ದಾರೆ.   ಈ ಇಬ್ಬರು ಕ್ರೀಡಾ ತರಬೇತಿದಾರರು  ನಗರದ ನ್ಯೂಟೌನ್‌ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿ ಕೋರಿಕೆ ಮೇರೆಗೆ  ಕ್ರೀಡಾ ತರಬೇತಿದಾರರಾಗಿ ವಿದ್ಯಾರ್ಥಿನಿಯರಿಗೆ ಉಚಿತ ತರಬೇತಿ ನೀಡುವ ಮೂಲಕ  ಖೋ ಖೋ ದ್ವಿತೀಯ , ಥ್ರೋ ಬಾಲ್ ಪ್ರಥಮ, ಕಬಡ್ಡಿ ಪ್ರಥಮ ಹಾಗೂ ವೈಯಕ್ತಿಕ ಆಟಗಳಲ್ಲಿ  ಅತ್ಯುನ್ನತ ಸಾಧನೆ ಮಾಡಿದ್ದಾರೆ.
    ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವ ಕ್ರೀಡಾಪಟುಗಳಾದ ಪಾಪಣ್ಣ ಮತ್ತು ಕಾರ್ತಿಕ್ ಅವರನ್ನು ಕಾಲೇಜು  ಆಡಳಿತ ಮಂಡಳಿ ಅಭಿನಂದಿಸಿದೆ. ಈ ಇಬ್ಬರ ಸೇವೆ ರಾಜ್ಯಾದ್ಯಂತ ವ್ಯಾಪಿಸಲಿ ಎಂಬ ಆಶಯ ಕ್ರೀಡಾಪಟುಗಳದ್ದಾಗಿದೆ.

ಸ್ವ ಉದ್ಯೋಗ ಪ್ರೇರಣಾ ಶಿಬಿರ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ವತಿಯಿಂದ ಭದ್ರಾವತಿ ತಾಲೂಕಿನ ಅಂತರಗಂಗೆ ವಲಯದ ಗಾಂಧಿನಗರದ ವಿಘ್ನನೇಶ್ವರ ಜ್ಞಾನವಿಕಾಸ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವ ಉದ್ಯೋಗ ಪ್ರೇರಣಾ ಶಿಬಿರ ಮಹಿಳಾ ಉದ್ಯಮಿ ಅನ್ನಪೂರ್ಣ ಸತೀಶ್‌ ಉದ್ಘಾಟಿಸಿದರು.
    ಭದ್ರಾವತಿ, ಆ. ೨೭:  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ವತಿಯಿಂದ ತಾಲೂಕಿನ ಅಂತರಗಂಗೆ ವಲಯದ ಗಾಂಧಿನಗರದ ವಿಘ್ನನೇಶ್ವರ ಜ್ಞಾನವಿಕಾಸ ಕೇಂದ್ರದಲ್ಲಿ ಸ್ವ ಉದ್ಯೋಗ ಪ್ರೇರಣಾ ಶಿಬಿರ ನಡೆಯಿತು.
    ಅನು ಗಾರ್ಮೆಂಟ್ಸ್ ಮಹಿಳಾ ಉದ್ಯಮಿ  ಅನ್ನಪೂರ್ಣ ಸತೀಶ್‌ ಶಿಬಿರ ಉದ್ಘಾಟಿಸಿದರು. ಒಕ್ಕೂಟದ ಅಧ್ಯಕ್ಷೆ ವಿನೋದ ಅಧ್ಯಕ್ಷತೆ ವಹಿಸಿದ್ದರು.
    ಸ್ವ ಉದ್ಯೋಗಕ್ಕೆ ಸಂಬಂಧಿಸಿದಂತೆ ಒಬ್ಬ ಮಹಿಳೆಯಲ್ಲಿ ಇರಬೇಕಾದ ಆಸಕ್ತಿ, ಮಾತುಗಾರಿಕೆ ಮತ್ತು ಆರ್ಥಿಕ ಸಹಾಯವನ್ನು ಬ್ಯಾಂಕುಗಳ ಮೂಲಕ ಪಡೆಯುವ ವಿಧಾನಗಳ ಕುರಿತು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ಸಂಸ್ಥೆ(ರುಡ್‌ ಸೆಟ್) ಹೊಳಲೂರು,  ನಿರ್ದೇಶಕ ಕಾಂತೇಶ್ ಅಂಬಿಗರ್ ಮಾಹಿತಿ ನೀಡಿದರು.
    ರುಡ್‌ ಸೆಟ್ ಸಂಸ್ಥೆಯಲ್ಲಿ ಪಡೆಯಬಹುದಾದ ತರಬೇತಿಗಳು, ಅವಧಿ ಮತ್ತು ಸಂಸ್ಥೆಯ ನಿಯಮಗಳನ್ನು ಉಪನ್ಯಾಸಕರಾದ ಸುರೇಶ್ ವೈ ಹಳ್ಳಿ ರವರು ಮಾಹಿತಿ ನೀಡಿದರು.‌
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ತಾಲೂಕು ಯೋಜನಾಧಿಕಾರಿ ಮಾಧವ ಗೌಡ ಮಾತನಾಡಿ,  ಸದಸ್ಯರು ಸ್ವಉದ್ಯೋಗ ಆರಂಭ ಮಾಡಿದಲ್ಲಿ ಮಾತ್ರ ಪಡೆದುಕೊಂಡ ತರಬೇತಿ ಫಲಪ್ರದವಾಗಲು ಸಾಧ್ಯ.  ಮಹಿಳೆಯರು ಸ್ವಉದ್ಯೋಗದಿಂದ ಸ್ವಾವಲಂಬಿಯಾಗಿ ಬದುಕಬೇಕೆಂದರು.
    ಸ್ವ ಉದ್ಯೋಗ ತರಬೇತಿದಾರರಾದ ಮಣಿ, ಶಾಲಾ ಮುಖ್ಯ ಶಿಕ್ಷಕ ನಾಗರಾಜ್, ವಲಯ ಮೇಲ್ವಿಚಾರಕರಾದ ಕುಮಾರ್, ಶ್ರೀನಿವಾಸ್,  ಜ್ಞಾನವಿಕಾಸ ಸಮನ್ವಯಧಿಕಾರಿಗಳಾದ ಪ್ರೀತಿ, ಸೌಮ್ಯ, ಸೇವಾಪ್ರತಿನಿಧಿ ಶ್ವೇತಾ, ಜ್ಞಾನ ವಿಕಾಸ ಕೇಂದ್ರದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.