ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಈ ಬಾರಿ ಭದ್ರಾ ಅತಿಥಿ ಗೃಹದಲ್ಲಿ ಮಹಾತ್ಮಗಾಂಧಿ ಜಯಂತಿ ಆಚರಿಸಲಾಯಿತು.
ಭದ್ರಾವತಿ : ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಸೇರಿದಂತೆ ನಗರದ ವಿವಿಧೆಡೆ ಸೋಮವಾರ ಮಹಾತ್ಮಗಾಂಧಿ ಜಯಂತಿ ಆಚರಿಸಲಾಯಿತು.
ವಿಐಎಸ್ಎಲ್ ಭದ್ರಾ ಅತಿಥಿ ಗೃಹ:
ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಈ ಬಾರಿ ಭದ್ರಾ ಅತಿಥಿ ಗೃಹದಲ್ಲಿ ಮಹಾತ್ಮಗಾಂಧಿ ಜಯಂತಿ ಆಚರಿಸಲಾಯಿತು.
ಕಾರ್ಖಾನೆಯ ಪ್ರಭಾರ ಕಾರ್ಯಪಾಲಕ ನಿರ್ದೇಶಕ ಕೆ.ಎಸ್ ಸುರೇಶ್ ಸೇರಿದಂತೆ ಇನ್ನಿತರರು ಕಾರ್ಯಕ್ರಮ ಉದ್ಘಾಟಿಸಿದರು. ಅಧಿತ್ರಿ ರಾಘವೇಂದ್ರ ಭಗವದ್ಗೀತೆ, ನೋರಾ ಮೆನೆಜಸ್ ಬೈಬಲ್ ಹಾಗು ಹಫೀಜ್-ಉರ್-ರಹಮಾನ್ ಕುರಾನ್ ಪವಿತ್ರ ಗ್ರಂಥಗಳ ಆಯ್ದ ಭಾಗಗಳನ್ನು ಪಠಣ ನಡೆಸಿದರು.
ಕಾರ್ಖಾನೆಯ ಹಿರಿಯ ಪ್ರಬಂಧಕ(ಹಣಕಾಸು) ಉನ್ನಿಕೃಷ್ಣನ್ ರಘುಪತಿರಾಘವ ರಾಜಾರಾಮ್ ಭಜನೆ ಮೂಲಕ ಮಹಾತ್ಮಗಾಂಧಿ ಅವರನ್ನು ಸ್ಮರಿಸಿದರು. ಸ್ವಚ್ಛತಾ ಪ್ರತಿಜ್ಞೆ ಬೋಧಿಸಲಾಯಿತು.
ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್, ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಅಜಯ್ ಸೋಂಕುವರ್, ಇಸ್ಪಾತ್ ಮಹಿಳಾ ಸಮಾಜದ ಪ್ರತಿನಿಧಿ ಶೋಭಾ ಶಿವಶಂಕರನ್ ಉಪಸ್ಥಿತರಿದ್ದರು. ಕಾರ್ಖಾನೆ ಉದ್ಯೋಗಿಗಳು, ಕಾರ್ಮಿಕ ಹಾಗು ಅಧಿಕಾರಿಗಳ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ಗುತ್ತಿಗೆ ಕಾರ್ಮಿಕರು, ಇಸ್ಪಾತ್ ಮಹಿಳಾ ಸಮಾಜದ ಸದಸ್ಯರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಕಾರ್ಖಾನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಎಲ್. ಪ್ರವೀಣ್ ಕುಮಾರ್ ಸ್ವಾಗತಿಸಿ, ನಿರೂಪಿಸಿದರು. ಅತಿಥಿ ಗೃಹದ ಮೇಲ್ವಿಚಾರಕ ಕೆ.ಎಸ್ ರಾಘವೇಂದ್ರ ವಂದಿಸಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ಭದ್ರಾವತಿ ನಗರದ ಹೊಸಸೇತುವೆ ರಸ್ತೆ ಸಿದ್ದಾರೂಢನಗರದ ವಿಶ್ವೇಶ್ವರಾಯ ವಿದ್ಯಾ ಸಂಸ್ಥೆಯಲ್ಲಿ ಮಹಾತ್ಮಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಿಸಲಾಯಿತು. ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯ ನಡೆಸಲಾಯಿತು.
ವಿಶ್ವೇಶ್ವರಾಯ ವಿದ್ಯಾಸಂಸ್ಥೆ :
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ನಗರದ ಹೊಸಸೇತುವೆ ರಸ್ತೆ ಸಿದ್ದಾರೂಢನಗರದ ವಿಶ್ವೇಶ್ವರಾಯ ವಿದ್ಯಾ ಸಂಸ್ಥೆಯಲ್ಲಿ ಮಹಾತ್ಮಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಿಸಲಾಯಿತು.
ವಿದ್ಯಾಸಂಸ್ಥೆ ಆಡಳಿತಧಿಕಾರಿ ಡಾ. ಎಸ್. ಪಿ ರಾಕೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸರ್ವಧರ್ಮ ಸಮನ್ವಯತೆ ಪ್ರತೀಕವಾಗಿ ವಿದ್ಯಾರ್ಥಿಗಳಿಂದ ಭಗವದ್ಗೀತೆ, ಬೈಬಲ್ ಹಾಗೂ ಕುರಾನ್ ಪವಿತ್ರ ಗ್ರಂಥಗಳ ಆಯ್ದ ಭಾಗಗಳ ಪಠಣ ನಡೆಯಿತು. ಬಿ. ಇಡಿ ಪ್ರಶಿಕ್ಷಣಾರ್ಥಿ ಸುರೇಶ್ ದಿನದ ವಿಶೇಷತೆ ಕುರಿತು ಮಾತನಾಡಿದರು.
ಶಿಕ್ಷಕರು, ವಿದ್ಯಾರ್ಥಿಗಳು ಹಾಗು ಸಿಬ್ಬಂದಿ ವರ್ಗದವರು ಶ್ರಮದಾನದಲ್ಲಿ ಪಾಲ್ಗೊಂಡು ವಿದ್ಯಾಸಂಸ್ಥೆ ಆವರಣ ಹಾಗು ಸುತ್ತಮುತ್ತ ಸ್ವಚ್ಛತಾ ಕಾರ್ಯ ನಡೆಸಿದರು. ವಿದ್ಯಾಸಂಸ್ಥೆ ಸಂಸ್ಥಾಪಕ ಹಾಗೂ ಬಿ.ಇಡಿ ವಿಭಾಗದ ಕಾರ್ಯಧ್ಯಕ್ಷ. ಬಿ.ಎಲ್. ರಂಗಸ್ವಾಮಿ, ದೈಹಿಕ ಶಿಕ್ಷಣ ನಿರ್ದೇಶಕ ಶಿವಲಿಂಗೇಗೌಡ, ಎಲ್ಲಾ ವಿಭಾಗಗಳ ಮುಖ್ಯಸ್ಥರು ಮತ್ತು ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
. ಶಿಕ್ಷಕರಾದ ಕವಿತಾ ಪ್ರಾರ್ಥಿಸಿ, ಪ್ರಸನ್ನಕುಮಾರ್ ಸ್ವಾಗತಿಸಿದರು. ಮಂಜುನಾಥ್ ವಂದಿಸಿ, ಸಮೀನಾ ಯಾಸ್ಮಿನ್ ನಿರೂಪಿಸಿದರು.
ಭದ್ರಾವತಿಯಲ್ಲಿ ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ಮಹಾತ್ಮಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಮತ್ತು ಜಯ ಕರ್ನಾಟಕ ಜನಪರ ವೇದಿಕೆಯ ಮೂರನೇ ವಾರ್ಷಿಕೋತ್ಸವದ ಹಿನ್ನಲೆಯಲ್ಲಿ ಶ್ರೀಗಂಧ ಸಸಿಗಳನ್ನು ನೆಡುವ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಜಯ ಕರ್ನಾಟಕ ಜನಪರ ವೇದಿಕೆ :
ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಮಹಾತ್ಮಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಮತ್ತು ಜಯ ಕರ್ನಾಟಕ ಜನಪರ ವೇದಿಕೆಯ ಮೂರನೇ ವಾರ್ಷಿಕೋತ್ಸವದ ಹಿನ್ನಲೆಯಲ್ಲಿ ಶ್ರೀಗಂಧ ಸಸಿಗಳನ್ನು ನೆಡುವ ಕಾರ್ಯಕ್ರಮ ಆಯೋಜಿಸಲಾಗಿತ್ತು.
ನಗರದ ಸಂಚಾರಿ ಪೊಲೀಸ್ ಠಾಣೆ ಆವರಣದಲ್ಲಿ ಯುವ ಮುಖಂಡ ಬಿ.ಎಸ್ ಗಣೇಶ್ ಹಾಗು ಸಂಚಾರಿ ಠಾಣಾಧಿಕಾರಿ ಶಾಂತಲ ಕಾರ್ಯಕ್ರಮ ಉದ್ಘಾಟಿಸಿದರು.
ವೇದಿಕೆ ಜಿಲ್ಲಾಧ್ಯಕ್ಷ ಎಸ್.ಕೆ ರಘುವೀರ್ ಸಿಂಗ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುಲಿಗಿ ಕೃಷ್ಣ, ತಾಲೂಕು ಅಧ್ಯಕ್ಷ ಜಗದೀಶ್, ಮುಖಂಡರಾದ ಹರಿನಾಥ ಸಿಂಗ್, ದಿನೇಶ ಶೇಟ್, ನವೀನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ನ್ಯೂಟೌನ್ ವಿಐಎಸ್ಎಲ್ ಆಸ್ಪತ್ರೆ ಸಮೀಪ ಭದ್ರಾವತಿ ಪೀಪಲ್ ಲಿಬರೇಷನ್ ಸಂಘ(ಬಿಪಿಎಲ್)ದ ವತಿಯಿಂದ ಮಹಾತ್ಮಗಾಂಧಿ ಜಯಂತಿ ಆಚರಿಸಲಾಯಿತು.
ಭದ್ರಾವತಿ ಪೀಪಲ್ ಲಿಬರೇಷನ್ ಸಂಘ(ಬಿಪಿಎಲ್) :
ನ್ಯೂಟೌನ್ ವಿಐಎಸ್ಎಲ್ ಆಸ್ಪತ್ರೆ ಸಮೀಪ ಭದ್ರಾವತಿ ಪೀಪಲ್ ಲಿಬರೇಷನ್ ಸಂಘ(ಬಿಪಿಎಲ್)ದ ವತಿಯಿಂದ ಮಹಾತ್ಮಗಾಂಧಿ ಜಯಂತಿ ಆಚರಿಸಲಾಯಿತು.
ಮಹಾತ್ಮಗಾಂಧಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಸಿಹಿ ಹಂಚುವ ಮೂಲಕ ಗಾಂಧಿ ಜಯಂತಿ ಆಚರಿಸಲಾಯಿತು. ಸಂಘದ ಅಧ್ಯಕ್ಷ ಲೋಕೇಶ್, ಪ್ರಧಾನ ಕಾರ್ಯದರ್ಶಿ ಶ್ಯಾಮ್, ದಾಸ್, ಶಾಲಾ ಮಕ್ಕಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಭದ್ರಾವತಿ ನಗರಸಭೆ ಹಾಗು ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಎನ್.ಸಿ.ಸಿ ಘಟಕದ ವತಿಯಿಂದ ಮಹಾತ್ಮಗಾಂಧಿ ಜಯಂತಿ ಆಚರಿಸಲಾಯಿತು.
ನಗರಸಭೆ, ಸರ್.ಎಂ.ವಿ ಕಾಲೇಜು:
ನಗರಸಭೆ ಹಾಗು ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಎನ್.ಸಿ.ಸಿ ಘಟಕದ ವತಿಯಿಂದ ಮಹಾತ್ಮಗಾಂಧಿ ಜಯಂತಿ ಆಚರಿಸಲಾಯಿತು.
ತರೀಕೆರೆ ರಸ್ತೆಯಲ್ಲಿರುವ ಮಹಾತ್ಮಗಾಂಧಿ ವೃತ್ತದಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗಾಂಧಿ ಜಯಂತಿ ಆಚರಿಸಲಾಯಿತು. ನಗರಸಭೆ ಅಧ್ಯಕ್ಷೆ ಶೃತಿ ವಸಂತಕುಮಾರ್, ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಸದಸ್ಯರಾದ ಸವಿತಾ ಉಮೇಶ್, ಪಲ್ಲವಿ ದಿಲೀಪ್, ನಾಗರತ್ನ ಅನಿಲ್ ಕುಮಾರ್, ಮಂಜುಳ ಸುಬ್ಬಣ್ಣ, ಸಹಾಯಕ ಕಾರ್ಯಪಾಲಕ ಅಭಿಯಂತರ ಬಿ.ಬಿ ಶಿವಪ್ರಸಾದ್, ಸಮುದಾಯ ಸಂಘಟನಾಧಿಕಾರಿ ಸುಹಾಸಿನಿ, ಎಸ್. ಪವನ್ ಕುಮಾರ್, ಸುಮಿತ್ರ ಎಚ್.ಎಸ್ ಹರಪ್ಪನಹಳ್ಳಿ, ವಾಲಿಮಹೇಶ, ಜಯಂತಿ, ಓಂಕಾರಪ್ಪ, ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಎನ್.ಸಿ.ಸಿ ಘಟಕದ ವಿದ್ಯಾರ್ಥಿಗಳು ಹಾಗು ಸಂಯೋಜಕರು(ಉಪನ್ಯಾಸಕ) ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.