ಭದ್ರಾವತಿ: ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯೋರ್ವನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನಡೆದಿದೆ.
Friday, September 29, 2023
ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತನೆ : ಪ್ರಕರಣ ದಾಖಲು
ಸೆ.30 ಪೌರಕಾರ್ಮಿಕರಿಗೆ ರಜೆ
ಭದ್ರಾವತಿ : ನಗರಸಭೆ ವತಿಯಿಂದ ಈ ಬಾರಿ ಪೌರಕಾರ್ಮಿಕರ ದಿನಾಚರಣೆ ಸೆ.30ರಂದು ನಗರದ ಬಿ.ಎಚ್ ರಸ್ತೆ ಶ್ರೀ ಮಂಜುನಾಥ ಸ್ವಾಮಿ ಕಲ್ಯಾಣ ಮಂಟದಲ್ಲಿ ಹಮ್ಮಿಕೊಳ್ಳಲಾಗಿದ್ದು, ಪೌರಕಾರ್ಮಿಕರಿಗೆ ರಜೆ ಘೋಷಿಸಲಾಗಿದೆ.
ಬಿಸಿ ಮುಟ್ಟದ ಕರ್ನಾಟಕ ಬಂದ್ : ವಕೀಲರ ಸಂಘ ಬೆಂಬಲ
ಕರ್ನಾಟಕ ಬಂದ್ ಬೆಂಬಲಿಸಿ ಭದ್ರಾವತಿಯಲ್ಲಿ ತಾಲೂಕು ವಕೀಲರ ಸಂಘದ ವತಿಯಿಂದ ರಸ್ತೆ ತಡೆ ನಡೆಸಲಾಯಿತು.
ಭದ್ರಾವತಿ : ರಾಜ್ಯಾದ್ಯಂತ ಶುಕ್ರವಾರ ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ನಗರದಲ್ಲಿ ಯಾವುದೇ ಪರಿಣಾಮ ಬೀರಲಿಲ್ಲ. ಶಾಲಾ-ಕಾಲೇಜು, ಸರ್ಕಾರಿ ಕಛೇರಿಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು.
ಸೆ.30ರಂದು ಪೌರಕಾರ್ಮಿಕರ ದಿನಾಚರಣೆ
ಭದ್ರಾವತಿ:ನಗರಸಭೆ ವತಿಯಿಂದ ಈ ಬಾರಿ ಪೌರಕಾರ್ಮಿಕರ ದಿನಾಚರಣೆ ಸೆ.30ರಂದು ನಗರದ ಬಿ.ಎಚ್ ರಸ್ತೆ ಶ್ರೀ ಮಂಜುನಾಥ ಸ್ವಾಮಿ ಕಲ್ಯಾಣ ಮಂಟದಲ್ಲಿ ಹಮ್ಮಿಕೊಳ್ಳಲಾಗಿದೆ.
Thursday, September 28, 2023
ಟಾರ್ಪಲ್ ನಲ್ಲಿ ಮುಚ್ಚಿಟ್ಟಿದ್ದ ಅಡಕೆ ಕಳವು
ಭದ್ರಾವತಿ: ಬೇಯಿಸಿ ಒಣಗಲು ಟಾರ್ಪಲ್ ನಲ್ಲಿ ಹರಡಿ ಮುಚ್ಚಿಟ್ಟಿದ್ದ ಅಡಕೆಯನ್ನು ಕಳವು ಮಾಡಿರುವ ಘಟನೆ ಹಳೇ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ.
ಸುರೇಶ್ ಎಂಬುವರು ಸುಮಾರು 5 ಕ್ವಿಂಟಲ್ ಅಡಕೆ ರಾಶಿಯನ್ನು ರಾತ್ರಿ ಟಾರ್ಪಲ್ ನಲ್ಲಿ ಹರಡಿ ಮುಚ್ಚಿಟ್ಟಿದ್ದು, ಬೆಳಿಗ್ಗೆ ಎದ್ದು ನೋಡಿದಾಗ ಯಾರೋ ಟಾರ್ಪಲ್ ಸರಿಸಿ ಅಡಕೆ ರಾಶಿಯಲ್ಲಿ ಸುಮಾರು 12 ಸಾವಿರ ರು. ಮೌಲ್ಯದ 25 ಕೆ.ಜಿಯಷ್ಟು ಅಡಕೆಯನ್ನು ತುಂಬಿಕೊಂಡು ಹೋಗಿರುತ್ತಾರೆ. ಈ ಕುರಿತು ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಪ್ರವಾದಿ ಮಹಮದ್ ಫೈಗಂಬರ್ ಹುಟ್ಟುಹಬ್ಬ : ರಕ್ತದಾನ ಶಿಬಿರ
ಪ್ರವಾದಿ ಮಹಮದ್ ಫೈಗಂಬರ್ ಅವರ ಹುಟ್ಟುಹಬ್ಬ ಈದ್ ಮಿಲಾದ್ ಅಂಗವಾಗಿ ಗುರುವಾರ ಭದ್ರಾವತಿ ತಾಲೂಕಿನ ಹೊಳೆನೇರಲಕೆರೆ ಅಲ್ ಖಸ್ವ ಟ್ರಸ್ಟ್ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಭದ್ರಾವತಿ : ಪ್ರವಾದಿ ಮಹಮದ್ ಫೈಗಂಬರ್ ಅವರ ಹುಟ್ಟುಹಬ್ಬ ಈದ್ ಮಿಲಾದ್ ಅಂಗವಾಗಿ ಗುರುವಾರ ತಾಲೂಕಿನ ಹೊಳೆನೇರಲಕೆರೆ ಅಲ್ ಖಸ್ವ ಟ್ರಸ್ಟ್ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ನ.4, 5ರಂದು ವಿಐಎಸ್ಎಲ್ ಶತಮಾನೋತ್ಸವ ಸಂಭ್ರಮ : ದೊಡ್ಡಣ್ಣ
ಭದ್ರಾವತಿಯಲ್ಲಿ ನ.4, 5ರಂದು ಆಯೋಜಿಸಲಾಗಿರುವ ವಿಐಎಸ್ಎಲ್ ಶತಮಾನೋತ್ಸವ ಸಂಭ್ರಮ ಸಮಾರಂಭದ ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಲಾಯಿತು.
ಭದ್ರಾವತಿ : ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಭವಿಷ್ಯದ ಪೀಳಿಗೆಗೆ ಉಳಿಸಿಕೊಂಡಬೇಕೆಂಬ ಏಕೈಕ ಉದ್ದೇಶದೊಂದಿಗೆ ಶತಮಾನೋತ್ಸವ ಸಂಭ್ರಮ ನ.4 ಮತ್ತು 5 ಎರಡು ದಿನಗಳ ಕಾಲ ಆಯೋಜಿಸಲಾಗಿದೆ ಎಂದು ಕಾರ್ಖಾನೆಯ ನಿವೃತ್ತ ಉದ್ಯೋಗಿ, ಹಿರಿಯ ಚಲನಚಿತ್ರ ನಟ ಎಸ್. ದೊಡ್ಡಣ್ಣ ಹೇಳಿದರು.
ಜನರಿಗೆ ಬದುಕು ನಿರ್ಮಿಸಿಕೊಟ್ಟ ನಾಡಿನ ಹೆಮ್ಮೆಯ ಈ ಕಾರ್ಖಾನೆ ಇದೀಗ 100 ವರ್ಷಗಳನ್ನು ಪೂರೈಸಿದ್ದು, ಈ ಹಿನ್ನಲೆಯಲ್ಲಿ ಶತಮಾನೋತ್ಸವದ ಸಂಭ್ರಮಾಚರಣೆ ನಡೆಸಲಾಗುತ್ತಿದೆ ಎಂದರು.