ಭದ್ರಾವತಿ ಹಳೇನಗರದ ಶ್ರೀ ರಾಘವೇಂದ್ರ ಸ್ವಾಮಿಯವರ ಮಠದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಯರ ಆರಾಧನಾ ಮಹೋತ್ಸವ ಅಂಗವಾಗಿ ಶನಿವಾರ ಗುರು ಸಾರ್ವಭೌಮರ ರಥೋತ್ಸವ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದ ಆವರಣದಿಂದ ಆರಂಭಗೊಂಡು ಮಠದವರೆಗೂ ನಡೆಯಿತು.
ಭದ್ರಾವತಿ: ಹಳೇನಗರದ ಶ್ರೀ ರಾಘವೇಂದ್ರ ಸ್ವಾಮಿಯವರ ಮಠದಲ್ಲಿ 3 ದಿನಗಳ ಕಾಲ ಶ್ರೀ ರಾಘವೇಂದ್ರ ಗುರು ಸಾರ್ವಭೌಮರ 352ನೇ ಮಹೋತ್ಸವ ಮತ್ತು ಆರಾಧನಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.
ಭಕ್ತರ ಮನೆಗಳಲ್ಲಿ 2 ದಿನಗಳ ಕಾಲ ಹಾಗು ಕೊನೆಯ ದಿನ ಮಠದಲ್ಲಿ ಗುರು ಸಾರ್ವಭೌಮರ ಪಾದಪೂಜೆ ನೆರವೇರಿತು. ಪ್ರತಿ ದಿನ ಬೆಳಿಗ್ಗೆ ೬ ಗಂಟೆಗೆ ಸುಪ್ರಭಾತ, ೭ಕ್ಕೆ ಪಂಚಾಮೃತ ಅಭಿಷೇಕ ಹಾಗು ಮಧ್ಯಾಹ್ನ ಭಕ್ತರಿಗೆ ಪ್ರಸಾದ ವ್ಯವಸ್ಥೆ ಕೈಗೊಳ್ಳಲಾಗಿತ್ತು.
ಆರಾಧನಾ ಮಹೋತ್ಸವದ ಕೊನೆಯ ದಿನ ಶನಿವಾರ ಗುರು ಸಾರ್ವಭೌಮರ ರಥೋತ್ಸವ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದ ಆವರಣದಿಂದ ಆರಂಭಗೊಂಡು ಮಠದವರೆಗೂ ನಡೆಯಿತು. ಗುರು ಸಾರ್ವಭೌಮರ ಬೃಂದಾವನಕ್ಕೆ ಫಲಪುಷ್ಪಗಳಿಂದ ವಿಶೇಷವಾಗಿ ಆಲಂಕಾರ ಕೈಗೊಳ್ಳಲಾಗಿತ್ತು. ಮಧ್ಯಾಹ್ನ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಜರುಗಿತು.
ಪ್ರಮುಖರಾದ ಗೋಪಾಲಕೃಷ್ಣ ಆಚಾರ್, ಶ್ರೀನಿವಾಸ ಆಚಾರ್, ಮಾಧುರಾವ್, ಶ್ರೀ ಗುರುರಾಜ ಸೇವಾ ಸಮಿತಿ ಅಧ್ಯಕ್ಷ ಮುರಳಿಧರ ತಂತ್ರಿ, ಉಪಾಧ್ಯಕ್ಷೆ ಸುಮಾ ರಾಘವೇಂದ್ರ, ಪ್ರಧಾನ ಕಾರ್ಯದರ್ಶಿ ಜಿ. ರಮಾಕಾಂತ್ ಹಾಗೂ ಖಜಾಂಚಿ ನಿರಂಜನ ಆಚಾರ್, ಶುಭ ಗುರುರಾಜ್, ಸುಪ್ರಿತಾ ತಂತ್ರಿ, ವಂದನ ಲಕ್ಷ್ಮಿ, ರವೀಂದ್ರ, ಶ್ರೀನಿವಾಸ್, ಪ್ರಮೋದ್ ಕುಮಾರ್, ಪವನ್ ಕುಮಾರ್ ಉಡುಪ, ಜಯತೀರ್ಥ, ಸುಧೀಂದ್ರ, ಬಾಳೆ ಎಲೆ ಗೋಪಾಲಕೃಷ್ಣ ಹಾಗು ವಿವಿಧ ಭಜರ ಮಂಡಳಿಗಳ ಪ್ರಮುಖರು, ಸದಸ್ಯರು, ಭಕ್ತಾಧಿಗಳು ಪಾಲ್ಗೊಂಡಿದ್ದರು.